Author: kannadanewsnow09

ಮೈಸೂರು: ನಗರದಲ್ಲಿ ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಂತ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಮೈಸೂರಿನ ಡಿ ಆರ್ ಡಿ ಮಾಲ್ ನಲ್ಲಿ ಈ ದುರ್ಘಟನೆ ನಡೆದಿದೆ. ಮಾಲ್ ನ 4ನೇ ಅಂತಸ್ತಿನಿಂದ ಬಿದ್ದು ಸುನಿ(27) ಸಾವನ್ನಪ್ಪಿದ್ದಾರೆ. ಮೈಸೂರಿನ ಡಿ ಆರ್ ಡಿ ಮಾಲ್ ನಲ್ಲಿ ಎಲೆಕ್ಟ್ರಿಷಿಯನ್ ಕೆಲಸವನ್ನು ಸುನಿ ಮಾಡುತ್ತಿದ್ದರು. ಇಂದು ಮಾಲ್ ನಲ್ಲಿ ಎಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಇದೇ ದುರಂತದಲ್ಲಿ ಮತ್ತೊಬ್ಬ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/e-swatthu-in-the-states-gram-panchayat-area-minister-priyank-kharge-has-instructed-to-publish-the-regulations-within-a-week/ https://kannadanewsnow.com/kannada/no-need-to-go-to-the-state-office-no-need-to-see-va-ri-just-do-this-to-get-these-certificates/

Read More

ಮಂಡ್ಯ: ಮದ್ದೂರಲ್ಲಿ ಇಂದು ಜನ ಸೇರಲು ಬಿಜೆಪಿ ಜೆಡಿಎಸ್ ಕಾರಣ. ನಾಳೆಯ ಬಂದ್‌ಗೆ ಪ್ರೇರಣೆ ಕೊಟ್ಟಿರೋದು ಬಿಜೆಪಿ ಜೆಡಿಎಸ್. ಧಾರ್ಮಿಕವಾಗಿ ಇರುವ ಹುಡುಗರು ಇದಕ್ಕೆ ಕಾರಣ ಅಲ್ಲ. ರಾಜಕೀಯವಾಗಿ ಅವರನ್ನು ಬಳಸಿಕೊಂಡು ಹೀಗೆ ಮಾಡ್ತಾರೆ. ನಾವು ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಲ್ಲ ಎಂಬುದಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಮದ್ದೂರು ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ  ಲೈಟ್ ಆಫ್ ಮಾಡಿದ್ದು, ಸನ್ನಿವೇಶದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಎಲ್ಲಾ ಅಧಿಕಾರಿಗಳು ಸೂಕ್ಷ್ಮವಾಗಿ ಈ ಘಟನೆ ಬಗ್ಗೆ ಕ್ರಮ ತೆಗೆದುಕೊಂಡಿದ್ದಾರೆ. ಏನು ಹಿನ್ನೆಲೆ ಇದೆ, ರಾಜಕೀಯ ಪ್ರೇರಿತ ಇದಿಯೋ, ಇಲ್ಲವೋ, ಯಾವ ವ್ಯಕ್ತಿ ಇದ್ದರೋ ಎಲ್ಲಾ ತನಿಖೆ ನಡೆಯಲಾಗುತ್ತಿದೆ. ಇದನ್ನು ಗಮನಿಸಿದ್ರೆ ಪ್ಲಾನ್ಡ್ ಆಗಿ‌ ಮಾಡಲಾಗಿದೆ ಎಂಬುದು ಗೊತ್ತಾಗುತ್ತೆ ಎಂದರು. ಧಾರ್ಮಿಕ ಭಾವನೆಗಳನ್ನ ಇಟ್ಟುಕೊಂಡು ಪೂಜೆ ಮಾಡುವವವರಿಗೆ ಹೇಳುತ್ತೇನೆ. ಇದರಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಒಲೈಕೆ ಪರ ನಿಲ್ಲುವ ಕೆಲಸ ಮಾಡಲ್ಲ. ಮಾಡಿದ್ರೆ ನಾಲ್ಕೈದು ಜನರನ್ನು…

Read More

ಬೆಂಗಳೂರು: ಸುಮಾರು ₹600 ಕೋಟಿ ಬಂಡವಾಳ ಹೂಡಿಕೆಯ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ತಯಾರಿಕಾ ಘಟಕವು ಶೀಘ್ರದಲ್ಲಿಯೇ ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಜಪಾನಿನ ಹೋಂಡಾ ಕಂಪನಿಯು, ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗಕ್ಕೆ ತಿಳಿಸಿದೆ. ಭಾರತದಲ್ಲಿನ ತನ್ನ ಮೊದಲ ವಿದ್ಯುತ್‌ ಚಾಲಿತ ದ್ವಿಚಕ್ರ ವಾಹನ ತಯಾರಿಕಾ ಘಟಕವು ಬೆಂಗಳೂರಿನ ಸಮೀಪದ ನರಸಾಪುರದಲ್ಲಿ ಕಾರ್ಯಾರಂಭ ಮಾಡಲಿದೆ. ಫೆಬ್ರುವರಿಯಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಈ ಒಪ್ಪಂದಕ್ಕೆ ಸದ್ಯದಲ್ಲೇ ಚಾಲನೆ ದೊರೆಯಲಿದೆ ಎಂದು ಕಂಪನಿಯು ರಾಜ್ಯದ ನಿಯೋಗಕ್ಕೆ ಮಾಹಿತಿ ನೀಡಿದೆ. ʼಹೋಂಡಾದ ಕಾರ್ಯನಿರ್ವಾಹಕ ಉಪಾಧ್ಯಕ್ಷ ನೋರಿಯಾ ಕೈಹರಾ ಅವರ ಜೊತೆಗಿನ ಭೇಟಿಯಲ್ಲಿ ಈ ವಿಷಯ ಪ್ರಸ್ತಾಪಿಸಲಾಗಿದೆ. ಇದರಿಂದ ರಾಜ್ಯದಲ್ಲಿ ವಾಹನ ತಯಾರಿಕಾ ವಲಯದಲ್ಲಿ ಉದ್ಯೋಗ ಅವಕಾಶಗಳು ಹೆಚ್ಚಲಿವೆʼ ಎಂದು ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ. ಸಚಿವರ ನೇತೃತ್ವದಲ್ಲಿ ಜಪಾನ್‌ಗೆ ಭೇಟಿ ನೀಡಿರುವ ರಾಜ್ಯದ ಉನ್ನತ ಮಟ್ಟದ ನಿಯೋಗವು,…

Read More

ಮಂಡ್ಯ: ಜಿಲ್ಲೆಯ ಮದ್ಧೂರಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆಯಲ್ಲಿ ಕಲ್ಲು ತೂರಾಟ ಘಟನೆ ನಡೆದಿತ್ತು. ಈ ಘಟನೆಯ ಸಂಬಂಧ 22 ಆರೋಪಿಗಳನ್ನು ಬಂಧಿಸಲಾಗಿತ್ತು. ಇಂತಹ ಬಂಧಿತ 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು. ಈ ಘಟನೆಯ ಸಂಬಂಧ ಪೊಲೀಸರು 22 ಆರೋಪಿಗಳನ್ನು ಬಂಧಿಸಿದ್ದರು. ಈ ಬಂಧಿತ ಆರೋಪಿಗಳನ್ನು ಮದ್ದೂರಿನ 2ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

Read More

ನವದೆಹಲಿ: ಈ ಬಿಜೆಪಿಯವರಿಂದ ರಾಜ್ಯದಲ್ಲಿ ನೆಮ್ಮದಿ ಹಾಳಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೆ ಕೊಟ್ಟಿದ್ದಾರೆ. ದರಿದ್ರ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಕರ್ನಾಟಕದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ ಆಗುತ್ತಿದೆ. ಹಿಂದೂಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ ಅವರ ದೆಹಲಿಯ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು, ಮದ್ದೂರಿನಲ್ಲಿ ಹೆಣ್ಮಕ್ಕಳ ಮೇಲೆ ಲಾಠಿ ಚಾರ್ಜ್ ಮಾಡಿದ್ದು ಸಣ್ಣ ಘಟನೆ ಎಂದು ಗೃಹ ಸಚಿವರಿಗೆ ಮತ್ತು ಮುಖ್ಯಮಂತ್ರಿಗಳಿಗೆÉ ಅನಿಸುವುದಾದರೆ, ಲಜ್ಜೆಗೆಟ್ಟ ವರ್ತನೆ ರಾಜ್ಯ ಸರಕಾರದ್ದು ಎಂದು ಖಂಡಿಸಿದರು. ಮದ್ದೂರಿನಲ್ಲಿ ಇವತ್ತು ಹೆಣ್ಮಕ್ಕಳ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ದೇಶಾದ್ಯಂತ ಗಣೇಶ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಮಹಾರಾಷ್ಟ್ರ ಸೇರಿ ಎಲ್ಲ ರಾಜ್ಯಗಳಲ್ಲಿ ಗಣೇಶ ಹಬ್ಬ, ವಿಗ್ರಹ ವಿಸರ್ಜನೆ ವಿಜೃಂಭಣೆಯಿಂದ ನಡೆಯುತ್ತದೆ. ಕರ್ನಾಟಕದಲ್ಲಿ ಯಾಕೆ ಗಲಾಟೆ ಆಗುತ್ತಿದೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಈದ್ ಮಿಲಾದ್ ನಡೆದಾಗ ಎಲ್ಲಾದರೂ…

Read More

ನವದೆಹಲಿ: ನಾಳೆ ನಾನು, ನಮ್ಮ ವಿಪಕ್ಷ ನಾಯಕರು, ಪಕ್ಷದ ಮುಖಂಡರು ಮದ್ದೂರಿಗೆ ಭೇಟಿ ಕೊಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ದೂರಿನ ಗಲಭೆಕೋರರನ್ನು ಕೂಡಲೇ ಒದ್ದು ಒಳಗೆ ಹಾಕಬೇಕು ಎಂದು ಆಗ್ರಹಿಸಿದರು. ಹಲವರಿಗೆ ಗಂಭೀರ ಗಾಯಗಳಾಗಿವೆ. ಹೆಣ್ಮಕ್ಕಳ ಮೇಲೆ ಲಾಠಿಚಾರ್ಜ್ ಮಾಡಿದ್ದಾರೆ. ಅವರನ್ನು ಮತ್ತು ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದೇವೆ ಎಂದು ನುಡಿದರು. ಮದ್ದೂರಿಗೆ ತೆರಳಿ ಹಿಂದೂ ಸಮಾಜಕ್ಕೆ ಧೈರ್ಯ ತುಂಬುವ ಕೆಲಸ ಮಾಡುತ್ತೇವೆ ಎಂದು ನುಡಿದರು. ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹ ಸಚಿವರ ಹೇಳಿಕೆ ಗಮನಿಸಿದರೆ ಮೈ ಉರಿಯುತ್ತದೆ. ಹೆಣ್ಮಕ್ಕಳ ಮೇಲೆ ಲಾಠಿಚಾರ್ಜ್ ಸಣ್ಣಪುಟ್ಟ ಘಟನೆ ಎಂದು ಗೃಹ ಸಚಿªರು ಹೇಳಿಕೆ ನೀಡುತ್ತಾರೆ ಎಂದು ಪ್ರಶ್ನೆಗೆ ಉತ್ತರಿಸಿದರು. https://kannadanewsnow.com/kannada/if-a-child-is-disabled-in-an-accident-compensation-should-be-given-4-times-supreme-courts-historic-verdict/ https://kannadanewsnow.com/kannada/breaking-violence-breaks-out-in-massive-protest-against-social-media-ban-in-nepal-one-dead/

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಶಕ್ತಿ ಯೋಜನೆಯಡಿ 500 ಕೋಟಿಗೂ ಹೆಚ್ಚು ಬಾರಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಈ ಮೂಲಕ ಕರ್ನಾಟಕದ ಶಕ್ತಿ ಯೋಜನೆ ವಿಶ್ವ ದಾಖಲೆಯನ್ನು ಬರೆದಿದೆ. ಇಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಶಕ್ತಿ ಯೋಜನೆಯು ಪ್ರತಿಷ್ಠಿತ ವಿಶ್ವ ದಾಖಲೆಗೆ Golden Book of World Records ನಲ್ಲಿ ಸೇರ್ಪಡೆಯಾಗಿರುವುದನ್ನು ತಿಳಿಸಿ, ದಾಖಲೆಯ ಪ್ರಮಾಣ ಪತ್ರ ಮತ್ತು ಮೆಡಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೋರಿಸಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಹಳ ಸಂತೋಷ ವ್ಯಕ್ತಪಡಿಸಿ, ಸಾರಿಗೆ ಸಚಿವರಿಗೆ ಹಾಗೂ ಸಾರಿಗೆ ಸಂಸ್ಥೆಗಳ ಸಮಸ್ತ ಅಧಿಕಾರಿ/ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದರು. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ‌ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು. ಈ ಸಂದರ್ಭದಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್‌, ಪಂಚ ಗ್ಯಾರೆಂಟಿ ಯೋಜನೆಗಳ ರಾಜ್ಯಾಧ್ಯಕ್ಷ…

Read More

ಹುಬ್ಬಳ್ಳಿ: ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಈ ಕೆಳಗಿನಂತೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ: 1. ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್‌-ವೇ ಎಕ್ಸ್‌ಪ್ರೆಸ್ ಸ್ಪೆಷಲ್: ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ – ಯಶವಂತಪುರ ಒನ್‌-ವೇ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಸೆಪ್ಟೆಂಬರ್ 30, 2025 ರಂದು ಮಧ್ಯಾಹ್ನ 12:00ಕ್ಕೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು ಅದೇ ದಿನ ರಾತ್ರಿ 08:15ಕ್ಕೆ ಯಶವಂತಪುರ ತಲುಪಲಿದೆ. ಈ ರೈಲು ಎಸ್‌ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲ್ಲಲಿದೆ. 2. ರೈಲು ಸಂಖ್ಯೆ 06277/06278 ಯಶವಂತಪುರ-ವಿಜಯಪುರ-ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ (1 ಟ್ರಿಪ್): ರೈಲು ಸಂಖ್ಯೆ 06277 ಯಶವಂತಪುರ – ವಿಜಯಪುರ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಸೆಪ್ಟೆಂಬರ್ 30, 2025 ರಂದು ರಾತ್ರಿ 09:50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 09:30ಕ್ಕೆ ವಿಜಯಪುರ ತಲುಪಲಿದೆ. ವಾಪಸಾತಿ ಪ್ರಯಾಣದಲ್ಲಿ, ರೈಲು ಸಂಖ್ಯೆ…

Read More

ಅಮೆರಿಕ-ಭಾರತ ಸಂಬಂಧ ಇತ್ತೀಚಿನ ತಿಂಗಳುಗಳಲ್ಲಿ ತೀವ್ರ ವಿಶ್ವಾಸ ಬಿಕ್ಕಟ್ಟಿನಲ್ಲಿ ಸಿಲುಕಿವೆ. ಸುಂಕ ನೀತಿ, ರಷ್ಯಾದೊಂದಿಗಿನ ಭಾರತದ ವಿಶೇಷ ಬಾಂಧವ್ಯ ಹಾಗೂ ಪಾಕಿಸ್ತಾನದೊಂದಿಗಿನ ಭಾರತದ ಗಡಿ ಘರ್ಷಣೆಗಳಲ್ಲಿ ಅಮೆರಿಕದ ಆಡಳಿತಾತ್ಮಕ ವಿಧಾನಗಳಲ್ಲಿ ಅಪಾರ ವಿವಾದಗಳು ಈ ಬಿಕ್ಕಟ್ಟಿಗೆ ಕಾರಣವಾಗಿವೆ. ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಪ್ರಮಾಣದ ಸುಂಕ ವಿಧಿಸುತ್ತಿದೆ ಎಂದು ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರು ಪದೇ ಪದೇ ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು. ಭಾರತವು ವಿಧಿಸುತ್ತಿರುವ ಸುಂಕದ ದರವು “ವಿಶ್ವದ ಅತ್ಯಧಿಕ” ಸುಂಕ ಪ್ರಮಾಣವಾಗಿದೆ ಎಂದು ಹೇಳಿದ ಅವರು, ತಮ್ಮ ರಾಷ್ಟ್ರದಿಂದ ವಿಧಿಸಲ್ಪಡುವ ಸುಂಕ ಪ್ರಮಾಣವನ್ನು ಶೇಕಡ 50 ರಷ್ಟು ಹೆಚ್ಚಿಸುವ ಮೂಲಕ ಪ್ರತಿಕ್ರಿಯೆ ನೀಡಿದ್ದರು. ಆದಾಗ್ಯೂ, ಇದು ಕೇವಲ ಒಂದೆಡೆಯ ದೃಷ್ಟಿಕೋನವಾಗಿದೆ. ರಷ್ಯಾದೊಂದಿಗೆ ನಿಕಟ ಬಾಂಧವ್ಯವನ್ನು ಹೊಂದಿರುವ ಮತ್ತು ರಷ್ಯಾದ ಕಚ್ಚಾ ತೈಲದ ಅತಿದೊಡ್ಡ ಗ್ರಾಹಕ ಎಂದು ಪರಿಗಣಿಸಲ್ಪಟ್ಟಿರುವ ಭಾರತವು ಟ್ರಂಪ್ ಅವರ ಕಠಿಣ ವಾಗ್ದಾಳಿಗೆ ಒಳಗಾಯಿತು. ಟ್ರಂಪ್ ಅವರು ರಷ್ಯಾ ಮತ್ತು ಭಾರತದ ಆರ್ಥಿಕತೆಗಳನ್ನು “ಮೃತ…

Read More

ಮೈಸೂರು: ದಕ್ಷಿಣ ಮಧ್ಯ ರೈಲ್ವೆ ಕೆಳಗಿನ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಿರುವ ಬಗ್ಗೆ ತಿಳಿಸಿದೆ. ರೈಲು ಸಂಖ್ಯೆ 17415/17416 ತಿರುಪತಿ – ಕೊಲ್ಲಾಪುರ ಶ್ರೀ ಛತ್ರಪತಿ ಸಾಹು ಮಹಾರಾಜ್ ಟರ್ಮಿನಸ್ – ತಿರುಪತಿ ಎಕ್ಸ್‌ಪ್ರೆಸ್ ಈ ರೈಲು 08.09.2025 ರಿಂದ ಒಂದು ವಾರದವರೆಗೆ, ಇರುವ ವೇಳಾಪಟ್ಟಿಯಂತೆಯೇ, ನಂದಲೂರು ನಿಲ್ದಾಣದಲ್ಲಿ ನಿಲ್ಲುತ್ತದೆ. ರೈಲು ಸಂಖ್ಯೆ 16591/16592 ಎಸ್ಎಸ್‌ಎಸ್ ಹುಬ್ಬಳ್ಳಿ – ಮೈಸೂರು – ಎಸ್ಎಸ್‌ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ ಈ ರೈಲು 13.09.2025 ರಿಂದ ಒಂದು ವಾರದವರೆಗೆ, ಇರುವ ವೇಳಾಪಟ್ಟಿಯಂತೆಯೇ, ಅನಂತಪುರ್ ನಿಲ್ದಾಣದಲ್ಲಿ ನಿಲ್ಲುತ್ತದೆ. https://kannadanewsnow.com/kannada/high-court-shock-to-hdk-stay-order-on-the-single-member-benchs-order-in-the-kethaganahalli-case/ https://kannadanewsnow.com/kannada/breaking-violence-breaks-out-in-massive-protest-against-social-media-ban-in-nepal-one-dead/

Read More