Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ 43 ರಷ್ಟು ಹೆಚ್ಚಳವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ರಾಜ್ಯ ಸರ್ಕಾರ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗೂಂಡಾ ರಾಜ್ಯ ವಾಗಿದೆ. ಪೊಲೀಸರು ಆರೋಪಿಗಳನ್ನು ಹಿಡಿದರೂ ಅವರನ್ಮು ರಾಜಕೀಯ ಪ್ರಭಾವ ಬಳಸಿ ಬಿಡುಗಡೆ ಮಾಡಿಸುತ್ತಿದ್ದಾರೆ. ಹಪ್ತಾ ವಸೂಲಿ ಹೆಚ್ಚಾಗಿದೆ. ಪೊಲಿಸ್ ಸ್ಟೇಷನ್ ಗಳು ಸೆಟ್ಲಮೆಂಟ್‌ ಕೇಂದ್ರಗಳಾಗಿವೆ ಎಂದು ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಕಾಲೇಜು ಆವರಣದಲ್ಲಿಯೇ ಒಬ್ಬ ಯುವಕ ಯುವತಿಗೆ ಒಂಬತ್ತು ಬಾರಿಬಿರಿದು ಓಡಿ ಹೋಗುತ್ತಾನೆ ಎಂದರೆ ಅವನ ಹಿಂದೆ ಯಾವ ಶಕ್ತಿ ಇದೆ. ಗೃಹ ಸಚಿವರು ಅದೊಂದು ಪ್ರೇಮ ಪಕ್ರರಣ ಇಷ್ಟು ಹಗುರ ಹೇಳಿಕೆ ಕೊಟ್ಟರೆ ಅಪರಾಧಿಗಳಿಗೆ ಪುಷ್ಟಿ ಬರದೇ ಇನ್ನೇನಾಗುತ್ತದೆ. ಕಾಲೇಜ್ ಕ್ಯಾಂಪಸ್ ನಲ್ಲಿ ಈ ರೀತಿ ಪ್ರಕರಣ ನಡೆಯದೆ ಇನ್ನೇನಾಗುತ್ತದೆ…

Read More

ಬೆಂಗಳೂರು : “ರಾಜ್ಯದ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರು ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇದ್ದಷ್ಟು ಈ ದೇಶದ ಯಾವ ರಾಜ್ಯದಲ್ಲೂ ಇಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದೇ ಹುಬ್ಬಳ್ಳಿ ಕೊಲೆ ಪ್ರಕರಣಕ್ಕೆ ಕಾರಣ ಎನ್ನುವ ಬಿಜೆಪಿ ಆರೋಪದ ಬಗ್ಗೆ ಅವರು ಉತ್ತರಿಸಿದ್ದು ಹೀಗೆ: “ರಾಜ್ಯಪಾಲರ ಆಡಳಿತ ಹೇರಲು ಈ ರೀತಿಯ ನಾಟಕ ಹಾಗು ಹುನ್ನಾರವನ್ನು ವಿಪಕ್ಷ ನಾಯಕ ಆರ್. ಅಶೋಕ ಮತ್ತು ಬಿಜೆಪಿಯವರು ಮಾಡುತ್ತಿದ್ದಾರೆ. ಈ ರೀತಿ ಆಗಲು ನಾವು ಬಿಡುವುದಿಲ್ಲ. ನಿಷ್ಪಕ್ಷಪಾತವಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು” ಎಂದರು. ಕರ್ನಾಟಕ ಬಿಹಾರ ಆಗುತ್ತದೆ ಎನ್ನುವ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಅವರ ಕಾಲದಲ್ಲಿಯೂ ಅನೇಕ ಕೃತ್ಯಗಳು ನಡೆದಿದ್ದವು. ಎಲ್ಲರ ಕಾಲದಲ್ಲೂ ವೈಯಕ್ತಿಕ ಕಾರಣಗಳಿಗೆ ಇವು ನಡೆಯುತ್ತಿರುತ್ತವೆ. ಆದರೆ ರಾಜ್ಯದ ಕಾನೂನು…

Read More

ಬೆಂಗಳೂರು: ಪ್ರೀತಿ ನಿರಾಕರಿಸಿದ ಕಾಲೇಜು ವಿದ್ಯಾರ್ಥಿನಿಯನ್ನು ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನು ರಕ್ಷಣೆ ಮಾಡಲು ಕಾಣದ ಕೈಗಳು ಪ್ರಯತ್ನಿಸುತ್ತಿವೆ ಎಂದು ಜಾತ್ಯತೀತ ಜನತಾದಳ ಆರೋಪಿಸಿದೆ. ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪಕ್ಷವು; ಲವ್ ಜಿಹಾದ್ ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠ ಅವರನ್ನು ಹಾಡುಹಗಲೇ ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ ಎಂದು ದೂರಿದೆ. ಈ ಘಟನೆ ಅತ್ಯಂತ ಆಘಾತಕಾರಿ. ಕಾನೂನು ಸುವ್ಯವಸ್ಥೆ ಹಳಿತಪ್ಪಿದೆ ಎನ್ನುವುದಕ್ಕೆ ಇದೇ ಜ್ವಲಂತ ಉದಾಹರಣೆ. ರಾಜ್ಯ ಕಾಂಗ್ರೆಸ್ ಸರಕಾರದ ಅತಿಯಾದ ತುಷ್ಟೀಕರಣವು ಅಪರಾಧ ಮನೋಭಾವದ ಕಿಡಿಗೇಡಿಗಳಿಗೆ ಅಫೀಮಿನಂತಾಗಿದೆ. ಕೆಲವರಿಗಂತೂ ಈ ನೆಲದ ಕಾನೂನು ಕಟ್ಟಳೆ ಅನ್ವಯ ಆಗುತ್ತಿಲ್ಲವೇನೋ ಎಂಬ ಅನುಮಾನವೂ ಕಾಡುತ್ತಿದೆ. ಈ ಸರಕಾರವೂ ಹಾಗೆಯೇ ವರ್ತಿಸುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ. ಪ್ರೀತಿ ನಿರಾಕರಿಸಿದ ಕಾರಣಕ್ಕೆ ಜೀವ ತೆಗೆದ ಪರಮ…

Read More

ನವದೆಹಲಿ: ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ಮತ್ತೊಬ್ಬ ಶಾಸಕ ಅಮನತುಲ್ಲಾ ಖಾನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಬಂಧಿಸಿದೆ. ದೆಹಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಅವರು ಕೇಂದ್ರ ತನಿಖಾ ಸಂಸ್ಥೆಯ ಮುಂದೆ ಹಾಜರಾದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ. ಓಖ್ಲಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ 50 ವರ್ಷದ ಶಾಸಕ ಕಳೆದ ವಾರ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ನಂತರ ಶರಣಾಗಿದ್ದಾರೆ. ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ದೆಹಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಈ ಪ್ರಕರಣ ಸಂಬಂಧಿಸಿದೆ. ಏಪ್ರಿಲ್ 18 ರಂದು ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನದೊಂದಿಗೆ ತನಿಖೆಗೆ ಸಹಕರಿಸುವಂತೆ ಸುಪ್ರೀಂ ಕೋರ್ಟ್ ಅವರಿಗೆ ಸೂಚನೆ ನೀಡಿತ್ತು. ಗುರುವಾರ ಇಡಿ ಕಚೇರಿಗೆ ಪ್ರವೇಶಿಸುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಖಾನ್, ತಾನು ವಕ್ಫ್ ಮಂಡಳಿಯ ಅಧ್ಯಕ್ಷನಾಗಿದ್ದಾಗ ನಿಯಮಗಳನ್ನು ಅನುಸರಿಸಿದ್ದೇನೆ ಮತ್ತು ಕಾನೂನು…

Read More

ಕೊಡಗು: ಧನ ಮೇಯಿಸೋದಕ್ಕೆ ತೆರಳಿದ್ದಂತ ವ್ಯಕ್ತಿಯೊಬ್ಬರ ಮೇಲೆ ಹುಲಿಯೊಂದು ದಾಳಿ ನಡೆಸಿದ ಘಟನೆ ಕೊಡಗಿನಲ್ಲಿ ನಡೆದಿದೆ. ಹುಲಿ ದಾಳಿಗೆ ಒಳಗಾದಂತ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಿಟ್ಟೂರಿನ ಕೆರೆ ಬಳಿಯಲ್ಲಿ ಅಸ್ಸಾಂ ಮೂಲದ ರೆಹಮಾನ್ ಎಂಬಾತ ಧನ ಮೇಯಿಸೋದಕ್ಕೆ ತೆರಳಿದ್ದನು. ಈ ವೇಳೆ ಆತನ ಮೇಲೆ ಹುಲಿ ದಾಳಿ ಮಾಡಿದೆ ಎಂಬುದಾಗಿ ತಿಳಿದು ಬಂದಿದೆ. ದನಗಳ ಮೇಲೆ ದಾಳಿ ನಡೆಸಿರೋದಲ್ಲದೇ, ಅದನ್ನು ತಡೆಯೋದಕ್ಕೆ ಹೋದಂತ ರೆಹಮಾನ್ ಮೇಲೆಯೂ ಹುಲಿ ದಾಳಿ ನಡೆಸಿದೆ. ಈ ದಾಳಿಗೆ ಒಳಗಾದಂತ ರೆಹಮಾನ್ ತೀವ್ರ ರಕ್ತಸ್ತ್ರಾವದೊಂದಿಗೆ ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಲಾಗಿದೆ. https://kannadanewsnow.com/kannada/shimoga-election-observers-appointed-for-lok-sabha-polls/ https://kannadanewsnow.com/kannada/vote-for-congress-darshan-campaigns-for-star-chandru-in-mandya/

Read More

ಶಿವಮೊಗ್ಗ: ಲೋಕಸಭಾ ಚುನಾವಣೆ – 2024 ಕ್ಕೆ ಸಂಬಂಧಿಸಿದಂತೆ 14-ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಜೆ ಸಾಮಾನ್ಯ ಮತ್ತು ವೆಚ್ಚ ವೀಕ್ಷಕರಾಗಿ ಕೆಳಕಂಡ ಐಎಎಸ್/ಐಆರ್‍ಎಸ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. 14-ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಪೂನಂ, ಮೊಬೈಲ್ ಸಂಖ್ಯೆ : 814695215 ಇವರು ಸಾಮಾನ್ಯ ವೀಕ್ಷಕರಾಗಿ ನೇಮಕಗೊಂಡಿರುತ್ತಾರೆ. 111-ಶಿವಮೊಗ್ಗ ಗ್ರಾಮಾಂತರ, 112-ಭದ್ರಾವತಿ, 113-ಶಿವಮೊಗ್ಗ ಹಾಗೂ 115-ಶಿಕಾರಿಪುರ ಮತಕ್ಷೇತ್ರಕ್ಕೆ ಸರೋಜ್ ಕುಮಾರ್ ಬೆಹೆರ, ಮೊ.ಸಂಖ್ಯೆ : 7760692479 ಇವರು ವೆಚ್ಚ ವೀಕ್ಷಕರಾಗಿ ನೇಮಕಗೊಂಡಿರುತ್ತಾರೆ. 114-ತೀರ್ಥಹಳ್ಳಿ, 116-ಸೊರಬ, 117-ಸಾಗರ ಮತ್ತು 118-ಬೈಂದೂರು ಮತಕ್ಷೇತ್ರಕ್ಕೆ ಮೀನಾಕ್ಷಿ ಸಿಂಗ್ ಮೊ.ಸಂಖ್ಯೆ 8904703613 ಇವರು ವೆಚ್ಚ ವೀಕ್ಷಕರಾಗಿ ನೇಮಕಗೊಂಡಿರುತ್ತಾರೆ. https://kannadanewsnow.com/kannada/important-information-for-bmtc-employees-departmental-hearing-scheduled-for-this-date-postponed/ https://kannadanewsnow.com/kannada/vote-for-congress-darshan-campaigns-for-star-chandru-in-mandya/

Read More

ಬೆಂಗಳೂರು: ದಿನಾಂಕ: 26-04-2024 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಿನಾಂಕ 25-04-2024 ಮತ್ತು 26-04-2024 ರಂದು ಮಾತ್ರ ನಿಗಧಿ ಪಡಿಸಿದ್ದ ಇಲಾಖಾ ವಿಚಾರಣೆಗಳನ್ನು ಮುಂದೂಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬಿಎಂಟಿಸಿಯು, ದಿನಾಂಕ: 26-04-2024 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಂಸ್ಥೆಯ ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ದಿನಾಂಕ: 25-04-2024 ಮತ್ತು 26-04-2024 ರಂದು ನಿಯೋಜಿಸಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದಿನಾಂಕ: 25-04-2024 ಮತ್ತು 26-04-2024 ರಂದು ನಿಗದಿಪಡಿಸಿದ್ದ ಇಲಾಖಾ ವಿಚಾರಣೆಗಳನ್ನು ಮುಂದೂಡಲಾಗಿದೆ ಎಂದಿದೆ. ಸದರಿ ದಿನಗಳಂದು ಇಲಾಖಾ ವಿಚಾರಣೆಗೆ ಸಂಸ್ಥೆಯ ವರದಿಗಾರರನ್ನು / ಸಿಬ್ಬಂದಿಗಳನ್ನು ಹಾಗೂ ಸಹ ನೌಕರರುಗಳನ್ನು ವಿಚಾರಣಗೆ ನಿಯೋಜಿಸಬಾರದೆಂದು ಈ ಮೂಲಕ ಸಂಸ್ಥೆಯು ತಿಳಿಸಿರುತ್ತದೆ. https://kannadanewsnow.com/kannada/rahul-gandhi-doesnt-know-who-will-be-cm-or-deputy-cm-of-this-state-nikhil-kumaraswamy/ https://kannadanewsnow.com/kannada/vote-for-congress-darshan-campaigns-for-star-chandru-in-mandya/

Read More

ಗುರಿ ಅನ್ನೋದು ಯೋಚನೆಯಲ್ಲ ಅದು ಒಂದು ಪ್ರಯತ್ನ. ಸುಮ್ಮನೆ ಯೋಚಿಸುವ ಬದಲು ಒಂದು ಸಲ ಪ್ರಯತ್ನ ಮಾಡಿ ನೋಡಿ ನಾವು ಯಾರನ್ನ ಕಣ್ಣು ಮುಚ್ಚಿ ನಂಬುತ್ತೇವೋ ಅವರೇ ನಮ್ಮನ್ನು ಕಣ್ಣು ತೆರೆಯುವಂತೆ ಮಾಡುತ್ತಾರೆ. ಸ್ನೇಹಿತರೆ ಜೀವನದಲ್ಲಿ ಸುಮ್ಮನೆ ಎಂದಿಗೂ ಕಾಲಹರಣ ಮಾಡಬೇಡಿ ಮುಂದೊಂದು ದಿನ ಕಾಲದ ಕಾಲು ಹಿಡಿದು ಕಾಲಾವಕಾಶ ಕೇಳಿದರು ಕಾಲ ಎಂದಿಗೂ ನಿಮ್ಮನ್ನು ಕ್ಷಮಿಸುವುದಿಲ್ಲ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ…

Read More

ಮಂಡ್ಯ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಈ ರಾಜ್ಯದ ಮುಖ್ಯಮಂತ್ರಿ ಯಾರು ಕೆಪಿಸಿಸಿ ಅಧ್ಯಕ್ಷರು ಯಾರು ಅಂತಾನೇ ಗೊತ್ತಿಲ್ಲ ಅಂತವರು ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು. ಮದ್ದೂರು ವಿಧಾನಸಭಾ ಕ್ಷೇತ್ರದ ಸೋಮನಹಳ್ಳಿ, ಕೆಸ್ತೂರು, ಚಾಮನಹಳ್ಳಿ, ಭಾರತೀನಗರ ಹಾಗೂ ಮದ್ದೂರು ಟೌನ್ ವ್ಯಾಪ್ತಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪರ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮೊನ್ನೆಯಷ್ಟೇ ಮಂಡ್ಯ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಪರ ಮಂಡ್ಯದಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಪಕ್ಷದೊಂದಿಗೆ ವಿಲೀನವಾಗಲಿದೆ ಆಗಾಗಿ ಮೈತ್ರಿ ಅಭ್ಯರ್ಥಿಯನ್ನು ಜಿಲ್ಲೆಯ ಜನತೆ ತಿರಸ್ಕರಿಸಬೇಕೆಂದು ಕರೆ ನೀಡಿದ್ದರು. ಈ ವಿಚಾರವಾಗಿ ಇಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ…

Read More

ಮಂಡ್ಯ: ಜಿಲ್ಲೆಯಲ್ಲಿ ಇಂದು ವರುಣ ಆರ್ಭಟಿಸಿದ್ದಾರೆ. ಬಿರು ಬಿಸಿಲಿನಿಂದ ಕಂಗೆಟ್ಟಿದ್ದಂತ ಜನತೆಗೆ ತಂಪೆರೆದು, ಖುಷಿಯ ನೀಡಿದ್ದಾನೆ. ಸಕ್ಕರೆ ನಾಡು ಮಂಡ್ಯದಲ್ಲಿ ವರುಣ ಆರ್ಭಟಿಸಿದ್ದಾನೆ. ಮಂಡ್ಯ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಮಂಡ್ಯ, ಕೆಆರ್ ಪೇಟೆ, ನಾಗಮಂಗಲ ಸೇರಿದಂತೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದೆ. ಬಿರು ಬಿಸಿಲ ನಂತ್ರ ಸುರಿದಂತ ಮಳೆರಾಯನ ಆರ್ಭಟಕ್ಕೆ ಧರಣಿ ತಣಿದಿದ್ದಲ್ಲದೇ, ಬಿರು ಬಿಸಿಲಿನಿಂದ ಕಂಗೆಟ್ಟಿದ್ದಂತ ಜನಕ್ಕೆ ತಂಪೆರೆದಂತೆ ಆಗಿದೆ. ಅಂದಹಾಗೇ ಮೊದಲ ಮಳೆಯ ಸಿಂಚನದಿಂದ ಮಂಡ್ಯ ಜಿಲ್ಲೆಯ ಜನರಲ್ಲಿ ಮಂದಹಾಸ ಮೂಡಿದೆ. ಇನ್ನೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಇಂದಿನಿಂದ ಐದು ದಿನ ರಾಜ್ಯದ ವಿವಿಧೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/kerala-woman-part-of-indian-crew-on-board-ship-seized-by-iran-returns-home/ https://kannadanewsnow.com/kannada/vote-for-congress-darshan-campaigns-for-star-chandru-in-mandya/

Read More