Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಕೆಪಿಟಿಸಿಎಲ್ ನಿಂದ ಕರೆಯಲಾಗಿದ್ದಂತ ವಿವಿಧ ನೇಮಕಾತಿಗಳ ಸಂಬಂಧ, ಅಭ್ಯರ್ಥಿಗಳಿಗೆ ಇಲಾಖೆಯಿಂದ ಮಹತ್ವದ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಕವಿಪನಿನಿ ಮತ್ತು ಎಸ್ಕಾಂಗಳಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಖಾಲಿ ಇರುವ ವಿವಿಧ ಪದವೃಂದದ ಸಹಾಯಕ ಇಂಜಿನಿಯರ್ (ವಿದ್ಯುತ್‌), ಸಹಾಯಕ ಇಂಜಿನಿಯರ್(ಸಿವಿಲ್), ಕಿರಿಯ ಇಂಜಿನಿಯರ್(ವಿದ್ಯುತ್), ಕಿರಿಯ ಇಂಜಿನಿಯರ್(ಸಿವಿಲ್) ಹಾಗೂ ಕಿರಿಯ ಸಹಾಯಕ, ಒಟ್ಟು 1492 ಹುದ್ದೆಗಳ ನೇಮಕಾತಿಗಾಗಿ ದಿನಾಂಕ 01.02.2022 ರಂದು ಉದ್ಯೋಗ ಪ್ರಕಟಣೆಯನ್ನು ಹೊರಡಿಸಲಾಗಿತ್ತು. ಸದರಿ ಹುದ್ದೆಗಳಿಗೆ ಆಯ್ಕೆಯನ್ನು ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಜೇಷ್ಠತೆಯ ಆಧಾರದ ಮೇಲೆ ಮಾಡಲಾಗುತ್ತಿದೆ. ಆಪ್ಟಿಟ್ಯೂಡ್ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಲಾಗಿತ್ತು. ಆಪ್ಟಿಟ್ಯೂಡ್ ಪರೀಕ್ಷೆಯನ್ನು ಪ್ರಾಧಿಕಾರವು ಸಫಲವಾಗಿ ಪೂರ್ಣಗೊಳಿಸಿ, ಫೆಬ್ರವರಿ-2023 ರಲ್ಲಿ ಅರ್ಹ ಅಭ್ಯರ್ಥಿಗಳ ಅಂಕಪಟ್ಟಿಯನ್ನು ಪ್ರಕಟಿಸಿರುತ್ತದೆ ಎಂದು ತಿಳಿಸಿದೆ. ಈ ಮಧ್ಯೆ, ಕೆಲವು ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಮೀಸಲಾತಿ ಮತ್ತು ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೊರಡಿಸಲಾದ ಸರ್ಕಾರದ ದಿನಾಂಕ: 01.02.2023 ರ…

Read More

ಬೆಂಗಳೂರು: ರಾಜ್ಯದಲ್ಲಿ ಇಂದು ಕಳೆದ 24 ಗಂಟೆಯಲ್ಲಿ ಹೊಸದಾಗಿ 148 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೋ ಸೋಂಕಿನಿಂದಾಗಿ ಓರ್ವ ಸಾವನ್ನಪ್ಪಿದ್ದಾರೆ. ಅಲ್ಲದೇ ಸಕ್ರೀಯ ಸೋಂಕಿತರ ಸಂಖ್ಯೆ 1,144ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ಆರ್.ಟಿ ಪಿಸಿಆರ್ ಮೂಲಕ 6,237, RAT ಮೂಲಕ 1068 ಸೇರಿದಂತೆ 7,305 ಮಂದಿಗೆ ಕೋವಿಡ್ ಪರೀಕ್ಷೆಯನ್ನು ಮಾಡಲಾಗಿದೆ ಅಂತ ಹೇಳಿದೆ. ಇಂದು ಬೆಂಗಳೂರು ನಗರದಲ್ಲಿ 75, ಗ್ರಾಮಾಂತರ 03, ಬಳ್ಳಾರಿ 04, ಚಿಕ್ಕಬಳ್ಳಾಪುರ 05, ಚಿತ್ರದುರ್ಗ 03, ದಕ್ಷಿಣ ಕನ್ನಡ 03, ಧಾರವಾಡ 01, ಗದಗ 03, ಹಾಸನ 18, ಕಲಬುರ್ಗಿ 01, ಕೋಲಾರ 01, ಮೈಸೂರು 02, ರಾಯಚೂರು 03, ತುಮಕೂರು 01, ಉತ್ತರ ಕನ್ನಡ 07 ಹಾಗೂ ವಿಜಯನಗರ 08 ಸೇರಿದಂತೆ 148 ಮಂದಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಅಂತ ತಿಳಿಸಿದೆ. ಕಳೆದ 24 ಗಂಟೆಯಲ್ಲಿ…

Read More

ಬೆಂಗಳೂರು: ದಿನಾಂಕ 13-01-2024 ರಂದು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ-2023 (K-SET-2023) ನಡೆಯಲಿದೆ. ಈ ಪರೀಕ್ಷೆಗಾಗಿ ಕೆಇಎಯಿಂದ ಪ್ರವೇಶಪತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ದಿನಾಂಕ 13-01-2024ರಂದು ಕೆಸೆಟ್ ಪರೀಕ್ಷೆ-2023 ಅನ್ನು ನಿಗದಿ ಪಡಿಸಲಾಗಿದೆ. ಇಂತಹ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವಂತ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದ್ದು, https://cetonline.karnataka.gov.in/examcenter2023/Forms/hallticket.aspx ಲಿಂಕ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳುವಂತೆ ತಿಳಿಸಿದೆ. ಪ್ರವೇಶ ಪತ್ರ ಡೌನ್ ಲೋಡ್ ಹೇಗೆ.? ಕೆಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಂತ ಅಭ್ಯರ್ಥಿಗಳು ಈ ಮೇಲ್ಕಂಡ ಲಿಂಕ್ ಕ್ಲಿಕ್ ಮಾಡಿ, ಅರ್ಜಿ ಸಲ್ಲಿಸಿದಂತ ಇಲಾಖೆ ಎಂಬಲ್ಲಿ ಕೆಸೆಟ್-2024 ಎನ್ನುವುದನ್ನು ಆಯ್ಕೆ ಮಾಡಿಕೊಳ್ಳಬೇಕು. ಈ ಬಳಿಕ ಅಭ್ಯರ್ಥಿಗಳು KEA ಅರ್ಜಿ ಸಂಖ್ಯೆಯನ್ನು ನಮೂದಿಸಿಬೇಕು. ಆನಂತ್ರ ಅಭ್ಯರ್ಥಿಯ ಹೆಸರು (ಮೊದಲ ನಾಲ್ಕು ಅಕ್ಷರಗಳು) ಅನ್ನು ನಮೂದಿಸಿಬೇಕು. ಈ ಬಳಿಕ ಸಬ್ ಮಿಟ್ ಬಟನ್ ಕ್ಲಿಕ್ ಮಾಡಿದ್ರೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗಲಿದ್ದು, ಡೌನ್ ಲೋಡ್ ಆಗಲಿದೆ.…

Read More

ಮಂಗಳೂರು: ಇಲ್ಲಿನ ಸುರತ್ಕಲ್ ನ ಕೈಕಂಬ ಬಳಿಯ ಪೊಳಲಿ ದ್ವಾರ ಸಮೀಪ ಖಾಸಗಿ ಬಸ್ ಪಲ್ಟಿಯಾದಂತ ಘಟನೆ ನಡೆದಿದೆ. ಈ ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಮಂಗಳೂರಿನ ಸುರತ್ಕಲ್ ಬಳಿಯ ಕೈಕಂಬದ ಪೊಳಲಿ ದ್ವಾರದ ಬಳಿಯಲ್ಲಿ ಇಂದು ಸಂಜೆ 7.15ರ ಸುಮಾರಿಗೆ ಖಾಸಗಿ ಬಸ್ ವೊಂದು ಪಲ್ಟಿಯಾಗಿದೆ. ಈ ಘಟನೆಯಲ್ಲಿ ಬಸ್ಸಿನಲ್ಲಿದ್ದಂತ 60ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ, ಹಲವರಿಗೆ ಗಾಯವಾಗಿರೋದಾಗಿ ಹೇಳಲಾಗುತ್ತಿದೆ. ಖಾಸಗಿ ಬಸ್ ಪಲ್ಟಿಯಾದಂತ ವಿಷಯ ತಿಳಿದಂತ ಸ್ಥಳೀಯರು, ಬಸ್ಸಿನಲ್ಲಿ ಸಿಲುಕಿದ್ದಂತ ಪ್ರಯಾಣಿಕರನ್ನು ರಕ್ಷಣೆ ಮಾಡಿ, ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಪಲ್ಟಿಯಾಗಿರುವಂತ ಖಾಸಗಿ ಬಸ್ ನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎಂಬುದಾಗಿ ತಿಳಿದು ಬಂದಿದೆ. ಅಂದಹಾಗೇ ಚಾಲನ ನಿಯಂತ್ರಣ ತಪ್ಪಿದ್ರೂ, ಸುಮಾರು 100 ಮೀಟರ್ ದೂರ ಬಸ್ ಚಾಲಕ ದೊಡ್ಡ ಅನಾಹುತ ಆಗದಂತೆ ಬಸ್ ನಿಧಾನವಾಗಿ ಪಲ್ಟಿಯಾಗುವಂತೆ ಜಾಗ್ರತೆ ವಹಿಸಿದ್ದಾನೆ ಎನ್ನಲಾಗಿದೆ. ಚಾಲಕನ ಮುಂಜಾಗ್ರತೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದೆ. ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಬೆಂಗಳೂರು: ಮತದಾರರಿಗೆ ಉಚಿತ ಗ್ಯಾರಂಟಿ ಆಮಿಷ ನಿರ್ಬಂಧ ಕೋರಿ ಹೈಕೋರ್ಟ್ ಗೆ ಸಲ್ಲಿಸಲಾಗಿದ್ದಂತ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು 12 ವಾರಗಳ ಕಾಲ ಮುಂದೂಡಿಕೆ ಮಾಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮತದಾರರಿಗೆ ಉಚಿತ ಗ್ಯಾರಂಟಿಯ ಮೂಲಕ ಆಮಿಷ ಒಡ್ಡಲಾಗಿದೆ. ಇವುಗಳನ್ನು ನಿರ್ಬಂಧಿಸುವಂತೆ ಹೈಕೋರ್ಟ್ ಗೆ ಬ್ರಿಗೆಡಿಯರ್ ರವಿ ಮುನಿಸ್ವಾಮಿ ಹಾಗೂ ಮತ್ತಿತರರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದರು. ಇದೇ ರೀತಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗೂ ಸಲ್ಲಿಸಲಾಗಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಅದರ ವಿಚಾರಣೆ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಹೈಕೋರ್ಟ್ 12 ವಾರಗಳ ಕಾಲ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ. ಅಂದಹಾಗೇ ಹೈಕೋರ್ಟ್ ಗೆ ಸಲ್ಲಿಸಲಾಗಿರುವಂತ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಹಾಗೂ ಮತ್ತಿತರರ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯಲ್ಲಿ, ಅಧಿಕಾರ ಹಿಡಿಯಲು ರಾಜಕೀಯ ಪಕ್ಷಗಳಿಂದ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ. ಆಮಿಷ ಒಡ್ಡುವ ಅಭ್ಯರ್ಥಿ, ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು. ಇದಲ್ಲದೇ ಜನರ ತೆರಿಗೆ ಹಣ ಅಧಿಕಾರ ಲಾಲಸೆಗೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.…

Read More

ಬೆಂಗಳೂರು : ರಾಜ್ಯದಲ್ಲಿ ಸುಮಾರು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ದೊಡ್ಡ ಪ್ರಮಾಣದ ಒತ್ತುವರಿಯನ್ನು ಮೊದಲಿಗೆ ತೆರವುಗೊಳಿಸುವಂತೆ ಇಲಾಖೆಯ ಉನ್ನತಾಧಿಕಾರಿಗಳಿಗೆ ಸೂಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಮತ್ತು ಪರಿಸರ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಸಂಪತ್ತಿನ ಸಂರಕ್ಷಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಕಾಯಿದೆ ರಚಿಸಿದ್ದಾಗ್ಯೂ, ಸುಮಾರು 2 ಲಕ್ಷ ಎಕರೆ ಅರಣ್ಯಭೂಮಿ ಒತ್ತುವರಿ ಆಗಿರುವುದು ಆಘಾತಕಾರಿ ವಿಷಯ ಎಂದರು. ದೊಡ್ಡ ಒತ್ತುವರಿ ತೆರವಿಗೆ ಸೂಚನೆ ಯಾರೇ ಅರಣ್ಯ ಭೂಮಿ ಒತ್ತುವರಿ ಮಾಡಿದರೂ ಅದು ಅಪರಾಧ. ಬೆಂಗಳೂರು ನಗರದ ಸುತ್ತಮುತ್ತ ಮತ್ತು ಪಟ್ಟಣ, ನಗರ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಬೆಲೆಬಾಳುವ ಅರಣ್ಯ ಭೂಮಿಯ ಒತ್ತುವರಿ ತೆರವಿಗೆ ಮೊದಲ ಆದ್ಯತೆ ನೀಡುವುದು ಅಗತ್ಯವಿದೆ ಎಂದು ಹೇಳಿದರು. ಈಗಾಗಲೇ ಕೊತ್ತನೂರಿನಲ್ಲಿ 400ಕೋಟಿ ರೂ. ಬೆಲೆ ಬಾಳುವ ಅರಣ್ಯ ಭೂಮಿಯನ್ನು…

Read More

ಬೆಂಗಳೂರು: ರಾಮಸೇವಕರನ್ನು ಬಂಧಿಸುವ ಮೂಲಕ ದ್ವೇಷ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ರಾಜ್ಯದಲ್ಲಿಯೂ ಅಂತ್ಯ ಕಾಣುವುದೂ ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಮಮಂದಿರ ಉದ್ಘಾಟನೆಗೆ ಸಿದ್ದವಾಗಿರುವ ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ 30 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ಹುಬ್ಬಳ್ಳಿಯ ಹಿಂದೂ ಕರಸೇವಕರ ಬಂಧನ ಮಾಡಿರುವುದು ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ. ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಆಗುತ್ತಿರುವಂತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಲು ಆಗುತ್ತಿಲ್ಲ. ಇಡೀ ದೇಶದ ಜನ ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದರ ಹಿಂದಿನ ಉದ್ದೇಶ ಏನು ಪ್ರಶ್ನಿಸಿದ್ದಾರೆ. ಇಡೀ ದೇಶವೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ಕೊಡುತ್ತಿರುವ ಸಂದರ್ಭದಲ್ಲಿ ಈ ರೀತಿ ನಡೆಯುತ್ತಿದೆ. ರಾಜ್ಯದಲ್ಲಿ ಕಾನೂನು ಪಾಲನೆ ಮಾಡುವವರೇ ಕಾನೂನು ಉಲ್ಲಂಘನೆ ಮಾಡುತ್ತಿರುವುದಕ್ಕೆ ಇದು ಸ್ಪಷ್ಪ ನಿದರ್ಶನ. ಈಗಾಗಲೇ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ವಿರೋಧ ಮಾಡಿರುವುದಕ್ಕೆ ಕಾಂಗ್ರೆಸ್ ಗೆ ಸಂಸತ್ತಿನಲ್ಲಿ…

Read More

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಪಕ್ಷದ್ದು ಹಿಂದೂ ವಿರೋಧಿ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರವಾಗಿ ಆಕ್ಷೇಪಿಸಿದರು. ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಾನು ಹಿಂದೂ ವಿರೋಧಿ ಎಂಬುದನ್ನು ಈ ಸರಕಾರವು ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುವ ಕೆಲಸ ಮಾಡುತ್ತಿದೆ. ನಿನ್ನೆ ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಕೇಸನ್ನು ರೀ ಓಪನ್ ಮಾಡಿ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿದ್ದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದರು. ಜನವರಿ 22ರಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಪ್ರತಿಷ್ಠಾಪನೆ ಆಗುವ ಶುಭ ಸಂದರ್ಭದಲ್ಲಿ ಇಡೀ ರಾಜ್ಯ ಮಾತ್ರವಲ್ಲದೆ ದೇಶದಾದ್ಯಂತ ಕೋಟ್ಯಂತರ ಹಿಂದೂ ಕಾರ್ಯಕರ್ತರು ಸಂತಸದಲ್ಲಿದ್ದಾರೆ; ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇದೆ. ಇಂಥ ಸಂದರ್ಭವನ್ನು ಆಯ್ಕೆ ಮಾಡಿಕೊಂಡು ಕೈಗೊಂಡ ಕ್ರಮದ ಮೂಲಕ ತಮ್ಮದು ಹಿಂದೂ ವಿರೋಧಿ ಸರಕಾರ ಎಂದು ದೇಶಕ್ಕೇ ತೋರಿಸಿಕೊಟ್ಟಿದ್ದಾರೆ ಎಂದು ಟೀಕಿಸಿದರು. ರಾಮನ…

Read More

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇಶದ ಕೋಟ್ಯಂತರ ಜನರ ರಾಮಮಂದಿರ ನಿರ್ಮಾಣದ ಸಂಕಲ್ಪವನ್ನು ಪ್ರಧಾನಿ ನರೇಂದ್ರ ಮೋದಿಜೀ ಅವರು ಈಡೇರಿಸಿದ್ದಾರೆ. ಒಂದೆಡೆ ರಾಮಮಂದಿರ ಉದ್ಘಾಟನೆಗೆ ದಿನ ನಿಗದಿಯಾಗಿದೆ. ಇನ್ನೊಂದು ಕಡೆ ಕಾಂಗ್ರೆಸ್ ಸರಕಾರವು ಸುಮಾರು 31 ವರ್ಷಗಳಷ್ಟು ಹಳೆಯ ಕೇಸುಗಳನ್ನು ತೆಗೆದು ಹಿಂದೂಗಳನ್ನು ಬಂಧಿಸುತ್ತಿದೆ. ಇದು ಹಿಂದೂ ವಿರೋಧಿ ಸರಕಾರ ಎಂದು ಟೀಕಿಸಿದರು. ಶ್ರೀರಾಮಚಂದ್ರನೇ ಕಾಲ್ಪನಿಕ ಎನ್ನುವ ಕಾಂಗ್ರೆಸ್ಸಿಗರು ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ದೇವಾಲಯದ ಮಾತನಾಡುತ್ತಾರೆ. ಶ್ರೀರಾಮಚಂದ್ರನೇ ಕಾಲ್ಪನಿಕ ಎಂದಾದರೆ ಮಹರ್ಷಿ ವಾಲ್ಮೀಕಿ ಕುರಿತು ಮಾತನಾಡಲು ನಿಮಗೇನು ಹಕ್ಕಿದೆ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಮೋದಿಜೀ ಅವರು ಅಯೋಧ್ಯೆ ವಿಮಾನನಿಲ್ದಾಣವನ್ನು ಮಹರ್ಷಿ ವಾಲ್ಮೀಕಿ ವಿಮಾನನಿಲ್ದಾಣ ಎಂದು ನಾಮಕರಣ ಮಾಡಿದ್ದಾರೆ ಎಂದು ತಿಳಿಸಿದರು. ಶ್ರೀರಾಮಮಂದಿರ ನಿರ್ಮಾಣದ ಕುರಿತು ಸಂತಸ ಸೂಚಿಸಿ ದೇಶದ 125 ಕೋಟಿ…

Read More

ಬೆಂಗಳೂರು: ನಿಮ್ಮ ಸರಕಾರಕ್ಕೆ ಮತ್ತು ನಿಮಗೆ ತಾಕತ್ತಿದ್ದರೆ ರಾಜ್ಯದ ಎಲ್ಲ ರಾಮ ಕರಸೇವಕರನ್ನು ಬಂಧನ ಮಾಡಿ ನೋಡಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸುನೀಲ್ ಕುಮಾರ್ ಅವರು ಸಿದ್ದರಾಮಯ್ಯನವರಿಗೆ ಸವಾಲು ಹಾಕಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೇವಲ ಹುಬ್ಬಳ್ಳಿಯ ಕಾರ್ಯಕರ್ತರನ್ನು ಬಂಧಿಸುವುದಲ್ಲ. 92ರ ಕರಸೇವೆಯಲ್ಲಿ ನಾನೂ ಭಾಗವಹಿಸಿದ್ದೆ. ಕರಸೇವಕರನ್ನು ಬಂಧನ ಮಾಡುವ ಮೂಲಕ ಹಿಂದುತ್ವ ವಿಚಾರವನ್ನು ಹತ್ತಿಕ್ಕಬಹುದೆಂಬ ಯೋಚನೆಯನ್ನು ಬಿಟ್ಟು ಬಿಡಿ. ರಾಜ್ಯದ ಎಲ್ಲ ಕರಸೇವಕರ ಪಟ್ಟಿಯನ್ನು ಕೊಡುವೆ. ನಿಮ್ಮ ಸರಕಾರಕ್ಕೆ ಮತ್ತು ನಿಮಗೆ ತಾಕತ್ತಿದ್ದರೆ ಎಲ್ಲ ರಾಮಕರಸೇವಕರನ್ನು ಬಂಧನ ಮಾಡಿ ನೋಡಿ ಎಂದು ಆಗ್ರಹಿಸಿದರು. ಇನ್ನೂ ಕಾಲ ಮಿಂಚಿಲ್ಲ; ಆಹ್ವಾನ ಕೊಟ್ಟಿಲ್ಲ; ನೋಡೋಣ ಬರೋಣ ಎಂಬ ಮಾತನ್ನು ಬಿಟ್ಟು ಬಿಡಿ. ಯಾವುದೋ ಸ್ನೇಹಿತರ, ಕುಟುಂಬಸ್ಥರ ಮದುವೆಗೆ ಆಹ್ವಾನ ಕೊಟ್ಟಿಲ್ಲ ಎಂದಾಗ ಪಿಳ್ಳೆನೆವವನ್ನು ಕೆಲವರು ಮುಂದಿಡುತ್ತಾರೆ. ರಾಷ್ಟ್ರಮಟ್ಟದ ಈ ಕಾರ್ಯಕ್ರಮಕ್ಕೆ ಯಾವ ಆಹ್ವಾನವೂ…

Read More