Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಸಮಾಜದಲ್ಲಿನ ಶೋಷಿತ ವರ್ಗಗಳ ಬೆಳವಣಿಗೆಗೆ ವಚನಗಳ ಮೂಲಕ ಕ್ರಾಂತಿಕಾರಿ ಹೋರಾಟ ನಡೆಸಿದ ಶಿವಶರಣರು ಮತ್ತು 12 ನೇ ಶತಮಾನದಲ್ಲಿ ಅನುಭವ ಮಂಟಪದ ಕಾರ್ಯದರ್ಶಿಯಾಗಿದ್ದ ಶ್ರೇಷ್ಠ ವಚನಕಾರ ಹಡಪದ ಅಪ್ಪಣ್ಣ ಎಂದು ಶಿವಮೊಗ್ಗ, ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಹೆಚ್.ಎಸ್. ಸುಂದರೇಶ್ ರವರು ಹೇಳಿದರು. ನಗರದ ಕುವೆಂಪು ರಮಗಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಹಾಗೂ ಶಿವಮೊಗ್ಗ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು ಕಾಯಕ ಮಾಡುವ ಹಡಪದ ಅಪ್ಪಣ ಅನುಭವ ಮಂಟಪದಲ್ಲಿ ಕಾರ್ಯದರ್ಶಿಯಾಗಿದ್ದರು. 12 ನೇ ಶತಮಾನದಲ್ಲಿ ಬಸವಣ್ಣನ ಅನುಯಾಯಿಯಾಗಿ ಸಮಾಜದ ಕ್ರಾಂತಿಕಾರಿ ಮತ್ತು ವಚನದ ಕ್ರಾಂತಿಕಾರಿ ಶರಣರಾಗಿ ಬೆಳೆದವರು. ಸಮಾಜದಲ್ಲಿನ ಶೋಷಣೆಯನ್ನು ಹೋಗಲಾಡಿಸಲು ಹಲವಾರು ಜನರು ಶ್ರಮಿಸಿದ್ದಾರೆ, ಅದರಲ್ಲಿ ಹಡಪದ ಅಪ್ಪಣ್ಣನವರು ಕೂಡ ಒಬ್ಬರು. ಸಮಾಜದಲ್ಲಿ ಒಡೆದು ಆಳುವ ನೀತಿಯನ್ನು ಹೋಗ…
ಅಂಕೋಲಾ: ಶಿರೂರು ಭೂಕುಸಿತದ ಮಣ್ಣು ತೆರವು ಮತ್ತು ಶೋಧ ಕಾರ್ಯಾಚರಣೆಗೆ ಎಸ್.ಡಿ.ಆರ್. ಎಫ್ ನಿಂದ 46 ಜನ ಎನ್.ಡಿ.ಆರ್.ಎಫ್ ನಿಂದ 24 ಜನ ಹಾಗೂ 44 ಜನ ಮಿಲಿಟರಿಯವರು ಹಾಗೂ ನೌಕಾಪಡೆ ಯವರೂ ಕೂಡ ಕೈಜೋಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿರೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಗೋವಾ ಮತ್ತು ಅಂಕೋಲಾ ನಡುವೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜುಲೈ 16 ರಂದು ಭೂ ಕುಸಿತವಾಗಿದೆ. ಭೂ ಕುಸಿತದಿಂದ 10 ಜನ ಕಾಣೆಯಾಗಿದ್ದಾರೆ. ಅದರಲ್ಲಿ ಏಳು ಜನರ ಹೆಣಗಳು ಪತ್ತೆಯಾಗಿದ್ದು ಇನ್ನೂ ಮೂವರು ಕಾಣೆಯಾಗಿದ್ದು ಅವರ ಪತ್ತೆಗಾಗಿ ಪರಿಹಾರ ಕಾರ್ಯಾಚರಣೆ ಜಾರಿಯಲ್ಲಿದೆ ಎಂದು ವಿವರಿಸಿದರು. ಘಟನೆಯಲ್ಲಿ ಖಾಲಿ ಗ್ಯಾಸ್ ಟ್ಯಾಂಕರ್ ಹಾಗೂ ಭರ್ತಿಯಾಗಿರುವ ಗ್ಯಾಸ್ ಟ್ಯಾಂಕರ್ ಕೂಡ ಸಿಕ್ಕಿಹಾಕಿಕೊಂಡಿದ್ದು, ಅಲ್ಲಿಯೇ ವಾಸವಾಗಿರುವ ಒಂದೇ ಕುಟುಂಬದವರು ಟೀ ಅಂಗಡಿಯನ್ನು ಇಟ್ಟುಕೊಂಡಿದ್ದರು. ಅವರಲ್ಲಿ ಐವರು ಭೂ ಕುಸಿತದಲ್ಲಿ ಸಾವನ್ನಪ್ಪಿದ್ದಾರೆ. ರಿಸ್ಕ್ ಆಪರೇಶನ ನ್ನು ತ್ವರಿತವಾಗಿ ಮಾಡಬೇಕೆಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: 2024ರ ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಹರ್ಮನ್ಪ್ರೀತ್ ಕೌರ್ ಪಡೆ ಸತತ ಗೆಲುವು ದಾಖಲಿಸಿದೆ. ಏಷ್ಯಾದ ಹಾಲಿ ಚಾಂಪಿಯನ್ಸ್ ಯುಎಇ ಮಹಿಳೆಯರನ್ನು 78 ರನ್ಗಳಿಂದ ಸೋಲಿಸಿದ್ದಾರೆ ಮತ್ತು ಸೆಮಿಫೈನಲ್ನಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ. ಯುಎಇ ಮಹಿಳೆಯರು ಗೋ ಎಂಬ ಪದದಿಂದ ಭಾರತೀಯ ಮಹಿಳೆಯರ ವರ್ಗಕ್ಕೆ ಹತ್ತಿರವಾಗಿರಲಿಲ್ಲ, ಏಕೆಂದರೆ ಮೊದಲು ಬೌಲಿಂಗ್ ಮಾಡುವ ಅವರ ನಿರ್ಧಾರವು ಭಾರಿ ಹಿನ್ನಡೆಯನ್ನುಂಟು ಮಾಡಿತು. ರಿಚಾ ಘೋಷ್ ಮತ್ತು ಹರ್ಮಪ್ರೀತ್ ಕೌರ್ ಅವರ ಅರ್ಧಶತಕಗಳ ನೆರವಿನಿಂದ ಭಾರತ ಮಹಿಳಾ ತಂಡ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 201 ರನ್ ಗಳಿಸುವ ಮೂಲಕ ಟಿ20ಐನಲ್ಲಿ ಗರಿಷ್ಠ ವೈಯಕ್ತಿಕ ಮೊತ್ತವನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. https://twitter.com/BCCIWomen/status/1814992690209071525 ಯುಎಇ ಮಹಿಳಾ ತಂಡವು ಭಾರತ ಮಹಿಳಾ ತಂಡದ ಪ್ರಬಲ ಬೌಲಿಂಗ್ ದಾಳಿಯ ಮುಂದೆ ಎಡವಿತು, ಏಕೆಂದರೆ ಎಲ್ಲಾ ಐದು ಬೌಲರ್ಗಳು ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು, ಇದರಲ್ಲಿ ಚೊಚ್ಚಲ ಆಟಗಾರ್ತಿ ತನುಜಾ ಕನ್ವರ್ 4 ಓವರ್ಗಳಲ್ಲಿ 1/14 ಅಂಕಿಅಂಶಗಳನ್ನು ದಾಖಲಿಸಿದರು.…
ಹಾಸನ: ಪಾಪ ಕನಕಪುರದವರು.. ಬ್ರ್ಯಾಂಡ್ ಬೆಂಗಳೂರು ಮಾಡಲು ಹೊರಟವರು ಹೇಳುತ್ತಿದ್ದಾರೆ! ಕುಮಾರಸ್ವಾಮಿ 39 ಸೀಟ್ ಗೆದ್ದರು, ಮುಖ್ಯಮಂತ್ರಿ ಮಾಡಿದಿವಿ. ದೇವೇಗೌಡರು 16 ಸೀಟ್ ಗೆದ್ದರು, ಪ್ರಧಾನಮಂತ್ರಿ ಮಾಡಿದಿವಿ ಎಂದು ಹೇಳಿದ್ದಾರೆ. ಆದರೆ; ನನ್ನ ಮತ್ತು ದೇವೇಗೌಡರ ಸರಕಾರಗಳನ್ನು ತೆಗೆದವರು ಯಾರು ಎನ್ನುವುದನ್ನು ಅವರು ಹೇಳಬೇಕಲ್ಲವೇ? ಹೀಗೆಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ಕೊಟ್ಟರು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು. ಹಾಸನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು; ಆವತ್ತು ನಾನಾಗಲಿ ಅಥವಾ ದೇವೇಗೌಡರಾಗಲಿ ಕಾಂಗ್ರೆಸ್ ನವರ ಮನೆ ಬಾಗಲಿಗೆ ಬಂದಿದ್ದವಾ? ದೇವೇಗೌಡರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಿದ್ದು ಕಮ್ಯುನಿಸ್ಟ್ ಪಕ್ಷಗಳು ಹಾಗೂ ಸಂಯುಕ್ತ ರಂಗದ ಅಂಗಪಕ್ಷಗಳು. ಒಬ್ಬ ಕನ್ನಡಿಗನನ್ನು ಪ್ರಧಾನಿ ಸ್ಥಾನದಿಂದ ತೆಗೆದವರು ಯಾರು? ನಾನು ಏನು ತಪ್ಪು ಮಾಡಿದ್ದೆ ಎಂದು ನನ್ನ ಸರಕಾರ ತೆಗೆದರು? ಇದರ ಬಗ್ಗೆಯೂ ಉಪ ಮುಖ್ಯಮಂತ್ರಿ ಹೇಳಬೇಕಲ್ಲವೇ ಎಂದು ಚಾಟಿ ಬೀಸಿದರು. ದಲಿತರು ಅಂತ ಕರೆಯಬೇಡಿ ಎಂದು ಚರ್ಚೆ ನಡೆದಿದೆ ಈ ಸರಕಾರದಲ್ಲಿ.…
ಟೆನ್ನೆಸ್ಸಿ: ಟೆನ್ನೆಸ್ಸಿಯಲ್ಲಿ 12 ವರ್ಷದ ಬಾಲಕಿಯೊಬ್ಬಳು ತನ್ನ 8 ವರ್ಷದ ಸೋದರಸಂಬಂಧಿಯನ್ನು ಐಪೋನ್ ಆಸೆಗಾಗಿ ಉಸಿರುಗಟ್ಟಿಸಿ ಕೊಂದಿದ್ದಾಳೆ ಎಂದು ಆರೋಪಿಸಲಾಗಿದೆ. ಅವರು ಐಫೋನ್ ಬಗ್ಗೆ ಇಷ್ಟ ಪಡುತ್ತಿದ್ದಳು ಎಂದು ಸಂಬಂಧಿಕರೊಬ್ಬರು ತಿಳಿಸಿದ್ದಾರೆ. ಟೆನ್ನೆಸ್ಸಿಯ ಹಂಬೋಲ್ಟ್ನಲ್ಲಿ ಜುಲೈ 15 ರಂದು ಅವರು ಹಂಚಿಕೊಂಡ ಮಲಗುವ ಕೋಣೆಯೊಳಗೆ ಈ ಹತ್ಯೆಯನ್ನು ಭದ್ರತಾ ಕ್ಯಾಮೆರಾ ರೆಕಾರ್ಡ್ ಮಾಡಿದೆ ಎಂದು ಕೌಂಟಿ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ. ಕಿರಿಯ ಹುಡುಗಿ ಮೇಲಿನ ಬಂಕ್ನಲ್ಲಿ ಮಲಗಿದ್ದರಿಂದ ಹಿರಿಯ ಮಗು ತನ್ನ ಸೋದರಸಂಬಂಧಿಯನ್ನು ಉಸಿರುಗಟ್ಟಿಸಲು ಹಾಸಿಗೆಯನ್ನು ಬಳಸುವುದನ್ನು ರೆಕಾರ್ಡಿಂಗ್ ತೋರಿಸುತ್ತದೆ ಎಂದು ಗಿಬ್ಸನ್ ಜಿಲ್ಲಾ ಅಟಾರ್ನಿ ಫ್ರೆಡೆರಿಕ್ ಏಜ್ ಅವರ ಹೇಳಿಕೆ ತಿಳಿಸಿದೆ. ಮಗು ಸತ್ತ ನಂತರ, “ಬಾಲಾಪರಾಧಿ ಸಂತ್ರಸ್ತೆಯನ್ನು ಸ್ವಚ್ಛಗೊಳಿಸಿ ಅವಳ ದೇಹವನ್ನು ಮರುಸ್ಥಾಪಿಸಿದನು” ಎಂದು ಏಜ್ ಹೇಳಿದರು. ಆರೋಪಿ ಬಾಲಕಿಯ ವಿರುದ್ಧ ಪ್ರಥಮ ದರ್ಜೆ ಕೊಲೆ ಪ್ರಕರಣ ದಾಖಲು ಮೆಂಫಿಸ್ನ ಡಬ್ಲ್ಯುಆರ್ಇಜಿ-ಟಿವಿಗೆ ಸಂಬಂಧಿಕರೊಬ್ಬರು ಮಾತನಾಡಿ, ಹುಡುಗಿಯರು ತಮ್ಮ ಅಜ್ಜಿಯೊಂದಿಗೆ ಉಳಿಯಲು ಪಟ್ಟಣದಿಂದ ಹೊರಬಂದ ನಂತರ ಐಫೋನ್ಗಾಗಿ ಆಸೆಪಡುತ್ತಿದ್ದಳು ಎಂದು ಹೇಳಿದರು.…
ನವದೆಹಲಿ: ಕಿರುತೆರೆ ನಟಿಯೊಬ್ಬರು ಜುಲೈ.17ರಂದು ನಿಗದಿಯಾಗಿದ್ದಂತ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗೋದಕ್ಕಾಗಿ ಕಣ್ಣಿಗೆ ಲೆನ್ಸ್ ಬಳಸಿದ್ದರು. ಹೀಗೆ ಲೆನ್ಸ್ ಬಳಸಿದ ಆಕೆ ಈಗ ಕಣ್ಣಿನ ದೃಷ್ಠಿಯನ್ನೇ ಕಳೆದುಕೊಂಡಿರೋದಾಗಿ ತಿಳಿದು ಬಂದಿದೆ. ಅಷ್ಟಕ್ಕೂ ಆ ನಟಿ ಯಾರು.? ಏನಾಯ್ತು ಅನ್ನೋ ಬಗ್ಗೆ ಮುಂದೆ ಓದಿ. ಕಿರುತೆರೆ ನಟಿ ಜಾಸ್ಮಿನ್ ಭಾಸಿನ್ ತನ್ನ ಲೆನ್ಸ್ಗಳಲ್ಲಿನ ಸಮಸ್ಯೆಯ ನಂತರ ಕಣ್ಣುಗಳನ್ನೇ ಕಳೆದುಕೊಂಡಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ನಾನು ಜುಲೈ 17 ರಂದು ಕಾರ್ಯಕ್ರಮವೊಂದಕ್ಕಾಗಿ ದೆಹಲಿಯಲ್ಲಿದ್ದೆ, ಅದಕ್ಕಾಗಿ ನಾನು ತಯಾರಾಗುತ್ತಿದ್ದೆ. ನನ್ನ ಲೆನ್ಸ್ ಗಳಲ್ಲಿ ಏನು ತಪ್ಪಾಗಿದೆ ಎಂದು ನನಗೆ ತಿಳಿದಿಲ್ಲ, ಆದರೆ ನಾನು ಅವುಗಳನ್ನು ಧರಿಸಿದ ನಂತರ, ನನ್ನ ಕಣ್ಣುಗಳು ನೋಯಲು ಪ್ರಾರಂಭಿಸಿದವು. ನೋವು ಕ್ರಮೇಣ ಉಲ್ಬಣಗೊಂಡಿತು. ನಾನು ವೈದ್ಯರ ಬಳಿಗೆ ತೆರಳುವುದಕ್ಕೂ ಮುನ್ನಾ ಕಾರ್ಯಕ್ರಮದಲ್ಲಿ ಹಾಜರಾಗಿದ್ದೆ ಎಂದಿದ್ದಾರೆ. ನಾನು ಈವೆಂಟ್ನಲ್ಲಿ ಸನ್ಗ್ಲಾಸ್ ಧರಿಸಿದ್ದೆ. ನಾನು ಲೆನ್ಸ್ ಧರಿಸಿ ಕಾರ್ಯಕ್ರಮ ಮುಗಿಯುವುದರೊಳಗೆ, ನನಗೆ ಏನೂ ಕಾಣದಂತೆ ಆಗಿತ್ತು. ಅಲ್ಲಿನ ಕಾರ್ಯಕ್ರಮ ಆಯೋಜಕರು ನನಗೆ…
ಅಂಕೋಲಾ: ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಕ್ಷಣಾ ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿಗಳು ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು. ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಹಲವು ದಿನಗಳಿಂದ ತಾಲ್ಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡರು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆಗಳ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದು ಈ…
ಉತ್ತರ ಕನ್ನಡ: ಜಿಲ್ಲೆಯ ಅಂಕೋಲಾ ಬಳಿಯಲ್ಲಿನ ಶಿರೂರು ಗ್ರಾಮದಲ್ಲಿ ಗುಡ್ಡ ಕುಸಿತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. 7 ಜನರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನುಳಿದ ಮೂವರ ಶವಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಈ ನಡುವೆ ಇಂದು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದಂತ ಸಿಎಂ ಸಿದ್ಧರಾಮಯ್ಯ ಶಿರೂರು ಬಳಿಯ ಗುಡ್ಡ ಕುಸಿತ ದುರಂತ ಪ್ರಕರಣದಲ್ಲಿ ಮೃತಪಟ್ಟಿರುವಂತ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿಗಳು ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು. ನಾಲ್ಕು ತಂಡಗಳು ಗುಡ್ಡ…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಸೋಮಭಾಯ್ ಮೋದಿಯವರು ಬೆಂಗಳೂರಿಗೆ ಇಂದು ಆಗಮಿಸಿದ್ದಾರೆ. ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಂತ ಅವರಿಗೆ ಶಾಲು ಹೊದಿಸಿ, ಹೂಗುಚ್ಚ ನೀಡಿ ಸನ್ಮಾನಿಸಿ ಸ್ವಾಗತಿಸಲಾಯಿತು. ಇಂದು ಬೆಳಿಗ್ಗೆ 9.20ಕ್ಕೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಅವರು ಆಗಮಿಸಬೇಕಾಗಿತ್ತು. ಆದ್ರೇ ವಿಮಾನ ತಡವಾದ ಕಾರಣ 1 ಗಂಟೆ ತಡವಾಗಿ ಗುಜರಾತ್ ನ ವಡೋದರದಿಂದ ಬೆಂಗಳೂರಿಗೆ ಆಗಮಿಸಿದರು. ಯಲಹಂಕದ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿರುವಂತ ಅವರು, ಅಲ್ಲಿಂದ ಸಾಯಿ ಬಾಬಾ ಮಂದಿರಕ್ಕೆ ತೆರಳಲಿದ್ದಾರೆ. ಆ ಬಳಿಕ ಶ್ರೀಗಂಚಿ ಸಮಾಜ್ ಪೂರ್ಣೇಶ್ವರ ಟ್ರಸ್ಟ್ ಗೆ ಭೇಟಿ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಬಳಿಯಲ್ಲಿರುವಂತ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆಯಲಿದ್ದಾರೆ. ಬೆಂಗಳೂರಿನಿಂದ ರಾತ್ರಿ 7.45ಕ್ಕೆ ಗುಜರಾತ್ ಗೆ ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಸೋಮಭಾಯ್ ಮೋದಿಯವರು ವಾಪಾಸ್ ಆಗಲಿದ್ದಾರೆ. https://kannadanewsnow.com/kannada/cm-siddaramaiah-visits-shirur-landslide-site-instructs-immediate-action/ https://kannadanewsnow.com/kannada/should-army-have-been-called-in-to-stop-robbery-and-loot/
ಆಂಕೋಲ: ರಣ ಭೀಕರ ಮಳೆಯಲ್ಲಿ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ನೀಡಿದರು. ಒಟ್ಟಾರೆಯಾಗಿ ಇಂದು ಬಿರು ಮಳೆಯ ನಡುವೆಯೂ ಸಿಎಂ ಸಿದ್ದರಾಮಯ್ಯ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲದೇ ರಣಭೀಕರ ಮಳೆಯ ನಡುವೆ SDRF-NDRF ಸಿಬ್ಬಂದಿ ಜೊತೆ ಚರ್ಚೆ ನಡೆಸಿದರು. ಜೊತೆಗೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆಗೆ ಸಿಎಂ ಸೂಚನೆ ನೀಡದರು. https://kannadanewsnow.com/kannada/20-killed-several-missing-as-flash-floods-batter-china/ https://kannadanewsnow.com/kannada/should-army-have-been-called-in-to-stop-robbery-and-loot/