Author: kannadanewsnow09

ನವದೆಹಲಿ: ರಿಲಯನ್ಸ್ ಜಿಯೋದ 2024-25ನೇ ಸಾಲಿನ ಪ್ರಥಮ ತ್ರೈಮಾಸಿಕದ, ಅಂದರೆ ಏಪ್ರಿಲ್ ನಿಂದ ಜೂನ್ ತಿಂಗಳ ತನಕದ ಹಣಕಾಸು ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಕಳೆದ ತ್ರೈಮಾಸಿಕದಲ್ಲಿ 5,337 ಕೋಟಿ ರೂಪಾಯಿಯ ನಿವ್ವಳ ಲಾಭ ಘೋಷಿಸಿದ್ದ ಕಂಪನಿಯು ಈ ತ್ರೈಮಾಸಿಕದಲ್ಲಿ 5,445 ಕೋಟಿ ರೂಪಾಯಿ ನಿವ್ವಳ ಲಾಭವನ್ನು ಗಳಿಸಿದೆ. ರಿಲಯನ್ಸ್ ಜಿಯೋ ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದು ಮತ್ತೆ ಮುಂದುವರಿದಿದೆ. ಜೂನ್ ಗೆ ಕೊನೆಯಾದ ತ್ರೈಮಾಸಿಕದಲ್ಲಿ 90 ಲಕ್ಷ ಬಳಕೆದಾರರು ಸೇರ್ಪಡೆಯಾಗಿದ್ದಾರೆ. ಅಂದ ಹಾಗೆ ವರ್ಷದ ಹಿಂದಿನ ಇದೇ ಹಣಕಾಸು ತ್ರೈಮಾಸಿಕದಲ್ಲಿ ಜಿಯೋ 4,863 ಕೋಟಿ ರೂಪಾಯಿ ಲಾಭ ಗಳಿಸಿತ್ತು. ಕಾರ್ಯಾಚರಣೆ ಮೂಲಕ ಬರುವಂಥ ಆದಾಯವು 26,478 ಕೋಟಿ ರೂಪಾಯಿಗೆ ಹೆಚ್ಚಳವಾಗಿದೆ. ಕಳೆದ ತ್ರೈಮಾಸಿಕದಲ್ಲಿ ಕಾರ್ಯಾಚರಣೆ ಮೂಲಕವಾಗಿ 25,959 ಕೋಟಿ ರೂಪಾಯಿ ಆದಾಯ ಬಂದಿತ್ತು. ವರ್ಷದ ಹಿಂದಿನ ಇದೇ ಅವಧಿಯಲ್ಲಿ 24,042 ಕೋಟಿ ರೂಪಾಯಿ ಕಾರ್ಯಾಚರಣೆ ಮೂಲಕ ಆದಾಯ ಪಡೆದದ್ದನ್ನು ಇಲ್ಲಿ ಉಲ್ಲೇಖಿಸಬಹುದು. ಇನ್ನು ತಿಂಗಳಿಗೆ ಪ್ರತಿ ಬಳಕೆದಾರರಿಂದ ಬರುವಂಥ ಸರಾಸರಿ ಆದಾಯದಲ್ಲಿ, ಅಂದರೆ…

Read More

ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಪೌಷ್ಠಿಕತೆಯ ಕೊರತೆ ನೀಗಿಸಲು ಸರ್ಕಾರ ವಾರದಲ್ಲಿ 6 ದಿನವೂ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ ನೀಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ನಾಳೆ ಶಾಲಾ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರವನ್ನು ವಾರದಲ್ಲಿ 6 ದಿನ ಉಚಿತವಾಗಿ ವಿತರಿಸುವಂತ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಅಜೀಂ ಪ್ರೇಮ್‌ಜೀ ಫೌಂಡೇಷನ್, ಬೆಂಗಳೂರು ಇವರ ಸಹಭಾಗಿತ್ವದಲ್ಲಿ ರಾಜ್ಯ ಸರ್ಕಾರದ ಅಕ್ಷರ ದಾಸೋಹ- ಮಧ್ಯಾಹ್ನ ಉಪಹಾರ ಯೋಜನೆಯಡಿ ಶಾಲಾ ಮಕ್ಕಳ ಪೌಷ್ಠಿಕತೆ ವೃದ್ಧಿಸಲು 2024-25 ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರವನ್ನು ವಾರದಲ್ಲಿ 6 ದಿನಗಳಂದು ಉಚಿತವಾಗಿ ವಿತರಿಸುವ ಕಾರ್ಯಕ್ರಮದ ಉದ್ಘಾಟನೆಯು ದಿನಾಂಕ:20.07.2024 ರಂದು ಬೆಳಿಗ್ಗೆ 10.30 ಗಂಟೆಗೆ ಹೋಟೆಲ್ ರಾಡಿಸನ್ ಬ್ಲ್ಯೂ (ಹೋಟೆಲ್…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದೀಗ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸಾಗರ ತಾಲ್ಲೂಕು ತಹಶೀಲ್ದಾರ್ ಆದೇಶ ಹೊರಡಿಸಿದ್ದು, ಸಾಗರ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದಾಗಿ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ದಿನಾಂಕ 20-07-2024ರ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಅಂತ ತಿಳಿಸಿದ್ದಾರೆ. ಸಾಗರ ತಾಲ್ಲೂಕಿನಲ್ಲಿ ಮಳೆಯ ಪ್ರಮಾಣ ನಾಳೆ ಕೂಡ ಹೆಚ್ಚು ಇರಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ನಾಳೆ ಎಲ್ಲಾ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು , ಪದವಿ ಕಾಲೇಜು, ಡಿಪ್ಲೊಮೊ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂಬುದಾಗಿ ಆದೇಶದಲ್ಲಿ ಹೇಳಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/soraba-taluka-to-remain-closed-on-july-20-due-to-heavy-rains/ https://kannadanewsnow.com/kannada/sringeri-sharadambe-temple-to-have-dress-code-in-place-from-august-15/

Read More

ಶಿವಮೊಗ್ಗ: ಇಂದು ಬೆಳಿಗ್ಗೆಯಿಂದ ಎಡಬಿಡದೇ ಮಳೆ ಸೊರಬ ತಾಲ್ಲೂಕಿನಲ್ಲಿ ಸುರಿಯುತ್ತಿದೆ. ಜನರು ಮನೆಯಿಂದ ಹೊರ ಬರಲಾಗದಂತೆ ಭಾರೀ ಮಳೆಯಾಗುತ್ತಿದೆ. ನಾಳೆಯು ಮಳೆಯಾಗುವ ಮುನ್ಸೂಚನೆಯ ಕಾರಣ, ಸೊರಬ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಸಂಬಂಧ ಸೊರಬ ತಹಶೀಲ್ದಾರ್ ಮಂಜುಳಾ ಹೆಗಡಾಳ್ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಸೊರಬ ತಾಲ್ಲೂಕಿನಾಧ್ಯಂತ ತೀವ್ರ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಇಂದು ರಜೆ ನೀಡಲಾಗಿತ್ತು ಎಂದಿದ್ದಾರೆ. ಇನ್ನೂ ದಿನಾಂಕ 20-07-2024ರ ನಾಳೆ ಕೂಡ ಸೊರಬ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ನಾಳೆ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಸದರಿ ರಜೆ ದಿನದಂದು ನಡೆಯಬೇಕಿದ್ದ ಪಾಠ-ಪ್ರವಚನಗಳನ್ನು ಮುಂದಿನ ರಜಾ ದಿನಗಳಲ್ಲಿ ನಡೆಸಿ, ಹೊಂದಾಣಿಕೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/valmiki-nigam-scam-govt-fully-confident-in-sit-probe-says-siddaramaiah/ https://kannadanewsnow.com/kannada/sringeri-sharadambe-temple-to-have-dress-code-in-place-from-august-15/

Read More

ಉಡುಪಿ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದು ಶೃಂಗೇರಿಯ ಶಾರಾಂಬೆಯ ಶ್ರೀಮಠ. ಆಗಸ್ಟ್.15ರಿಂದ ಇಲ್ಲಿಗೆ ಭೇಟಿ ನೀಡುವಂತ ಪ್ರವಾಸಿಗರು, ಯಾತ್ರಾರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅವುಗಳ ಹೊರತಾಗಿ ಬೇರೆ ಉಡುಪು ಧರಿಸಿ ಬಂದ್ರೆ ಶ್ರೀಮಠಕ್ಕೆ ಎಂಟ್ರಿ ಇರೋದಿಲ್ಲ. ಈ ಬಗ್ಗೆ ಶೃಂಗೇರಿಯ ದಕ್ಷಿಣಾಮ್ನಾಯ ಶ್ರೀಶಾರದಾ ಪೀಠದ ಆಡಳಿತಾಧಿಕಾರಿ ಮತ್ತು ಸಿಇಓ ಪಿ.ಎ ಮುರಳಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀಮಠ ಶೃಂಗೇರಿಗೆ ಆಗಮಿಸುವ ಎಲ್ಲಾ ಭಕ್ತರು, ಆಗಸ್ಟ್.15, 2024ರಿಂದ ಸಾಂಪ್ರದಾಯಿಕ ಭಾರತೀಯ ಉಡುಪುಗಳನ್ನು ಧರಿಸಲು ವಿನಂತಿಸಿದ್ದಾರೆ. ಶ್ರೀ ಶಾರದಾಂಬೆಯ ದರ್ಶನಕ್ಕೆ ಬರುವಂತವರು ನಿಗದಿತ ಉಡುಪುಗಳನ್ನು ಹೊರತುಪಡಿಸಿ ಇತರೆ ಉಡುಪುಗಳನ್ನು ಧರಿಸುವ ವ್ಯಕ್ತಿಗಳಿಗೆ ಮಹಾಮಂಟಪದಿಂದ ದರ್ಶನವನ್ನು ಪಡೆಯಲು ಅವಕಾಶವಿರುವುದಿಲ್ಲ. ಅವರು ಹೊರ ಪ್ರಾಕಾರದಿಂದ ದರ್ಶನ ಪಡೆಯಬಹುದಾಗಿದೆ ಎಂದಿದ್ದಾರೆ. ಗುರು ನಿವಾಸದಲ್ಲಿ ಪಾದ ಪೂಜೆ ಮತ್ತು ಜಗದ್ಗುರುಗಳ ದರ್ಶನಕ್ಕೆ ನಿಗದಿತ ಉಡುಪುಗಳನ್ನು ಹೊರತು ಪಡಿಸಿ, ಇತರ ಉಡುಪುಗಳನ್ನು ಧರಿಸಿದವರಿಗೆ ಗುರು ನಿವಾಸದ ಒಳಗೆ ಪ್ರವೇಶವಿರುವುದಿಲ್ಲ ಅಂತ ತಿಳಿಸಿದ್ದಾರೆ. ಈ ಸಾಂಪ್ರದಾಯಿಕ ಉಡುಪು ಧರಿಸುವುದು…

Read More

ಬೆಂಗಳೂರು : ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ವಾಲ್ಮಿಕಿ ಅಭಿವೃದ್ಧಿ ನಿಗಮದ ಅಕೌಂಟ್‌ ಸುಪರಿಡೆಂಟ್‌ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡ ದಿನವೇ ಅವರ ಪತ್ನಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಮೇ 31ರಂದು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದ್ದು, ಇದರಲ್ಲಿ ನಾಲ್ಕು ಮಂದಿ ಹಿರಿಯ ಐಪಿಎಸ್‌ ಅಧಿಕಾರಿಗಳು ಇದ್ದಾರೆ. ಯೂನಿಯನ್‌ ಬ್ಯಾಂಕ್‌ ಅಫ್‌ ಇಂಡಿಯಾದ ಅಧಿಕಾರಿ ಮಹೇಶ್‌ ಎಂಬವರ ದೂರಿನ ಮೇರೆಗೆ ಸಿಬಿಐ ತನಿಖೆಯನ್ನು ಕೈಗೊಂಡಿದ್ದು, ಇಡಿ ಸ್ವಯಂ ಪ್ರೇರಿತವಾಗಿ ತನಿಖೆಯನ್ನು ನಡೆಸುತ್ತಿದೆ. ಎಸ್‌ಐಟಿ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಬಂಧಿಸಿದ್ದು, 34 ಕೋಟಿ ರೂ. ನಗದು ವಶಪಡಿಸಿಕೊಂಡಿದೆ. ವಿವಿಧ ಬ್ಯಾಂಕ್‌…

Read More

ಇಸ್ಲಾಮಾಬಾದ್: ಪಾಕಿಸ್ತಾನದ ಕಾನೂನು ಜಾರಿ ಸಂಸ್ಥೆಗಳು ಶುಕ್ರವಾರ ಹಿರಿಯ ಅಲ್-ಖೈದಾ ನಾಯಕ ಅಮೀನ್ ಉಲ್ ಹಕ್ ಅವರನ್ನು ಬಂಧಿಸಿದ್ದು, ಹತ್ಯೆಗೀಡಾದ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಅವರ ಆಪ್ತ ಸಹಾಯಕ ಎಂದು ತಿಳಿದು ಬಂದಿದೆ. ಪಂಜಾಬ್ ಪ್ರಾಂತ್ಯದಲ್ಲಿ ಯೋಜಿತ ಕಾರ್ಯಾಚರಣೆಯ ಸಮಯದಲ್ಲಿ ಇಲಾಖೆಯು ವಿವಿಧ ಗುಪ್ತಚರ ಸಂಸ್ಥೆಗಳ ಸಹಯೋಗದೊಂದಿಗೆ ಹಕ್ ನನ್ನು ಬಂಧಿಸಿದ್ದರಿಂದ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ವಕ್ತಾರರ ಭಯೋತ್ಪಾದನಾ ನಿಗ್ರಹ ಇಲಾಖೆ (ಸಿಟಿಡಿ) ತಿಳಿಸಿದೆ. ಹಕ್ 1996 ರಿಂದ ಒಸಾಮಾ ಬಿನ್ ಲಾಡೆನ್ ನ ನಿಕಟ ಸಹವರ್ತಿಯಾಗಿದ್ದು, ಪ್ರಾಂತ್ಯದಾದ್ಯಂತ ವಿಧ್ವಂಸಕ ಚಟುವಟಿಕೆಗಳನ್ನು ಯೋಜಿಸಿದ್ದ ಮತ್ತು ಪ್ರಮುಖ ಸ್ಥಾಪನೆಗಳು ಮತ್ತು ವ್ಯಕ್ತಿಗಳನ್ನು ಗುರಿಯಾಗಿಸಲು ಬಯಸಿದ್ದ ಎಂದು ಪೊಲೀಸ್ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಸಿಟಿಡಿ ತನ್ನ ಅಸಾಧಾರಣ ಕಾರ್ಯಾಚರಣೆ ಸಾಮರ್ಥ್ಯ ಮತ್ತು ಸಮರ್ಪಣೆಯನ್ನು ಪ್ರದರ್ಶಿಸಿ, ಅಮಿನುಲ್ ಹಕ್ ಅವರನ್ನು ಪತ್ತೆಹಚ್ಚುವಲ್ಲಿ ಮತ್ತು ಬಂಧಿಸುವಲ್ಲಿ ಯಶಸ್ವಿಯಾಗಿದೆ” ಎಂದು ಅದು ಹೇಳಿದೆ. ಬಂಧಿತ ಭಯೋತ್ಪಾದಕನ ವಿರುದ್ಧ ಸಿಟಿಡಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಖಾಸಗಿ ವಲಯದಲ್ಲಿಯೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನಿರ್ಧಾರವನ್ನು ಪೋನ್ ಪೇ ಸಿಇಒ ಟೀಕಿಸಿದ್ದರು. ಅವರ ಟೀಕೆಯ ವಿರುದ್ಧ ಸಿಡಿದೆದ್ದಿರುವಂತ ಕನ್ನಡಿಗರು ಎಕ್ಸ್ ನಲ್ಲಿ #BoycottPhonePe #UninstallPhonePe ಅಭಿಯಾನವನ್ನೇ ಆರಂಭಿಸಿದ್ದಾರೆ. ಈಗ ಈ ಅಭಿಯಾನವನ್ನು ಎಕ್ಸ್ ನಲ್ಲಿ ಭಾರೀ ಟ್ರೆಂಡ್ ಕೂಡ ಆಗಿದೆ. ಕನ್ನಡಿಗರಿಗೆ ಖಾಸಗಿ ವಲಯದಲ್ಲೂ ಶೇ.100ರಷ್ಟು ಉದ್ಯೋಗ ಮೀಸಲಾತಿ ಸಂಬಂಧದ ಸರ್ಕಾರದ ನಿರ್ಧಾರದ ಬಗ್ಗೆ ಪೋನ್ ಪೇ ಸಿಇಒ ಸಮೀರ್ ನಿಗಮ್ ಟೀಕಿಸಿದ್ದರು. ಅವರ ಟೀಕೆಗೆ ಕನ್ನಡಿಗರು ವ್ಯಾಪಕ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಕರ್ನಾಟಕದ ಕನ್ನಡಿಗರ ವಿರುದ್ಧ ಮಾತನಾಡಿದಂತ ಪೋನ್ ಪೇ ಸಿಇಒ ಸಮೀರ್ ನಿಗಮ್ ಗೆ ಬುದ್ದಿ ಕಲಿಸಬೇಕು ಅಂತ ಕನ್ನಡಿಗರು ನಿರ್ಧರಿಸಿದ್ದಾರೆ. ಅಲ್ಲದೇ ಪೋನ್ ಪೇ ಗೆ 1 ರೇಟಿಂಗ್ ನೀಡಿ, ಮೊಬೈಲ್ ನಿಂದ ಆಪ್ ಡಿಲೀಟ್ ಮಾಡಿ ಅನ್ನೋ ಸಂದೇಶವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಈಗ ವೈರಲ್ ಆಗಿದೆ. https://twitter.com/mdiliyas77/status/1814224813176815839 https://twitter.com/sgowda79/status/1814193046591807836 ಸೋಷಿಯಲ್ ಮೀಡಿಯಾದಲ್ಲಿ ಅನೇಕ ಕನ್ನಡಿಗರು ಪೋನ್ ಪೇಗೆ 1…

Read More

ಬೆಂಗಳೂರು: ವಾಲ್ಮೀಕಿ ನಿಗಮದ 187 ಕೋಟಿ ಹಣವನ್ನು ಈ ಸರಕಾರದ ಒಬ್ಬ ಸಚಿವರು, ಒಬ್ಬ ಶಾಸಕ, ಮುಖ್ಯಮಂತ್ರಿ ಸೇರಿ ಹಲವಾರು ಸಚಿವರು ಲೂಟಿ ಮಾಡಿ ಲೋಕಸಭಾ ಚುನಾವಣೆಗೆ ಬಳಸಿದ್ದು, ಅದು ಇ.ಡಿ. ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟವಾಗಿದೆ. ಲೂಟಿ ಆದ ಹಣ ಎಲ್ಲೆಲ್ಲಿ ಹೋಗಿದೆ? ಯಾವಾಗ ವಾಪಸ್ ತರುತ್ತೀರಿ ಎಂದು ನಾವು ನಿಲುವಳಿ ಸೂಚನೆ ಮೂಲಕ ಪ್ರಶ್ನಿಸಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು. ಹಣ ಎಟಿಎಂ ಮೂಲಕ ಕಾಂಗ್ರೆಸ್ ನಾಯಕರಿಗೆ ಹೋಗಿದೆಯೇ? ಎಂದು ಕೇಳಿದ ಅವರು, ಎಫ್‍ಐಆರ್‍ನಲ್ಲಿ ನಾಗೇಂದ್ರ, ನಿಗಮದ ಅಧ್ಯಕ್ಷ, ಶಾಸಕ ದದ್ದಲ್ ಹೆಸರಿಲ್ಲ. ಒತ್ತಡ ಹಾಕಿ ಅವರ ಹೆಸರನ್ನು ಕೈಬಿಟ್ಟಿದ್ದಾರೆ. ಮುಖ್ಯಮಂತ್ರಿ ವೀರಾವೇಶದ ಮಾತನಾಡಿ ತಮ್ಮ ಸರಕಾರ ಭಾಗಿಯಾಗಿಲ್ಲ ಎಂದಿದ್ದಾರೆ. ಹಾಗಿದ್ದರೆ ರಾಜೀನಾಮೆ ಕೊಟ್ಟದ್ದು ಯಾಕೆ? ಬುದ್ಧಿ ಇಲ್ಲದೇ ರಾಜೀನಾಮೆ ಕೊಟ್ಟರೇ ಎಂದು ಕೇಳಿದರು. 89 ಕೋಟಿ ಲೂಟಿ ಆಗಿದೆ ಎಂದು ನೀವೇ ಒಪ್ಪಿಕೊಂಡಿದ್ದೀರಿ. ಆತ್ಮಹತ್ಯೆಯ, ಲೂಟಿಯ ತನಿಖೆ ಮಾಡುವುದನ್ನು ಬಿಟ್ಟು ನಿಮ್ಮ ಸರಕಾರದಲ್ಲಿ ಹೀಗಾಗಿತ್ತು, ಹಾಗಾಗಿತ್ತು ಎಂದು…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ದಿನ ಹತ್ತಿರ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ ಇವತ್ತು ರಾಜ್ಯದಲ್ಲಿ ಉದ್ಭವವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹಣಕಾಸು ಇಲಾಖೆ ಸಚಿವರೂ ಆದ ಮುಖ್ಯಮಂತ್ರಿಗಳ ಸಮ್ಮತಿ ಇಲ್ಲದೇ, ಅವರ ಗಮನಕ್ಕೆ ಬಾರದೆ ಹಣ ವರ್ಗಾವಣೆ ಆಗಲು ಸಾಧ್ಯವೇ ಇರಲಿಲ್ಲ ಎಂದು ನುಡಿದರು. ಕೇವಲ ಮಾಜಿ ಸಚಿವ ನಾಗೇಂದ್ರ, ದದ್ದಲ್ ಅವರಷ್ಟೇ ಅಲ್ಲ; ಇನ್ನೂ ದೊಡ್ಡ ದೊಡ್ಡವರ ಹೆಸರು ಮುಂದೆ ಬರಲಿದೆ. ಹಾಗಾಗಿ ಆತಂಕದಿಂದಲೇ ನಿನ್ನೆ ರಾಜ್ಯದ 5 ಸಚಿವರು ಇ.ಡಿ. ಮೇಲೆ ಆಪಾದನೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ತಿಳಿಸಿದರು. ಮುಖ್ಯಮಂತ್ರಿಗಳು ಸದನದಲ್ಲಿ ಉತ್ತರ ಕೊಡುವ ಪ್ರಯತ್ನ ಮಾಡಿದ್ದು, ಸತ್ಯಸಂಗತಿಗಳನ್ನು ಮರೆಮಾಚಿ, ಸದನಕ್ಕೆ ಮತ್ತು ರಾಜ್ಯದ ಜನತೆಗೆ ತಪ್ಪು ಮಾಹಿತಿ, ತಪ್ಪು ಸಂದೇಶ ಕೊಡುವ ಪ್ರಯತ್ನ ಮಾಡಿದ್ದಾರೆ ಎಂದು ಟೀಕಿಸಿದರು. ಮಾನ್ಯ ಮುಖ್ಯಮಂತ್ರಿಗಳು…

Read More