Author: kannadanewsnow09

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ತನಿಖೆ ನಡೆಸುತ್ತಿರುವಂತ ಎಸ್ಐಟಿ ಪೊಲೀಸರು, ಇದೀಗ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ತನ್ನ ಮೊಬೈಲ್ ನಿಂದ ಕಳುಹಿಸಿದ್ದಂತ ಅಶ್ಲೀಲ ಮೆಸೇಜ್ ಗಳ ಡೇಟಾವನ್ನು ಸಂಗ್ರಹಿಸಿರುವುದಾಗಿ ತಿಳಿದು ಬಂದಿದೆ. ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಎಂಬ ಒಂದೇ ಕಾರಣಕ್ಕೆ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು. ಅಲ್ಲದೇ ಆತನ ಮೃತದೇಹವನ್ನು ಮೋರಿಗೆ ಎಸೆದಿದ್ದರು. ಮೃತದೇಹ ಪತ್ತೆಯಾದ ನಂತ್ರ, ರೇಣುಕಾಸ್ವಾಮಿ ಕೊಲೆ ಹಿಂದಿನ ಅಸಲಿ ಕಾರಣ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದದ್ದು ಎಂಬುದಾಗಿ ಪೊಲೀಸರಿಗೆ ತಿಳಿದು ಬಂದಿತ್ತು. ಹೀಗಾಗಿ ಆತನ ಮೊಬೈಲ್ ಸಂಖ್ಯೆಯ ಮೂಲಕ ಆತ ಬಳಸುತ್ತಿದ್ದಂತ ಸಾಮಾಜಿಕ ಜಾಲತಾಣಗಳಲ್ಲಿನ ಡೇಟಾ ಮಾಹಿತಿ ಸಂಗ್ರಹಿಸೋದಕ್ಕೆ ಎಸ್ಐಟಿ ಪೊಲೀಸರು ಮುಂದಾಗಿದ್ದರು. ರೇಣುಕಾಸ್ವಾಮಿ ಬಳಸುತ್ತಿದ್ದಂತ ಎರಡು ಪೋನ್ ನಂಬರ್ ಗಳ ಪೈಕಿ ಒಂದು ನಂಬರ್ ಪತ್ನಿ ಹೆಸರಿನಲ್ಲಿ ಖರೀದಿಸಿದ್ದರು. ಆ ನಂಬರ್ ನನ್ನು ಸರ್ವೀಸ್ ಪ್ರೊವೈಡಿಂಗ್ ಕಂಪನಿಗೆ ಕಳುಹಿಸಿ, ಎರಡು ಪೋನ್…

Read More

ಬೆಂಗಳೂರು : “ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಅವರು ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು ₹ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ ₹87 ಕೋಟಿ. ಎಪಿಎಂಸಿಯ ₹47 ಕೋಟಿ, 2019 ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ ₹22 ಕೋಟಿ, ಅಂಬೇಡ್ಕರ್ ನಿಗಮದ ಕೆನರಾ ಬ್ಯಾಂಕ್ ಅಲ್ಲಿನ ಹಣ ಜೂನ್ 2018 ರಲ್ಲಿ ₹5 ಕೋಟಿ, ದೇವರಾಜ್ ಅರಸು ನಿಗಮದ ₹47 ಕೋಟಿ, ಮಾಲಿನ್ಯ ನಿಯಂತ್ರಣ ಮಂಡಲಿಯ ₹10 ಕೋಟಿ ಹಾಗೂ ಕೆಐಡಿಬಿಯ ಹಣ ಸೇಲಂಗೆ ಅಕ್ರಮವಾಗಿ ವರ್ಗಾವಣೆಯಾಗಿದೆ” ಎಂದು ತಿಳಿಸಿದರು. ಬಿಜೆಪಿಯ ಅಕ್ರಮಗಳನ್ನು ತನಿಖೆ ನಡೆಸುವಿರಾ ಎಂದು ಪ್ರಶ್ನಿಸಿದಾಗ “ಖಂಡಿತವಾಗಿಯೂ ತನಿಖೆ ನಡೆಸುತ್ತೇವೆ. ಆದರೆ ಎಲ್ಲವೂ ದಾಖಲೆಯಲ್ಲಿ ಇರಬೇಕು ಎನ್ನುವ ಕಾರಣಕ್ಕೆ ಸದನದಲ್ಲಿ ಎಲ್ಲಾ ದಾಖಲೆಗಳನ್ನು…

Read More

ಬೆಂಗಳೂರು: ಉಪನ್ಯಾಸಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವಂತ 814 ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಮಾಹಿತಿ ಹಂಚಿಕೊಂಡಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕೊರತೆ, ಖಾಲಿ ಇರುವ ವಿವಿಧ ವಿಷಯಗಳ ನೇರ ನೇಮಕಾತಿ ಕೋಟಾದಡಿ ಒಟ್ಟು 814 ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಇಲಾಖೆ ಮುಂದಾಗಿದೆ ಅಂತ ತಿಳಿಸಿದ್ದಾರೆ. ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಒಟ್ಟಾರೆ 4259 ಉಪನ್ಯಾಸಕರ ಕೊರತೆ ಇದೆ. ಆದರೇ ಅವುಗಳಲ್ಲಿ ಈಗ ಸರ್ಕಾರವು 814 ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಿದೆ ಎಂದರು. ಯಾವ ಯಾವ ವಿಷಯದ ಉಪನ್ಯಾಸಕರ ಎಷ್ಟು ಹುದ್ದೆ ಭರ್ತಿ? ಕನ್ನಡ ಉಪನ್ಯಾಸಕರು – 105 ಹುದ್ದೆ ಇಂಗ್ಲೀಷ್ ಉಪನ್ಯಾಸಕರು – 125 ಹುದ್ದೆ ಇತಿಹಾಸ – 124 ಹುದ್ದೆಗಳು ಅರ್ಥಶಾಸ್ತ್ರ…

Read More

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ 11 ಇಂದಿರಾ ಕ್ಯಾಂಟೀನ್‌ಗಳು ಬಿಲ್ ಪಾವತಿಯಾಗದೆ ಸ್ಥಗಿತಗೊಂಡಿರುವ ಬಗ್ಗೆ ಕೆಲ ದಿನ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದು, ವಿದ್ಯುನ್ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ. ಈ ಕುರಿತು ಕೆಳಕಂಡಂತೆ ಸ್ಪಷ್ಠೀಕರಣ ನೀಡಲಾಗಿದೆ. “ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಾ ವಲಯಗಳಲ್ಲಿ 2017 ರಿಂದ ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಿದ್ದು, ಯಶಸ್ವಿಯಾಗಿ ಕಾರ್ಯನಿರ್ವಹಿಸಲಾಗುತ್ತಿದೆ.” ಈ ಸಂಬಂಧ ದಕ್ಷಿಣ ವಲಯದ 11 ಇಂದಿರಾ ಕ್ಯಾಂಟೀನ್‌ಗಳನ್ನು ಸಂಬಂಧಪಟ್ಟ ಸಂಸ್ಥೆಯವರು ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಪಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿ ಊಟವನ್ನು ರಿಯಾಯಿತಿ ದರಗಳಲ್ಲಿ ಒದಗಿಸುತ್ತಿದೆ. ಮುಂದುವರಿದು, ಗುತ್ತಿಗೆ ಪಡೆದಿರುವ ಸಂಸ್ಥೆಯು ಸಲ್ಲಿಸಿರುವ ಬಿಲ್ಲುಗಳಲ್ಲಿ ಬಾಕಿ ಮೊತ್ತ ಅಂದಾಜು 40.00 ಕೋಟಿ ರೂ.ಗಳನ್ನು ಪಾವತಿಸದೇ ಇರುವ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ಅಡುಗೆ ಕೋಣೆಯಲ್ಲಿ ನೀರಿನ ಮತ್ತು ವಿದ್ಯುತ್ ಬಿಲ್‌ಗಳನ್ನು ಪಾವತಿಸದೇ ಇರುವುದರಿಂದ ದಿನಾಂಕ: 18-07-2024ರಂದು ಸ್ಥಗಿತಗೊಳಿಸಿರುತ್ತಾರೆ. ಈ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಲಾಗಿದ್ದು, ಪಾಲಿಕೆಯ ವ್ಯಾಪ್ತಿಯಲ್ಲಿ ಆಹಾರದ ಗುಣಮಟ್ಟ, ಪ್ರಮಾಣವನ್ನು ಪರಿಶೀಲಿಸಲು ಪ್ರತಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಮಾರ್ಷ್ಲ್‌ಗಳನ್ನು ನಿಯೋಜಿಸಲಾಗಿದೆ.…

Read More

ನವದೆಹಲಿ: ಭಾರತ ಸೇರಿದಂತೆ ವಿಶ್ವಾದ್ಯಂತ ಮೈಕ್ರೋಸಾಫ್ಟ್ ಬಳಕೆದಾರರು ಶುಕ್ರವಾರ ಗಮನಾರ್ಹ ಸೇವಾ ಅಡೆತಡೆಗಳನ್ನು ವರದಿ ಮಾಡಿದ್ದಾರೆ. ಸ್ಥಗಿತ ಟ್ರ್ಯಾಕಿಂಗ್ ವೆಬ್ಸೈಟ್ ಡೌನ್ಡೆಟೆಕ್ಟರ್ ವಿವಿಧ ಪ್ಲಾಟ್ಫಾರ್ಮ್ಗಳಲ್ಲಿನ ಸಮಸ್ಯೆಗಳನ್ನು ಎತ್ತಿ ತೋರಿಸಿದೆ. ಇದರ ನಡುವೆ ಸಮಸ್ಯೆ ಗುರುತಿಸಿ, ಸರಿಪಡಿಸಲಾಗುತ್ತಿದೆ ಅಂತ ಮೈಕ್ರೋಸಾಫ್ಟ್ ಕ್ರೌಡ್ ಸ್ಟ್ರೈಕ್ ಸಿಇಒ ಸ್ಪಷ್ಟ ಪಡಿಸಿದ್ದಾರೆ. ಜಾಗತಿಕ ಮೈಕ್ರೋಸಾಫ್ಟ್ ಕ್ಲೌಡ್ ಸ್ಥಗಿತಕ್ಕೆ ಸೈಬರ್ ಸೆಕ್ಯುರಿಟಿ ಸಂಸ್ಥೆಯಾದ ಕ್ರೌಡ್ಸ್ಟ್ರೈಕ್ನ ಇತ್ತೀಚಿನ ನವೀಕರಣವು ಕಾರಣವಾಗಿದೆ, ಇದು ವಿಂಡೋಸ್ ಆಧಾರಿತ ಡೆಸ್ಕ್ಟಾಪ್ಗಳು ಮತ್ತು ಲ್ಯಾಪ್ಟಾಪ್ಗಳ ಮೇಲೆ ಪರಿಣಾಮ ಬೀರಿದೆ. ವಿಮಾನಯಾನ ಸಂಸ್ಥೆಗಳು, ಬ್ಯಾಂಕುಗಳು ಮತ್ತು ವ್ಯವಹಾರಗಳ ಮೇಲೆ ಪರಿಣಾಮ ಬೀರುವ ಪ್ರಮುಖ ಜಾಗತಿಕ ಸ್ಥಗಿತದ ಹಿನ್ನೆಲೆಯಲ್ಲಿ, ಕ್ರೌಡ್ ಸ್ಟ್ರೈಕ್ ಸಿಇಒ ಜಾರ್ಜ್ ಕರ್ಟ್ಜ್ ಕಂಪನಿಯು ತನ್ನ ಸಾಧನಗಳ ವಿಂಡೋಸ್ ಬಳಕೆದಾರರಿಗೆ ಇತ್ತೀಚಿನ ನವೀಕರಣದಿಂದ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸುತ್ತಿದೆ ಎಂದು ಎಕ್ಸ್ ನಲ್ಲಿ ಘೋಷಿಸಿದರು. https://twitter.com/George_Kurtz/status/1814235001745027317 “ವಿಂಡೋಸ್ ಹೋಸ್ಟ್ಗಳಿಗಾಗಿ ಒಂದೇ ವಿಷಯ ನವೀಕರಣದಲ್ಲಿ ಕಂಡುಬರುವ ದೋಷದಿಂದ ಪ್ರಭಾವಿತರಾದ ಗ್ರಾಹಕರೊಂದಿಗೆ ಕ್ರೌಡ್ಸ್ಟ್ರೈಕ್ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಮ್ಯಾಕ್ ಮತ್ತು ಲಿನಕ್ಸ್…

Read More

ಬೆಂಗಳೂರು: ಮಂಗಳೂರಿನ ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆಎಸ್ಆರ್ ಬೆಂಗಳೂರು-ಮಂಗಳೂರು ಜಂಕ್ಷನ್-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಬಗ್ಗೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ಈ ಕೆಳಗಿನ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ. ಈ ವಿಶೇಷ ರೈಲುಗಳು ಈ ಕೆಳಗಿನ ದಿನಾಂಕಗಳಲ್ಲಿ ಕಾರ್ಯನಿರ್ವಹಿಸುತ್ತವೆ ಎಂದಿದೆ. ರೈಲು ಸಂಖ್ಯೆ 06547/06548 ಕೆಎಸ್ಆರ್ ಬೆಂಗಳೂರು-ಮಂಗಳೂರು ಜಂಕ್ಷನ್-ಯಶವಂತಪುರ ವಿಶೇಷ ಎಕ್ಸ್ಪ್ರೆಸ್. ರೈಲು ಸಂಖ್ಯೆ 06547 ಜುಲೈ 19, 2024 ರಂದು ರಾತ್ರಿ 11 ಗಂಟೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 11:40 ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಬೆಂಗಳೂರು ಕಂಟೋನ್ಮೆಂಟ್ (ರಾತ್ರಿ 11:10/11:12), ಎಸ್ಎಂವಿಟಿ ಬೆಂಗಳೂರು (11:25/11:27), ಚಿಕ್ಕಬಾಣಾವರ (12:08/12:10), ನೆಲಮಂಗಲ (12:23/12:25), ಚನ್ನರಾಯಪಟ್ಟಣ (02:18/02) ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ರೈಲು ಸಂಖ್ಯೆ 06548 ಜುಲೈ 20, 2024 ರಂದು ಮಧ್ಯಾಹ್ನ 1:40 ಕ್ಕೆ ಮಂಗಳೂರು ಜಂಕ್ಷನ್ನಿಂದ…

Read More

ನವದೆಹಲಿ: ಮೈಕ್ರೋಸಾಫ್ಟ್ ಸೇವೆಯಾದಂತ ಕ್ಲೌಡ್ ಸರ್ವೀಸ್ ಸ್ಥಗಿತದ ಪರಿಣಾಮ, ವಿಮಾನ ನಿಲ್ದಾಣಗಳಲ್ಲಿ ಬೋರ್ಡಿಂಗ್ ಪಾಸ್ ಕೂಡ ವಿತರಣೆ ಮಾಡುವುದಕ್ಕೆ ಸಾಧ್ಯವಾಗದೇ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರ ನಡುವೆ ಪ್ರಯಾಣಿಕರಿಗೆ ಕೈಬರಹದಿಂದ ಬರೆದಂತ ಬೋರ್ಡಿಂಗ್ ಪಾಸ್ ಗಳನ್ನು ವಿತರಿಸಲಾಗುತ್ತಿದೆ. ಇದೀಗ ಈ ಕೈಬರಹದಿಂದ ಬರೆದಂತ ಬೋರ್ಡಿಂಗ್ ಪಾಸ್ ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಮೈಕ್ರೋಸಾಫ್ಟ್ ಕಾರ್ಪ್ನ ಕ್ಲೌಡ್ ಸೇವೆಯ ಅಡೆತಡೆಯು ಜನರ ದೈನಂದಿನ ಜೀವನದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಿದೆ, ವಿಶ್ವಾದ್ಯಂತ ಕಚೇರಿಗಳು, ಬ್ಯಾಂಕುಗಳು ಮತ್ತು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ಏರ್ ಇಂಡಿಯಾ, ಇಂಡಿಗೊ, ಅಕಾಸಾ ಮತ್ತು ಸ್ಪೈಸ್ ಜೆಟ್ ನಂತಹ ವಿಮಾನಯಾನ ಸಂಸ್ಥೆಗಳು ತಾಂತ್ರಿಕ ದೋಷಗಳನ್ನು ವರದಿ ಮಾಡಿವೆ, ಇದು ವಿಮಾನ ನಿಲ್ದಾಣಗಳಲ್ಲಿ ಹಸ್ತಚಾಲಿತ ಚೆಕ್-ಇನ್ ಮತ್ತು ಬೋರ್ಡಿಂಗ್ ಪ್ರಕ್ರಿಯೆಗಳನ್ನು ಆಶ್ರಯಿಸಲು ಪ್ರೇರೇಪಿಸಿದೆ. ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ನಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ, ಅವರ “ಮೊದಲ ಕೈಬರಹದ ಬೋರ್ಡಿಂಗ್ ಪಾಸ್” ಬಗ್ಗೆ ಪೋಸ್ಟ್ ಮಾಡಿದ್ದಾರೆ. “ಮೈಕ್ರೋಸಾಫ್ಟ್…

Read More

ಬೆಂಗಳೂರು: ನಿನ್ನೆಯಿಂದ ವಿಧಾನಸಭೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ವಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸುತ್ತಿವೆ. ಈ ನಡುವೆ ಸಿಎಂ ಸಿದ್ಧರಾಮಯ್ಯ ಅವರು ನಿನ್ನೆಯ ತಮ್ಮ ಉತ್ತರ ನೀಡಿದ್ದರು. ಇಂದು ಕೂಡ ಸಿಎಂ ಸಿದ್ಧರಾಮಯ್ಯ ಸದನದಲ್ಲಿ ಉತ್ತರ ಮುಂದುವರೆಸಿದ್ದಾರೆ. ವಾಲ್ಮೀಕಿ ನಿಗಮದ ಹಗರಣ ಸಂಬಂಧ ಬರೋಬ್ಬರಿ 12 ಪುಟಗಳ ಉತ್ತರವನ್ನು ಸದನಕ್ಕೆ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. ಇಂದು ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ವಾಲ್ಮೀಕಿ ನಿಗಮದ ಹಗರಣ ಸಂಬಂಧ ತಮ್ಮ ಉತ್ತರವನ್ನು ಮುಂದುವರೆಸಿದರು. ಅವರು,  ಮಾನ್ಯ ಅಧ್ಯಕ್ಷರೆ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಹಗರಣ ಕುರಿತ ಮುಂದುವರೆದ ಉತ್ತರವನ್ನು ಸದನದಲ್ಲಿ ಲಿಖಿತ ರೂಪದಲ್ಲಿ ಮಂಡಿಸುತ್ತಿದ್ದೇನೆ ಎಂದರು. 1. ಬಿ.ಜೆ.ಪಿ. ಯವರ ಹುನ್ನಾರ ಇಷ್ಟೆ. ಒಂದು, ಮುಖ್ಯಮಂತ್ರಿಯ ಹೆಸರಿಗೆ ಮಸಿ ಬಳಿಯುವುದು. ಎರಡನೆಯದು, ಸರ್ಕಾರ ಪರಿಶಿಷ್ಟ ಜಾತಿ/ ಪಂಗಡಗಳ ವಿರುದ್ಧ ಎಂದು ಬಿಂಬಿಸುವುದು. ಈ ಎರಡೂ ಎಂದಾದರೂ ಸಾಧ್ಯವೆ?…

Read More

ಮಂಡ್ಯ : ಕೆ.ಆರ್.ಎಸ್ ಜಲಾಶಯ ಭರ್ತಿಯಾಗುತ್ತಿದ್ದು, ಜಲಾಶಯದ ಮಟ್ಟ 120 ಅಡಿ ದಾಟಿದ ನಂತರ ನದಿಗೆ ನೀರು ಬಿಡುಗಡೆ ಮಾಡಲಾಗುವುದು. ಈ ಸಂದರ್ಭದಲ್ಲಿ ಯಾವುದೇ ಹಾನಿಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಕೆ.ಆರ್.ಎಸ್ ನಿಂದ ಒಂದು‌ ಲಕ್ಷ ಕ್ಕಿಂತ ಹೆಚ್ಚಿನ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿದ ಸಂದರ್ಭದಲ್ಲಿ ನದಿ ಪಾತ್ರದಲ್ಲಿರುವ ಶ್ರೀರಂಗಪಟ್ಟಣ ತಾಲ್ಲೂಕಿನ- 53, ಪಾಂಡವಪುರ- 15, ಮಳವಳ್ಳಿ- 21 ಹಾಗೂ ಹೇಮಾವತಿ ಜಲಾಶಯಕ್ಕೆ ಸಂಬಂಧಿಸಿದಂತೆ ಕೆ.ಆರ್.ಪೇಟೆ – 3 ಗ್ರಾಮಗಳಲ್ಲಿ ಪ್ರವಾಹ ಉಂಟಾಗಿ ತೊಂದರೆಯಾಗಬಹುದು ಎಂದು ಅಂದಾಜಿಸಲಾಗಿದೆ. ಈ ಗ್ರಾಮಗಳಿಗೆ ಖುದ್ದು ಅಧಿಕಾರಿಗಳು ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲಿಸಬೇಕು ಎಂದರು. ಜಿಲ್ಲಾ ಮಟ್ಟದ ಜೊತೆಗೆ ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಟಾಸ್ಕ್ ಫೋಸ್೯ ಸಮಿತಿ ರಚಿಸಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ತಾಲ್ಲೂಕು ಮಟ್ಟದಲ್ಲಿ…

Read More

ನವದೆಹಲಿ: ಇಂದು ಜಾಗತಿಕವಾಗಿ ಮೈಕ್ರೋಸಾಪ್ಟ್ ನ ಕ್ಲೌಡ್ ಸ್ಥಗಿತಗೊಂಡಿತ್ತು. ಈ ತಾಂತ್ರಿಸ ಸಮಸ್ಯೆಯನ್ನು ಸರಿಪಡಿಸುವಂತ ಕೆಲಸ ನಡೆಯುತ್ತಿದೆ. ಆ ಬಗ್ಗೆ ಮೈಕ್ರೋಸಾಫ್ಟ್ ಸಂಸ್ಥೆ ಏನು ಹೇಳಿದೆ ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಮೈಕ್ರೋಸಾಫ್ಟ್ ಕಂಪನಿಯು, ಮೈಕ್ರೋಸಾಫ್ಟ್ 365 ಅಪ್ಲಿಕೇಶನ್ಗಳು ಮತ್ತು ಸೇವೆಗಳನ್ನು ಪ್ರವೇಶಿಸುವ ಬಳಕೆದಾರರ ಸಾಮರ್ಥ್ಯದ ಮೇಲೆ ಪರಿಣಾಮ ಬೀರುವ ಸಮಸ್ಯೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸಾಫ್ಟ್ವೇರ್ ಸೇವೆಗಳ ದೈತ್ಯ ಕಂಪನಿ ಎಕ್ಸ್ನಲ್ಲಿ ವಿವರವಾದ ಥ್ರೆಡ್ನಲ್ಲಿ ತಿಳಿಸಿದೆ. https://twitter.com/MSFT365Status/status/1814083047953760414 “ಹೆಚ್ಚು ಅನುಕೂಲಕರ ರೀತಿಯಲ್ಲಿ ಪರಿಣಾಮವನ್ನು ನಿವಾರಿಸಲು ನಾವು  ಪರ್ಯಾಯ ವ್ಯವಸ್ಥೆಗಳಿಗೆ ಮರುಹೊಂದಿಸಲು ಕೆಲಸ ಮಾಡುತ್ತಿದ್ದೇವೆ” ಎಂದು ಮೈಕ್ರೋಸಾಫ್ಟ್ ಹೇಳಿದೆ. “ನಾವು ಇನ್ನೂ ಸೇವಾ ಲಭ್ಯತೆಯಲ್ಲಿ ಸಕಾರಾತ್ಮಕ ಪ್ರವೃತ್ತಿಯನ್ನು ಗಮನಿಸುತ್ತಿದ್ದೇವೆ. ಶೀಘ್ರವೇ ಕ್ಲೌಡ್ ಸಮಸ್ಯೆ ನಿವಾರಿಸಲಾಗುತ್ತದೆ. ಸಾಫ್ಟ್ ವೇರ್ ಅಪ್ ಡೇಟ್ ನಿಂದಾಗಿ ಈ ತಾಂತ್ರಿಕ ಸಮಸ್ಯೆ ಉಂಟಾಗಿದೆ. ಅದನ್ನು ನಿವಾರಿಸಿ, ಮರು ಚಾಲನೆಗೊಳಿಸುವಂತೆ ಕಲಸ ಮಾಡಲಾಗುತ್ತಿದೆ ಅಂತ ತಿಳಿಸಿದೆ. https://twitter.com/MSFT365Status/status/1814159000671584658 https://kannadanewsnow.com/kannada/1791-drug-cases-reported-in-6-months-home-minister-g-parameshwara/ https://kannadanewsnow.com/kannada/breaking-couple-killed-on-the-spot-after-being-hit-by-gas-tanker-in-mysuru/

Read More