Author: kannadanewsnow09

ಬೆಂಗಳೂರು: ನಗರದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ನಿನ್ನೆಯಷ್ಟೇ ಬಿಬಿಎಂಪಿ ವ್ಯಾಪ್ತಿಯಲ್ಲಿ 265 ಕೇಸ್ ದಾಖಲಾಗಿ, 4305ಕ್ಕೆ ಪ್ರಕರಣಗಳ ಸಂಖ್ಯೆ ಏರಿಕೆಯಾಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ನಿಯಂತ್ರಣ ಕ್ರಮಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಎಕ್ಸ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗೆಳಲ್ಲಿ ಡೆಂಗ್ಯೂ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಚಿಕಿತ್ಸೆಯ ಬಗ್ಗೆ ಗಮನ ಹರಿಸೋದಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಅಂತ ತಿಳಿಸಿದೆ. ಬೆಂಗಳೂರಲ್ಲಿ ಡೆಂಗ್ಯೂ ರೋಗಿಗಳ ಚಿಕಿತ್ಸೆಗಾಗಿ ಕೆಸಿ ಜನರಲ್ ಆಸ್ಪತ್ರೆಗೆ ಡಾ.ಸುರೇಶ್-9986121101, ಸಿವಿ ರಾಮನ್ ಜನರಲ್ ಆಸ್ಪತ್ರೆಗೆ ಡಾ.ಕವಿತ ಗೌತಮ್ -9008594651, ಜಯನಗರ ಜನರಲ್ ಆಸ್ಪತ್ರೆಗೆ ಡಾ.ದೇವೇಂದ್ರಪ್ಪ ಕೆ ಆರ್-9880571367, ಯಲಹಂಕ ಜನರಲ್ ಆಸ್ಪತ್ರೆಗೆ ಡಾ.ಗಣೇಶ್ -9980025323, ಕೆ ಆರ್ ಪುರಂ ಜನರಲ್ ಆಸ್ಪತ್ರೆಗೆ ಡಾ.ಅಶೋಕ್ ರೆಡ್ಡಿ -7022329578 ಹಾಗೂ ವಾಣಿವಿಲಾಸ ಆಸ್ಪತ್ರೆಗೆ ಡಾ.ರವಿಶಂಕರ್ -9449487592 ಅವರನ್ನು ನೋಡಲ್ ಆಧಿಕಾರಿಯಾಗಿ ನೇಮಕ ಮಾಡಿದೆ.…

Read More

ನವದೆಹಲಿ: ಗಂಭೀರ ತಾಂತ್ರಿಕ ಸಮಸ್ಯೆಯಿಂದಾಗಿ ಪ್ರಪಂಚದಾದ್ಯಂತದ ಲಕ್ಷಾಂತರ ವಿಂಡೋಸ್ ಕಂಪ್ಯೂಟರ್ ಗಳು ಹಠಾತ್ ಸ್ಥಗಿತ ಅಥವಾ ಮರುಪ್ರಾರಂಭವನ್ನು ಅನುಭವಿಸಿವೆ. ಇತ್ತೀಚಿನ ಕ್ರೌಡ್ ಸ್ಟ್ರೈಕ್ ನವೀಕರಣದಿಂದಾಗಿ ಈ ದೋಷ ಸಂಭವಿಸಿದೆ ಎಂದು ಮೈಕ್ರೋಸಾಫ್ಟ್ ಇಂಕ್ ಹೇಳಿದೆ. ಮೈಕ್ರೋಸಾಫ್ಟ್ನ ಸೇವಾ ಆರೋಗ್ಯ ಸ್ಥಿತಿ ನವೀಕರಣಗಳ ಪ್ರಕಾರ, ಆರಂಭಿಕ ಮೂಲ ಕಾರಣವೆಂದರೆ “ನಮ್ಮ ಅಜುರೆ ಬ್ಯಾಕ್ ಎಂಡ್ ಕೆಲಸದ ಹೊರೆಯ ಒಂದು ಭಾಗದಲ್ಲಿ ಕಾನ್ಫಿಗರೇಶನ್ ಬದಲಾವಣೆ (ಇದು) ಸಂಗ್ರಹಣೆ ಮತ್ತು ಕಂಪ್ಯೂಟಿಂಗ್ ಸಂಪನ್ಮೂಲಗಳ ನಡುವೆ ಅಡಚಣೆಯನ್ನು ಉಂಟುಮಾಡಿದೆ, ಮತ್ತು ಇದು ಸಂಪರ್ಕ ವೈಫಲ್ಯಗಳಿಗೆ ಕಾರಣವಾಗಿದೆ”. “ಡೌನ್ಸ್ಟ್ರೀಮ್ (ಮತ್ತು ಅವಲಂಬಿತ) ಮೈಕ್ರೋಸಾಫ್ಟ್ 365 ಸೇವೆಗಳು” ಈ ಸಮಸ್ಯೆಗಳಿಂದ ಪ್ರಭಾವಿತವಾಗಿವೆ ಎಂದು ವ್ಯವಹಾರ ಹೇಳಿದೆ. ಮೈಕ್ರೋಸಾಫ್ಟ್ನೊಂದಿಗೆ ಕೆಲಸ ಮಾಡುವ ಸೈಬರ್ ಸೆಕ್ಯುರಿಟಿ ಸೇವೆಗಳ ಸಂಸ್ಥೆಯಾದ ಕ್ರೌಡ್ಸ್ಟ್ರೈಕ್ ಎಂಜಿನಿಯರಿಂಗ್ ಈ ಸಮಸ್ಯೆಗೆ ಸಂಬಂಧಿಸಿದ ವಿಷಯ ನಿಯೋಜನೆಯನ್ನು ಗುರುತಿಸಿದೆ ಮತ್ತು ಆ ಬದಲಾವಣೆಗಳನ್ನು ಹಿಂತೆಗೆದುಕೊಂಡಿದೆ. ಬಾಧಿತ ವಿಂಡೋಸ್ ಬಳಕೆದಾರರಿಗೆ ಪರಿಹಾರಕ್ಕಾಗಿ ಕಂಪನಿಯು ಹಂತಗಳನ್ನು ಪೋಸ್ಟ್ ಮಾಡಿದೆ. ಮೈಕ್ರೋಸಾಫ್ಟ್ ಹೇಳಿದ್ದೇನು? ಮೈಕ್ರೋಸಾಫ್ಟ್ 365…

Read More

ನವದೆಹಲಿ: ಮೈಕ್ರೋಸಾಫ್ಟ್ಗೆ ಜಾಗತಿಕ ಸ್ಥಗಿತದ ನಂತರ, ವಿಶ್ವಾದ್ಯಂತ ನಿರ್ಣಾಯಕ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದ ನಂತರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ (ಎಂಇಐಟಿವೈ) ಸಚಿವ ಅಶ್ವಿನಿ ವೈಷ್ಣವ್ ಅವರು ಭಾರತ ಸರ್ಕಾರವು ಮೈಕ್ರೋಸಾಫ್ಟ್ನೊಂದಿಗೆ ಸಂಪರ್ಕದಲ್ಲಿದೆ ಮತ್ತು ಸಮಸ್ಯೆಯನ್ನು ಪರಿಹರಿಸಲು ನವೀಕರಣಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದರು. ಈ ಕುರಿತು ಟ್ವೀಟ್ ಮಾಡಿರುವ ವೈಷ್ಣವ್, “ಜಾಗತಿಕ ಸ್ಥಗಿತಕ್ಕೆ ಸಂಬಂಧಿಸಿದಂತೆ ಎಂಇಐಟಿಐ ಮೈಕ್ರೋಸಾಫ್ಟ್ ಮತ್ತು ಅದರ ಸಹವರ್ತಿಗಳೊಂದಿಗೆ ಸಂಪರ್ಕದಲ್ಲಿದೆ. ಈ ಸ್ಥಗಿತಕ್ಕೆ ಕಾರಣವನ್ನು ಗುರುತಿಸಲಾಗಿದೆ ಮತ್ತು ಸಮಸ್ಯೆಯನ್ನು ಪರಿಹರಿಸಲು ನವೀಕರಣಗಳನ್ನು ಬಿಡುಗಡೆ ಮಾಡಲಾಗಿದೆ. https://twitter.com/AshwiniVaishnaw/status/1814222708244414679 ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡವು ತಾಂತ್ರಿಕ ಸಲಹೆಯನ್ನು ನೀಡುತ್ತಿದೆ ಮತ್ತು ರಾಷ್ಟ್ರೀಯ ಮಾಹಿತಿ ಕೇಂದ್ರದ ನೆಟ್ವರ್ಕ್ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಸಚಿವರು ಮಾಹಿತಿ ನೀಡಿದರು. ಜುಲೈ 19 ರಂದು ಸರ್ಕಾರ ಹೊರಡಿಸಿದ ಸಿಇಆರ್ಟಿ-ಇನ್ ಸಲಹೆಯಲ್ಲಿ, ನೋಡಲ್ ಸೈಬರ್ ಸೆಕ್ಯುರಿಟಿ ಏಜೆನ್ಸಿಯು ಸಮಸ್ಯೆಯ ತೀವ್ರತೆಯ ರೇಟಿಂಗ್ ಅನ್ನು “ನಿರ್ಣಾಯಕ” ಎಂದು ವರ್ಗೀಕರಿಸಿದೆ ಮತ್ತು ಸಮಸ್ಯೆಯನ್ನು ಎದುರಿಸುತ್ತಿರುವ…

Read More

ಬೆಂಗಳೂರು: ನಾಳೆ ಬೆಂಗಳೂರಿನ ಕೆಲ ಭಾಗಗಳಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ, ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ ಅಂತ ಬೆಸ್ಕಾಂ ( BESCOM ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ನಾಳೆ ಈ ಪ್ರದೇಶದಲ್ಲಿ  ವಿದ್ಯುತ್ ವ್ಯತ್ಯಯ ದಿನಾಂಕ 20.07.2024 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ “ಸರ್ ಎಮ್.ವಿ  220/66/11ಕೆ.ವಿ ಜಿ.ಐ.ಎಸ್ ಇಡಿಸಿ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. “ರೆಸಿಡೆನ್ಸಿ ರಸ್ತೆ, ಹೊಂಡೈ ಆರ್.ಎಮ್.ಯು, ಲ್ಯಾವೆಲ್ಲೆ ರಸ್ತೆ, ವಾಲ್ಟನ್ ರಸ್ತೆ, ವಿಟ್ಟಲ್ ಮಲ್ಯ ರಸ್ತೆ, ರ‍್ಚ್ ಸ್ಟ್ರೀಟ್, ಕಸ್ತರ‍್ಬಾ ರಸ್ತೆ, ಸೇಂಟ್ ಮರ‍್ಕ್ಸ್ ರಸ್ತೆ, ಕ್ವೀನ್ಸ್ ವೃತ್ತ, ರೆಸಿಡೆನ್ಸಿ ರಸ್ತೆ ಕ್ರಾಸ್, ಐ.ಟಿ.ಸಿ ಹೋಟೆಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.” ದಿನಾಂಕ 20.07.2024 (ಶನಿವಾರ) ಬೆಳಿಗ್ಗೆ 09:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ‘66/11ಕೆ.ವಿ ಬಾಗಮನೆ ಟೆಕ್‌ಪಾರ್ಕ್’ ಸ್ಟೇಷನ್ ನಲ್ಲಿ…

Read More

ಮಂಡ್ಯ: ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವಂತ ಮಳೆಯಿಂದಾಗಿ ಮಂಡ್ಯದ ಕೆ ಆರ್ ಎಸ್ ಡ್ಯಾಂ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನಲೆಯಲ್ಲಿ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಜನರು ನದಿ ಕೊಳ್ಳಕ್ಕೆ ಇಳಿಯದಂತೆ ಮುನ್ನಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ. ಈ ಬಗ್ಗೆ ಕಾವೇರಿ ನೀರಾವರಿ ನಿಗಮದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣರಾಜ ಸಾಗರ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಕೆ ಆರ್ ಎಸ್ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ಕಾವೇರಿ ನದಿಗೆ ಬಿಡಲಾಗುವುದು ಅಂತ ತಿಳಿಸಿದೆ. ಈ ಹಿನ್ನಲೆಯಲ್ಲಿ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ, ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದೆ. ಒಟ್ಟಾರೆಯಾಗಿ ಸಂಪೂರ್ಣ ಭರ್ತಿಯತ್ತ KRS ಡ್ಯಾಂ ಸಾಗುತ್ತಿದೆ. ಮತ್ತೊಂದೆಡೆ ಭಾರೀ ಪ್ರಮಾಣದಲ್ಲಿ ಒಳ ಹರಿವು…

Read More

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಶುಕ್ರವಾರ ಐಎಎಸ್ ಪ್ರೊಬೇಷನರಿ ಪೂಜಾ ಖೇಡ್ಕರ್ ವಿರುದ್ಧ ಎಫ್ಐಆರ್ ದಾಖಲಿಸಿದೆ. ಅವರ ಆಯ್ಕೆಯನ್ನು ರದ್ದುಗೊಳಿಸಲು ಮತ್ತು ಭವಿಷ್ಯದ ಪರೀಕ್ಷೆಗಳಿಂದ ನಿರ್ಬಂಧಿಸಲು ಆಯೋಗವು ಅವರಿಗೆ ಶೋಕಾಸ್ ನೋಟಿಸ್ ನೀಡಿದೆ. “ಯುಪಿಎಸ್ಸಿ ಪೊಲೀಸ್ ಅಧಿಕಾರಿಗಳಿಗೆ ಎಫ್ಐಆರ್ ಸಲ್ಲಿಸುವ ಮೂಲಕ ಕ್ರಿಮಿನಲ್ ಪ್ರಾಸಿಕ್ಯೂಷನ್ ಸೇರಿದಂತೆ ಅವರ ವಿರುದ್ಧ ಸರಣಿ ಕ್ರಮಗಳನ್ನು ಪ್ರಾರಂಭಿಸಿದೆ ಮತ್ತು ನಾಗರಿಕ ಸೇವೆಗಳ ಪರೀಕ್ಷೆ -2022 ರ ನಿಯಮಗಳಿಗೆ ಅನುಗುಣವಾಗಿ ನಾಗರಿಕ ಸೇವೆಗಳ ಪರೀಕ್ಷೆ -2022 ರ ಉಮೇದುವಾರಿಕೆಯನ್ನು ರದ್ದುಗೊಳಿಸಲು / ಭವಿಷ್ಯದ ಪರೀಕ್ಷೆಗಳು / ಆಯ್ಕೆಗಳಿಂದ ನಿರ್ಬಂಧಿಸಲು ಶೋಕಾಸ್ ನೋಟಿಸ್ (ಎಸ್ಸಿಎನ್) ನೀಡಿದೆ” ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. “ನಾಗರಿಕ ಸೇವೆಗಳ ಪರೀಕ್ಷೆ 2022 ಕ್ಕೆ ತಾತ್ಕಾಲಿಕವಾಗಿ ಶಿಫಾರಸು ಮಾಡಲಾದ ಅಭ್ಯರ್ಥಿ ಪೂಜಾ ಮನೋರಮಾ ದಿಲೀಪ್ ಖೇಡ್ಕರ್ ಅವರ ದುಷ್ಕೃತ್ಯದ ಬಗ್ಗೆ ಯುಪಿಎಸ್ಸಿ ವಿವರವಾದ ಮತ್ತು ಸಮಗ್ರ ತನಿಖೆ ನಡೆಸಿದೆ. ತನ್ನ ಹೆಸರು, ತಂದೆ ಮತ್ತು ತಾಯಿಯ ಹೆಸರು, ಛಾಯಾಚಿತ್ರ/ ಸಹಿ, ಇಮೇಲ್ ಐಡಿ,…

Read More

ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ಗಲಾಟೆ ಮಾಡಿಕೊಂಡು. ASI ಮೇಲೆ, HC ಹಲ್ಲೆಗೂ ಯತ್ನಿಸಿದ್ದಾರೆ ಎನ್ನಲಾದಂತ ಘಟನೆ  ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿತ್ತು. ಈ ಘಟನೆ ಸಂಭಂದ ASI, HC ಅಮಾನತುಗೂಳಿಸಿ ಡಿಸಿಪಿ ಆದೇಶಿಸಿದ್ದಾರೆ. ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಎಸ್ಐ ಮಂಜುನಾಥ್ ಹಾಗೂ ಹೆಚ್ ಕಾನ್ಸ್ ಸ್ಟೇಬಲ್ ಅಂಜನಾಮೂರ್ತಿ ನಡುವೆ ಗಲಾಟೆಯಾಗಿದೆ ಎಂದು ಹೇಳಲಾಗುತ್ತಿದೆ. ಜುಲೈ.16ರಂದು ಪ್ರಕರಣವೊಂದರ ಬಗ್ಗೆ ಎಎಸ್ಐ ಮಂಜುನಾಥ್ ಅವರು ಬೇರೆ ಸಿಬ್ಬಂದಿಗಳೊಂದಿಗೆ ಮಾತನಾಡುತ್ತಿದ್ದಂತ ಸಂದರ್ಭದಲ್ಲಿ ಹೆಚ್ ಸಿ ಅಂಜನಾಮೂರ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದಷ್ಟೇ ಅಲ್ಲದೇ ಎಎಸ್ಐ ಮಂಜುನಾಥ್ ಮೇಲೆ ಹೆಡ್ ಕಾನ್ಸ್ ಸ್ಟೇಬಲ್ ಅಂಜನಾಮೂರ್ತಿ ಅವರು ಹಲ್ಲೆಗೂ ಮುಂದಾಗಿದ್ದಾರೆ. ಈ ವೇಳೆಯಲ್ಲಿ ಠಾಣೆಯಲ್ಲಿದ್ದಂತ ಇತರೆ ಸಿಬ್ಬಂದಿಗಳು ಜಗಳ ಬಿಡಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಘಟನೆಯಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವಂತ ಎಎಸ್ಐ ಮಂಜುನಾಥ್ ಆಘಾತಕ್ಕೊಳಗಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈಗಾಗಲೇ ಎಎಸ್ಐ ಮಂಜುನಾಥ್ ಎರಡು ಸ್ಟಂಟ್ ಅಳವಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತಂತೆ ಕನ್ನಡ…

Read More

ಉತ್ತರ ಕನ್ನಡ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಶಿರೂರು ಬಳಿಯಲ್ಲಿ ಗುಡ್ಡ ಕುಸಿತಗೊಂಡಿತ್ತು. ಎರಡು ಕುಟುಂಬಗಳು ಸಹಿತ ವಾಹನ ಸವಾರರು ಕೂಡ ನಾಪತ್ತೆಯಾಗಿದ್ದಾರೆ ಎನ್ನಲಾಗಿತ್ತು. ಇದೀಗ ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ಇದುವರೆಗೂ 6 ಜನರ ಮೃತದೇಹಗಳು ಪತ್ತೆಯಾಗಿದ್ದವು. ಇಂದು ಛಿದ್ರ ಛಿದ್ರವಾಗಿರುವಂತ ಸ್ಥಿತಿಯಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಹೀಗಾಗಿ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಇನ್ನು ಈ ಘಟನೆಯಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಲಕ್ಷ್ಮಣ್​ ನಾಯ್ಕ್, ಪತ್ನಿ ಶಾಂತಿ, ಪುತ್ರಿ ಆವಾತಿಕಾ ಹಾಗೂ ಪುತ್ರ ರೋಷನ್(11) ಸೇರಿ ಟ್ರಕ್​​​​ ಚಾಲಕನ ಶವ ಪತ್ತೆಯಾಗಿದೆ. ಈ ನಾಲ್ವರ ಮೃತದೇಹಗಳು ಗೋಕರ್ಣ ಸಮೀಪ ಸಿಕ್ಕಿದೆ. ಇನ್ನು ಕುಮಟಾ ಸರ್ಕಾರಿ ಅಸ್ಪತ್ರೆಯ ಶವಾಗಾರದಲ್ಲಿ ಮೃತ ದೇಹ ಇಡಲಾಗಿದೆ. ಇಂದು ಬೆಳಂಬಾರ ಕಡಲತೀರದಲ್ಲಿ ಛಿದ್ರ ಛಿದ್ರವಾಗಿರುವಂತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ. ನಾಳೆ ಕೂಡ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜಾ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು, ಜಿಲ್ಲೆಯಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ,  ಪದವಿ ಪೂರ್ವ ಕಾಲೇಜು,  ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು, ಐಟಿಐ ಮತ್ತು ಡಿಪ್ಲೋಮೋ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ ಅಂತ ತಿಳಿಸಿದ್ದಾರೆ. ಅಂದಹಾಗೇ ಈ ಮೊದಲು ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ಹಾಗೂ ಸೊರಬ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ಆಯಾ ತಾಲ್ಲೂಕಿನ ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದರು. ಇದೀಗ ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ಭಾರೀ ಮಳೆಯ…

Read More

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಮೈಸೂರು-ಮೈಲಾಡುತುರೈ ಎಕ್ಸ್ ಪ್ರೆಸ್ ರೈಲು ಕಡಲೂರು ಪೋರ್ಟ್ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ್ ಕನಮಡಿ ಅವರು ಮಾಹಿತಿ ನೀಡಿದ್ದು, ಮಯಿಲಾಡುತುರೈ-ಮೈಸೂರು ನಿಲ್ದಾಣಗಳ ನಡುವೆ ಪ್ರತಿದಿನ ಚಲಿಸುವ ಎಕ್ಸ್ ಪ್ರೆಸ್ ರೈಲುಗಳ ಸೇವೆಯನ್ನು ಕಡಲೂರು ಪೋರ್ಟ್ವರೆಗೆ ವಿಸ್ತರಿಸಲು ದಕ್ಷಿಣ ರೈಲ್ವೆಯು ಸೂಚಿಸಿದೆ. ವಿಸ್ತೃತ ರೈಲು ಸೇವೆಯು ಎರಡೂ ಕಡೆಯಿಂದ ಜುಲೈ 19, 2024 ರಿಂದ ಪ್ರಾರಂಭವಾಗಲಿದೆ ಎಂದಿದ್ದಾರೆ. ವಿಸ್ತರಣೆಗೊಂಡ ಭಾಗದ ರೈಲಿನ ನಿಲುಗಡೆ ಮತ್ತು ಸಮಯವನ್ನು ಈ ಕೆಳಗಿನಂತಿವೆ:- 1. ರೈಲು ಸಂಖ್ಯೆ 16232 ಮೈಸೂರು-ಕಡಲೂರು ಪೋರ್ಟ್ ಡೈಲಿ ಎಕ್ಸ್ ಪ್ರೆಸ್: • ಮಯಿಲಾಡುತುರೈಗೆ 06:45 ಗಂಟೆಗೆ ಆಗಮಿಸಿ, 07:00 ಗಂಟೆಗೆ ನಿರ್ಗಮಿಸಲಿದೆ. • ಸಿರ್ಕಾಝಿಗೆ 07:23 ಗಂಟೆಗೆ ಆಗಮಿಸಿ, 07:24 ಗಂಟೆಗೆ ನಿರ್ಗಮಿಸಲಿದೆ. • ಚಿದಂಬರಂಗೆ 07:41 ಗಂಟೆಗೆ ಆಗಮಿಸಿ, 07:42 ಗಂಟೆಗೆ ನಿರ್ಗಮಿಸಲಿದೆ. • ಕಡಲೂರು ಪೋರ್ಟ್…

Read More