Subscribe to Updates
Get the latest creative news from FooBar about art, design and business.
Author: kannadanewsnow09
ಟೋಕಿಯೋ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಖ್ಯಾತ ವಿಜ್ಞಾನಿ ಮತ್ತು ಉದ್ಯಮಿಯಾಗಿರುವ ಡಾ. ಶ್ರೀಹರಿ ಚಂದ್ರಘಾಟಗಿ ಅವರು ಜಪಾನಿನ ಉದ್ಯಮ ತಂತ್ರಜ್ಞಾನದ ಅತ್ಯುನ್ನತ ಪ್ರಶಸ್ತಿಯಾದ ಸೂಪರ್ ಮ್ಯಾನುಫ್ಯಾಕ್ಚರ್ಸ್ ಪ್ರಶಸ್ತಿಗೆ (ಚೋ ಮೊನೊಡುಜುಕುರಿ) ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜಪಾನ್ ಸರ್ಕಾರದ ಆರ್ಥಿಕ, ವ್ಯಾಪಾರ, ಕೈಗಾರಿಕಾ ಸಚಿವಾಲಯ, ಟೋಕಿಯೋ ವಾಣಿಜ್ಯ ಮತ್ತು ಕೈಗಾರಿಕಾ ಮಂಡಲಿ, ಜಪಾನ್ ಬಿಜಿನೆಸ್ ಒಕ್ಕೂಟ ಮತ್ತು ನಿಕ್ಕನ್ ಕೋಗ್ಯ ಮಾಧ್ಯಮ ಸಂಸ್ಥೆಯ ಸಹಯೋಗದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪರಿಸರ ಸoರಕ್ಷಣೆ ಮತ್ತು ಜೈವಿಕ ತಂತ್ರಜ್ಞಾನದಲ್ಲಿ ಮಾಡಿದ ಉನ್ನತ ಸಾಧನೆಗಾಗಿ ಶ್ರೀಹರಿಯವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ, ಅಷ್ಟೇ ಅಲ್ಲ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಕೈಗಾರಿಕೆಗಳ ಗುಣಮಟ್ಟ ಮತ್ತು ಸುಧಾರಣೆಗೆ ಕೊಡುಗೆ ನೀಡಿದ ಅಪ್ರತಿಮ ಸಾಧಕರನ್ನು ಗುರುತಿಸಿ ಪುರಸ್ಕರಿಸುವ ನಿಟ್ಟಿನಲ್ಲಿಯೂ ಕನ್ನಡಿಗರಾಗಿರುವ ಶ್ರೀಹರಿಯವರು ಆಯ್ಕೆಯಾಗಿರುವುದು ಇಡೀ ಕರ್ನಾಟಕಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಡಾ. ಶ್ರೀಹರಿ ಚಂದ್ರಘಾಟಗಿಯವರು ಕಳೆದ ಎರಡುವರೆ ದಶಕಗಳಿಂದ ಜಪಾನಿನ ರಾಜಧಾನಿ ಟೋಕಿಯೋದಲ್ಲಿಯೇ ನೆಲೆಸಿ, ಎಕೋಸೈಕಲ್ ಕಾರ್ಪೊರೇಷನ್ ಎಂಬ ಸಂಸ್ಥೆಯನ್ನು ಸ್ಥಾಪಿಸಿ ಇದರ…
ಬೆಳಗಾವಿ ಸುವರ್ಣಸೌಧ : ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದ ನಿಯಮಗಳ ಸಡಿಲಿಕೆ ಕುರಿತು ಸದಸ್ಯರ ಮನವಿಗೆ ಸ್ಪಂದಿಸಿದ ಸರಕಾರ ಸದನ ಸಮಿತಿ ರಚಿಸಲು ನಿರ್ಧರಿಸಿದೆ. ನವೀಕರಣ ನಿಯಮಗಳ ಸಡಿಲಿಕೆ ಕುರಿತಂತೆ ಸದರಿ ಸದನ ಸಮಿತಿ ನೀಡುವ ವರದಿ ಆಧರಿಸಿ ಶೀಘ್ರ ತಿರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಹೇಳಿದರು. ಸರ್ಕಾರವು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿರುವ ಶಾಲೆಗಳ ಮಾನ್ಯತೆ ನವೀಕರಣದ ನಿಯಮಗಳನ್ನು ಸಡಿಲಗೊಳಿಸುವ ವಿಷಯದ ಬಗ್ಗೆ ಸಮಗ್ರವಾಗಿ ಚರ್ಚಿಸಿ ನಿರ್ಣಯ ಕೈಗೊಳ್ಳಲು ಸದನ ಸಮಿತಿ ರಚಿಸಲಾಗುತ್ತಿದೆ ಎಂದು ಅವರು ವಿವರಿಸಿದರು. ವಿಧಾನ ಪರಿಷತ್ತಿನಲ್ಲಿ ಸದಸ್ಯರಾದ ಪುಟ್ಟಣ್ಣ, ಶಶೀಲ್ ಜಿ. ನಮೋಶಿ, ಎಸ್.ವಿ. ಸಂಕನೂರ ಮತ್ತು ಎಸ್.ಎಲ್. ಭೋಜೇಗೌಡ ಅವರು ನಿಯಮ 330ರ ಮೇರೆಗೆ ಪ್ರಸ್ತಾಪಿಸಿದ ಖಾಸಗಿ ಅನುದಾನಿತ, ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಹೊರಡಿಸಿರುವ ಆದೇಶದಲ್ಲಿ…
ವಿಧಾನಪರಿಷತ್ತು : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಭರವಸೆ ನೀಡಿದ್ದಾರೆ. ವಿಧಾನಪರಿಷತ್ತಿನಲ್ಲಿ ಸೋಮವಾರ ಬಿಜೆಪಿಯ ಡಿ.ಎಸ್.ಅರುಣ್ ಮತ್ತು ಇತರರ ಗಮನ ಸೆಳೆಯುವ ಸೂಚನೆಗೆ ಸಚಿವರು ಉತ್ತರಿಸಿದರು. ನಗರಾಭಿವೃದ್ಧಿ ಪ್ರಾಧಿಕಾರಗಳು ನೀಡಿರುವ ಸಿಎ ನಿವೇಶನಗಳನ್ನು 30 ವರ್ಷಗಳ ನಂತರ ಗುತ್ತಿಗೆ ಅವಧಿಯನ್ನು ನವೀಕರಣ ಮಾಡುವಾಗ 30 ವರ್ಷಗಳ ಹಿಂದಿನ ದರವನ್ನೇ ನಿಗದಿಪಡಿಸಲು ಸಾಧ್ಯವಿಲ್ಲ ಎಂದರು. ಆದರೆ, ಎಸ್ಆರ್ ದರವನ್ನು ಕಡಿಮೆ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು. ಸಿಎ ನಿವೇಶನ ಪಡೆದು ಮೂರು ವರ್ಷಗಳ ಒಳಗೆ ಉದ್ದೇಶಿತ ಕಾರ್ಯಕ್ಕಾಗಿ ಕಟ್ಟಡ ನಿರ್ಮಾಣ ಆರಂಭಿಸಬೇಕೆಂಬ ನಿಯಮವನ್ನು ಸಡಿಲಿಸಬೇಕೆಂಬ ಒತ್ತಾಯವಿದೆ. ಈ ಹಿನ್ನೆಲೆಯಲ್ಲಿ ನಿಯಮವನ್ನು ಸಡಿಲಿಸಿ ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ನಡೆಸಲಾಗುತ್ತದೆ ಎಂದು ಸಚಿವರು ಸದನಕ್ಕೆ ಭರವಸೆ ನೀಡಿದರು. ಆದರೆ,…
ಶಿವಮೊಗ್ಗ: ಕಳೆದ ಎಂಟು ದಿನಗಳಿಂದ ಬೆಳಗ್ಗೆ ಕಾಡು ಸೇರಿ, ರಾತ್ರಿಯಾದ್ರೆ ಸಾಕು ಹೊರಬಂದು ರೈತರ ಬೆಳೆಗಳನ್ನು ಜೋಡಿ ಕಾಡಾನೆಗಳು ಉಳವಿ, ಕೈಸೋಡಿ, ಬರಗಿ, ಮಡಸೂರು, ಹೊಳೆಕೊಪ್ಪ, ಕ್ಯಾಸನೂರು ಭಾಗದಲ್ಲಿ ನಾಶ ಮಾಡಿವೆ. ಜೋಡಿ ಕಾಡಾನೆಗಳನ್ನು ಓಡಿಸೋದಕ್ಕೆ ಆನೆ ಕಾರ್ಯಪಡೆ, ಅರಣ್ಯ ಇಲಾಖೆಯ ಇಡೀ ತಂಡವೇ ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ. ಹೀಗಾಗಿ ನಾಳೆ ಕುಮ್ಕಿ ಆನೆಗಳನ್ನು ಬಳಸಿ ಬಂದ ಕಡೆಗೆ ಕಾಡಾನೆ ಓಡಿಸೋ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಇಳಿಯಲಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಬರಗಿ ಅರಣ್ಯ ವ್ಯಾಪ್ತಿಯಲ್ಲಿ ಜೋಡಿ ಕಾಡಾನೆಗಳು ಬೀಡು ಬಿಟ್ಟು, ಅಲ್ಲಲ್ಲಿ ರೈತರ ಬೆಳೆಗಳನ್ನು ನಾಶ ಮಾಡಿವೆ. ಮಡಸೂರು ಕಾಡಿನಲ್ಲಿ ಥರ್ಮಲ್ ಸ್ಕ್ಯಾನ್ ಡ್ರೋನ್ ಮೂಲಕ ಜೋಡಿ ಆನೆಗಳನ್ನು ಪತ್ತೆ ಹಚ್ಚಲಾಗಿತ್ತು. ಆ ಬಳಿಕ ನಿರಂತರವಾಗಿ ಅರಣ್ಯ ಗಸ್ತು ಪಾಲಕ, ಡ್ರೋನ್ ಆಪರೇಟರ್ ಗೋಪಿ ಕಾಡಾನೆಯನ್ನು ಪತ್ತೆ ಹಚ್ಚುವ ಕೆಲಸವನ್ನು ಮಾಡುತ್ತಾ ಕಾಡಾನೆ ಓಡಿಸೋ ಕಾರ್ಯಾಚರಣೆಗೆ ಸಾಥ್ ಕೊಟ್ಟಿದ್ದಾರೆ. ಸಕ್ರೆಬೈಲಿನಿಂದ ನಾಲ್ಕು ಕುಮ್ಕಿ ಆನೆಗಳು ಬರಗಿಗೆ ಆಗಮನ ಇಂದು…
ಬೆಳಗಾವಿ: ನಾಳೆ (ಡಿ.9) ಬೆಳಿಗ್ಗೆ ಇಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಸಿ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ರೈತವಿರೋಧಿ ನೀತಿಯನ್ನು ಖಂಡಿಸಿ ನಾಳೆ ನಡೆಯುವ ಹೋರಾಟದ ಸ್ಥಳ ಮಾಲಿನಿ ಸಿಟಿ ಮೈದಾನಕ್ಕೆ ಇಂದು ಭೇಟಿ ನೀಡಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಬೆಳಗಾವಿ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು, ಬೆಳಗಾವಿ, ಅಕ್ಕಪಕ್ಕದ ಜಿಲ್ಲೆಗಳ ರೈತರು ಭಾಗವಹಿಸುತ್ತಾರೆ ಎಂದರು. ಪ್ರತಿಭಟನೆಯಲ್ಲಿ ಕನಿಷ್ಠ 20-25 ಸಾವಿರ ಜನರು ಸೇರುತ್ತಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಈ ಸರಕಾರ ಕಣ್ಣಿದ್ದೂ ಕುರುಡನಂತೆ, ಕಿವಿಯಿದ್ದೂ ಕಿವುಡನಂತೆ ನಟಿಸುತ್ತಿದೆ ಎಂದು ಅವರು ಟೀಕಿಸಿದರು. ಪರಿಹಾರದ ವಿಚಾರ ಕೇಳಿದರೆ ಕೇಂದ್ರದ ಮೇಲೆ ಆರೋಪಿಸುತ್ತಾರೆ ಎಂದು ಆಕ್ಷೇಪಿಸಿದರು. ರಾಜ್ಯ ಸರಕಾರಕ್ಕೆ ಜವಾಬ್ದಾರಿಯೇ ಇಲ್ಲ ಎಂದು ದೂರಿದರು. ಕಬ್ಬು ಬೆಳೆಗಾರರ ಸಮಸ್ಯೆ ಇನ್ನೂ ಸಂಪೂರ್ಣವಾಗಿ ಇತ್ಯರ್ಥ ಆಗಿಲ್ಲ. ಕೇಂದ್ರವು ಮೆಕ್ಕೆ ಜೋಳಕ್ಕೆ 2400 ರೂ. ಕನಿಷ್ಠ ಬೆಂಬಲ…
ಬೆಳಗಾವಿ : ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಡಿಸೆಂಬರ್ 9, 2025ರಂದು ಬೆಳಿಗ್ಗೆ 9.30 ಗಂಟೆಗೆ ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಪ್ರದರ್ಶಿಸಲಾಗುವುದು. ಕಲಬುರ್ಗಿ ಜಿಲ್ಲೆಯ ಕಾಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ ಆಸಕ್ತಿಯಿಂದ ಮಾಡಲ್ಪಟ್ಟಿರುವ ಈ ಕೆಲಸ ಮತ್ತೊಮ್ಮೆ ಐತಿಹಾಸಿಕವಾಗಲಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ.ಪಾಟೀಲ್ ಸೇರಿದಂತೆ ರಾಜ್ಯ ಸರ್ಕಾರದ ಸಚಿವರು ಹಾಗೂ ಶಾಸಕರು ಭಾಗವಹಿಸಲಿದ್ದಾರೆ ಎಂದು ವಿಧಾನ ಸಭೆಯ ಕಚೇರಿ ಪ್ರಕಟಣೆ ತಿಳಿಸಿದೆ. https://kannadanewsnow.com/kannada/7-6-magnitude-earthquake-hits-japan-tsunami-warning-issued/ https://kannadanewsnow.com/kannada/alert-do-you-use-an-inverter-in-your-home-dont-make-these-mistakes-even-if-you-make-a-mistake/
ಸೋಮವಾರ ಸಂಜೆ ಉತ್ತರ ಜಪಾನ್ನ ಹೊಕ್ಕೈಡೋ ಪ್ರದೇಶದಲ್ಲಿ 7.6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕರಾವಳಿ ಪ್ರದೇಶಗಳಿಗೆ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಡಿಸೆಂಬರ್ 8, 2025 ರಂದು ಸಂಜೆ 7:45:09 ಕ್ಕೆ (ಸ್ಥಳೀಯ ಸಮಯ) ಭೂಕಂಪ ಸಂಭವಿಸಿದೆ. ಇದು 32 ಮೈಲುಗಳ ಆಳದಲ್ಲಿ ಹುಟ್ಟಿಕೊಂಡಿತು, ಇದರ ಕೇಂದ್ರಬಿಂದುವು ಹೊಕ್ಕೈಡೋ ಕರಾವಳಿಯಿಂದ 41°N ಅಕ್ಷಾಂಶ ಮತ್ತು 142.3°E ರೇಖಾಂಶದ ಬಳಿ ಇದೆ ಎಂದು USGS ತಿಳಿಸಿದೆ. https://twitter.com/stats_feed/status/1998041449255043281
ಬೆಳಗಾವಿ ಸುವರ್ಣಸೌಧ: ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಸೆಪ್ಟೆಂಬರ್ 2025 ಅಂತ್ಯದವರೆಗೆ 195.27 ಲಕ್ಷ ಪೆಟ್ಟಿಗೆ ಬಿಯರ್ ಮಾರಾಟ ಮಾಡಲಾಗಿದ್ದು, ಇದು ಕಳೆದ ಇದೇ ಅವಧಿಗೆ ಹೋಲಿಸಿದಲ್ಲಿ 47.46 ಲಕ್ಷ ಪೆಟ್ಟಿಗೆಗಳು ಕಡಿಮೆ ಮಾರಾಟವಾಗಿ ಶೇ.19.55 ಋಣತ್ಮಾಕ ಬೆಳವಣಿಗೆಯಾಗಿರುತ್ತದೆ ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ, ರಾಜ್ಯದಲ್ಲಿ ಮದ್ಯಪಾನ ಸೇವನೆ ಮಾಡುತ್ತಿರುವವರು ಲಿವರ್ ಸಿರೋಸಿಸ್/ಜಾಂಡೀಸ್ ಎಂಬ ಪಿತ್ತಕೋಶ ಖಾಯಿಲೆಯಿಂದ ಬಳಲುತ್ತಿದ್ದು, ಅವರುಗಳ ಉತ್ತಮ ಚಿಕಿತ್ಸೆಗಾಗಿ ಅಬಕಾರಿ ಇಲಾಖೆಯ ಆದಾಯದ ಕನಿಷ್ಠ ಶೇ.20ರಷ್ಟು ಮೊತ್ತವನ್ನು ವಿನಿಯೋಗಿಸುವ ಕುರಿತ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಮತ್ತು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಅವರ ನಿಯಮ 330 ರ ವಿಷಯಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಪ್ರಸ್ತುತ ಸಾಲಿನಲ್ಲಿ ಬಿಯರ್ ಮಾರಾಟವು ಕಡಿಮೆ ಮಾರಾಟವಾಗುತ್ತಿದ್ದು, ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗಿದ್ದು, ಅಲ್ಲದೇ ಶೀತ ವಾತಾವರಣ ಇರುವುದರಿಂದ ಬಿಯರ್ ಮಾರಾಟದಲ್ಲಿ ಕುಸಿತ ಉಂಟಾಗಿರುವುದಕ್ಕೆ…
ಬೆಳಗಾವಿ : ಯಾವುದೇ ಕಾರಣಕ್ಕೂ ಸರ್ಕಾರಿ ಒಡೆತನದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಖಾಸಗಿಕರಣ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ವಿಧಾನಪರಿಷತ್ನಲ್ಲಿ ಸ್ಪಷ್ಟಪಡಿಸಿದರು. ಕಾಂಗ್ರೆಸ್ ಪಕ್ಷದ ನಾಗರಾಜ್ ಯಾದವ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಸರ್ಕಾರ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮೇಲ್ದರ್ಜೆಗೇರಿಸಲಾಗುವುದು. ಯಾವುದೇ ಕಾರಣಕ್ಕೂ ಇವುಗಳನ್ನು ಖಾಸಗಿಯವರಿಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು. ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಿರ್ಲಕ್ಷ್ಯದಿಂದ ರೋಗಿಯ ಹೊಟ್ಟೆಯ ಗಡ್ಡೆಯ ಬದಲು ಕರಳು ತೆಗೆದು ಹಾಕಲಾಗಿದೆ ಎಂಬ ವದಂತಿ ಹರಡಿದೆ. ಇದು ಸರ್ಕಾರದ ಗಮನಕ್ಕೆ ಬಂದಿದೆ. ಈತ ಮದ್ಯವ್ಯಸನಿಯಾಗಿದ್ದು, ಕರುಳಿನಲ್ಲಿ ರಂಧ್ರವಿರುವ ಬಗ್ಗೆ ತಾಲೂಕಿನ ಆಸ್ಪತ್ರೆಯಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ. ರೋಗಿಗೆ ಅಪೆಂಡಿಸೆಕ್ಟಮಿ ಮಾಡಲಾಗಿದೆ. ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರು ಕರಳನ್ನು ತೆಗೆದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಖಾಸಗಿ ಆಸ್ಪತ್ರೆಯಲ್ಲಿ…
ಬೆಳಗಾವಿ ಸುವರ್ಣಸೌಧ: ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿದ್ದು, ಸದ್ಯ ರಾಜ್ಯದಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವರಾದ ಬಿ ಎಸ್ ಸುರೇಶ ಹೇಳಿದರು. ನಗರಾಭಿವೃದ್ಧಿ ಇಲಾಖೆಯಿಂದ ಹಂಚಿಕೆ ಮಾಡುವ ಸಿ.ಎ. ನಿವೇಶನಗಳಿಗೆ ಸಾರ್ವಜನಿಕರು ನಿರಾಸಕ್ತಿ ತೋರಿಸುತ್ತಿರುವ ಬಗ್ಗೆ ಹಾಗೂ ಗುತ್ತಿಗೆಯನ್ನು ವಿಸ್ತರಿಸುವ ಪ್ರಕ್ರಿಯೆಯಲ್ಲಿ ಇಲಾಖೆಯು ಸಮರ್ಪಕವಾದ ನೀತಿಯನ್ನು ಅನುಸರಿಸುತ್ತಿಲ್ಲ ಎಂದು ಸದಸ್ಯರಾದ ಡಿ ಎಸ್ ಅರುಣ್ ಅವರು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರ ಗಮನ ಸೆಳೆಯುವ ಸೂಚನೆಯ ಮೇಲೆ ಮಾತನಾಡಿದ ಸಚಿವರು, ರಾಜ್ಯದಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಮತ್ತು ನಗರ ಯೋಜನಾ ಪ್ರಾಧಿಕಾರಗಳಲ್ಲಿ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ನಾಗರೀಕ ಸೌಲಭ್ಯ ನಿವೇಶನ ಹಂಚಿಕೆ) ನಿಯಮಗಳು 1991 ರನ್ವಯ ಹಾಗೂ ಕರ್ನಾಟಕ ಯೋಜನಾ ಪ್ರಾಧಿಕಾರಗಳ (ನಾಗರೀಕ ಸೌಕರ್ಯ ನಿವೇಶನಗಳ ಹಂಚಿಕೆ) 2016 ರನ್ವಯ ಕ್ರಮವಾಗಿ ನಾಗರೀಕ ಸೌಲಭ್ಯ ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತಿದೆ. ನಾಗರೀಕ ಸೌಲಭ್ಯ ನಿವೇಶನಗಳನ್ನು ಹಂಚಿಕೆ ಮಾಡಲು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ನಾಗರೀಕ…














