Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ ಗಡಿಯಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಿರುವುದರಿಂದ ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದ ನಿಯಂತ್ರಣ ರೇಖೆ (ಎಲ್ಒಸಿ) ಉದ್ದಕ್ಕೂ ಪಾಕಿಸ್ತಾನಿ ಪ್ರಜೆಯನ್ನು ಮಂಗಳವಾರ ಬಂಧಿಸಲಾಗಿದೆ. ಪಾಕಿಸ್ತಾನಿ ರೇಂಜರ್ ಬಂಧನ ಸೇರಿದಂತೆ ದಾಳಿಯ ನಂತರ ಇದು ಮೂರನೇ ಘಟನೆಯಾಗಿದೆ. ಮೇ 3 ಮತ್ತು 4 ರ ಮಧ್ಯರಾತ್ರಿ, ಭಾರತಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದ ಮತ್ತೊಬ್ಬ ಪಾಕಿಸ್ತಾನಿ ನಾಗರಿಕನನ್ನು ಪಂಜಾಬ್ನ ಗುರುದಾಸ್ಪುರದಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಬಂಧಿಸಿದೆ. ಬಂಧಿತನನ್ನು ಮುಹಮ್ಮದ್ ಹುಸೇನ್ ಎಂದು ಗುರುತಿಸಲಾಗಿದ್ದು, ಆತನನ್ನು ಪಂಜಾಬ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಅದೇ ದಿನ, ಪಾಕಿಸ್ತಾನದ ಅರೆಸೈನಿಕ ಪಡೆಗಳ ಸದಸ್ಯ ಪಾಕಿಸ್ತಾನಿ ರೇಂಜರ್ ನನ್ನು ರಾಜಸ್ಥಾನದಲ್ಲಿ ಬಂಧಿಸಲಾಯಿತು. ಮೂಲಗಳ ಪ್ರಕಾರ, ರೇಂಜರ್ ಭಾರತದಲ್ಲಿ ಬೇಹುಗಾರಿಕೆ ಅಥವಾ ಬೇಹುಗಾರಿಕೆ ಕಾರ್ಯಾಚರಣೆಯಲ್ಲಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸದ್ಯ ಆತನನ್ನು ಬಿಎಸ್ಎಫ್ ವಿಚಾರಣೆ ನಡೆಸುತ್ತಿದೆ. ಏತನ್ಮಧ್ಯೆ, ಪಂಜಾಬ್ನ ಅಂತರರಾಷ್ಟ್ರೀಯ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಪಾಕಿಸ್ತಾನ…
ನವದೆಹಲಿ: ಸುಪ್ರೀಂ ಕೋರ್ಟ್ನ 33 ಹಾಲಿ ನ್ಯಾಯಾಧೀಶರಲ್ಲಿ 21 ಮಂದಿ ಸೋಮವಾರ ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಿದ್ದಾರೆ. ಆಸ್ತಿ ವಿವರಗಳನ್ನು ಸುಪ್ರೀಂ ಕೋರ್ಟ್ನ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ನ್ಯಾಯಾಂಗದೊಳಗಿನ ಭ್ರಷ್ಟಾಚಾರದ ಇತ್ತೀಚಿನ ಆರೋಪಗಳ ನಂತರ, ವಿಶೇಷವಾಗಿ ನ್ಯಾಯಮೂರ್ತಿ ಯಶವಂತ್ ವರ್ಮಾ-ವಿವಾದದ ನಂತರ, ಏಪ್ರಿಲ್ 1 ರಂದು ಸುಪ್ರೀಂ ಕೋರ್ಟ್ನ ಪೂರ್ಣ ನ್ಯಾಯಾಲಯವು ನ್ಯಾಯಾಧೀಶರ ಆಸ್ತಿಗಳ ಹೇಳಿಕೆಯನ್ನು ಸುಪ್ರೀಂ ಕೋರ್ಟ್ನ ಅಧಿಕೃತ ವೆಬ್ಸೈಟ್ನಲ್ಲಿ ಸಾರ್ವಜನಿಕ ವಲಯದಲ್ಲಿ ಇರಿಸಬೇಕೆಂದು ನಿರ್ಧರಿಸಿತು. ಅದರ ಅನುಸಾರವಾಗಿ ವಿವರಗಳನ್ನು ನಿನ್ನೆ ಪ್ರಕಟಿಸಲಾಗಿದೆ. ಆದಾಗ್ಯೂ, 12 ನ್ಯಾಯಾಧೀಶರ ಹೇಳಿಕೆಗಳನ್ನು ಇನ್ನೂ ಸಾರ್ವಜನಿಕಗೊಳಿಸಲಾಗಿಲ್ಲ. ಸುಪ್ರೀಂ ಕೋರ್ಟ್ ಪ್ರಕಾರ ಈಗಾಗಲೇ ಸ್ವೀಕರಿಸಿದ ನ್ಯಾಯಾಧೀಶರ ಆಸ್ತಿಗಳ ಹೇಳಿಕೆಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಪ್ರಸ್ತುತ ಆಸ್ತಿಗಳ ಹೇಳಿಕೆಯನ್ನು ಸ್ವೀಕರಿಸಿದಾಗ ಇತರ ನ್ಯಾಯಾಧೀಶರ ಆಸ್ತಿಗಳ ಹೇಳಿಕೆಯನ್ನು ಅಪ್ಲೋಡ್ ಮಾಡಲಾಗುತ್ತದೆ ಎಂದಿದೆ. ಆಸ್ತಿಗಳ ವಿವರ ಬಹಿರಂಗ ಪಡಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಪಟ್ಟಿ ಹೀಗಿದೆ ನ್ಯಾಯಮೂರ್ತಿ ಸಂಜೀವ್ ಖನ್ನಾ, ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ನ್ಯಾಯಮೂರ್ತಿ ಸೂರ್ಯ ಕಾಂತ್ …
ನವದೆಹಲಿ: ರಸ್ತೆ ಅಪಘಾತಗಳಲ್ಲಿ ಗಾಯಗೊಂಡ ವ್ಯಕ್ತಿಗಳು ಈಗ ನಗದು ರಹಿತ ವೈದ್ಯಕೀಯ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ. ಪ್ರತಿ ಅಪಘಾತಕ್ಕೆ ಪ್ರತಿ ವ್ಯಕ್ತಿಗೆ 1.5 ಲಕ್ಷ ರೂ.ಗಳವರೆಗೆ ಕವರೇಜ್ ಇರುತ್ತದೆ. ಕೇಂದ್ರ ಸರ್ಕಾರವು ಮಂಗಳವಾರ ರಸ್ತೆ ಅಪಘಾತದ ಸಂತ್ರಸ್ತರಿಗೆ ರಾಷ್ಟ್ರವ್ಯಾಪಿ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿದೆ. ದೇಶಾದ್ಯಂತ ಯಾವುದೇ ರಸ್ತೆಯಲ್ಲಿ ಮೋಟಾರು ವಾಹನದಿಂದ ಸಂಭವಿಸುವ ರಸ್ತೆ ಅಪಘಾತಕ್ಕೆ ಬಲಿಯಾದ ಯಾವುದೇ ವ್ಯಕ್ತಿ, ಯಾವುದೇ ವರ್ಗ ಅಥವಾ ವರ್ಗವನ್ನು ಲೆಕ್ಕಿಸದೆ ಈ ನಗದು ರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ. https://twitter.com/PTI_News/status/1919663416488186282 ಅಪಘಾತದ ದಿನಾಂಕದಿಂದ ಗರಿಷ್ಠ ಏಳು ದಿನಗಳವರೆಗೆ ಗಾಯಾಳುಗಳು ಯಾವುದೇ ಗೊತ್ತುಪಡಿಸಿದ ಆಸ್ಪತ್ರೆಯಲ್ಲಿ ಪ್ರತಿ ವ್ಯಕ್ತಿಗೆ 1.5 ಲಕ್ಷ ರೂ.ಗಳವರೆಗಿನ ವೆಚ್ಚಗಳಿಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಯೋಜನೆಯ ಮಾರ್ಗಸೂಚಿಗಳಲ್ಲಿ ಮತ್ತಷ್ಟು ವಿವರಿಸಿದಂತೆ ಯೋಜನೆಯಡಿಯಲ್ಲಿ ಗೊತ್ತುಪಡಿಸದ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯು ಸ್ಥಿರೀಕರಣ ಕ್ರಮಗಳಿಗೆ ಸೀಮಿತವಾಗಿರುತ್ತದೆ ಎನ್ನುವ…
ಶಿವಮೊಗ್ಗ: ಎರಡು ದಿನಗಳ ಹಿಂದಷ್ಟೇ ಕುಂದಾಪುರ ಮೂಲದ ಯುವಕನ ಜೊತೆಗೆ ಶ್ವೇತಾ ನಿಶ್ಚಿತಾರ್ಥವಾಗಿತ್ತು. ಸಾಗರದ ಮೂರುಕೈ ಗ್ರಾಮದಲ್ಲಿ ತಮ್ಮ ಮನೆಯಲ್ಲಿ ನಡೆದಂತ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ, ಕೆಲಸದ ಕಾರಣ ಹುಬ್ಬಳ್ಳಿಯ ಬಾದಾಮಿ ಹತ್ತಿರದ ಕುಳಗೇರಿ ಕ್ರಾಸ್ ಗೆ ತೆರಳುತ್ತಿದ್ದಂತ ಸಾಗರದ ಮೂರುಕೈನ ಐವರು ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲ್ಲೂಕಿನ ಮೂರುಕೈ ಗ್ರಾಮದ ವಿಠಲ್ ಹಾಗೂ ಶಶಿಕಲಾ ದಂಪತಿಗಳ ಪುತ್ರಿ ಶ್ವೇತಾ ಅವರ ನಿಶ್ಚಿತಾರ್ಥವು ಕಳೆದ ಎರಡು ದಿನಗಳ ಹಿಂದೆ ಕುಂದಾಪುರ ಮೂಲದ ಯುವಕನೊಂದಿಗೆ ನಡೆದಿತ್ತು. ನಿಶ್ಚಿತಾರ್ಥ ಮುಗಿಸಿದ ನಂತ್ರ, ಬಾದಾಮಿಯ ಕುಳುಗೇರಿ ಕ್ರಾಸ್ ಹತ್ತಿರ ಹೋಟೆಲ್ ಮಾಡಿಕೊಂಡಿರುವಂತ ಅಣ್ಣನ ಪುತ್ರನೊಂದಿಗೆ ಕೆಲಸ ಮಾಡಿಕೊಂಡಿದ್ದಂತ ವಿಠಲ್ ಮತ್ತು ಶಶಿಕಲಾ ದಂಪತಿಗಳು ಪುತ್ರಿ ಶ್ವೇತಾ, ಪುತ್ರ ಸಂದೀಪ್ ಜೊತೆಗೆ ಕಾರಿನಲ್ಲಿ ತೆರಳುತ್ತಿದ್ದರು. ಹುಬ್ಬಳ್ಳಿಯ ಕುಸುಗಲ್ ಸಮೀಪದ ಇಂಗಳಹಳ್ಳಿ ಕ್ರಾಸ್ ಬಳಿಯಲ್ಲಿ ಇಂದು ಬೆಳಗ್ಗೆ ಲಾರಿ ಹಾಗೂ ಕಾರಿನ ನಡುವೆ ನಡೆದಂತ ಅಪಘಾತದಲ್ಲಿ ಸಾಗರದ ಮೂರುಕೈನ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಶ್ವೇತಾ (29),…
ನವದೆಹಲಿ: ದೇಶಾದ್ಯಂತ ರಸ್ತೆ ಅಪಘಾತ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ಮಂಗಳವಾರ ಪ್ರಕಟಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಗೆಜೆಟ್ ಅಧಿಸೂಚನೆಯ ಪ್ರಕಾರ, ಈ ಯೋಜನೆಯಡಿಯಲ್ಲಿ (ರಸ್ತೆ ಅಪಘಾತ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ ಯೋಜನೆ, 2025), ಅಪಘಾತ ಸಂಭವಿಸಿದ ದಿನಾಂಕದಿಂದ ಏಳು ದಿನಗಳವರೆಗೆ ಬಲಿಪಶುವಿಗೆ ಯಾವುದೇ ಗೊತ್ತುಪಡಿಸಿದ ಆಸ್ಪತ್ರೆಯಲ್ಲಿ ಗರಿಷ್ಠ 1.5 ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸೆ ಪಡೆಯಲು ಅರ್ಹತೆ ಇರುತ್ತದೆ. ಯಾವುದೇ ರಸ್ತೆಯಲ್ಲಿ ಸಂಭವಿಸುವ ಮೋಟಾರು ವಾಹನ ಬಳಕೆಯಿಂದ ಉಂಟಾಗುವ ರಸ್ತೆ ಅಪಘಾತಕ್ಕೆ ಬಲಿಯಾದ ಯಾವುದೇ ವ್ಯಕ್ತಿ ಈ ಯೋಜನೆಯ ನಿಬಂಧನೆಗಳಿಗೆ ಅನುಗುಣವಾಗಿ ನಗದು ರಹಿತ ಚಿಕಿತ್ಸೆಗೆ ಅರ್ಹನಾಗಿರುತ್ತಾನೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಯೋಜನೆ ಮೇ 5, 2025 ರಿಂದ ಜಾರಿಗೆ ಬಂದಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜನವರಿಯಲ್ಲಿ ರಸ್ತೆ ಅಪಘಾತ ಸಂತ್ರಸ್ತರಿಗೆ ಸರ್ಕಾರವು ಮಾರ್ಪಡಿಸಿದ ಯೋಜನೆಯನ್ನು…
ಬೆಂಗಳೂರು: ಬಿ.ಎಂ.ಟಿ.ಸಿ ಯಲ್ಲಿ 2285 ನಿರ್ವಾಹಕ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ ಎಂಬುದಾಗಿ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವಂತ ಅವರು 2018 ರಿಂದೀಚೆಗೆ ಬಿ.ಎಂ.ಟಿ ಸಿಯಲ್ಲಿ ಯಾವುದೇ ನೇಮಕಾತಿಯಾಗಿರಲಿಲ್ಲ. ನಮ್ಮ ಸರ್ಕಾರವು ಬಂದ ನಂತರ ದಿನಾಂಕ: 13/10/2023 ನೇಮಕಾತಿಗೆ ಅನುಮತಿ ನೀಡಲಾಗಿತ್ತು. ಅದರಂತೆ ದಿನಾಂಕ: 03/4/2024 ರಂದು ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. KEA ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಪಾರದರ್ಶಕವಾಗಿ ಪರೀಕ್ಷೆ ನಡೆಸಲಾಗಿತ್ತು. ಒಟ್ಟು 23021 ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದರು. ಇಂದು ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿದ್ದು, ವರ್ಗಾವಾರು ಮೀಸಲಾತಿ , ಶೇಕಡವಾರು ಅಂಕ ಹಾಗೂ ಹುಟ್ಟಿದ ದಿನಾಂಕದೊಂದಿಗೆ ಪಟ್ಟಿ ಪ್ರಕಟಿಸಲಾಗಿದೆ ಎಂದು ಹೇಳಿದ್ದಾರೆ. ನಿರ್ವಾಹಕರ ಉಳಿಕೆ ಮೂಲ ವೃಂದದ ಹುದ್ದೆಗೆ ಅರ್ಜಿ ಸಲ್ಲಿಸಿ ಅರ್ಹತೆ ಪಡೆದಿದ್ದ ಅಭ್ಯರ್ಥಿಗಳ ಸಂಭವನೀಯ ಆಯ್ಕೆ ಪಟ್ಟಿಯನ್ನು ಹಾಗೂ ಆಯ್ಕೆ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಮೀಸಲಾತಿ ವಾರು ಕೊನೆಯ ಅಭ್ಯರ್ಥಿಯ ಶೇಕಡವಾರು ಅಂಕಗಳ ವಿವರವನ್ನು ಪ್ರಕಟಿಸಿ ಅಭ್ಯರ್ಥಿಗಳಿಗೆ ಆಕ್ಷೇಪಣೆ…
ಸಾಗರ : ತಾಲ್ಲೂಕಿನ ಸೊರಬ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಮರ್ತೂರು ಗ್ರಾಮ ಪಂಚಾಯ್ತಿ ಆಲಳ್ಳಿ-ಶಿರೂರು ಗ್ರಾಮದಲ್ಲಿ ಬಾರ್ ಎಂಡ್ ರೆಸ್ಟೋರೆಂಟ್ ತೆರೆಯಲು ಮುಂದಾದ ಕ್ರಮ ಖಂಡಿಸಿ ಸೋಮವಾರ ಆಲಳ್ಳಿ-ಶಿರೂರು ಗ್ರಾಮದಲ್ಲಿ ಗ್ರಾಮಸ್ಥರು ಸಮಾಲೋಚನಾ ಸಭೆ ನಡೆಸಿ ಯಾವುದೇ ಕಾರಣಕ್ಕೂ ಬಾರ್ ಎಂಡ್ ರೆಸ್ಟೋರೆಂಟ್ ತೆರೆಯದಂತೆ ಒಮ್ಮತದ ನಿರ್ಣಯ ಕೈಗೊಂಡಿದ್ದಾರೆ. ಯಾವುದೇ ಕಾರಣಕ್ಕೂ ಆಲಳ್ಳಿ-ಶಿರೂರು ಗ್ರಾಮದಲ್ಲಿ ಬಾರ್ ಎಂಡ್ ರೆಸ್ಟೋರೆಂಟ್ ತೆರೆಯಲು ಅವಕಾಶ ನೀಡುವುದಿಲ್ಲ. ಈ ಭಾಗದಲ್ಲಿ ಎಲ್ಲ ಜಾತಿ ಜನಾಂಗದವರು ವಾಸ ಮಾಡುತ್ತಿದ್ದು ಹೆಚ್ಚಿನ ಜನಸಂಖ್ಯೆ ಈಡಿಗ ಸಮುದಾಯದ್ದೆ ಆಗಿರುತ್ತದೆ. ಮದ್ಯದಂಗಡಿ ತೆರೆಯುವುದರಿಂದ ಯುವಜನರು, ಕೂಲಿಕಾರ್ಮಿಕರು ಮದ್ಯದ ಚಟಕ್ಕೆ ಬೀಳುವ ಸಾಧ್ಯತೆ ಇದೆ. ಹಿಂದೆಯೆ ಇಲ್ಲಿ ಬಾರ್ ಎಂಡ್ ರೆಸ್ಟೋರೆಂಟ್ ಮಾಡಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾಗಿ ಸಭೆಯಲ್ಲಿ ಚರ್ಚೆಯಾಯಿತು. ಈಗಾಗಲೆ ಗ್ರಾಮಸ್ಥರ ವಿರೋಧದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಅಂಗಡಿಯವರಿಗೆ ನೋಟಿಸ್ ನೀಡಿದ್ದಾರೆ. ಈ ನೋಟಿಸ್ ಪ್ರಶ್ನಿಸಿ ಅಂಗಡಿ ಮಾಲೀಕರು ಹೈಕೋರ್ಟ್ಗೆ ಹೋಗುವ ಸಾಧ್ಯತೆಯೂ ಇದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಪರವಾಗಿ ನಾವು ಮೇಲ್ಮನವಿ ಸಲ್ಲಿಸಬೇಕಾಗುತ್ತದೆ.…
ಸಾಗರ : ಚಿಕ್ಕ ವಯಸ್ಸಿನಲ್ಲಿ ಯುಪಿಎಸ್ಸಿಯಲ್ಲಿ 288ನೇ ರ್ಯಾಂಕ್ ಪಡೆದಿರುವುದು ದೊಡ್ಡ ಸಾಧನೆ. ನಿಮ್ಮಂತಹ ಯುವಕರಿಗೆ ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸುವ ಅವಕಾಶ ಸಿಗುವಂತಾಗಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಲ್ಲಿನ ಪುರಭವನದಲ್ಲಿ ಸೋಮವಾರ ನಗರಸಭೆ ವತಿಯಿಂದ ಯುಪಿಎಸ್ಸಿ ಪರೀಕ್ಷೆಯಲ್ಲಿ 288ನೇ ರ್ಯಾಂಕ್ ಗಳಿಸಿರುವ ವಿಕಾಸ್ ವಿ. ಅವರಿಗೆ ಹಮ್ಮಿಕೊಳ್ಳಲಾಗಿದ್ದ ನಾಗರೀಕ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಐಎಎಸ್ ಐಪಿಎಸ್ ಐಎಫ್ಎಸ್ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಅತ್ಯಂತ ಕಠಿಣವಾಗಿರುತ್ತದೆ. ಅದರಲ್ಲಿ ಯಶಸ್ವಿಯಾಗಲು ಬದ್ದತೆ ಹಾಗೂ ಏಕಾಗ್ರತೆ ಅಗತ್ಯ. ವಿಕಾಸ್ ತಂದೆತಾಯಿ ಪ್ರೊತ್ಸಾಹ, ಗುರುಹಿರಿಯರ ಮಾರ್ಗದರ್ಶನದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ನಿಮ್ಮ ಸೇವೆ ನಮ್ಮ ನೆಲಕ್ಕೆ ಸಿಗಬೇಕು ಎನ್ನುವುದು ನನ್ನ ಉದ್ದೇಶ. ಐಎಎಸ್ ಅಧಿಕಾರಿಗಳು ಆರಂಭದಲ್ಲಿ ತಗ್ಗಿಬಗ್ಗಿ ಕೆಲಸ ಮಾಡುತ್ತಾರೆ. ಕೆಲವು ವರ್ಷದ ನಂತರ ದರ್ಪ ತೋರಿಸುತ್ತಾರೆ. ಅಂತಹದ್ದಕ್ಕೆ ಅವಕಾಶ ಕೊಡದೆ ದೇಶದ ಯಾವುದೇ ರಾಜ್ಯದಲ್ಲಿ ಕೆಲಸ ಮಾಡಿದರೂ ಕರ್ನಾಟಕ ರಾಜ್ಯ, ಸಾಗರವನ್ನು ಮರೆಯಬೇಡಿ.…
ಬೆಂಗಳೂರು: ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ವಿವಾದಕ್ಕೆ ಸಿಲುಕಿದ್ದಂತ ಖ್ಯಾತ ಗಾಯಕ ಸೋನು ನಿಗಮ್ ಕೊನೆಗೂ ಕನ್ನಡಿಗರ ಕ್ಷಮೆ ಕೇಳಿದ್ದಾರೆ. ಬೆಂಗಳೂರಿನ ಸಂಗೀತ ಕಾರ್ಯಕ್ರಮ ನಡೆಸುವಾಗ ಖ್ಯಾತ ಗಾಯಕ ಸೋನು ನಿಗಮ್ ಅವರು ಹೇಳಿದ್ದಂತ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಅವರ ವಿರುದ್ದ ಎಫ್ಐಆರ್ ಕೂಡ ದಾಖಲಾಗಿತ್ತು. ಇಂದು ಕನ್ನಡ ಚಿತ್ರರಂಗದಿಂದ ಅವರನ್ನು ಬ್ಯಾನ್ ಕೂಡ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಈ ಎಲ್ಲಾ ಬೆಳವಣಿಗೆಯ ನಂತ್ರ ಕೊನೆಗೂ ಖ್ಯಾತ ಗಾಯಕ ಸೋನು ನಿಗಮ್ ಕನ್ನಡಿಗರ ಕ್ಷಮೆ ಕೇಳಿದ್ದಾರೆ. ಈ ಸಂಬಂಧ ತಮ್ಮ ಇನ್ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕ್ಷಮೆ ಇರಲಿ ಕರ್ನಾಟಕ. ನಿಮ್ಮ ಮೇಲೆ ನನಗೆ ಇರುವ ಪ್ರೀತಿ ನನ್ನ ಅಹಂಕಾರಕ್ಕಿಂತಲೂ ದೊಡ್ಡದು. ನಿಮ್ಮನ್ನು ಯಾವಾಗಲೂ ಪ್ರೀತಿಸುತ್ತೇನೆ ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ಕನ್ನಡಿಗರ ಕ್ಷಮೆಯನ್ನು ಗಾಯಕ ಸೋನು ನಿಗಮ್ ಕೇಳಿದ್ದಾರೆ.
ಸಾಗರ : ವಿಶ್ವಕರ್ಮ ಯೋಜನೆಯಲ್ಲಿ ದೊಡ್ಡಮಟ್ಟದ ಅವ್ಯವಹಾರ ನಡೆಯುತ್ತಿದ್ದು, ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ ಎಂದು ಶ್ರಮಜೀವಿ ಕಟ್ಟಡ ಕಾರ್ಮಿಕರ ಸಂಘದ ಸತೀಶ್ ಅಂಗಡಿ ಆರೋಪಿಸಿದ್ದಾರೆ. ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಒಂದು ವರ್ಷದ ಹಿಂದೆ ವಿಶ್ವಕವið ಯೋಜನೆ ಚುನಾವಣೆ ಮುನ್ನ ಘೋಷಣೆ ಮಾಡಿತ್ತು. ಆದರೆ ಯೋಜನೆ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳನ್ನು ತರದೆ ಇರುವುದು ಎಲ್ಲೋ ಯೋಜನೆ ಚುನಾವಣಾ ಗಿಮಿಕ್ ಎನ್ನುವ ಅನುಮಾನ ಮೂಡಿಸಲು ಕಾರಣವಾಗಿದೆ ಎಂದರು. ವಿಶ್ವಕರ್ಮ ಯೋಜನೆ ವ್ಯಾಪ್ತಿಯಲ್ಲಿ ಟೈಲರ್, ಬಡಗಿ ಮತ್ತು ಮೇಸ್ತಿçಗಳನ್ನು ಪರಿಗಣಿಸಿಲ್ಲ. ನಿಜವಾಗಿಯೂ ಈ ವರ್ಗಗಗಳಿಗೆ ಯೋಜನೆ ತೀರ ಅಗತ್ಯವಾಗಿದೆ. ಈ ಕಸುಬು ಮಾಡುತ್ತಿರುವವರು ಅರ್ಜಿ ಸಲ್ಲಿಸಿದರೆ ಅಧಿಕಾರಿಗಳು ನಿಮ್ಮ ಅರ್ಜಿ ತಿರಸ್ಕೃಗೊಂಡಿದೆ. ನಿಮ್ಮ ಉದ್ಯೋಗ ಬದಲಾಯಿಸಿ ಅರ್ಜಿ ಸಲ್ಲಿಸಿ ಎಂದು ಉತ್ತರ ನೀಡುತ್ತಾರೆ. ಆದರೆ ಯೋಜನೆಗಾಗಿ ತಮ್ಮ ಮೂಲವೃತ್ತಿಯನ್ನು ಬದಲಾಯಿಸಿಕೊಳ್ಳುವುದು ಹೇಗೆ ಎಂದು ಪ್ರಶ್ನಿಸಿದ ಅವರು, ಕೆಲವು ಖೊಟ್ಟಿ ದಾಖಲೆ ಸೃಷ್ಟಿಸಿಕೊಂಡು ಫಲಾನುಭವಿಗಳಿಗೆ ಬಂದ ಹಣವನ್ನು ಲಪಟಾಯಿಸುವ ಕೆಲಸ ನಡೆಯುತ್ತಿದೆ…