Author: kannadanewsnow09

ನವದೆಹಲಿ: ಅನಾರೋಗ್ಯದ ಕಾರಣದಿಂದಾಗಿ ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನ್ಕರ್ ಅವರು ರಾಜೀನಾಮೆಯನ್ನು ನಿನ್ನೆ ಸಲ್ಲಿಸಿದ್ದರು. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ನಿನ್ನೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ನೀಡಿದ ರಾಜೀನಾಮೆಯಲ್ಲಿ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದರು. ಈ ಮಹತ್ವದ ಅವಧಿಯಲ್ಲಿ ಭಾರತದ ಗಮನಾರ್ಹ ಆರ್ಥಿಕ ಪ್ರಗತಿ ಮತ್ತು ಅಭೂತಪೂರ್ವ ಘಾತೀಯ ಅಭಿವೃದ್ಧಿಯನ್ನು ವೀಕ್ಷಿಸುವುದು ಮತ್ತು ಅದರಲ್ಲಿ ಭಾಗವಹಿಸುವುದು ಒಂದು ಸವಲತ್ತು ಮತ್ತು ತೃಪ್ತಿಯಾಗಿದೆ ಎಂದು ಧನ್ಕರ್ ಹೇಳಿದ್ದರು. ಅಲ್ಲದೇ ನಮ್ಮ ರಾಷ್ಟ್ರದ ಇತಿಹಾಸದ ಈ ಪರಿವರ್ತನಾ ಯುಗದಲ್ಲಿ ಸೇವೆ ಸಲ್ಲಿಸುವುದು ನಿಜವಾದ ಗೌರವವಾಗಿದೆ ಎಂದು ಅವರು ಹೇಳಿದ್ದರು. ಹೀಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನ್ಕರ್ ಅವರು ನೀಡಿದ್ದಂತ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂಬುದಾಗಿ ತಿಳಿದು…

Read More

ಕಲಬುರ್ಗಿ: ಜಿಲ್ಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಯುವತಿಯೊಬ್ಬರ ಪೋಟೋವನ್ನು ಅಶ್ಲೀಲವಾಗಿ ಸಂದೇಶ ಪೋಸ್ಟ್ ಮಾಡಿ ವೈರಲ್ ಮಾಡಲಾಗಿತ್ತು. ಈ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕುರಿಕೋಟ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕಮಲಾಪುರ ತಾಲ್ಲೂಕಿನ ಭೂಸಣಗಿ ಗ್ರಾಮದ ಸಾಕ್ಷಿ ಉಪ್ಪಾರ್ (22) ಎಂಬ ಯುವತಿಯೇ ಆತ್ಮಹತ್ಯೆಗೆ ಶರಣಾದಂತವರಾಗಿದ್ದಾರೆ. ಮೃತ ಯುವತಿ ಸಾಕ್ಷಿ ಉಪ್ಪಾರ್ ಗೆ ಅಭಿಷೇಕ್ ಎಂಬಾತ ಕಿರುಕುಳ ನೀಡುತ್ತಿದ್ದನು. ಯುವತಿಯ ಜೊತೆಗಿರುವಂತ ಪೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದನು. ಈ ಪೋಟೋಗಳು ವೈರಲ್ ಆಗಿದ್ದವು. ಅಭಿಷೇಕ್ ನೀಡುತ್ತಿದ್ದಂತ ಕಿರುಕುಳ ಹಾಗೂ ತನ್ನ ಖಾಸಗಿ ಪೋಟೋಗಳು ವೈರಲ್ ಆಗಿದ್ದರಿಂದಾಗಿ ಮನನೊಂದು ಯುವತಿ ಸಾಕ್ಷಿ ಉಪ್ಪಾರ್ ಬೆಣ್ಣೆತೋರಾ ಡ್ಯಾಂಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/while-receiving-a-bribe-of-15000-in-mandya-three-employees-fell-into-the-trap-of-the-lokayukta/ https://kannadanewsnow.com/kannada/rowdy-sheeter-biklus-murder-case-takes-a-big-twist-four-who-received-the-contract-have-been-arrested/

Read More

ಮಂಡ್ಯ: ಜಿಲ್ಲೆಯಲ್ಲಿ ಟೌನ್ ಪ್ಲಾನಿಂಗ್ ಅನುಮೋದನೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟು, ಪಡೆಯುತ್ತಿದ್ದಾಗಲೇ ಮೂವರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಹಿಡಿದಿದ್ದಾರೆ. ಮಂಡ್ಯ ನಗರ ಯೋಜನೆ ಪ್ರಾಧಿಕಾರದ ಮೇಲೆ ಇಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಟೌನ್ ಪ್ಲಾನಿಂಗ್ ಅನುಮೋದನೆಗಾಗಿ ಲಂಚ ಪಡೆಯುವ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮೂವರು ನೌಕರರನ್ನು ವಶಕ್ಕೆ ಪಡೆದಿದ್ದಾರೆ. ಮಂಡ್ಯ ನಗರ ಯೋಜನಾ ಪ್ರಾಧಿಕಾರದ ಸಿಬ್ಬಂದಿಗಳಾದಂತ ಅನನ್ಯ, ಸೌಮ್ಯ ಹಾಗೂ ಹರೀಶ್ ಎಂಬುವರನ್ನು ಲಂಚ ಸ್ವೀಕರಿಸುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರು ಹಿಡಿದು, ತಮ್ಮ ವಶಕ್ಕೆ ಪಡೆದಿದ್ದಾರೆ. ಟೌನ್ ಪ್ಲಾನಿಂಗ್ ಅನುಮೋದನೆಗಾಗಿ ಆರೋಪಿಗಳು ಮಂಡ್ಯದ ಮದ್ದೂರು ತಾಲ್ಲೂಕಿನ ಚಂದೂಪುರದ ನಿವಾಸಿ ಪುನೀತ್ ಎಂಬುವರಿಗೆ 30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು 30 ಸಾವಿರದಲ್ಲಿ 15 ಸಾವಿರ ಮುಂಗಡವಾಗಿ ಪಡೆಯುತ್ತಿದ್ದಂತ ವೇಳೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಮಂಡ್ಯ ಲೋಕಾಯುಕ್ತ…

Read More

ಬೆಂಗಳೂರು: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಸತತ ಪ್ರಯತ್ನ, ಪರಿಶ್ರಮದಿಂದಾಗಿ ತಾಲ್ಲೂಕಿನ ಗಂಗಾಮತಸ್ಥರು, ಮಡಿವಾಳ, ಈಡಿಗ ಸಮುದಾಯದವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಅದೇ ಗಂಗಾಮತಸ್ಥರ ಸಮುದಾಯ ಭವನ, ಮಡಿವಾಳ ಸಮುದಾಯ ಭವನ ಹಾಗೂ ಈಡಿಗ ಸಮುದಾಯ ಭವನಕ್ಕೆ ಸರ್ಕಾರದಿಂದ ಅನುದಾನ ಮಂಜೂರಾಗಿದೆ. ಈ ಸಂಬಂಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮದಡಿ ಈ ಕೆಳಕಂಡ ಸಂಘ-ಸಂಸ್ಥೆಗಳ ವತಿಯಿಂದ ಸಮುದಾಯ ಭವನ, ವಿದ್ಯಾರ್ಥಿನಿಲಯದ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಿರುವುದಾಗಿ ತಿಳಿಸಿದ್ದಾರೆ. ಸಾಗರ ತಾಲ್ಲೂಕಿನ ಈ ಸಮುದಾಯ ಭವನಗಳ ನಿರ್ಮಾಣಕ್ಕೆ ಅನುದಾನ ಮಂಜೂರು ಸಾಗರ ತಾಲ್ಲೂಕು ಆಚಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಲಕ್ಕವಳ್ಳಿ ಇಲ್ಲಿ ಗಂಗಾಮತಸ್ಥರ ಸಮುದಾಯ ಭವನ ನಿರ್ಮಾಣ ಕಾಮಗಾರಿ ಕೈಗೊಳ್ಳಲು 40 ಲಕ್ಷ ಅನುದಾನ ಮಂಜೂರು. ಸಾಗರ ತಾಲ್ಲೂಕು ಬ್ಯಾಕೋಡು ಗ್ರಾಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಈಡಿಗ ಸಂಘಕ್ಕೆ ಸಮುದಾಯ…

Read More

ಶಿವಮೊಗ್ಗ: ಮೀನುಗಾರಿಕಾ ಇಲಾಖೆಯಿಂದ 2022-23 ರಿಂದ 2024-25 ನೇ ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೀನು ಕೃಷಿಕೊಳಗಳ ನಿರ್ಮಾಣ ಒಟ್ಟು 4.03 ಹೆಕ್ಟೇರ್‌ಗೆ ಸಾಮಾನ್ಯರಿಗೆ 2.39 ಹೆಕ್ಟೇರ್ ಮತ್ತು ಪರಿಶಿಷ್ಟ ಜಾತಿಗೆ 1.64 ಹೆಕ್ಟೇರ್ ಗುರಿ ನೀಡಲಾಗಿದೆ. ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನು ಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಸಹಾಯಕ್ಕೆ ಒಟ್ಟು 8.60 ಹೆಕ್ಟೇರ್ ಸಾಮಾನ್ಯರಿಗೆ 4.80, ಸಾಮಾನ್ಯ ಮಹಿಳೆಗೆ 1.80, ಪರಿಶಿಷ್ಟ ಜಾತಿಗೆ 1.00, ಪರಿಶಿಷ್ಟ ಪಂಗಡಕ್ಕೆ 1.00 ಹೆಕ್ಟೇರ್ ಗುರಿ ನೀಡಲಾಗಿದೆ. ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ, ಮೀನುಮರಿ ಪಾಲನಾ ಘಟಕ ನಿರ್ಮಾಣದ ಬಗ್ಗೆ ಸಹಾಯಕ್ಕೆ ಒಟ್ಟು 7.198 ಹೆಕ್ಟೇರ್ ಸಾಮಾನ್ಯರಿಗೆ 2.03, ಮಹಿಳೆಯರಿಗೆ 2.228, ಪರಿಶಿಷ್ಟ ಜಾತಿಗೆ 1.00 ಹಾಗೂ ಪರಿಶಿಷ್ಟ ಪಂಗಡಕ್ಕೆ 1.94 ಹೆಕ್ಟೇರ್ ಗುರಿ, ಸೈಕಲ್ ವಿತ್ ಐಸ್ ಬಾಕ್ಸ್ ಸಾಮಾನ್ಯ ವರ್ಗಕ್ಕೆ 1 ಗುರಿ,…

Read More

ಚಿನ್ನದ ಉಂಗುರ ಧರಿಸುವುದರಿಂದ ಅದೃಷ್ಟ ಮತ್ತು ಲಕ್ಷ್ಮಿ ದೇವಿಯ ಆಶೀರ್ವಾದ ಸಿಗುತ್ತದೆ ಎಂದು ನಂಬಲಾಗಿದೆ. ಈ ಉಂಗುರವನ್ನು ಪ್ರತಿ ಬೆರಳಿಗೆ ಧರಿಸುವುದರಿಂದ ವಿವಿಧ ಪ್ರಯೋಜನಗಳು ದೊರೆಯುತ್ತವೆ ಎಂದು ಜ್ಯೋತಿಷ್ಯ ಹೇಳುತ್ತದೆ. ಪ್ರತಿ ಬೆರಳಿಗೆ ಚಿನ್ನದ ಉಂಗುರ ಧರಿಸುವುದರಿಂದ ಜ್ಯೋತಿಷ್ಯ ಪ್ರಯೋಜನಗಳೇನು? ನಾವು ಈ ಜ್ಯೋತಿಷ್ಯ ಪೋಸ್ಟ್ ಅನ್ನು ಹಂಚಿಕೊಳ್ಳುತ್ತೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ…

Read More

ಚಿತ್ರದುರ್ಗ : ಪೊಲೀಸ್ ಇಲಾಖೆ ಹಾಗೂ ಸಮುದಾಯದ ನಡುವೆ ವಿಶ್ವಾಸ ಮೂಡಿಸಲು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಹಿರಿಯೂರು ತಾಲ್ಲೂಕು ಡಿವೈಎಸ್ಪಿ ಶಿವಕುಮಾರ್ ಅಭಿಪ್ರಾಯಪಟ್ಟರು. ಇಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ ಹಿರಿಯೂರು ಉಪವಿಭಾಗ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಠಾಣೆಗಳ ವ್ಯಾಪ್ತಿಯಲ್ಲಿನ ಪ್ರತಿ ಗ್ರಾಮದ ಮನೆಗಳಿಗೆ ಪೊಲೀಸರು ಭೇಟಿ‌ ನೀಡಿ ಸಾರ್ವಜನಿಕರ ಆಹವಾಲು ಸ್ವೀಕರಿಸಲಿದ್ದಾರೆ. ಗ್ರಾಮದಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳ ಕಡಿವಾಣ ಹಾಕಲು, ಶಾಂತಿ ಸುವ್ಯವಸ್ಥೆ ಕಾಪಾಡಲು ಈ ಕಾರ್ಯಕ್ರಮ ಸಹಾಯಕವಾಗಿದೆ. ಸಾರ್ವಜನಿಕರು ಸಹಾಕರ ನೀಡಬೇಕು ಎಂದು ತಿಳಿಸಿದರು. ತಹಶೀಲ್ದಾರ್ ಎನ್. ಸಿದ್ದೇಶ್ ಮಾತನಾಡಿ ಕರ್ನಾಟಕ ಪೊಲೀಸ್ ಜನಸ್ನೇಹಿ ಪೊಲೀಸ್ ಆಗಿದ್ದು, ಸಮುದಾಯ ವ್ಯವಸ್ಥೆಯನ್ನು ಬಲಪಡಿಸಿ, ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ವಿನೂತನ ಜನಸ್ನೇಹಿ ಕಾರ್ಯಕ್ರಮವಾಗಿದೆ. ಕಾನೂನು ಸುವ್ಯವಸ್ಥೆಗೆ ಪರಿಹಾರ ನೀಡುವ ದೃಷ್ಟಿಯಿಂದ ಸಾರ್ವಜನಿಕರಿಗೆ ಸರ್ಕಾರ…

Read More

ಶಿವಮೊಗ್ಗ : ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಅಡಿಯಲ್ಲಿ ಬರುವ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯಿಂದ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಗ್ರಾಮಗಳ ಮಾರ್ಗವಾಗಿ ವೇದಾವತಿ ನದಿಗೆ ಸೇರುವ ಹಳ್ಳದ ಮುಖಾಂತರ ವಾಣಿ ವಿಲಾಸ ಸಾಗರಕ್ಕೆ ಸರ್ಕಾರದ ನಿರ್ದೇಶನದಂತೆ ದಿನಾಂಕ: 27-07-2025 ರಿಂದ ನೀರನ್ನು ಹರಿಸಲಾಗುವುದು. ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯು ಭದ್ರಾ ಜಲಾಶಯದಿಂದ ಪ್ರಾರಂಭವಾಗಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕೆರೆ ಕಸಬಾ, ಅಮೃತಾಪುರ, ಅಜ್ಜಂಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಾದು ಹೋಗಿದ್ದು, ಸರ್ಕಾರದ ನಿರ್ದೇಶನದಂತೆ ದಿನಾಂಕ: 27-07-2025 ರಿಂದ ಶಾಂತಿಪುರ ಪಂಪ್ ಹೌಸ್-1, ಜಂಭದಹಳ್ಳ ಅಕ್ವೆಡಕ್ಟ್, ತರೀಕೆರೆ ರೈಲು ಸೇತುವೆ, ಬೆಟ್ಟತಾವರೆಕೆರೆ ಪಂಪ್ ಹೌಸ್-2, ಅಜ್ಜಂಪುರ ಸುರಂಗದ ಮಾರ್ಗವಾಗಿ ಹೆಟ್ಟೂರು ಗ್ರಾಮದ ಹತ್ತಿರವಿರುವ ವೈ-ಜಂಕ್ಷನ್‌ನಿAದ ಹೆದ್ದೂರು, ಕಾಟಿನಗೆರೆ, ಬೆಣಕುಣಿಸೆ, ಮುಗಳಿ, ಬೇಗೂರು, ಆಸಂದಿ, ಹಡಗಲು, ಕಲ್ಕೆರೆ, ಹೆಚ್. ತಿಮ್ಮಾಪುರ, ಕಲ್ಲಹಳ್ಳಿ, ಚಿಕ್ಕಬಳ್ಳೇಕೆರೆ, ಹನುಮನಹಳ್ಳಿ, ಚೌಳಹಿರಿಯೂರು ಮತ್ತು ಹಿ. ತಿಮ್ಮಾಪುರ ಗ್ರಾಮಗಳ ಮಾರ್ಗವಾಗಿ ಹರಿದು ವೇದಾವತಿ…

Read More

ಬೆಂಗಳೂರು: ಧರ್ಮಸ್ಥಳ ಶ್ರೀಕ್ಷೇತ್ರವನ್ನು ರಾಜ್ಯದ ಬಹುತೇಕ ಮಂದಿ ನಂಬಿ ಪೂಜೆ, ಹರಕೆ ಮಾಡಿಕೊಂಡು ಬಂದಿದ್ದಾರೆ. ಕೆಲವು ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಮಾಡುತ್ತಲೇ ಬಂದಿದೆ. ಈ ವಿಚಾರದಲ್ಲಿ ಜನರ ಅನುಮಾನಗಳನ್ನು ನಿವಾರಣೆ ಮಾಡುವುದು ಸರ್ಕಾರದ ಕರ್ತವ್ಯ ಎಂಬುದಾಗಿ ಬಮುಲ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿ.ಕೆ ಸುರೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚಿಸಲಾಗಿದ್ದು, ಕೆಲವರನ್ನು ರಕ್ಷಣೆ ಮಾಡಲು ಧರ್ಮ ಕ್ಷೇತ್ರವನ್ನು ಗುರಿಯಾಗಿಸಲು ಪ್ರಯತ್ನವಿದೆ ಎಂಬ ಚರ್ಚೆ ನಡೆಯುತ್ತಿದೆ ಎಂದು ಕೇಳಿದಾಗ, “ಧರ್ಮಸ್ಥಳ ಶ್ರೀಕ್ಷೇತ್ರವನ್ನು ರಾಜ್ಯದ ಬಹುತೇಕ ಮಂದಿ ನಂಬಿ ಪೂಜೆ, ಹರಕೆ ಮಾಡಿಕೊಂಡು ಬಂದಿದ್ದಾರೆ. ಕೆಲವು ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಮಾಡುತ್ತಲೇ ಬಂದಿದೆ. ಈ ವಿಚಾರದಲ್ಲಿ ಜನರ ಅನುಮಾನಗಳನ್ನು ನಿವಾರಣೆ ಮಾಡುವುದು ಸರ್ಕಾರದ ಕರ್ತವ್ಯ. ಇದರಿಂದ ಶ್ರೀಕ್ಷೇತ್ರಕ್ಕೂ ಒಳ್ಳೆಯದು ಎಂದರು. ಕೆಲವರು ಇದನ್ನು ಹಿಂದೂ ವಿರೋಧಿ ನೀತಿ ಎಂಬ ರೀತಿ ಬಿಂಬಿಸುತ್ತಿದ್ದಾರೆ. ಇದು ಹಿಂದೂ ವಿರೋಧಿ ನೀತಿ ಅಲ್ಲ. ಇದು ಹಿಂದೂಗಳ…

Read More

ಬೆಂಗಳೂರು: “ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದಾಗಿದೆ” ಎಂದು ಬಮುಲ್ ಅಧ್ಯಕ್ಷ ಹಾಗೂ ನಿಕಟಪೂರ್ವ ಸಂಸದ ಡಿ.ಕೆ. ಸುರೇಶ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. “ನಿನ್ನೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಮಹತ್ವದ್ದಾಗಿದೆ. ಇ.ಡಿ ಸಂಸ್ಥೆ ಹಸ್ತಕ್ಷೇಪ, ಕಾರ್ಯವೈಖರಿ ಹಾಗೂ ಎಲ್ಲೆ ಮೀರಿ ವರ್ತನೆ ಮಾಡುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಇದೇ ಮೊದಲಲ್ಲ. ಕಳೆದ ಎರಡು ವರ್ಷಗಳಿಂದ ಸುಪ್ರೀಂ ಕೋರ್ಟ್ ಈ ವಿಚಾರವಾಗಿ ಚಾಟಿ ಬೀಸುತ್ತಲೇ ಇದೆ. ಇ.ಡಿ. ಸಂಸ್ಥೆ ರಾಜಕೀಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿರುವುದನ್ನು ನೋಡುತ್ತಿದ್ದೇವೆ. ಕಳೆದ ವಾರ ಮದ್ರಾಸ್ ಹೈಕೋರ್ಟ್ ಕೂಡ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತ್ತು. ರಾಜಕೀಯ ಪ್ರೇರಿತ ದಾಳಿ ಮಾಡಿ ವಿರೋಧ ಪಕ್ಷಗಳನ್ನು ಬಗ್ಗುಬಡಿಯಲು ಕೇಂದ್ರ ಸರ್ಕಾರ ಇ.ಡಿ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಮುಂದಿನ ದಿನಗಳಲ್ಲಿಯಾದರೂ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಬಿಟ್ಟು, ಅಭಿವೃದ್ಧಿ…

Read More