Author: kannadanewsnow09

ಹಾವೇರಿ: ಜಿಲ್ಲೆಯಲ್ಲಿ ಭಾರಿ ಸುಂಟರಗಾಳಿಗೆ ಬೃಹತ್ ಗಾತ್ರದ ಪೆಂಡಾಲ್ ಒಂದು ಹಾರಿ ಬಿದ್ದಿದೆ. ಇದರ ಸಮೀಪದಲ್ಲೇ ಇದ್ದಂತ ಸಚಿವ ಸತೀಶ್ ಜಾರಕಿಹೊಳಿ ಅವರು ಕೂದಲೆಳೆಯ ಅಂತರದಿಂದ ಬಜಾವ್ ಆಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಲ್ಲಿ ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆಯನ್ನು ಸಚಿವ ಸತೀಶ್ ಜಾರಕಿಹೊಳಿ ನೀಡುತ್ತಿದ್ದರು. ಈ ಸಂದರ್ಭದಲ್ಲೇ ಭಾರಿ ಸುಂಟರಗಾಳಿ ಉಂಟಾಗಿ ಬೃಹತ್ ಗಾತ್ರದ ಪೆಂಡಾಲ್ ಹಾರಿ ಬಿದ್ದಿದೆ. ಅನಾಹುತವೊಂದು ತಪ್ಪಿ, ಸಚಿವ ಸತೀಶ್ ಜಾರಕಿಹೊಳಿ ಬಚಾವ್ ಆಗಿದ್ದಾರೆ. https://kannadanewsnow.com/kannada/there-was-not-a-single-commotion-until-janardhana-reddy-set-foot-in-ballari-dcm-d-k-shivakumar/

Read More

ಬೆಂಗಳೂರು : “ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ. ಸಣ್ಣ ಅಹಿತಕರ ಘಟನೆ ಆಗಿರಲಿಲ್ಲ. ಸಣ್ಣ ಎಫ್ಐಆರ್ ಇರಲಿಲ್ಲ. ಅವರು ಬಂದಮೇಲೆ ಗಲಭೆ ಆಗಿದೆ. ಹೀಗಾಗಿ ಅವರಿಗೆ ಮಾತನಾಡುವ ಹಕ್ಕಿಲ್ಲ. ಪಕ್ಷ ನಮ್ಮ ಶಾಸಕ ಭರತ್ ರೆಡ್ಡಿ ಬೆನ್ನಿಗೆ ನಿಲ್ಲಲಿದೆ. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಯಾರು ಎಂಬುದು ತನಿಖೆಯಿಂದ ಹೊರಬರಲಿದ್ದು, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ಮೊದಲ ಬಾರಿಗೆ ಬಳ್ಳಾರಿಯಲ್ಲಿ ನಮ್ಮ ಸರ್ಕಾರ ವಾಲ್ಮೀಕಿ ಮಹರ್ಷಿಯವರ ಪುತ್ಥಳಿ ನಿರ್ಮಿಸುತ್ತಿದೆ. ನಮ್ಮ ಶಾಸಕರು ಅದರ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ನಗರದ ಎಲ್ಲೆಡೆ ಅದರ ಪೋಸ್ಟರ್ ಗಳನ್ನು ಹಾಕಿದ್ದಾರೆ. ಅದರಲ್ಲಿ ತಪ್ಪೇನಿದೆ? ನಮ್ಮ ಮನೆ ಮುಂದೆಯೂ ಬಿಜೆಪಿಯವರು ಪೋಸ್ಟರ್ ಹಾಕುತ್ತಿರುತ್ತಾರೆ. ಅದನ್ನು ನಾನು ಬೇಡ ಎನ್ನಲು ಸಾಧ್ಯವೇ? ಈ ಪೋಸ್ಟರ್…

Read More

ಬೆಂಗಳೂರು: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.‌ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ ಕುರಿತು ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು. ಮೋದಿ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆಯುವ ಮೂಲಕ ವಿಬಿ ಜಿ ರಾಮ್ ಜಿ ಹೆಸರಿನಲ್ಲಿ ಹೊಸ ಕಾಯ್ದೆ ಜಾರಿಗೆ ತರುವಾಗ, ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿಲ್ಲ. ಭಾರತೀಯರ ಅಭಿಪ್ರಾಯ ಪಡೆಯದೆ ನೇರವಾಗಿ ಹೊಸ ಕಾಯ್ದೆ ಜಾರಿಗೊಳಿಸುವ ಮೂಲಕ ಸರ್ವಾಧಿಕಾರಿ ಧೋರಣೆಯನ್ನು ಪ್ರದರ್ಶಿಸಿದೆ ಎಂದರು. ಮನಮೋಹನ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ ಉದ್ಯೋಗದ ಹಕ್ಕು, ಮಾಹಿತಿ ಹಕ್ಕು, ಶೈಕ್ಷಣಿಕ ಹಕ್ಕು ಮೊದಲಾದ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನರಿಗೆ ಹೆಚ್ಚಿನ ಅಧಿಕಾರವನ್ನು ನೀಡುವ ಕಾರ್ಯವನ್ನು ಮಾಡಿತ್ತು. ಮೋದಿ ಸರ್ಕಾರ ಡಿಸೆಂಬರ್ 17ರಂದು ಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡಿಸಿ ಡಿ.18ರಂದು ಅಂಗೀಕಾರ ಪಡೆದಿದೆ.…

Read More

ಬೆಂಗಳೂರು: ಮತದಾರರ ಪಟ್ಟಿ ಮ್ಯಾಪಿಂಗ್ ಮಾಡುವ ಕೆಲಸಕ್ಕೆ ಪ್ರೌಢಶಾಲಾ ಶಿಕ್ಷಕರ ಬದಲಿಗೆ ಅಧಿಕಾರಿಗಳನ್ನೇ ನಿಯೋಜಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ರಾಜ್ಯ ಸರಕಾರಕ್ಕೆ ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಅವರು ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಮತ್ತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಮಾನ್ಯತೆ ನವೀಕರಣದ ಪ್ರತಿಯನ್ನು ಕಡ್ಡಾಯಗೊಳಿಸದೆ ಎಲ್ಲಾ ವಿದ್ಯಾರ್ಥಿಗಳಿಗೆ ಅದೇ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಲು ಕ್ರಮ ವಹಿಸಬೇಕು ಹಾಗೂ ಮಕ್ಕಳ ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ 2002ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಕಾರ್ಯಗಳಿಂದ ಪ್ರೌಢಶಾಲಾ ಶಿಕ್ಷಕರನ್ನು ಕೈಬಿಟ್ಟು ಬೇರೆ ಇಲಾಖೆಯ ಅಧಿಕಾರಿಗಳಿಂದ ಈ ಕಾರ್ಯವನ್ನು ಮಾಡಿಸಬೇಕೆಂದು ಕೋರಿ ಮನವಿ ಪತ್ರಗಳನ್ನು ನೀಡಿದರು.…

Read More

ಶಿವಮೊಗ್ಗ: ಕಳೆದ ಕೆಲ ವರ್ಷಗಳಿಂದ ಸಾಗರದ ಡಿಎಫ್ಓ ಆಗಿ ಕಾರ್ಯ ನಿರ್ವಹಿಸುತ್ತಿದ್ದಂತ ಮೋಹನ್ ಕುಮಾರ್ ಅವರನ್ನು ಸಿಎಫ್ ಆಗಿ ಪ್ರಮೋಷನ್ ನೀಡಲಾಗಿದೆ‌‌. ಈ ಹಿನ್ನೆಲೆಯಲ್ಲಿ ಸಾಗರದ ನೂತನ ಡಿಎಫ್ಓ ಆಗಿ ಮೊಹಮ್ಮದ್ ಫಯಾಜುದ್ದೀನ್ ನೇಮಕ ಮಾಡಲಾಗಿದೆ. 2012ನೇ ಸಾಲಿನ ಕರ್ನಾಟಕ ಕೇಡರ್ ಐಎಫ್ಎಸ್ ಅಧಿಕಾರಿ ಮೋಹನ್ ಕುಮಾರ್. ಡಿ ಅವರಿಗೆ ಸರ್ಕಾರ ಪದೋನ್ನತಿ ನೀಡಿದೆ‌. ದಿನಾಂಕ 01-01-2026ರಿಂದ ಜಾರಿಗೆ ಬರುವಂತೆ ಅರಣ್ಯ ಸಂರಕ್ಷಣಾಧಿಕಾರಿಯಾಗಿ ( Conservator of Forests-CF) ಆಗಿ ಪ್ರಮೋಷನ್ ನೀಡಲಾಗಿದೆ. ಸಾಗರದ ಡಿಎಫ್ಓ ಆಗಿದ್ದಂತ ಮೋಹನ್ ಕುಮಾರ್.ಡಿ ಅವರನ್ನು ಚಿಕ್ಕಮಗಳೂರು ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಆ ಮೂಲಕ ಸಾಗರದ ಡಿಎಫ್ಓ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ. ಇನ್ನೂ ಹುಣಸೂರು ವಿಭಾಗದಲ್ಲಿ ಎಸ್ ಎಫ್ ಎಸ್ ಆಗಿದ್ದಂತ ಮೊಹಮ್ಮದ್ ಫಯಾಜುದ್ದೀನ್ ಅವರನ್ನು ಸಾಗರದ ಡಿಎಫ್ಓ ಆಗಿ ನೇಮಕ ಮಾಡಲಾಗಿದೆ. ಅವರು ಸಾಗರದ ನೂತನ ಡಿಎಫ್ಓ ಆಗಿಯೂ ಅಧಿಕಾರಿ ವಹಿಸಿಕೊಂಡಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು…

Read More

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಯಾವುದೇ ಇಲಾಖೆಯವರು ಅನುಮತಿ ಪಡೆಯದೆ ರಸ್ತೆ ಕತ್ತರಿಸಿದರೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಬೆಸ್ಕಾಂ, ಕೆಪಿಟಿಸಿಎಲ್, ಜಲಮಂಡಳಿ ಹಾಗೂ ಗೇಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ಕೈಗೊಂಡಿರುವ ಕಾಮಗಾರಿಗಳ ಅನುಷ್ಠಾನದ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳ ಕುರಿತು ಇಂದು ನಡೆದ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ರಸ್ತೆ ಕತ್ತರಿಸುವ ಅಗತ್ಯವಿದ್ದಲ್ಲಿ “ಮಾರ್ಕ್ಸ್” ತಂತ್ರಾಂಶದ ಮೂಲಕ ಅನುಮತಿ ಪಡೆಯುವುದು ಕಡ್ಡಾಯ. ಈ ಪೈಕಿ ಯಾವುದೇ ಇಲಾಖೆಯಾಗಲಿ ಅನುಮತಿಯಿಲ್ಲದೆ ರಸ್ತೆ ಕತ್ತರಿಸುವಂತಿಲ್ಲ ಎಂದು ಅವರು ಎಚ್ಚರಿಸಿದರು. ಆಯಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಕತ್ತರಿಸಲು ಮಾರ್ಕ್ಸ್ ತಂತ್ರಾಂಶದ ಮೂಲಕ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ ಕೂಡಲೇ ಅನುಮತಿ ನೀಡಬೇಕು. ಅನುಮತಿ ದೊರಕಿದ ನಂತರ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ, ರಸ್ತೆ ದುರಸ್ತಿ ಕಾರ್ಯವನ್ನು ಸಮರ್ಪಕವಾಗಿ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಯಾವುದೇ ಇಲಾಖೆ ಮುಂದಿನ ದಿನಗಳಲ್ಲಿ…

Read More

ಬೆಂಗಳೂರು: ಕಂದಾಯ ಅದಾಲತ್ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.  ಈ ಕುರಿತಂತೆ ಕಂದಾಯ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ರಾಜ್ಯ ಸರ್ಕಾರದ ವಿವಿಧ ಆದೇಶಗಳಲ್ಲಿ ಕಾಲಕಾಲಕ್ಕೆ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಮುಂದುವರೆಸಿಕೊಂಡು ಬರಲಾಗುತ್ತಿದೆ. ಅದರಂತೆ ದಿನಾಂಕ:30.06.2025 ಕ್ಕೆ ಸದರಿ ಪ್ರತ್ಯಾಯೋಜನೆಯ ಅವಧಿಯು ಮುಕ್ತಾಯಗೊಂಡಿರುತ್ತದೆ ಎಂದಿದ್ದಾರೆ. ಸದರಿ ಕಂದಾಯ ಅದಾಲತ್ ಯೋಜನೆಯನ್ನು 2014ನೇ ಸಾಲಿನಿಂದ ಆರಂಭಿಸಿದ್ದು, ಜೂನ್ 2025 ರವರೆಗೂ ವಿಸ್ತರಿಸಲಾಗಿರುತ್ತದೆ. ಆದಾಗ್ಯೂ ಪಹಣಿ ತಿದ್ದುಪಡಿ ಪ್ರಕರಣಗಳನ್ನು ವಿಲೇವಾರಿ ಮಾಡುವ ಸಂಬಂಧ ಕಂದಾಯ ಅದಾಲತ್‌ ಅವಧಿಯನ್ನು ವಿಸ್ತರಿಸಲು ಕೋರಿ ಕೆಲವು ತಾಲ್ಲೂಕುಗಳಿಂದ ಮನವಿಗಳು ಸ್ವೀಕೃತವಾಗಿರುತ್ತವೆ ಎಂದು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಕಂದಾಯ ಅದಾಲತ್ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸುವ ಕುರಿತಂತೆ ತಮ್ಮ ಸ್ಪಷ್ಟ ಅಭಿಪ್ರಾಯವನ್ನು 15 ದಿನಗಳಲ್ಲಿ ಸಲ್ಲಿಸಲು ತಿಳಿಸಿದ್ದಾರೆ.

Read More

ಶಿವಮೊಗ್ಗ: ಬಹುತೇಕರು ಅಂಡ್ರಾಯ್ಡ್ ಸ್ಮಾರ್ಟ್ ಪೋನ್ ಕಳೆದು ಹೋದ್ರೆ ಮುಗೀತು. ಸಿಗೋದೇ ಡೌಟ್ ಎಂಬ ನಿರ್ಧಾರಕ್ಕೆ ಬಂದಿರುತ್ತೀರಿ. ಆದರೇ ಅದು ತಪ್ಪು. ನಿಮ್ಮ ಮೊಬೈಲ್ ಕಳೆದು ಹೋದಾಗ ತಪ್ಪದೇ ಹೀಗೆ ಮಾಡಿದ್ರೆ ಸಿಗೋದು ಗ್ಯಾರಂಟಿ ಎನ್ನುವುದಕ್ಕೆ ಸಾಕ್ಷಿಯಾಗಿ ಮುಂದೆ ಸುದ್ದಿ ಓದಿ. ಶಿವಮೊಗ್ಗ ಜಿಲ್ಲೆಯ ಸಾಗರದ ಉಳವಿ ಬಳಿಯ ಕಾನಹಳ್ಳಿಯ ಆಕಾಶ್ ಎಂಬಾತ ಸಾಗರದ ಐಟಿಐ ಕಾಲೇಜು ಬಳಿಯಲ್ಲಿ ತಮ್ಮ ಮೊಬೈಲ್ ಕಳೆದುಕೊಂಡಿದ್ದರು. ಕೂಡಲೇ ಸಾಗರ ಗ್ರಾಮಾಂತರ ಠಾಣೆಗೆ ತೆರಳಿ, ದೂರು ನೀಡಿದ್ದರು. ಇದೇ ಮಾದರಿಯಲ್ಲೇ ಭರತ್ ಎಂಬಾತ ತ್ಯಾಗರ್ತಿ ಕ್ರಾಸ್ ಹತ್ತಿರ ತಮ್ಮ ಮೊಬೈಲ್ ಕಳೆದುಕೊಂಡಿದ್ದರು. ಅವರು ಕೂಡ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಇನ್ನೂ ಪರಶುರಾಮ್ ಎಂಬುವರು ತಾಳಗುಪ್ಪ ಸಂತೆಯಲ್ಲಿ ತಮ್ಮ ಮೊಬೈಲ್ ಕಳೆದುಕೊಂಡಿದ್ದರು. ಅವರು ಸಹ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಮೊಬೈಲ್ ಕಳೆದುಕೊಂಡಿದ್ದವರ ಮಾಹಿತಿಯನ್ನು ಆಧರಿಸಿ, ಜೊತೆಗೆ ಮೊಬೈಲ್ ಬಳಕೆದಾರರಿಗೆ ಕೇಂದ್ರ ಸರ್ಕಾರದ Central Equipment Identity…

Read More

ಧಾರವಾಡ : ಅಬಕಾರಿ ಇಲಾಖೆಯಲ್ಲಿ ಸ್ಥಗಿತಗೊಂಡಿರುವ, ಮಂಜೂರಾಗದೇ ಬಾಕಿ ಉಳಿದಿರುವ ಸನ್ನದುಗಳನ್ನು ಭಾರತ ಸರ್ಕಾರದ ಸ್ವಾಮ್ಯದ ಸಂಸ್ಥೆಯಾದ ಎಮ್‍ಎಸ್‍ಟಿಸಿ ಲಿಮಿಟೆಡ್‍ನ ಇ-ಪೋರ್ಟಲ್ ನಲ್ಲಿ ಇ-ಹರಾಜು ಮಾಡಲು ಎಮ್‍ಎಸ್‍ಟಿಸಿ https://www.mstcecommerce.com ನಲ್ಲಿ ಬಿಡ್ಡುಗಳನ್ನು ಆಹ್ವಾನಿಸಲಾಗಿದೆ. ಹರಾಜು ನಡೆಯುವ ಮತ್ತು ಅಂಗೀಕಾರ ಪತ್ರ (ಎಲ್‍ಓಎ) ನೀಡುವ ವರ್ಷವನ್ನೂ ಒಳಗೊಂಡಂತೆ ಐದು ಅಬಕಾರಿ ವರ್ಷಗಳ ಅವಧಿಗೆ ಅನ್ವಯಿಸುತ್ತದೆ. ಕರ್ನಾಟಕ ರಾಜ್ಯದ್ಯಾಂತ ಒಟ್ಟು 569 ಸನ್ನದುಗಳನ್ನು ಇ-ಹರಾಜು ಮಾಡಲು ಉದ್ದೇಶಿಸಿದ್ದು, ಧಾರವಾಡ ಜಿಲ್ಲೆಗೆ ಒಟ್ಟು 15 ಸಿಎಲ್-2ಎ(ಎಸ್‍ಸಿ-ಎ-1, ಎಸ್‍ಸಿ-ಬಿ-1, ಎಸ್‍ಸಿ-ಸಿ-1, ಎಸ್‍ಟಿ-1/ ಜನರಲ್-11) ಹಾಗೂ 4 ಸಿಎಲ್-9ಂ ಸನ್ನದುಗಳನ್ನು ಜನರಲ್ ಕೆಟಗೆರಿ (General Category) ಹಂಚಿಕೆ ಮಾಡಿರುತ್ತಾರೆ. ಡಿಸೆಂಬರ್ 22, 2025 ರಿಂದ ಬಿಡ್ಡುದಾರರ ನೋಂದಣಿ ಪ್ರಕ್ರಿಯೆ ಆನ್‍ಲೈನ್‍ನಲ್ಲಿ ಪ್ರಾರಂಭವಾಗಿರುತ್ತದೆ. ಸದರಿ ವಿಷಯದ ಕುರಿತು ಜನೆವರಿ 05, 2026 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ರಾಯಾಪೂರ ಕೆ.ಎಮ್.ಎಫ್ ತರಬೇತಿ ಕೇಂದ್ರದಲ್ಲಿ ತರಬೇತಿಯನ್ನು ಆಯೋಜಿಸಲಾಗಿರುತ್ತದೆ ಎಂದು ಅಬಕಾರಿ ಉಪ ಆಯುಕ್ತ ರಮೇಶಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಅಂದಹಾಗೇ…

Read More

ಬೆಂಗಳೂರು: ಬಳ್ಳಾರಿಯಲ್ಲಿ ನಡೆದಿರುವ ಗುಂಡಿನ ದಾಳಿ, ಗಲಭೆ ಪ್ರಕರಣದ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿಯಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಬಳ್ಳಾರಿ ಘಟನೆಯನ್ನು ಟಿವಿಯಲ್ಲಿ ನೋಡಿದ್ದೇನೆ. ಗುಂಪು ಘರ್ಷಣೆ ಆಗಿದೆ. ಶಾಸಕರು, ಇನ್ನೂ ಯಾರು ಯಾರು ಭಾಗಿ ಆಗಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದರು. ಗಲಭೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಗುಂಡು ಹೊಡೆದವರು ಯಾರು ಎಂದು ಗೊತ್ತಿಲ್ಲ. ಜನಾರ್ದನ ರೆಡ್ಡಿ ಅವರು ಮನೆಯಲ್ಲಿ ಇದ್ದಿದ್ದರೆ ಅಪಾಯ ಆಗ್ತಿತ್ತು ಎನ್ನುವ ಸುದ್ದಿ ನೋಡಿದೆ. ಎಲ್ಲಾ ವರದಿ ಬಂದ ಮೇಲೆ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಈಗಾಗಲೇ ನಾಲ್ಕು FIR ಗಳು ಆಗಿವೆಯಂತೆ. ಖಾಸಗಿ ವ್ಯಕ್ತಿ ಹೊರಗಡೆಯಿಂದ ಗುಂಡು ಹೊಡೆದಿದ್ದು ಎಂದು ಸುದ್ದಿ ನೋಡಿದೆ. ನಿಖರವಾಗಿ ಹೀಗೆ ಎಂದು ಹೇಳಲು ನನಗೆ ಕಷ್ಟ. ಶ್ರೀರಾಮುಲು ಅವರು ಜನಾರ್ಧನ ರೆಡ್ಡಿ ಅವರಿಗೆ ಗೆ ರಕ್ಷಣೆ ಕೊಡಬೇಕು ಎಂದು ಹೇಳಿದ್ದನ್ನು ಕೇಳಿದ್ದೇನೆ ಎಂದರು ಮಾಜಿ…

Read More