Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭಗೊಂಡಿದೆ. ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವಂತ ಕಾರ್ಯಕ್ಕೆ ಸಿಎಂ ಸಿದ್ಧರಾಮಯ್ಯ ಇಂದು ಚಾಲನೆ ನೀಡಿದರು. ಆ ಬಳಿಕ ರಾಜ್ಯದ ಜನತೆಗೆ ಈ ಮನವಿಯನ್ನು ಅವರು ಮಾಡಿದ್ದಾರೆ. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆ ಕಾರ್ಯದಲ್ಲಿ ಮನೆ ಪಟ್ಟಿ ಅಂದರೆ ಹೌಸ್ ಲಿಸ್ಟಿಂಗ್ ಎಕ್ಸರ್ಸೈಜ್ ಮಾಡಲಾಗುತ್ತಿದೆ. ಇದರ ಭಾಗವಾಗಿ ಇಂದು ಆಯೋಗದ ಸಿಬ್ಬಂದಿಗಳು ನನ್ನ ನಿವಾಸಕ್ಕೆ ಭೇಟಿ ನೀಡಿ, ಸ್ಟಿಕ್ಕರ್ ಅಂಟಿಸಿದರು ಎಂದಿದ್ದಾರೆ. ಇದೇ ಮಾದರಿಯಲ್ಲಿ ರಾಜ್ಯದ ಪ್ರತಿ ಮನೆಗೆ ಸಿಬ್ಬಂದಿಗಳು ಭೇಟಿನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿನೀಡಿ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಈ ವೇಳೆ ಅವರಿಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಕೋರಿದ್ದಾರೆ. https://twitter.com/CMofKarnataka/status/1963962874822340907 https://kannadanewsnow.com/kannada/on-the-13th-and-14th-gaganachukki-waterfall-festival-mla-p-m-narendra-swamy/ https://kannadanewsnow.com/kannada/prime-minister-narendra-modi-surpassed-other-leaders-in-the-sco/
ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ವತಿಯಿಂದ ಕೊಡಮಾಡುವ 2025ನೇ ಸಾಲಿನ ರಾಷ್ಟ್ರೀಯ ಮಟ್ಟದ ‘ಎಫ್ಕೆಸಿಸಿಐ ಇಂಡಿಯಾ ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ ಮತ್ತು ಸುಸ್ಥಿರತೆ’ ಪ್ರಶಸ್ತಿ ಶಿಲ್ಪಾ ಫೌಂಡೇಷನ್ ಲಭಿಸಿದೆ. ಕೆ.ಜಿ.ರಸ್ತೆಯ ಸರ್. ಎಂ.ವಿ.ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫೌಂಡೇಷನ್ ಸಂಸ್ಥಾಪಕ ಅಚ್ಚುತ್ಗೌಡಗೆ ಸಚಿವ ಜಿ.ಪರಮೇಶ್ವರ್ ಪ್ರಶಸ್ತಿ ಪ್ರದಾನ ಮಾಡಿದರು. 11 ವರ್ಷಗಳಿಂದ ಸಾಮಾಜಿಕ ಹೊಣೆಗಾರಿಕೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ನಮ್ಮ ಸಂಸ್ಥೆಗೆ ರಾಷ್ಟ್ರೀಯ ಮಟ್ಟದ ಗೌರವ ದೊರೆತ್ತಿರುವುದು ಹೆಮ್ಮೆ ತಂದಿದೆ. ಸಿಎಸ್ಆರ್ ನಿಧಿ ಬಳಸಿ ಫೌಂಡೇಶನ್ ಮೂಲಕ ಉಚಿತವಾಗಿ ಸಾವಿರಾರು ಸರ್ಕಾರಿ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿದ್ದೇವೆ. ಕೆ.ಆರ್.ಸರ್ಕಲ್ ಸೇರಿ ಬೆಂಗಳೂರಿನ 3 ಸ್ಥಳಗಳಲ್ಲಿ ಲಕ್ಷಾಂತರ ರೂ.ವೆಚ್ಚದಲ್ಲಿ ‘ಸ್ಮಾರ್ಟ್ ಬಸ್ ನಿಲ್ದಾಣ’ ನಿರ್ಮಿಸಿದ್ದೇವೆ. ಹಲವು ಸಮಾಜಮುಖಿ ಕಾರ್ಯಗಳಲ್ಲಿ ಸಂಸ್ಥೆ ತೊಡಗಿಸಿಕೊಂಡಿದೆ. ಪ್ರಶಸ್ತಿ ಸಿಕ್ಕಿರುವುದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಕೆಲಸ ಮಾಡುವುದಕ್ಕೆ ಪ್ರೇರಣೆ ಜೊತೆಗೆ ಜವಾಬ್ದಾರಿಯೂ ಹೆಚ್ಚಿದಂತಾಗಿದೆ ಎಂದು ಅಚ್ಚುತ್ಗೌಡ ಹರ್ಷ ವ್ಯಕ್ತಪಡಿಸಿದ್ದಾರೆ. ಆರೋಗ್ಯ, ಶಿಕ್ಷಣ, ಕೌಶಲಾಭಿವೃದ್ಧಿ,…
ನವದೆಹಲಿ: ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬಹು ಚರ್ಚಿತ ಚೀನಾ ಭೇಟಿ ಈಗ ನಮ್ಮ ಮುಂದಿವೆ. ಭೌಗೋಳಿಕ ರಾಜಕೀಯ ಮತ್ತು ದ್ವಿಪಕ್ಷೀಯ ನಿರೀಕ್ಷೆಗಳ ಸಾಮಾನ್ಯ ವಿಶ್ಲೇಷಣೆಗಳನ್ನೂ ಮೀರಿ ಚೀನಾದ ಸಾಮಾಜಿಕ ಮಾಧ್ಯಮ ಬಳಕೆದಾರರಿಗೆ ಮೋದಿ ಅವರ ದೈಹಿಕ ಭಂಗಿ ಅಥವಾ ನಡವಳಿಕೆ(ಬಾಡಿ ಲಾಂಗ್ವೇಜ್), ನೋಟ, ಸಾಂಕೇತಿಕ ಸನ್ನೆಗಳು ಮತ್ತು ಅನಿವಾರ್ಯವಾಗಿ ಮೀಮ್ಸ್ಗಳಿಂದ ಹೆಚ್ಚು ಆಕರ್ಷಿತರಾದಂತೆ ಕಂಡುಬಂದರು. ಕೆಲವು ವ್ಯಾಖ್ಯಾನಗಳು ಭೇಟಿಯ ಸೌಹಾರ್ದಯುತ ಧಾಟಿಯನ್ನು ಒತ್ತಿಹೇಳಿದವು, ಆದರೆ ಅದರಲ್ಲಿ ಹೆಚ್ಚಿನವು ಲಘುಧಾಟಿಯಲ್ಲಿವೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿಟ್ಟುಕೊಂಡು ಆಶ್ಚರ್ಯಕರ ಸಂಖ್ಯೆಯ ಜೋಕ್ಗಳನ್ನು ಮಾಡಲಾಗಿದೆ. ಒಂದು ವೇಳೆ ಶಾಂಘೈ ಸಹಕಾರ ಸಂಸ್ಥೆ(ಎಸ್ ಸಿಒ) ಶೃಂಗಸಭೆ ರಾಜತಾಂತ್ರಿಕ ಪ್ರದರ್ಶನವಾಗಿದ್ದರೆ, ಆಗ ಮೋದಿ ಅವರು ಆನ್ ಲೈನ್ ನನ್ನು ಸೆಳೆದಿರುವ ಪರಿಯನ್ನು ಗಮನಿಸಿದರೆ ನಿಸ್ಸಂದೇಹವಾಗಿ ಮುಂಚೂಣಿ ನಟರಾಗಿರುತ್ತಿದ್ದರು, “ದೂರದ ಸಂಬಂಧಿ ಹತ್ತಿರದ ನೆರೆಹೊರೆಯವರಂತೆ ಒಳ್ಳೆಯವರಲ್ಲ” ಎಂದು ರೆನ್ಮಿನ್ ವಿಶ್ವವಿದ್ಯಾಲಯದ ಚೊಂಗ್ಯಾಂಗ್ ಇನ್ಸ್ಟಿಟ್ಯೂಟ್ ಫಾರ್ ಫೈನಾನ್ಷಿಯಲ್ ಸ್ಟಡೀಸ್ನ ಸಂಶೋಧಕ…
ಮಂಡ್ಯ: ಜನರ ಕಣ್ಮನ ಸೆಳೆಯುವ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿರುವ ಗಗನಚುಕ್ಕಿ ಜಲಪಾತದ ಉತ್ಸವವನ್ನು ಇದೇ ಸೆಪ್ಟೆಂಬರ್ 13 ಹಾಗೂ 14 ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿ ಗಗನಚುಕ್ಕಿ ಜಲಪಾತವನ್ನು ಉನ್ನತ ಪ್ರವಾಸಿ ತಾಣ ಮಾಡಿ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು 2 ದಿನಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಾಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು. ರೊಟ್ಟಿಕಟ್ಟೆಯ ಬಳಿ ನೀರು ಸರಬರಾಜು ಕಾಮಗಾರಿ ನಡರಯುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ಮಳ್ಳಿ ಕ್ಯಾತನಹಳ್ಳಿಯ ಬಳಿ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ವೇದಿಕೆಯ ಬಳಿ ಜಲಪಾತದ ಮನಮೋಹಕ ದೃಶ್ಯಗಳನ್ನು ಸವಿಯಲು ಎಲ್.ಇ.ಡಿ ವ್ಯವಸ್ಥೆ ಸಹ ಮಾಡಲಾಗುವುದು ಎಂದರು. ಉಚಿತ ಬಸ್ ವ್ಯವಸ್ಥೆ ಪ್ರವಾಸಿಗರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಹಾಗೂ ಸುಗಮ ವಾಹನ ಸಂಚಾರದ ದೃಷ್ಟಿಯಿಂದ ಮಳವಳ್ಳಿ ತಾಲ್ಲೂಕಿನಿಂದ ಗಗನಚುಕ್ಕಿಯ…
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಇವಿಎಂ ಬದಲು ಬ್ಯಾಲೆಟ್ ಪತ್ರಗಳ ಮೂಲಕ ನಡೆಸಲು ಮುಂದಾಗಿರುವ ನಿರ್ಧಾರವನ್ನು ನಾನು ಮನಃಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ನಿರ್ಧಾರವು ನಮ್ಮ ಪ್ರಜಾಪ್ರಭುತ್ವದ ಆಶಯಗಳನ್ನು ಬಲಪಡಿಸುವ ಮತ್ತು ಮತದಾರರ ನಂಬಿಕೆಯನ್ನು ಮರುಸ್ಥಾಪಿಸುವ ಒಂದು ದಿಟ್ಟ ಹೆಜ್ಜೆಯಾಗಿದೆ ಎಂಬುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ತಿಳಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಇವಿಎಂನ ವಿಶ್ವಾಸಾರ್ಹತೆಯ ಕುರಿತು ಹಲವು ಅನುಮಾನಗಳು ಮತ್ತು ಪ್ರಶ್ನೆಗಳು ರಾಜಕೀಯ ವಲಯಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿವೆ. ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿನ ತಾಂತ್ರಿಕ ದೋಷಗಳು, ಹ್ಯಾಕಿಂಗ್ ಸಾಧ್ಯತೆಗಳು ಮತ್ತು ಫಲಿತಾಂಶಗಳ ಕುರಿತು ವ್ಯಕ್ತವಾಗುತ್ತಿರುವ ಗೊಂದಲಗಳು ಮತದಾರರಲ್ಲಿ ವಿಶ್ವಾಸದ ಕೊರತೆಯನ್ನು ಸೃಷ್ಟಿಸಿವೆ. ನಮ್ಮ ಪ್ರಜಾಪ್ರಭುತ್ವದ ಹೃದಯ ಭಾಗವಾಗಿರುವ ಮತದಾನ ಪ್ರಕ್ರಿಯೆಯು ಸಂಪೂರ್ಣವಾಗಿ ಪಾರದರ್ಶಕ ಮತ್ತು ಎಲ್ಲರ ನಂಬಿಕೆಗೆ ಅರ್ಹವಾಗಿರಬೇಕು. ಕಾಂಗ್ರೆಸ್ ಪಕ್ಷದ ಮುಖಂಡರು, ಲೋಕಸಭೆ ವಿರೋಧ ಪಕ್ಷದ ನಾಯಕರಾದ…
ಬೆಂಗಳೂರು: ಬೆಂಗಳೂರು ತನ್ನ ನಾವೀನ್ಯತೆ ಮತ್ತು ಸೃಜನಶೀಲತೆಗೆ ಹೆಸರುವಾಸಿಯಾದ ನಗರ. ಆದರೆ ಈ ಬಾರಿ, ನಗರದ ಆಟೋರಿಕ್ಷಾ ಚಾಲಕರು ತಮ್ಮ ಸೃಜನಶೀಲತೆಯಿಂದ ಇಂಟರ್ನೆಟ್ ಅನ್ನು ಬೆರಗುಗೊಳಿಸಿದ್ದರು. ನಗರದ ಟ್ರಾಫಿಕ್ನಲ್ಲಿ ಆಟೋ ಚಾಲಕನೊಬ್ಬ ದಕ್ಷತಾಶಾಸ್ತ್ರದ ಕುರ್ಚಿಯನ್ನು ಅಳವಡಿಸಿಕೊಂಡಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಫೋಟೋವನ್ನು ನರಸಿಂಹ ಕಂದೂರಿ ಎಂಬ ಬಳಕೆದಾರರು ‘X’ (ಹಿಂದೆ ಟ್ವಿಟರ್) ನಲ್ಲಿ ಹಂಚಿಕೊಂಡಿದ್ದಾರೆ, ಅವರು “ಇಂದು ದಕ್ಷತಾಶಾಸ್ತ್ರದ ಆಟೋದಿಂದ ಆಶೀರ್ವಾದ ಪಡೆದಿದ್ದೇನೆ” ಎಂದು ಹೇಳಿದ್ದಾರೆ. https://twitter.com/NarasimhaKan/status/1963461558824317100 ನರಸಿಂಹ ಅವರಿಗೆ ಪ್ರತ್ಯುತ್ತರಿಸುತ್ತಾ, ಮತ್ತೊಬ್ಬ ಬಳಕೆದಾರ ಅಖಿಲೇಶ್ ಯಾದವ್, ಆಟೋ ಚಾಲಕನೊಬ್ಬ ಗೇಮಿಂಗ್ ಚೇರ್ ಅಳವಡಿಸಿರುವ ಮತ್ತೊಂದು ಫೋಟೋವನ್ನು ಹಂಚಿಕೊಂಡಿದ್ದಾರೆ. “ನನ್ನದರಲ್ಲಿ ಗೇಮಿಂಗ್ ಚೇರ್ ಇತ್ತು. ಟ್ರಾಫಿಕ್ನಲ್ಲಿ ಯೂಟ್ಯೂಬ್ ಅನ್ನು ಸಂಪೂರ್ಣವಾಗಿ ವೀಕ್ಷಿಸಲು ಪೋರ್ಟಬಲ್ ಮಾನಿಟರ್ ಅನ್ನು ಸ್ಥಾಪಿಸಲು ನೋಡುವಂತೆ ಕೇಳಿದೆ” ಎಂದು ಅವರು ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ. https://twitter.com/NarasimhaKan/status/1963461558824317100 ಬೆಂಗಳೂರಿನ ಆಟೋ ಡ್ರೈವ್ಗಳ ಹ್ಯಾಕ್ ಇಂಟರ್ನೆಟ್ ಅನ್ನು ದಿಗ್ಭ್ರಮೆಗೊಳಿಸಿದೆ ಬೆಂಗಳೂರಿನ ಆಟೋ ಡ್ರೈವ್ಗಳ ಹ್ಯಾಕ್ನಿಂದ ಇಂಟರ್ನೆಟ್…
ಬೆಂಗಳೂರು: ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ ತೆರಿಗೆ (ಜಿಎಸ್ಟಿ) ಮಂಡಳಿಯ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವಂತ ಅವರು, ಇದು ನರೇಂದ್ರ ಮೋದಿ ಸರ್ಕಾರದ ಹೊಸ ಅವಿಷ್ಕಾರವೇನಲ್ಲ. ಅತ್ಯಂತ ಅವಸರದಲ್ಲಿ ಎನ್ ಡಿ ಎ ಸರ್ಕಾರ 2017ರಲ್ಲಿ ದೋಷಪೂರ್ಣ ಜಿ.ಎಸ್.ಟಿ ಯನ್ನು ಜಾರಿಗೊಳಿಸಿದಾಗಲೇ ಲೋಕಸಭೆ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಮತ್ತು ವಿರೋಧ ಪಕ್ಷಗಳ ನಾಯಕರು ಜಿ.ಎಸ್.ಟಿ ಗೆ ಮಾಡಲೇಬೇಕಾಗಿದ್ದ ಸುಧಾರಣೆಗಾಗಿ ಒತ್ತಾಯಿಸಿದ್ದರು. “ಗಬ್ಬರ್ ಸಿಂಗ್ ತೆರಿಗೆ” ದೇಶದ ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ. ತೆರಿಗೆ ಪಾವತಿ ವ್ಯವಸ್ಥೆಯ ಸಂಕೀರ್ಣತೆ ಮತ್ತು ವೆಚ್ಚದ ಹೊರೆ ಅವರ ಬದುಕನ್ನು ಸರಣಿ ಕಷ್ಟಗಳ ಸರಮಾಲೆಗೆ ಸಿಲುಕಿಸಲಿದೆ ಎಂದು ಕಳೆದ ಎಂಟು ವರ್ಷಗಳಿಂದ ನಾವು ಹೇಳುತ್ತಲೇ ಬಂದಿದ್ದೆವು. ಆದರೆ ನರೇಂದ್ರ ಮೋದಿಯವರು ನಮ್ಮ ಮಾತಿಗೆ ಕಿವಿಗೊಡದೆ…
ಬೆಂಗಳೂರು: ಪರಿಸರ ಅಭಿವೃದ್ಧಿ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ ಮಾಡಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ತಿಳಿಸಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ವಿಧಾನಸೌಧದಲ್ಲಿ ಪ್ರಭಾಕರ್ ಅವರನ್ನು ಭೇಟಿ ಮಾಡಿ ವಾರ್ತಾ ಇಲಾಖೆಯಿಂದ ಪ್ರತಿ ವರ್ಷ ಕೊಡ ಮಾಡುವ ಈ ಪ್ರಶಸ್ತಿಗಳು ಕಳೆದ 7 ವರ್ಷಗಳಿಂದ ಬಾಕಿ ಉಳಿದಿವೆ ಎನ್ನುವುದನ್ನು ಗಮನಕ್ಕೆ ತಂದರು. ಪ್ರಶಸ್ತಿ ಪುರಸ್ಕೃತರ ಆಯ್ಕೆ ಪ್ರಕ್ರಿಯೆ ಮುಗಿದು ಈಗಾಗಲೇ 8 ತಿಂಗಳಾಗಿದ್ದರೂ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗಧಿಯಾಗಿಲ್ಲ. ಮುಂದೆ ಈ ರೀತಿ ಆಗದಂತೆ ಆಯಾ ವರ್ಷದ ಪ್ರಶಸ್ತಿಯನ್ನು ಆಯಾ ವರ್ಷವೇ ಪ್ರದಾನ ಮಾಡಲು ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು. ಈ ತಿಂಗಳ 19ರಂದು ಪ್ರಶಸ್ತಿ ಪ್ರದಾನ ಮಾಡಲು ಮುಖ್ಯಮಂತ್ರಿಗಳ ದಿನಾಂಕ ನಿಗದಿಗೊಳಿಸಲು ತಿಳಿಸಲಾಗಿದೆ. ಮುಂದೆ ಆಯಾ ವರ್ಷವೇ ಪ್ರಶಸ್ತಿ ಪ್ರದಾನ ಮಾಡಲು ಕ್ರಮ ವಹಿಸಲಾಗುವುದು…
ಬೆಂಗಳೂರು: 2023 ಮೇ ತಿಂಗಳಿನಲ್ಲಿ ಇವಿಎಂ ಮೂಲಕ ಚುನಾಯಿತವಾದ ಕಾಂಗ್ರೆಸ್ಸಿನ ಈ ರಾಜ್ಯ ಸರಕಾರ ಅಧಿಕಾರಕ್ಕೆ ಬಂದಿದೆ. ಇವಿಎಂ ಬಗ್ಗೆ ನಿಮಗೆ ಸಂಶಯ ಇದ್ದಲ್ಲಿ ನೀವು ಅಸೆಂಬ್ಲಿ ವಿಸರ್ಜಿಸಿ ಚುನಾವಣೆಗೆ ಹೋಗಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಎಸ್.ಸುರೇಶ್ ಕುಮಾರ್ ಅವರು ಅವರು ಸವಾಲು ಹಾಕಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಗೆದ್ದಾಗಲೆಲ್ಲ ಚೆನ್ನಾಗಿದೆ. ಗೆಲ್ಲದೇ ಇದ್ದಾಗ ಇವಿಎಂ ಎಂಬ ಧೋರಣೆಯು ಅತ್ಯಂತ ಹಳೆಯ ರಾಜಕೀಯ ಪಕ್ಷ ಎಂದು ತನ್ನನ್ನೇ ತಾನು ಬಣ್ಣಿಸಿಕೊಳ್ಳುವ ರಾಜಕೀಯ ಪಕ್ಷಕ್ಕೆ ಶೋಭೆ ತರುವುದಿಲ್ಲ ಎಂದು ಟೀಕಿಸಿದರು. ನಿನ್ನೆ ನಡೆದ ಸಚಿವಸಂಪುಟ ಸಭೆ ರಾಜ್ಯದ ದೃಷ್ಟಿಯಿಂದ ಅತ್ಯಂತ ಮಾರಕ ನಿರ್ಧಾರಗಳನ್ನು ಕೈಗೊಂಡಿದೆ ಎಂದು ಟೀಕಿಸಿದರು. ಕೃತಕ ಬುದ್ಧಿಮತ್ತೆಯ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಈ ಕಾಲದಲ್ಲಿ ಕೃತಕ ಅಜ್ಞಾನದಿಂದ (ಆರ್ಟಿಫಿಶಿಯಲ್ ಇಗ್ನೊರೆನ್ಸ್) ಕೂಡಿದ ನಿರ್ಧಾರಗಳನ್ನು ಕೈಗೊಂಡ ಕ್ಯಾಬಿನೆಟ್ ಸಭೆ ಇದು ಎಂದು ದೂರಿದರು. ಬಹುಮತ ಇದೆ ಎಂದ ತಕ್ಷಣ ನಾವು…
ಬೆಂಗಳೂರು: ಜಿ.ಎಸ್.ಟಿ. ಅನುಷ್ಠಾನ ವಿಧಾನದಲ್ಲಿ ದೋಷವಿದೆ ಎಂದು ನಮ್ಮ ನಾಯಕ ರಾಹುಲ್ ಗಾಂಧಿ ಅವರು ಕಳೆದ ಒಂಬತ್ತು ವರ್ಷಗಳಿಂದ ಹೇಳುತ್ತಾ ಬಂದಿದ್ದರು. ಆದರೆ, ಪ್ರಧಾನಮಂತ್ರಿ ಮೋದಿ ಅವರು ಈವರೆಗೆ ಈ ಬಗ್ಗೆ ಗಮನಹರಿಸದೆ ಈಗ ಅದನ್ನು ಸರಿಪಡಿಸಿದ್ದಾರೆ. ಇದರಿಂದ ಇಷ್ಟು ವರ್ಷಗಳ ಕಾಲ ದೇಶದ ಜನರು ಸಮಸ್ಯೆ ಅನುಭವಿಸಬೇಕಾಯಿತು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಶುಕ್ರವಾರ ಹೇಳಿದರು. ಸದಾಶಿವನಗರದ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಪ್ರಶ್ನೆಗಳಿಗೆ ಸಚಿವರು ಈ ಉತ್ತರ ನೀಡಿದರು. ಜಿ.ಎಸ್.ಟಿ.ಗೆ ಸಂಬಂಧಿಸಿದಂತೆ ಈಗ ಜಾರಿಗೊಳಿಸಿರುವ ಎರಡು ಹಂತಗಳ ನೀತಿ ಸ್ವಾಗತಾರ್ಹ. ಆದರೆ, ಇಷ್ಟು ವರ್ಷಗಳ ಕಾಲ ಜನರು ಸಮಸ್ಯೆಯಲ್ಲಿ ಸಿಲುಕಲು ಪ್ರಧಾನಿ ಮೋದಿ ಅವರ ಧೋರಣೆಯೇ ಕಾರಣ ಎಂದು ಅಭಿಪ್ರಾಯಪಟ್ಟರು. ರಾಜ್ಯವು ಕಳೆದ ತ್ರೈಮಾಸಿಕದಲ್ಲಿ ವಿದೇಶಿ ಹೂಡಿಕೆ ಸೆಳೆಯುವಲ್ಲಿ ಮಹಾರಾಷ್ಟ್ರವನ್ನು ಹಿಂದಿಕ್ಕಿ ಮೊದಲ ಸ್ಥಾನದಲ್ಲಿದೆ. ಕರ್ನಾಟಕವು ಹೂಡಿಕೆಗೆ ಪ್ರಶಸ್ತ ಸ್ಥಳವಾಗಿ ಮುಂದುವರಿಯಬೇಕೆಂಬುದೇ ನಮ್ಮ ಆಶಯವಾಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ವಿಧಿಸಿರುವ ಸುಂಕವು…












