Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇ-ಸ್ವತ್ತು 2.0 ತಂತ್ರಾಂಶದಲ್ಲಿ ನಮೂನೆ-11ಬಿ ಖಾತೆಗಳನ್ನು ಎರಡು ವಾರಗಳ ಕಾಲವಾಧಿಯಲ್ಲಿ ನಮೂನೆ-11ಎ ಖಾತೆಗಳನ್ನಾಗಿ ಪರಿವರ್ತನೆ ಮಾಡಿಕೊಳ್ಳಲು ಮತ್ತು ಹೊಸ ಬಡಾವಣೆ ಮತ್ತು ಬಹುಮಹಡಿ (ಅಪಾರ್ಟ್ಮೆಂಟ್) ಕಟ್ಟಡಗಳಿಗೆ ಅರ್ಜಿಗಳನ್ನು ಸಲ್ಲಿಸಲು ಮುಂದಿನ ಒಂದು ತಿಂಗಳ ಅವಧಿಯಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಇ-ಸ್ವತ್ತು ಪ್ರಕ್ರಿಯೆ ಹಾಗೂ ತಂತ್ರಾಂಶವನ್ನು ಹೆಚ್ಚು ನಾಗರಿಕಸ್ನೇಹಿಯಾಗಿ ಅನುಷ್ಟಾನಗೊಳಿಸಲು ಇಲಾಖೆ ಬದ್ದವಾಗಿದ್ದು, ಅದರನ್ವಯ ತಂತ್ರಾಂಶವನ್ನು ಅಭಿವೃದ್ಧಿಪಡಿಸಿಲಾಗಿರುತ್ತದೆ. ಈವರೆಗೆ ಆನ್ಲೈನ್ ಮೂಲಕ 21,429 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಅನುಮೋದನೆಗಾಗಿ ವಿವಿಧ ಹಂತದಲ್ಲಿ ಬಾಕಿ ಇರುತ್ತದೆ. ಕೆಲವೊಂದು ಅರ್ಜಿಗಳನ್ನು ಸಲ್ಲಿಸುವಾಗ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅವುಗಳನ್ನು ಸರಿಪಡಿಸುವಲ್ಲಿ ಕ್ರಮಕೈಗೊಳ್ಳಲಾಗುತ್ತಿದೆ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಇ-ಸ್ವತ್ತು ತಂತ್ರಾಂಶದಲ್ಲಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ, ಮತ್ತಷ್ಟು ಸರಳಿಕರಿಸಲು ಕ್ರಮವಹಿಸಲಾಗುತ್ತಿದೆ, ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ಅರ್ಜಿಗಳನ್ನು…
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ನಿಗಮದ ಪ್ರತಿಷ್ಠಿತ ಸಾರಿಗೆ ಬಸ್ಸುಗಳ ಪ್ರಯಾಣದ ಟಿಕೆಟ್ ದರದಲ್ಲಿ ರಿಯಾಯಿತಿಯನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಾರ್ವಜನಿಕ ಪ್ರಯಾಣಿಕರಿಗೆ ಕರಾರಸಾ ನಿಗಮವು ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುತ್ತಿದ್ದು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮದ ವತಿಯಿಂದ ಆಯ್ದ ಮಾರ್ಗಗಳಾದ ಬೆಂಗಳೂರು-ಮಂಗಳೂರು, ಬೆಂಗಳೂರು-ಕುಂದಾಪುರ, ಬೆಂಗಳೂರು-ಉಡುಪಿ, ಬೆಂಗಳೂರು-ಧರ್ಮಸ್ಥಳ, ಬೆಂಗಳೂರು-ಕುಕ್ಕೆಸುಬ್ರಮಣ್ಯ, ಬೆಂಗಳೂರು-ಪುತ್ತೂರು, ಬೆಂಗಳೂರು-ಮಡಿಕೇರಿ/ವಿರಾಜಪೇಟೆ. ಬೆಂಗಳೂರು-ದಾವಣಗೆರೆ, ಬೆಂಗಳೂರು-ಶಿವಮೊಗ್ಗ/ಸಾಗರ, ಬೆಂಗಳೂರು-ಚೆನ್ನೈ, ಬೆಂಗಳೂರು-ಹೈದರಾಬಾದ್/ಸಿಕಂದರಾಬಾದ್, ಬೆಂಗಳೂರು-ತಿರುಪತಿ, ಬೆಂಗಳೂರು-ಮಂತ್ರಾಲಯ, ಬೆಂಗಳೂರು-ಪೂನಾ/ಮುಂಬೈ, ಬೆಂಗಳೂರು-ವಿಜಯವಾಡ, ಬೆಂಗಳೂರು-ಎರ್ನಾಕುಲಂ, ಬೆಂಗಳೂರು-ಮದುರೈ, ಬೆಂಗಳೂರು-ಕೋಯಿಮತ್ತೂರು, ಬೆಂಗಳೂರು-ತಿಶ್ರೂರು ಇನ್ನು ಕೆಲವು ಆಯ್ದ ಮಾರ್ಗಗಳಲ್ಲಿ ಕಾರ್ಯಾಚರಣೆ ಮಾಡುತ್ತಿರುವ ಪ್ರತಿಷ್ಠಿತ ಸಾರಿಗೆಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಎಸಿ ಸ್ಲೀಪರ್, ಮಲ್ಟಿ ಆಕ್ಸೆಲ್ ಎಸಿ ಸ್ಲೀಪರ್ ಮಾದರಿಯ ಸಾರಿಗೆಗಳ ಪ್ರಯಾಣದರಗಳಲ್ಲಿ ಶೇಕಡ 5 ರಿಂದ 15 ರವರೆಗೆ ರಿಯಾಯಿತಿ ನೀಡಲಾಗಿದೆ. ಸದರಿ ರಿಯಾಯಿತಿಯು…
ಶಿವಮೊಗ್ಗ : ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಶ್ರೀಗಂಧ ಸಂಕೀರ್ಣದ ಆವರಣದಲ್ಲಿ ಕರಕುಶಲ ಕರ್ಮಿಗಳ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸ್ಥಳಕ್ಕೆ ತೆರಳಿದಂತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಮನೆ ಮಂಜೂರಾತಿ ಸೇರಿದಂತೆ ಇತರೆ ಬೇಡಿಕೆ ಈಡೇರಿಸಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳೋದಾಗಿ ಭರವಸೆ ನೀಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಕರಕುಶಲ ಕ್ರಮಿಗಳ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸಮಿತಿ ಅಧ್ಯಕ್ಷ ಲೋಕೇಶ ಕುಮಾರ್ ಗುಡಿಗಾರ್, ಕರಕುಶಲ ಕಲೆಯನ್ನು ನಂಬಿಕೊಂಡು ಜೀವನ ನಡೆಸುತ್ತಿರುವ ಕುಶಲಕರ್ಮಿಗಳ ಬದುಕು ಸಂಕಷ್ಟದಲ್ಲಿದೆ. ಕೆಲಸ ಮಾಡಲು ಶ್ರೀಗಂಧ ಸಿಗುತ್ತಿಲ್ಲ. ಜೊತೆಗೆ ಸರ್ಕಾರದ ಯಾವ ಸೌಲಭ್ಯವೂ ಕುಶಲಕರ್ಮಿಗಳನ್ನು ತಲುಪುತ್ತಿಲ್ಲ ಎಂಬುದಾಗಿ ಅಳಲು ತೋಡಿಕೊಂಡರು. ವಿಶ್ವ 1, ವಿಶ್ವ 2 ಹಾಗೂ ಪಶ್ಚಿಮಘಟ್ಟ ಡಿಸಿಎಚ್ ಯೋಜನೆಯಡಿ ಕುಶಲಕರ್ಮಿಗಳು, ಸರ್ಕಾರ ಜಂಟಿಯಾಗಿ ನಿರ್ಮಿಸಿದ್ದ ವಸತಿ ಯೋಜನೆ ತಲುಪುತ್ತಿಲ್ಲ. 22 ವರ್ಷಗಳ ಗುತ್ತಿಗೆ ಒಪ್ಪಂದ ಮಾಡಿಕೊಂಡು ಕುಶಲಕರ್ಮಿಗಳಿಗೆ ಮನೆ…
ಸಾಗರ : ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಪ್ರಮುಖ ರಸ್ತೆಗಳ ಅಭಿವೃದ್ದಿಗೆ ಚಾಲನೆ ನೀಡಿದೆ. ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಾಗರ ನಗರಕ್ಕೆ 2 ಕೋಟಿ ರೂ. ವಿಶೇಷ ಅನುದಾನ ಮಂಜೂರು ಮಾಡಿದ್ದಾರೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಎಂದು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಮಾರಿಕಾಂಬಾ ದೇವಸ್ಥಾನದ ಬಳಿ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದಂತ ಅವರು, ಸಾಗರ ನಗರಸಭೆಯ 1.50 ಕೋಟಿ ರೂ. ಹಣವನ್ನು ಸಹ ರಸ್ತೆ ನಿರ್ಮಾಣಕ್ಕೆ ಮೀಸಲು ಇರಿಸಿದೆ. ಫೆಬ್ರವರಿ 3ರಂದು ಮಾರಿಕಾಂಬಾ ಜಾತ್ರೆ ಪ್ರಾರಂಭಗೊಳ್ಳಲಿದೆ. ಅಷ್ಟರೊಳಗೆ ನಗರವನ್ನು ಸುಂದರವಾಗಿ ನಿರ್ಮಿಸಬೇಕಾಗಿದೆ. ಈಗಾಗಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಾಂಬಾರೀಕರಣ ಕಾಮಗಾರಿ ಪ್ರಾರಂಭವಾಗಿದ್ದು, ಸಣ್ಣಮನೆ ಸೇತುವೆ ಬಳಿ ಕಾಮಗಾರಿ ವೀಕ್ಷಣೆ ನಡೆಸಿ ಶೀಘ್ರ ಮುಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ. ಪೊಲೀಸ್ ಸ್ಟೇಷನ್ ವೃತ್ತವನ್ನು ಅಭಿವೃದ್ದಿಪಡಿಸುವುದು, ಪೊಲೀಸ್ ಠಾಣೆಯನ್ನು ಬೇರೆ ಕಡೆ ವರ್ಗಾಯಿಸಲು ಸಹ ಸೂಚಿಸಿದೆ ಎಂದು ತಿಳಿಸಿದರು.…
ಭೂಲೋಕದ ಪ್ರಾಣಿ ಹಾಗೂ ಪಕ್ಷಿಗಳು ಹೆಚ್ಚಾಗಿ ದೇವರ ವಾಹನವೆಂದು ಪರಿಗಣಿಸಿ ದೇವರ ಅಂಶ ಅಥವಾ ಅನುಗ್ರಹ ಇದೆ ಎಂದು ನಾವು ಪೂಜಿಸುತ್ತೇವೆ. ಆದರೆ “ಬೆಕ್ಕನ್ನು’ ಅಪಶಕುನ ಎನ್ನುತ್ತಾರೆ. ಬೆಕ್ಕಿಗೆ ವಿಶೇಷ ಮನ್ನಣೆ ಕೊಡದಿರಲು ಕಾರಣವಿದೆ. ಪುರಾಣ ಕಥೆ ಪ್ರಕಾರ “ಸಮುದ್ರಮಂಥನ” ದ ಕಾಲಕ್ಕೆ ಹೋದರೆ ಮಂಥನದಲ್ಲಿ ಮೊದಲು ಬಂದ ಕಾರ್ಕೋಟಕ “ವಿಷ” ವನ್ನು ಲೋಕಕಲ್ಯಾಣಾರ್ಥವಾಗಿ ಶಿವನೇ ಸ್ವೀಕರಿಸಿ ನಂಜುಂಡೇಶ್ವರನಾದ. ಮಂಥನ ಮುಂದು ವರೆದಾಗ ಅಶ್ವ, ಗಜ, ಚಂದ್ರ, ಅಪ್ಸರೆಯರು, ಗಂಧರ್ವರು ಬರುತ್ತಿದ್ದಂತೆ ದೇವಿ ಮಹಾಲಕ್ಷ್ಮಿಯ ಜೊತೆ ಅವಳ ಅಕ್ಕ ‘ಅಲಕ್ಷ್ಮಿ’ ರಾಕ್ಷಸರ ಜೊತೆ ಹೊರ ಬಂದಳು ಹಾಗೆ ಬರುವಾಗ ಅಲಕ್ಷ್ಮಿ ಜೊತೆ ‘ಬೆಕ್ಕು’ ಬಂದಿತು. ಲಕ್ಷ್ಮಿ ಜೊತೆ ಬಂದ ಬೆಕ್ಕನ್ನು ಯಾರೂ ವಾಹನ ಮಾಡಿಕೊಳ್ಳಲಿಲ್ಲ ಕೊನೆಗೆ ಅದು ಜೇಷ್ಠಾ ಲಕ್ಷ್ಮಿಯ ವಾಹನವಾಯಿತು. ಅಲ್ಲದೆ ಜೇಷ್ಠಾ ಲಕ್ಷ್ಮಿ ಆಸುರರ ಶಕ್ತಿಯನ್ನು ಆಶ್ರಯಿಸಿದಳು. ತಂಗಿ ಲಕ್ಷ್ಮಿ ವಿಷ್ಣುವಿನ ಆಶ್ರಯ ಪಡೆದು “ಮಹಾಲಕ್ಷ್ಮಿ” ಆಗಿ ಸಂಪತ್ತಿನ ಒಡತಿ ಎಂದು ಪೂಜಿಸಿದರು. ಅಕ್ಕ ಜೇಷ್ಠಾ ಲಕ್ಷ್ಮಿಯನ್ನು ಅಲಕ್ಷಿಸಿದ…
ಬೆಂಗಳೂರು: ರಾಜ್ಯದ ಅಲ್ಲಲ್ಲಿ ವನ್ಯ ಜೀವಿಗಳ ಹಾವಳಿ ಹೆಚ್ಚಾಗಿದೆ. ಕೆಲವೆಡೆ ದಾಳಿ ನಡೆಸಿ ಮಾನವ ಜೀವ ಹಾನಿಯಾಗಿದ್ದರೇ, ಮತ್ತೆ ಕೆಲವೆಡೆ ಬೆಳೆ ನಾಶಗೊಂಡು ರೈತ ಕಂಗಾಲಾಗಿದ್ದಾನೆ. ಇದೇ ಸಂದರ್ಭದಲ್ಲಿ ಅರಣ್ಯ ಪ್ರದೇಶದ ಹೊರಗೆ ವನ್ಯ ಜೀವಿಗಳು ಕಂಡು ಬಂದರೇ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವಂತೆ ಇಲಾಖೆ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಅರಣ್ಯ ಪ್ರದೇಶದ ಹೊರಗೆ ಎಲ್ಲೇ ವನ್ಯಜೀವಿಗಳು ಕಂಡರೆ ಸಾರ್ವಜನಿಕರು 1926 ಸಹಾಯವಾಣಿಗೆ ಕರೆ ಮಾಡಿದರೆ ಸಾಕು. ಸ್ವಯಂ ಚಾಲಿತವಾಗಿ ಕೇಂದ್ರ ಮತ್ತು ಸಂಬಂಧಿತ ವಲಯ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ರವಾನೆಯಾಗಲಿದೆ. ದೂರು ದಾಖಲಾದ ಕೂಡಲೇ ಕ್ರಮ ವಹಿಸಲಾಗುವುದು. https://twitter.com/KarnatakaVarthe/status/2008083720532832460 https://kannadanewsnow.com/kannada/term-insurance-mandatory-for-medical-education-department-staff/
ಬೆಂಗಳೂರು: ಎಲ್ಲ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಪ್ರಸ್ತುತ ಸಂಬಳ ಮತ್ತು ಹುದ್ದೆಗೆ ಅನುಗುಣವಾಗಿ ಅವಧಿ ವಿಮೆ (ಟರ್ಮ್ ಇನ್ಶ್ಯೂರೆನ್ಸ್) ಕಡ್ಡಾಯವಾಗಿ ಪಡೆಯಬೇಕು. ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ವಿಮಾ ಹಣ ಪಡೆಯಲು ಅವರ ಕುಟುಂಬದ ಸದಸ್ಯರು ತಾಂತ್ರಿಕ ಸಮಸ್ಯೆಗಳು ಎದುರಿಸಿದ ಕಾರಣ, ತಮ್ಮ ಇಲಾಖೆಯ ಅಡಿಯಲ್ಲಿರುವ ಎಲ್ಲ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಸಾಮಾಜಿಕ ಭದ್ರತಾ ಕ್ರಮವಾಗಿ ಕಡ್ಡಾಯವಾಗಿ ಅವಧಿ ವಿಮೆ ಪಡೆಯುವಂತೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರು ಸೂಚನೆ ನೀಡಿದ್ದಾರೆ. https://twitter.com/KarnatakaVarthe/status/2008083291518468533 https://kannadanewsnow.com/kannada/us-vice-president-jd-vances-residence-raided-suspect-arrested/ https://kannadanewsnow.com/kannada/make-weekend-with-ramesh-a-lesson-change-the-education-system-young-man-commits-suicide-by-writing-a-death-note/
ಅಮೇರಿಕಾ: ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರ ಓಹಿಯೋ ಮನೆಯ ಮೇಲೆ ವ್ಯಕ್ತಿಯೊಬ್ಬ ದಾಳಿ ಮಾಡಿದ್ದಾನೆ. WLWT 5 ರ ದೃಶ್ಯಗಳ ಪ್ರಕಾರ, ಘಟನೆಯ ನಂತರ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಘಟನೆಯ ಸಮಯದಲ್ಲಿ ವ್ಯಾನ್ಸ್ ಮನೆಯಲ್ಲಿ ಇರಲಿಲ್ಲ ಮತ್ತು ಯಾವುದೇ ಗಾಯಗಳು ವರದಿಯಾಗಿಲ್ಲ. ಶಂಕಿತನ ಉದ್ದೇಶ ಅಥವಾ ಹೆಚ್ಚಿನ ವಿವರಗಳನ್ನು ಅಧಿಕಾರಿಗಳು ಇನ್ನೂ ಬಿಡುಗಡೆ ಮಾಡಿಲ್ಲ. ಅಮೆರಿಕ ವೆನೆಜುವೆಲಾ ಮೇಲೆ ದಾಳಿ ಮಾಡಲು ಯೋಜಿಸುತ್ತಿದ್ದಂತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಸಭೆಯ ನಂತರ ವ್ಯಾನ್ಸ್ ವೆಸ್ಟ್ ಪಾಮ್ ಬೀಚ್ನಲ್ಲಿರುವ ತಮ್ಮ ಗಾಲ್ಫ್ ಕ್ಲಬ್ನಲ್ಲಿದ್ದರು ಎಂದು ವರದಿಯಾಗಿದೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದ ನಂತರ ಅವರು ನಂತರ ತಮ್ಮ ಸಿನ್ಸಿನಾಟಿ ಮನೆಗೆ ಮರಳಿದರು. ಘಟನೆಯ ಬಗ್ಗೆ ಪೊಲೀಸರು ತುರ್ತು ತನಿಖೆಯನ್ನು ಪ್ರಾರಂಭಿಸಿದ್ದಾರೆ ಮತ್ತು ಯುಎಸ್ ಸೀಕ್ರೆಟ್ ಸರ್ವಿಸ್ ಇನ್ನೂ ಹೇಳಿಕೆ ನೀಡಿಲ್ಲ. https://kannadanewsnow.com/kannada/make-weekend-with-ramesh-a-lesson-change-the-education-system-young-man-commits-suicide-by-writing-a-death-note/
ಬೆಂಗಳೂರು : ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಆಪ್ತನ ಗನ್ ಮ್ಯಾನ್ ನಡೆಸಿದ ಗುಂಡಿನ ದಾಳಿಯ ಕುರಿತು ಸ್ಪೋಟಕ ಮಾಹಿತಿಯನ್ನು ಬಹಿರಂಗ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಗುಂಡಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಾನೂನುಬಾಹಿರವಾಗಿ ಎರಡು ಬಾರಿ ನಡೆಸಲಾಗಿದೆ ಎಂದಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ಕಾರ್ಯಕರ್ತ ರಾಜಶೇಖರ್ ಹತ್ಯೆ ಒಂದೆಡೆ, ಆದರೆ ಸ್ವಪಕ್ಷದ ಕಾರ್ಯಕರ್ತನ ಕೊಲೆಯನ್ನು ಮುಚ್ಚಿಹಾಕಲು ಕಾಂಗ್ರೆಸ್ ಸರಕಾರ ಇನ್ನಿಲ್ಲದ ಪ್ರಯತ್ನ ನಡೆಸಿದೆ. ಇದು ನಾಚುಗೇಡು. ಅದಕ್ಕಾಗಿ ಆ ನತದೃಷ್ಟ ಕಾರ್ಯಕರ್ತನ ಮೃತದೇಹವನ್ನು ಎರಡು ಬಾರಿ ಮರಣೋತ್ತರ ಪರೀಕ್ಷೆಗೆ ಒಳಡಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದರು. ಮೊದಲ ಮರಣೋತ್ತರ ಪರೀಕ್ಷೆಯಲ್ಲಿ ಏನು ಫಲಿತಾಂಶ ಹೊರಬಂತು? ಎರಡನೇ ಮರಣೋತ್ತರ ಪರೀಕ್ಷೆಯಲ್ಲಿ ಏನು ಮಾಹಿತಿ ಇದೆ? ಎಂಬುದನ್ನು…
ಬೆಂಗಳೂರು: ರಿಲಯನ್ಸ್ ಜಿಯೋ ನವೆಂಬರ್ 2025 ರಲ್ಲಿ ವೈರ್ಲೆಸ್ ಮತ್ತು ವೈರ್ಲೈನ್ ವಿಭಾಗಗಳಲ್ಲಿ ದೃಢವಾದ ಬೆಳವಣಿಗೆಯನ್ನು ದಾಖಲಿಸುವ ಮೂಲಕ ಕರ್ನಾಟಕದಲ್ಲಿ ತನ್ನ ಪ್ರಾಬಲ್ಯವನ್ನು ಮತ್ತಷ್ಟು ಬಲಪಡಿಸಿದೆ. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಬಿಡುಗಡೆ ಮಾಡಿದ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದಲ್ಲಿ ಜಿಯೋ 2.78 ಲಕ್ಷ ಮೊಬೈಲ್ ಚಂದಾದಾರರ ನಿವ್ವಳ ಸೇರ್ಪಡೆಯನ್ನು ದಾಖಲಿಸಿದೆ. ಇದು ನವೆಂಬರ್ 2025 ರ ಅಂತ್ಯದ ವೇಳೆಗೆ ಕರ್ನಾಟಕದಲ್ಲಿ ಅದರ ಒಟ್ಟು ಬಳಕೆದಾರರ ಸಂಖ್ಯೆಯನ್ನು 2.60 ಕೋಟಿಗೆ ಕೊಂಡೊಯ್ದಿದೆ. ಈ ಮೂಲಕ, ಜಿಯೋ ಮತ್ತೊಮ್ಮೆ ರಾಜ್ಯದ ಮೊಬೈಲ್ ವಿಭಾಗದಲ್ಲಿ ಅಗ್ರ ಲಾಭ ಗಳಿಸಿದ ಸ್ಥಾನವನ್ನು ಪಡೆದುಕೊಂಡಿದೆ. ಕರ್ನಾಟಕದಲ್ಲಿ, ರಿಲಯನ್ಸ್ ಜಿಯೋ ಫಿಕ್ಸೆಡ್ ವೈರ್ಲೆಸ್ ಆಕ್ಸೆಸ್ (ಎಫ್ ಡಬ್ಲ್ಯೂಎ) ನಲ್ಲಿ ವೇಗವಾಗಿ ಬೆಳೆಯುತ್ತಿದೆ. ಜಿಯೋ ಏರ್ ಫೈಬರ್ ಸೇವೆಯು ಮಾರುಕಟ್ಟೆ ನಾಯಕನಾಗಿ ಹೊರಹೊಮ್ಮುತ್ತಿದೆ. ನವೆಂಬರ್ 2025 ರ ಟ್ರಾಯ್ನ ಇತ್ತೀಚಿನ ದತ್ತಾಂಶವು ಈ ಪ್ರದೇಶದಲ್ಲಿ ಜಿಯೋದ ಹೆಚ್ಚುತ್ತಿರುವ ಪ್ರಾಬಲ್ಯವನ್ನು ಎತ್ತಿ ತೋರಿಸುತ್ತದೆ. ಕರ್ನಾಟಕ ವೃತ್ತದಲ್ಲಿ ಸಕ್ರಿಯ ಜಿಯೋ…














