Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಬಲೂಚಿಸ್ತಾನದಲ್ಲಿ 21 ಪ್ರಯಾಣಿಕರು ಮತ್ತು ನಾಲ್ವರು ಅರೆಸೈನಿಕ ಸೈನಿಕರನ್ನು ಬಲಿತೆಗೆದುಕೊಂಡ ಜಾಫರ್ ಎಕ್ಸ್ಪ್ರೆಸ್ ಅಪಹರಣದ ಹಿಂದೆ ಭಾರತದ ಕೈವಾಡವಿದೆ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ ಗುರುವಾರ ಆರೋಪಿಸಿದೆ. ಹೈಜಾಕ್ ಹಿಂದೆ ಬಲೂಚ್ ಭಯೋತ್ಪಾದಕರು ಅಫ್ಘಾನಿಸ್ತಾನದಲ್ಲಿರುವ ತಮ್ಮ ಸಹಚರರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಗುಪ್ತಚರ ವರದಿಗಳು ಸೂಚಿಸಿವೆ ಎಂದು ವಿದೇಶಾಂಗ ಕಚೇರಿ ವಕ್ತಾರ ಶಫ್ಕತ್ ಅಲಿ ಖಾನ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ. ಜಾಫರ್ ಎಕ್ಸ್ ಪ್ರೆಸ್ ದಾಳಿಯ ನಂತರದ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಅವರು ಹೇಳಿದರು. ಪಾಕಿಸ್ತಾನ ಸೇನಾ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಶರೀಫ್ ಮಾತನಾಡಿ, ಭದ್ರತಾ ಪಡೆಗಳು ಘಟನಾ ಸ್ಥಳದಲ್ಲಿದ್ದ ಎಲ್ಲಾ 33 ಉಗ್ರರನ್ನು ಕೊಂದಿವೆ. ಮಂಗಳವಾರ ಭಯೋತ್ಪಾದಕರು ರೈಲಿನ ಮೇಲೆ ದಾಳಿ ನಡೆಸಿದಾಗ 21 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಿದರು. https://kannadanewsnow.com/kannada/tunnel-road-double-decker-buffer-road-elevated-corridor-project-for-traffic-congestion-problem-in-bengaluru-dks/ https://kannadanewsnow.com/kannada/govt-to-take-appropriate-steps-to-utilise-27-tmc-of-water-being-wasted-in-tungabhadra-dam-dks/
ಬೆಂಗಳೂರು: “ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ” ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಸುಧಾಮ್ ದಾಸ್ ಅವರು ಬೆಂಗಳೂರಿನ ಸಂಚಾರಿ ದಟ್ಟಣೆ ಸಮಸ್ಯೆ ನಿವಾರಣೆಗೆ ಕೈಗೊಂಡಿರುವ ಯೋಜನೆಗಳ ಬಗ್ಗೆ ಗುರುವಾರ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಶಿವಕುಮಾರ್ ಅವರು, “ಬೆಂಗಳೂರಿನ ಸಮಸ್ಯೆ, ಜನಸಂಖ್ಯೆ ದಟ್ಟಣೆ ವಿಚಾರವಾಗಿ ಸದಸ್ಯರಾದ ಸುಧಾಮ್ ದಾಸ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ನಾನು ಬಹಳ ಗಂಭೀರವಾಗಿ ಬೆಂಗಳೂರಿನ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಬೆಂಗಳೂರು ನವದೆಹಲಿ ರೀತಿ ಯೋಜಿತ ನಗರವಲ್ಲ. ಮಲ್ಲೇಶ್ವರ, ಜಯನಗರ, ಇಂದಿರಾನಗರದಂತಹ ಕೆಲವು ಬಡಾವಣೆಗಳು ಮಾತ್ರ ಯೋಜಿತವಾಗಿ ರೂಪುಗೊಂಡಿವೆ. ಈ ಹಿಂದೆ ಬಿಎಂಐಸಿಪಿ ರಸ್ತೆ ಆದ ಕಾರಣ ಸಂಚಾರ ದಟ್ಟಣೆ ಸ್ವಲ್ಪ ಮಟ್ಟಿಗೆ ನಿಯಂತ್ರಣವಾಗಿದೆ. ಇಲ್ಲದಿದ್ದರೆ ಪರಿಸ್ಥಿತಿ ಇನ್ನು…
ಬೆಂಗಳೂರು : “ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಹಾಗೂ ಪಂಪ್ ಮಾಡಿ ನೀರು ಬಳಸಿಕೊಳ್ಳುವ ಪರ್ಯಾಯ ಯೋಜನೆ ಬಗ್ಗೆ ಸರ್ಕಾರ ಆಲೋಚಿಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯರಾದ ಬಸನಗೌಡ ಬಾದರ್ಲಿ ಅವರು ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿದೆ ಆದ ಕಾರಣಕ್ಕೆ ನವಲಿ ಜಲಾಶಯ ನಿರ್ಮಾಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಗುರುವಾರ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು “ನಮ್ಮ ಅಧಿಕಾರಿಗಳು ಸಮತೋಲಿತ ಅಣೆಕಟ್ಟು ನಿರ್ಮಾಣ ಮಾಡದೆ ಪರ್ಯಾಯವಾದ ಆಲೋಚನೆ ತಿಳಿಸಿದ್ದಾರೆ. ನಮ್ಮ ಪಾಲಿನ ನೀರನ್ನು ಪಂಪ್ ಮಾಡಿಕೊಂಡು ಬಳಸಿಕೊಳ್ಳುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ಇದರಿಂದ ಮೂರು ರಾಜ್ಯಗಳಿಗೆ ಉಪಯೋಗವಾಗಲಿದೆ. ನಮಗೆ ಶೇ.65 ಅವರಿಗೆ ಶೇ.35 ರಷ್ಟು ಉಪಯೋಗವಾಗಲಿದೆ. ಸಮತೋಲಿತ ಅಣೆಕಟ್ಟು ನಿರ್ಮಾಣ…
ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಅರ್ಥ ಶಾಸ್ತ್ರ ವಿಷಯದ ಪರೀಕ್ಷೆ ನಡೆಯಿತು. ಈ ಪರೀಕ್ಷೆಗೆ 3.5 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರೇ, 17,444 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಅಲ್ಲದೇ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದಂತ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಇಂದಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಅರ್ಥಶಾಸ್ತ್ರ ವಿಷಯದ ಪರೀಕ್ಷೆ ನಡೆಯಿತು. ಈ ಪರೀಕ್ಷೆಗೆ 3,68,338 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 3,50,894 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 17,444 ವಿದ್ಯಾರ್ಥಿಗಳು ಗೈರಾಗಿದ್ದಾರೆ ಅಂತ ತಿಳಿಸಿದೆ. ಇಂದಿನ ಅರ್ಥಶಾಸ್ತ್ರ ವಿಷಯದ ಪರೀಕ್ಷೆ ವೇಳೆಯಲ್ಲಿ ಬೆಂಗಳೂರು ಸೌತ್ ವಿಭಾಗದಲ್ಲಿ ಅಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುತ್ತಿದ್ದಂತ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ ಎಂಬುದಾಗಿ ಹೇಳಿದೆ. https://kannadanewsnow.com/kannada/sensex-ends-200-85-points-lower-nifty-50-down-73-30-points/ https://kannadanewsnow.com/kannada/record-nandini-ghee-shipped-in-thimmappas-presence-demand-for-2000-tonnes-for-ugadi/
ನವದೆಹಲಿ: ಕಳೆದ ಕೆಲ ದಿನಗಳಿಂದ ಸೆನ್ಸೆಕ್ಸ್ ಹಾಗೂ ನಿಫ್ಟಿ ನಿರಂತರವಾಗಿ ಕುಸಿತದತ್ತ ಸಾಗುತ್ತಿದೆ. ಹೀಗಾಗಿ ಹೂಡಿಕೆದಾರರಿಗೆ ಬಾರಿ ದೊಡ್ಡ ಹೊಡೆತವನ್ನೇ ನೀಡಿದೆ. ಇಂದು ಸೆನ್ಸೆಕ್ಸ್ 200.85 ಪಾಯಿಂಟ್ಸ್ ಕಳೆದುಕೊಂಡು ಕೊನೆಗೊಂಡರೇ, ನಿಫ್ಟಿ 73.30 ಪಾಯಿಂಟ್ಸ್ ಕುಸಿತಗೊಂಡಿದೆ. ಹಣದುಬ್ಬರ ದತ್ತಾಂಶವನ್ನು ಮೃದುಗೊಳಿಸಿದ ಹೊರತಾಗಿಯೂ ಬೆಂಚ್ ಮಾರ್ಕ್ ಷೇರು ಮಾರುಕಟ್ಟೆ ಸೂಚ್ಯಂಕಗಳು ಗುರುವಾರ ಆರಂಭಿಕ ಲಾಭವನ್ನು ಕಳೆದುಕೊಂಡವು. ಆಟೋ ಮತ್ತು ಐಟಿ ವಲಯದ ಷೇರುಗಳು ಕುಸಿದವು, ಮಾರುಕಟ್ಟೆಗಳನ್ನು ಕೆಳಕ್ಕೆ ಎಳೆಯಿತು. ಬಿಎಸ್ಇ ಸೆನ್ಸೆಕ್ಸ್ 200.85 ಪಾಯಿಂಟ್ಸ್ ಕಳೆದುಕೊಂಡು 73,828.91 ಕ್ಕೆ ಕೊನೆಗೊಂಡರೆ, ಎನ್ಎಸ್ಇ ನಿಫ್ಟಿ 50 73.30 ಪಾಯಿಂಟ್ಸ್ ಕುಸಿದು 22,397.20 ಕ್ಕೆ ತಲುಪಿದೆ. ಜಿಯೋಜಿತ್ ಫೈನಾನ್ಷಿಯಲ್ ಸರ್ವೀಸಸ್ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಮಾತನಾಡಿ, ಯುಎಸ್ ಕಿರು ಮಾರುಕಟ್ಟೆಯಲ್ಲಿ ವ್ಯಾಪಾರ ವಾರವನ್ನು ಕಡಿಮೆ ಮಾಡುವುದು ಮತ್ತು ಮಾರಾಟವು ಜಾಗತಿಕ ಮಾರುಕಟ್ಟೆಗೆ ಬಿಕ್ಕಟ್ಟನ್ನು ಒದಗಿಸುತ್ತಿದೆ. ಆದಾಗ್ಯೂ, ಭಾರತವು ಸಂಕುಚಿತ ನಕಾರಾತ್ಮಕ ಪ್ರವೃತ್ತಿಯಿಂದ ಸ್ಥಿತಿಸ್ಥಾಪಕತ್ವ ಮತ್ತು ಆರೋಗ್ಯಕರ ಕಾರ್ಯಕ್ಷಮತೆಯನ್ನು ಎದುರಿಸುತ್ತಿದೆ. ಹಣದುಬ್ಬರದಲ್ಲಿನ ಮಿತಗೊಳಿಸುವಿಕೆ, ಭವಿಷ್ಯದ ದರ…
ಬೆಂಗಳೂರು: ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ವಿಧೇಯಕಕ್ಕೆ ರಾಜ್ಯ ವಿಧಾನ ಮಂಡಲದ ಅಧಿವೇಶನದಲ್ಲಿ ಎರಡು ಸದನದಲ್ಲಿ ಅಂಕಿತ ಸೂಚಿಸಲಾಗಿತ್ತು. ಈ ಮಸೂದೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರು ಅರಮನೆ( ಭೂ ಬಳಕೆ ಮತ್ತು ನಿಯಂತ್ರಣ) ಅಧಿನಿಯಮ 2025ಕ್ಕೆ ಅಂಕಿತ ಸೂಚಿಸಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ವಿಶೇಷ ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ, 2025 ಇದಕ್ಕೆ 2025 ರ ಮಾರ್ಚ್ ತಿಂಗಳ 12ನೇ ದಿನಾಂಕದಂದು ರಾಜ್ಯಪಾಲರ ಅನುಮತಿ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025 ರ ಕರ್ನಾಟಕ ಅಧಿನಿಯಮ ಸಂಖ್ಯೆ: 14 ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ-IVA) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ ಎಂದಿದೆ. ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಅಧಿನಿಯಮ, 2025 ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ, 1996…
ತಿರುಪತಿ: ತಿರುಪತಿ ತಿಮ್ಮಪ್ಪನ ಸನ್ನಿಧಿಯ ಲಡ್ಡು ಪ್ರಸಾದಕ್ಕೆ ಕರ್ನಾಟಕದಿಂದ ನಂದಿನಿ ತುಪ್ಪವನ್ನು ಸರಬರಾಜು ಮಾಡಲಾಗುತ್ತಿದೆ. ಈಗ ತಿರುಪತಿಯ ಲಡ್ಡು ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪಕ್ಕೆ ಮತ್ತಷ್ಟು ಬೇಡಿಕೆಯನ್ನು ಟಿಟಿಡಿ ಇರಿಸಿದೆ. ಯುಗಾದಿಗೆ ತುರ್ತಾಗಿ 2000 ಟನ್ ತುಪ್ಪ ಕಳುಹಿಸುವಂತೆ ಮನವಿ ಮಾಡಿರುವುದಾಗಿ ತಿಳಿದು ಬಂದಿದೆ. ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಕೆಗೆ ಕರ್ನಾಟಕದ ನಂದಿನಿ ತುಪ್ಪವನ್ನು ಬಳಕೆ ಮಾಡಲಾಗುತ್ತಿದೆ. ಕೆಎಂಎಫ್ ನಿಂದ ತಿರುಮಲಕ್ಕೆ ನಂದಿನಿ ತುಪ್ಪವನ್ನು ಸರಬರಾಜು ಮಾಡಲಾಗುತ್ತಿದೆ. ಯುಗಾದಿ ಸಮೀಪಿಸುತ್ತಿದ್ದು, ತಿಮ್ಮಪ್ಪನ ದೇಗುಲಕ್ಕೆ ಹೆಚ್ಚಿನ ಭಕ್ತರು ಭೇಟಿ ನೀಡುವ ಸಾಧ್ಯತೆ ಇರುವುದರಿಂದ ತುರ್ತಾಗಿ 2000 ಟನ್ ತುಪ್ಪ ಕಳುಹಿಸುವಂತೆ ಟಿಟಿಡಿ ಕೆಎಂಎಫ್ ಗೆ ಮನವಿ ಮಾಡಿದೆ ಎನ್ನಲಾಗಿದೆ. ಅಲ್ಲದೇ ಈ ತಿಂಗಳಿನಲ್ಲೇ ಸಪ್ಲೈ ಮಾಡುವಂತೆ ತಿಳಿಸಿದೆ ಎಂಬುದಾಗಿ ಹೇಳಲಾಗುತ್ತಿದೆ. ಅಂದಹಾಗೇ ಟಿಟಿಡಿಗೆ ಲಡ್ಡು ಪ್ರಸಾದ ತಯಾರಿಕೆಗೆ ಈಗಾಗಲೇ ಕೆ ಎಂ ಎಫ್ ನಿಂದ ಬರೋಬ್ಬರಿ 600 ಟನ್ ತುಪ್ಪವನ್ನು ಕಳುಹಿಸಿಕೊಡಲಾಗಿದೆ. ಇದರ ನಡುವೆ ಈ ವರ್ಷ 5000 ಟನ್ ತುಪ್ಪ…
ಬೆಂಗಳೂರು: ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳಸಾಗಾಟ ಪ್ರಕರಣಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಇಂದು ಈ ಪ್ರಕರಣ ಸಂಬಂಧ ಇಸಿಐಆರ್ ದಾಖಲಿಸಿಕೊಂಡಿರುವಂತ ಇಡಿ ಅಧಿಕಾರಿಗಳು, ಬೆಂಗಳೂರು, ಮುಂಬೈನ ಹಲವೆಡೆ ದಾಳಿಯನ್ನು ನಡೆಸಿದ್ದಾರೆ. ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳಸಾಗಾಣಿಕೆ ಪ್ರಕರಣಕ್ಕೆ ಇಡಿ ಎಂಟ್ರಿಯಾಗಿದ್ದು, ಬೆಂಗಳೂರು, ಮುಂಬೈನ ಹಲವೆಡೆ ದಾಳಿಯನ್ನು ನಡೆಸಿದೆ. ಪಿಎಂಎಲ್ಎ ಕಾಯ್ದೆಯಡಿ ಕೇಸ್ ದಾಖಲಿಸಿಕೊಂಡಿರುವಂತ ಇಡಿ ಅಧಿಕಾರಿಗಳು, ಭಾರತದಿಂದ ಅಕ್ರಮವಾಗಿ ಹಣ ವರ್ಗಾವಣೆ ಬಗ್ಗೆಯೂ ತನಿಖೆ ನಡೆಸುತ್ತಿದೆ. ಅಲ್ಲದೇ ಇದು ದೃಢಪಟ್ಟಿದೆ ಎನ್ನಲಾಗುತ್ತಿದೆ. ಹವಾಲಾ ದಂಧೆಯ ಮೂಲಕ ಭಾರತದಿಂದ ದುಬೈಗೆ ಹಣ ಹೋಗುತ್ತಿರೋದನ್ನು ಪತ್ತೆ ಹಚ್ಚಿರುವಂತ ಇಡಿ ಅಧಿಕಾರಿಗಳು, ಬಳಿಕ ಚಿನ್ನದ ಗಟ್ಟಿಯ ರೂಪದಲ್ಲಿ ಬೆಂಗಳೂರಿಗೆ ವಾಪಾಸ್ ಬರುವ ಬಗ್ಗೆಯೂ ಮಾಹಿತಿಯನ್ನು ಕಲೆ ಹಾಕಿದ್ದಾರೆ. ವಿದೇಶದಲ್ಲಿರುವವರಿಗೆ ಅಕ್ರಮವಾಗಿ ಹಣ ವರ್ಗಾವಣೆ ಹಾಗೂ ಅಕ್ರವಾಗಿ ಚಿನ್ನ ಕಳ್ಳ ಸಾಗಾಣಿಕೆ ಸಂಬಂಧ ಇಡಿ ಅಧಿಕಾರಿಗಳು…
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ತನ್ನ ಬಾಹ್ಯಾಕಾಶ ಡಾಕಿಂಗ್ ಪ್ರಯೋಗದ (SpaDEX) ಭಾಗವಾಗಿ ಉಪಗ್ರಹಗಳ ಡಾಕಿಂಗ್ ಅನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ಇದು ಭಾರತದ ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಒಂದು ಪ್ರಮುಖ ಪ್ರಗತಿಯಾಗಿದೆ. ಈ ಸಾಧನೆಯು ಭಾರತೀಯ ಆಂಟ್ರಿಕ್ಯಾ ಸ್ಟೇಷನ್, ಚಂದ್ರಯಾನ 4 ಮತ್ತು ಗಗನ್ಯಾನ್ ಸೇರಿದಂತೆ ಭವಿಷ್ಯದ ಕಾರ್ಯಾಚರಣೆಗಳಿಗೆ ಅಡಿಪಾಯ ಹಾಕುತ್ತದೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು X (ಹಿಂದೆ ಟ್ವಿಟರ್) ನಲ್ಲಿ ತಂಡವನ್ನು ಅಭಿನಂದಿಸಿದರು, ಪ್ರಧಾನಿ ನರೇಂದ್ರ ಮೋದಿಯವರ “ನಿರಂತರ ಪ್ರೋತ್ಸಾಹವು ಉತ್ಸಾಹವನ್ನು ಹೆಚ್ಚಿಸುತ್ತಿದೆ” ಎಂದು ಹೇಳಿದರು. https://twitter.com/DrJitendraSingh/status/1900066791424221321 ಭವಿಷ್ಯದ ಬಾಹ್ಯಾಕಾಶ ಕಾರ್ಯಾಚರಣೆಗಳಿಗೆ ಒಂದು ಪ್ರಮುಖ ಹೆಜ್ಜೆ ನಿರ್ಣಾಯಕ ಬಾಹ್ಯಾಕಾಶ ನೌಕೆ ಸಂಧಿಸುವುದು, ಡಾಕಿಂಗ್ ಮತ್ತು ಡಿ-ಡಾಕಿಂಗ್ ತಂತ್ರಜ್ಞಾನಗಳನ್ನು ಪರೀಕ್ಷಿಸಲು ISRO ಡಿಸೆಂಬರ್ 30, 2024 ರಂದು SpaDEX ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಮೊದಲ ಯಶಸ್ವಿ ಡಾಕಿಂಗ್ ಜನವರಿ 16 ರಂದು ಪೂರ್ಣಗೊಂಡಿತು, ಹಿಂದಿನ ಪ್ರಾಯೋಗಿಕ ಪ್ರಯತ್ನಗಳ ನಂತರ, ಬಾಹ್ಯಾಕಾಶ ನೌಕೆಯನ್ನು ಸುರಕ್ಷಿತ ದೂರಕ್ಕೆ ಸ್ಥಳಾಂತರಿಸುವ ಮೊದಲು…
ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧಿಸಲ್ಪಟ್ಟು ಜೈಲು ಪಾಲಾಗಿದ್ದಾರೆ. ನಟಿ ರನ್ಯಾ ರಾವ್ ಅವರು ಬಾಯ್ ಫ್ರೆಂಡ್ ಒಬ್ಬರನ್ನು ಹೊಂದಿದ್ದಾರೆ ಎನ್ನಲಾಗುತ್ತಿದೆ. ಬಿಸ್ಕೆಟ್ ರಾಣಿ ರನ್ಯಾ ರಾವ್ ಬಾಯ್ ಫ್ರೆಂಡ್ ತರುಣ್ ಎಂಬುದಾಗಿ ತಿಳಿದು ಬಂದಿದ್ದು ಆತ ಯಾರು ಎನ್ನುವ ಬಗ್ಗೆ ಮುಂದೆ ಓದಿ. ನಟಿ ರನ್ಯಾ ರಾವ್ ಅವರು ಟಾಲಿವುಡ್ ನಟ ತರುಣ್ ಎಂಬುವರು ಬಾಯ್ ಫ್ರೆಂಡ್ ಎಂಬುದಾಗಿ ಹೇಳಲಾಗುತ್ತಿದೆ. ತೆಲುಗು ಸಿನಿಮಾಕ್ಕೆ ಎಂಟ್ರಿ ಕೊಡುವ ಮೊದಲು ಸಿನಿಮಾಗಾಗಿ ತನ್ನ ಹೆಸರನ್ನು ತರುಣ್ ಎಂಬುದಾಗಿ ಬದಲಿಸಿಕೊಂಡಿದ್ದನಂತೆ. ತರುಣ್ ಮೂಲ ಹೆಸರು ವಿರಾಟ್ ಕೊಂಡೂರು ರಾಜ್ ಎಂಬುದಾಗಿದೆ. 2018ರಲ್ಲಿ ತೆರೆ ಕಂಡಂತ ಪರಿಚಯಂ ಸಿನಿಮಾದಲ್ಲಿ ತರುಣ್ ಜೊತೆಗೆ ನಟಿ ರನ್ಯಾ ರಾವ್ ನಟಿಸಿದ್ದರು. ಪರಿಚಯಂ ಸಿನಿಮಾದ ನಾಯಕ ನಟರಾಗಿದ್ದದ್ದೇ ತರುಣಾ ರಾಜ್ ಆಗಿದ್ದಾರೆ. ತೆಲುಗಿನ ಮೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ತರುಣ್ ಹೀರೋ ಆಗಿ ನಟಿಸಿದ್ದಾರೆ. ತರುಣ್ ಅವರೇ ನಟಿ ರನ್ಯಾ ರಾವ್ ಅವರ ಬಾಯ್ ಫ್ರೆಂಡ್…