Subscribe to Updates
Get the latest creative news from FooBar about art, design and business.
Author: kannadanewsnow09
ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿ ಕಳೆದ ಒಂದು ದಿನಗಳ ಹಿಂದೆ ಉಂಟಾದಂತ ಭೂಕಂಪದಲ್ಲಿ 1,400 ಮಂದಿ ಸಾವನ್ನಪ್ಪಿದ್ದಾರೆ. ಈ ಬೆನ್ನಲ್ಲೇ ಇಂದು ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆಯಷ್ಟು ಮತ್ತೆ ಭೂಕಂಪನ ಉಂಟಾಗಿದೆ. ಹೀಗಾಗಿ ಅಫ್ಘಾನಿಸ್ತಾನದ ಜನತೆ ಬೆಚ್ಚಿ ಬೀಳುವಂತೆ ಆಗಿದೆ. ಮಂಗಳವಾರ ಮಧ್ಯಾಹ್ನ 12:29 ಕ್ಕೆ ಅಫ್ಘಾನಿಸ್ತಾನದ ಜಲಾಲಾಬಾದ್ನಿಂದ 34 ಕಿ.ಮೀ. ಈಶಾನ್ಯ ದಿಕ್ಕಿನಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. 10 ಕಿ.ಮೀ ಆಳದ ಭೂಕಂಪದ ಕೇಂದ್ರ ಬಿಂದು ಆರಂಭದಲ್ಲಿ 34.67 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 70.68 ಡಿಗ್ರಿ ಪೂರ್ವ ರೇಖಾಂಶದಲ್ಲಿತ್ತು ಎಂದು ನಿರ್ಧರಿಸಲಾಗಿತ್ತು. ಸೋಮವಾರ ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.0 ತೀವ್ರತೆಯ ಪ್ರಬಲ ಭೂಕಂಪ ಉಂಟಾಗಿತ್ತು. ಈ ಭೂಕಂಪನದಿಂದಾಗಿ ಈವರೆಗೆ 1,400ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಮೊದಲೇ ಅಫ್ಘಾನಿಸ್ತಾನದಲ್ಲಿರುವ ವಿಶ್ವಸಂಸ್ಥೆಯು ಪರಿಸ್ಥಿತಿಯಿಂದ “ತೀವ್ರ ದುಃಖಿತವಾಗಿದೆ” ಎಂದು ಹೇಳಿದೆ. ಎಕ್ಸ್ ಕುರಿತು ಹೇಳಿಕೆಯಲ್ಲಿ, ಯುಎನ್ ತನ್ನ ತಂಡಗಳು ಈಗಾಗಲೇ “ತುರ್ತು…
ಬೆಂಗಳೂರು : ಜಿಎಸ್ಟಿ ತೆರಿಗೆ ವ್ಯವಸ್ಥೆ ಜಾರಿಯಾದ ನಂತರ ರಾಜ್ಯದ ಆದಾಯದಲ್ಲಿ ವಾರ್ಷಿಕ ಸರಾಸರಿ ರೂ. 70,000 ಕೋಟಿ ಖೋತಾ ಆಗುತ್ತಿದೆ. ಇದೀಗ ಕೇಂದ್ರ ಸರ್ಕಾರದ ದರ ಸರಳೀಕರಣ ಪ್ರಸ್ತಾವನೆಯಿಂದ ಹೆಚ್ಚುವರಿ 15,000 ಕೋಟಿ ಖೋತಾ ಆಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಆತಂಕ ವ್ಯಕ್ತಪಡಿಸಿದರು. ಮಂಗಳವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಜಿಎಸ್ಟಿ ತೆರಿಗೆ ವ್ಯವಸ್ಥೆ ಜಾರಿಯಾಗುವ ಮೊದಲು ರಾಜ್ಯದ ಆದಾಯದ ಪ್ರಗತಿ ವರ್ಷಕ್ಕೆ ಶೇ.13 (ಐದು ವರ್ಷಗಳ ಸರಾಸರಿ). ಆದರೆ, ಈ ಪ್ರಮಾಣ ಇದೀಗ ಶೇ.11ಕ್ಕೆ ಇಳಿದಿದೆ. ರಾಜ್ಯದ ಆದಾಯ ಹಿಂದಿನ ವೇಗದಲ್ಲೇ ಮುಂದುವರೆದಿದ್ದರೆ 2024-25 ರಲ್ಲಿ ರಾಜ್ಯದ ಆದಾಯ 1,07,846 ಕೋಟಿ ಆಗಬೇಕಿತ್ತು. ಆದರೆ, ವಾಸ್ತವ ಆದಾಯ 77,169 ಕೋಟಿ ಮಾತ್ರ. ಒಂದೇ ವರ್ಷದಲ್ಲಿ ರಾಜ್ಯದ ಆದಾಯ 30,677 ಕೋಟಿ ಆದಾಯ ಖೋತಾ ಆಗಿದೆ. ಇದೇ ರೀತಿ 2023-24 ರಲ್ಲಿ 24,170 ಕೋಟಿ ಹಾಗೂ 2022-23 ರಲ್ಲಿ 22,654 ಕೋಟಿ ಖೋತಾ ಆಗಿತ್ತು” ಎಂದು…
ಬೆಂಗಳೂರು: ಅಬಕಾರಿ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರು ಹೇಳಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಬಕಾರಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿ ನಡೆಸಿದರು. ಮೊದಲೆರಡು ತ್ರೈಮಾಸಿಕದಲ್ಲಿ ನಿರೀಕ್ಷಿತ ಪ್ರಮಾಣಕ್ಕಿಂತ ಹೆಚ್ಚಿನ ಆದಾಯ ಬಂದಿದೆ. ರೂ 16,290 ಕೋಟಿ ಆದಾಯದ ನಿರೀಕ್ಷೆ ಹೊಂದಲಾಗಿತ್ತು. ಆದರೆ, ರೂ 16,358 ಕೋಟಿ ಆದಾಯ ಬಂದಿದ್ದು, ನಿರೀಕ್ಷೆಗಿಂತ ರೂ 68.78 ಕೋಟಿ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದರು. ಇದರ ಜೊತೆಗೆ ಅಬಕಾರಿ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ತೆರಿಗೆ ಸಂಗ್ರಹಣೆ ಇಲಾಖೆಯಲ್ಲಿ ಮೊದಲ ಬಾರಿಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ಇದರಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ. ಇಲಾಖೆಯಲ್ಲಿ ಡಿಜಿಟಲ್ ವ್ಯವಸ್ಥೆ ಜಾರಿ ಮಾಡಲಾಗುತ್ತಿದ್ದು, ಆನ್ಲೈನ್ ಮುಖಾಂತರ ಪರವಾನಿಗೆ ನವೀಕರಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಭ್ರಷ್ಟಾಚಾರಕ್ಕೆ ಅವಕಾಶ ಸಿಗದಂತೆ ಸಿಎಲ್ 7 ಲೈಸನ್ಸ್ ನೀಡುವ ಹಂತಗಳನ್ನು ಕಡಿತಗೊಳಿಸಲಾಗಿದೆ ಎಂದು ಸಚಿವ ತಿಮ್ಮಾಪೂರ ಅವರು…
ನವದೆಹಲಿ : ದೇಶ ವಿರೋಧಿ ಚಟುವಟಿಕೆಗಳು, ಬೇಹುಗಾರಿಕೆ, ಅತ್ಯಾಚಾರ ಮತ್ತು ಕೊಲೆ, ಭಯೋತ್ಪಾದಕ ಕೃತ್ಯಗಳು, ಮಕ್ಕಳ ಕಳ್ಳಸಾಗಣೆ ಅಥವಾ ನಿಷೇಧಿತ ಸಂಘಟನೆಯ ಸದಸ್ಯರಾಗಿರುವ ಆರೋಪದ ಮೇಲೆ ಶಿಕ್ಷೆಗೊಳಗಾದ ವಿದೇಶಿಯರಿಗೆ ಭಾರತಕ್ಕೆ ಪ್ರವೇಶ ನಿರಾಕರಿಸಬಹುದು ಅಥವಾ ಅಲ್ಲಿಯೇ ಉಳಿಯಲು ನಿರಾಕರಿಸಬಹುದು ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ. ಇತ್ತೀಚೆಗೆ ಪರಿಚಯಿಸಲಾದ ವಲಸೆ ಮತ್ತು ವಿದೇಶಿಯರ ಕಾಯ್ದೆ, 2025 ರ ಅಡಿಯಲ್ಲಿ, ಪ್ರತಿ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶ ಆಡಳಿತವು ವಿದೇಶಿಯರನ್ನು ಗಡೀಪಾರು ಮಾಡುವವರೆಗೆ ಅವರ ಚಲನೆಯನ್ನು ನಿರ್ಬಂಧಿಸುವ ಉದ್ದೇಶಕ್ಕಾಗಿ ಮೀಸಲಾದ ಹೋಲ್ಡಿಂಗ್ ಸೆಂಟರ್ಗಳು ಅಥವಾ ಬಂಧನ ಶಿಬಿರಗಳನ್ನು ಸ್ಥಾಪಿಸುತ್ತದೆ ಎಂದು ಗೃಹ ಸಚಿವಾಲಯ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ. ಭಾರತದ ವಿದೇಶಿ ನಾಗರಿಕ ಕಾರ್ಡ್ ಹೊಂದಿರುವವರ ನೋಂದಣಿ ಸೇರಿದಂತೆ ಯಾವುದೇ ವರ್ಗದ ವೀಸಾಕ್ಕೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ವಿದೇಶಿಯರೂ, ಅಂತಹ ವೀಸಾ ಅಥವಾ OCI ಕಾರ್ಡ್ ಹೊಂದಿರುವವರ ನೋಂದಣಿಯನ್ನು ನೀಡುವ ಮೊದಲು ವೀಸಾ ನೀಡುವ ಪ್ರಾಧಿಕಾರ ಅಥವಾ OCI ಕಾರ್ಡ್ ಹೊಂದಿರುವವರ ನೋಂದಣಿಯನ್ನು ನೀಡುವ…
ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಗಳಿಗೆ ಪೌಷ್ಠಿಕ ಆಹಾರ ಒದಗಿಸುವ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ಒಂದೇ ರೀತಿಯ ಸಾಮಾನ್ಯ ಆಹಾರದ ಬದಲು ರೋಗಿಗಳಿಗೆ ಅಗತ್ಯ ಪೌಷ್ಠಿಕಾಂಶ ಒದಗಿಸುವ ಆಹಾರವನ್ನು ನೀಡುವ ಯೋಜನೆಯನ್ನು ಆರೋಗ್ಯ ಇಲಾಖೆ ಇಸ್ಕಾನ್ ಸಂಸ್ಥೆಯ ಸಹಭಾಗಿತ್ವದೊಂದಿಗೆ ಜಾರಿಗೆ ತಂದಿದೆ. ಬೆಂಗಳೂರಿನ ಸಿ.ವಿ ರಾಮನ್ ನಗರ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಹಾರ ವಿತರಿಸುವ ಮೂಲಕ ‘ವಿಶೇಷ ಪೌಷ್ಟಿಕ ಆಹಾರ’ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ರೋಗಿಗಳ ಚೇತರಿಕೆಗೆ ಚಿಕಿತ್ಸೆಯ ಜೊತೆಗೆ ಪೌಷ್ಠಿಕ ಆಹಾರ ಸೇವನೆ ಕೂಡ ಮಹತ್ವದ ಪಾತ್ರ ವಹಿಸಲಿದೆ.. ಈ ಯೋಜನೆಯ ಮೂಲಕ ರೋಗಿಗಳ ನಿರ್ದಿಷ್ಟ ಪೌಷ್ಟಿಕಾಂಶದ ಅಗತ್ಯಗಳನ್ನು ಪೂರೈಸುವ ಆಹಾರವನ್ನ ಒದಗಿಸಲಾಗುವುದು. ರೋಗಿಗಳ ಆರೋಗ್ಯ ಸ್ಥಿತಿ ಮತ್ತು ವಯಸ್ಸಿಗೆ ಅನುಗುಣವಾಗಿ ಪೌಷ್ಟಿಕಾಂಶದ ಅಗತ್ಯಗಳು ಭಿನ್ನವಾಗಿರುವುದರಿಂದ, ಎಲ್ಲರಿಗೂ ಒಂದೇ ರೀತಿಯ ಆಹಾರ ಸೂಕ್ತವಲ್ಲ. ಆಹಾರ ಪದ್ಧತಿಯನ್ನು ಸಂಪೂರ್ಣವಾಗಿ ಪರಿಷ್ಕರಿಸಲಾಗಿದ್ದು, ರೋಗಿಗಳ…
ಯಾದಗಿರಿ: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ, ಶಾಕಿಂಗ್ ಕೃತ್ಯ ಎನ್ನುವಂತೆ ಚಿಕ್ಕಮ್ಮನ ಮೇಲೆಯೇ ಪೊಲೀಸ್ ಕಾನ್ಸ್ ಸ್ಟೇಬಲ್ ಹಾಗೂ ಸಹೋದರ ಅತ್ಯಾಚಾರವೆಸಗಿರುವಂತ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಗಿರುಮಿಠಕಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಚಾರ ಠಾಣೆಯ ಕಾನ್ಸ್ ಸ್ಟೇಬಲ್ ರಮೇಶ್ ಹಾಗೂ ಆತನ ಸಹೋದರ ಜೆಸ್ಕಾಂ ನೌಕರನಾಗಿರುವಂತ ಲಕ್ಷ್ಮಣ್ ಸೇರಿಕೊಂಡು ಚಿಕ್ಕಪ್ಪನ ಪತ್ನಿ ಚಿಕ್ಕಮ್ಮನ ಮೇಲೆಯೇ ನಿರಂತರವಾಗಿ ಅತ್ಯಾಚಾರ ಎಸಗಿರುವಂತ ಘಟನೆ ಬೆಳಕಿಗೆ ಬಂದಿದೆ. ನಿರಂತರ ಅತ್ಯಾಚಾರದಿಂದ ಬೇಸತ್ತು ಸಂತ್ರಸ್ತೆ ಯಾದಗಿರಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರು ಯಾದಗಿರಿ ಸಂಚಾರ ಠಾಣೆಯ ಕಾನ್ ಸ್ಟೇಬಲ್ ರಮೇಶ್ ಹಾಗೂ ಆತನ ಸಹೋದರ ಜೆಸ್ಕಾಂ ನೌಕರ ಲಕ್ಷ್ಮಣ್ ವಿರುದ್ಧ ಪ್ರಕರಣ ದಾಖಲಾಗಿದೆ. ಅಂದಹಾಗೇ ಸತತ 7 ವರ್ಷಗಳಿಂದ ಜೀವ ಬೆದರಿಕೆ ಹಾಕಿ ಪೇದೇ, ಜೆಸ್ಕಾಂ ನೌಕರ ನಿರಂತರವಾಗಿ ಚಿಕ್ಕಮ್ಮನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಬಗ್ಗೆ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. https://kannadanewsnow.com/kannada/udays-counter-to-yatnals-statement-those-who-did-not-join-the-bjp-earlier-will-they-join-now/ https://kannadanewsnow.com/kannada/the-government-has-ordered-the-appointment-of-commissioners-to-the-five-municipalities-of-the-greater-bangalore-authority/
ಮಂಡ್ಯ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಈ ಹಿಂದೆಯೇ ಬಿಜೆಪಿಯಲ್ಲಿ ಸಾಕಷ್ಟು ಹುದ್ದೆಗಳ ಆಮೀಷಗಳು ಬಂದಿದ್ದವು. ಆದರೆ, ಆಗಲೇ ಬಿಜೆಪಿ ಸೇರದವರು ಈಗ ಸೇರ್ತಾರಾ ಎಂದು ಶಾಸಕ ಕೆ.ಎಂ.ಉದಯ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೋರಾಪುರ, ಕುದುರಗುಂಡಿ, ಅಜ್ಜಹಳ್ಳಿ, ಮಠದದೊಡ್ಡಿ, ಬೊಮ್ಮನದೊಡ್ಡಿ, ಕಳ್ಳಿಮೆಳೆದೊಡ್ಡಿ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ನಾಯಕರು ಪಕ್ಷ ಸೇರ್ಪಡೆಗೆ ಹಲವು ಬಾರಿ ಚರ್ಚೆ ನಡೆಸಿ ಮಹತ್ವದ ಹುದ್ದೆಗಳ ಆಮೀಷ ನೀಡಿದ್ದರು. ಅವರು ಸಹ ಬಿಜೆಪಿ ಸೇರಿ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದಿತ್ತು. ಆದರೆ, ಅವರು ಅಂತಹ ನಿರ್ಧಾರ ತೆಗೆದುಕೊಳ್ಳಲಿಲ್ಲ. ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿದ್ದಾರೆ. ಪಕ್ಷ ನಿಷ್ಠೆ, ಪ್ರಾಮಾಣಿಕತೆ ಮತ್ತು ಪ್ರಬುದ್ದತೆಯಿಂದ ಕಾಂಗ್ರೆಸ್ ಪಕ್ಷವನ್ನು ಮುನ್ನೆಡೆಸಿಕೊಂಡು ಹೋಗುತ್ತಿದ್ದಾರೆ. ರಾಜ್ಯಾದ್ಯಂತ ಹಗಲಿರುಳು ಪ್ರವಾಸ ಮತ್ತು ಸಂಘಟನೆ ಮಾಡಿ ರಾಜ್ಯದಲ್ಲಿ 136 ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಹೀಗಾಗಿ…
ಬೆಂಗಳೂರು: ನಗರದಲ್ಲಿ ಪ್ರಯಾಣಿಕರ ಸಮೇತ ಬಸ್ ಒಂದನ್ನು ಟ್ರಾಫಿಕ್ ಪೊಲೀಸರು ಸೀಜ್ ಮಾಡಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬಳಿಯಲ್ಲಿ ನಿನ್ನೆ ಈ ಘಟನೆ ನಡೆದಿದೆ. ಬೆಂಗಳೂರಿನ ಹೆಬ್ಬಾಳದ ಬಳಿಯಲ್ಲಿ ಹೊಸಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸನ್ನು ಚಾಲಕ ಎಸ್ಟೀಮ್ ಮಾಲ್ ಬಳಿಯಲ್ಲಿ ನಿಲ್ಲಿಸಿದ್ದನು. ಇಂತಹ ಬಸ್ಸನ್ನು ಸಂಜಯ ನಗರ ಸಂಚಾರ ಠಾಣೆಯ ಪೊಲೀಸರು ಸೀಜ್ ಮಾಡಿದ್ದರು. ರಸ್ತೆಯಲ್ಲಿ ಸ್ಟಾಪ್ ನೀಡದ್ದಕ್ಕೆ ಪ್ರಯಾಣಿಕರ ಸಮೇತ ಕೆ ಎಸ್ ಆರ್ ಟಿ ಸಿ ಬಸ್ಸನ್ನು ಸಂಚಾರ ಪೊಲೀಸರು ಸೀಜ್ ಮಾಡಿದ್ದಾರೆ. ಕೆ ಎಸ್ ಆರ್ ಟಿ ಸಿ ಬಸ್ಸನ್ನು ಸ್ಟೇಷನ್ನಿಗೆ ಸಂಚಾರ ಠಾಣೆಯ ಕಾನ್ಸ್ ಟೇಬಲ್ ಕೊಂಡೊಯ್ದಿದ್ದಾರೆ. ಪ್ರಯಾಣಿಕರು ತುರ್ತಾಗಿ ಹೋಗಬೇಕು ಎಂಬುದಾಗಿ ಮನವಿ ಮಾಡಿದರೂ, ಅದಕ್ಕೆ ಬಗ್ಗದೇ ಬಸ್ ಜಪ್ತಿಯನ್ನು ಪೊಲೀಸರು ಮಾಡಿದ್ದಾರೆ. https://kannadanewsnow.com/kannada/shock-to-those-who-tortured-the-kalinga-snake-for-a-photo-shoot-forest-minister-eshwar-khandre-orders-an-investigation/ https://kannadanewsnow.com/kannada/the-government-has-ordered-the-appointment-of-commissioners-to-the-five-municipalities-of-the-greater-bangalore-authority/
ಬೆಂಗಳೂರು: ಸಂಶೋಧನೆ, ಅಧ್ಯಯನದ ಹೆಸರಿನಲ್ಲಿ ವನ್ಯ ಜೀವಿ ಅಭಯಾರಣ್ಯದಲ್ಲಿ ಕಾಳಿಂಗ ಸರ್ಪಕ್ಕೆ ಪೋಟೋ ಶೂಟ್ ಹೆಸರಿನಲ್ಲಿ ಕಾಟ ಕೊಟ್ಟಿದ್ದು ವೈರಲ್ ಆಗಿತ್ತು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವಂತ ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆ ನಡೆಸಿ, ವರದಿಗೆ ಸೂಚಿಸಿದ್ದಾರೆ. ಈ ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆ. ಇಂದು ಈ ಕುರಿತಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪತ್ರ ಬರೆದಿದ್ದಾರೆ. ಅದರಲ್ಲಿ ಜನ ಸಂಗ್ರಾಮ ಪರಿಷತ್ತು. ಶಿವಮೊಗ್ಗ ಜಿಲ್ಲಾಧ್ಯಕ್ಷ ಅಖಿಲೇಶ್ ಚಿಪ್ಸ್, ಪತ್ರಕರ್ತ ಉದಯ್ ಸಾಗರ್, ಕನಕಪುರ ತಾಲೂಕಿನ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಇ- ಮೇಲ್ ಮೂಲಕ ಈ ಕಚೇರಿಗೆ ಸಲ್ಲಿಸಿರುವ ಸ್ವಯಂವೇದ್ಯ ಮನವಿ/ದೂರಿನ ಪ್ರತಿಯನ್ನು ಲಗತ್ತಿಸಲಾಗಿದ್ದು, ಅದರಲ್ಲಿ ಅವರು, ಆಗುಂಬೆ ಮಳೆಕಾಡು ಸಂಶೋಧನಾ ಕೇಂದ್ರ (ARRS)ದ ಚಟುವಟಿಕೆಗಳ ಬಗ್ಗೆ ಪ್ರಸ್ತಾಪಿಸಿ, ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕು, ಆಗುಂಬೆ ಹೋಬಳಿ, ತಲ್ಲೂರು ಗ್ರಾಮ ಸ.ನಂ.11 ಸೋಮೇಶ್ವರ ಅಭಯಾರಣ್ಯದ…
ಶಿವಮೊಗ್ಗ: ದೊಡ್ಡ ದೊಡ್ಡ ಕಾರ್ಯಕ್ರಮಗಳಲ್ಲಿ ನೂರಾರು, ಸಾವಿರಾರು ಜನರಿಗೆ ಕಾರ್ಯಕ್ರಮದಲ್ಲಿ ಮಾತನಾಡುವವ ಮಾತು ಕೇಳಬೇಕೆಂದ್ರೆ ಮೈಕ್ ಬಹುಮುಖ್ಯ. ಒಂದು ವೇಳೆ ಮೈಕ್ ಕೈಕೊಟ್ರೆ ಕಾರ್ಯಕ್ರಮದ ಆಯೋಜಕರ ವಿರುದ್ಧ ಗರಂ ಆಗುವವರೇ ಹೆಚ್ಚು. ಆದರೇ ಇಂದು ಸಾಗರದಲ್ಲಿ ನಡೆದಂತ ಪ್ರೌಢಶಾಲಾ ಮಟ್ಟದ ಕ್ರೀಡಾಕೂಟದ ವೇಳೆಯಲ್ಲಿ ಮೈಕ್ ಕೈ ಕೊಟ್ಟರೂ ಸೌಜನ್ಯ ಮೆರೆದಂತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಮೈಕ್ ಇಲ್ಲದೇ ಗಟ್ಟಿ ಧ್ವನಿಯಲ್ಲಿ ಮಾತನಾಡಿ ಎಲ್ಲರ ಮೆಚ್ಚುಗೆ ಗಳಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನೆಹರು ಮೈದಾನದಲ್ಲಿ ಪ್ರೌಢಶಾಲಾ ವಲಯ ಮಟ್ಟದ ಕ್ರೀಡಾಕೂಟವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು. ಈ ಉದ್ಘಾಟನೆಯ ಬಳಿಕ ಡಯಾಸ್ ಬಳಿಗೆ ತೆರಳಿ ಮಾತನಾಡೋದಕ್ಕೆ ಪ್ರಾರಂಭಿಸಿದ ವೇಳೆಯಲ್ಲಿ ಮೈಕ್ ಕೈಕೊಟ್ಟಿತು. ಸೌಂಡ್ ಸಿಸ್ಟಮ್ ಹಾಕಿದ್ದಂತವರು ಎಷ್ಟೇ ರಿಪೇರಿ ಮಾಡಿದರೂ ಮೈಕ್ ಸರಿ ಹೋಗಲೇ ಇಲ್ಲ. ಈ ವೇಳೆ ಸಿಟ್ಟಾಗದಂತ ಶಾಸಕ ಗೋಪಾಲಕೃಷ್ಣ ಬೇಳೂರು, ಮೈಕ್ ಇಲ್ಲದೆಯೂ ಬಹುದೊಡ್ಡ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದಂತ ಪ್ರೌಢಶಾಲಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ನೆರೆದಿದ್ದಂತ ಮಕ್ಕಳನ್ನು…













