Author: kannadanewsnow09

ಬೆಳ್ತಂಗಡಿ: ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡವಿದೆ. ಈ ಕುರಿತಂತೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದೂ ಹೋರಾಟಗಾರ ಪ್ರಶಾಂತ್ ಸಂಬರಗಿ ಎಸ್ಐಟಿಗೆ ದೂರು ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅನುಮತಿ ಇಲ್ಲದೆ ಯಾವುದೇ ಸುದ್ದಿ ಮತ್ತು ಪ್ರಸ್ತುತ ಘಟನೆಗಳ ಮಾಹಿತಿ ಮತ್ತು ಸುದ್ದಿಯನ್ನು ಬಿತ್ತರಿಸುವಂತಿಲ್ಲ. ರಾಷ್ಟ್ರದ ಹಿತಾಸಕ್ತಿಯಿಂದ ಸುದ್ದಿ ಪ್ರಸಾರಕ್ಕೆ ಸಚಿವಾಲಯದ ಅನುಮತಿ ಅಗತ್ಯ. ಆದರೆ ಯೂಟ್ಯೂಬ್ ಚಾನೆಲ್ ಗಳಾದ ಡಿ ಟಾಕ್ಸ್ , ಕುಡ್ಲ ರ್ಯಾಂಪೇಜ್, ಮಹಮ್ಮದ ಸಮೀರ್, ವಾರ್ತಾ ಭಾರತಿ, ಕನ್ನಡ ಪ್ಲಾನೆಟ್ ಇವರುಗಳು ಸುದ್ದಿಯನ್ನು ಮತ್ತು ಸುಳ್ಳು ಸುದ್ದಿಯನ್ನು ಬಿತ್ತರ ಮಾಡಿದಲ್ಲದೆ. ಪ್ರೊಟೆಕ್ಟೆಡ್ ವಿಟ್ನೆಸ್ ಸ್ಕೀಮ್ ಅಡಿಯಲ್ಲಿದ್ದ ಚಿನ್ನಯ್ಯನ ಕಾನೂನು ಬಾಹಿರವಾಗಿ ಸಂದರ್ಶನ ಮಾಡಿ ಎಂದಿದ್ದಾರೆ. ಭಾರತೀಯ ಕಾನೂನನ್ನು ನಗೆಪಾಟಲಿ ಮಾಡಿದ್ದಾರೆ. ಚಿನ್ನಯ್ಯನ್ನ ಸಂದರ್ಶನವನ್ನು ದೂರು ದಾಖಲಾತಿಗೂ ಮುನ್ನ ಅಥವಾ ದೂರು ದಾಖಲಾದ ನಂತರ…

Read More

ರಾಜಸ್ಥಾನದ ಬಿಕಾನೇರ್‌ನಲ್ಲಿ ಸಂಜಯ್ ಲೀಲಾ ಬನ್ಸಾಲಿ ಮತ್ತು ಇತರ ಇಬ್ಬರ ವಿರುದ್ಧ ವಂಚನೆ, ದುರುಪಯೋಗ ಮತ್ತು ನಂಬಿಕೆ ದ್ರೋಹದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಈ ಎಫ್‌ಐಆರ್ ಭನ್ಸಾಲಿ ಅವರ ಮುಂಬರುವ ಚಿತ್ರ ಲವ್ & ವಾರ್‌ಗೆ ಸಂಬಂಧಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಸಂಜಯ್ ಲೀಲಾ ಬನ್ಸಾಲಿ ವಿರುದ್ಧ ಎಫ್‌ಐಆರ್ ವರದಿಯ ಪ್ರಕಾರ, ಪ್ರತೀಕ್ ರಾಜ್ ಮಾಥುರ್ ಅವರು ದೂರು ದಾಖಲಿಸಿದ್ದಾರೆ, ಅವರು ಬನ್ಸಾಲಿ ಅವರಿಂದ ಲೈನ್ ಪ್ರೊಡ್ಯೂಸರ್ ಆಗಿ ಒಪ್ಪಂದವನ್ನು ಪಡೆದಿದ್ದಾರೆ ಎಂದು ಹೇಳಿಕೊಂಡರು, ಆದರೆ ನಂತರ ಅದನ್ನು ರದ್ದುಗೊಳಿಸಲಾಯಿತು. ಸರ್ಕಲ್ ಆಫೀಸರ್ (ಬಿಕಾನೇರ್ ಸದರ್) ವಿಶಾಲ್ ಜಾಂಗಿಡ್ ಅವರು ಪಿಟಿಐಗೆ ಮಾಥುರ್ ಅವರು ಬನ್ಸಾಲಿ ಮತ್ತು ಅವರ ಇಬ್ಬರು ತಂಡದ ಸದಸ್ಯರು ಲೈನ್ ಪ್ರೊಡ್ಯೂಸರ್ ಆಗಿ ಜವಾಬ್ದಾರಿಗಳನ್ನು ವಹಿಸಿದ ನಂತರ ಪಾವತಿ ಇಲ್ಲದೆ ಯೋಜನೆಯಿಂದ ತಮ್ಮನ್ನು ತೆಗೆದುಹಾಕಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಹೇಳಿದರು. ನ್ಯಾಯಾಲಯದ ಆದೇಶದ ಮೇರೆಗೆ ಸೋಮವಾರ ಬಿಚ್ವಾಲ್…

Read More

ನವದೆಹಲಿ: ಕೃತಕ ಬುದ್ಧಿಮತ್ತೆ ಮತ್ತೊಮ್ಮೆ ತಂತ್ರಜ್ಞಾನ ಜಗತ್ತನ್ನು ಅಲ್ಲಾಡಿಸುತ್ತಿದೆ. ಈ ಬಾರಿ ಸೇಲ್ಸ್‌ಫೋರ್ಸ್‌ನಲ್ಲಿ. ಅಮೇರಿಕನ್ ಕ್ಲೌಡ್ ಸಾಫ್ಟ್‌ವೇರ್ ದೈತ್ಯ 4,000 ಗ್ರಾಹಕ ಬೆಂಬಲ ಉದ್ಯೋಗಗಳನ್ನು ಕಡಿತಗೊಳಿಸಿದೆ. ಒಂದು ಕಾಲದಲ್ಲಿ ಜನರಿಂದ ನಿರ್ವಹಿಸಲ್ಪಡುತ್ತಿದ್ದ ಕಾರ್ಯಗಳನ್ನು ನಿರ್ವಹಿಸಲು AI ಮೇಲೆ ಹೆಚ್ಚು ಅವಲಂಬಿತವಾಗಿದೆ. ಸಿಇಒ ಮಾರ್ಕ್ ಬೆನಿಯೋಫ್ ಲೋಗನ್ ಬಾರ್ಟ್ಲೆಟ್ ಪಾಡ್‌ಕ್ಯಾಸ್ಟ್‌ನಲ್ಲಿ ಈ ಕ್ರಮವನ್ನು ದೃಢಪಡಿಸಿದರು, ಬೆಂಬಲ ತಂಡವನ್ನು 9,000 ರಿಂದ 5,000 ಉದ್ಯೋಗಿಗಳಿಗೆ ಇಳಿಸಲಾಗಿದೆ ಎಂದು ಬಹಿರಂಗಪಡಿಸಿದರು. “ನನ್ನ ಬೆಂಬಲದಲ್ಲಿ ನನ್ನ ಮುಖ್ಯಸ್ಥರ ಸಂಖ್ಯೆಯನ್ನು ಮರುಸಮತೋಲನಗೊಳಿಸಲು ನನಗೆ ಸಾಧ್ಯವಾಯಿತು. ನನಗೆ ಕಡಿಮೆ ಮುಖ್ಯಸ್ಥರ ಅಗತ್ಯವಿದ್ದ ಕಾರಣ ನಾನು ಅದನ್ನು 9,000 ಮುಖ್ಯಸ್ಥರಿಂದ ಸುಮಾರು 5,000 ಕ್ಕೆ ಇಳಿಸಿದೆ” ಎಂದು ಬೆನಿಯೋಫ್ ಹೇಳಿದರು. ವಾಸ್ತವವಾಗಿ, ಸೇಲ್ಸ್‌ಫೋರ್ಸ್‌ನ ಬೆಂಬಲ ವಿಭಾಗದ ಸುಮಾರು ಅರ್ಧದಷ್ಟು ಭಾಗವನ್ನು ಕಡಿಮೆ ಮಾಡಲಾಗಿದೆ. ಈ ನಿರ್ಧಾರವು ಕೇವಲ ಎರಡು ತಿಂಗಳ ಹಿಂದೆ ಬೆನಿಯೋಫ್ ಅವರ ಸ್ವಂತ ಕಾಮೆಂಟ್‌ಗಳಿಂದ ಸಂಪೂರ್ಣವಾಗಿ ಹಿಮ್ಮುಖವಾಗಿದೆ. ಜುಲೈನಲ್ಲಿ, ಅವರು ಫಾರ್ಚೂನ್‌ಗೆ AI ಕಾರ್ಮಿಕರನ್ನು ಬದಲಾಯಿಸುವ ಬದಲು ಅವರನ್ನು…

Read More

ಬೆಂಗಳೂರು: ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಗೆ ಬಿಗ್ ಶಾಕ್ ನೀಡಲಾಗಿದೆ. ಡಿಆರ್ ಐನಿಂದ 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನಲೆಯಲ್ಲಿ ನಟಿ ರನ್ಯಾ ರಾವ್ ಗೆ ಬರೋಬ್ಬರಿ 102 ಕೋಟಿ ರೂಪಾಯಿ ದಂಡವನ್ನು ಕಟ್ಟುವಂತೆ ಡಿ ಆರ್ ಐ ನೋಟಿಸ್ ನೀಡಿ, ಬಿಗ್ ಶಾಕ್ ನೀಡಿದೆ. ಸ್ಯಾಂಡಲ್ ವುಟ್ ನಟಿ ರನ್ಯಾ ರಾವ್ ಗೆ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಡಿ ಆರ್ ಐ ಬಿಗ್ ಶಾಕ್ ನೀಡಲಾಗಿದೆ. 127 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ್ದು ಸಾಬೀತಾದ ಹಿನ್ನಲೆಯಲ್ಲಿ 102 ಕೋಟಿ ರೂಪಾಯಿ ದಂಡ ಪಾವತಿ ಮಾಡುವಂತೆ ನಟಿ ರನ್ಯಾ ರಾವ್ ಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಸೇರಿದಂತೆ ನಾಲ್ವರು ಆರೋಪಿಗಳಇಗೆ ಡಿ ಆರ್ ಐ ಶೋಕಾಸ್ ನೋಟಿಸ್ ನೀಡಿದೆ. ಈಗಾಗಲೇ ಇಡಿ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗೆ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ನಗರ ಪಾಲಿಕೆ ಆಯುಕ್ತರಾಗಿ ಐಎಎಸ್ ಅಧಿಕಾರಿ ರಾಜೇಂದ್ರ ಚೋಳನ್ ನೇಮಕ ಮಾಡಲಾಗಿದೆ. ಪೂರ್ವ ನಗರ ಪಾಲಿಕೆ ಆಯುಕ್ತರಾಗಿ ರಮೇಶ್ ಜಿ ಎಸ್, ಪೂರ್ವ ಅಪರ ಆಯುಕ್ತೆಯಾಗಿ ಸ್ನೇಹಲ್ ಸುಧಾಕರ್ ನೇಮಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಉತ್ತರ ನಗರ ಪಾಲಿಕೆ ಆಯುಕ್ತೆಯಾಗಿ ಪೊಮ್ಮಳ ಸುನೀಲ್ ಕುಮಾರ್, ದಕ್ಷಿಣ ನಗರ ಪಾಲಿಕೆ ಆಯುಕ್ತರಾಗಿ ರಮೇಶ್.ಕೆ ಎನ್, ದಕ್ಷಿಣ ಪಾಲಿಕೆ ಅಪರ ಆಯುಕ್ತರಾಗಿ ಪಾಂಡುರಾಹುಲ್ ತುಕಾರಾಮ್, ಪಶ್ಚಿಮ ನಗರ ಪಾಲಿಕೆ ಆಯುಕ್ತರಾಗಿ ರಾಜೇಂದ್ರ ಕೆ.ವಿ ನೇಮಕ ಮಾಡಲಾಗಿದೆ.

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಸ್ಯಾಂಡಲ್ ವುಡ್ ಹಿರಿಯ ನಟಿಯರು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ನಟ ಡಾ.ವಿಷ್ಣು ವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವಂತೆ ಮನವಿ ಮಾಡಲಾಗಿದೆ. ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಹಿರಿಯ ನಟಿಯರಾದಂತ ಜಯಮಾಲ, ಮಾಳವಿಕಾ ಅವಿನಾಶ್ ಹಾಗೂ ಶೃತಿ ಭೇಟಿ ಮಾಡಿದರು. ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದಂತ ಕನ್ನಡದ ಹಿರಿಯ ನಟಿಯರು ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವಂತೆ ಮನವಿಯನ್ನು ಸಲ್ಲಿಸಿದರು. https://kannadanewsnow.com/kannada/major-reshuffle-in-the-administration-by-the-state-government-10-ias-officers-transferred/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಬರೋಬ್ಬರಿ 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.  ಈ ಕುರಿತಂತೆ ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ಬೆಂಗಳೂರಿನ ಉಪಮುಖ್ಯಮಂತ್ರಿಗಳ ಕಾರ್ಯದರ್ಶಿ ರಾಜೇಂದ್ರ ಚೋಳನ್ ಪಿ., ಐಎಎಸ್ (ಕೆಎನ್: 2008) ಅವರನ್ನು ಬೆಂಗಳೂರು ಸೆಂಟ್ರಲ್ ಸಿಟಿ ಕಾರ್ಪೊರೇಷನ್, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರಿನ ಆಯುಕ್ತರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನಿಯೋಜಿಸಲಾಗಿದೆ. ಬೆಂಗಳೂರಿನ ರಾಷ್ಟ್ರೀಯ ತೋಟಗಾರಿಕಾ ಮಿಷನ್‌ನ ನಿರ್ದೇಶಕರು ಮತ್ತು ತೋಟಗಾರಿಕೆ ನಿರ್ದೇಶಕರು ರಮೇಶ್ ಡಿ.ಎಸ್., ಐಎಎಸ್ (ಕೆಎನ್: 2010) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರು ಪೂರ್ವ ನಗರ ನಿಗಮ, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರಿನ ಆಯುಕ್ತರಾಗಿ ನೇಮಿಸಲಾಗಿದೆ. ಬೆಂಗಳೂರಿನ ಕಂದಾಯ (ಕಂದಾಯ, ಎಲ್‌ಎಕ್ಯೂ, ಆರ್ & ಆರ್ ಮತ್ತು ಸಾಮಾಜಿಕ ಭದ್ರತೆ) ಆಯುಕ್ತರಾದ ಪೊಮ್ಮಲ ಸುನಿಲ್ ಕುಮಾರ್, ಐಎಎಸ್ (ಕೆಎನ್: 2011) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ…

Read More

ಬೆಂಗಳೂರು: ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಗೆ ಬಿಗ್ ಶಾಕ್ ನೀಡಲಾಗಿದೆ. ಡಿಆರ್ ಐನಿಂದ 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನಲೆಯಲ್ಲಿ ನಟಿ ರನ್ಯಾ ರಾವ್ ಗೆ ಬರೋಬ್ಬರಿ 102 ಕೋಟಿ ರೂಪಾಯಿ ದಂಡವನ್ನು ವಿಧಿಸಲಾಗಿದೆ. ಸ್ಯಾಂಡಲ್ ವುಟ್ ನಟಿ ರನ್ಯಾ ರಾವ್ ಗೆ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಡಿ ಆರ್ ಐ ಬಿಗ್ ಶಾಕ್ ನೀಡಲಾಗಿದೆ. 127 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ್ದು ಸಾಬೀತಾದ ಹಿನ್ನಲೆಯಲ್ಲಿ 102 ಕೋಟಿ ರೂಪಾಯಿ ದಂಡ ಪಾವತಿ ಮಾಡುವಂತೆ ನಟಿ ರನ್ಯಾ ರಾವ್ ಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಸೇರಿದಂತೆ ನಾಲ್ವರು ಆರೋಪಿಗಳಇಗೆ ಡಿ ಆರ್ ಐ ಶೋಕಾಸ್ ನೋಟಿಸ್ ನೀಡಿದೆ. ಈಗಾಗಲೇ ಇಡಿ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 37 ಕೋಟಿಯಷ್ಟು ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಈ ಬೆನ್ನಲ್ಲೇ ನಟಿ…

Read More

ಅಫ್ಘಾನಿಸ್ತಾನ: ಅಫ್ಘಾನಿಸ್ತಾನದ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 1,124 ಕ್ಕೆ ತಲುಪಿದ್ದು, ಕನಿಷ್ಠ 3,251 ಜನರು ಗಾಯಗೊಂಡಿದ್ದಾರೆ. ಭೂಕಂಪವು 8,000 ಕ್ಕೂ ಹೆಚ್ಚು ಮನೆಗಳನ್ನು ನಾಶಪಡಿಸಿದೆ. ಭೂಕಂಪದಿಂದ ನೋಂದಾಯಿತ ಸಾವುನೋವುಗಳು ಮತ್ತು ಗಾಯಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ಅಫ್ಘಾನಿಸ್ತಾನದಲ್ಲಿರುವ ವಿಶ್ವಸಂಸ್ಥೆಯ ಸಂಯೋಜಕರು ತಿಳಿಸಿದ್ದಾರೆ. ಸೋಮವಾರ ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.0 ತೀವ್ರತೆಯ ಪ್ರಬಲ ಭೂಕಂಪ ಉಂಟಾಗಿತ್ತು. ಸಾವಿನ ಸಂಖ್ಯೆ ಹೆಚ್ಚಾಗುವ ಮೊದಲೇ ಅಫ್ಘಾನಿಸ್ತಾನದಲ್ಲಿರುವ ವಿಶ್ವಸಂಸ್ಥೆಯು ಪರಿಸ್ಥಿತಿಯಿಂದ “ತೀವ್ರ ದುಃಖಿತವಾಗಿದೆ” ಎಂದು ಹೇಳಿದೆ. ಎಕ್ಸ್ ಕುರಿತು ಹೇಳಿಕೆಯಲ್ಲಿ, ಯುಎನ್ ತನ್ನ ತಂಡಗಳು ಈಗಾಗಲೇ “ತುರ್ತು ನೆರವು ಮತ್ತು ಜೀವ ಉಳಿಸುವ ಬೆಂಬಲವನ್ನು ನೀಡಲು” ಸ್ಥಳದಲ್ಲಿವೆ ಎಂದು ಹೇಳಿದೆ. “ನಮ್ಮ ಆಲೋಚನೆಗಳು ಪೀಡಿತ ಸಮುದಾಯಗಳೊಂದಿಗೆ ಇವೆ” ಎಂದು ಹೇಳಿಕೆ ಸೇರಿಸಲಾಗಿದೆ.

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮೇಜರ್ ಸರ್ಜರಿ ಎನ್ನುವಂತೆ ಬರೋಬ್ಬರಿ 144 ಗ್ರಾಮ ಆಡಳಿತ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವಂತ ಕೆಲಸವನ್ನು ಮಾಡಿದೆ. ಇಂದು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವರ್ಗಾವಣೆ ಆದೇಶ ಹೊರಡಿಸಿದ್ದು, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಖಂಡೇನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿ ಮಹಂತೇಶ್ ಬಳ್ಳಾರಿ ಅವರನ್ನು ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಹೋಬಳಿಯ ಬೆಳಗೆರೆ ವೃತ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಹಿರಿಯೂರಿನ ಯಲ್ಲದಕೆರೆ ವೃತ್ತದ ಗ್ರಾಮ ಆಡಳಿತಾಧಿಕಾರಿ ಸಿ.ಚಿಕ್ಕಣ್ಣ ಅವರನ್ನು ಚಳ್ಳಕೆರೆ ತಾಲ್ಲೂಕಿನ ಕಾಪರಹಳ್ಳಿ ಕಂದಾಯ ವೃತ್ತದ ವಿಎಯಾಗಿ ವರ್ಗಾವಣೆ ಮಾಡಿದ್ದರೇ, ಚಿತ್ರದುರ್ಗ ತಾಲ್ಲೂಕು ಚಾನುಕೊಂಡ ವೃತ್ತದ ವಿಎ ಎಂ.ಎಸ್ ಶಿವಕುಮಾರ್ ಅವರನ್ನು ಚಿತ್ರದುರ್ಗ ತಾಲ್ಲೂಕು ಕಸಬಾ ಹೋಬಳಿಗೆ ವರ್ಗಾವಣೆ ಮಾಡಿದೆ. ಶಿವಮೊಗ್ಗ ತಾಲ್ಲೂಕಿನ ಮಲವಗೊಪ್ಪ ವೃತ್ತದ ವಿಎ ಪ್ರಭಾಕರ ಎಎಂ ಅವರನ್ನು ಗೊಂದಿಚಟ್ನಹಳ್ಳಿ ವೃತ್ತಕ್ಕೆ, ಮೇಗರಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿ ಸಂದೀಪ ಹೆಚ್ ಅವರನ್ನು…

Read More