Author: kannadanewsnow09

ಬೆಂಗಳೂರು: ನಟಿ ರನ್ಯಾ ರಾವ್ ಅವರನ್ನು ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿದೆ. ಇಂತಹ ಅವರು ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಆರ್ಥಿಕ ಅಪರಾಧಗಳ ನ್ಯಾಯಾಲಯ ನಡೆಸಿತು. ವಾದ, ಪ್ರತಿವಾದವನ್ನು ಆಲಿಸಿದಂತ ಕೋರ್ಟ್ ಮಾರ್ಚ್.14ಕ್ಕೆ ಜಾಮೀನು ಅರ್ಜಿಯ ಆದೇಶದ ತೀರ್ಪು ಕಾಯ್ದಿರಿಸಿದೆ. ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧಿಸಲಾಗಿದೆ. ಅವರಿಗೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ವೇಳೆ ಡಿ ಆರ್ ಐ ಪರ ವಕೀಲ ಮಧು ರಾವ್ ವಾದ ಮಂಡಿಸಿದರು. ಕಸ್ಟಡಿ ಅವಧಿಯಲ್ಲಿ ನಟಿ ರನ್ಯಾ ರಾವ್ ಅವರು ತನಿಖೆಗೆ ಯಾವುದೇ ರೀತಿಯಲ್ಲಿ ಸಹಕರಿಸಿಲ್ಲ. ಅಪರಾಧದ ಮನಸ್ಥಿತಿಯ ಬಗ್ಗೆ ಪರಿಶೀಲಿಸಬೇಕು. ಜಾಮೀನು ನೀಡಿದರೇ ಸಮಸ್ಯೆ ಆಗಲಿದೆ. ಮಹಿಳೆಯಾಗಿದ್ದರೂ ಕೂಡ ಬೇಲ್ ನೀಡಬಾರದು. ದೊಡ್ಡ ಮಟ್ಟದ ಸ್ಮಗ್ಲಿಂಗ್ ಆಗಿರುವುದು ಪರಿಗಣಿಸಬೇಕು ಎಂಬುದಾಗಿ ವಾದಿಸಿದರು. ವಾದ ಪ್ರತಿವಾದವನ್ನು ಆಲಿಸಿದಂತ…

Read More

ಬೆಂಗಳೂರು: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬದಲು ನಿಮ್ಮ ಕಾಂಗ್ರೆಸ್ ಪಕ್ಷವನ್ನೇ ಮುಚ್ಚಿಬಿಡಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಬೆಂಗಳೂರಿನ ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಇಂದು ಬಿಜೆಪಿ-ಜೆಡಿಎಸ್ ಪಕ್ಷಗಳ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಚ್ಚಿಬಿಟ್ಟರೆ ದೇಶಕ್ಕೇನೂ ಆಗುವುದಿಲ್ಲ; ಕಾಂಗ್ರೆಸ್ ಇರುವವರೆಗೆ ಈ ದೇಶಕ್ಕೆ ಅಭಿವೃದ್ಧಿ, ನೆಮ್ಮದಿ ಇಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷ ದೇಶಕ್ಕೆ ಗಂಡಾಂತರ ತರುವ ಕೆಲಸ ಮಾಡುತ್ತಿದೆ. ಕಾರ್ಯಕರ್ತರಿಗೆ ಖಜಾನೆ ಹಣವನ್ನು ಕೊಡಲು ನಾವು ಬಿಡುವುದಿಲ್ಲ; ಇದನ್ನು ಸಂವಿಧಾನದ ಅಡಿಯಲ್ಲಿ ಕೊಡುತ್ತ ಇದ್ದೀರಾ? ಇದನ್ನು ಕೂಡಲೇ ನಿಲ್ಲಿಸಿ ಎಂದು ಆಗ್ರಹಿಸಿದರು. ಗ್ಯಾರಂಟಿ ಅನುಷ್ಠಾನ ಸಮಿತಿಗಳು ಕಾನೂನುಬಾಹಿರ ಮತ್ತು ಅಸಾಂವಿಧಾನಿಕ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು. ಸಂವಿಧಾನದಂತೆ ಕೆಲಸ ಮಾಡುವುದು ಸರಕಾರದ ಕರ್ತವ್ಯ ಎಂದು ತಿಳಿಸಿದರು. ಅವು ಸಾಂವಿಧಾನಿಕ ಹುದ್ದೆಗಳಲ್ಲ; ಆದ್ದರಿಂದ ಕೈಬಿಡಲೇಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ಸಿನವರು ಖಜಾನೆಗೆ ಕನ್ನ ಹಾಕುತ್ತಿದ್ದಾರೆ ಎಂದು ತಿಳಿಸಿದರು.…

Read More

ಬೆಂಗಳೂರು: ತಾಯಿ-ಮಗನ ಸಂಬಂಧದಲ್ಲಿ ಅನಗತ್ಯವಾದ ವಿವಾದಗಳನ್ನು ಸೃಷ್ಟಿಸಬೇಡಿ ಎಂದು ಎಲ್ಲರಲ್ಲಿ ಮನವಿ ಮಾಡುತ್ತೇನೆ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು, ನಟ ದರ್ಶನ್ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನನ್ನ ಹಿಂದಿನ ಒಂದು ಪೋಸ್ಟ್‌ ಕುರಿತು ಅನಗತ್ಯವಾದ ವಿವಾದ ಸೃಷ್ಟಿಯಾಗಿರುವುದರಿಂದ ಈ ಸ್ಪಷ್ಟನೆ ನೀಡಲು ನಾನು ಇಚ್ಛಿಸುತ್ತೇನೆ. ನನ್ನ ಪೋಸ್ಟ್‌ ಯಾರನ್ನಾದರೂ ಗುರಿಯಾಗಿಸಿ ಮಾಡಲಾದದ್ದಲ್ಲ; ಅದು ಸರಳವಾಗಿ ಹಂಚಿಕೊಂಡ ವಿಷಯ ಮಾತ್ರ ಎಂದಿದ್ದಾರೆ. ಯಾರು ನನ್ನನ್ನು ಫಾಲೋ ಮಾಡುತ್ತಾರೆ ಅಥವಾ ಅನ್‌ಫಾಲೋ ಮಾಡುತ್ತಾರೆ ಎಂಬುದನ್ನು ಗಮನಿಸುವ ಅಭ್ಯಾಸ ಹೊಂದಿಲ್ಲ. ಮಾಧ್ಯಮಗಳಲ್ಲಿ ಈ ವಿಷಯದ ಬಗ್ಗೆ ಸುದ್ದಿಗಳು ಬಂದ ಬಳಿಕವೇ ನನಗೂ ಈ ಬೆಳವಣಿಗೆ ತಿಳಿಯಿತು ಎಂಬುದಾಗಿ ಹೇಳಿದ್ದಾರೆ. ನಿಜಕ್ಕೂ, ದರ್ಶನ್ ಅವರು ಇನ್‌ಸ್ಟಾಗ್ರಾಂ ಮತ್ತು ಟ್ವಿಟರ್‌ನಲ್ಲಿ ಯಾರನ್ನೂ ಫಾಲೋ ಮಾಡುತ್ತಿಲ್ಲ. ಇದು ಅವರ ವೈಯಕ್ತಿಕ ಆಯ್ಕೆ, ಮತ್ತು ಅದನ್ನು ಎಲ್ಲರೂ ಗೌರವಿಸಬೇಕು. ಇದನ್ನು ಬೇರೆ ರೀತಿಯಲ್ಲಿ ಅರ್ಥೈಸುವುದು ಅಗತ್ಯವಿಲ್ಲ ಎಂಬುದಾಗಿ…

Read More

ಬೆಂಗಳೂರು: ನಗರದಲ್ಲಿ ಅಂತಾರಾಷ್ಟ್ರೀಯ ಪುಷ್ಪ ಮಾರುಕಟ್ಟೆ ನಿರ್ಮಾಣ ಮಾಡುವುದಾಗಿ ಕೃಷಿ, ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಘೋಷಿಸಿದ್ದಾರೆ. ರಾಜ್ಯದಲ್ಲಿ ಸುಮಾರು 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಪುಷ್ಪೋದ್ಯಮವಿದ್ದು, ಮಾರಾಟ ಮತ್ತು ರಫ್ತು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್‌ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1899725923064361229 https://kannadanewsnow.com/kannada/safety-and-security-of-tourists-in-the-state-is-a-special-priority-guidelines-issued-for-resorts-homestays/ https://kannadanewsnow.com/kannada/breaking-soujanya-rape-and-murder-case-hc-stays-fir-against-youtuber-sameer/

Read More

ಬೆಂಗಳೂರು: ರಾಜ್ಯಾದ್ಯಂತ ಪ್ರವಾಸಿ ತಾಣಗಳಲ್ಲಿನ ರೆಸಾರ್ಟ್, ಹೋಂಸ್ಟೇಗಳಲ್ಲಿ ಪ್ರವಾಸಿಗರಿಗೆ ಭದ್ರತೆ ಮತ್ತು ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 06.03.2025 ರಂದು ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದಲ್ಲಿ ಹಾರ್ಟ್ ಲ್ಯಾಂಡ್ ಹೋಂ ಸ್ಟೇನಲ್ಲಿ ವಾಸವಿದ್ದ ಎರಡು ವಿದೇಶಿಯರು, ಎರಡು ಭಾರತೀಯರನ್ನು ಹೋಮ್‌ ಮಾಲೀಕರು ರಾತ್ರಿ ಭೋಜನದ ನಂತರ ನಿರ್ಜನ ಪ್ರದೇಶದಲ್ಲಿ ನಕ್ಷತ್ರ ವೀಕ್ಷಣೆಗೆಂದು ಕರೆದುಕೊಂಡು ಹೋದ ಸಂದರ್ಭದಲ್ಲಿ ಮೂರು ದುಷ್ಕರ್ಮಿಗಳು ಪುರುಷ ಪವಾಸಿಗರೊಂದಿಗೆ ವಾಗ್ವಾದ ಮಾಡಿ ಅವರುಗಳನ್ನು ಸಮೀಪದಲ್ಲಿಯೇ ತುಂಗಾಭದ್ರ ಎಡದಂಡೆ ಕಾಲುವೆಗೆ ನೂಕಿರುತ್ತಾರೆಂದು ವರದಿ ಮಾಡಿರುತ್ತಾರೆ. ಮುಂದುವರೆದು, ಹೋಮ್‌ಸ್ಯೆ ಮಾಲೀಕಳು ಹಾಗೂ ಮತ್ತೊಬ್ಬ ಇಸ್ರೇಲ್ ಪ್ರಜೆಯ ಮೇಲೆ ಹಲ್ಲೆ ಮಾಡಿ ಅತ್ಯಾಚಾರ ಎಸಗಿರುವುದಾಗಿ ತಿಳಿಸಿರುತ್ತಾರೆ. ಕಾಲುವೆಯ ನೀರಿನಲ್ಲಿ ಕೊಚ್ಚಿ ಹೋಗಿದ್ದವರ ಪೈಕಿ ಒರಿಸ್ಸಾ ಮೂಲದ ವ್ಯಕ್ತಿ ಮೃತರಾಗಿರುವ ಘಟನೆ ಉಲ್ಲೇಖದ ಪತ್ರದಲ್ಲಿ ವರದಿಯಾಗಿರುತ್ತದೆ. ಮೇಲಿನ ಘಟನೆಯು ಅತ್ಯಂತ ದು:ಖಕರ ಹಾಗೂ ವಿಷಾದನೀಯವಾದುದಾಗಿದೆ.…

Read More

ನವದೆಹಲಿ: ಫೆಬ್ರವರಿಯಲ್ಲಿ ಭಾರತದ ಚಿಲ್ಲರೆ ಹಣದುಬ್ಬರವು 7 ತಿಂಗಳ ಕನಿಷ್ಠ ಮಟ್ಟವಾದ 3.61% ಕ್ಕೆ ಇಳಿದಿದ್ದು, ಗ್ರಾಹಕರಿಗೆ ಭಾರಿ ನಿರಾಳತೆ ತಂದಿದೆ. ಜನವರಿಯಲ್ಲಿ, ಚಿಲ್ಲರೆ ಹಣದುಬ್ಬರವು 4.26% ರಷ್ಟಿತ್ತು. ಸರ್ಕಾರ ಹಂಚಿಕೊಂಡ ಅಧಿಕೃತ ಅಂಕಿ ಅಂಶವು ಅರ್ಥಶಾಸ್ತ್ರಜ್ಞರ ಸಮೀಕ್ಷೆಯಿಂದ ಸೂಚಿಸಲ್ಪಟ್ಟಿದ್ದಕ್ಕಿಂತ ಉತ್ತಮವಾಗಿದೆ. “ಜನವರಿ 2025 ಕ್ಕೆ ಹೋಲಿಸಿದರೆ ಫೆಬ್ರವರಿ 2025 ರ ಮುಖ್ಯ ಹಣದುಬ್ಬರದಲ್ಲಿ 65 ಬೇಸಿಸ್ ಪಾಯಿಂಟ್‌ಗಳ ಇಳಿಕೆ ಕಂಡುಬಂದಿದೆ. ಇದು ಜುಲೈ 2024 ರ ನಂತರ ವರ್ಷದಿಂದ ವರ್ಷಕ್ಕೆ ಅತ್ಯಂತ ಕಡಿಮೆ ಹಣದುಬ್ಬರವಾಗಿದೆ” ಎಂದು ಅದು ಹೇಳಿದೆ. ಚಿಲ್ಲರೆ ಹಣದುಬ್ಬರದಲ್ಲಿನ ತೀವ್ರ ಕುಸಿತದ ಹಿಂದಿನ ದೊಡ್ಡ ಕಾರಣವೆಂದರೆ ಆಹಾರ ಬೆಲೆಗಳಲ್ಲಿನ ಇಳಿಕೆ. “2024 ರ ಫೆಬ್ರವರಿ ತಿಂಗಳಿಗೆ ಅಖಿಲ ಭಾರತ ಗ್ರಾಹಕ ಆಹಾರ ಬೆಲೆ ಸೂಚ್ಯಂಕ (CFPI) ಆಧರಿಸಿದ ವರ್ಷದಿಂದ ವರ್ಷಕ್ಕೆ ಹಣದುಬ್ಬರ ದರವು ಫೆಬ್ರವರಿ 2024 ಕ್ಕಿಂತ 3.75% (ತಾತ್ಕಾಲಿಕ)” ಎಂದು ದತ್ತಾಂಶವು ತೋರಿಸಿದೆ. ಜನವರಿ 2025 ಕ್ಕೆ ಹೋಲಿಸಿದರೆ ಫೆಬ್ರವರಿ 2025 ರಲ್ಲಿ ಆಹಾರ ಹಣದುಬ್ಬರದಲ್ಲಿ…

Read More

ಮೈಸೂರು: ಪಿಆರ್ ತಿಪ್ಪೇಸ್ವಾಮಿ ಪ್ರತಿಷ್ಠಾನದಿಂದ ಕೊಡ ಮಾಡುವಂತ ಪಿಆರ್ ಟಿ ಕಲಾಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. 2025ನೇ ಸಾಲಿನ ಪಿಆರ್ ಟಿ ಕಲಾ ಪ್ರಶಸ್ತಿಗೆ ಹಿರಿಯ ಚಿತ್ರಕಲಾವಿಧೆ ಸುಧಾ ಮನೋಹರ್ ಹಾಗೂ ಮುಖವೀಣೆ ಆಂಜನಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಪಿಆರ್ ತಿಪ್ಪೇಸ್ವಾಮಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ ಕದಂಬ ಅವರು ಮಾಹಿತಿ ಹಂಚಿಕೊಂಡಿದ್ದು,ಪಿ.ಆರ್.ತಿಪ್ಪೇಸ್ವಾಮಿ ಅವರು ಕರ್ನಾಟಕ ಕಂಡ ಅಪ್ರತಿಮ ಕಲಾವಿದರು. ನಾಡಿನ ಸಮಕಾಲೀನ ಚಿತ್ರಕಲಾ ಜಗತ್ತಿನ ಮೇರು ಶಿಖರಗಳಲ್ಲೊಬ್ಬರಾಗಿದ್ದವರು. ಕರ್ನಾಟಕ ಚಿತ್ರಕಲೆಯ ಸರ್ವತೋಮುಖ ಬೆಳವಣಿಗೆಗಾಗಿ ಬದುಕಿನುದ್ದಕ್ಕೂ ದಣಿವರಿಯದೆ ದುಡಿದು, ನಮ್ಮಿಂದ ಮರೆಯಾದ ಹಿರಿಯಚೇತನ, ಹುಟ್ಟು ಕಲಾವಿದರಾದ ಅವರು ಸಾಂಸ್ಕೃತಿಕ ರಾಜಧಾನಿಯಾದ ಮೈಸೂರನ್ನು ತಮ್ಮ ಕಾರ್ಯಕ್ಷೇತ್ರವಾಗಿಸಿಕೊಂಡು ಚಿತ್ರಕಲೆ, ಸಾಹಿತ್ಯ, ಜಾನಪದ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡ ಅವರು ಕಳೆದ 5-6 ದಶಕಗಳಲ್ಲಿ ಸಲ್ಲಿಸಿದ ಸೇವೆ ಅನನ್ಯವಾದುದು ಎಂದಿದ್ದಾರೆ. ಇಂದಿನ ದಿನಮಾನದಲ್ಲಿ ಕಾಣದ ವಿರಳ ವ್ಯಕ್ತಿತ್ವ ಅವರದು. ಮೈಸೂರಿನ ಚಾಮರಾಜ ಚಿತ್ರಕಲಾ ಶಾಲೆಯಲ್ಲಿ ಕಲೆಯ ಅಭ್ಯಾಸ ಮಾಡಿ ನಿಸರ್ಗಚಿತ್ರ ರಚನೆಯಲ್ಲಿ ನಿಷ್ಣಾತರೆನಿಸಿ ಸಿದ್ಧಿಯ…

Read More

ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮಾರ್ಚ್ 14 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮಾರ್ಚ್.14ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರದಲ್ಲಿ ಕರೆಂಟ್ ಇರೋದಿಲ್ಲ. ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. https://kannadanewsnow.com/kannada/are-bjp-now-aware-of-the-guarantee-implementation-committee-shivakumars-question/ https://kannadanewsnow.com/kannada/breaking-soujanya-rape-and-murder-case-hc-stays-fir-against-youtuber-sameer/

Read More

ಬೆಂಗಳೂರು: “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಗ್ಯಾರಂಟಿ ಅನುಷ್ಠಾನ ಸಮಿತಿ ರಚಿಸಿದ್ದೇವೆ. ಈ ಸಮಿತಿ ರಚನೆಯಾಗಿ ಒಂದೂವರೆ ವರ್ಷವಾಗಿದ್ದು, ಈ ಸಮಿತಿ ಬಗ್ಗೆ ಬಿಜೆಪಿಗರಿಗೆ ಈಗ ಅರಿವಾಗಿದೆಯೇ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಅನುಷ್ಠಾನ ಸಮಿತಿ ವಿಚಾರವಾಗಿ ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ನಾವು ಅವರ ಹಕ್ಕು ಕಸಿದಿಲ್ಲ. ಶಾಸಕರ ಹಕ್ಕು ಹಾಗೇ ಇದೆ. ನಾವು ಬಡವರಿಗಾಗಿ ಹೊಸದಾಗಿ ಐದು ಗ್ಯಾಂಟಿ ಯೋಜನೆಗಳನ್ನು ನೀಡಿದ್ದು, ಈ ಯೋಜನಗಳು ಸರಿಯಾಗಿ ತಲುಪುತ್ತಿದೇಯೇ ಇಲ್ಲವೇ? ಇದರ ಸದುಪಯೋಗವಾಗುತ್ತಿದೆಯೇ ಅಥವಾ ದುರುಪಯೋಗವಾಗುತ್ತಿದೆಯೇ ಎಂದು ಮನೆ ಮನೆಗೆ ಹೋಗಿ ಪರಿಶೀಲನೆ ಮಾಡಲು ನಮ್ಮ ಜನರಿಗೆ ಜವಾಬ್ದಾರಿ ನೀಡಿದ್ದೇವೆ. ಜನರಿಗೆ ಯೋಜನೆ ಪಡೆಯಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ನಾವು ಇದನ್ನು ಮಾಡಿದ್ದೇವೆ. ಮಾನ್ಯ ಪ್ರಧಾನಮಂತ್ರಿಗಳು ಸೇರಿದಂತೆ ಬಿಜೆಪಿ ನಾಯಕರು ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದ್ದರು. ಈಗ ಮಹಾರಾಷ್ಟ್ರ, ಮಧ್ಯಪ್ರದೇಶ, ದೆಹಲಿ ಸೇರಿದಂತೆ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (International Cricket Counci-ICC) ಬಿಡುಗಡೆ ಮಾಡಿರುವ ನೂತನ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಚಾಂಪಿಯನ್ಸ್ ಟ್ರೋಫಿ ವಿಜೇತರಿಗೆ ಬಹುಮಾನ ಲಭಿಸಿದೆ. ಐಸಿಸಿ ಏಕದಿನ ಬ್ಯಾಟಿಂಗ್ ರ್ಯಾಂಕಿಂಗ್ ಪಟ್ಟಿಯಲ್ಲಿ ನಾಯಕ ರೋಹಿತ್ ಶರ್ಮಾ ಎರಡು ಸ್ಥಾನ ಮೇಲಕ್ಕೇರಿ ಅಗ್ರಸ್ಥಾನಕ್ಕೇರಿದ್ದಾರೆ. ಶುಬ್ಮನ್ ಗಿಲ್ ನಾಯಕತ್ವದ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮತ್ತು ಹೆನ್ರಿಕ್ ಕ್ಲಾಸೆನ್ ಅವರನ್ನು ಹಿಂದಿಕ್ಕಿ 3 ನೇ ಸ್ಥಾನಕ್ಕೆ ಏರಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದರು. ಭಾರತದ 252 ರನ್ಗಳ ಯಶಸ್ವಿ ಚೇಸಿಂಗ್ನಲ್ಲಿ 76 ರನ್ ಗಳಿಸುವ ಮೂಲಕ ಭಾರತದ ನಾಯಕ ಅಗ್ರ ಕ್ರಮಾಂಕದಲ್ಲಿ ಆಕ್ರಮಣಕಾರಿಯಾಗಿ ಮುಂದುವರಿದರು. ರೋಹಿತ್ ಕೇವಲ 41 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಭಾರತದ ಗೆಲುವಿಗೆ ವೇದಿಕೆ ಕಲ್ಪಿಸಿದರು. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಯಾನಕ ಪ್ರದರ್ಶನದ ಹೊರತಾಗಿಯೂ, ಪಾಕಿಸ್ತಾನದ ಸ್ಟಾರ್ ಆಟಗಾರ ಬಾಬರ್ ಅಜಮ್ ತಮ್ಮ ನಂ.2 ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಶುಬ್ಮನ್ ಗಿಲ್ 784…

Read More