Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಮದ್ದೂರು ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೆರಿದ್ದು, ನಿರೀಕ್ಷೆಗೂ ಮೀರಿ ಅಭಿವೃದ್ಧಿ ಹೊಂದಲಿದ್ದು, ಇದಕ್ಕೆ ಎಲ್ಲರು ಸಹಕಾರ ನೀಡಬೇಕೆಂದು ನಗರ ಸಭಾ ಮಾಜಿ ಅಧ್ಯಕ್ಷೆ ಕೋಕಿಲಾ ಅರುಣ್ ಮನವಿ ಮಾಡಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಶಾಸಕ ಕೆ.ಎಂ.ಉದಯ್ ಅವರು ಸರ್ಕಾರದ ಮಟ್ಟದಲ್ಲಿ ನಿರಂತರ ಪ್ರಯತ್ನದಿಂದಾಗ ಮದ್ದೂರು ಪುರಸಭೆಯನ್ನು ಅಭಿವೃದ್ಧಿ ದೃಷ್ಟಿಯಿಂದ ನಗರಸಭೆಯನ್ನಾಗಿ ಮೇಲ್ದರ್ಜೆಗೆರಿಸಿದ್ದಾರೆ. ಇದಕ್ಕೆ ವಿರೋಧ ಮಾಡುವುದು, ಹೋರಾಟ ಮಾಡುವುದು ಸರಿಯಾದ ಕ್ರಮವಲ್ಲ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶಾಸಕರ ಜತೆ ಕೈ ಜೋಡಿಸಬೇಕೆಂದು ಮನವಿ ಮಾಡಿದರು. ಕೆ.ಎಂ.ಉದಯ್ ಅವರು ಶಾಸಕರಾದ ಎರಡೇ ವರ್ಷಗಳಲ್ಲಿ ಒಬ್ಬ ರೈತನ ಮಗನಾಗಿ ರೈತರ ಕಷ್ಟಗಳನ್ನು ಹತ್ತಿರದಿಂದ ಅರಿತು ರೈತರ ಶ್ರೇಯೋಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಸುಮಾರು 1500 ಕೋಟಿಗೂ ಹೆಚ್ಚಿನ ಅನುದಾನ ತಂದು ನಗರದಲ್ಲಿ ಹಾದು ಹೋಗಿರುವ ಕೆಮ್ಮಣ್ಣು ನಾಲೆಯನ್ನು 100 ಕೋಟಿ ವೆಚ್ಚದಲ್ಲಿ ಆಧುನಿಕರಣ, ಪೇಟೆ ಬೀದಿಯನ್ನು 200 ಕೋಟಿ ವೆಚ್ಚದಲ್ಲಿ ಅಗಲೀಕರಣ, ಮದ್ದೂರಮ್ಮನ…
ಮಂಡ್ಯ: ಮಂಡ್ಯ ತಾಲ್ಲೂಕಿನ ಇಂಡುವಾಳು ಗ್ರಾ.ಪಂ. ನಲ್ಲಿ ನಡೆದ ಕಡತ ನಾಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಾದ್ಯಂತ ಗ್ರಾ.ಪಂ.ಗಳಲ್ಲಿ ಸುಸಜ್ಜಿತ ಅಭಿಲೇಖಾಲಯ ನಿರ್ವಹಣೆ ಮಾಡುವಂತೆ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅಭಿಯಾನದ ಫಲವಾಗಿ ಈವರೆಗೆ 129 ಗ್ರಾಮ ಪಂಚಾಯತ್ ಗಳಲ್ಲಿ ಅಭಿಲೇಖಾಲಯವನ್ನು ಸುಸಜ್ಜಿತವಾಗಿ ಸಜ್ಜುಗೊಳಿಸಲಾಗಿದ್ದು ಸದರಿ ಗ್ರಾ.ಪಂ.ಗಳನ್ನು ಮಂಡ್ಯ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಅಭಿನಂದಿಸಿದರು. ಶುಕ್ರವಾರ ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ವಿಡಿಯೋ ಸಂವಾದದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಉತ್ತಮವಾಗಿ ಅಭಿಲೇಖಾಲಯ ಸಜ್ಜುಗೊಳಿಸಿ ದಾಖಲೆಗಳನ್ನು ಸೂಕ್ತವಾಗಿ ನಿರ್ವಹಿಸುವ ಗ್ರಾ.ಪಂ. ಮತ್ತು ತಾಲ್ಲೂಕು ಪಂಚಾಯತ್ ಗಳಿಗೆ ಜನವರಿ 10ರಂದು ನಡೆಯುವ ಪಂಚಾಯತ್ ರಾಜ್ ಉತ್ಸವದಂದು ಅಭಿನಂದಿಸಲಾಗುವುದು ಎಂದು ತಿಳಿಸಿದರು. ಹೊಸದಾಗಿ ಜಾರಿಗೆ ತರಲಾಗಿರುವ ಇ-ಸ್ವತ್ತು ತಂತ್ರಾಂಶದಲ್ಲಿ ಕೋರಲಾಗುವ ದಾಖಲಾತಿಗಳನ್ನು ಪೂರ್ವಭಾವಿಯಾಗಿ ಸಂಗ್ರಹಿಸಲು, ಹಾಗೂ ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ನಿಗಧಿತ ಸಮಯದೊಳಗೆ ಒದಗಿಸಲು ಅಭಿಲೇಖಾಲಯ ಅಗತ್ಯವಿದ್ದು, ಎಲ್ಲಾ ಗ್ರಾಮ ಪಂಚಾಯತ್ ಗಳು ಜನವರಿ 31ರೊಳಗೆ ಅಭಿಲೇಖಾಲಯ ಸಜ್ಜುಗೊಳಿಸುವಂತೆ ಸೂಚಿಸಿದರು. ಮಹಾತ್ಮ ಗಾಂಧಿ…
ಮಂಡ್ಯ: ನಗರದಲ್ಲಿ ಹೆಚ್ಚಿನ ವಾಹನದಟ್ಟಣೆ ಇರುವುದರಿಂದ ಮಂಡ್ಯ ದಕ್ಷಿಣ ಭಾಗಕ್ಕೆ ಬೈ ಪಾಸ್ ರಿಂಗ್ ರೋಡ್ ಪ್ರಸ್ತಾವನೆ ಇರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ವಾಹನ ದಟ್ಟಣೆಯ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಎಫ್.ಪಿ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಸಂಸ್ಥೆಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ರಿಂಗ್ ರೋಡ್ ಸಂಬಂಧ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಎಫ್.ಪಿ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಸಂಸ್ಥೆಯವರು ನಗರದಲ್ಲಿ 5 ಕಡೆ ಸಿ.ಸಿ.ಟಿ.ವಿ ಅಳವಡಿಸಿ ಪ್ರತಿ ನಿತ್ಯ ನಗರದಲ್ಲಿ ಸಂಚರಿಸುವ ವಾಹನಗಳ ದಟ್ಟಣೆಯ ಕುರಿತು ಮಾಹಿತಿ ಮತ್ತು ಅಂಕಿಅಂಶಗಳನ್ನು ಸಂಗ್ರಹಿಸಿರುತ್ತಾರೆ ಎಂದು ತಿಳಿಸಿದರು. ನಗರದಲ್ಲಿನ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ರಿಂಗ್ ರೋಡ್ ನಿರ್ಮಿಸುವ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸದರಿ ವಾಹನ ದಟ್ಟಣೆ ವರದಿಗೆ ಅನುಮೋದನೆ ದೊರೆತ ಕೂಡಲೇ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಸೂಚಿಸಿದರು. ವಾಹನ…
ಬೆಂಗಳೂರು: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗವು ಅತ್ಯಂತ ಶ್ರೇಷ್ಠ ಅಂಗವಾಗಿದ್ದು, ಆ ಕಾರಣಕ್ಕಾಗಿ ಎಲ್ಲಾ ಕ್ಷೇತ್ರಗಳಿಗೂ ಪತ್ರಕರ್ತರು ಸಮಾಜಕ್ಕೆ ಮಾದರಿಯಾಗಬೇಕೆಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತರನ್ನು ಮತ್ತು ಮಾಹಿತಿ ಹಕ್ಕು ಆಯುಕ್ತರಾಗಿ ನೇಮಕಗೊಂಡಿರುವ ಪತ್ರಕರ್ತರಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜ ಸುಧಾರಣೆಯಲ್ಲಿ ಪತ್ರಕರ್ತರ ಪಾತ್ರವು ಪ್ರಮುಖವಾಗಿದ್ದು, ತಮ್ಮ ವೃತ್ತಿಯಲ್ಲಿ ಬದ್ಧತೆಯನ್ನು ಉಳಿಸುವ ಪತ್ರಕರ್ತರನ್ನು ಉತ್ತಮ ಸ್ಥಾನಮಾನಗಳು ಮತ್ತು ಗೌರವ ಹುಡುಕಿಕೊಂಡು ಬರುತ್ತದೆ. ಆ ನಿಟ್ಟಿನಲ್ಲಿ ರಾಜ್ಯೋತ್ಸವ ಪುರಸ್ಕೃತ ಪತ್ರಕರ್ತರು ಮತ್ತು ಮಾಹಿತಿ ಆಯುಕ್ತರಾಗಿ ಆಯ್ಕೆಗೊಂಡಿರುವ ಪತ್ರಕರ್ತರು ನಿಜಕ್ಕೂ ಅಭಿನಂದನಾರ್ಹರು ಎಂದು ಹೇಳಿದರು. ಈ ಸಮಾರಂಭದಲ್ಲಿ ಭಾಗವಹಿಸಿದ್ದು ಸಂತೋಷ ತಂದಿದೆ. ಕಾರ್ಯನಿರತ ಪತ್ರಕರ್ತರ ಸಂಘದ ಹಲವು ಕಾರ್ಯಕ್ರಮದಲ್ಲಿ ನಾನು ಭಾಗವಹಿಸಿದ್ದು, ಸಂಘವು ತಗಡೂರು ಅವರ ನೇತೃತ್ವದಲ್ಲಿ ಉತ್ತಮ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಪತ್ರಕರ್ತರ ವೃತ್ತಿ ಕ್ಷೇತ್ರಕ್ಕೆ ಮನ್ನಣೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ…
ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ ಭಯವಿದೆ,ಆದರೆ ಇನ್ನೂ ಕೆಲವರು ಇವುಗಳಲ್ಲಿ ನಂಬಿಕೆ ಇಟ್ಟಿರುತ್ತಾರೆ. ಎಲ್ಲವೂ ಅವರವರ ನಂಬಿಕೆಗೆ ಬಿಟ್ಟಿದ್ದುಮನೆ ಮುಂದೆ ನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಇದ್ರೆ ಇವೆಲ್ಲಾ ಮಾಟದ ಸಂಕೇತನಿಮ್ಮ ಮನೆ ಮುಂದೆ ನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಯಾರಾದ್ರೂ ಇಟ್ಟು ಹೋದ್ರೆ ನೋ ಡೌಟ್ ನಿಮ್ಮ ಹಾಗೂ ನಿಮ್ಮ ಮನೆ ಮೇಲೆ ಮಾಟ ಮಂತ್ರ ವಶೀಕರಣವಾಗಿದೆ ಎಂದರ್ಥ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ. ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ,…
ಮೆಕ್ಸಿಕೋ: ಶುಕ್ರವಾರ ದಕ್ಷಿಣ ಮತ್ತು ಮಧ್ಯ ಮೆಕ್ಸಿಕೊದಲ್ಲಿ 6.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕಟ್ಟಡಗಳು ಕಂಪಿಸಿದವು ಮತ್ತು ಅಧ್ಯಕ್ಷೆ ಕ್ಲೌಡಿಯಾ ಶೀನ್ಬಾಮ್ ಅವರ ಹೊಸ ವರ್ಷದ ಮೊದಲ ಪತ್ರಿಕಾಗೋಷ್ಠಿಗೆ ಅಡ್ಡಿಯುಂಟಾಯಿತು, ಭೂಕಂಪದ ಎಚ್ಚರಿಕೆಗಳು ಮೊಳಗಿದವು. ಮೆಕ್ಸಿಕೊದ ರಾಷ್ಟ್ರೀಯ ಭೂಕಂಪಶಾಸ್ತ್ರ ಸಂಸ್ಥೆಯ ಪ್ರಕಾರ, ಭೂಕಂಪದ ಕೇಂದ್ರಬಿಂದುವು ದಕ್ಷಿಣ ರಾಜ್ಯದ ಗೆರೆರೊದ ಸ್ಯಾನ್ ಮಾರ್ಕೋಸ್ ಬಳಿ, ಪೆಸಿಫಿಕ್ ಕರಾವಳಿ ರೆಸಾರ್ಟ್ ನಗರವಾದ ಅಕಾಪುಲ್ಕೊ ಬಳಿ ಇತ್ತು. ಭೂಕಂಪವು 21.7 ಮೈಲುಗಳಷ್ಟು ಆಳದಲ್ಲಿ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ, ಇದರ ಕೇಂದ್ರಬಿಂದುವು ಗೆರೆರೊದ ರಾಂಚೊ ವಿಯೆಜೊದಿಂದ ಸುಮಾರು 2.5 ಮೈಲುಗಳಷ್ಟು ಉತ್ತರ-ವಾಯುವ್ಯದಲ್ಲಿದೆ, ಅಕಾಪುಲ್ಕೊದಿಂದ ಸುಮಾರು 57 ಮೈಲುಗಳಷ್ಟು ಈಶಾನ್ಯದಲ್ಲಿರುವ ಪರ್ವತ ಪ್ರದೇಶದಲ್ಲಿದೆ.
ಬೆಂಗಳೂರು: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆಯ ಮೇಲೆ ಫೈರಿಂಗ್ ಹಾಗೂ ಕಾಂಗ್ರೆಸ್ ಕಾರ್ಯಕರ್ತನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಘಟನೆಯ ಸಂಬಂಧ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಪವನ್ ನೆಜ್ಜೂರ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬಳ್ಳಾರಿ ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಘರ್ಷಣೆಯಾಗಿ ಫೈರಿಂಗ್ ಆಗಿದೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ. ಈ ಘಟನೆಯ ಕುರಿತಂತೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿಯನ್ನು ನೀಡಿಲ್ಲ. ಈ ಎಲ್ಲಾ ಕಾರಣದಿಂದಾಗಿ ಬಳ್ಳಾರಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಐಪಿಎಸ್ ಅಧಿಕಾರಿ ಪವನ್ ನೆಜ್ಜೂರ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ. ಅಂದಹಾಗೇ ಐಪಿಎಸ್ ಅಧಿಕಾರಿ ಪವನ್ ನೆಜ್ಜೂರ್ ಅವರು ನಿನ್ನೆಯಷ್ಟೇ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. 2016ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಪವನ್ ನೆಜ್ಜೂರ್ ಆಗಿದ್ದಾರೆ. ಅವರನ್ನು…
ಧಾರವಾಡ: ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ನವೆಂಬರ್ 01, 2025 ಕ್ಕೆ ಅನ್ವಯವಾಗುವಂತೆ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪಧವೀದರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಪ್ರಕಟಿಸಲು ನಿರ್ದೇಶನ ನೀಡಲಾಗಿತ್ತು. ಅದರಂತೆ, ನವೆಂಬರ್ 25, 2025 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ನವೆಂಬರ್ 25, 2025 ರಿಂದ ಡಿಸೆಂಬರ್ 10, 2025 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಸದರಿ ಅವಧಿಯಲ್ಲಿ ಸ್ವೀಕರಿಸಲಾದ ಅರ್ಜಿಗಳ ಪರಿಶೀಲನೆಯ ನಂತರ, ಪಶ್ಚಿಮ ಪಧವೀದರರ ಮತಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 30, 2025 ರಂದು ಪ್ರಕಟಿಸಲಾಗಿದೆ. ಅಂತಿಮ ಮತದಾರರ ಪಟ್ಟಿಯು ಮತದಾರರ ನೋಂದಣಿ ಅಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳು ಧಾರವಾಡ, ಗದಗ, ಹಾವೇರಿ ಮತ್ತು ಉತ್ತರಕನ್ನಡ ಜಿಲ್ಲೆ ಇವರ ಕಚೇರಿಯಲ್ಲಿ ಹಾಗೂ ಅವರ ವ್ಯಾಪ್ತಿಯಲ್ಲಿ ಬರುವ ಎಲ್ಲ ನಿಯೋಜಿತ ಅಧಿಕಾರಿಗಳ ಕಚೇರಿಗಳಲ್ಲಿ ಲಭ್ಯವಿರುತ್ತದೆ. ಅದೇ ರೀತಿ ಮುಖ್ಯ ಚುನಾವಣಾಧಿಕಾರಿಗಳು ಬೆಂಗಳೂರು ಇವರ…
ಬೆಂಗಳೂರು: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆಯ ಮೇಲೆ ಫೈರಿಂಗ್ ಹಾಗೂ ಕಾಂಗ್ರೆಸ್ ಕಾರ್ಯಕರ್ತನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಘಟನೆಯ ಸಂಬಂಧ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಪವನ್ ನೆಜ್ಜಾರ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬಳ್ಳಾರಿ ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಘರ್ಷಣೆಯಾಗಿ ಫೈರಿಂಗ್ ಆಗಿದೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ. ಈ ಘಟನೆಯ ಕುರಿತಂತೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿಯನ್ನು ನೀಡಿಲ್ಲ. ಈ ಎಲ್ಲಾ ಕಾರಣದಿಂದಾಗಿ ಬಳ್ಳಾರಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಐಪಿಎಸ್ ಅಧಿಕಾರಿ ಪವನ್ ನಜ್ಜುರ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ. ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ಕೇಸ್ : ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ `FIR’ ದಾಖಲು.! ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ…
ಧಾರವಾಡ : ಧಾರವಾಡ ತಾಲ್ಲೂಕಿನ ಮರೇವಾಡ ಹಾಗೂ ಕಲಘಟಗಿ ತಾಲ್ಲೂಕಿನ ದೇವಲಿಂಗಿಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿಯು ರಾಜೀನಾಮೆ ಹಾಗೂ ರದ್ದುಪಡಿಸಿದ ಪ್ರಯುಕ್ತ, ಮರೇವಾಡ ಹಾಗೂ ದೇವಲಿಂಗಿಕೊಪ್ಪ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಖಾಲಿಯಾಗಿರುವ ಗ್ರಾಮ-ಒನ್ ಕೇಂದ್ರಕ್ಕೆ ಫ್ರಾಂಚೈಸಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇ.ಡಿ.ಸಿ.ಎಸ್. ನಿರ್ದೆಶನಾಲಯ, ಇ-ಆಡಳಿತ ಇಲಾಖೆಯಿಂದ ಜಿಲ್ಲೆಯ ತಾಲ್ಲೂಕುಗಳ 02 ಗ್ರಾಮ್-ಒನ್ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ಆಯ್ಕೆ ಮಾಡಲು ಆನ್ ಲೈನ್ ಮೂಲಕ (https://www.karnatakaone.gov.in/…/GramOneFranchiseeTerms) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಜನೆವರಿ 15, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹೆಲ್ಪ ಡೆಸ್ಕ್ ಮೊಬೈಲ್ ಸಂಖ್ಯೆ 9019026687, 9019026697, 9019026690, 9019027696 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














