Subscribe to Updates
Get the latest creative news from FooBar about art, design and business.
Author: kannadanewsnow09
ಭಾರತದಲ್ಲಿ, ನಾಗರಿಕರಿಗೆ ಗುರುತಿನ ಚೀಟಿ ಮತ್ತು ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಹಲವಾರು ಅಗತ್ಯ ಕಾರ್ಡ್ಗಳನ್ನು ಒದಗಿಸಲಾಗುತ್ತದೆ. ಈ ಕಾರ್ಡ್ಗಳು ಸರ್ಕಾರಿ ಸೇವೆಗಳಿಗೆ ಮಾತ್ರವಲ್ಲದೆ ಬ್ಯಾಂಕಿಂಗ್, ಮತದಾನ, ಶಿಕ್ಷಣ, ಪ್ರಯಾಣ ಮತ್ತು ಇತರ ಹಲವು ಉದ್ದೇಶಗಳಿಗೂ ಅವಶ್ಯಕವಾಗಿದೆ. ಸರ್ಕಾರವು ಈ ಕಾರ್ಡ್ಗಳನ್ನು ಪಡೆಯುವುದನ್ನು ಬಹಳ ಸುಲಭ ಮತ್ತು ಉಚಿತವಾಗಿಸಿದೆ, ಇದು ಸಾರ್ವಜನಿಕರಿಗೆ ಅನುಕೂಲವನ್ನು ಒದಗಿಸುತ್ತದೆ. ಆರು ಅಗತ್ಯ ಸರ್ಕಾರಿ ಗುರುತಿನ ಚೀಟಿಗಳು: ಉಚಿತ ಮತ್ತು ಕಡ್ಡಾಯ: ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ (EPIC), ಪ್ಯಾನ್ ಕಾರ್ಡ್, ಪಾಸ್ಪೋರ್ಟ್, ಚಾಲನಾ ಪರವಾನಗಿ, ಪಡಿತರ ಚೀಟಿ. ಸರ್ಕಾರಿ ಗುರುತಿನ ಚೀಟಿಗಳ ಅವಲೋಕನ: ಕೋಷ್ಟಕದಲ್ಲಿನ ಮಾಹಿತಿ. ಈ ಎಲ್ಲಾ ಸರ್ಕಾರಿ ಗುರುತಿನ ಚೀಟಿಗಳು ಏಕೆ ಅಗತ್ಯ? ಎಲ್ಲಾ ಅಗತ್ಯ ಸರ್ಕಾರಿ ಕಾರ್ಡ್ಗಳನ್ನು ಉಚಿತವಾಗಿ ಪಡೆಯುವುದು ಹೇಗೆ? ಈ ಕಾರ್ಡ್ಗಳನ್ನು ಯಾರು ಪಡೆಯಬೇಕು? ಅಗತ್ಯವಿರುವ ದಾಖಲೆಗಳು ಮತ್ತು ಕಾರ್ಯವಿಧಾನ. ಸರ್ಕಾರಿ ವೆಬ್ಸೈಟ್ಗಳು ಅಥವಾ ಪೋರ್ಟಲ್ಗಳ ಮೂಲಕ ಮಾತ್ರ ಅರ್ಜಿ ಸಲ್ಲಿಸಿ. ನೀವು ಯಾವ ಸರ್ಕಾರಿ ಸೈಟ್ಗಳಲ್ಲಿ…
ಬೆಂಗಳೂರು: ನಗರದಲ್ಲಿ ಮೆಟ್ರೋ ರೈಲು ಹಳಿಗೆ ಹಾರಿ ಪ್ರಯಾಣಿಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದನು. ಹೀಗಾಗಿ ಕೆಲ ಕಾಲ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಆ ಬಳಿಕ ಇದೀಗ ರೈಲು ಸಂಚಾರ ಪುನರಾರಂಭಗೊಂಡಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ಇಂದು (04.10.2025) ರಂದು ಸುಮಾರು 15.17 ಗಂಟೆಗೆ ನಾಡಾಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮಾಧವಾರ ಕಡೆಗೆ ಹೋಗುವ ಹಸಿರು ಮಾರ್ಗದಲ್ಲಿ ಒಬ್ಬ ಪ್ರಯಾಣಿಕನು ರೈಲಿನ ಹಳಿಯ ಮುಂದೆ ಹಾರಿದ ಪರಿಣಾಮವಾಗಿ ಈ ಬಾಗದ ರೈಲು ಸೇವೆಯಲ್ಲಿ ವ್ಯತ್ಯಾಯವಾಯಿತು ಎಂದಿದೆ. ಸದರಿ ಪ್ರಯಾಣಿಕನನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಯಿತು. ಈ ಸಮಯದಲ್ಲಿ ರೇಷ್ಮೆ ಸಂಸ್ಥೆ ಮತ್ತು ನ್ಯಾಷನಲ್ ಕಾಲೇಜು ಮತ್ತು ರಾಜಾಜಿನಗರ ಮತ್ತು ಮಾದಾವರ ನಡುವೆ ಶಾರ್ಟ್ ಲೂಪ್ ಸೇವೆಯನ್ನು ನಡೆಸಲಾಯಿತು. ನಂತರ ಸುಮಾರು 15.47 ಗಂಟೆಗೆ ಸಾಮಾನ್ಯ ಸೇವೆಯನ್ನು ಪುನಃ ಆರಂಭಿಸಲಾಯಿತು ಎಂದು ಮಾಹಿತಿ ನೀಡಿದೆ.
ಬೆಂಗಳೂರು: ನಗರದಲ್ಲಿ ಇಂದಿನಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆರಂಭಗೊಂಡಿತ್ತು. ರಾಜ್ಯಾಧ್ಯಂತ ಆರಂಭಗೊಂಡಾಗ ಎದುಗಾರಿದ್ದಂತ ವಿಘ್ನದಂತೆ ಬೆಂಗಳೂರಲ್ಲಿ ಮೊದಲ ದಿನವೇ ವಿಘ್ನ ಉಂಟಾಗಿದೆ. ಗೊಂದಲ ನಿವಾರಿಸುವಂತೆ ಗಣತಿದಾರರು ಪ್ರತಿಭಟನೆ ಕೂಡ ನಡೆಸಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಇರುವಂತ ಜಿಬಿಎ ಕಚೇರಿಯಲ್ಲಿ ಗೊಂದಲ ನಿವಾರಣೆಗೆ ಆಗ್ರಹಿಸಿ ನೂರಾರು ಸಮೀಕ್ಷೆ ಕಾರ್ಯಕ್ಕೆ ನಿಯೋಜನೆಗೊಂಡಿದ್ದಂತ ಗಣತಿದಾರರು ಪ್ರತಿಭಟನೆ ನಡೆಸಿದರು. ವಾರ್ಡ್ ಗಳ ಹಂಚಿಕೆಯಲ್ಲಿ ಗಣತಿದಾರರಿಗೆ ಗೊಂದಲ ಉಂಟಾಗಿದೆ. ಇದನ್ನು ನಿವಾರಿಸುವಂತೆ ಒತ್ತಾಯಿಸಿದರು. ಇದಷ್ಟೇ ಅಲ್ಲದೇ ರೋಗಿಗಳನ್ನೂ ಗಣತಿಗೆ ನೇಮಕ ಮಾಡಲಾಗಿದೆ. ಆಪ್ ನಲ್ಲಿ ತಾಂತ್ರಿಕ ಸಮಸ್ಯೆ ಸೇರಿ ಹತ್ತಾರು ಗೊಂದಲಗಳಿದ್ದಾವೆ. ಇವುಗಳನ್ನು ಬಗೆ ಹರಿಸುವಂತೆ ಆಗ್ರಹಿಸಿ ಗಣತಿದಾರರು ಜಿಬಿಎ ಅಧಿಕಾರಿಗಳಿಗೆ ಆಗ್ರಹಿಸಿದರು. ಇದಲ್ಲದೇ ತಮ್ಮ ಕ್ಷೇತ್ರವನ್ನು ಬಿಟ್ಟು 30 ರಿಂದ 40 ಕಿಲೋಮೀಟರ್ ದೂರದವರೆಗೂ ಸಮೀಕ್ಷೆಗೆ ನಿಯೋಜಿಸಲಾಗಿದೆ. ಸಮಸ್ಯೆ ಎದುರಾದರೇ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬುದಾಗಿ ಗಣತಿದಾರರು ಬೇಸರವನ್ನು ಹೊರ ಹಾಕಿದರು. https://kannadanewsnow.com/kannada/good-news-for-farmers-in-the-state-registration-begins-for-purchase-of-millet-under-support-price-scheme/ https://kannadanewsnow.com/kannada/note-do-you-know-how-many-days-you-can-store-water-in-your-home/
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಅಕ್ಟೋಬರ್ 1ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಗದೀಶ.ಜಿ ನಿರ್ದೇಶನ ನೀಡಿದರು. ಇಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ಮಾಡುವ ಸಂಬಂಧ ಕರೆಯಲಾಗಿದ್ದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತೀ ಕ್ವಿಂಟಲ್ ರಾಗಿಗೆ 4,886 ರೂ.ಗಳ ಬೆಂಬಲ ಬೆಲೆಯನ್ನು ಸರ್ಕಾರ ನಿಗಧಿಪಡಿಸಿದ್ದು, 2025ರ ಅಕ್ಟೋಬರ್ 01 ರಿಂದ ಡಿಸೆಂಬರ್ 15 2025 ರ ವರೆಗೆ ನೊಂದಣಿ ಕಾರ್ಯ ಕೈಗೊಳ್ಳಲಾಗುವುದು ಹಾಗೂ ಜನವರಿ 01 2026 ರಿಂದ ಮಾರ್ಚ್ 31 2026 ರವರೆಗೆ ರಾಗಿ ಖರೀದಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದರು. ಬೆಂಗಳೂರು ಪೂರ್ವ ತಾಲ್ಲೂಕಿನ ಕೆ.ಆರ್.ಪುರಂ, ಬೆಂಗಳೂರು ದಕ್ಷಿಣ…
ಬೆಳಗಾವಿ: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ ಎಂಬುದಾಗಿ ತಿಳಿಸಿದ್ದಾರೆ. ಇಂದು ಬೆಳಗಾವಿಯಲ್ಲಿ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ, ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ. ಬರೀ ಆಸ್ಪತ್ರೆ ಕಟ್ಟಡ ಕಟ್ಟಿದರೆ ಸಾಲದು, ಅದಕ್ಕೆ ತಕ್ಕಂತೆ ತಜ್ಞ ವೈದ್ಯರನ್ನೂ ನೇಮಿಸುತ್ತೇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ. ಸದ್ಯ ಪ್ರಭಾಕರ್ ಕೋರೆ ಅವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಸರ್ಕಾರಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕಾಗಿ ಕೋರೆ ಅವರಿಗೆ ಅಭಿನಂದಿಸುತ್ತೇನೆ. ನಮ್ಮ ಸರ್ಕಾರ ಅಸಮಾನತೆಯನ್ನು ಅಳಿಸುವ ದಿಕ್ಕಿನಲ್ಲಿ ತಳ ಸಮುದಾಯಗಳಿಗೆ ಅವಕಾಶ…
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಪಂಚಗ್ಯಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ. ಬದಲಿಗೆ ಇವು ‘ಸಾಮಾಜಿಕ ನ್ಯಾಯ’ವನ್ನು ಎತ್ತಿ ಹಿಡಿದು ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆಯನ್ನು ತಂದಿವೆ. ಆದರೆ, ಈಗ ಕಾಂಗ್ರೆಸ್ನ ಗ್ಯಾರಂಟಿಗಳನ್ನು ವಿರೋಧಿಸಲು ಮಾಜಿ ಪ್ರಧಾನಿಗಳಾದ ಶ್ರೀ ಎಚ್.ಡಿ. ದೇವೇಗೌಡರನ್ನೇ ಬಿಜೆಪಿ ಕಣಕ್ಕಿಳಿಸಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂಬ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸುರ್ಜೇವಾಲಾ, ಬಿಜೆಪಿ-ಜೆಡಿಎಸ್ ಮೈತ್ರಿಯ ದ್ವೇಷಕ್ಕೆ ಮಿತಿಯೇ ಇಲ್ಲ. ಜನರ ಬದುಕಿಗೆ ಬೆಳಕಾಗಿರುವ ಈ ಯೋಜನೆಗಳನ್ನು ವಿರೋಧಿಸಲು ದೇವೇಗೌಡರನ್ನೇ ಬಿಜೆಪಿ ಮುಂದೆ ಬಿಟ್ಟಿದೆ. ಇಂತಹ ‘ಕುರುಡು ದೃಷ್ಟಿಯುಳ್ಳ ಪಕ್ಷಗಳು’ ನಾಚಿಕೆಪಡಬೇಕು ಎಂದು ಖಂಡಿಸಿದ್ದಾರೆ. ಗ್ಯಾರಂಟಿಗಳಿಂದ ಆದ ಪರಿವರ್ತನೆ: ಈ ಯೋಜನೆಗಳ ಯಶಸ್ಸಿನ ಅಂಕಿ-ಅಂಶಗಳನ್ನು ನೀಡಿದ ಸುರ್ಜೇವಾಲಾ, ಗ್ಯಾರಂಟಿಗಳಿಂದ ಜನಸಾಮಾನ್ಯರ ಬದುಕಿನ ಮೇಲೆ ಆಗಿರುವ ಪರಿಣಾಮಗಳನ್ನು…
ಬೆಂಗಳೂರು: ನಗರದ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಪ್ರಯಾಣಿಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದಂತ ಮತ್ತೊಂದು ಘಟನೆ ನಡೆದಿತ್ತು. ರೈಲಿನ ಅಡಿಯಲ್ಲಿ ಸಿಲುಕಿದ್ದಂತ ಯುವಕನನ್ನು ರಕ್ಷಿಸಿರುವಂತ ಸಿಬ್ಬಂದಿಗಳು, ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಬೆಂಗಳೂರಿನ ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಾದವಾರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ಹಳಿಗೆ ವ್ಯಕ್ತಿಯೊಬ್ಬ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದನು. ನಮ್ಮ ಮೆಟ್ರೋ ರೈಲು ಹಳಿಯ ಮೇಲೆ ಜಿಗಿದ ನಂತ್ರ ರೈಲು ಸಾಗಿತ್ತು. ಹೀಗಾಗಿ ರೈಲಿನ ಅಡಿಯಲ್ಲಿ ಯುವಕ ಸಿಲುಕಿಕೊಂಡಿದ್ದನು. ಹೀಗೆ ಆತ್ಮಹತ್ಯೆಗೆ ಯತ್ನಿಸಿ, ನಮ್ಮ ಮೆಟ್ರೋ ರೈಲಿನಡಿ ಸಿಲುಕಿದ್ದಂತ ಯುವಕನನ್ನು ರಕ್ಷಿಸಲಾಗಿದೆ. ಗಾಯಗೊಂಡಿರುವಂತ ಆತನನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. https://kannadanewsnow.com/kannada/national-best-teacher-awardee-pg-dwarkanath-passes-away/ https://kannadanewsnow.com/kannada/note-do-you-know-how-many-days-you-can-store-water-in-your-home/
ಬೆಂಗಳೂರು: ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪಿ.ಜಿ ದ್ವಾರಕನಾಥ್ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪಿ.ಜಿ ದ್ವಾರಕನಾಥ್ ಅವರ ನಿಧನ ಅತ್ಯಂತ ದುಃಖಕರ ಸಂಗತಿಯಾಗಿದೆ. ಅವರ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಅನುಭವವೂ ಶ್ಲಾಘನೀಯ ಹಾಗೂ ಅವರ ನಾಯಕತ್ವವು ವಿದ್ಯಾವರ್ಧಕ ಸಂಘದ ಬೆಳವಣಿಗೆಗೆ ಕಾರಣವಾಗಿತ್ತು ಎಂದಿದ್ದಾರೆ. 25 ವರ್ಷಗಳ ಕಾಲ ಹೈಸ್ಕೂಲ್ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿರುವ ಪಿ.ಜಿ ದ್ವಾರಕನಾಥ್ ಅವರ ಅಗಲಿಕೆ ಶೈಕ್ಷಣಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ. ಇಂದು ಅವರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ತಿಳಿಸಲಾಯಿತು. ಅಗಲಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ತಿಳಿಸಿದ್ದಾರೆ. https://twitter.com/dkshivakumar/status/1974415380279111752?s=46 https://kannadanewsnow.com/kannada/veteran-actor-sandhya-shantaram-no-more/ https://kannadanewsnow.com/kannada/note-do-you-know-how-many-days-you-can-store-water-in-your-home/
ನವದೆಹಲಿ: ಹಿರಿಯ ನಟಿ ಸಂಧ್ಯಾ ಶಾಂತಾರಾಮ್ 94 ನೇ ವಯಸ್ಸಿನಲ್ಲಿ ನಿಧನರಾದರು. ಅವರ ಅಂತ್ಯಕ್ರಿಯೆಯನ್ನು ಇಂದು ಶಿವಾಜಿ ಪಾರ್ಕ್ನಲ್ಲಿರುವ ವೈಕುಂಠ ಧಾಮದಲ್ಲಿ ನಡೆಸಲಾಯಿತು. ಅವರ ಸಾವಿಗೆ ಕಾರಣವೇನೆಂದು ಸ್ಪಷ್ಟತೆ ಇಲ್ಲವಾದರೂ, ಅವರು ವೃದ್ಧಾಪ್ಯದ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಮೂಲಗಳು ಇಂಡಿಯಾಟುಡೇ.ಇನ್ಗೆ ತಿಳಿಸಿವೆ. ತಮ್ಮ ಆಕರ್ಷಕ ಅಭಿನಯ ಮತ್ತು ಪ್ರತಿಯೊಂದು ಪಾತ್ರಕ್ಕೂ ಆಳವನ್ನು ತರುವ ಸಾಮರ್ಥ್ಯಕ್ಕೆ ಹೆಸರುವಾಸಿಯಾದ ಸಂಧ್ಯಾ, ಭಾರತೀಯ ಚಿತ್ರರಂಗದ ಸುವರ್ಣ ಯುಗವನ್ನು ವ್ಯಾಖ್ಯಾನಿಸುವ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ಚಲನಚಿತ್ರ ನಿರ್ಮಾಪಕ ವಿ ಶಾಂತಾರಾಮ್ ಅವರನ್ನು ವಿವಾಹವಾದ ಸಂಧ್ಯಾ ಅವರ ಸಂಗೀತಗಾರ ಮತ್ತು ತಮ್ಮದೇ ಆದ ರೀತಿಯಲ್ಲಿ ಪ್ರಮುಖ ನಟಿಯಾಗಿದ್ದರು. ಸಂಕೀರ್ಣ ಭಾವನೆಗಳನ್ನು ಸುಲಭವಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪ್ರದರ್ಶಿಸಿದ ಮರಾಠಿ ಕ್ಲಾಸಿಕ್ ‘ಪಿಂಜಾರ’ದಲ್ಲಿನ ಅವರ ಕೆಲಸಕ್ಕಾಗಿ ಅವರು ವ್ಯಾಪಕವಾಗಿ ಗುರುತಿಸಲ್ಪಟ್ಟರು. ‘ದೋ ಆಂಖೇನ್ ಬಾರಾ ಹಾತ್’ ನಲ್ಲಿ, ಅವರು ನಟನೆ ಮತ್ತು ನೃತ್ಯವನ್ನು ಸಂಯೋಜಿಸಿದರು, ಅವರ ಬಹುಮುಖ ಪ್ರತಿಭೆಗೆ ವಿಮರ್ಶಾತ್ಮಕ ಮೆಚ್ಚುಗೆಯನ್ನು ಗಳಿಸಿದರು. ಅವರ ವೃತ್ತಿಜೀವನವು ಬಹು ಭಾಷೆಗಳು ಮತ್ತು ಪ್ರಕಾರಗಳನ್ನು…
ಶಿವಮೊಗ್ಗ: ಜಿಲ್ಲೆಯ ಸಾಗರದ ಪ್ರಸಿದ್ಧ ಅಂಗಡಿ ಮಾಲೀಕರಿಗೆ ಬ್ಲಾಕ್ ಮೇಲ್ ಮಾಡಿ ಬರೋಬ್ಬರಿ 36 ಲಕ್ಷ ಪೀಕಿರುವಂತ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದೆ. ಈ ಸಂಬಂಧ ಇಬ್ಬರ ವಿರುದ್ಧ FIR ದಾಖಲಾಗಿದ್ದು, ಆರೋಪಿಗಳಾದಂತ ಓರ್ವ ಯುವತಿ, ಆಕೆಯ ಬಾಯ್ ಫ್ರೆಂಡ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ರಾಜಶ್ರೀ ಎಲೆಕ್ಟ್ರಾನಿಕ್ಸ್ ಅಂದ್ರೆ ತುಂಬಾನೇ ಪ್ರಸಿದ್ಧಿ. ಇಂತಹ ಅಂಗಡಿ ಮಾಲೀಕರಿಗೆ ಬ್ಲಾಕ್ ಮೇಲ್ ಮಾಡಿ ಅಂಗಡಿಯಲ್ಲೇ ಕೆಲಸ ಮಾಡುತ್ತಿದ್ದಂತ ಯುವತಿ ಹಾಗೂ ಬಾಯ್ ಫ್ರೆಂಡ್ ಹಂತ ಹಂತವಾಗಿ 36 ಲಕ್ಷ ಹಣ ಪಡೆದಿದ್ದಾರೆ. ಈ ಸಂಬಂಧ ಅಂಗಡಿ ಮಾಲೀಕರು ನೀಡಿದಂತ ದೂರಿನ ಅನ್ವಯ ಸಾಗರ ಪೇಟೆ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 329(4), 308(2), 351(2) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ‘FIR’ನಲ್ಲಿ ಏನಿದೆ.? ದಿನಾಂಕ:-01/10/2025 ರಂದು 9-30.ಎ.ಎಂ ಗಂಟೆಗೆ ಪಿರ್ಯಾದಿದಾರರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ, ಪಿರ್ಯಾದಿದಾರರು ಈಗೆ 50 ವರ್ಷಗಳಿಂದ ಸಾಗರ…