Subscribe to Updates
Get the latest creative news from FooBar about art, design and business.
Author: kannadanewsnow09
BIG NEWS: ಬೆಂಗಳೂರಲ್ಲಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿ ಶಾಕ್: 2.75 ಲಕ್ಷ ಆಸ್ತಿ ಸುಸ್ತಿದಾರರಿಗೆ ನೋಟಿಸ್
ಬೆಂಗಳೂರು: ಒಟ್ಟಾರೆ 2.75 ಲಕ್ಷ ಆಸ್ತಿ ಸುಸ್ತಿದಾರರಿಗೆ (ಬಿಬಿಎಂಪಿಗೆ ಆಸ್ತಿ ತೆರಿಗೆ ಪಾವತಿಸದ) 786 ಕೋಟಿ ರೂ.ಗಳಿಗೆ ಎಲೆಕ್ಟ್ರಾನಿಕ್ ಡಿಮ್ಯಾಂಡ್ ನೋಟಿಸ್ ಕಳುಹಿಸಲಾಗಿದೆ. ಅವರು ಪಾವತಿಸದ ಆಸ್ತಿ ತೆರಿಗೆ ಸುಸ್ತಿದಾರರನ್ನು BBMPtax.karnataka.gov.in ನಲ್ಲಿ ಆನ್ಲೈನ್ನಲ್ಲಿ ಪಾವತಿಸಬೇಕಾಗುತ್ತದೆ, ಇಲ್ಲದಿದ್ದರೆ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು, ಚರ ಮತ್ತು ಸ್ಥಿರ ಆಸ್ತಿಗಳ ತುರ್ತು ಮಾರಾಟ ಸೇರಿದಂತೆ ವಸೂಲಿ ಮಾಡಲು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ತೆರಿಗೆ ಸುಸ್ತಿದಾರರು ಕಾರಣಗಳೊಂದಿಗೆ ಮೇಲ್ಮನವಿ ಸಲ್ಲಿಸಬಹುದು https://BBMPeNyaya.karnataka.gov.in ನಲ್ಲಿ ಆನ್ಲೈನ್ನಲ್ಲಿ ಲಭ್ಯವಿದೆ ಎಂಬುದಾಗಿ ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ. https://kannadanewsnow.com/kannada/cet-extension-of-date-for-choice-selection-and-fee-payment/ https://kannadanewsnow.com/kannada/from-now-on-the-sea-these-places-in-soraba-taluk-are-tourist-spots-state-government-announcement/
ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯ ಅಡಿಯಲ್ಲಿ ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಇನ್ಮುಂದೆ ವಿಶೇಷ ಪೌಷ್ಟಿಕ ಆಹಾರ ಲಭ್ಯವಾಗಲಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜ್ಯದ ಸರ್ಕಾರಿ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳಿಗೆ, ಮುಖ್ಯವಾಗಿ ಮಕ್ಕಳು, ಗರ್ಭಿಣಿಯರು, ಮತ್ತು ಬಾಣಂತಿಯರಿಗೆ, ಈ ಹಿಂದೆ ಒಂದೇ ರೀತಿಯ ಸಾಮಾನ್ಯ ಆಹಾರವನ್ನು ನೀಡಲಾಗುತ್ತಿತ್ತು. ಇದು ರೋಗಿಗಳ ನಿರ್ದಿಷ್ಟ ಪೌಷ್ಟಿಕಾಂಶದ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಪರಿಣಾಮಕಾರಿಯಾಗಿರಲಿಲ್ಲ. ರೋಗಿಗಳ ಆರೋಗ್ಯ ಸ್ಥಿತಿ ಮತ್ತು ವಯಸ್ಸಿಗೆ ಅನುಗುಣವಾಗಿ ಪೌಷ್ಟಿಕಾಂಶದ ಅಗತ್ಯಗಳು ಭಿನ್ನವಾಗಿರುವುದರಿಂದ, ಎಲ್ಲರಿಗೂ ಒಂದೇ ರೀತಿಯ ಆಹಾರವನ್ನು ನೀಡುವುದು ಸೂಕ್ತವಲ್ಲ.ಈ ಸಮಸ್ಯೆಯನ್ನು ಪರಿಹರಿಸಲು, ಕರ್ನಾಟಕ ಸರ್ಕಾರವು ಸರ್ಕಾರಿ ಆಸ್ಪತ್ರೆಗಳಲ್ಲಿನ ಆಹಾರ ಪದ್ಧತಿಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈಗ ರೋಗಿಗಳ ವೈದ್ಯಕೀಯ ಅಗತ್ಯಗಳ ಆಧಾರದ ಮೇಲೆ ಆಹಾರವನ್ನು ವಿಂಗಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಇಸ್ಕಾನ್ ಸಂಸ್ಥೆಯು ಸಹಭಾಗಿತ್ವ ನೀಡಿದ್ದು ಈ ಹಿಂದೆ, ಸರ್ಕಾರಿ…
7 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುವುದು ಕಡಿಮೆ ನಿದ್ರೆ, 9 ಗಂಟೆಗಳಿಗಿಂತ ಹೆಚ್ಚು ನಿದ್ರೆ ಮಾಡುವುದು ದೀರ್ಘ ನಿದ್ರೆ ಮತ್ತು ಎರಡೂ ಒಂದು ರೀತಿಯ ಆರೋಗ್ಯ ಅಪಾಯಗಳಿಗೆ ಸಂಬಂಧಿಸಿವೆ. ಅತಿಯಾದ ನಿದ್ರೆಯು ಹೆಚ್ಚಾಗಿ ಆಧಾರವಾಗಿರುವ ಆರೋಗ್ಯ ಅಥವಾ ಗುಣಮಟ್ಟದ ಸಮಸ್ಯೆಗಳ ಬಗ್ಗೆ ಚರ್ಚೆಯನ್ನು ತರುತ್ತದೆ. ಆದರೆ ಅದು ನಿಮ್ಮನ್ನು ಸ್ವಯಂಚಾಲಿತವಾಗಿ ಅನಾರೋಗ್ಯಕರವಾಗಿಸುವುದಿಲ್ಲ. ಹೆಚ್ಚಿನ ವಯಸ್ಕರು ನಿಯಮಿತ ವೇಳಾಪಟ್ಟಿಯಲ್ಲಿ 7-9 ಗಂಟೆಗಳ ನಡುವೆ ಉತ್ತಮ ಗುಣಮಟ್ಟದ ನಿದ್ರೆಯನ್ನು ಪಡೆಯಲು ಸಾಧ್ಯವಾಗುತ್ತದೆ. ಆದರೆ ನೀವು ಆಯಾಸದೊಂದಿಗೆ ದೀರ್ಘಕಾಲದ ಅತಿಯಾದ ನಿದ್ರೆಯಿಂದ ಬಳಲುತ್ತಿದ್ದರೆ, ಅದನ್ನು ನಿರ್ಲಕ್ಷಿಸಬೇಡಿ. ಅದು ಗಂಭೀರವಾದ ವಿಷಯವಾಗಿರಬಹುದು. ನಿದ್ರೆ ಕೇವಲ ವಿಶ್ರಾಂತಿಯ ಬಗ್ಗೆ ಅಲ್ಲ, ಅದು ಸಮೃದ್ಧಿಯ ಬಗ್ಗೆ. ನಿಮ್ಮ ನಿದ್ರೆಯ ಗುಣಮಟ್ಟವೂ ಮುಖ್ಯವಾಗಿದೆ ಏಕೆಂದರೆ ನೀವು ಚೆನ್ನಾಗಿ ನಿದ್ರಿಸಿದಷ್ಟೂ, ನೀವು ನಿಮ್ಮ ದಿನವನ್ನು ಉತ್ತಮವಾಗಿ ಬದುಕಲು ಸಾಧ್ಯವಾಗುತ್ತದೆ. ಅತಿಯಾದ ನಿದ್ರೆಯ ಕೆಲವು ಲಕ್ಷಣಗಳನ್ನು ನೀವು ಗುರುತಿಸುತ್ತಿದ್ದರೆ, ಅದನ್ನು ಪರಿಹಾರವಾಗಿ ಅಲ್ಲ, ಸಂಕೇತವಾಗಿ ಬಳಸಿ. ನಿದ್ರೆಯನ್ನು ಬಿಟ್ಟುಬಿಡುವುದರಿಂದ ಉಂಟಾಗುವ ಅಪಾಯಗಳು ನಮಗೆಲ್ಲರಿಗೂ ತಿಳಿದಿವೆ…
ಶಿವಮೊಗ್ಗ: ಜಿಲ್ಲೆಯ ಸಾಗರದ ನಗರದಲ್ಲಿ ದಿನೇ ದಿನೇ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇಂದು ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಾಯಗೊಳಿಸಿದ್ದವು. ಇದಕ್ಕೆ ನಿಯಂತ್ರಣ ಕ್ರಮ ವಹಿಸದ ಸಾಗರ ನಗರಸಭೆ ಆಡಳಿತವೇ ಕಾರಣ ಎಂಬುದಾಗಿ ಆಕ್ರೋಶ ಹೊರ ಹಾಕಿರುವಂತ ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್, ನಾಳೆ ನಗರಸಭೆ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಇಂದು ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ಶಿವಮೊಗ್ಗ ಜಿಲ್ಲೆಯ ಸಾಗರದ ಜನ್ನತ್ ನಗರದಲ್ಲಿ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದಾವೆ. ಬೀದಿ ನಾಯಿ ದಾಳಿಗೆ ಒಳಗಾಗಿದ್ದಂತ ಬಾಲಕನಿಗೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಉಚಿತ ಆಂಬುಲೆನ್ಸ್ ವ್ಯವಸ್ಥೆ ಮಾಡಿದ ಶಾಸಕರ ಆಪ್ತ ಸಹಾಯ ಸಾಗರದ ವಾರ್ಡ್ ನಂ.26ರ ಜನ್ನತ್ ನಗರದಲ್ಲಿ ಬೀದಿ ನಾಯಿ ದಾಳಿಗೆ ಒಳಗಾಗಿದ್ದಂತ ಮೂರು ವರ್ಷದ…
ಬೆಂಗಳೂರು: ಕನ್ನಡದ ಖ್ಯಾತ ಬರಹಗಾರ-ನಿರ್ದೇಶಕ ಎಸ್.ಎಸ್. ಡೇವಿಡ್ ನಿಧನರಾಗಿದ್ದಾರೆ. ಜೈ ಹಿಂದ್ (1998) ಮತ್ತು ಸುಪಾರಿ (2001) ಚಿತ್ರಗಳನ್ನು ನಿರ್ದೇಶಿಸಿದ್ದಕ್ಕಾಗಿ ಹೆಸರುವಾಸಿಯಾಗಿದ್ದ ಅವರು, ಭಾನುವಾರ ಸಂಜೆ ಬೆಂಗಳೂರಿನ ಆರ್.ಆರ್. ನಗರದ ಎಸ್.ಎಸ್. ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು. ಒನ್ ಇಂಡಿಯಾ ವರದಿಯ ಪ್ರಕಾರ, ಡೇವಿಡ್ ಔಷಧಾಲಯಕ್ಕೆ ಹೋಗುವ ದಾರಿಯಲ್ಲಿ ಹಠಾತ್ತನೆ ಕುಸಿದು ಬಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ವೈದ್ಯರು ಅವರ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ. ಜೈ ಹಿಂದ್ ಮತ್ತು ಸುಪಾರಿ ಚಿತ್ರಗಳನ್ನು ನಿರ್ದೇಶಿಸುವುದರ ಜೊತೆಗೆ, ಎಸ್.ಎಸ್. ಡೇವಿಡ್ ಅನೇಕ ಚಿತ್ರಗಳಿಗೆ ಚಿತ್ರಕಥೆಗಾರರಾಗಿಯೂ ಸೇವೆ ಸಲ್ಲಿಸಿದ್ದಾರೆ. ಬರಹಗಾರರಾಗಿ ಅವರ ಅತ್ಯಂತ ಗಮನಾರ್ಹ ಕೃತಿಗಳಲ್ಲಿ ಪೊಲೀಸ್ ಸ್ಟೋರಿ (1996), ಅಗ್ನಿ ಐಪಿಎಸ್ (1997), ಧೈರ್ಯ (1997), ಸಿಂಹದ ಮಾರಿ (1997), ಹೈ ಬೆಂಗಳೂರು (1997), ಸ್ವಾತಂತ್ರ್ಯ ದಿನ (2000), ಮಂಡ್ಯ (2006), ತಿರುಪತಿ (2006), ಮತ್ತು ಪೊಲೀಸ್ ಸ್ಟೋರಿ 2 (2007) ಸೇರಿವೆ. ಪ್ರಸಿದ್ಧ ಚಲನಚಿತ್ರ ನಿರ್ಮಾಪಕರಾಗಿದ್ದರೂ, ಎಸ್.ಎಸ್. ಡೇವಿಡ್ ಅವರ ದೇಹವನ್ನು ಪಡೆಯಲು ಯಾರೂ…
ಶಿವಮೊಗ್ಗ: ಮನೆಯ ಮುಂದೆ ಆಟವಾಡುತ್ತಿದ್ದಂತ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಾಯಗೊಳಿಸಿರುವಂತ ಘಟನೆ ಸಾಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಜನ್ನತ್ ನಗರದಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿದೆ. 3 ವರ್ಷದ ಬಾಲಕನ ಮೇಲೆ ದಾಳಿ ನಡೆಸಿರುವಂತ ಬೀದಿ ನಾಯಿಗಳು, ಮುಖ ಸೇರಿದಂತೆ ಹಲವೆಡೆ ಕಚ್ಚಿ ಗಾಯಗೊಳಿಸಿದೆ. ಬೀದಿ ನಾಯಿ ದಾಳಿಗೆ ಒಳಗಾಗಿದ್ದಂತ 3 ವರ್ಷದ ಬಾಲಕನನ್ನು ಸಾಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಶಿವಮೊಗ್ಗಕ್ಕೆ ಹೆಚ್ಚಿನ ಚಿಕಿತ್ಸೆಗಾಗಿ ತಂದೆ ರಶೀದ್ ಕರೆದೊಯ್ದಿದ್ದಾರೆ. ಬಾಲಕನಿಗೆ ಕಚ್ಚಿದ ಬಳಿಕ ಮತ್ತೊಬ್ಬ ಮಹಿಳೆ ಮೇಲೂ ನಾಯಿ ದಾಳಿ ನಡೆಸಿದೆ. ಬೀದಿ ನಾಯಿಗಳನ್ನು ನಿಯಂತ್ರಿಸದಂತ ಸಾಗರ ನಗರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಬೀದಿ ನಾಯಿ ನಿಯಂತ್ರಿಸುವಂತೆ ಒತ್ತಾಯಿಸಿದ್ದಾರೆ. https://kannadanewsnow.com/kannada/cet-extension-of-date-for-choice-selection-and-fee-payment/ https://kannadanewsnow.com/kannada/bbmp-shocks-those-who-have-outstanding-taxes-in-bangalore-notice-issued-to-2-75-lakh-property-defaulters/
ಬೆಂಗಳೂರು: ಎಂಜಿನಿಯರಿಂಗ್, ಆಯುಷ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಸೂಕ್ತ ಛಾಯ್ಸ್ ಆಯ್ಕೆ ಮಾಡುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಸೆ.3ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಶುಲ್ಕ ಪಾವತಿ ನಂತರ ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆ.4ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಛಾಯ್ಸ್-1 ಮತ್ತು ಛಾಯ್ಸ್-2 ಆಯ್ಕೆ ಮಾಡಿದವರು ಶುಲ್ಕ ಹಾಗೂ ಛಾಯ್ಸ್-3 ಆಯ್ಕೆ ಮಾಡಿದವರು ಕಾಷನ್ ಡೆಪಾಸಿಟ್ ಪಾವತಿಗೆ ಸೆ.3 ಕೊನೆ ದಿನ ಎಂದು ಅವರು ವಿವರಿಸಿದ್ದಾರೆ. ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಮತ್ತು ಪ್ರವೇಶ ಪ್ರಕ್ರಿಯೆ ವೇಳಾಪಟ್ಟಿ ಕುರಿತು ಸದ್ಯದಲ್ಲೇ ಪ್ರತ್ಯೇಕ ಪ್ರಕಟಣೆ ಹೊರಡಿಸಲಾಗುವುದು ಎಂದು ಅವರು ವಿವರಿಸಿದ್ದಾರೆ. https://kannadanewsnow.com/kannada/from-now-on-the-sea-these-places-in-soraba-taluk-are-tourist-spots-state-government-announcement/ https://kannadanewsnow.com/kannada/untouchability-still-being-alive-is-not-a-good-thing-for-civil-society-mandya-dc-dr-kumar/
ಬೆಂಗಳೂರು: ಸ್ನಾತಕೋತ್ತರ ಅಲೈಡ್ ಹೆಲ್ತ್ ಸೈನ್ಸ್ ಸ್ನಾತಕೋತ್ತರ ಕೋರ್ಸುಗಳು ಸೇರಿದಂತೆ ವಿವಿಧ ಕೋರ್ಸುಗಳಿಗೆ ಪ್ರವೇಶ ಪರೀಕ್ಷೆ ತೆಗೆದುಕೊಳ್ಳಲು ಬಯಸುವವರಿಗೆ ಸೆ.3ರಿಂದ 14ರವರೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೋಮವಾರ ಸೂಚಿಸಿದೆ. ಎಂ.ಎಸ್.ಸಿ ನರ್ಸಿಂಗ್, ಎಂ.ಪಿ.ಟಿ, ಎಂ.ಎಸ್.ಸಿ, ಅಲೈಡ್ ಹೆಲ್ತ್ ಸೈನ್ಸ್ ಸ್ನಾತಕೋತ್ತರ ಕೋರ್ಸ್ ಗಳು ಮತ್ತು ಎಂ.ಫಾರ್ಮ ಮತ್ತು ಫಾರ್ಮ-ಡಿ ಕೋರ್ಸ್ಗಳಿಗೆ ಪ್ರವೇಶ ಪರೀಕ್ಷೆ ನಡೆಸಲಾಗುವುದು. ಪ್ರಾಧಿಕಾರದ ವೆಬ್ ಸೈಟ್ https://cetonline.karnataka.gov.in/kea ಮೂಲಕ ಸೆ. 3ರಿಂದ (ಬೆಳಿಗ್ಗೆ 11) 14ರೊಳಗೆ (ರಾತ್ರಿ 11.59) ನೋಂದಾಯಿಸಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಬಹುದು ಎಂದ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಧ್ಯಮ ಪ್ರಕಟಣೆಯಲ್ಲಿ ವಿವರಿಸಿದ್ದಾರೆ. ಅಭ್ಯರ್ಥಿಗಳು ಕರ್ನಾಟಕ ಸಂಜಾತರಾಗಿದ್ದು, ಆಯಾ ಕೋರ್ಸುಗಳಲ್ಲಿ ಪದವಿ ಪಡೆದು ಅರ್ಹರಿದ್ದಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯಾ ಕೋರ್ಸುಗಳಿಗೆ ವಿವಿಧ ಇಲಾಖೆಯವರು ನಿಗದಿಪಡಿಸಿರುವ ಅರ್ಹತಾ ವಿವರಗಳನ್ನು ಹಾಗೂ ಅಗತ್ಯ ಇರುವ ದಾಖಲೆಗಳು ಇತರೆ ಮಾಹಿತಿಯನ್ನು ಒಳಗೊಂಡ ಮಾಹಿತಿ ಪುಸ್ತಕವನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ…
ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ, ಸೊರಬ ತಾಲ್ಲೂಕಿನ 19 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಸರ್ಕಾರ ಘೋಷಿಸಿದೆ. ಈ ನೀತಿಯಡಿ ಅಭಿವೃದ್ದಿಗೆ ಅನುದಾನ ಬಳಕೆಗೂ ಸೂಚಿಸಿದೆ. ರಾಜ್ಯದ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯದ ಒಟ್ಟು 1275 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಗುರುತಿಸಲಾಗಿದೆ. ಇವುಗಳಲ್ಲಿ ಶಿವಮೊಗ್ಗ ಜಿಲ್ಲೆಯ 64 ಸ್ಥಳಗಳು ಸೇರಿದ್ದರೇ, ಸಾಗರ ತಾಲ್ಲೂಕಿನ 15, ಸೊರಬ ತಾಲ್ಲೂಕಿನ 4 ಸೇರಿದ್ದಾವೆ. ಇವುಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಸಂಬಂಧ ಅನುದಾನ ಲಭ್ಯತೆಯ ಅನುಸಾರ ವಿವರವಾದಂತ ಕ್ರಿಯಾಯೋಜನೆಯನ್ನು ರೂಪಿಸೋದಕ್ಕೆ ತಿಳಿಸಿದೆ. ಅಂದಾಜು ಪಟ್ಟಿ, ನಕ್ಷೆಗಳನ್ನು ಸಿದ್ಧಪಡಿಸಿ, ತಾಂತ್ರಿಕ ಪರಿಶೀಲನೆಗೆ ಒಳಪಡಿಸಿ, ಟೆಂಡರ್ ಗೆ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯುವಂತೆಯೂ ಸೂಚಿಸಿದೆ. ಹೀಗಿವೆ ಪ್ರವಾಸಿ ತಾಣಗಳಾಗಿ ಘೋಷಿಸಿದ ಸೊರಬದ ಸ್ಥಳಗಳು ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನ ಬಂಗಾರಧಾಮ ಕೈತಭೇಶ್ವರ ಕೋಟಿಪುರ ದೇವಸ್ಥಾನ ಗುಡವಿ ಪಕ್ಷಿಧಾಮ ಹೀಗಿವೆ ಪ್ರವಾಸಿ ತಾಣಗಳಾಗಿ ಘೋಷಿಸಿದ ಸಾಗರ ತಾಲ್ಲೂಕಿನ ಸ್ಥಳಗಳು ಜೋಗ ಜಲಪಾತ…
ಮಂಡ್ಯ: ಅಸ್ಪೃಶ್ಯತೆ ಒಂದು ಸಾಮಾಜಿಕ ಪಿಡುಗು. ನಮ್ಮ ದೇಶದಲ್ಲಿ ಇಂದಿಗೂ ಅಸ್ಪೃಶ್ಯತೆ ಜೀವಂತವಾಗಿರುವುದು ನಾಗರೀಕ ಸಮಾಜಕ್ಕೆ ಶೋಭೆಯಲ್ಲ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಅಭಿಪ್ರಾಯಪಟ್ಟರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ದೌರ್ಜನ್ಯ ನಿಯಂತ್ರಣ ಕಾಯ್ದೆಯನ್ವಯ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಾಲ್ಲೂಕು ಮಟ್ಟದಲ್ಲಿ ಎಲ್ಲಾ ಸದಸ್ಯರನ್ನು ಒಳಗೊಂಡಂತೆ ಅಸ್ಪೃಶ್ಯತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಹೇಳಿದರು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾದರೆ ಏನೇನು ಸಮಸ್ಯೆ ಉಂಟಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಕಾನೂನು ಅರಿವು ಕಾರ್ಯಕ್ರಮಗಳನ್ನು ರೂಪಿಸಿ ಎಂದರು. ದೌರ್ಜನ್ಯ ಪ್ರಕರಣಗಳು ಸಂಭವಿಸಿದ ಸಂದರ್ಭದಲ್ಲಿ ಯಾವುದೇ ವಿಳಂಭ ಮಾಡದೆ ಸಂಬಂಧ ಪಟ್ಟ ಇಲಾಖೆಯ ಎಲ್ಲಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ…












