Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಮದ್ದೂರು ಪಟ್ಟಣದಲ್ಲಿ ಡಿಪ್ಲೋಮಾ ಮತ್ತು ಕಾನೂನು ಕಾಲೇಜಿಗೆ ಮುಂದಿನ ಬಜೆಟ್ ನಲ್ಲಿ ಅನುಮೋದನೆ ದೊರೆಕುವ ಸಂಭವವಿದೆ ಎಂದು ಶಾಸಕ ಕೆ.ಎಂ.ಉದಯ್ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದರು. ಮದ್ದೂರು ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಒಂದು ಕೋಟಿ ರೂ ವೆಚ್ಚದಲ್ಲಿ ಹೆಚ್ಚುವರಿ ತರಗತಿಗಳ ಕೊಠಡಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಖಾಸಗಿ ಶಾಲಾ ಕಾಲೇಜುಗಳಿಗೆ ದುಬಾರಿ ಶುಲ್ಕ ತೆತ್ತು ವಿದ್ಯಾಭ್ಯಾಸ ಮಾಡುವುದು ಇಂದಿನ ದಿನಗಳಲ್ಲಿ ಕಷ್ಟಕರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳು ನೀಡುವ ಸೌಲಭ್ಯವನ್ನು ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ನೀಡಿದರೆ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಾಗಲಿದ್ದು, ಹೀಗಾಗಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು. ಕೆಲ ದಿನಗಳ ಹಿಂದೆ ಮದ್ದೂರಿನಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮದ್ದೂರಿನಲ್ಲಿ ಡಿಪ್ಲೋಮಾ ಮತ್ತು ಕಾನೂನು ಕಾಲೇಜು ನಿರ್ಮಾಣ ಮಾಡಲು ಅನುದಾನ ನೀಡುವಂತೆ ಮನವಿ ಮಾಡಿದ್ದೆ. ಮುಖ್ಯಮಂತ್ರಿಗಳು ಸಹ ಸಕಾರಾತ್ಮಕವಾಗಿ…
ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರಡಿಯಲ್ಲಿ ರಾಜ್ಯದ 1,275 ಸ್ಥಳಗಳನ್ನು ಪ್ರವಾಸಿ ತಾಣಗಳೆಂಬುದಾಗಿ ಘೋಷಣೆ ಮಾಡಿದೆ. ಈ ಕುರಿತಂತೆ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಪ್ರವಾಸೋದ್ಯ ಇಲಾಖೆಯ ಆಯುಕ್ತರು ಏಕ ಕಡತದಲ್ಲಿ ದಿನಾಂಕ 07-11-2024ರಲ್ಲಿ ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ಕ್ಕೆ ಅನುಮೋದನೆ ನೀಡಲಾಗಿರುತ್ತದೆ. ಹೀಗಾಗಿ ಹಿಂದಿನ ನೀತಿಗೆ ಸಂಬಂಧಿಸದ ಎಲ್ಲಾ ಸರ್ಕಾರದ ಆದೇಶಗಳು ಅನೂರ್ಜಿತವಾಗಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಪ್ರವಾಸೋದ್ಯಮ ಇಲಾಖೆಯಿಂದ ನೂತನ ಪ್ರವಾಸಿ ತಾಣಗಳನ್ನು ಗುರುತಿಸಲು ರಾಜ್ಯದ ಜಿಲ್ಲೆಗಳಿಗೆ ಸಂಬಂಧಿಸಿದ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಪ್ರವಾಸಿ ತಾಣಗಳನ್ನು ಆದ್ಯತಾವಾರು ಪಟ್ಟಿ ಮಾಡಿ, ಪ್ರವಾಸಿಗರ ಭೇಟಿಯ ಅಂಕಿ-ಸಂಖ್ಯೆಗಳನ್ನೊಳಗೊಂಡ ಸಂಪೂರ್ಣ ವಿವರ ಹಾಗೂ ಛಾಯಾಚಿತ್ರಗಳೊಂದಿಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅವರುಗಳಿಂದ ಪಡೆಯಲಾಗಿದೆ ಎಂದಿದೆ. ಈ ಮಾಹಿತಿ ಆಧರಿಸಿ ಒಟ್ಟು 1,275 ಪ್ರವಾಸಿ ತಾಣಗಳನ್ನು ಪ್ರವಾಸೋದ್ಯಮ ನೀತಿ 2024-29ರಡಿ ಸರ್ಕಾರದ ಅನುಮೋದನೆ ನೀಡುವಂತೆ…
ಚೆನ್ನೈ : ಮುಂಬೈನ 14 ವರ್ಷದ ಕಿಯಾನ್ ಶಾ ಅವರು ಮೆಕೊ FMSCI ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್ಶಿಪ್ನ ಮೂರನೇ ಸುತ್ತಿನಲ್ಲಿ ಜಯಗಳಿಸಿದ್ದಾರೆ. ಇದು ರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ಅವರ ಮೊದಲ ಗೆಲುವು. ಮದ್ರಾಸ್ ಇಂಟರ್ನ್ಯಾಷನಲ್ ಕಾರ್ಟಿಂಗ್ ಅರೆನಾ (MIKA)ದಲ್ಲಿ ನಡೆದ ಸ್ಪರ್ಧೆಯಲ್ಲಿ ಟೀಮ್ ರಾಯೊ ರೇಸಿಂಗ್ನ ಪರ ಸ್ಪರ್ಧಿಸಿದ ಕಿಯಾನ್ ಅವರು ರೇಸ್ನುದ್ದಕ್ಕೂ ಪ್ರಾಬಲ್ಯ ಮೆರೆದು ಜೂನಿಯರ್ ರೊಟಾಕ್ಸ್ ವಿಭಾಗದ ಫೈನಲ್ನಲ್ಲಿ ಗೆಲುವು ಸಾಧಿಸಿದರು. ಕಿಯಾನ್ ರೇಸ್ ವಾರವನ್ನು ಉತ್ತಮವಾಗಿ ಆರಂಭಿಸಿದರು. ಅವರು ಎರಡೂ ಅಧಿಕೃತ ಅಭ್ಯಾಸ ಅವಧಿಗಳಲ್ಲಿ ಅಗ್ರಸ್ಥಾನ ಪಡೆದಿದ್ದಲ್ಲೇ, ಅತಿವೇಗದ ರೇಸರ್ ಆಗಿ ಹೊರಹೊಮ್ಮಿ ಪೋಲ್ ಪೊಸಿಷನ್ ಸಹ ಗಳಿಸಿದರು. ಅರ್ಹತಾ ಲ್ಯಾಪ್ ಅನ್ನು 50.530 ಸೆಕೆಂಡ್ಗಳಲ್ಲಿ ಮುಕ್ತಾಯಗೊಳಿಸಿದರು. 18 ರೇಸರ್ಗಳ ಪೈಕಿ 8 ಮಂದಿಯನ್ನು ಕಿಯಾನ್ ಕೇವಲ ಅರ್ಧ ಸೆಕೆಂಡ್ ಕಡಿಮೆ ಸಮಯದಲ್ಲಿ ಹಿಂದಿಕ್ಕಿದರು. ಕಿಯಾನ್ಗೆ ಭಾರೀ ಪೈಪೋಟಿ ನೀಡಿದ ಚೆನ್ನೈನ ಶಿವಾನ್ ಕಾರ್ತಿಕ್ (50.672 ಸಕೆಂಡ್) ಹಾಗೂ ಎಶಾಂತ್ ವೆಂಕಟೇಶನ್ (50.731 ಸೆಕೆಂಡ್) ಕ್ರಮವಾಗಿ 2 ಹಾಗೂ…
ಬೆಂಗಳೂರು: ಸಾಮಾಜಿಕ ಜಾಲತಾಣಗಳು ಸಕ್ರೀಯವಾಗಿರುವ ಪ್ರಸ್ತುತ ದಿನಗಳಲ್ಲಿ, ವಿಶ್ವಾಸಾರ್ಹಕ್ಕೆ ಪಾತ್ರವಾಗಿರುವ ಪತ್ರಿಕೋದ್ಯಮವು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆ.ಯೂ.ಡಬ್ಲ್ಯೂ.ಜೆ) ವತಿಯಿಂದ ಪತ್ರಿಕೋದ್ಯಮ ಸೇವೆಗಾಗಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಹಿರಿಮೆಗೆ ಪಾತ್ರರಾದ ’ಪ್ರಜಾಪ್ರಗತಿ’ ದಿನಪತ್ರಿಕೆಯ ಸಂಪಾದಕ ಎಸ್.ನಾಗಣ್ಣ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಪತ್ರಿಕೋದ್ಯಮದಿಂದ ಸಮಾಜ ಬದಲಾವಣೆ ಸಾಧ್ಯವಿದೆ. ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಕಾಯಕವನ್ನು ಪತ್ರಿಕೆಗಳು ಉತ್ತಮ ಸೇವೆ ಸಲ್ಲಿಸಿಕೊಂಡು ಬಂದಿವೆ. ಮುದ್ರಣ ಮಾಧ್ಯಮಕ್ಕೀಗ ಭಾರೀ ಸವಾಲಿನ ದಿನಗಳು ಎದುರಾಗಿವೆ ಎಂದರು. ಹಿರಿಯ ಪತ್ರಕರ್ತ ಎಸ್.ನಾಗಣ್ಣ ಅವರಿಗೆ ಸಂದಿರುವ ಈ ಗೌರವವು ಕನ್ನಡ ಪತ್ರಿಕೋದ್ಯಮಕ್ಕೆ ಸಂದ ಹಿರಿಮೆ ಎಂದೂ ಅವರು ವಿಶ್ಲೇಷಿಸಿದರು. ನಾಗಣ್ಣ ಸೇವೆ ಅನನ್ಯ: ಮದನಗೌಡ ಅಭಿನಂದನಾ ಮಾತುಗಳನ್ನಾಡಿದ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಎಚ್.ಬಿ. ಮದನಗೌಡ ಮಾತನಾಡಿ, ಪತ್ರಿಕೋದ್ಯಮವು ಇಂದು ಸಮಾಜ ಸೇವಾ ಮನೋಭಾವದಿಂದ…
ಪ್ರತಿನಿತ್ಯ ಮುಂಜಾನೆ ಈ ಒಂದು ಶಕ್ತಿಶಾಲಿಯಾದ ಅಂತಹ ನರಸಿಂಹ ಸ್ವಾಮಿಯ ಒಂದು ಮಂತ್ರವನ್ನು ಹೇಳಿಕೊಂಡು ದೈನದಿನ ಕೆಲಸಗಳಿಗೆ ಹೋಗುವುದರಿಂದ ಯಾವುದೇ ರೀತಿಯಾದಂತಹ ನಷ್ಟ, ತೋಂದರೆ,ವ್ಯವಾಹರದ ಅಡೆತಡೆ,ಹಾಗೂ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ. ನಿಮ್ಮ ಜೀವನದಲ್ಲಿ ಅತಿ ಹೆಚ್ಚು ಕಷ್ಟಗಳನ್ನು ಅನುಭವಿಸುತ್ತಿದ್ದರೆ. ಜೀವನದಲ್ಲಿ ಏಳಿಗೆಯನ್ನು ಕಾಣಲು ಸಾಧ್ಯವಾಗುತ್ತಿಲ್ಲ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ನಾವು ಸೋತಿದ್ದೇವೆ…
ಬೆಂಗಳೂರು: ಗ್ರಾಮ ಪಂಚಾಯ್ತಿ ಚುನಾವಣೆ ಬಗ್ಗೆ ಯಾವುದೇ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಂತ ವೇಳಾಪಟ್ಟಿ ಸುಳ್ಳು ಎಂಬುದಾಗಿ ಕರ್ನಾಟಕ ಚುನಾವಣಾ ಆಯೋಗ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, ಗ್ರಾಮ ಪಂಚಾಯ್ತಿ ಚುನಾವಣೆ ಬಗ್ಗೆ ಯಾವುದೇ ವೇಳಾಪಟ್ಟಿ ಪ್ರಕಟಿಸಿಲ್ಲ. ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿರುವ ಬಗ್ಗೆ ಸುಳ್ಳು ಮಾಹಿತಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂದಿದೆ. ರಾಜ್ಯ ಚುನಾವಣಾ ಆಯೋಗ ಯಾವುದೇ ವೇಳಾಪಟ್ಟಿಯನ್ನು ಪ್ರಕಟಿಸಿರುವುದಿಲ್ಲ. ಆಯೋಗ ಸುದ್ದಿಗೋಷ್ಠಿ ಕರೆದು ಚುನಾವಣಾ ವೇಳಾಪಟ್ಟಿ ಪ್ರಕಟಿಸುತ್ತದೆ. ಪ್ರಸ್ತುತ ಹರಿದಾಡುತ್ತಿರುವ ಚುನಾವಣಾ ವೇಳಾಪಟ್ಟಿ ಸುಳ್ಳು ಮಾಹಿತಿಯಾಗಿದೆ. ಸಾರ್ವಜನಿಕರು ಸುಳ್ಳು ಸುದ್ದಿಗೆ ಕಿವಿಗೊಡಬಾರದು ಎಂಬುದಾಗಿ ಮನವಿ ಮಾಡಿದೆ. https://kannadanewsnow.com/kannada/appointment-of-senior-officials-as-commissioners-of-five-corporations-deputy-chief-minister-d-k-shivakumar/ https://kannadanewsnow.com/kannada/the-dharmasthala-case-is-a-conspiracy-of-the-bjp-deputy-chief-minister-d-k-shivakumar/
ಬೆಂಗಳೂರು: “ಆಡಳಿತಾತ್ಮಕ ಅನುಭವವಿರುವ, ಉಪ ಆಯುಕ್ತರುಗಳಾಗಿ ಕೆಲಸ ನಿರ್ವಹಿಸಿರುವ ಹಿರಿಯ ಅಧಿಕಾರಿಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಆಯುಕ್ತರನ್ನಾಗಿ ನೇಮಕ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಯಾವ, ಯಾವ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಈಗ ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನೇ ಪಾಲಿಕೆಗಳಿಗೆ ನಿಯೋಜನೆ ಮಾಡಲಾಗುವುದು” ಎಂದು ಹೇಳಿದರು. ಸರ್ಕಾರಿ ಅಧಿಕೃತ ಕೆಲಸಗಳಿಗೆ ಹೆಲಿಕಾಪ್ಟರ್ ಮತ್ತು ವಿಮಾನಗಳ ಬಳಕೆ ಸ್ವರೂಪ ಕುರಿತ ಸಭೆಯ ಬಗ್ಗೆ ಕೇಳಿದಾಗ, “ಈ ವಿಚಾರ ಅನೇಕ ವರ್ಷದಿಂದಲೂ ಸರ್ಕಾರದ ಮುಂದೆ ಬಾಕಿ ಉಳಿದಿತ್ತು. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಹಾಗೂ ಟೆಂಡರ್ ಕರೆಯುವ ವಿಚಾರವಾಗಿ ಮುಖ್ಯಮಂತ್ರಿಯವರು ನನಗೆ ಜವಾಬ್ದಾರಿ ನೀಡದ್ದರು. ಬೇರೆ ರಾಜ್ಯಗಳಲ್ಲಿನ ವ್ಯವಸ್ಥೆಯನ್ನು ತಿಳಿದುಕೊಳ್ಳುವಂತೆ ಹಾಗೂ ಎಚ್ಎಎಲ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ” ಎಂದರು. ಬೋವಿ ಅಭಿವೃದ್ದಿ ನಿಗಮದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ,…
ಬೆಂಗಳೂರು: “ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಎನ್ ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕೇಳಿದಾಗ, “ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿಯವರು ಎಂದೂ ಬಾಯಿ ಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು” ಎಂದು ಆರೋಪಿಸಿದರು. https://kannadanewsnow.com/kannada/the-bangara-dham-in-soraba-of-shivamogga-district-is-now-a-historical-tourist-spot/ https://kannadanewsnow.com/kannada/ramanagara-district-hospital-radiologist-dr-shashi-suspended-for-conducting-gender-identification-test-in-government-hospital/
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಾಣಗೊಂಡಿರುವ ‘ಬಂಗಾರ ಧಾಮ’ವನ್ನು ರಾಜ್ಯ ಸರ್ಕಾರ ಐತಿಹಾಸಿಕ ಪ್ರವಾಸಿ ತಾಣವಾಗಿ ಗುರುತಿಸಿದೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ‘ಬಂಗಾರ ಧಾಮ’ ವನ್ನು ಮಧು ಬಂಗಾರಪ್ಪ ಅವರ ನೇತೃತ್ವದ ಎಸ್. ಬಂಗಾರಪ್ಪ ಫೌಂಡೇಶನ್ ನಿರ್ವಹಿಸುತ್ತಿದೆ. ಮಧು ಬಂಗಾರಪ್ಪ ಅವರು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಾಣ ಮಾಡಿರುವುದಲ್ಲದೇ ಬಂಗಾರ ಧಾಮವನ್ನು ಬಂಗಾರಪ್ಪ ನವರ ಚಿಂತನೆ, ಅಭಿರುಚಿ, ಜನಸಮೂಹದೊಂದಿಗೆ ಅವರಿಗಿದ್ದ ಬಾಂಧವ್ಯಕ್ಕೆ ತಕ್ಕಂತೆ ನಿರ್ಮಾಣವಾಗಿರುವುದು ವಿಶೇಷ. ಗೃಹ ಸಚಿವರಾದ ಡಾ. ಜಿ. ಪರಮೇಶ್ವರ, ಕಾನೂನು, ಸಂಸತ್ತೀಯ ವ್ಯವಹಾರಗಳ ಸಚಿವರಾದ ಎಚ್. ಕೆ. ಪಾಟೀಲ, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್, ಸಣ್ಣ ನೀರಾವರಿ ಸಚಿವರಾದ ಎನ್.ಎಸ್. ಬೋಸರಾಜು, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ ಸೇರಿದಂತೆ ಅನೇಕ ಶಾಸಕರು,…
ನವದೆಹಲಿ: ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರು ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸದಿಂದ ಹೊರಬಂದಿದ್ದು, ನಂತರ ಅವರು ದಕ್ಷಿಣ ದೆಹಲಿಯ ಚತ್ತರ್ಪುರ ಎನ್ಕ್ಲೇವ್ನಲ್ಲಿರುವ ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್ಎಲ್ಡಿ) ಮುಖ್ಯಸ್ಥ ಅಭಯ್ ಸಿಂಗ್ ಚೌತಾಲ ಅವರ ತೋಟದ ಮನೆಗೆ ಸ್ಥಳಾಂತರಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. https://twitter.com/ANI/status/1962491546726797603 https://kannadanewsnow.com/kannada/ramanagara-district-hospital-radiologist-dr-shashi-suspended-for-conducting-gender-identification-test-in-government-hospital/ https://kannadanewsnow.com/kannada/india-provides-aid-to-earthquake-affected-afghan-refugees-1000-family-tents-dispatched-to-afghanistan/













