Author: kannadanewsnow09

ಬೆಂಗಳೂರು: 2025-26ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸಲು ಅವಕಾಶ ನೀಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಸಹಕಾರ ಇಲಾಖೆಯಿಂದ ಜಾರಿಗೊಳಿಸಲು ಹಾಗೂ ಸದಸ್ಯರನ್ನು ನೋಂದಾಯಿಸಲು ಮಾರ್ಗಸೂಚಿಗಳೊಂದಿಗೆ ಆದೇಶ ಹೊರಡಿಸಲಾಗಿತ್ತು ಎಂದಿದ್ದಾರೆ. ಮುಖ್ಯಕಾರ್ಯನಿರ್ವಹಣಾಧಿಕಾರಿ (ಪ), ಯಶಸ್ವಿನಿ ಟ್ರಸ್ಟ್ ಇವರ ಪತ್ರದಲ್ಲಿ ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರ್ಕಾರವು ಜಾರಿಗೊಳಿಸಿರುವ ಒಂದು ಪ್ರತಿಷ್ಠಿತ (Flagship) ವಿಶಿಷ್ಟ್ಯ ಯೋಜನೆಯಾಗಿದ್ದು, ಇದರಲ್ಲಿ ಯಶಸ್ವಿನಿ ಫೋಟೋಕಾಲ್‌ನಂತೆ ನಿಗದಿಪಡಿಸಿರುವ ಚಿಕಿತ್ಸೆಗಳ ಪ್ಯಾಕೇಜಿನ ದರದ ಮಿತಿಗೊಳಪಟ್ಟು, ಫಲಾನುಭವಿ ಮತ್ತು ಅವರ ಕುಟುಂಬಕ್ಕೆ ವಾರ್ಷಿಕ ಗರಿಷ್ಟ ರೂ.5.00 ಲಕ್ಷ ವೈದ್ಯಕೀಯ ಚಿಕಿತ್ಸಾ ವೆಚ್ಚದ ಮಿತಿಯೊಂದಿಗೆ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಇರುತ್ತದೆ ಎಂದು ಹೇಳಿದ್ದಾರೆ. ಯಶಸ್ವಿನಿ ಯೋಜನೆಯು ವಿಮಾ ಯೋಜನೆಯಾಗಿರುವುದಿಲ್ಲ. ಬದಲಾಗಿ ಇದೊಂದು ಸ್ವಯಂ ನಿಧಿ…

Read More

ಚಿಕ್ಕಬಳ್ಳಾಪುರ : ಸುಪ್ರೀಂಕೋರ್ಟ್ ಗೆ 2022ರಲ್ಲಿ ಸಲ್ಲಿಸುವ ಡೀಮ್ಡ್ ಅರಣ್ಯದ ಪ್ರಮಾಣಪತ್ರದಲ್ಲಿಯೂ ಸಾಕಷ್ಟು ಲೋಪದೋಷವಿದ್ದು, ಇದನ್ನು ಪರಿಹರಿಸಲು ನಡೆಸಲಾಗುತ್ತಿರುವ ಜಂಟಿ ಸಮೀಕ್ಷೆ ಶೇ.70ರಷ್ಟು ಪೂರ್ಣಗೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಕಟ್ಟಡ, ಪಟ್ಟಾಭೂಮಿಯೂ ಈ ಪಟ್ಟಿಯಲ್ಲಿ ಸೇರಿದ್ದು, ಅರಣ್ಯ ಹಾಗೂ ಕಂದಾಯ ಅಧಿಕಾರಿಗಳು ಜಂಟಿ ಸರ್ವೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದರು. ಸುಪ್ರೀಂಕೋರ್ಟ್ ಈ ಲೋಪ ದೋಷ ಪರಿಹರಿಸಲು ಅವಕಾಶ ನೀಡಿದ್ದು, ರಾಜ್ಯಮಟ್ಟದಲ್ಲಿ, ಜಿಲ್ಲಾಮಟ್ಟದಲ್ಲಿ ಹಾಗೂ ವಿಭಾಗೀಯ ಮಟ್ಟದಲ್ಲಿ ಸಮಿತಿಗಳನ್ನು ರಚಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದರು. ಸೆಕ್ಷನ್ 4 ಶೀಘ್ರ ಇತ್ಯರ್ಥ, ಒತ್ತುವರಿ ತೆರವಿಗೆ ಸೂಚನೆ: ಸೆಕ್ಷನ್ 4 ಆಗಿರುವ ಭೂಮಿಯಲ್ಲಿನ ಸಮಸ್ಯೆಯನ್ನೂ ಬೇಗ ಬಗೆಹರಿಸಿ, ಸೆಕ್ಷನ್ 17 ಮಾಡಲು ಕ್ರಮ ವಹಿಸುವಂತೆಯೂ ಸೂಚಿಸಲಾಗಿದೆ. ಅದೇ ರೀತಿ…

Read More

ಚಿಕ್ಕಮಗಳೂರು : ಕರ್ನಾಟಕ ರಾಜ್ಯದಲ್ಲಿ ಅಕ್ಟೋಬರ್ 12, 2005ರಲ್ಲಿ ಅಸ್ತಿತ್ವಕ್ಕೆ ಬಂದ ಮಾಹಿತಿ ಆಯೋಗವು ಆಡಳಿತದಲ್ಲಿ ಪಾರದರ್ಶಕತೆ ಮತ್ತು ಬದ್ಧತೆಯನ್ನು ತರುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾದ ಡಾ.ಹರೀಶ್‌ಕುಮಾರ್ ತಿಳಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಇಂದು ನಗರದ ಜಿ.ಪಂ.ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ, ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಮಾಹಿತಿ ಹಕ್ಕು ಅಧಿನಿಯಮ-2005 ಕುರಿತ ಜಾಗೃತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಅಧ್ಯಯನ ಮತ್ತು ಸಾಮಾನ್ಯ ತಿಳುವಳಿಕೆ ಇರಬೇಕು. ಮಾಹಿತಿ ಬಯಸಿ ಸಲ್ಲಿಕೆಯಾಗುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಕಾಯ್ದೆಯಲ್ಲಿ ಲಭ್ಯವಿರುವ ಸೆಕ್ಷನ್‌ಗಳ ಆಧಾರದ ಮೇಲೆ ಉತ್ತರ ಮತ್ತು ಮಾಹಿತಿಯನ್ನು ಒದಗಿಸಬೇಕು. ಕಳೆದ ಹತ್ತು ವರ್ಷಗಳಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ವಯ ಮಾಹಿತಿ ನೀಡುವಲ್ಲಿ ವಿಳಂಬ, ಸರಿಯಾದ ಮಾಹಿತಿ ನೀಡದಿರುವುದು ಹಾಗೂ ಇತರ…

Read More

ಬೆಂಗಳೂರು: ಬಳ್ಳಾರಿಯ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ಮನೆ ಮುಂದೆ ಕಾಂಗ್ರೆಸ್ಸಿನವರೇ ಗಲಾಟೆ ಮಾಡಿದ್ದಾರೆ. ಕಾಂಗ್ರೆಸ್ಸಿನವರ ಬಂದೂಕಿನಿಂದ ಒಬ್ಬರ ಹತ್ಯೆ ಆಗಿದೆ. ಆದರೆ, ಜನಾರ್ಧನ ರೆಡ್ಡಿ ಮೇಲೆ ಕೇಸ್. ಇದ್ಯಾವ ಪ್ರಜಾಪ್ರಭುತ್ವ? ಇದ್ಯಾವ ವ್ಯವಸ್ಥೆ ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಪ್ರಶ್ನಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ಪ್ರಜಾಪ್ರಭುತ್ವದ ಆಡಳಿತ ನಡೆಸುತ್ತಿದ್ದಾರಾ? ಸರ್ವಾಧಿಕಾರದ ಆಡಳಿತ ನಡೆಸುತ್ತಿದ್ದಾರಾ ಎಂದು ಕೇಳಿದರು. ಗಲಾಟೆ ಮಾಡಿದ ನಾರಾ ಭರತ್ ರೆಡ್ಡಿ ವಿರುದ್ಧ ಎಫ್‍ಐಆರ್ ಆಗಿಲ್ಲವೇಕೆ ಎಂದು ಅವರು ಆಕ್ಷೇಪಿಸಿದರು. ಕೇವಲ ಬಿಜೆಪಿ ಶಾಸಕರು, ಕಾರ್ಯಕರ್ತರ ವಿರುದ್ಧ ಎಫ್‍ಐಆರ್ ಮಾಡಿದ್ದಾರೆ. ಕಾಂಗ್ರೆಸ್ ಶಾಸಕ, ಕಾರ್ಯಕರ್ತರ ವಿರುದ್ಧ ಎಫ್‍ಐಆರ್ ಮಾಡಿಲ್ಲವೇಕೆ ಎಂದು ಟೀಕಿಸಿದರು. ನಾರಾ ಭರತ್ ರೆಡ್ಡಿಗೆ ರಕ್ಷಣೆ ನೀಡುವ ಆರೇಳು ಗನ್‍ಮ್ಯಾನ್‍ಗಳು ಬಳಸುತ್ತಿದ್ದ ಆರೇಳು ಬಂದೂಕುಗಳಿಂದ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ಮನೆಗೆ ಶೂಟ್ ಮಾಡಿದ್ದಾರೆ. ಗ್ಲಾಸ್‍ಗಳು ಒಡೆದುಹೋಗಿವೆ. ಈ…

Read More

ಬಳ್ಳಾರಿ: ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕಾಗಿ ಗಲಾಟೆಯಾಗಿತ್ತು. ಈ ಗಲಾಟೆಯ ವೇಳೆಯಲ್ಲಿ ಗುಂಡಿನ ದಾಳಿ ನಡೆದು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದರು. ಇಂತಹ ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಪರಿಹಾರವನ್ನು ಸಚಿವ ಜಮೀರ್ ಅಹ್ಮದ್ ನೀಡಿದ್ದಾರೆ. ಇಂದು ಜಿಲ್ಲಾ ಉಸ್ತುವಾರಿ ಸಚಿವರಾಗಿರುವಂತ ಜಮೀರ್ ಅಹ್ಮದ್ ಖಾನ್, ಮೃತ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದೇ ಸಂದರ್ಭದಲ್ಲಿ ರಾಜಶೇಖರ್ ಅವರ ಕುಟುಂಬಕ್ಕೆ ತಾವು ವೈಯಕ್ತಿಕವಾಗಿ 25 ಲಕ್ಷ ಪರಿಹಾರವನ್ನು ನೀಡಿ, ರಾಜಶೇಖರ್ ಪತ್ನಿ ತುಳಸಿಗೆ ಆರ್ಥಿಕ ನೆರವಿನ ಹಣವನ್ನು ನೀಡಿದರು. ಈ ವೇಳೆ ಮಾತನಾಡಿದಂತ ಸಚಿವ ಜಮೀರ್ ಅಹ್ಮದ್ ಖಾನ್, ರಾಜಶೇಖರ್ ಅವರು ಇಡೀ ಮನೆಗೆ ಆಧಾರ ಸ್ಥಂಭವಾಗಿದ್ದರು. ಇದೀಗ ಅವರನ್ನು ಕಳೆದುಕೊಂಡು ಕುಟುಂಬ ಸಂಕಷ್ಟದಲ್ಲಿದೆ. ಅವರಿಗೆ ನಾನು ವೈಯಕ್ತಿಕವಾಗಿ ಆರ್ಥಿಕ ನೆರವನ್ನು ನೀಡಿದ್ದೇನೆ. ಮುಂದೆಯೂ ನೀಡುವುದಾಗಿ ತಿಳಿಸಿದರು. https://kannadanewsnow.com/kannada/there-is-no-compromise-with-anyone-on-the-development-of-the-constituency-maddur-mla-k-m-uday-clarifies/

Read More

ಮಂಡ್ಯ : ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಯಾರೊಂದಿಗೂ ರಾಜಿ ಮಾಡಿಕೊಳ್ಳುವ ಪ್ರಮೇಯವಿಲ್ಲ ಎಂದು ಮದ್ದೂರು ಶಾಸಕ ಕೆ.ಎಂ.ಉದಯ್ ಶನಿವಾರ ಸ್ಪಷ್ಟಪಡಿಸಿದರು. ಮದ್ದೂರು ನಗರದ ವಿವಿ ನಗರದ ಬಳಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ನಗರಸಭೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 16 ಕೋಟಿ ರೂ ವೆಚ್ಚದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಮುಂದೆ 13 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶಾಸಕ ಉದಯ್ ಅವರು, ಮದ್ದೂರು ಕ್ಷೇತ್ರದ ಜನತೆ ಅಭಿವೃದ್ಧಿ ದೃಷ್ಟಿಯಿಂದ ನನ್ನನ್ನು ಭಾರಿ ನಿರೀಕ್ಷೆಯೊಂದಿಗೆ ಮೊದಲ ಬಾರಿಗೆ ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ಹೀಗಾಗಿ ರೈತರು, ಬಡವರು, ಶ್ರಮಿಕರಿಗೆ ಸಹಾಯ ಮಾಡುವ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೆ ಕೆಲಸ ಮಾಡುತ್ತಿದ್ದೇನೆ ವಿನಃ ಪ್ರತಿಭಟನೆ, ಮುಷ್ಕರ ಮಾಡುತ್ತಿರುವವರಿಗೆ ಉತ್ತರ ನೀಡುವಷ್ಟು ನನಗೆ ಸಮಯವಿಲ್ಲ ಹೀಗಾಗಿ, ಅಭಿವೃದ್ಧಿ ವಿಚಾರದಲ್ಲಿ ಯಾರೊಂದಿಗೂ ರಾಜಿ ಮಾಡಿಕೊಳ್ಳುವ ಪ್ರಮೇಯವಿಲ್ಲ ಎಂದು ತಿಳಿಸಿದರು. ನಗರಸಭೆಯಾಗಿ ಮೇಲ್ದರ್ಜೆಯಾದ…

Read More

ಬೆಂಗಳೂರು; ವಾಹನ ತಪಾಸಣೆ, ಪರಿಶೀಲನೆ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಚಾಲಕರೊಂದಿಗೆ ಗೌರವದಿಂದ ವರ್ತಿಸುವಂತೆ ರಾಜ್ಯ ಸರ್ಕಾರವು ಖಡಕ್ ಸೂಚನೆ ಹೊರಡಿಸಿದೆ. ಈ ಕುರಿತಂತೆ ಎಲ್ಲಾ ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಜ್ಞಾಪನ ಪತ್ರ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆಯಾಗಿದ್ದು, ಕೆಲವು ಅಧಿಕಾರಿ ಸಿಬ್ಬಂದಿಗಳು ತೋರುತ್ತಿರುವ ದುರ್ನಡತೆ, ಅಧಿಕಾರ ದುರ್ಬಳಕೆಯಿಂದ ಸಂಪೂರ್ಣ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ಉಂಟಾಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದಿರುತ್ತದೆ ಎಂದಿದ್ದಾರೆ. ಈ ಕುರಿತು ಕಾಲಕಾಲಕ್ಕೆ ಪೊಲೀಸ್ ಇಲಾಖೆಯಿಂದ ಹಲವಾರು ಸುತ್ತೋಲೆ, ಜ್ಞಾಪನಗಳನ್ನು ಹೊರಡಿಸಿದ್ದರೂ ಸಹ ಕೆಲವು ಪೊಲೀಸ್‌ ಸಿಬ್ಬಂದಿಗಳು ವಾಹನ ತಪಾಸಣಾ ಸಂದರ್ಭದಲ್ಲಿ ವಾಹನ ಚಾಲಕರ ಮೇಲೆ ದೌರ್ಜನ್ಯ ಹಲ್ಲೆ, ಕಿರುಕುಳ, ಅವಹೇಳನಕಾರಿ, ಆವಾಚ್ಯ ಶಬ್ದಗಳ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ವಾಗ್ವಾದಕ್ಕಿಳಿದು ಅವಮಾನ ಮಾಡುವಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದು ಕಂಡು ಬಂದಿರುತ್ತಿದೆ…

Read More

ಚಿತ್ರದುರ್ಗ: ಆತ ಹೋಟೆಲ್ ಮಾಡಿಕೊಂಡಿದ್ದನು. ಅಲ್ಲಿಗೆ ಕೆಲಸಕ್ಕೆ ಬರುತ್ತಿದ್ದಂತ ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧವಾಗಿದೆ. ಇದೇ ಕಾರಣಕ್ಕೆ ಆಕೆಯ ಮಕ್ಕಳನ್ನು ಮದುವೆ ಮಾಡೋದಕ್ಕೆ ಲಕ್ಷ ಲಕ್ಷ ಹಣವನ್ನೇ ಖರ್ಚು ಮಾಡಿದ್ದಾನೆ ಎನ್ನಲಾಗಿದೆ. ಇದೀಗ ಇಬ್ಬರು ಮಕ್ಕಳನ್ನು ಬಿಟ್ಟ ಆತ, ಮೂವರು ಮಕ್ಕಳನ್ನು ಬಿಟ್ಟ ಆಕೆ ಜೊತೆಗೂಡಿ ಪರಾರಿಯಾಗಿರುವಂತ ಘಟನೆ ಹೊಸದುರ್ಗ ತಾಲ್ಲೂಕಿನ ಮಾಡದಕೆರೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮಾಡದಕೆರೆಯಲ್ಲಿ 45 ವರ್ಷದ ನಾಗಭೂಷಣ ಎಂಬಾತ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದನು. ಅಲ್ಲಿಗೆ ಅದೇ ಊರಿನ ಜ್ಯೋತಿ(38) ಎಂಬಾಕೆ ಕೆಲಸಕ್ಕೆ ಬರುತ್ತಿದ್ದರಂತೆ. ಆಕೆಯೊಂದಿಗೆ ಹೋಟೆಲ್ ಮಾಲೀಕ ನಾಗಭೂಷಣನನ ಸಲುಗೆಯಾಗಿದೆ. ಅದು ಅಕ್ರಮ ಸಂಬಂಧಕ್ಕೆ ತಿರುಗಿ, ಪತ್ನಿ ಇಲ್ಲದ ವೇಳೆಯಲ್ಲಿ ಪ್ರಣಯ ಪ್ರಸಂಗಕ್ಕೂ ಕಾರಣವಾಗಿತ್ತಂತೆ. ನಾಗಭೂಷಣ ಅವರ ಪುತ್ರ ಹಾಗೂ ಸೊಸೆ ಇಬ್ಬರೂ ಇಂಜಿನೇರ್ ಆಗಿದ್ದು, ತಾವು ದುಡಿದಂತ ಸುಮಾರು 18 ಲಕ್ಷದಷ್ಟು ಹಣವನ್ನು ತನ್ನ ತಾಯಿ ಬ್ಯಾಂಕ್ ಖಾತೆಗೆ ಇಟ್ಟಿದ್ದರೆನ್ನಲಾಗಿದೆ. ಮಗ ತನ್ನ ಪತ್ನಿಯ ಬ್ಯಾಂಕ್ ಖಾತೆಯಲ್ಲಿ ಲಕ್ಷ ಲಕ್ಷ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಜನವರಿ.8, 2026ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ದಿನಾಂಕ 08-01-2026ರ ಗುರುವಾರದಂದು ಬೆಳಗ್ಗೆ 11.30ಕ್ಕೆ ಸಚಿವ ಸಂಪುಟದ 2026ನೇ ಸಾಲಿನ 2ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಕರೆಯಲಾಗಿದೆ ಎಂಬುದಾಗಿ ಸರ್ಕಾರ ತಿಳಿಸಿದೆ.

Read More

ನವದೆಹಲಿ: ಬಿಸಿಸಿಐ (ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ) ಕೇಂದ್ರ ಸ್ಥಾನ ಪಡೆದು, ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತದ ತಂಡವನ್ನು ಪ್ರಕಟಿಸಿದೆ. ಶುಭಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದಾರೆ, ರೋಹಿತ್ ಮತ್ತು ವಿರಾಟ್ ಕೂಡ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಕೆಲಸದ ಹೊರೆ ನಿರ್ವಹಿಸಲು ತಂಡದಲ್ಲಿ ಆಯ್ಕೆಯಾಗಿಲ್ಲ, ಮತ್ತು ಶ್ರೇಯಸ್ ಅಯ್ಯರ್ ಫಿಟ್ನೆಸ್ ಕ್ಲಿಯರೆನ್ಸ್‌ಗೆ ಒಳಪಟ್ಟಿರುತ್ತಾರೆ. ಭಾರತ ಮತ್ತು ನ್ಯೂಜಿಲೆಂಡ್ ಬಹು-ಸ್ವರೂಪದ ಬಿಳಿ-ಚೆಂಡು ಸರಣಿಯಲ್ಲಿ ಮುಖಾಮುಖಿಯಾಗಲಿವೆ ಎಂಬುದು ಗಮನಿಸಬೇಕಾದ ಸಂಗತಿ. ಎರಡೂ ತಂಡಗಳು ಮೂರು ಏಕದಿನ ಪಂದ್ಯಗಳು ಮತ್ತು ಐದು ಟಿ 20 ಐಗಳಲ್ಲಿ ಪರಸ್ಪರ ಸೆಣಸಲಿವೆ. ಗಮನಾರ್ಹವಾಗಿ, ಬಿಸಿಸಿಐ ಈಗಾಗಲೇ ಭಾರತದ ಟಿ 20 ಐ ತಂಡವನ್ನು ಘೋಷಿಸಿತ್ತು ಮತ್ತು ಈಗ ಏಕದಿನ ತಂಡವನ್ನು ಸಹ ಪ್ರಕಟಿಸಿದೆ. ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಅವರನ್ನು ಉಪನಾಯಕನನ್ನಾಗಿ ಹೆಸರಿಸಲಾಗಿದೆ ಎಂಬುದು ಕುತೂಹಲಕಾರಿಯಾಗಿದೆ, ಆದರೆ ಸರಣಿಯಲ್ಲಿ ಅವರ ಸೇರ್ಪಡೆ ಅವರ ಫಿಟ್‌ನೆಸ್‌ಗೆ ಒಳಪಟ್ಟಿರುತ್ತದೆ. ಆಸ್ಟ್ರೇಲಿಯಾ ವಿರುದ್ಧದ…

Read More