Subscribe to Updates
Get the latest creative news from FooBar about art, design and business.
Author: kannadanewsnow09
ಅನೇಕ ಪ್ರಯಾಣಿಕರು ಮತ್ತು ದಿನನಿತ್ಯದ ಪ್ರಯಾಣಿಕರಿಗೆ, Google Maps ತಮ್ಮ ದಾರಿಯನ್ನು ಕಂಡುಕೊಳ್ಳಲು ಒಂದು ಪ್ರಮುಖ ಸಾಧನವಾಗಿದೆ. ಆದರೆ ಇಂಟರ್ನೆಟ್ಗೆ ಸಂಪರ್ಕದಲ್ಲಿರುವುದು ಕೆಲವೊಮ್ಮೆ ಅಸಾಧ್ಯ. ಬಹುಶಃ ನೀವು ಪರ್ವತಗಳ ಮೂಲಕ ಚಾಲನೆ ಮಾಡುತ್ತಿರಬಹುದು ಅಥವಾ ಸಿಗ್ನಲ್ ಕಡಿಮೆಯಾಗುತ್ತಿರುವ ಸ್ಥಳಕ್ಕೆ ಭೇಟಿ ನೀಡುತ್ತಿರಬಹುದು. ಈ ವೇಳೆ ಗೂಗಲ್ ಮ್ಯಾಪ್ ಬಳಸಲು ಸಾಧ್ಯವಿಲ್ಲ. ಹಾಗಾದ್ರೆ ಇಂಟರ್ನೆಟ್ ಸಂಪರ್ಕವಿಲ್ಲದೇ ಗೂಗಲ್ ಮ್ಯಾಪ್ ಬಳಸುವುದು ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. ಇಂಟರ್ನೆಟ್ ಇಲ್ಲದೆ ನಕ್ಷೆಗಳಿಗೆ ಪ್ರವೇಶವನ್ನು ಹೊಂದಿರುವುದು ನಿಜವಾದ ಜೀವರಕ್ಷಕವಾಗುತ್ತದೆ. ಇದಕ್ಕೆ ಸಹಾಯ ಮಾಡಲು, Google Maps ನಿಮಗೆ ನಕ್ಷೆಗಳನ್ನು ಡೌನ್ಲೋಡ್ ಮಾಡಲು ಮತ್ತು ಅವುಗಳನ್ನು ಆಫ್ಲೈನ್ನಲ್ಲಿ ಬಳಸಲು ಅನುಮತಿಸುವ ವೈಶಿಷ್ಟ್ಯವನ್ನು ನೀಡುತ್ತದೆ. ಈ ಲೇಖನದಲ್ಲಿ, ನಾವು Google Maps ವೈಶಿಷ್ಟ್ಯಗಳ ಬಗ್ಗೆ ನಿಮಗೆ ಹೇಳುತ್ತೇವೆ ಮತ್ತು ನೆಟ್ವರ್ಕ್ ಇಲ್ಲದಿದ್ದರೂ ನೀವು ಎಂದಿಗೂ ಕಳೆದುಹೋಗದಂತೆ ನೋಡಿಕೊಳ್ಳುವುದು ಹೇಗೆ ಎಂದು ನಿಮಗೆ ತೋರಿಸುತ್ತೇವೆ. Google Maps ಬಳಕೆಯ ಸಲಹೆಗಳು ಮತ್ತು ತಂತ್ರಗಳು ನ್ಯಾವಿಗೇಷನ್ ಮತ್ತು ಪ್ರವಾಸ ಯೋಜನೆಯನ್ನು…
ಕೆಎನ್ಎನ್ ಡಿಜಿಟಲ್ ಡೆಸ್ಕ್: ಉಗುರು ಕಚ್ಚುವುದು ಅನೇಕ ಜನರಲ್ಲಿ ಪದೇ ಪದೇ ಕಂಡುಬರುವ ಅಭ್ಯಾಸವಾಗಿದ್ದು, ಇದನ್ನು ನರಗಳ ಒತ್ತಡದ ಸಂಕೇತವೆಂದು ಜನಪ್ರಿಯವಾಗಿ ಗ್ರಹಿಸಲಾಗುತ್ತದೆ, ಆದರೆ ಅಮೆರಿಕ ಮೂಲದ ವೈದ್ಯರೊಬ್ಬರು ಇದು ಮಾರಕವೂ ಆಗಬಹುದು ಎಂದು ಎಚ್ಚರಿಸಿದ್ದಾರೆ. ಡಾ. ಕ್ರಿಸ್ಟಾಬೆಲ್ ಅಕಿನೋಲಾ ಅವರ ಪ್ರಕಾರ, ನಿಮ್ಮ ಉಗುರುಗಳನ್ನು ಕಚ್ಚುವುದರಿಂದ ಸಾಂಕ್ರಾಮಿಕ ಎಂಡೋಕಾರ್ಡಿಟಿಸ್ ಉಂಟಾಗಬಹುದು – ಇದು ಬಾಯಿಯಿಂದ ಉಗುರುಗಳ ಸುತ್ತಲಿನ ಹಾನಿಗೊಳಗಾದ ಚರ್ಮದ ಮೂಲಕ ಬ್ಯಾಕ್ಟೀರಿಯಾಗಳು ಪ್ರವೇಶಿಸುವುದರಿಂದ ಉಂಟಾಗುವ ಹೃದಯ ಸೋಂಕು. ಚಿಕ್ಕ ಹುಡುಗಿಯ ಪ್ರಕರಣವನ್ನು ವಿವರಿಸುತ್ತಾ, ಡಾ. ಅಕಿನೋಲಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ, ಈ ಅಭ್ಯಾಸವು ಮೊದಲೇ ಅಸ್ತಿತ್ವದಲ್ಲಿರುವ ಹೃದಯ ಕಾಯಿಲೆಗಳನ್ನು ಹೊಂದಿರುವ ವ್ಯಕ್ತಿಗಳಿಗೆ ವಿಶೇಷವಾಗಿ ಕಳವಳಕಾರಿಯಾಗಿದೆ, ಏಕೆಂದರೆ ರಕ್ತಪ್ರವಾಹಕ್ಕೆ ಪ್ರವೇಶಿಸುವ ಯಾವುದೇ ಬ್ಯಾಕ್ಟೀರಿಯಾಗಳು ಹೃದಯ ಕವಾಟಗಳಿಗೆ ಸೋಂಕು ತರಬಹುದು. ಸೋಂಕು ಸೆಪ್ಟಿಕ್ ಎಂಬೋಲಿಯಂತಹ ಗಂಭೀರ ತೊಡಕುಗಳಿಗೆ ಕಾರಣವಾಗಬಹುದು, ಇದು ದೇಹದ ಇತರ ಭಾಗಗಳಿಗೆ ಪ್ರಯಾಣಿಸುತ್ತದೆ, ಇದು ಪಾರ್ಶ್ವವಾಯುವಿಗೆ ಕಾರಣವಾಗಬಹುದು ಮತ್ತು ತಕ್ಷಣದ ವೈದ್ಯಕೀಯ ಆರೈಕೆಯ ಅಗತ್ಯವಿರುತ್ತದೆ. ಸಾಂಕ್ರಾಮಿಕ ಎಂಡೋಕಾರ್ಡಿಟಿಸ್ ಎಂದರೇನು?…
ಬೆಂಗಳೂರು: ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ತುರ್ತು ನಿರ್ವಹಣೆ ಕಾರ್ಯ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್ ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್ ಲೈನ್ ಆಧರಿತ ಸೇವೆಗಳು ಅಕ್ಟೋಬರ್ 24ರ ರಾತ್ರಿ 8 ಗಂಟೆಯಿಂದ ಅಕ್ಟೋಬರ್ 25ರ ಮಧ್ಯಾಹ್ನ1 ಗಂಟೆಯವರೆಗೆ ನಗರ ಪ್ರದೇಶಗಳಲ್ಲಿ ಲಭ್ಯವಿರುವುದಿಲ್ಲ. ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳ ಈ ಕೆಳಕಂಡ ನಗರ ಉಪ ವಿಭಾಗದ ಗ್ರಾಹಕರಿಗೆ https://www.bescom.co.in, www.hescom.co.in, www.gescomglb.org, www.mescom.org.in ಮತ್ತು .cescmysore.in ಪೋರ್ಟಲ್ ಗಳ ಮೂಲಕ ಮಾಡುವ ಆನ್ ಲೈನ್ ಸೇವೆಗಳಾದ ಬಿಲ್ ಪಾವತಿ, ಹೊಸ ಸಂಪರ್ಕ ಲಭ್ಯವಿರುವುದಿಲ್ಲ . ಹಾಗೆಯೇ ವಿದ್ಯುತ್ ಬಿಲ್ ಪಾವತಿಗಾಗಿ ಬಳಸುವ ಬೆಸ್ಕಾಂ ಮಿತ್ರ ಆಪ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇರಿದಂತೆ ಮೊದಲಾದ ಥರ್ಡ್ ಪಾರ್ಟಿ ಪಾವತಿ ವಿಧಾನಗಳಲ್ಲಿ ಆನ್ ಲೈನ್ ಸೇವೆ ಅಲಭ್ಯ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಬೆಸ್ಕಾಂ ಬೆಂಗಳೂರು ನಗರ…
ಬೆಂಗಳೂರು: ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ತುರ್ತು ನಿರ್ವಹಣೆ ಕಾರ್ಯ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್ ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್ ಲೈನ್ ಆಧರಿತ ಸೇವೆಗಳು ಅಕ್ಟೋಬರ್ 24ರ ರಾತ್ರಿ 8 ಗಂಟೆಯಿಂದ ಅಕ್ಟೋಬರ್ 25ರ ಮಧ್ಯಾಹ್ನ1 ಗಂಟೆಯವರೆಗೆ ನಗರ ಪ್ರದೇಶಗಳಲ್ಲಿ ಲಭ್ಯವಿರುವುದಿಲ್ಲ. ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳ ಈ ಕೆಳಕಂಡ ನಗರ ಉಪ ವಿಭಾಗದ ಗ್ರಾಹಕರಿಗೆ https://www.bescom.co.in, www.hescom.co.in, www.gescomglb.org, www.mescom.org.in ಮತ್ತು .cescmysore.in ಪೋರ್ಟಲ್ ಗಳ ಮೂಲಕ ಮಾಡುವ ಆನ್ ಲೈನ್ ಸೇವೆಗಳಾದ ಬಿಲ್ ಪಾವತಿ, ಹೊಸ ಸಂಪರ್ಕ ಲಭ್ಯವಿರುವುದಿಲ್ಲ . ಹಾಗೆಯೇ ವಿದ್ಯುತ್ ಬಿಲ್ ಪಾವತಿಗಾಗಿ ಬಳಸುವ ಬೆಸ್ಕಾಂ ಮಿತ್ರ ಆಪ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇರಿದಂತೆ ಮೊದಲಾದ ಥರ್ಡ್ ಪಾರ್ಟಿ ಪಾವತಿ ವಿಧಾನಗಳಲ್ಲಿ ಆನ್ ಲೈನ್ ಸೇವೆ ಅಲಭ್ಯ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಬೆಸ್ಕಾಂ ಬೆಂಗಳೂರು ನಗರ…
ಬೆಂಗಳೂರು : ವಿಜಯೇಂದ್ರ, ರಾಘವೇಂದ್ರ ಹಾಗೂ ಬಿಜೆಪಿ ಇತರೆ ನಾಯಕರು ತಮ್ಮ ಸರ್ಕಾರದ ಅವಧಿಯಲ್ಲಿ ಮಾಡಿರುವ ಕೆಲಸದ ಅನುಭವ ಸ್ಮರಿಸುತ್ತಾ, ಬಿಹಾರ ಚುನಾವಣೆಗೆ ರಾಜ್ಯದಿಂದ ಹಣ ರವಾನೆ ಮಾಡುತ್ತಿರುವುದಾಗಿ ಆರೋಪ ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಗಾಂಧಿ ನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಬಿಹಾರ ಚುನಾವಣೆಗೆ ಕರ್ನಾಟಕ ಸರ್ಕಾರ ಹಣ ರವಾನಿಸುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಕೇಳಿದಾಗ, “ತಮ್ಮ ಕೆಲಸವನ್ನು ಅವರು ಈಗ ಸ್ಮರಿಸುತ್ತಿದ್ದಾರೆ. ನಾವು ಅಂತಹ ಯಾವುದೇ ಕೆಲಸ ಮಾಡಿಲ್ಲ. ಅದರ ಅಭ್ಯಾಸವೂ ಇಲ್ಲ. ಅದರ ಅಗತ್ಯವೂ ಇಲ್ಲ. ಇದು ಕೇವಲ ಹಿಟ್ ಅಂಡ್ ರನ್ ಹೇಳಿಕೆ. ಅವರ ಬಳಿ ಈ ಆರೋಪಕ್ಕೆ ಪೂರಕವಾಗಿ ದಾಖಲೆಗಳಿದ್ದರೆ ತೋರಿಸಲಿ. ಬಿಹಾರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬ ಕಾರಣಕ್ಕೆ ಇಂತಹ ಆರೋಪ ಮಾಡುತ್ತಿದ್ದಾರೆ” ಎಂದು ತಿಳಿಸಿದರು. ಕೇಂದ್ರ ಸರ್ಕಾರ ಪತನವಾಗಬಹುದು ನವೆಂಬರ್ ವೇಳೆಗೆ ಸರ್ಕಾರ ಪತನವಾಗಲಿದೆ ಎಂಬ…
ಬೆಂಗಳೂರು: ನಿನ್ನೆಯಷ್ಟೇ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದ್ದರು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು. ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದರು. ಅವರಿಗೆ ಹೂಗುಚ್ಚ, ಸಿಹಿ ನೀಡಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು. ಅಲ್ಲದೇ ಕೆಲ ಕಾಲ ಅವರೊಂದಿಗೆ ಸಾಗರ ಕ್ಷೇತ್ರದ ವಿವಿಧ ವಿಚಾರಗಳನ್ನು ಚರ್ಚಿಸಿದರು ಎಂಬುದಾಗಿ ತಿಳಿದು ಬಂದಿದೆ. ಇದಲ್ಲದೇ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಅವರ ಬೆಂಗಳೂರಿನ ನಿವಾಸದಲ್ಲಿ ಭೇಟಿಯಾದಂತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಹೂಗುಚ್ಚ ನೀಡಿ, ಸಿಹಿ ಹಂಚಿಕೆ ಮಾಡಿ ದೀಪಾವಳಿ ಹಬ್ಬದ ಶುಭಾಶಗಳನ್ನು ಕೋರಿದರು. ಇದೇ ಸಂದರ್ಭದಲ್ಲಿ ಸಾಗರ ಕ್ಷೇತ್ರದ ಕಾನೂನು ಸುವ್ಯವಸ್ಥೆ ಸೇರಿದಂತೆ ವಿವಿಧ ವಿಚಾರಗಳನ್ನು ಅವರೊಂದಿಗೆ ಚರ್ಚಿಸಿದರು. ಶಾಸಕ ಗೋಪಾಲಕೃಷ್ಣ…
ಬೆಂಗಳೂರು: ನವೆಂಬರ್.2ರಂದು ನಿಗದಿಯಂತೆ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ದಳದ ಪಥ ಸಂಚಲನ ನಡೆಯಲಿದೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರಿಯಾಂಕ್ ಖರ್ಗೆಗೆ ಆರ್ ಎಸ್ ಎಸ್ ಟೀಕೆ ಮಾಡೋ ದುರ್ಬುದ್ಧಿ ಯಾಕೆ ಬಂದಿದೆಯೋ ಗೊತ್ತಿಲ್ಲವಾಗಿದೆ. ಆರ್ ಎಸ್ ಎಸ್ ಟೀಕೆ ಮಾಡ್ತಿರೋದು ಪ್ರಚಾರಕ್ಕೋ ಅಥವಾ ಸಿಎಂ ಕುರ್ಚಿಗೆ ಟವಲ್ ಹಾಕೋದಕ್ಕೋ ಗೊತ್ತಿಲ್ಲ ಎಂದರು. ಮಲ್ಲಿಕಾರ್ಜುನ ಖರ್ಗೆ ಹೇಳಿದ ಹಾಗೆ ಪ್ರಿಯಾಂಕ್ ಖರ್ಗೆ ಏಕಾಂಗಿ ಆಗಿದ್ದಾರೆ. ಗಾಂಧಿ ಕುಟುಂಬದಿಂದಲೇ ಆರ್ ಎಸ್ ಎಸ್ ಮಂಡಿಸೋದಕ್ಕೆ ಆಗಿಲ್ಲ, ಇನ್ನೂ ಬೇರೆಯವರಿಂದ ಅಸಾಧ್ಯದ ಮಾತಾಗಿದೆ. ಇಂತಹ ಪ್ರತಿನಿತ್ಯ ಹೇಳಿಕೆ ಕೊಡೋ ಮೂಲಕ ವಾಸ್ತವದ ಸತ್ಯ ಮರೆ ಮಾಚೋ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂಬುದಾಗಿ ವಾಗ್ಧಾಳಿ ನಡೆಸಿದರು. ನವೆಂಬರ್.2ರಂದು ನಿಗದಿಯಂತೆ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥ ಸಂಚಲನ ನಡೆದೇ ನಡೆಯುತ್ತದೆ. ಈಗಾಗಲೇ ಹೈಕೋರ್ಟ್ ಕೂಡ ಅನುಮತಿ ನೀಡಿದೆ. ರಾಜ್ಯದಲ್ಲಿ ಎಲ್ಲಾ ಕ್ಷೇತ್ರದಲ್ಲಿ ಪಥ ಸಂಚಲನ ಆಗುತ್ತಿದೆ.…
ಬೆಂಗಳೂರು: ನಗರದಲ್ಲಿ ಶಾಕಿಂಗ್ ಘಟನೆ ಎನ್ನುವಂತೆ ಹೆಂಡತಿಯ ಕಿರುಕುಳಕ್ಕೆ ತಾಳಲಾರದೇ ಸೆಲ್ಫಿ ವೀಡಿಯೋ ಮಾಡಿಟ್ಟು, ಪತಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಬಿಡದಿ ಬಳಿಯಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಹೆಂಡತಿಯ ಕಿರುಕುಳ ತಾಳಲಾರದೇ ಸೆಲ್ಫಿ ವೀಡಿಯೋ ಮಾಡಿಟ್ಟು ರೈಲಿಗೆ ತಲೆಕೊಟ್ಟು ಬಿಡದಿ ಬಳಿಯಲ್ಲಿ ರೇವಂತ್ ಕುಮಾರ್(30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನಅಣ್ಣದೊಡ್ಡಿ ನಿವಾಸಿಯಾಗಿದ್ದಂತ ರೇವಂತ್ ಕುಮಾರ್ ಎಂಬುವರಿಗೆ ಪತ್ನಿ ತುಂಬಾನೇ ಕಿರುಕುಳ ನೀಡುತ್ತಿದ್ದರಂತೆ. ಈ ಕಾರಣದಿಂದಾಗಿ ಬೇಸತ್ತು ಇಂದು ಬಿಡದಿ ಬಳಿಯಲ್ಲಿ ಸೆಲ್ಫಿ ವೀಡಿಯೋ ಮಾಡಿ, ನನ್ನ ಸಾವಿಗೆ ಪತ್ನಿ ಕಾರಣವೆಂದು ತಿಳಿಸಿ, ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 5 ತಿಂಗಳ ಹಿಂದೆ ಬಿಡದಿಯ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಂತ ರೇವಂತ್ ಕುಮಾರ್, ವಿವಾಹವಾಗಿದ್ದರು. ವಿವಾಹದ ಬಳಿಕ ಪತ್ನಿ ತುಂಬಾ ಕಿರುಕುಳ ನೀಡುತ್ತಿದ್ದರಂತೆ. ಈ ಹಿನ್ನಲೆಯಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸೆಲ್ಫಿ ವೀಡಿಯೋದಲ್ಲಿ ತಿಳಿಸಿದ್ದಾರೆ. https://kannadanewsnow.com/kannada/is-the-wealth-of-your-home-diminishing-this-is-the-reason/ https://kannadanewsnow.com/kannada/mandya-remembering-the-brave-police-officers-is-everyones-duty-justice-manjula-itti/
ಮನೆಯಲ್ಲಿ ಮಾಡುವ ಸಣ್ಣ ತಪ್ಪುಗಳು ಕೂಡ ನಮ್ಮ ಸಂಪತ್ತನ್ನು ಕಡಿಮೆ ಮಾಡುತ್ತದೆ ಎಂಬ ನಂಬಿಕೆ ಇದೆ. ತನಗೆ ಇಷ್ಟವಿಲ್ಲದ ಕೆಲವು ಕೆಲಸಗಳನ್ನು ಮಾಡಿದರೆ ಮಹಾಲಕ್ಷ್ಮಿ ಮನೆಯಲ್ಲಿ ಉಳಿಯುವುದಿಲ್ಲ ಎಂಬ ನಂಬಿಕೆ ಇದೆ. ಆ ರೀತಿ ನಮ್ಮ ಸಂಪತ್ತು ಕಡಿಮೆಯಾಗಲು ಕಾರಣವೇನು? ನಾವು ಮಾಡುವ ತಪ್ಪುಗಳೇನು? ಅದನ್ನೇ ನಾವು ಈ ಆಧ್ಯಾತ್ಮಿಕ ದಾಖಲೆಯ ಮೂಲಕ ತಿಳಿಯಲಿದ್ದೇವೆ . ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…
ಮಂಡ್ಯ: ಸಮಾಜದ ರಕ್ಷಣೆಗೆ ಜೀವದ ಹಂಗು ತೊರೆದು ಹೋರಾಡಿ ಹುತಾತ್ಮರಾಗುವ ಪೊಲೀಸರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ಹೇಳಿದರು. ಇಂದು ಮಂಡ್ಯದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ನಗರದ ಡಿ.ಎ.ಆರ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಪೊಲೀಸರು ದಿನವಿಡಿ ಬಿಸಿಲು,ಮಳೆ,ಗಾಳಿ, ಹಬ್ಬ ಹರಿದಿನ ಮರೆತು ಕರ್ತವ್ಯ ನಿಷ್ಠೆಯಿಂದ ಕೆಲಸ ಮಾಡುತ್ತಿರುವುದರಿಂದ ನಾವು ಇಂದು ನಮ್ಮ ಮನೆಗಳಲ್ಲಿ ನೆಮ್ಮದಿಯಿಂದ ಜೀವಿಸುತ್ತಿದ್ದೇವೆ ಎಂದು ಹೇಳಿದರು. ಪೊಲೀಸರು ಇಂತಹಾ ಒಂದು ತ್ಯಾಗಮಯ ಜೀವನವನ್ನು ನಡೆಸುತ್ತಿದ್ದಾರೆ. ಇದಕ್ಕೆ ಅವರ ಕುಟುಂಬವೂ ಸಹ ಬೆನ್ನೆಲುಬಾಗಿ ನಿಂತಿದೆ. ನಮ್ಮ ನೆಮ್ಮದಿಗಾಗಿ ಹುತಾತ್ಮರಾದ ಪೊಲೀಸರನ್ನು ಕೇವಲ ಒಂದು ದಿನಕ್ಕೆ ಸೀಮಿತ ಮಾಡಿದೆ ದಿನವೂ ಸ್ಮರಿಸಬೇಕು ಎಂದು ಅಭಿಪ್ರಾಯಪಟ್ಟರು. ಕಳೆದ ಹದಿನೆಂಟು ವರ್ಷಗಳಿಂದ ನಾನು ಕರ್ತವ್ಯದಲ್ಲಿ ಪೊಲೀಸರೊಂದಿಗೆ ಭಾಗಿಯಾಗಿದ್ದೇನೆ. ನಮ್ಮ ಕುಟುಂಬಕ್ಕಿಂತ ಹೆಚ್ಚು ಕಾಲ ಪೊಲೀಸರೊಂದಿಗೆ ಕೋರ್ಟ್ ನಲ್ಲಿ ಕಾಲ ಕಳೆದಿದ್ದೇನೆ. ಎಲ್ಲಾ ಇಲಾಖೆಗಳಿಗಿಂತ ಹೆಚ್ಚು…














