Author: kannadanewsnow09

ಬೆಂಗಳೂರು: ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ ಪ್ರೊ.ಹಿ.ಚಿ ಬೋರಲಿಂಗಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಮ್ಯಾನೇಜಿಂಗ್ ಟ್ರಸ್ಟಿ ಆದಂತ ಆದಿತ್ಯ ನಂಜರಾಜ್ ಅವರು ಮಾಹಿತಿ ನೀಡಿದ್ದಾರೆ. ಕರ್ನಾಟಕ ಜಾನಪದ ಪರಿಷತ್ತಿನಲ್ಲಿ ದಿನಾಂಕ 15-07-2024ರಂದು ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ನಡೆದ 128ನೇ ಆಡಳಿತ ಮಂಡಳಿ ಸಭೆಯಲ್ಲಿ ಇಲ್ಲಿಯವರೆಗೆ ಅಧ್ಯಕ್ಷರಾಗಿದ್ದ ಪ್ರೊ.ಹಿ ಶಿ ರಾಮಚಂದ್ರೇಗೌಡರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಪ್ರಸ್ತಾಪಿಸಲಾಯಿತು ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಪರಿಷತ್ತಿನ ಕಾರ್ಯಾಧ್ಯಕ್ಷರಾಗಿದ್ದ ಪ್ರೊ.ಹಿ.ಚಿ ಬೋರಲಿಂಗಯ್ಯ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/1000-village-accountants-750-surveyors-to-be-filled-minister-krishna-byre-gowda/ https://kannadanewsnow.com/kannada/it-is-a-tragedy-that-hd-kumaraswamy-did-not-attend-all-party-meeting-and-went-to-badoota-minister-cheluvariyaswamy/

Read More

ಬೆಂಗಳೂರು : ಸರ್ವೇ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿದ್ದು, ಇದರಿಂದ ರೈತರು ಸಂಕಷ್ಟಕ್ಕೀಡಾಗಿರುವುದು ನಮ್ಮ ಗಮನದಲ್ಲಿದೆ. ಅಲ್ಲದೆ, ಈ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಧಾನಸಭೆ ಪ್ರಶ್ನೋತ್ತರ ಅವಧಿಯ ವೇಳೆ ರಾಯಭಾಗ ಕ್ಷೇತ್ರದ ಬಿಜೆಪಿ ಶಾಸಕ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರು ಸರ್ವೇ ಇಲಾಖೆ ಸಮಸ್ಯೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಸರ್ವೇ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನತಾ ದರ್ಶನ ಕಾರ್ಯಕ್ರಮದಲ್ಲೂ ಸರ್ವೇ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲೂ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು. ಗ್ರಾಮ ಲೆಕ್ಕಿಗರು 1,000 ಹಾಗೂ 750 ಜನ ಸರ್ವೇಯರ್ ಭರ್ತಿ: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯ ಬಗ್ಗೆ ವಿಧಾನಸಭೆಗೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ರಾಜ್ಯದಲ್ಲಿ 1,000 ಗ್ರಾಮ…

Read More

ಬೆಂಗಳೂರು: ನಾಳೆ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ( Second PUC Exam-3 Results ) ಫಲಿತಾಂಶವನ್ನು ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ಘೋಷಣೆ ಮಾಡಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ದಿನಾಂಕ 24-06-2024ರಿಂದ 05-07-2024ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ಪರೀಕ್ಷೆಗಳು ನಡೆದಿದ್ದವು. ಈ ಪರೀಕ್ಷೆಯ ಫಲಿತಾಂಶ ನಾಳೆ ಮಧ್ಯಾಹ್ನ ಪ್ರಕಟಿಸಲಾಗುತ್ತಿದೆ ಅಂತ ಹೇಳಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಹೀಗೆ ಚೆಕ್ ಮಾಡಿ ಇನ್ನೂ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ತಾವು ಕುಳಿತಲ್ಲೇ ಅಂತರರ್ಜಾಲದ ಮೂಲಕ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ ಸೈಟ್ https://karresults.nic.in ಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ದಾಖಲಿಸಿ…

Read More

ಹಾಸನ: ಜಿಲ್ಲೆಯಲ್ಲಿ ಎಡಬಿಡದೆ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಸಂಬಂಧ ಡಿಡಿಪಿಐ ಹೆಚ್.ಕೆ ಪಾಂಡು ಅವರು ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯಾಧ್ಯಂತ ಭಾರೀ ಮಳಎಯಾಗುತ್ತಿದೆ. ಹೀಗಾಗಿ ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ಹಾಗೂ ಹಾಸನ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಅಂತ ತಿಳಿಸಿದ್ದಾರೆ. ಹೀಗಾಗಿ ನಾಳೆ ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿಕ್ಷಣ ಇಲಾಖೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಅಂತ ಡಿಡಿಪಿಎಂ ಹೇಳಿದ್ದಾರೆ. https://kannadanewsnow.com/kannada/arvind-kejriwals-bail-delhi-hc-posts-eds-plea-against-trial-court-order-granting-bail-to-august-6/ https://kannadanewsnow.com/kannada/notification-for-recruitment-of-10000-teachers-to-be-issued-soon-madhu-bangarappa/

Read More

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದ ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಸೋಮವಾರ ಮುಂದೂಡಿದೆ. ಈ ಪ್ರಕರಣದ ವಿಚಾರಣೆ ಆಗಸ್ಟ್ 6ರಂದು ನಡೆಯಲಿದೆ. ದೆಹಲಿ ಮುಖ್ಯಮಂತ್ರಿಗೆ ಜಾಮೀನು ನೀಡಿದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ಈ ಹಿಂದೆ ತಡೆ ನೀಡಿತ್ತು. ಕಳೆದ ವಾರ, ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಿತು, ಆದರೆ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐನಿಂದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದರಿಂದ ಅವರು ಜೈಲಿನಲ್ಲಿದ್ದಾರೆ. ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವ ಸುಪ್ರೀಂ ಕೋರ್ಟ್ ಆದೇಶವಿದೆ ಎಂದು ಕೇಜ್ರಿವಾಲ್ ಅವರ ವಕೀಲರು ಹೈಕೋರ್ಟ್ಗೆ ತಿಳಿಸಿದರು. ಕಳೆದ ರಾತ್ರಿ 11 ಗಂಟೆಗೆ ಇಡಿ ಮನವಿಯಲ್ಲಿ ಹೊಸ ಪ್ರತಿಕ್ರಿಯೆಯನ್ನು ಸಲ್ಲಿಸಿರುವುದರಿಂದ ಅವರಿಗೆ ಹೆಚ್ಚಿನ ಸಮಯ ಬೇಕು ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು.…

Read More

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಖಾಲಿ ಇರುವಂತ ಶಿಕ್ಷಕರ ಹುದ್ದೆ ಭರ್ತಿಗೆ ಸರ್ಕಾರ ಕ್ರಮವಹಿಸಲಾಗಿದೆ. ಶೀಘ್ರವೇ 10,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದು, ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ ನಂತ್ರ, ಪ್ರಕ್ರಿಯೆ ಶುರು ಮಾಡಲಾಗುತ್ತದೆ ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ವಿಧಾನಪರಿಷತ್ತಿನಲ್ಲಿ ಬಿಜೆಪಿಯ ತಳವಾರ್ ಸಾಬಣ್ಣ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಇದೆ. ಇದೇ ಕಾರಣಕ್ಕಾಗಿ ಫಲಿತಾಂಶ ಕೂಡ ಕುಂಠಿತಗೊಂಡಿದೆ. 19,000 ಶಿಕ್ಷಕರ ಕೊರತೆ ಕಲ್ಯಾಣ ಕರ್ನಾಟಕ ಭಾಗದಲ್ಲಿದೆ. ಇದಲ್ಲದೇ ಕೊಠಡಿಗಳ ಸಮಸ್ಯೆ ಕೂಡ ಇದೆ. ಇದನ್ನು ಕೂಡಲೇ ಸರಿ ಮಾಡಬೇಕು. ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿದರು. ಈ ಪ್ರಶ್ನೆಗೆ ಉತ್ತರಿಸಿದಂತ ಸಚಿವ ಮಧು ಬಂಗಾರಪ್ಪ ಅವರು, ಶಿಕ್ಷಣ ಇಲಾಖೆಯಲ್ಲಿ 50,000 ಶಿಕ್ಷಕರ ಕೊರತೆ ಇದೆ. ಈ ಹಿನ್ನಲೆಯಲ್ಲೇ 10,000 ಶಿಕ್ಷಕರ ನೇಮಕಕ್ಕೆ ಅನುಮತಿಸುವಂತೆ ಆರ್ಥಿಕ ಇಲಾಖಎಗೆ ಪತ್ರವನ್ನು ಬರೆಯಲಾಗಿದೆ. ಆರ್ಥಿಕ ಇಲಾಖೆಯಿಂದ ಅನುಮತಿಸಿದ ನಂತ್ರ, ನೇಮಕಾತಿ ಪ್ರಕ್ರಿಯೆಗೆ…

Read More

ಕೋಲಾರ: ಸಮಾಜದ ಹಿತವು ವಕೀಲರನ್ನೂ ಆಧರಿಸಿರುವಾಗ ನ್ಯಾಯವಾದಿಗಳ ಪಾತ್ರವೂ ಮಹತ್ವದ್ದಾಗಿದೆ ಎಂದು ಕರ್ನಾಟಕ ಹೈಕೋರ್ಟ್ ‌ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಪ್ರತಿಪಾದಿಸಿದ್ದಾರೆ. ಪ್ರಸಕ್ತ ಸನ್ನಿವೇಶಗಳಲ್ಲಿ ಲಾಯರ್‌ಗಳು ಲಾ ಮೇಕರ್ ಮತ್ತು ಜನಸಾಮಾನ್ಯರ ನಡುವೆ ರಾಯಭಾರಿಯಂತಿದ್ದು, ವಕೀಲರ ಸಮಾಜಮುಖಿ ಕಾರ್ಯನಿರ್ವಹಣೆಯಿಂದ ಅವರ ವೃತ್ತಿಶ್ರೇಷ್ಠತೆ ಬಿಂಬಿತವಾಗುತ್ತದೆ ಎಂದವರು ಬಣ್ಣಿಸಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್‌ನಲ್ಲಿ ಪ್ರತಿಷ್ಠಿತ ಶ್ರೀ ಕೆಂಗಲ್ ಹನುಮಂತಯ್ಯ ಕಾನೂನು ಮಹಾವಿದ್ಯಾಲಯದ 42ನೇ ಪದವಿ ದಿನ (Graduation Day) ಸಮಾರಂಭದಲ್ಲಿ ಭಾಗವಹಿಸಿ, ಕಾನೂನು ಶಿಕ್ಷಿತರಿಗೆ ಮಾರ್ಗದರ್ಶನ ಭಾಷಣ ಮಾಡಿದ ನ್ಯಾಯಮೂರ್ತಿ ಇಂದ್ರೇಶ್, ಭಾವೀ ವಕೀಲರ ಸಂಭವನೀಯ ವೃತ್ತಿ ಜೀವನದಲ್ಲಿ ಹೇಗೆ ಯಶೋಗಾಥೆ ಬರೆಯಲು ಸಾಧ್ಯ ಎಂಬ ಬಗ್ಗೆ ಸೂತ್ರ ಹೇಳಿ ಕೊಟ್ಟರು. ವೃತ್ತಿಯ ‘ಆರಂಭದ 10 ವರ್ಷ ಕತ್ತೆಯ ರೀತಿ ದುಡಿದರೆ, ನಂತರದ ವರ್ಷಗಳಲ್ಲಿ ಕುದುರೆ ಥರಾ ಓಡಬಲ್ಲರು’ ಎಂಬ ತಜ್ಞರ ಮಾತನ್ನು ನೆನಪಿಸಿದ ಅವರು, ವಕೀಲರು ಹಣಕ್ಕಾಗಿ ವೃತ್ತಿಯನ್ನು ಆಯ್ಕೆ ಮಾಡುವುದಕ್ಕಿಂತ ದೇಶಕ್ಕಾಗಿ ಕೆಲಸ ಮಾಡಬೇಕೆಂಬ ನಿಲುವನ್ನು ಹೊಂದಿರುವವರು, ನ್ಯಾಯದತ್ತ ಚಿತ್ತ ಇಟ್ಟವರು ಎಂದರು. ಕಾನೂನು…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಎರಡು ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಈಗಾಗಲೇ ಹೊಸನಗರ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆಯನ್ನು ಘೋಷಣೆ ಮಾಡಿರೋದಾಗಿ ಹೇಳಲಾಗುತ್ತಿದೆ. ಈ ಬೆನ್ನಲ್ಲೇ ಸಾಗರ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಸಂಬಂಧ ಸಾಗರ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಾಗರ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ತಿಳಿಯಪಡಿಸುವುದೆನೇಂದರೆ ಮಳೆಯ ಪ್ರಮಾಣ ಹೆಚ್ಚುತ್ತಿದ್ದು ಮಾನ್ಯ ತಹಸೀಲ್ದಾರ್ ರವರ ಸೂಚನೆ ಮೇರೆಗೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ದಿನಾಂಕ:16-07-2024 ರಂದು ಮಂಗಳವಾರ ಸಾಗರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಈ ದಿನವನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವಂತೆ ಸೂಚಿಸಿದ್ದಾರೆ. ಇನ್ನೂ ಸಾಗರ ತಾಲ್ಲೂಕಿನಲ್ಲಿ ಯಥಾ ಸ್ಥಿತಿಯಲ್ಲಿ ಶಿಕ್ಷಕರಿಗೆ ತರಬೇತಿ ಇತ್ಯಾದಿ ಸಭೆಗಳು ಮುಂದುವರೆಯುತ್ತವೆ ಅಂತ ಮಾಹಿತಿ ನೀಡಿದ್ದಾರೆ. ಈ ಮೂಲಕ ಸಾಗರ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆಯನ್ನು ಘೋಷಣೆ ಮಾಡಲಾಗಿದೆ. https://kannadanewsnow.com/kannada/tn-cm-condemns-ktaka-for-not-releasing-cauvery-water-calls-all-party-meet/ https://kannadanewsnow.com/kannada/it-is-a-tragedy-that-hd-kumaraswamy-did-not-attend-all-party-meeting-and-went-to-badoota-minister-cheluvariyaswamy/

Read More

ಚೈನ್ನೈ: ನಿನ್ನೆಯಷ್ಟೇ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆ ನಡೆಸಲಾಯಿತು. ಈ ಸಭೆಯಲ್ಲಿ 1 ಟಿಎಂಸಿ ಬದಲಾಗಿ ಪ್ರತಿನಿತ್ಯ 8,000 ಟಿಎಂಸಿ ನೀರು ಹರಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಈಗ ಕರ್ನಾಟಕದ ಬೆನ್ನಲ್ಲೇ ತಮಿಳುನಾಡು ಸರ್ಕಾರ ಕೂಡ ಸರ್ವಪಕ್ಷಗಳ ಸಭೆಯನ್ನು ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಚರ್ಚಿಸೋದಕ್ಕೆ ಕರೆದಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ಸರ್ಕಾರ ನಿಲುವು ತಳೆದಿರುವುದು ಬಲವಾಗಿ ಖಂಡನೀಯ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೋಮವಾರ ಹೇಳಿದ್ದಾರೆ ಮತ್ತು ಅಂತರರಾಜ್ಯ ನದಿ ವಿವಾದದಲ್ಲಿ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲು ಜುಲೈ 16 ರಂದು ಶಾಸಕಾಂಗ ಪಕ್ಷದ ನಾಯಕರ ಸಭೆ ಕರೆಯುವುದಾಗಿ ಘೋಷಿಸಿದರು. ಜುಲೈ 15, 2024 ರ ಹೊತ್ತಿಗೆ, ಕರ್ನಾಟಕದ ನಾಲ್ಕು ಪ್ರಮುಖ ಅಣೆಕಟ್ಟುಗಳಲ್ಲಿ ಒಟ್ಟು ಸಂಗ್ರಹವು 75.586 ಟಿಎಂಸಿ ಅಡಿಗಳಾಗಿದ್ದರೆ, ತಮಿಳುನಾಡಿನ ಮೆಟ್ಟೂರು ಜಲಾಶಯದಲ್ಲಿ ನೀರಿನ ಮಟ್ಟ ಕೇವಲ 13.808 ಟಿಎಂಸಿ ಅಡಿಯಾಗಿದೆ ಎಂದು ಅವರು…

Read More

ವಿಜಯಪುರ: ರಾಜ್ಯದ ಶಾಲಾ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಹಾರ, ಶಾಲು ಸೇರಿದಂತೆ ಇತರೆ ವಸ್ತುಗಳಿಂದ ಸನ್ಮಾನಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಮೂಲಕ ಇನ್ಮುಂದೆ ಶಾಲೆಗಳಲ್ಲಿ ಸಭೆ, ಸಮಾರಂಭಗಳಲ್ಲಿ ಹಾರ, ಶಾಲು ಹೊದಿಸಿ ಸನ್ಮಾನಿಸುವುದನ್ನು ನಿಷೇಧಿಸಿ ಆದೇಶಿಸಿದೆ. ಈ ಕುರಿತಂತೆ ವಿಜಯಪುರದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ಕ್ಷೇತ್ರ ಸಮನ್ವಯಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದ್ದಾರೆ. ಅದರಲ್ಲಿ ಎಂ.ಬಿ.ಪಾಟೀಲ ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಕರ್ನಾಟಕ ಸರ್ಕಾರ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು ದಿನಾಂಕ: 13-07-2024 ರಂದು ನೀಡಿದ ನಿರ್ದೇಶನದ ಮೇರೆಗೆ, ವಿಜಯಪುರ ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ನಡೆಸಲಾಗುವ ಶಾಲಾ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಮತ್ತು ಇತರೆ ಉದ್ಘಾಟನಾ ಸಮಾರಂಭಗಳಲ್ಲಿ ಅನಗತ್ಯವಾಗಿ ಹಣವನ್ನು ಖರ್ಚು ಮಾಡಿ ಹಾರ, ಶಾಲು ನೆನಪಿನ ಕಾಣಿಕೆಗಳನ್ನು ತಂದು ಸನ್ಮಾನ ಮಾಡುವುದರಲ್ಲಿ…

Read More