Author: kannadanewsnow09

ಚಿತ್ರದುರ್ಗ: ಆತ ಹೋಟೆಲ್ ಮಾಡಿಕೊಂಡಿದ್ದನು. ಅಲ್ಲಿಗೆ ಕೆಲಸಕ್ಕೆ ಬರುತ್ತಿದ್ದಂತ ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧವಾಗಿದೆ. ಇದೇ ಕಾರಣಕ್ಕೆ ಆಕೆಯ ಮಕ್ಕಳನ್ನು ಮದುವೆ ಮಾಡೋದಕ್ಕೆ ಲಕ್ಷ ಲಕ್ಷ ಹಣವನ್ನೇ ಖರ್ಚು ಮಾಡಿದ್ದಾನೆ ಎನ್ನಲಾಗಿದೆ. ಇದೀಗ ಇಬ್ಬರು ಮಕ್ಕಳನ್ನು ಬಿಟ್ಟ ಆತ, ಮೂವರು ಮಕ್ಕಳನ್ನು ಬಿಟ್ಟ ಆಕೆ ಜೊತೆಗೂಡಿ ಪರಾರಿಯಾಗಿರುವಂತ ಘಟನೆ ಹೊಸದುರ್ಗ ತಾಲ್ಲೂಕಿನ ಮಾಡದಕೆರೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮಾಡದಕೆರೆಯಲ್ಲಿ 45 ವರ್ಷದ ನಾಗಭೂಷಣ ಎಂಬಾತ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದನು. ಅಲ್ಲಿಗೆ ಅದೇ ಊರಿನ ಜ್ಯೋತಿ(38) ಎಂಬಾಕೆ ಕೆಲಸಕ್ಕೆ ಬರುತ್ತಿದ್ದರಂತೆ. ಆಕೆಯೊಂದಿಗೆ ಹೋಟೆಲ್ ಮಾಲೀಕ ನಾಗಭೂಷಣನನ ಸಲುಗೆಯಾಗಿದೆ. ಅದು ಅಕ್ರಮ ಸಂಬಂಧಕ್ಕೆ ತಿರುಗಿ, ಪತ್ನಿ ಇಲ್ಲದ ವೇಳೆಯಲ್ಲಿ ಪ್ರಣಯ ಪ್ರಸಂಗಕ್ಕೂ ಕಾರಣವಾಗಿತ್ತಂತೆ. ನಾಗಭೂಷಣ ಅವರ ಪುತ್ರ ಹಾಗೂ ಸೊಸೆ ಇಬ್ಬರೂ ಇಂಜಿನೇರ್ ಆಗಿದ್ದು, ತಾವು ದುಡಿದಂತ ಸುಮಾರು 18 ಲಕ್ಷದಷ್ಟು ಹಣವನ್ನು ತನ್ನ ತಾಯಿ ಬ್ಯಾಂಕ್ ಖಾತೆಗೆ ಇಟ್ಟಿದ್ದರೆನ್ನಲಾಗಿದೆ. ಮಗ ತನ್ನ ಪತ್ನಿಯ ಬ್ಯಾಂಕ್ ಖಾತೆಯಲ್ಲಿ ಲಕ್ಷ ಲಕ್ಷ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಜನವರಿ.8, 2026ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ದಿನಾಂಕ 08-01-2026ರ ಗುರುವಾರದಂದು ಬೆಳಗ್ಗೆ 11.30ಕ್ಕೆ ಸಚಿವ ಸಂಪುಟದ 2026ನೇ ಸಾಲಿನ 2ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಕರೆಯಲಾಗಿದೆ ಎಂಬುದಾಗಿ ಸರ್ಕಾರ ತಿಳಿಸಿದೆ.

Read More

ನವದೆಹಲಿ: ಬಿಸಿಸಿಐ (ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ) ಕೇಂದ್ರ ಸ್ಥಾನ ಪಡೆದು, ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತದ ತಂಡವನ್ನು ಪ್ರಕಟಿಸಿದೆ. ಶುಭಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದಾರೆ, ರೋಹಿತ್ ಮತ್ತು ವಿರಾಟ್ ಕೂಡ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಕೆಲಸದ ಹೊರೆ ನಿರ್ವಹಿಸಲು ತಂಡದಲ್ಲಿ ಆಯ್ಕೆಯಾಗಿಲ್ಲ, ಮತ್ತು ಶ್ರೇಯಸ್ ಅಯ್ಯರ್ ಫಿಟ್ನೆಸ್ ಕ್ಲಿಯರೆನ್ಸ್‌ಗೆ ಒಳಪಟ್ಟಿರುತ್ತಾರೆ. ಭಾರತ ಮತ್ತು ನ್ಯೂಜಿಲೆಂಡ್ ಬಹು-ಸ್ವರೂಪದ ಬಿಳಿ-ಚೆಂಡು ಸರಣಿಯಲ್ಲಿ ಮುಖಾಮುಖಿಯಾಗಲಿವೆ ಎಂಬುದು ಗಮನಿಸಬೇಕಾದ ಸಂಗತಿ. ಎರಡೂ ತಂಡಗಳು ಮೂರು ಏಕದಿನ ಪಂದ್ಯಗಳು ಮತ್ತು ಐದು ಟಿ 20 ಐಗಳಲ್ಲಿ ಪರಸ್ಪರ ಸೆಣಸಲಿವೆ. ಗಮನಾರ್ಹವಾಗಿ, ಬಿಸಿಸಿಐ ಈಗಾಗಲೇ ಭಾರತದ ಟಿ 20 ಐ ತಂಡವನ್ನು ಘೋಷಿಸಿತ್ತು ಮತ್ತು ಈಗ ಏಕದಿನ ತಂಡವನ್ನು ಸಹ ಪ್ರಕಟಿಸಿದೆ. ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಅವರನ್ನು ಉಪನಾಯಕನನ್ನಾಗಿ ಹೆಸರಿಸಲಾಗಿದೆ ಎಂಬುದು ಕುತೂಹಲಕಾರಿಯಾಗಿದೆ, ಆದರೆ ಸರಣಿಯಲ್ಲಿ ಅವರ ಸೇರ್ಪಡೆ ಅವರ ಫಿಟ್‌ನೆಸ್‌ಗೆ ಒಳಪಟ್ಟಿರುತ್ತದೆ. ಆಸ್ಟ್ರೇಲಿಯಾ ವಿರುದ್ಧದ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಸರಣಿಗೆ ನಾಯಕ ಶುಭಮನ್ ಗಿಲ್ ಮತ್ತು ಉಪನಾಯಕ ಶ್ರೇಯಸ್ ಅಯ್ಯರ್ ಭಾರತದ ಏಕದಿನ ತಂಡಕ್ಕೆ ಮರಳಿದ್ದಾರೆ. ಆದಾಗ್ಯೂ, ಸರಣಿಯಲ್ಲಿ ಅಯ್ಯರ್ ಭಾಗವಹಿಸುವಿಕೆಯು ಸೆಂಟರ್ ಆಫ್ ಎಕ್ಸಲೆನ್ಸ್ (CoE) ನಿಂದ ಫಿಟ್ನೆಸ್ ಕ್ಲಿಯರೆನ್ಸ್‌ಗೆ ಒಳಪಟ್ಟಿರುತ್ತದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ತಿಳಿಸಿದೆ. ಭಾರತ ಮತ್ತು ನ್ಯೂಜಿಲೆಂಡ್ ಬಹು-ಸ್ವರೂಪದ ವೈಟ್-ಬಾಲ್ ಸರಣಿಯಲ್ಲಿ ಮುಖಾಮುಖಿಯಾಗಲಿವೆ ಎಂಬುದು ಗಮನಿಸಬೇಕಾದ ಸಂಗತಿ. ಎರಡೂ ತಂಡಗಳು ಮೂರು ಏಕದಿನ ಪಂದ್ಯಗಳು ಮತ್ತು ಐದು ಟಿ20 ಪಂದ್ಯಗಳಲ್ಲಿ ಪರಸ್ಪರ ಸೆಣಸಲಿವೆ. ಗಮನಾರ್ಹವಾಗಿ, ಬಿಸಿಸಿಐ ಈಗಾಗಲೇ ಭಾರತದ ಟಿ20ಐ ತಂಡವನ್ನು ಘೋಷಿಸಿತ್ತು ಮತ್ತು ಈಗ ಏಕದಿನ ತಂಡವನ್ನು ಸಹ ಪ್ರಕಟಿಸಿದೆ. ಶ್ರೇಯಸ್ ಅಯ್ಯರ್ ಅವರನ್ನು ಏಕದಿನ ಸರಣಿಗೆ ಉಪನಾಯಕನನ್ನಾಗಿ ಹೆಸರಿಸಲಾಗಿದೆ ಎಂಬುದು ಕುತೂಹಲಕಾರಿಯಾಗಿದೆ, ಆದರೆ ಸರಣಿಯಲ್ಲಿ ಅವರ ಸೇರ್ಪಡೆ ಅವರ ಫಿಟ್‌ನೆಸ್‌ಗೆ ಒಳಪಟ್ಟಿರುತ್ತದೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಅಯ್ಯರ್ ಗಾಯಗೊಂಡರು ಮತ್ತು ಅಂದಿನಿಂದ ಅವರು ಆಟದಿಂದ ಹೊರಗುಳಿದಿದ್ದಾರೆ.…

Read More

ಬಳ್ಳಾರಿ: ಜಿಲ್ಲೆಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕಾಗಿ ಫೈರಿಂಗ್ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಬಹಿರಂಗವಾಗಿಯೇ ಫೈರಿಂಗ್ ಮಾಡಿದಂತ ಇಬ್ಬರು ಗನ್ ಮ್ಯಾನ್ ಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್ ರೆಡ್ಡಿಯ ಇಬ್ಬರು ಖಾಸಗಿ ಗನ್ ಮ್ಯಾನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಆಪ್ತನಾಗಿರುವ ಸತೀಶ್ ರೆಡ್ಡಿ ಗನ್ ಮ್ಯಾನ್ ವಶಕ್ಕೆ ಪಡೆಯಲಾಗಿದೆ. ಬಹಿರಂಗವಾಗಿ ಫೈರಿಂಗ್ ಮಾಡಿದ್ದ ಇಬ್ಬರು ಗನ್ ಮ್ಯಾನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗನ್ ಮ್ಯಾನ್ ಗಳು ಸೇರಿ 40 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 40 ಜನರನ್ನು ಬ್ರೂಸ್ ಪೇಟೆ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. https://kannadanewsnow.com/kannada/one-day-cancellation-of-shimoga-town-talaguppa-passenger-train-on-january-04-2026/

Read More

ಬೆಂಗಳೂರು : “ಬಿಜೆಪಿ ನಾಯಕರು ಗಾಂಧೀಜಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ತಮ್ಮ ಕಚೇರಿಗಳಲ್ಲಿ ಗಾಂಧೀಜಿ ಅವರ ಫೋಟೋ ಇಟ್ಟುಕೊಳ್ಳುವ ಯೋಗ್ಯತೆ ಕೂಡ ಅವರು ಉಳಿಸಿಕೊಂಡಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹರಿಹಾಯ್ದರು. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜತೆ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ಬಿಜೆಪಿ ನಾಯಕರು ಇನ್ನು ಮುಂದೆ ಮಹಾತ್ಮಾ ಗಾಂಧಿ ಅವರ ಪ್ರತಿಮೆ ಮುಂದೆ ಕೂತು ಹೋರಾಟ ಮಾಡುವ ಹಕ್ಕನ್ನು ಕಳೆದುಕೊಂಡಿದ್ದಾರೆ. ಮಹಾತ್ಮಾ ಗಾಂಧಿ ಅವರ ಫೋಟೋಗಳನ್ನು ತಮ್ಮ ಕಚೇರಿಗಳಲ್ಲಿ ಹಾಕಿಕೊಳ್ಳುವ ಅರ್ಹತೆಯನ್ನು ಕಳೆದುಕೊಂಡಿದ್ದಾರೆ. ಅವರ ಫೋಟೋ ಹಾಕಿಕೊಳ್ಳುವ ಯೋಗ್ಯತೆ ನಿಮಗಿಲ್ಲ. ಅವರ ಹೆಸರನ್ನು ಯೋಜನೆಯಿಂದ ತೆಗೆದ ಮೇಲೆ ನಿಮಗೆ ಯಾವ ನೈತಿಕತೆ ಇದೆ? ನೀವು ಮಹಾತ್ಮಾ ಗಾಂಧಿ ಬಗ್ಗೆ ಮಾತನಾಡುವ ಹಾಗೂ ಅವರ ಪ್ರತಿಮೆಗೆ ಹೂವಿನ ಹಾರ ಹಾಕುವ ಹಕ್ಕೂ ಇಲ್ಲ. ನಿಮ್ಮ ಬಳಿ ಇರುವ ಮಹಾತ್ಮಾ ಗಾಂಧೀಜಿ ಅವರ ಫೋಟೋಗಳನ್ನು ನಮಗೆ ಕೊಟ್ಟುಬಿಡಿ, ನಾವು ಅವುಗಳನ್ನು ನಮ್ಮ…

Read More

ಶಿವಮೊಗ್ಗ: ಶಿವಮೊಗ್ಗ ಟೌನ್ ಮತ್ತು ಕುಂಸಿ ನಿಲ್ದಾಣಗಳ ಮಧ್ಯೆ ಇರುವ ಕೋಟೆಗಂಗೂರು ನಿಲ್ದಾಣದಲ್ಲಿ ಮುಖ್ಯ ಮಾರ್ಗದ ಪುನರ್ ನಿರ್ಮಾಣ ಕೆಲಸದ ನಿಮಿತ್ತ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಕೈಗೊಳ್ಳಲಾಗಿರುವುದು ಇದರಿಂದಾಗಿ ಕೆಳಕಂಡ ರೈಲು ಸೇವೆಗಳನ್ನು ಒಂದು ದಿನ ರದ್ದುಪಡಿಸಲಾಗಿದೆ, ವಿವರಗಳು ಈ ಕೆಳಗಿನಂತಿವೆ. ರೈಲು ಸಂಖ್ಯೆ 56217 ತಾಳಗುಪ್ಪ–ಶಿವಮೊಗ್ಗ ಟೌನ್ ಪ್ಯಾಸೆಂಜರ್ ಹಾಗೂ ರೈಲು ಸಂಖ್ಯೆ 56218 ಶಿವಮೊಗ್ಗ ಟೌನ್–ತಾಳಗುಪ್ಪ ಪ್ಯಾಸೆಂಜರ್ ರೈಲುಗಳು ನಾಳೆ ಒಂದು ದಿನ ರದ್ದುಗೊಳಿಸಲಾಗಿದೆ.

Read More

ಮಂಡ್ಯ: ಜಿಲ್ಲೆಯ ಅಗಸರಹಳ್ಳಿ ಬಳಿ ಎಣ್ಣೆ ಕೊಡದಿದ್ದಕ್ಕೆ ಬಾರ್ ಹಾಗೂ ಮಾಲೀಕರ ಕಾರಿಗೆ ಬೆಂಕಿ ಇಟ್ಟು ಪುಂಡರು ದಾಂಧಲೆ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲ್ಲೂಕಿನ ಅಗಸರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪರಮೇಶ್ ಎಂಬುವರಿಗೆ ಸೇರಿದಂತ ಈಗಲ್ ಬಾರ್ ಮತ್ತು ರೆಸ್ಟೋರೆಂಟ್ ನಲ್ಲಿ  ಈ ಘಟನೆ ನಡೆದಿದೆ. ಮುರುಕನಹಳ್ಳಿಯ ರಕ್ಷಿತ್ ಹಾಗೂ ಆತನ ಸ್ನೇಹಿತರಿಂದ ದಾಂಧಲೆಯನ್ನು ನಡೆಸಲಾಗಿದೆ. ಉಚಿತವಾಗಿ ಮದ್ಯಕ್ಕೆ ಬೇಡಿಕೆಯನ್ನು ರಕ್ಷಿತ್ ಮತ್ತು ಆತನ ಸ್ನೇಹಿತರು ಇಟ್ಟಿದ್ದರಂತೆ. ಮದ್ಯ ಕೊಡದಿದ್ದಕ್ಕೆ ಪೆಟ್ರೋಲ್ ಸುರಿದು ಬಾರ್ ಹಾಗೂ ಮಾಲೀಕ ಪರಮೇಶ್ ಕಾರಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದಾರೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/big-pendal-fell-due-to-heavy-cyclone-minister-satish-jarakiholi-bachao/

Read More

ಹಾವೇರಿ: ಜಿಲ್ಲೆಯಲ್ಲಿ ಭಾರಿ ಸುಂಟರಗಾಳಿಗೆ ಬೃಹತ್ ಗಾತ್ರದ ಪೆಂಡಾಲ್ ಒಂದು ಹಾರಿ ಬಿದ್ದಿದೆ. ಇದರ ಸಮೀಪದಲ್ಲೇ ಇದ್ದಂತ ಸಚಿವ ಸತೀಶ್ ಜಾರಕಿಹೊಳಿ ಅವರು ಕೂದಲೆಳೆಯ ಅಂತರದಿಂದ ಬಜಾವ್ ಆಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಲ್ಲಿ ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆಯನ್ನು ಸಚಿವ ಸತೀಶ್ ಜಾರಕಿಹೊಳಿ ನೀಡುತ್ತಿದ್ದರು. ಈ ಸಂದರ್ಭದಲ್ಲೇ ಭಾರಿ ಸುಂಟರಗಾಳಿ ಉಂಟಾಗಿ ಬೃಹತ್ ಗಾತ್ರದ ಪೆಂಡಾಲ್ ಹಾರಿ ಬಿದ್ದಿದೆ. ಅನಾಹುತವೊಂದು ತಪ್ಪಿ, ಸಚಿವ ಸತೀಶ್ ಜಾರಕಿಹೊಳಿ ಬಚಾವ್ ಆಗಿದ್ದಾರೆ. https://kannadanewsnow.com/kannada/there-was-not-a-single-commotion-until-janardhana-reddy-set-foot-in-ballari-dcm-d-k-shivakumar/

Read More

ಬೆಂಗಳೂರು : “ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ. ಸಣ್ಣ ಅಹಿತಕರ ಘಟನೆ ಆಗಿರಲಿಲ್ಲ. ಸಣ್ಣ ಎಫ್ಐಆರ್ ಇರಲಿಲ್ಲ. ಅವರು ಬಂದಮೇಲೆ ಗಲಭೆ ಆಗಿದೆ. ಹೀಗಾಗಿ ಅವರಿಗೆ ಮಾತನಾಡುವ ಹಕ್ಕಿಲ್ಲ. ಪಕ್ಷ ನಮ್ಮ ಶಾಸಕ ಭರತ್ ರೆಡ್ಡಿ ಬೆನ್ನಿಗೆ ನಿಲ್ಲಲಿದೆ. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಯಾರು ಎಂಬುದು ತನಿಖೆಯಿಂದ ಹೊರಬರಲಿದ್ದು, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ಮೊದಲ ಬಾರಿಗೆ ಬಳ್ಳಾರಿಯಲ್ಲಿ ನಮ್ಮ ಸರ್ಕಾರ ವಾಲ್ಮೀಕಿ ಮಹರ್ಷಿಯವರ ಪುತ್ಥಳಿ ನಿರ್ಮಿಸುತ್ತಿದೆ. ನಮ್ಮ ಶಾಸಕರು ಅದರ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ನಗರದ ಎಲ್ಲೆಡೆ ಅದರ ಪೋಸ್ಟರ್ ಗಳನ್ನು ಹಾಕಿದ್ದಾರೆ. ಅದರಲ್ಲಿ ತಪ್ಪೇನಿದೆ? ನಮ್ಮ ಮನೆ ಮುಂದೆಯೂ ಬಿಜೆಪಿಯವರು ಪೋಸ್ಟರ್ ಹಾಕುತ್ತಿರುತ್ತಾರೆ. ಅದನ್ನು ನಾನು ಬೇಡ ಎನ್ನಲು ಸಾಧ್ಯವೇ? ಈ ಪೋಸ್ಟರ್…

Read More