Author: kannadanewsnow09

ಮುಂಬೈ: ನಗರದಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಪಂಡಿತ್ ಅವರ ವಿವಾಹವು ( Anant Ambani and Radhika Merchant’s wedding ) ಅದ್ಧೂರಿಯಾಗಿ ನಡೆಯುತ್ತಿದೆ. ಈ ಮದುವೆಗೆ ಅಮಂತ್ರಣ ಇತ್ತವರಿಗೆ ಮಾತ್ರವೇ ಪ್ರವೇಶಕ್ಕೆ ಅವಕಾಶವಿದೆ. ಹೀಗಿದ್ದರೂ ಅವರ ಮದುವೆಗೆ ಆಹ್ವಾನವಿಲ್ಲದೆ ಪ್ರವೇಶಿಸಿದಂತ ಇಬ್ಬರು ಯೂಟ್ಯೂಬರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು ಅನಂತ್ ಅಂಬಾನಿ ಮದುವೆಗೆ ( anant ambani wedding ) ಆಹ್ವಾನಿವಿಲ್ಲದೇ ಪ್ರವೇಶಿಸಿದಂತ ಇಬ್ಬರು ಯ್ಯೂಟೂಬರ್ ಗಳನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅನುಮತಿಯಿಲ್ಲದೆ ಪ್ರವೇಶಿಸಿದವರಲ್ಲಿ ಒಬ್ಬರು ಯೂಟ್ಯೂಬರ್ ವೆಂಕಟೇಶ್ ನರಸಯ್ಯ ಅಲ್ಲೂರಿ (26) ಮತ್ತು ಇನ್ನೊಬ್ಬ ವ್ಯಕ್ತಿ ಲುಕ್ಮಾನ್ ಮೊಹಮ್ಮದ್ ಶಫಿ ಶೇಖ್ (28) ಎಂದು ಗುರುತಿಸಲಾಗಿದ್ದು, ಇಬ್ಬರನ್ನೂ ಮುಂಬೈನ ಬಿಕೆಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಅವರು ಮದುವೆಯಲ್ಲಿ ಭಾಗವಹಿಸಲು ಆಂಧ್ರಪ್ರದೇಶದಿಂದ ಬಂದಿದ್ದರು. ಎರಡೂ ಪ್ರಕರಣಗಳಲ್ಲಿ ನೋಟಿಸ್ ನೀಡಿ ಕಾನೂನು ಕ್ರಮ…

Read More

ಜಮ್ಮು-ಕಾಶ್ಮೀರ: ಇಲ್ಲಿನ ಕುಪ್ವಾರಾದ ಕೇರನ್ ಸೆಕ್ಟರ್ನ ನಿಯಂತ್ರಣ ರೇಖೆಯಲ್ಲಿ ಇಂದು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಅಲ್ಲದೇ ಗಡಿ ನಿಯಂತ್ರಣ ರೇಖೆಯ ಒಳಗೆ ನುಸುಳಲು ಯತ್ನಿಸಿದಂತ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.  ಕೇರನ್ ಸೆಕ್ಟರ್ನ ನಿಯಂತ್ರಣ ರೇಖೆಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯಲ್ಲಿ 3 ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ. ಜೊತೆಗೆ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. https://twitter.com/ANI/status/1812490857007690069 ಸದ್ಯ ಜಮ್ಮು ಕಾಶ್ಮೀರದ ಕುವ್ಪಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಅಂತ ಭಾರತೀಯ ಸೇನೆ ಮಾಹಿತಿ ನೀಡಿದೆ. https://kannadanewsnow.com/kannada/445-dengue-cases-reported-across-the-state-today-taking-the-number-of-active-cases-to-9527/ https://kannadanewsnow.com/kannada/education-department-to-take-major-steps-to-improve-sslc-results/

Read More

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 445 ಜನರಿಗೆ ರಾಜ್ಯಾಧ್ಯಂತ ಡೆಂಗ್ಯೂ ಪಾಸಿಟಿವ್ ಅಂತ ತಿಳಿದು ಬಂದಿದೆ. ಹೀಗಾಗಿ ಸಕ್ರೀಯ ಪ್ರಕರಣಗಳ ಸಂಖ್ಯೆ 9,527ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 2630 ಜನರನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 445 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಅಂತ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 294, ತುಮಕೂರು 19, ಧಾರವಾಡ 12, ಬೀದರ್ 72, ಬಳ್ಳಾರಿ 3, ಮಂಡ್ಯ 33, ದಕ್ಷಿಣ ಕನ್ನಡ 62, ಉಡುಪಿ 5 ಹಾಗೂ ಚಿಕ್ಕಮಗಳೂರು 13 ಸೇರಿದಂತೆ 445 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ಪರೀಕ್ಷೆಯಿಂದ ತಿಳಿದು ಬಂದಿದೆ. https://kannadanewsnow.com/kannada/education-department-to-take-major-steps-to-improve-sslc-results/ https://kannadanewsnow.com/kannada/indias-full-schedule-at-paris-olympics-2024/

Read More

ನಮ್ಮ ಸುತ್ತಮುತ್ತ ಇರುವಂತಹ ಪ್ರತಿಯೊಂದು ದೇವಸ್ಥಾನವು ಕೂಡ ಒಂದೊಂದು ವಿಶೇಷವಾದ ಚಮತ್ಕಾರವನ್ನು ಹೊಂದಿದ್ದು. ಈ ದಿನ ನಾವು ಹೇಳುತ್ತಿರುವಂತಹ ಈ ದೇವಸ್ಥಾನವು ಕೂಡ ಬಹಳ ವಿಶೇಷ ವಾಗಿದ್ದು ಈ ದೇವಸ್ಥಾನಕ್ಕೆ ಬಂದರೆ ನಿಮ್ಮ ಎಲ್ಲಾ ಕಷ್ಟಗಳು ಕೂಡ ದೂರವಾಗುತ್ತದೆ ಎಂದು ಇಲ್ಲಿಯ ಭಕ್ತರು ಹೇಳುತ್ತಾರೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ವಿಚಾರವಾಗಿ ಮಹತ್ವದ ಸರ್ವಪಕ್ಷ ಸಭೆ ನಡೆಯಿತು. ಈ ಸಭೆಯ ಬಳಿಕಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ನೀಡಿದ ವಿವರಗಳ ಹೈಲೈಟ್ಸ್ ಮುಂದೆ ಓದಿ. 11-7-2024 ಕಾವೇರಿ ನೀರು ನಿಯಂತ್ರಣ ಸಮಿತಿಯ 3 ನೇ ಸಭೆ ನಡೆದು, ಜುಲೈ 12 ನೇ ದಿನಾಂಕದಿಂದ ಈ ತಿಂಗಳ ಕೊನೆಯವರೆಗೆ ಸುಮಾರು 20 ದಿನ ಪ್ರತೀ ದಿನ 1 tmc ಯಂತೆ 20 tmc ನೀರು ಬಿಡಲು ಆದೇಶಿಸಿದ್ದಾರೆ. ನಾರ್ಮಲ್ ವರ್ಷದಲ್ಲಿ ಜೂನ್ ತಿಂಗಳಲ್ಲಿ 9.4 TMC, July ನಲ್ಲಿ 31.24tmc ನೀರು ಬಿಡಬೇಕಾಗಿದೆ. ಅಂದರೆ ಒಟ್ಟು 40.43 TMC ಬಿಡಬೇಕಾಗಿದೆ. ಇಲ್ಲಿಯವರೆಗೂ 5 TMCಗೂ ಹೆಚ್ಚು ನೀರು ಬಿಡಲು ಸಾಧ್ಯವಾಗಿದೆ. ಕಾವೇರಿ ತೀರದ ಸಚಿವರು, ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಜು12 ರಂದು ಸಭೆ ನಡೆಸಿ ನೀರು ಬಿಡದೇ ಇರಲು ಮತ್ತು ಸರ್ವಪಕ್ಷ ಸಭೆ ಕರೆಯಲು, CWMA ಮುಂದೆ…

Read More

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency -NTA) ಪೀಡಿತ ಅಭ್ಯರ್ಥಿಗಳಿಗೆ ಸಿಯುಇಟಿ ಯುಜಿ 2024 ( CUET UG 2024 ) ಮರುಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಿದೆ. ಅಧಿಕೃತ ಪ್ರಕಟಣೆಯ ಪ್ರಕಾರ, ಸಿಯುಇಟಿ ಯುಜಿ 2024 ಮರುಪರೀಕ್ಷೆಯನ್ನು ಜುಲೈ 19 ರಂದು ಸುಮಾರು 1,000 ಅಭ್ಯರ್ಥಿಗಳಿಗೆ ನಡೆಸಲಾಗುವುದು. ಇದಕ್ಕೂ ಮೊದಲು, ಪರೀಕ್ಷಾ ಸಂಸ್ಥೆ ಜುಲೈ 7 ರಂದು ಸಿಯುಇಟಿ ಯುಜಿ 2024 ರ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಿತು. ಜುಲೈ 7 ಮತ್ತು 9 ರ ನಡುವೆ ಸಿಯುಇಟಿ ಯುಜಿ 2024 ತಾತ್ಕಾಲಿಕ ಕೀ ಉತ್ತರಗಳ ವಿರುದ್ಧ ಆಕ್ಷೇಪಣೆಗಳನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿತ್ತು. ಅಭ್ಯರ್ಥಿಗಳಿಂದ ಸ್ವೀಕರಿಸಿದ ಕುಂದುಕೊರತೆಗಳು ಮಾನ್ಯವೆಂದು ಕಂಡುಬಂದರೆ ಮರುಪರೀಕ್ಷೆ ನಡೆಸಲಾಗುವುದು ಎಂದು ಎನ್ಟಿಎ ಹಿಂದಿನ ಹೇಳಿಕೆಯಲ್ಲಿ ಉಲ್ಲೇಖಿಸಿತ್ತು. ಸಿಯುಇಟಿ (ಯುಜಿ) – 2024 ಪರೀಕ್ಷೆಗೆ ಸಂಬಂಧಿಸಿದಂತೆ 30 ಜೂನ್ 2024 ರವರೆಗೆ ಅಭ್ಯರ್ಥಿಗಳಿಂದ ಸ್ವೀಕರಿಸಿದ ಕುಂದುಕೊರತೆಗಳು ಮತ್ತು 07 ಜುಲೈ ಮತ್ತು 09 ಜುಲೈ…

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi ) ಭಾನುವಾರ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ ( social media platform X ) (ಈ ಹಿಂದೆ ಟ್ವಿಟರ್) ನಲ್ಲಿ 100 ದಶಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಜಾಗತಿಕ ನಾಯಕ ಎಂಬ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ (38.1 ಮಿಲಿಯನ್ ಫಾಲೋವರ್ಸ್), ದುಬೈ ಆಡಳಿತಗಾರ ಶೇಖ್ ಮೊಹಮ್ಮದ್ (11.2 ಮಿಲಿಯನ್ ಫಾಲೋವರ್ಸ್) ಮತ್ತು ಪೋಪ್ ಫ್ರಾನ್ಸಿಸ್ (18.5 ಮಿಲಿಯನ್ ಫಾಲೋವರ್ಸ್) ಅವರಿಗಿಂತ ಪ್ರಧಾನಿ ಮೋದಿ ಬಹಳ ಮುಂದಿದ್ದಾರೆ. ಭಾರತದಲ್ಲಿ, ಪ್ರಧಾನಿ ಮೋದಿ ಇತರ ಭಾರತೀಯ ರಾಜಕಾರಣಿಗಳಿಗಿಂತ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ 26.4 ಮಿಲಿಯನ್ ಫಾಲೋವರ್ಸ್ ಹೊಂದಿದ್ದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 27.5 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (19.9 ಮಿಲಿಯನ್), ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ…

Read More

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿಗೆ ಬಂದ ನಂತ್ರ, ರಾಜ್ಯ ಬೊಕ್ಕಸ ಖಾಲಿಯಾಗಿದೆ. ಕೆ ಎಸ್ ಆರ್ ಟಿಸಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣಕ್ಕೆ ನೀಡಿದಂತ ಟಿಕೆಟ್ ದರವನ್ನು ಸರ್ಕಾರ ಈವರೆಗೆ ಪಾವತಿಸಿಲ್ಲ. ಈ ಎಲ್ಲಾ ಕಾರಣಗಳಿಂದ ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತಿದೆ. ಇದಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆಯಾಗಿದೆ ಎನ್ನಲಾಗಿತ್ತು. ಆದ್ರೇ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ( KSRTC Bus Ticket Price Hike ) ಮಾಡಲಾಗುತ್ತಿಲ್ಲ ಅಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ( Minister Ramalingareddy ) ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ರಾಜ್ಯದಲ್ಲಿ ಕೆ ಎಸ್ ಆರ್ ಟಿ ಸಹಿತ ನಾಲ್ಕು ನಿಗಮಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸಂಬಂಧ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದರು. ಕೆ ಎಸ್ ಆರ್ ಟಿಸಿ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದಂತ ಸಾರಿಗೆ…

Read More

ಶಿವಮೊಗ್ಗ: ಶಿವಮೊಗ್ಗ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ದಿನೇ ದಿನೇ ಕಳ್ಳತನ ಪ್ರಕರಣಗಳ ಸಂಖ್ಯೆ ಹೆಚ್ಚಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದಂತ ಪೊಲೀಸರು, ಕಳ್ಳತನ ಪ್ರಕರಣ ಸಂಬಂಧ ಭದ್ರಾವತಿ ಮೂಲದ ಐವರು ಮಹಿಳೆಯರನ್ನು ಬಂಧಿಸಿದ್ದಾರೆ. ಜೊತೆ ಜೊತೆಗೆ ಅಪಾರ ಪ್ರಮಾಣದ ಒಡವೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಶಿವಮೊಗ್ಗ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ನಡೆಯುತ್ತಿದ್ದಂತ ಕಳ್ಳತನ ಪ್ರಕರಣವನ್ನು ದೊಡ್ಡಪೇಟೆ ಠಾಣೆಯ ಪೊಲೀಸರು ಸವಾಲಾಗಿ ಸ್ವೀಕರಿಸಿದ್ದರು. ಈ ಪ್ರಕರಣ ಸಂಬಂಧ ಭದ್ರಾವತಿಯ ಐವರು ಮಹಿಳೆಯರನ್ನು ಬಂಧಿಸಿದ್ದಾರೆ ಅಂತ ತಿಳಿಸಿದ್ದಾರೆ. ಬಂಧಿತ ಐವರು ಆರೋಪಿಗಳನ್ನು ಭದ್ರಾವತಿಯ ಹೊಸಮನೆಯ ಹನುಮಂತನಗರ ಬಡಾವಣೆಯ ನಿವಾಸಿಗಳಾದಂತ ಶಾಂತಿ ಯಾನೆ ಕರ್ಕಿ(31), ಸಾವಿತ್ರಿ ಯಾನೆ ಬಾಬಾ(29), ಸುಶೀಲಮ್ಮ(66) ಹಾಗೂ ಭೋವಿ ಕಾಲೋನಿಯ ನಿವಾಸಿ ದುರ್ಗಾ ಯಾನೆ ಸಣ್ಣ ದುರ್ಗ(29) ಎಂಬುದಾಗಿ ಗುರುತಿಸಲಾಗಿದೆ ಎಂದಿದ್ದಾರೆ. ಬಂಧಿತ ಐವರು ಆರೋಪಿಗಳಿಂದ 7 ಪ್ರಕರಣಕ್ಕೆ…

Read More

ಬೆಂಗಳೂರು: ತಮಿಳುನಾಡಿಗೆ ಜುಲೈ.31ರವರೆಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನದಿ ನೀರು ಹರಿಸುವಂತೆ ಸೂಚಿಸಿದ್ದಂತ ಆದೇಶಕ್ಕೆ ವಿರುದ್ಧವಾಗಿ ಸಿಡಬ್ಲ್ಯೂಆರ್ ಸಿಗೆ ಮೇಲ್ಮನವಿ ಸಲ್ಲಿಸಲು ಇಂದಿನ ಸರ್ವ ಪಕ್ಷಗಳ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸದಂತೆ ವಿಪಕ್ಷಗಳ ನಾಯಕರು ಸಲಹೆ ನೀಡಿದ್ದಾರೆ. ನಾಳೆಯಿಂದ ನಿತ್ಯ 8,000 ಕ್ಯೂಸೆಕ್ಸ್ ಕಾವೇರಿ ನದಿ ನೀರು ಹರಿಸಲು ನಿರ್ಧರಿಸಲಾಗಿದೆ ಅಂತ ಸಿಎಂ ಸಿದ್ಧರಾಮಯ್ಯ ಹೇಳಿದರು. ಇಂದು ವಿಧಾನಸೌಧದಲ್ಲಿ ಸರ್ವ ಪಕ್ಷ ಸಭೆಯ ಬಳಿಕ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ನಾಳೆಯಿಂದ ತಮಿಳುನಾಡಿಗೆ ಕಾವೇರಿ ನದಿಯ ನೀರನ್ನು 11,000 ಕ್ಯೂಸೆಕ್ಸ್ ಬದಲಾಗಿ 8,000 ಕ್ಯೂಸೆಕ್ಸ್ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಅಲ್ಲದೇ 1 ಟಿಎಂಸಿ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸೂಚಿರಿಸುವಂತ CWRC ಆದೇಶಕ್ಕೆ ಮೇಲ್ಮನವಿ ಸಲ್ಲಿಸಲು ಇಂದಿನ ಸರ್ವಪಕ್ಷಗಳ ಸಭೆಯಲ್ಲಿ ನಿರ್ಧರಿಸಲಾಗಿದೆ ಅಂತ ತಿಳಿಸಿದರು. https://kannadanewsnow.com/kannada/education-department-to-take-major-steps-to-improve-sslc-results/ https://kannadanewsnow.com/kannada/9000-people-evacuated-in-canada-due-to-wildfires-wildfire/

Read More