Author: kannadanewsnow09

ಬೆಂಗಳೂರು: ನಾಳೆಯಿಂದ ಪ್ರಾರಂಭವಾಗುವ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧರಾಗಿರುವಂತೆ ಹಾಗೂ ಅಧಿವೇಶನದಲ್ಲಿ ಖುದ್ದು ಹಾಜರಿದ್ದು, ಸಚಿವರಿಗೆ ತಮ್ಮ ಇಲಾಖೆಗಳ ವಿಷಯಗಳ ಕುರಿತ ಮಾಹಿತಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ದಿನಾಂಕ 14-7-2024 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಮಂಡಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ಬಾರಿ ಸಂಪೂರ್ಣ ಬಜೆಟ್‌ಗೆ ಮಾರ್ಚ್‌ ನಲ್ಲಿಯೇ ಅನುಮೋದನೆ ದೊರೆತಿರುವ ಕಾರಣ ಇದು ಬಜೆಟ್‌ ಬಗ್ಗೆ ಚರ್ಚಿಸುವ ಅಧಿವೇಶನ ಅಲ್ಲ. ಯಾವಗಲೂ ಮಾರ್ಚ್‌ ನಲ್ಲಿ ಲೇಖಾನುದಾನ ಪಡೆದು, ಮಳೆಗಾಲದ ಅಧಿವೇಶನದಲ್ಲಿ ಪೂರ್ಣ ಬಜೆಟ್‌ ಗೆ ಅನುಮೋದನೆ ಪಡೆಯಲಾಗುತ್ತಿತ್ತು. ಈ ಬಾರಿ ಪೂರ್ಣ ಬಜೆಟ್‌ ಅನುಮೋದನೆ ಆಗಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷದವರು ಈ ಬಾರಿಯ ಸಂಪೂರ್ಣ ಅಧಿವೇಶನವನ್ನು ವಿವಿಧ ಆರೋಪ ಮಾಡುವ…

Read More

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಯಶವಂತಪುರ/ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಡುವೆ ವಿಶೇಷ ರೈಲುಗಳ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನೈಋತ್ಯ ರೈಲ್ವೆಯು ಯಶವಂತಪುರ/ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ ಅಂತ ತಿಳಿಸಿದೆ. ರೈಲು ಸಂಖ್ಯೆ 06523/06524 ಯಶವಂತಪುರ-ಕಲಬುರಗಿ-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಸ್ಟೇಷನ್ ಸ್ಪೆಷಲ್ ಎಕ್ಸ್ಪ್ರೆಸ್ (1 ಟ್ರಿಪ್): ರೈಲು ಸಂಖ್ಯೆ 06523 ಜುಲೈ 14, 2024 ರಂದು (ಭಾನುವಾರ) ರಾತ್ರಿ 08:40 ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 07:45 ಕ್ಕೆ ಕಲಬುರಗಿ ನಿಲ್ದಾಣವನ್ನು ತಲುಪಲಿದೆ. ರೈಲು ಸಂಖ್ಯೆ 06524 ಜುಲೈ 15, 2024 ರಂದು ಬೆಳಿಗ್ಗೆ 09:30 ಕ್ಕೆ ಕಲಬುರಗಿಯಿಂದ ಹೊರಟು ಅದೇ ದಿನ ರಾತ್ರಿ 08:30 ಕ್ಕೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣವನ್ನು ತಲುಪಲಿದೆ. ಈ ವಿಶೇಷ ರೈಲು…

Read More

ಪುರಿ: ನಾಲ್ಕು ದಶಕಗಳ ನಂತರ ಶ್ರೀ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ (ನಿಧಿ ಭಂಡಾರ) ಭಾನುವಾರ ತೆರೆಯಲ್ಪಟ್ಟಿದೆ. ಒಡಿಶಾ ಸರ್ಕಾರ ಹೊರಡಿಸಿದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್ಒಪಿ) ಅನುಸರಿಸಿ ಶ್ರೀ ಜಗನ್ನಾಥ ದೇವಾಲಯದ ರತ್ನ ಭಂಡಾರವನ್ನು ತೆರೆಯಲಾಯಿತು. ಶನಿವಾರ, ಒಡಿಶಾ ಸರ್ಕಾರವು ರತ್ನ ಭಂಡಾರ್ ತೆರೆಯಲು ಅನುಮೋದನೆ ನೀಡಿತು, ಅಲ್ಲಿ ಸಂಗ್ರಹಿಸಿದ ಆಭರಣಗಳು ಸೇರಿದಂತೆ ಬೆಲೆಬಾಳುವ ವಸ್ತುಗಳ ಆವಿಷ್ಕಾರವನ್ನು ಕೈಗೊಂಡ ನಂತರ ಈ ಕ್ರಮವಹಿಸಲಾಯಿತು. ಈ ಸಂದರ್ಭದ ನೆನಪಿಗಾಗಿ, ಒಡಿಶಾದ ಮುಖ್ಯಮಂತ್ರಿ ಕಚೇರಿ, ಎಕ್ಸ್ ನಲ್ಲಿ, “ಜೈ ಜಗನ್ನಾಥ್ ಓ ದೇವರೇ! ನೀವು ಲಯಬದ್ಧರಾಗಿದ್ದೀರಿ. ನಿಮ್ಮ ಆಸೆಯಿಂದ ಇಡೀ ಜಗತ್ತು ತುಳಿತಕ್ಕೊಳಗಾಗಿದೆ. ನೀವು ಸಾಂಪ್ರದಾಯಿಕ ರಾಷ್ಟ್ರದ ಹೃದಯ ಬಡಿತ… ದೇವಾಲಯದ ನಾಲ್ಕು ಬಾಗಿಲುಗಳನ್ನು ಮೊದಲು ನಿಮ್ಮ ಇಚ್ಛೆಯಂತೆ ತೆರೆಯಲಾಯಿತು. ಇಂದು, ನಿಮ್ಮ 46 ವರ್ಷಗಳ ಇಚ್ಛೆಯ ನಂತರ, ರತ್ನವನ್ನು ದೊಡ್ಡ ಉದ್ದೇಶದೊಂದಿಗೆ ತೆರೆಯಲಾಯಿತು … ಈ ಮಹಾನ್ ಕೆಲಸ ಯಶಸ್ವಿಯಾಗುತ್ತದೆ ಎಂದು ನಾನು ಬಲವಾಗಿ ನಂಬುತ್ತೇನೆ …” ಎಂದಿದೆ. https://twitter.com/ANI/status/1812406822055051626 ಇಂದು…

Read More

ಬೆಂಗಳೂರು: ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ಈಗ ಕೇಂದ್ರ ಮಂತ್ರಿಯಾಗಿರುವವರು. ಅವರಿಗೆ ಕನಿಷ್ಠ ಪರಿಜ್ಞಾನ ಇರಬೇಕಾಗಿತ್ತು. ಯಾವುದೇ ಜಮೀನು ನೋಟಿಫೈ ಅಥವಾ ಡಿನೋಟಿಫೈ ಆಗುವುದು ವ್ಯಕ್ತಿಯ ಹೆಸರ ಮೇಲೆ ಅಲ್ಲ. ಆ ಜಮೀನಿನ ಸರ್ವೇ ಸಂಖ್ಯೆ ಮೇಲೆ ಅಂತ ಕಾಂಗ್ರೆಸ್ ವಕ್ತಾರರಾದ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆ ಮಾಧ್ಯಮಗೋಷ್ಠಿ ನಡೆಸಿ ಸತ್ತ ವ್ಯಕ್ತಿ ಹೆಸರಲ್ಲಿ ಹೇಗೆ ಡಿನೋಟಿಫಿಕೇಶನ್ ಆಗುತ್ತದೆ ಎಂದು ಪ್ರಶ್ನೆ ಕೇಳಿದ್ದಾರೆ. ಕುಮಾರಸ್ವಾಮಿ ಅವರೇ ನಿಮಗೆ ಈ ವಿಚಾರದಲ್ಲಿ ಟ್ಯೂಷನ್ ಮಾಡಿದವರನ್ನೇ ಒಮ್ಮೆ ಕೇಳಿನೋಡಿ. ನೋಟಿಫೈ ಅಥವಾ ಡಿನೋಟಿಫೈ ಮಾಡುವಾಗ ಜಾಗದ ಸರ್ವೇ ಸಂಖ್ಯೆ, ವಿಸ್ತೀರ್ಣವನ್ನು ತಿಳಿಸುತ್ತಾರೆ. ಈ 3 ಎಕರೆ 16 ಗುಂಟೆ ಜಾಗದ ಡಿನೋಟಿಫಿಕೇಶನ್ ಪ್ರತಿಯೂ ನನ್ನ ಬಳಿ ಇದೆ. ಇದರಲ್ಲಿ ಯಾವುದಾದರೂ ವ್ಯಕ್ತಿಯ ಹೆಸರು ಇದೆಯೇ? ಇದ್ದರೆ ತೋರಿಸಿ. ಕುಮಾರಸ್ವಾಮಿ ಅವರೇ ಬಿಜೆಪಿ ಹಾಗೂ ಜೆಡಿಎಸ್ ನವರು ಮಾಧ್ಯಮಗಳ ಮುಂದೆ ಬಿಡುಗಡೆ…

Read More

ಪಾದಚಾರಿ ಮಾರ್ಗದಲ್ಲಿ ವಾಸಿಸುವ ವ್ಯಕ್ತಿಯಿಂದ ಹಿಡಿದು ಬಂಗಲೆಯಲ್ಲಿ ವಾಸಿಸುವ ಶ್ರೀಮಂತ ಉದ್ಯಮಿಯವರೆಗೆ ಎಲ್ಲರಿಗೂ ಸಾಲದ ಸಮಸ್ಯೆ ಇದೆ. ಆ ಸಾಲದ ಸಮಸ್ಯೆಯು ಪ್ರಮಾಣದಲ್ಲಿ ಬದಲಾಗುತ್ತದೆ ಆದರೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೂಪದಲ್ಲಿ ಉಳಿಯುತ್ತದೆ. ಕೆಲವು ಜನರು ಪಾವತಿಸದ ಸಾಲಕ್ಕೆ ಬಡ್ಡಿಯನ್ನು ಪಾವತಿಸುವ ಮೂಲಕ ಬಳಲುತ್ತಿದ್ದಾರೆ. ಈ ಸಂಧರ್ಭದಲ್ಲಿ ಎಂತಹ ಸಾಲದ ಹೊರೆಯಿದ್ದರೂ ಆ ಋಣ ತೀರಿಸಲು ನಾವು ಮಾಡಬಹುದಾದ ಉಪಾಯವೇ ಇಳನೇರ್ ದೀಪಂ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಎಳನೀರನ್ನು ಬಳಸಿ ದೀಪವನ್ನು ಹೇಗೆ ಬೆಳಗಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…

Read More

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕರ್ನಾಟಕ ಬಿಟ್ಟು ಬೇರೆ ಯಾವ ರಾಜ್ಯದಲ್ಲಿಯೂ ಇಲ್ಲ.  ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯಬಿದ್ದರೆ ಖಂಡಿತವಾಗಿಯೂ ತಿದ್ದುಪಡಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ಮತ್ತು ಡಾII ಬಾಬು ಜಗಜೀವನ ರಾಮ್ ಸಂಶೋಧನಾ ಸಂಸ್ಥೆ   ವತಿಯಿಂದ  ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಭಾರತದ ಮಾಜಿ ಉಪ ಪ್ರಧಾನಿ ಡಾII ಬಾಬು ಜಗಜೀವನ ರಾಮ್ ಭವನದ ಉದ್ಘಾಟಿಸಿ ಮಾತನಾಡಿದರು. ನಮಗೆ ಸಂಪ್ರದಾಯವಾದಿ ಧೋರಣೆಗಳಿಲ್ಲ ಬ್ಯಾಂಕ್ ಗಳಲ್ಲಿ, ಕೆ.ಎಸ್. ಎಫ್ .ಸಿ, ಉದ್ಯಮಿಗಳಿಗೆ 10 ಕೋಟಿವರೆಗೆ 4% ಬಡ್ಡಿಗೆ ಸಾಲ ದೊರೆಯಬೇಕೆಂಬ ಸೌಲಭ್ಯ ಒದಗಿಸಿದ್ದು ನಮ್ಮ ಸರ್ಕಾರ. ಎಸ್.ಸಿ.ಎಸ್ ಪಿ /ಟಿ. ಎಸ್.ಪಿ ಕಾಯ್ದೆಯಡಿ .7(ಡಿ) ಕೈಬಿಡಲು ಸಲಹೆ ಬಂದ ಮೇರೆಗೆ ಕಾಯ್ದೆಗೆ ತಿದ್ದುಪಡಿ ತಂದು ಅದನ್ನು ಕೈಬಿಡಲಾಗಿದೆ. ಇನ್ನೂ ಬದಲಾವಣೆಗಳು ಅಗತ್ಯವಿದ್ದರೆ…

Read More

ಬೆಂಗಳೂರ: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೋಬಳಿಗೊಂದು ವಸತಿ ಶಾಲೆಯನ್ನು ಪ್ರಾರಂಭಿಸಲಾಗುತ್ತದೆ ಅಂತ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ಮತ್ತು ಡಾII ಬಾಬು ಜಗಜೀವನ ರಾಮ್ ಸಂಶೋಧನಾ ಸಂಸ್ಥೆ ವತಿಯಿಂದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಭಾರತದ ಮಾಜಿ ಉಪ ಪ್ರಧಾನಿ ಡಾII ಬಾಬು ಜಗಜೀವನ ರಾಮ್ ಭವನದ ಉದ್ಘಾಟಿಸಿ ಮಾತನಾಡಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭ ದಲಿತ ಸಂಘಟನೆಗಳು 70 ರ ದಶಕದಲ್ಲಿ ಸಾರಾಯಿ ಅಂಗಡಿಗಳು ಬೇಡ, ವಸತಿ ಶಾಲೆಗಳು ಬೇಕು ಎಂದು ಬೇಡಿಕೆ ಸಲ್ಲಿಸಿದ್ದರಿಂದ ವಸತಿ ಶಾಲೆಗಳನ್ನು ಪ್ರಾರಂಭ ಮಾಡಲಾಗಿದೆ.94-95 ರಲ್ಲಿ ಹಣಕಾಸು ಸಚಿವರಾಗಿದ್ದಾಗ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭ ಮಾಡಿದ್ದು ತಾವೇ ಎಂದು ಸ್ಮರಿಸಿದರು. ಹೋಬಳಿಗೊಂದು ವಸತಿ ಶಾಲೆ ಇಂದು 821 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ತೆರೆಯಲಾಗಿದೆ. ಹೋಬಳಿಗೊಂದು ವಸತಿ ಶಾಲೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವಂತ ಕರಡು ತಿದ್ದುಪಡಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಮೂಲಕ ಸ್ಥಳೀಯ ಸಂಸ್ಥೆಗಳಲ್ಲಿ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರವು ವಿಶೇಷ ರಾಜ್ಯ ಪತ್ರದಲ್ಲಿ ಕರಡು ತಿದ್ದುಪಡಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದೂ, ಅದರಲ್ಲಿ ಕರ್ನಾಟಕ ಮನಿಸಿಪಾಲಿಟಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ ನಿಯಮ 1965ಕ್ಕೆ ತಿದ್ದುಪಡಿಯನ್ನು ತಂದು, ರಾಜ್ಯ ಸರ್ಕಾರ ಗೆಜೆಟ್ ಮೂಲಕ ಕರಡು ನಿಯಮಾವಳಿಗಳನ್ನು ಜಾರಿಗೊಳಿಸಿದೆ. ಇದಕ್ಕೆ ಸಾರ್ವಜನಿಕರಿಂದ ಆಕ್ಷೇಪಣೆ ಕೋರಿದೆ. ಆಸಕ್ತರು ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ, ವಿಕಾಸ ಸೌಧಕ್ಕೆ ತಕರಾರು ಸಲ್ಲಿಸಲು ಕೋರಲಾಗಿದೆ. ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮೀಸಲಾತಿಯೂ ಸೇರಿದಂತೆ ವಿಶೇಷವಾಗಿ ಎಲ್ಲಾ ವರ್ಗದ ಮಹಿಳೆಯರಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದಲ್ಲಿ ಮೀಸಲಾತಿ ಕಲ್ಪಿಸುವಲ್ಲಿ ಇದೊಂದು ಅಪೂರ್ವ, ಮಹತ್ವ ಪೂರ್ಣ ಕರಡು ಅಧಿಸೂಚನೆ ಆಗಿದೆ. ಹೀಗಿದೆ ನಗರ ಮುನಿಸಿಪಲ್ ಕೌನ್ಸಿಲ್ ನಲ್ಲಿ ಮೀಸಲಾತಿ ನಗರ ಮುನಿಸಿಪಲ್ ಕೌನ್ಸಿಲ್ ಗಳಲ್ಲಿ ಪರಿಶಿಷ್ಟ ಜಾತಿಯವರಿಗೆ ಅಧ್ಯಕ್ಷ, ಉಪಾಧ್ಯಕ್ಷ…

Read More

ಮುಂಬೈ : ಭಾರತ, ಏಷ್ಯಾ ಅಷ್ಟೇ ಅಲ್ಲದೇ ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ- ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿ ದಂಪತಿಯ ಮಗ ಅನಂತ್ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವು ಶುಕ್ರವಾರ ಅದ್ಧೂರಿಯಾಗಿ ನಡೆಯಿತು. ದೇಶ, ವಿದೇಶಗಳಿಂದ ಬಂದಿದ್ದ ಸಾವಿರಾರು ಸಂಖ್ಯೆಯ ಅತಿಥಿಗಳು ಮದುವೆ ಸಮಾರಂಭದಲ್ಲಿ ಭಾಗೀ ಆಗಿದ್ದರು. ರಾಜಕೀಯ ಕ್ಷೇತ್ರದ ಹಲವು ಗಣ್ಯರು ಆಗಮಿಸಿ ನವ ದಂಪತಿಗೆ ಆಶೀರ್ವದಿಸಿದರು. ಅಂಬಾನಿ ಕುಟುಂಬದ ಮದುವೆ ಸಮಾರಂಭದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಅನೇಕ ನಾಯಕರು ಕಾಣಿಸಿಕೊಂಡರು. ಇನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಅನಂತ್ ಅಂಬಾನಿ ಮದುವೆಯಲ್ಲಿ ಭಾಗಿಯಾಗಿ, ನೂತನ ದಂಪತಿಗಳನ್ನು ಆಶೀರ್ವದಿಸಿದರು. https://twitter.com/TellDM/status/1812146187413111260 ಟಿಎಂಸಿ ಪಕ್ಷದ ನಾಯಕಿ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಮಗ ಹಾಗೂ…

Read More

ಹಾವೇರಿ: ತಾನು ಕೇಳಿದಂತ ಬೈಕ್ ಅನ್ನು ಮನೆಯಲ್ಲಿ ಕೊಡಿಸಲಿಲ್ಲ ಎನ್ನುವ ಒಂದೇ ಒಂದು ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಮಗನ ಸುದ್ದಿಯನ್ನು ಕೇಳಿದಂತ ತಾಯಿಯೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ರಾಣೆಬೆನ್ನೂರಿನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಕರೂರು ಗ್ರಾಮದ ಧನರಾಜ್(18) ಎಂಬಾತ ಮನೆಯಲ್ಲಿ ಬೈಕ್ ಕೊಡಿಸುವಂತೆ ಕೇಳಿದ್ದಾನೆ. ಈಗಲೇ ಬೇಡ ಇನ್ನೂ ಕೆಲವು ದಿನಗಳು ತಡಿ. ಆಮೇಲೆ ಕೊಡಿಸುತ್ತೇವೆ ಅಂತ ತಂದೆ-ತಾಯಿ ಬುದ್ಧಿವಾದ ಹೇಳಿದ್ದಾರೆ. ಇಷ್ಟಕ್ಕೇ ಬೇಸರಗೊಂಡು, ಸಿಟ್ಟಾದಂತ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನೂ ಪುತ್ರ ಧನರಾಜ್ ಆತ್ಮಹತ್ಯೆ ಮಾಡಿಕೊಂಡಿರುವಂತ ಸುದ್ದಿ ತಿಳಿದಂತ ಅವರ ತಾಯಿ ಭಾಗಮ್ಮ ನಾಯಕ್(43) ಎಂಬುವರು ಆಘಾತಗೊಂಡು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕುಮಾರಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/minister-dr-m-c-sudhakar-distributes-certificates-to-eligible-candidates-in-kset-23/ https://kannadanewsnow.com/kannada/muda-site-allotment-scam-bommai-demands-cbi-probe/

Read More