Author: kannadanewsnow09

ಶಿವಮೊಗ್ಗ: ಆಲ್ಕೋಳ. ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ. 12 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎಸ್.ವಿ.ಬಡಾವಣೆ ಎ ಯಿಂದ ಎಫ್ ಬ್ಲಾಖ್, ಸ್ವಿಮಿಂಗ್ ಫೂಲ್‌ನ ಸುತ್ತಮುತ್ ಮಹಿಳಾ ಪಾಲಿಟೆಕ್ನಿಕ್, ರಾಮಕೃಷ್ಣ ಐಟಿಐ ಕಾಲೇಜ್, ಸ್ನೇಹ ಅಪಾರ್ಟ್ಮೆಂಟ್, ಚಂದನ ಪಾರ್ಕ್, ಗಾಡಿಕೊಪ್ಪ ಜ್ಞಾನಗಂಗಾ ಶಾಲೆ, ಕಾಳಿದಾಸ ಬಡಾವಣೆ, ನಂಜಪ್ಪ ಲೈಫ್ ಕೇರ್, ಸಂಭ್ರಮ ಅಪಾರ್ಟ್ಮೆಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಂಘ-ಸಂಸ್ಥೆಗಳ ನೋಂದಣಿ ನವೀಕರಿಸಲು ಸೂಚನೆ ಶಿವಮೊಗ್ಗ ಜಿಲ್ಲೆಯ ಸಹಕಾರ ಇಲಾಖೆಯು ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ-1960 ಕಲಂ 13 ರಂತೆ ನೋಂದಣಿಯಾದ ಪ್ರತಿಯೊಂದು ಸಂಘ-ಸಂಸ್ಥೆಗಳು ಪ್ರತಿವರ್ಷ ನವೀಕರಣಗೊಳಿಸಿಕೊಳ್ಳುವುದು ಕಡ್ಡಾಯ. ಅನೇಕ ಸಂಘ-ಸಂಸ್ಥೆಗಳು 5 ವರ್ಷಗಳಿಗೂ ಮೇಲ್ಪಟ್ಟು ನವೀಕರಿಸದೇ ಇರುವುದರಿಂದ ಇಂತಹ ಸಂಘ-ಸಂಸ್ಥೆಗಳ ಹಿತದೃಷ್ಠಿಯಿಂದ ಕೂಡಲೇ ಪ್ರತಿ ವರ್ಷಕ್ಕೆ ರೂ. 3,000/-ಗಳ ದಂಡ ಪಾವತಿಸಿ ನವೀಕರಿಸಿಕೊಳ್ಳುವುದು. ಇಂತಹ ಸಂಘ ಸಂಸ್ಥೆಗಳು…

Read More

ಬೆಂಗಳೂರು: ಮುಂಬರುವ ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಜನದಟ್ಟಣೆಯನ್ನು ಸರಿದೂಗಿಸಲು ನೈಋತ್ಯ ರೈಲ್ವೆಯು ಮೈಸೂರು-ದಾನಾಪುರ ಮತ್ತು ವಾಸ್ಕೋ ಡ ಗಾಮಾ-ಪಾಟ್ನಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ: I. ಮೈಸೂರು-ದಾನಾಪುರ ನಡುವೆ ಒಂದು ಟ್ರಿಪ್ ವಿಶೇಷ ರೈಲು (06211/06212) ಸಂಚಾರ: ರೈಲು ಸಂಖ್ಯೆ 06211 ಮೈಸೂರು-ದಾನಾಪುರ ವಿಶೇಷ ಎಕ್ಸ್ಪ್ರೆಸ್ ರೈಲು ಮಾರ್ಚ್ 11 ರಂದು ಬೆಳಿಗ್ಗೆ 10:05ಕ್ಕೆ ಮೈಸೂರಿನಿಂದ ಹೊರಟು, ಮಾರ್ಚ್ 13 ರಂದು ಸಂಜೆ 5:00 ಗಂಟೆಗೆ ದಾನಾಪುರ ತಲುಪಲಿದೆ. ಇದೇ ರೈಲು (06212), ಮಾರ್ಚ್ 16 ರಂದು ಬೆಳಗಿನ ಜಾವ 01:05 ಕ್ಕೆ ದಾನಾಪುರದಿಂದ ಹೊರಟು, ಮಾರ್ಚ್ 18 ರಂದು ಬೆಳಿಗ್ಗೆ 03:40 ಕ್ಕೆ ಮೈಸೂರಿಗೆ ಆಗಮಿಸಲಿದೆ. ಮಾರ್ಗದಲ್ಲಿ, ಈ ರೈಲು ಮಂಡ್ಯ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ದಾವಣಗೆರೆ, ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮೀರಜ್, ಸಾಂಗ್ಲಿ, ಕರಾಡ್, ಸತಾರಾ, ಪುಣೆ,…

Read More

ನವದೆಹಲಿ: ಈ ಹಿಂದೆ ಟ್ವಿಟರ್ ಎಂದು ಕರೆಯಲ್ಪಡುತ್ತಿದ್ದ ಮೈಕ್ರೋಬ್ಲಾಗಿಂಗ್ ಪ್ಲಾಟ್ಫಾರ್ಮ್ ಎಕ್ಸ್ ಪ್ರಸ್ತುತ ಸ್ಥಗಿತವನ್ನು ಎದುರಿಸುತ್ತಿದೆ. ಏಕೆಂದರೆ ಪ್ರಪಂಚದಾದ್ಯಂತದ ಬಳಕೆದಾರರು ಅಪ್ಲಿಕೇಶನ್ ಮತ್ತು ವೆಬ್ಸೈಟ್ ಪ್ರತಿಕ್ರಿಯಿಸುತ್ತಿಲ್ಲ ಎಂಬ ದೂರುಗಳನ್ನು ವರದಿ ಮಾಡುತ್ತಿದ್ದಾರೆ. ಹಲವಾರು ಬಳಕೆದಾರರು ತಮ್ಮ ಎಕ್ಸ್ ಫೀಡ್ ಅನ್ನು ಪ್ರವೇಶಿಸುವಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ತನ್ನ ಪ್ಲಾಟ್ಫಾರ್ಮ್ನಲ್ಲಿ ಬಳಕೆದಾರರು ಸಲ್ಲಿಸಿದ ದೋಷಗಳು ಸೇರಿದಂತೆ ಹಲವಾರು ಮೂಲಗಳಿಂದ ಸ್ಥಿತಿ ವರದಿಗಳನ್ನು ಒಟ್ಟುಗೂಡಿಸುವ ಮೂಲಕ ಸ್ಥಗಿತಗಳನ್ನು ಪತ್ತೆಹಚ್ಚುವ ಡೌನ್ಡೆಟೆಕ್ಟರ್ ಪ್ರಕಾರ, ಅನೇಕ ಬಳಕೆದಾರರು ಸ್ಥಗಿತವನ್ನು ವರದಿ ಮಾಡಿದ್ದಾರೆ. ಡೌನ್ ಡಿಟೆಕ್ಟರ್ನಲ್ಲಿನ ಮಾಹಿತಿಯ ಪ್ರಕಾರ, ಮೈಕ್ರೋಬ್ಲಾಗಿಂಗ್ ಸೈಟ್ ಮಧ್ಯಾಹ್ನ 3 ಗಂಟೆ ಸುಮಾರಿಗೆ 1,000 ಕ್ಕೂ ಹೆಚ್ಚು ಜನರಿಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಎಕ್ಸ್ ಸ್ಥಗಿತವನ್ನು ಅನುಭವಿಸಿದಾಗಿನಿಂದ, ಹಲವಾರು ಬಳಕೆದಾರರು ಇದನ್ನು ದೃಢೀಕರಿಸಲು ಫೇಸ್ಬುಕ್ ಮತ್ತು ರೆಡ್ಡಿಟ್ನಂತಹ ಇತರ ಪ್ಲಾಟ್ಫಾರ್ಮ್ಗಳನ್ನು ತಲುಪಿದ್ದಾರೆ.

Read More

ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾ ರಾವ್ ಪಕರಣ ಕೆ ಇದೀಗ ಮತ್ತೊಂದು ತಿರುಗು ಸಿಕ್ಕಿದ್ದು ರನ್ಯಾರಾವ್ ಮತ್ತು ಉದ್ಯಮಿಯ ಪುತ್ರ ಸ್ನೇಹಿತರಾಗಿದ್ದರು ಎಂದು ಹೇಳಲಾಗಿದ್ದು ಇದೀಗ ವಿಚಾರಣೆಯ ಬಳಿಕ ಉದ್ಯಮಿಯ ಪುತ್ರನನ್ನು DRI ಅಧಿಕಾರಿಗಳು ಅರೆಸ್ಟ್ ಮಾಡಿದ್ದರು. ಇಂತಹ ಆರೋಪಿಯನ್ನು ಮಾರ್ಚ್.15ರವರೆಗೆ ಡಿ ಆರ್ ಐ ಕಸ್ಟಡಿಗೆ ನೀಡಿ, ಕೋರ್ಟ್ ಆದೇಶಿಸಿದೆ. ಹೌದು ವಿಚಾರಣೆ ನಡೆಸಿದ ಬಳಿಕ ಡಿ ಆರ್ ಐ ಅಧಿಕಾರಿಗಳು ಉದ್ಯಮಿಯ ಪುತ್ರನನ್ನು ಅರೆಸ್ಟ್ ಮಾಡಿದ್ದಾರೆ. ಉದ್ಯಮಿ ಪುತ್ರ ಹಾಗೂ ರನ್ಯಾ ರಾವ್ ಸ್ನೇಹಿತರಾಗಿದ್ದರು. ಇದೀಗ ಡಿ ಆರ್ ಐ ಅಧಿಕಾರಿಗಳಿಂದ ಉದ್ಯಮಿಯ ಪುತ್ರ ಬಂಧನವಾಗಿದೆ. ಫೈವ್ ಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗನನ್ನು ಅರೆಸ್ಟ್ ಮಾಡಲಾಗಿದೆ. ಉದಿನಿ ಪುತ್ರರನ್ನು ಅರೆಸ್ಟ್ ಮಾಡಿರುವ ಗಡಿಯಾರ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಉದ್ಯಮಿ ಪುತ್ರ ತರುಣ್ ರಾಜು ನನ್ನು ಅರೆಸ್ಟ್ ಮಾಡಿದ್ದಾರೆ. ಹೋಟೆಲ್ ಮಾಲೀಕನ ತಮ್ಮನ…

Read More

ಶಿವಮೊಗ್ಗ: ಇಂದಿನ ಪ್ರಸ್ತುತ ಸನ್ನಿವೇಶಗಳಲ್ಲಿ ಭಾರತದ ಕೃಷಿ ತನ್ನ ಮಹತ್ವವನ್ನು ಕಳೆದುಕೊಳ್ಳುತ್ತಿದೆ. ದೇಶದ ಬೆನ್ನೆಲುಬು ಆಗಿರುವ ಕೃಷಿಯನ್ನು ಆಧುನಿಕ ವ್ಯವಸ್ಥೆಗೆ ತಕ್ಕಂತೆ ಅಭಿವೃದ್ಧಿಪಡಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ವೆಂದು ಶ್ರೀಯುತ ಎಚ್ ಟಿ ಬಾಗಲಕೋಟೆ ಕುಲಸಚಿವರು ಹಾವೇರಿ ವಿಶ್ವವಿದ್ಯಾನಿಲಯ ಹಾವೇರಿ ಇವರು ಅಭಿಪ್ರಾಯಪಟ್ಟರು. ಸಾಗರದ ಶ್ರೀಮತಿ ಇಂದಿರಾಗಾಂಧಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಅರ್ಥಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಲ್ಪಟ್ಟಿದ್ದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕೀರ್ಣ ದಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಮಾತನಾಡುತ್ತಿದ್ದರು. ಇಂದು ಕೃಷಿಯನ್ನು ಅಭಿವೃದ್ಧಿಪಡಿಸಬೇಕಾದರೆ ಇಸ್ರಾಯಿಲ್ ಮತ್ತು ಅಭಿವೃದ್ಧಿ ರಾಷ್ಟ್ರಗಳಲ್ಲಿ ಅನುಸರಿಸಲಾಗುತ್ತಿರುವ ವಿವಿಧ ತಂತ್ರಜ್ಞಾನ ಗಳನ್ನು ಮತ್ತು ಅಲ್ಲಿನ ವಶಿಷ್ಠ ತಳಿಗಳನ್ನು ನಮ್ಮಲ್ಲಿ ಬಳಸಿಕೊಳ್ಳುವ ಮೂಲಕ ದೇಶದ ಕೃಷಿಯಲ್ಲಿ ಉತ್ಪನ್ನವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬಹುದು ಎಂದರು. ದೇಶದಲ್ಲಿ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ರೈತ ಪರ ಮತ್ತು ಕೃಷಿ ಪರ ನೀತಿಗಳ ಅವಲೋಕನವನ್ನು ಮಾಡಿ ಅನೇಕ ವಿಚಾರಗಳ ಬಗ್ಗೆ ವಿಷಯವನ್ನು ಮಂಡಿಸಿದರು. ದೇಶದಲ್ಲಿ ನಗದು ಹಣವನ್ನು ವರ್ಗಾಯಿಸುವ ಮೂಲಕ ರೈತರ ಅಭಿವೃದ್ಧಿ ಕಷ್ಟ ಸಾಧ್ಯ…

Read More

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ( ASRTU) 2023-24ನೇ ಸಾಲಿನ ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿ ( National Transport Excellence Award)ಯು ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಗೆ ಲಭಿಸಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ( ASRTU)ದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವವನ್ನು ಹೊಂದಿವೆ. ಸದರಿ ಒಕ್ಕೂಟವು 13ನೇ ಆಗಸ್ಟ್ 1965 ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುತ್ತದೆ. ಈ ಸಂಸ್ಥೆಯು 59 ವರ್ಷಗಳ ಅನುಭವವನ್ನು ಹೊಂದಿದ್ದು, ದೇಶದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಕೆ ಕೆ ಆರ್ ಟಿ‌‌ ಸಿ‌ ಗೆ ಕಲ್ಯಾಣ ರಥ ಹಾಗೂ ಅಮೋಘವರ್ಷ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ, ಉಪಕ್ರಮಗಳಿಗಾಗಿ ಪ್ರಶಸ್ತಿ ಲಭಿಸಿರುತ್ತದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ( ASRTU)ದ ವತಿಯಿಂದ ನವದೆಹಲಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ…

Read More

ಬೆಂಗಳೂರು: ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ(ಆಹಾರ ಸುರಕ್ಷತೆ ಮತ್ತು ಔಷಧ ಇಲಾಖೆ)ಯಲ್ಲಿ ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಗಳು ಮತ್ತು ಇತರೆ ವೃಂದದಲ್ಲಿ 5 ವರ್ಷದಿಂದ‌ ನಿಯೋಜನೆ ಮೇರೆಗೆ ಇರುವ ಅಧಿಕಾರಿಗಳು ಮಾತೃ ಇಲಾಖೆಗೆ ತೆರಳದೆ ಆಹಾರ ಸುರಕ್ಷತಾಧಿಕಾರಿಗಳ ಮೇಲೆ ಗದಾಪ್ರಹಾರ ನಡೆಸುತ್ತಿದ್ದಾರೆ. ಆರೋಗ್ಯ ಇಲಾಖೆಯಿಂದ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆಗೆ ನಿಯೋಜನೆ ಮೇರೆಗೆ ಬಂದಿರುವ ವೈದ್ಯರ ಅವಧಿ ಈಗಾಗಲೇ‌ ಮುಗಿದಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಹುದ್ದೆಯಿಂದ ಬಿಡುಗಡೆಗೊಂಡು ಮಾತೃ ಇಲಾಖೆಗೆ ತೆರಳುವಂತೆ ಇಲಾಖೆ‌ ಆದೇಶಿಸಿ ಎರಡು ತಿಂಗಳಾಗಿದೆ. ಆದರೆ,‌ಮಾತೃ ಇಲಾಖೆಗೆ ತೆರಳದ ವೈದ್ಯರು, ಆಹಾರ ಸುರಕ್ಷತಾಧಿಕಾರಿಗಳ ಕುರಿತು ಅನಗತ್ಯ ತಪ್ಪು ಮಾಹಿತಿ ಮತ್ತು ದೂರುಗಳನ್ನು ನೀಡಿ ಸರ್ಕಾರಕ್ಕೆ ಮುಜುಗರ ತರುತ್ತಿದ್ದಾರೆ. ನಕಲಿ ಅಂಕಪಟ್ಟಿ ಕೊಟ್ಟು ಇಲಾಖೆಯಲ್ಲಿ ಕೆಲಸ‌ ಮಾಡುತ್ತಿದ್ದವರನ್ನು ಈಗಾಗಲೇ ಅಮಾನತ್ತು ಮಾಡಲಾಗಿದೆ. ಆದರೂ ವೈದ್ಯರುಗಳು ಅಗಾಗ್ಗೆ ಅಂಕಪಟ್ಟಿ ಬಗ್ಗೆ ಸುಳ್ಳು ದೂರು ನೀಡಿ ಸರ್ಕಾರಕ್ಕೆ ಮುಜುಗರ ಪಡಿಸುತ್ತಿದ್ದಾರೆ.ಇಲಾಖೆಯಲ್ಲಿ ಪ್ರಸ್ತುತವಾಗಿ ಕಾರ್ಯನಿರ್ವಹಿಸುತ್ತಿರುವವರ ಅಂಕಪಟ್ಟಿ ಪರಿಶೀಲಿಸಲಾಗಿದೆ. ತನಿಖೆಯಲ್ಲಿ ನೈಜ ಅಂಕಪಟ್ಟಿ ಎಂದು…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ಹಾಗೂ ಹೊಸನಗರ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಟ ಆಡಲಾಗುತ್ತಿದೆ. ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಕಾರಣ ರೈತರ ಬೆಳೆ ಒಣಗುತ್ತಿದ್ದರೇ, ಕುಡಿಯುವ ನೀರಿಗೂ ಆಹಾಹಾಕಾರ ಏಳುವಂತೆ ಆಗಿದೆ. ಇದನ್ನು ಖಂಡಿಸಿ ಇಂದು ಬೆಳಗ್ಗೆ 10 ಗಂಟೆಗೆ ಸಾಗರ ತಾಲ್ಲೂಕು ಬಿಜೆಪಿ ವತಿಯಿಂದ ಮೆಸ್ಕಾಂ ಕಚೇರಿ ಮುಂದೆ ಮಾಜಿ ಸಚಿವ ಹರತಾಳು ಹಾಲಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಸಾಗರ ತಾಲ್ಲೂಕು ಬಿಜೆಪಿ ಅಧ್ಯಕ್ಷ ಗಣೇಶ್ ಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ದಿನಾಂಕ 10-03-2025ರ ಸೋಮವಾರದ ಇಂದು ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಸಾಗರ ಮತ್ತು ಹೊಸನಗರ ಭಾಗದ ರೈತ ಬಾಂಧವರು ಅತಿಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ನೇತೃತ್ವದಲ್ಲಿ ಜೋಗ ರಸ್ತೆಯಲ್ಲಿರುವಂತ ಮೆಸ್ಕಾಂ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆಯನ್ನು…

Read More

ವಿಜಯಪುರ: ರಾಜ್ಯಾಧ್ಯಂತ ಹೊಸದಾಗಿ ಸಾವಿರಾರೂ ಬಾರ್ ಲೈಸೆನ್ಸ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸೋದಕ್ಕೆ ಅಲ್ಲ ಅಂತ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಸ್ಪಷ್ಟ ಪಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕು ಚಿಕ್ಕಗಲಗಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಸಾವಿರಾರೂ ಬಾರ್ ಲೈಸೆನ್ಸ್ ಬಗ್ಗೆ ಇಲ್ಲ ಸಲ್ಲದ ಆರೋಪ ಸರಿಯಲ್ಲ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸೋದಕ್ಕೆ ಲೈಸೆನ್ಸ್ ನೀಡುತ್ತಿಲ್ಲ ಎಂಬುದಾಗಿ ತಿಳಿಸಿದರು. ಎಲ್ಲದಕ್ಕೂ ಅಬಕಾರಿ ಇಲಾಖೆಯನ್ನು ಟಾರ್ಗೆಟ್ ಮಾಡೋದು ಬೇಡ. ಸಾಮಾನ್ಯವಾಗಿ ಬಾರ್ ಲೈಸೆನ್ಸ್ ನೀಡುತ್ತಿದ್ದೇವೆ ಎಂಬುದಾಗಿ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಹೇಳಿದರು. ಮಹಾರಾಷ್ಟ್ರ ಮಾರುಕಟ್ಟೆಗೂ, ನಮ್ಮ ಮಾರುಕಟ್ಟೆಗೂ ದರವನ್ನು ಪರಿಶೀಲಿಸಿ. ಅಜಗಜಾಂತರ ವ್ಯತ್ಯಾಸವಿದೆ. ಮಹಾರಾಷ್ಟ್ರ, ಗೋವಾ ರಾಜ್ಯಗಳಿಂದ ಮದ್ಯ ಬರದಂತೆ ತಡೆಯೋದಕ್ಕೆ ಹೊಸ ಬಾರ್ ಗಳಿಗೆ ಲೈಸೆನ್ಸ್ ನೀಡುತ್ತಿರೋದಾಗಿ ತಿಳಿಸಿದರು.

Read More

ಬೆಂಗಳೂರು: ರಾಜ್ಯದ ಅನೇಕ ಸರ್ಕಾರಿ ನೌಕರರಿಗೆ ತಮ್ಮ ವಿರುದ್ಧ ಸಾಬೀತಾದಂತ ಆರೋಪಗಳಿಗೆ ಯಾವೆಲ್ಲ ಶಿಕ್ಷೆ ಆಗಲಿವೆ ಅಂತ ಗೊತ್ತಿಲ್ಲ. ಇಂತಹ ರಾಜ್ಯ ಸರ್ಕಾರಿ ನೌಕರರಿಗೆ ನೌಕರನ ವಿರುದ್ಧ ಸಾಬೀತಾದ ಆರೋಪಗಳಿಗೆ ಅನುಗುಣವಾಗಿ ಯಾವೆಲ್ಲ ದಂಡನೆಗಳನ್ನು ವಿಧಿಸಬಹುದಾಗಿದೆ ಅಂತ ಮುಂದೆ ಓದಿ. ಈ ಬಗ್ಗೆ 2001ರಲ್ಲಿ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಮಾಹಿತಿ ನೀಡಿದ್ದು, ಅದರಲ್ಲಿ ರಾಜ್ಯ ಸರ್ಕಾರಿ ನೌಕರನು ಸೇವೆಯಲ್ಲಿ ಎಸಗುವ ಅಪರಾಧಗಳ ಕುರಿತು ವಿಚಾರಣೆ ನಡೆಸಿ, ಸಾಬೀತಾದ ಪ್ರಕರಣಗಳಲ್ಲಿ ಆರೋಪಿ ನೌಕರನಿಗೆ ವಿಧಿಸಬಹುದಾದಂತಹ ದಂಡನೆಗಳ ಬಗ್ಗೆ ಕರ್ನಾಟಕ ಸಿವಿಲ್ ಸೇವಾ ನಿಯಮದಲ್ಲಿ ನಿರ್ದಿಷ್ಟ ಪಡಿಸಲಾಗಿದೆ ಅಂತ ತಿಳಿಸಿದ್ದಾರೆ. ಇನ್ನೂ ಸದರಿ ನಿಯಮದಲ್ಲಿ ಯಾವ ಆರೋಪಕ್ಕೆ ಯಾವ ಶಿಕ್ಷೆಯನ್ನು ವಿಧಿಸಬಹುದು ಎಂಬುದನ್ನು ನಿಗದಿಪಡಿಸಿರುವುದಿಲ್ಲ. ಇದರಿಂದಾಗಿ ಕೆಲವು ಸಂದರ್ಭಗಳಲ್ಲಿ ಆರೋಪದ ತೀವ್ರತೆಗಿಂತ ವಿಧಿಸಲಾದ ದಂಡನೆಗಳು ಕಡಿಮೆ ಅಥವಾ ಹೆಚ್ಚಿನದಾಗುವ, ಹೊಂದಿದ ಆರೋಪಗಳ ಶಿಸ್ತು ಪ್ರಾಧಿಕಾರಿಗಳು, ಹೋಲಿಸಬಹುದಾದಂತಹ ತೀವ್ರತೆಯನ್ನು ಹೊಂದಿದ ಆರೋಪಗಳ ಪ್ರಕರಣಗಳಲ್ಲಿ ಬೇರೆ ಬೇರೆ ದಂಡನೆಗಳನ್ನು ವಿಧಿಸುವ ಸಾಧ್ಯತೆಯೂ…

Read More