Author: kannadanewsnow09

ಗದಗ: ಮುಡಾ ಸೈಟು ಹಂಚಿಕೆ ಹಗರಣವನ್ನು ಸಿಬಿಐ ಮೂಲಕ ತನಿಖೆ ನಡೆಸಲಿ, ಯಾವುದೇ ತಪ್ಪು ಮಾಡಿಲ್ಲ ಎಂದರೆ ಭಯ ಪಡುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಸೈಟ್ ಹಂಚಿಕೆಯಲ್ಲಿ ಯಾವ ಹಗರಣ ಆಗಿಲ್ಲ ಮುಡಾ ಹಗರಣದಲ್ಲಿ ಯಾವುದೇ ಸತ್ಯಾಂಶ ಇಲ್ಲಾ ಅಂದರೆ ಇಷ್ಟು ದೊಡ್ಡ ಚರ್ಚೆ ಆಗುತ್ತಿರಲಿಲ್ಲ. ಏನೂ ಇಲ್ಲ ಅಂದರೆ ಸ್ವತಂತ್ರ ಸಂಸ್ಥೆಯ ಮೂಲಕ ತನಿಖೆಗೆ ಯಾಕೆ ಹಿಂಜರಿಕೆ ಎಂದು ಪ್ರಶ್ನಿಸಿದರು. ಒಂದು ಪ್ರಕರಣದ ವಿಚಾರಣೆ ಬೇರೆ, ತನಿಖೆ ಮಾಡುವುದು ಬೇರೆ. ಮುಡಾ ಹಗರಣ ತನಿಖೆಗೆ ಒಪ್ಪಿಸಬೇಕು ಅಂತ ಒತ್ತಾಯ ಮಾಡುತ್ತೇನೆ. ಸಂಪೂರ್ಣವಾಗಿ ಮುಡಾದಲ್ಲಿ ಎಕ್ಸೆಂಜ್ ಸೈಟ್ ಗಳು ಯಾವ್ಯಾವು ಇವೆ. ಯಾವ ಸಂದರ್ಭದಲ್ಲಿ, ಯಾರಿಗೆ ಸೈಟ್ ನೀಡಿದ್ದೀರಿ ಎನ್ನುವ ಬಗ್ಗೆ ಸಂಪೂರ್ಣ ತನಿಖೆ ಆಗಲಿ. ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲಿ. ಯಾವುದೇ ಹಗರಣ ಇಲ್ಲಾಂದರೆ ಯಾಕೇ ಭಯ ಪಡಬೇಕು ಎಂದರು. ಈ ಹಗರಣದ ಕುರಿತು…

Read More

ಬೆಂಗಳೂರು: 2024ರ ಕೆಸೆಟ್ ಪರೀಕ್ಷೆಗೆ ಅಧಿಸೂಚನೆಯನ್ನು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರು ಬಿಡುಗಡೆ ಮಾಡಿದ್ದಾರೆ. ಕೆಸೆಟ್-2024ಕ್ಕೆ ನವೆಂಬರ್ 24ಕ್ಕೆ ಪರೀಕ್ಷೆ ನಡೆಯಲಿದೆ. 2023ನೇ ಸಾಲಿನ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (Karnataka Assistant Professors Eligibility Test-KSET 2024) ಮುಗಿಸಿ, ಪ್ರಮಾಣ ಪತ್ರ ನೀಡಿದ ದಿನವೇ 2024ನೇ ಸಾಲಿನ ಅಧಿಸೂಚನೆಯನ್ನೂ ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ ಅವರು ಬಿಡುಗಡೆ ಮಾಡಿದರು. ಜುಲೈ 22ರಿಂದ ಆಗಸ್ಟ್ 22ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಗಸ್ಟ್ 26 ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನವಾಗಿದೆ. ನವೆಂಬರ್ 24ರಂದು ಪರೀಕ್ಷೆ ನಡೆಸುವುದಾಗಿ ಇದೇ ಸಂದರ್ಭದಲ್ಲಿ ಸಚಿವರು ಘೋಷಿಸಿದರು. ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಿದ ಕೆಇಎ ಮತ್ತು ಅದರ ಸಿಬ್ಬಂದಿಯನ್ನು ಸಚಿವರು ಮುಕ್ತಕಂಠದಿಂದ ಶ್ಲಾಘಿಸಿದರು. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸ್ವಾಗತಿಸಿದರು. ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಜಿ.ಜಗದೀಶ, ಕೆಸೆಟ್ ಅಧ್ಯಕ್ಷ ಪ್ರೊ ತಿಮ್ಮೇಗೌಡ ಈ ಸಂದರ್ಭದಲ್ಲಿ ಇದ್ದರು. https://kannadanewsnow.com/kannada/minister-dr-m-c-sudhakar-distributes-certificates-to-eligible-candidates-in-kset-23/ https://kannadanewsnow.com/kannada/state-govt-transfers-dead-officer/

Read More

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರತಿ ವರ್ಷ ನಡೆಸುವ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (Common Entrance Test-CET)ಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿಸುವ (Computer Based Test-CBT) ಬಗ್ಗೆ ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ಕೆಇಎ ಅಧ್ಯಕ್ಷರೂ ಆದ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ ಶನಿವಾರ ಹೇಳಿದರು. ಇಲ್ಲಿನ ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ-ಸೆಟ್ 23ರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿ ಅವರು ಮಾತನಾಡಿದರು. ಮಹಾರಾಷ್ಟ್ರ ಮತ್ತಿತರ ಒಂದೆರಡು ರಾಜ್ಯಗಳಲ್ಲಿ ಅಲ್ಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಸಿಬಿಟಿ ಮಾದರಿಯಲ್ಲಿ ನಡೆಸಿರುವುದನ್ನು ಅಧ್ಯಯನ ಮಾಡಲಾಗಿದೆ. ಸಿಇಟಿಯನ್ನು ಕಂಪ್ಯೂಟರ್ ಆಧರಿಸಿ ನಡೆಸಲು ಹೆಚ್ಚಿನ ಮೂಲಸೌಕರ್ಯವೂ ಅಗತ್ಯವಿರುತ್ತದೆ. ಒಟ್ಟಾರೆ, ಸಾಧಕ ಬಾಧಕಗಳನ್ನು ಗಣನೆಗೆ ತೆಗೆದುಕೊಂಡು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ವಿವರಿಸಿದರು. ಕೆ-ಸೆಟ್ ನಲ್ಲಿ ಅರ್ಹರಾದವರನ್ನು ಸಹಾಯಕ ಪ್ರಾಧ್ಯಾಪಕರಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಆದ್ಯತೆ ಮೇರೆಗೆ ಗಮನ ನೀಡಲಿದೆ.…

Read More

ಬೆಂಗಳೂರು: ಶೀಘ್ರವೇ ಸಿಇಟಿ ಅರ್ಜಿ ತುಂಬುವ ವಿಧಾನ ತಿಳಿಸಲು ಆಪ್ ಬಿಡುಗಡೆ ಮಾಡಲಾಗುತ್ತದೆ. ಅಲ್ಲದೇ ಕಂಪ್ಯೂಟರ್ ಆಧಾರಿತ ಸಿಇಟಿ ಪರಿಶೀಲನೆ ನಡೆಸಲಾಗುತ್ತದೆ ಅಂತ ಕೆಇಎ ಅಧ್ಯಕ್ಷರು ಆದ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ ಶನಿವಾರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಂಪ್ಯೂಟರ್ ಆಧಾರಿತ ಪರೀಕ್ಷಾ ವ್ಯವಸ್ಥೆಯ ಮೂಲಸೌಕರ್ಯಕ್ಕಾಗಿ ಸರ್ಕಾರ ಹೆಚ್ಚು ವೆಚ್ಚ ಮಾಡಬೇಕಾಗುತ್ತದೆ. ಈ ಸಂಪನ್ಮೂಲದ ಸದುಪಯೋಗ ಪೂರ್ಣ ಪ್ರಮಾಣದಲ್ಲಿ ಆಗುತ್ತದೆಯೇ ಎಂಬ ಬಗ್ಗೆಯೂ ಆಲೋಚಿಸಬೇಕಾಗುತ್ತದೆ ಎಂದು ಒತ್ತಿ ಹೇಳಿದರು. ಮಹಾರಾಷ್ಟ್ರದಲ್ಲಿ ಕಂಪ್ಯೂಟರ್ ಆಧಾರಿತವಾಗಿ ಸಿಇಟಿ ನಡೆಸಿದ್ದ ಸಂಸ್ಥೆಯ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಲಾಗಿದೆ ಎಂದೂ ಸುಧಾಕರ ಹೇಳಿದರು. ಸಿಇಟಿ ಅರ್ಜಿ ತುಂಬುವ ಹಂತದಲ್ಲಿ, ಮುಖ್ಯವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಇನ್ನೂ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆ ವಿದ್ಯಾರ್ಥಿಗಳು ಬಹುತೇಕ ಸೈಬರ್ ಸೆಂಟರುಗಳಿಗೆ ಹೋಗಿ ಅರ್ಜಿ ತುಂಬುತ್ತಿದ್ದು, ಗ್ರಾಮೀಣ ವಿದ್ಯಾರ್ಹತೆ, ಮೀಸಲಾತಿ ಮತ್ತಿತರ ಮಾಹಿತಿಗಳನ್ನು ನೀಡುವಾಗ ಹೆಚ್ಚಿನ ಪ್ರಮಾಣದಲ್ಲಿ ತಪ್ಪುಗಳನ್ನು ಎಸಗುತ್ತಿದ್ದಾರೆ ಎಂದರು. ಸಿಇಟಿ ಅರ್ಜಿ ತುಂಬುವ ವಿಧಾನದ ಬಗ್ಗೆ…

Read More

ಬೆಂಗಳೂರು: ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘ ನಗರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ 80ಕ್ಕೂ ಅಧಿಕ ಅಂಕಪಡೆದ ನೌಕರರ ಮಕ್ಕಳಿಗೆ ಸನ್ಮಾನ ಸಮಾರಂಭವನ್ನು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಮಕ್ಕಳ ವಿದ್ಯಾಭ್ಯಾಸವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ವೈದ್ಯಕೀಯ, ಇಂಜಿನಿಯರಿಂಗ್ ಮಾಡುತ್ತಿರುವ ಮಕ್ಕಳಿಗೆ ಪ್ರತಿ ವರ್ಷ 5 ಸಾವಿರದಿಂದ 50 ಸಾವಿರ ರೂ.ಗಳವರೆಗೂ ಪ್ರೋತ್ಸಾಹಧನ ಹೆಚ್ಚಿಸಿ ನೀಡಲಾಗುತ್ತಿದೆ ಎಂದು‌ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಪ್ರಸ್ತುತ ನಿಗಮದಲ್ಲಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಕೊಡುವ ವಿದ್ಯಾರ್ಥಿ ವೇತನ‌ ಈ‌ ಹಿಂದೆ ವರ್ಷಕ್ಕೆ ರೂ 2 ರಿಂದ‌ ರೂ 3 ಲಕ್ಷಗಳವರಗೆ ‌ಮಾತ್ರ ಪಾವತಿಯಾಗುತ್ತಿತ್ತು. ಈಗ ಪ್ರತಿ ವರ್ಷ ರೂ. 1.70 ಯಿಂದ ರೂ.1.87 ಕೋಟಿ ರೂಪಾಯಿಯಷ್ಟು ವಿದ್ಯಾರ್ಥಿ ವೇತನವನ್ನು ಸಿಬ್ಬಂದಿಗಳ ಮಕ್ಕಳಿಗೆ…

Read More

ಮಂಗಳೂರು : ಮಹಿಳೆಯನ್ನು ಆರ್ಥಿಕವಾಗಿ ಸಶಕ್ತಗೊಳಿಸಲು ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಯೋಜನೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ. ಶನಿವಾರ ಮಂಗಳೂರು ನಗರದ ಉರ್ವಸ್ಟೋರ್ ಬಳಿಯಿರುವ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ನವೀಕೃತ ಕಟ್ಟಡ ‘ಸಾಹಿತ್ಯ ಸದನ’ ವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಿದೆ. ಹಾಗಾಗಿ ಗೃಹಲಕ್ಷ್ಮಿ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳು ನಿತ್ಯ ನಿರಂತರವಾಗಿ ಮುಂದುವರೆಯಲಿವೆ ಎಂದರು. ಅಂಗನವಾಡಿ ಹೆಸರು ಬದಲಾವಣೆ ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಅಂಗನವಾಡಿ ಎನ್ನುವುದು 50 ವರ್ಷದ ಹಿಂದಿನ ಹೆಸರು. ಅವುಗಳನ್ನು ಇನ್ನು ಮುಂದೆ ಗೌರ್ನಮೆಂಟ್ ಮೊಂಟೆಸರಿ ಎಂದು ಕರೆಯಲಾಗುವುದು ಎಂದು ಸಚಿವರು ತಿಳಿಸಿದರು. ಪ್ರತಿ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ರಾಜ್ಯದ ಪ್ರತಿ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬುದು ಸರ್ಕಾರದ ಆಶಯವಾಗಿದೆ.…

Read More

ಕ್ಷೌರದ ನಿಯಮಗಳು ಕ್ಷೌರಕ್ಕೆ ವಿಹಿತ ಮತ್ತು ನಿಷಿದ್ಧ ವಾರಗಳು ಯಾವವು”. ಕ್ಷೌರಕ್ಕೂ, ಆಯುಷ್ಯಕ್ಕು ಸಮಬಂಧವಿದೆ. ಅದಕ್ಕೋಸ್ಕರವಾಗಿಯೇ ಕ್ಷೌರಕ್ಕೆ ” ಆಯುಷ್ಕರ್ಮ” ಎಂಬ ಶಬ್ದ ಪ್ರಸಿದ್ಧವಾಗಿತ್ತು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಮುಂಬರುವ ಟೀಂ ಇಂಡಿಯಾ ಪುರುಷರ ತಂಡದ ಶ್ರೀಲಂಕಾ ಪ್ರವಾಸದ ಪರಿಷ್ಕೃತ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಪ್ರವಾಸದ ಆರಂಭಿಕ ವೇಳಾಪಟ್ಟಿಯು ಪಂದ್ಯಗಳು ಜುಲೈ 26 ರಿಂದ ಪ್ರಾರಂಭವಾಗುತ್ತಿವೆ ಎಂದು ಸೂಚಿಸಿದರೆ, ಇದು ಈಗ 27 ರಂದು ಪ್ರಾರಂಭವಾಗುತ್ತದೆ ಮತ್ತು ಆಗಸ್ಟ್ 7 ರವರೆಗೆ ಮುಂದುವರಿಯುತ್ತದೆ, ಇದರಲ್ಲಿ 3 ಏಕದಿನ ಮತ್ತು ಅನೇಕ ಟಿ 20 ಪಂದ್ಯಗಳು ಸೇರಿವೆ. ಆದಾಗ್ಯೂ, ಎಲ್ಲಾ ಪಂದ್ಯಗಳಿಗೆ ಸ್ಥಳಗಳು ಒಂದೇ ಆಗಿರುತ್ತವೆ. 26, 27 ಮತ್ತು 30ರಂದು ಪಲ್ಲೆಕೆಲೆಯಲ್ಲಿ ಎಲ್ಲಾ ಟಿ20 ಪಂದ್ಯಗಳು ನಡೆಯಲಿವೆ. ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಆಗಸ್ಟ್ 2, 4 ಮತ್ತು 7 ರಂದು 50 ಓವರ್ ಗಳ ಪಂದ್ಯಗಳು ನಡೆಯಲಿವೆ. ಕಳೆದ ವರ್ಷ ನಡೆದ 50 ಓವರ್ಗಳ ವಿಶ್ವಕಪ್ನಲ್ಲಿ ಉಭಯ ತಂಡಗಳು ಕೊನೆಯ ಬಾರಿಗೆ ಆಡಿದ್ದು, ಮೆನ್ ಇನ್ ಬ್ಲೂ ಶ್ರೀಲಂಕಾವನ್ನು 357 ರನ್ ಗಳಿಸಿದ ನಂತರ 302 ರನ್ಗಳಿಂದ ಸೋಲಿಸಿತು. ಗೌತಮ್ ಗಂಭೀರ್ ಶ್ರೀಲಂಕಾ ಪ್ರವಾಸದಿಂದ ಕೋಚಿಂಗ್ ಆರಂಭ…

Read More

ಹುಬ್ಬಳ್ಳಿ: ಮಹದಾಯಿ ಯೋಜನೆ ಜಾರಿ ಮಾಡಲು ಪಕ್ಷ ಭೇದ ಮರೆತು ಕೆಲಸ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನವಲಗುಂದ ವಿದಾನಸಭಾ ಕ್ಷೇತ್ರದ ಹುಬ್ಬಳ್ಳಿ ತಾಲ್ಲೂಕಿನ ಹೆಬಸೂರ ಗ್ರಾಮಕ್ಕೆ ಶೀಮತಿ ಫಕ್ಕೀರಮ್ಮ ಭ.ದೊಡ್ಡಗಾಣಿಗೇರ ಸರಕಾರಿ ಪದವಿ ಪೂರ್ವ ಕಾಲೇಜನ್ನು ಮಂಜೂರು ಮಾಡಿಸಿದ ಮಾಜಿ ಮುಖ್ಯಮಂತ್ರಿ ದಿ. ಎಸ್​.ಆರ್​. ಬೊಮ್ಮಾಯಿ ಅವರ ಪುತ್ಥಳಿ ಅನಾವರಣ ಹಾಗೂ ಸರ್ಕಾರದ ವಿವೇಕ ಯೋಜನೆ ಹಾಗೂ ಸಿ.ಎಸ್​.ಆರ್​. ಯೋಜನೆ ಅಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳನ್ನು ಕೇಂದ್ರ ಆಹಾರ ಮತ್ತು ನಾಗರೀಕ ಸೇವೆ ಪೂರೈಕೆ ಸಚಿವ ಪ್ರಲ್ಹಾದ ಜೋಶಿ ಅವರೊಂದಿಗೆ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಧಾರವಾಡದಿಂದ ನವಲಗುಂದ, ರೋಣ, ಗದಗ ಹಾಗೂ ನರಗುಂದ ವರೆಗೆ ಪಾದಯಾತ್ರೆ ಮಾಡಿ ಈ ಯೋಜನೆ ಜಾರಿ ಮಾಡಲು ಸಾಕಷ್ಟು ಹೋರಾಟ ಮಾಡಿದ ಸಂದರ್ಭದಲ್ಲಿ ಎಲ್ಲರೂ ಬೆಂಬಲಿಸಿದ್ದಾರೆ. ಯೋಜನೆ ಬಗ್ಗೆ ನಮಗೂ ಕೂಡ ಬದ್ಧತೆ ಇದ್ದು ಆದಷ್ಟು ಬೇಗ ಯೋಜನೆ ಜಾರಿಗೆ ಕೇಂದ್ರದಿಂದ…

Read More

ಬೆಂಗಳೂರು: ರಾಜ್ಯದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸೋ ನಿಟ್ಟಿನಲ್ಲಿ ಜಿಸಿಸಿ ನೀತಿ ನಿಯಮಾವಳಿಗಳನ್ನು ಸಡಿಲಿಕೆ ಮಾಡಲಾಗುತ್ತದೆ ಅಂತ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಮೂಲಸೌಕರ್ಯ ವೃದ್ಧಿಗೆ ಬಂಡವಾಳ ಹೂಡಲು ಉದ್ಯಮಿದಾರರನ್ನು ಸೆಳೆಯಲು ಮತ್ತು ಉದ್ಯೋಗಾವಕಾಶ ಹೆಚ್ಚಿಸಲು ಮುಂದಿನ ದಿನಗಳಲ್ಲಿ ಜಿಸಿಸಿ ನೀತಿಯ ನಿಯಮಾವಳಿಗಳನ್ನು ಸಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು ತಂತ್ರಜ್ಞಾನ ಶೃಂಗಸಭೆ – 27ನೇ ಆವೃತ್ತಿ ನವೆಂಬರ್‌ 19 ರಿಂದ 21ರ ವರೆಗೆ ನಡೆಯಲಿದೆ. ಟೆಕ್‌ ಶೃಂಗಸಭೆಯ ಈ ವರ್ಷದ ಘೋಷವಾಕ್ಯ ʼಬ್ರೇಕಿಂಗ್‌ ಬೌಂಡರೀಸ್‌ʼ ಆಗಿದೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸತನವನ್ನು ಹೆಚ್ಚಿಸಲು ವೈವಿಧ್ಯಮಯ ವಲಯಗಳ ನಡುವಿನ ಸಹಯೋಗದ ಪ್ರಾಮುಖ್ಯತೆಯನ್ನು ಘೋಷವಾಕ್ಯ ಒಳಗೊಂಡಿದೆ. ಶೃಂಗಸಭೆಯಲ್ಲಿ ಕೈಗಾರಿಕೆ ಹಾಗೂ ವ್ಯವಹಾರಗಳನ್ನು ಮರುರೂಪಿಸುತ್ತಿರುವ ತಾಂತ್ರಿಕ ಪ್ರಗತಿಗಳು ಮತ್ತು ಪ್ರವೃತ್ತಿಗಳ ಕುರಿತು ಚರ್ಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://kannadanewsnow.com/kannada/bjp-mla-munirathna-praises-cm-siddaramaiah-on-stage/ https://kannadanewsnow.com/kannada/state-govt-transfers-dead-officer/

Read More