Author: kannadanewsnow09

ಬೆಂಗಳೂರು: ಬಿಜೆಪಿ ಪಕ್ಷದ ವಿರೋಧಿ ಎಂಬ ಘೋಷಣೆಗೂ ಡೋಂಟ್ ಕೇರ್ ಎನ್ನುವಂತೆ ವೇದಿಕೆಯ ಕಾರ್ಯಕ್ರಮದಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಬಿಜೆಪಿ ಶಾಸಕ ವಿ.ಮುನಿರತ್ನ ಅವರು ಹಾಡಿ ಹೊಗಳಿದಂತ ಘಟನೆ ನಡೆದಿದೆ. ಬೆಂಗಳೂರಿನ ಸುಮ್ಮನಹಳ್ಳಿ ಬಳಿಯಲ್ಲಿ ಇಂದು ಬಾಬು ಜಗನ್ ಜೀವನ್ ರಾಮ್ ಭವನ, ಸಂಶೋಧನಾ ಸಂಸ್ಥೆಯನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತ ಬಿಜೆಪಿ ಶಾಸಕ ವಿ ಮುನಿರತ್ನ ಅವರು, ಈಗ ಬೇರೆ ಪಕ್ಷದಲ್ಲಿ ಇದ್ದೇನೆ. ನಾನು ಸಿದ್ಧರಾಮಯ್ಯ ವಿರುದ್ಧ ಮಾತನಾಡೋದಿಲ್ಲ ಎಂದರು. ನಮ್ಮ ಹೋರಾಟ ಏನಿದ್ದರೂ ಬೇರೆಯೇ ಆಗಿದೆ. ಮುಖ್ಯಮಂತ್ರಿ ಕುರ್ಚಿ ಅಲ್ಲಾಡಿಸೋ ಕೆಲಸ ಮಾಡ್ತಿಲ್ಲ. ವಿರೋಧ ಪಕ್ಷದ ಓರ್ವ ಶಾಸಕನಾಗಿ ಹೇಳುತ್ತೇನೆ. ಬೆಂಗಳೂರು, ಕ್ಷೇತ್ರ ಅಭಿವೃದ್ಧಿಗೆ ಮುಂದಾಗಬೇಕು ಎಂಬುದಾಗಿ ವೇದಿಕೆಯಲ್ಲೇ ಸಿಎಂ ಸಿದ್ಧರಾಮಯ್ಯಗೆ ಮನವಿ ಮಾಡಿದರು. ಸಿಎಂ ಸಿದ್ಧರಾಮಯ್ಯ ಅವರನ್ನು ಬಿಜೆಪಿ ಶಾಸಕ ವಿ.ಮುನಿರತ್ನ ವೇದಿಕೆಯಲ್ಲೇ ಹಾಡಿ ಹೊಗಳಿದ್ದರಿಂತ ಕೋಪಗೊಂಡ ಓರ್ವ ಕಾರ್ಯಕರ್ತನೊಬ್ಬ ಬಿಜೆಪಿ ಪಕ್ಷ ವಿರೋಧಿ ಮುನಿರತ್ನ ಎಂಬುದಾಗಿ ಘೋಷಣೆ ಕೂಗಿದರು. ಮುನಿರತ್ನ…

Read More

ಬೆಂಗಳೂರು: ಮೈಸೂರಿನ ಮುಡಾದಿಂದ ಮುಖ್ಯಮಂತ್ರಿಗಳ ಧರ್ಮಪತ್ನಿ ಪರಿಹಾರ ಪಡೆದಿರುವ ಜಮೀನು ಮುಡಾಗೆ ಸೇರಿದ ಸ್ವತ್ತು. ಡಿನೋಟಿಫಿಕೇಷನ್ ಬಳಿಕ ನಾಲ್ಕು ವರ್ಷ ಏನೂ ಬೆಳವಣಿಗೆಯೇ ಆಗಿಲ್ಲ. ಸತ್ತವರ ಹೆಸರಿನಲ್ಲಿ ಜಮೀನು ಡಿ ನೋಟಿಫಿಕೇಷನ್ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಭಾಮೈದ ಖರೀದಿ ಮಾಡಿರುವ ಮೈಸೂರಿನ ಕೆಸರೆ ಬಳಿಯ ಜಮೀನಿಗೆ ಮುಡಾ ಭೂಸ್ವಾಧೀನ ಮಾಡಿ ಪರಿಹಾರ ನೀಡಲಾಗಿದೆ. ಈಗಿರುವಾಗ ಇದು ಖಂಡಿತವಾಗಿಯೂ ಮುಡಾಗೆ ಸೇರಿದ ಜಮೀನು ಆಗುತ್ತದೆ. ಈ ಜಮೀನನ್ನು ಡಿ ನೋಟಿಫಿಕೇಷನ್ ಮಾಡಿ ಖರೀದಿಸಲಾಗಿದೆ. ಇದು ಕಾನೂನುಬಾಹಿರ ಎಂದು ಕೇಂದ್ರ ಸಚಿವರು ದೂರಿದರು. ಇದೇ ವೇಳೆ ಕೇಂದ್ರ ಸಚಿವರು ಮಾಧ್ಯಮಗಳ ಮುಂದೆ ಹಗರಣಕ್ಕೆ ಸಂಬಂಧಿಸಿದ ಕೆಲ ಮಹತ್ವದ ದಾಖಲೆಗಳನ್ನು ಪ್ರದರ್ಶಿಸಿದರು. ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು? ಸಿಎಂ ಸಿದ್ಧರಾಮಯ್ಯ ಅವರ ಧರ್ಮಪತ್ನಿಗೆ ದಾನ ಮಾಡಿದಾಗ ಕೃಷಿ ಭೂಮಿ ಎಂದು ತೋರಿಸುತ್ತಾರೆ. ಆದರೆ, ಆ…

Read More

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂಬ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಶ್ರೀ ಬಸವರಾಜ್ ರಾಯರೆಡ್ಡಿ ಅವರು ನೀಡಿದ ಹೇಳಿಕೆ ಆಕ್ಷೇಪಾರ್ಹವಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕಳೆದ ಫೆಬ್ರವರಿಯಲ್ಲಿ ಮಂಡಿಸಿದ ಆಯವ್ಯಯವು 3 ಲಕ್ಷ 73 ಸಾವಿರ ಕೋಟಿ ರೂಪಾಯಿ ಇದೆ. ಇದರಲ್ಲಿ ಅಭಿವೃದ್ಧಿ ಕಾರ್ಯಗಳಿಗೆ 1 ಲಕ್ಷ 20 ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಟ್ಟಿದೆ. ಇನ್ನು ಗ್ಯಾರಂಟಿ ಯೋಜನೆಗಳಿಗೆ 58,000 ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ. ಇನ್ನು ಸಾಮಾಜಿಕ ಪಿಂಚಣಿ, ಸರ್ಕಾರಿ ನೌಕರರ ವೇತನ, ವಿವಿಧ ಇಲಾಖೆಗಳಿಗೆ ಅನುದಾನ ಹಂಚಿಕೆಯು ಸಹ ಸಮರ್ಪಕವಾಗಿದೆ. ಹೀಗಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವನ್ನು ಮೀಸಲಿಟ್ಟೇ ಎಲ್ಲ ಚಟುವಟಿಕೆಯನ್ನು ನಡೆಸಲಾಗುತ್ತಿದೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಶಾಸಕರಾದ ದಿನೇಶ್ ಗೂಳಿಗೌಡ, ಇಷ್ಟು ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಮೊದಲು ಹೊರಡಿಸಿದ್ದ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಘೋಷಿಸಿದ್ದ…

Read More

ಬೆಂಗಳೂರು: ಕೆಪಿಸಿಸಿ ಕಚೇರಿ ಸ್ವಚ್ಚತಾ ಸಿಬ್ಬಂದಿಗೆ ಮನೆ ನೀಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಮೂಲಕ ಕೆಪಿಸಿಸಿ ಕಚೇರಿಯ ಸ್ವಚ್ಛತಾ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಪಕ್ಷದ ಕಾರ್ಯಕರ್ತರ ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ಕೆಪಿಸಿಸಿ ಕಚೇರಿಯ ಸ್ವಚ್ಚತಾ ಸಿಬ್ಬಂದಿಗೆ ಮನೆಗಳನ್ನು ಒದಗಿಸುವಂತೆ ಸಿಎಂ ಸೂಚಿಸಿದರು. ರಾಜ್ಯದ ನಾನಾ ಕಡೆಗಳಿಂದ ಬಂದು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ಕಾದು ಕುಳಿತಿದ್ದ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಿತ್ತಾ, ಸಾಧ್ಯವಿದ್ದವರೆಲ್ಲಾ ಸ್ಥಳದಲ್ಲೇ ಪರಿಹಾರ ಒದಗಿಸಿಕೊಳ್ಳುತ್ತಿದ್ದರು. ಈ ವೇಳೆ ಕೆಪಿಸಿಸಿ ಕಚೇರಿಯ ಸ್ವಚ್ಛತಾ ಸಿಬ್ಬಂದಿ ಆಶಾ, ಸುಗಂತಿ, ಜಯಂತಿ ಮತ್ತು ಅರ್ಚನಾ ಅವರು ತಮಗೆ ಮನೆಗಳನ್ನು ಕೊಡಿಸುವಂತೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗೆ ಸ್ಥಳದಿಂದಲೇ ಕರೆ ಮಾಡಿ ಸ್ವಚ್ಛತಾ ಸಿಬ್ಬಂದಿಯ ದಾಖಲೆ ಪರಿಶೀಲನೆ ನಡೆಸಿ ಅರ್ಹತೆ ಆಧಾರದಲ್ಲಿ ಮನೆಗಳನ್ನು ಒದಗಿಸಿಕೊಡುವಂತೆ ಸೂಚಿಸಿದರು. https://kannadanewsnow.com/kannada/in-2011-the-bjp-levelled-serious-allegations-against-the-jds-over-the-illegal-allotment-of-muda-plots/ https://kannadanewsnow.com/kannada/various-development-works-worth-rs-140-crore-to-be-launched-in-soraba-taluk-soon-minister-madhu-bangarappa/

Read More

ಬೆಂಗಳೂರು: 2011ರಲ್ಲಿ ಮೂಡಾ ನಿವೇಶನ ಅಕ್ರಮ ಹಂಚಿಕೆ ಕುರಿತು ಬಿಜೆಪಿಯಿಂದ ಜೆಡಿಎಸ್ ಮೇಲೆ ಗುರುತರ ಆರೋಪ ಮಾಡುತ್ತಿರೋದಾಗಿ ಹೇಳಲಾಗುತ್ತಿದೆ. 1. ಮೈಸೂರಿನ ಮೂಡಾ ಹಗರಣಕ್ಕೆ ಸಂಬಂಧಪಟ್ಟಂತೆ 17-03-2011 ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಧಾನ ಪರಿಷತ್ತಿನ ಸಭಾಪತಿಗಳಿಗೆ ದಾಖಲೆಗಳನ್ನು ಸಲ್ಲಿಕೆ ಮಾಡಿ ಮಾಜಿ ಪ್ರಧಾನಿ ಶ್ರೀ ಎಚ್.ಡಿ ದೇವೇಗೌಡರು ತಮ್ಮ ಕುಟುಂಬಕ್ಕೆ 48 ನಿವೇಶನಗಳ ಹಂಚಿಕೆ ಮಾಡಿರುವುದನ್ನು ಪ್ರಸ್ತಾಪಿಸಿದ್ದಾರೆ. ಅವರ ಅಷ್ಟು ಆರೋಪಗಳು ವಿಧಾನ ಪರಿಷತ್ತಿನ ನಡವಳಿಕೆಗಳಲ್ಲಿ ದಾಖಲಾಗಿರುತ್ತದೆ. 2. ಈ ಆರೋಪದಲ್ಲಿ ಎಚ್. ಡಿ ಕುಮಾರಸ್ವಾಮಿ ರವರಿಗೆ 300 x 200 ಅಡಿ ಅಳತೆಯ (ಸುಮಾರು 60,000 ಅಡಿ) ನಿವೇಶನ ಸಂಖ್ಯೆ.17(ಬಿ) ಹಂಚಿಕೆಯಾಗಿರುವುದಾಗಿ ಹೇಳಿದ್ದಾರೆ. ಅದೇ ರೀತಿ ಅವರ ಕುಟುಂಬದ ಸವಿತಾ ಕೋಂ ಬೀರೇಗೌಡ ಎಂಬುವರಿಗೆ 130x 110 ಅಡಿ (ಸುಮಾರು 14,300 ಅಡಿ) ಅಕ್ರಮ ಹಂಚಿಕೆಯ ಕುರಿತು ಆರೋಪ ಮಾಡಿದ್ದಾರೆ. ಇದರ ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸುವುದೇ? 3. ವಿಧಾನಪರಿಷತ್ತಿನಲ್ಲಿ ಮಾತನಾಡುವಾಗ ಬಿ ಎಸ್ ಕೆ ಮೈನಿಂಗ್…

Read More

ಶಿವಮೊಗ್ಗ: ಮುಂದಿನ ಒಂದು ತಿಂಗಳಲ್ಲಿ ಸೊರಬ ತಾಲೂಕಿನಲ್ಲಿ 140 ಕೋಟಿ ರೂ ವೆಚ್ಚಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಸೊರಬ ಪಟ್ಟಣದಲ್ಲಿ ಪೊಲೀಸ್ ವಸತಿಗೃಹಗಳ ಸಮುಚ್ಛಯ ಉದ್ಘಾಟನೆಗೆ ಮುನ್ನ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಸೊರಬ ತಾಲೂಕಿನ ವರದಾ ನದಿಗೆ ಬ್ಯಾರೇಜ್ ಹಾಗೂ ತಡೆಗೋಡೆ ನಿರ್ಮಾಣಕ್ಕೆ 62 ಕೋಟಿ ರೂಪಾಯಿ ಮಂಜೂರಾಗಿದ್ದು ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದರು. ಸೊರಬ ತಾಲೂಕಿನಲ್ಲಿ ಕೊರತೆ ಇರುವ ಶಿಕ್ಷಕರ ಶೇಕಡ 95 ರಷ್ಟು ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗುತ್ತಿದೆ ಎಂದ ಅವರು ಶಾಲಾ ಮಕ್ಕಳಿಗೆ ವಾರದ ಎರಡು ದಿನ ನೀಡಲಾಗುತ್ತಿದ್ದ ಮೊಟ್ಟೆಯನ್ನು ಅಜೀಮ್ ಪ್ರೇಮ್ ಜಿ ಫೌಂಡೇಶನ್ ನ ಸಹಯೋಗದೊಂದಿಗೆ ಮುಂದಿನ ಮೂರು ವರ್ಷಗಳವರೆಗೆ ವಾರದ ಆರು ದಿನಗಳ ಕಾಲ ಮೊಟ್ಟೆ ವಿತರಿಸುವ ಕಾರ್ಯಕ್ಕೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ ಸರ್ಕಾರ…

Read More

ಮುಂಬೈ : ಭಾರತ, ಏಷ್ಯಾ ಅಷ್ಟೇ ಅಲ್ಲದೇ ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ- ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿ ದಂಪತಿಯ ಮಗ ಅನಂತ್ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವು ಶುಕ್ರವಾರ ಅದ್ಧೂರಿಯಾಗಿ ನಡೆಯಿತು. ದೇಶ, ವಿದೇಶಗಳಿಂದ ಬಂದಿದ್ದ ಸಾವಿರಾರು ಸಂಖ್ಯೆಯ ಅತಿಥಿಗಳು ಮದುವೆ ಸಮಾರಂಭದಲ್ಲಿ ಭಾಗೀ ಆಗಿದ್ದರು. ರಾಜಕೀಯ ಕ್ಷೇತ್ರದ ಹಲವು ಗಣ್ಯರು ಆಗಮಿಸಿ ನವ ದಂಪತಿಗೆ ಆಶೀರ್ವದಿಸಿದರು. ಅಂಬಾನಿ ಕುಟುಂಬದ ಮದುವೆ ಸಮಾರಂಭದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಅನೇಕ ನಾಯಕರು ಕಾಣಿಸಿಕೊಂಡರು. ಇನ್ನು ಇಂದು (ಶನಿವಾರ- ಜುಲೈ 13) ನಡೆಯಲಿರುವ ಆಶೀರ್ವಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಆಡಳಿತ ಪಕ್ಷದ ಹಲವು ನಾಯಕರು, ಪ್ರತಿಪಕ್ಷದ ಹಲವು ಹಿರಿಯ ನಾಯಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಟಿಎಂಸಿ ಪಕ್ಷದ ನಾಯಕಿ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್,…

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಬಿಜೆಪಿಯವರು ವಿನಾ ಕಾರಣ ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿ ನಾಯಕರು ತಾವು ಮಾಡಿದಂತ ಭ್ರಷ್ಟಾಚಾರವನ್ನು ಮುಚ್ಚಿಹಾಕಿಕೊಳ್ಳಲು ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ರಾಜ್ಯದ ಹಿತದೃಷ್ಟಿಯಿಂದ ಬಯಲು ಮಾಡುವುದು ಅನಿವಾರ್ಯವಾಗಿದೆ  ಅಂತ ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗ ಅಧ್ಯಕ್ಷರಾದಂತ ರಮೇಶ್ ಬಾಬು ಕಿಡಿಕಾರಿದ್ದಾರೆ.  ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ಸಾರ್ವಜನಿಕ ಸೇವೆಯ ಒಂದು ಪ್ರಮುಖ ಸಂಸ್ಥೆಯಾಗಿದ್ದು, ಸೇವಾ ಮನೋಭಾವದಲ್ಲಿ ಕೆಲಸ ಮಾಡುತ್ತಿದೆ. ನಮ್ಮ ಸಾರಿಗೆ ಸಂಸ್ಥೆಯು ದೇಶದಲ್ಲಿ ಒಂದು ಉತ್ತಮ ಮತ್ತು ಅಗ್ರಮಾನ್ಯ ಸಾರಿಗೆ ಸಂಸ್ಥೆಯಾಗಿದ್ದು, ಗುಣಮಟ್ಟದ ಸಾರಿಗೆ ವ್ಯವಸ್ಥೆಯನ್ನು ನೀಡುತ್ತಿದೆ. ಸಾಮಾಜಿಕ ಹೊಣೆಗಾರಿಕೆಯ ಅಡಿಯಲ್ಲಿ ಕರ್ನಾಟಕದ ಈಗಿನ ಕಾಂಗ್ರೆಸ್ ಸರ್ಕಾರ ಸಾರಿಗೆ ಇಲಾಖೆ ಮೂಲಕ ರಾಜ್ಯದಲ್ಲಿ ಮಹಿಳೆಯರಿಗಾಗಿ ಜಾರಿಗೊಳಿಸಿರುವ ಉಚಿತ…

Read More

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ಅವರಿಗೆ ಮಾನಸಿಕ ಖಿನ್ನತೆ ಕಾಡುತ್ತಿದೆಯಂತೆ. ಹೀಗಾಗಿಯೇ ನಿವಾರಣೆಗೆ ಯೋಗದ ಮೊರೆಯನ್ನು ಡಿ ಬಾಸ್ ಹೋಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಬಂಧನವಾಗಿತ್ತು. ಆ ಬಳಿಕ ನ್ಯಾಯಾಂಗ ಬಂಧನವಾಗಿ, ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವಂತ ನಟ ದರ್ಶನ್ ಗೆ ಜೈಲೂಟ ಸೇರುತ್ತಿಲ್ಲವಂತೆ. ಆಗಾಗಲ ಪುಡ್ ಪಾಯಿಸನ್ ಕೂಡ ಆಗುತ್ತಿದೆಯಂತೆ. ಇದೇ ಕಾರಣಕ್ಕೆ ನನಗೆ ಜೈಲೂಟ ಬೇಡ, ಮನೆಯೂಟ ತರಿಸಿಕೊಳ್ಳೋದಕ್ಕೆ ಅವಕಾಶ ನೀಡುವಂತೆ ಕೋರ್ಟ್ ಗೂ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ ಪರಪ್ಪನ ಅಗ್ರಹಾರದಲ್ಲಿರುವಂತ ನಟ ದರ್ಶನ್ ಗೆ ಈಗ ಮಾನಸಿಕ ಖಿನ್ನತೆ ಕಾಡುತ್ತಿದೆಯಂತೆ. ಖೈದಿಗಳು ಬೇಡ, ನನ್ನೊಂದಿಗೆ ಯಾರು ಬೇಡ. ನಾನು ಒಬ್ಬಂಟಿಯಾಗೇ ಇರ್ತೀನಿ ಅನ್ನುತ್ತಿರುವಂತ ಅವರು, ಮಾನಸಿಕ ಖಿನ್ನತೆಯ ನಿವಾರಣೆಗಾಗಿ ಯೋಗ ಮಾಡುತ್ತಿದ್ದಾರಂತೆ. ಅಂದಹಾಗೇ ನಟ ದರ್ಶನ್…

Read More

ಇಸ್ರೇಲ್: ಗಾಝಾದ ಖಾನ್ ಯೂನಿಸ್ನಲ್ಲಿ ವಸತಿ ಡೇರೆಗಳ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 71 ಜನರು ಸಾವನ್ನಪ್ಪಿದ್ದಾರೆ ಮತ್ತು 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎಫ್ಪಿ ವರದಿ ಮಾಡಿದೆ. ಹಮಾಸ್ ಆಡಳಿತದ ಗಾಝಾ ಸರ್ಕಾರವು ಈ ದಾಳಿಯನ್ನು ‘ದೊಡ್ಡ ಹತ್ಯಾಕಾಂಡ’ ಎಂದು ಬಣ್ಣಿಸಿದ್ದು, ಸಾವನ್ನಪ್ಪಿದವರಲ್ಲಿ ನಾಗರಿಕ ತುರ್ತು ಸೇವಾ ಸದಸ್ಯರು ಸೇರಿದ್ದಾರೆ ಎಂದು ಹೇಳಿದೆ. “ಖಾನ್ ಯೂನಿಸ್ನಲ್ಲಿ ಸ್ಥಳಾಂತರಗೊಂಡವರ ಟೆಂಟ್ ಶಿಬಿರಗಳ ಮೇಲೆ ಬಾಂಬ್ ದಾಳಿ ನಡೆಸುವ ಮೂಲಕ ಇಸ್ರೇಲಿ ಆಕ್ರಮಿತ ಸೇನೆಯು ದೊಡ್ಡ ಹತ್ಯಾಕಾಂಡವನ್ನು ನಡೆಸಿತು. ಈ ಭಯಾನಕ ಹತ್ಯಾಕಾಂಡದಲ್ಲಿ ನಾಗರಿಕ ತುರ್ತು ಸೇವೆಯ ಸದಸ್ಯರು ಸೇರಿದಂತೆ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ” ಎಂದು ಹಮಾಸ್ ಆಡಳಿತದ ಗಾಝಾ ಸರ್ಕಾರಿ ಮಾಧ್ಯಮ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ ಕನಿಷ್ಠ 38,345 ಜನರು ಸಾವನ್ನಪ್ಪಿದ್ದಾರೆ ಮತ್ತು ಅಕ್ಟೋಬರ್ 7 ರಂದು ಹಮಾಸ್ ಉಗ್ರಗಾಮಿಗಳು ಇಸ್ರೇಲ್…

Read More