Author: kannadanewsnow09

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ LKG, UKG ಹಾಗೂ 1ನೇ ತರಗತಿ ಪ್ರವೇಶಾತಿಗೆ ಶಿಕ್ಷಣ ಇಲಾಖೆಯಿಂದ ಗರಿಷ್ಟ ವಯೋಮಿತಿ ನಿಗದಿಪಡಿಸಿ ಆದೇಶಿಸಿದೆ. ಅಲ್ಲದೇ 8 ವರ್ಷ ಮೀರಿದ ವಯೋಮಾನದ ಮಕ್ಕಳನ್ನು 1ನೇ ತರಗತಿ ಪ್ರವೇಶಕ್ಕೆ ನಿರ್ಬಂಧ ಕೂಡ ವಿಧಿಸಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 26-07-2022ರಂದು ಹೊರಡಿಸಿದಂತ ಆದೇಶದಲ್ಲಿ ಜೂನ್ 1ನೇ ತಾರೀಕಿಗೆ ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರುವ ಮಗುವನ್ನು 1ನೇ ತರಗತಿಗೆ ದಾಖಲಿಸಲು ವಯೋಮಿತಿ ನಿಗದಿ ಪಡಿಸಲಾಗಿತ್ತು. ಅಲ್ಲದೇ 25-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ತಿದ್ದುಪಡಿ ಆದೇಶ ಮಾಡಲಾಗಿತ್ತು ಎಂದಿದ್ದಾರೆ. ಈಗಾಗಲೇ LKG, UKG ಮತ್ತು 1ನೇ ತರಗತಿ ಪ್ರವೇಶಕ್ಕೆ ದಾಖಲಾತಿಗೆ ಕನಿಷ್ಠ ಅರ್ಹ ವಯೋಮಾನವನ್ನು ಪರಿಷ್ಕರಿಸಿ ನಿಗಧಿ ಪಡಿಸಲಾಗಿದೆ. ಆದ್ರೇ ಗರಿಷ್ಠ ವಯೋಮಾನ ಪರಿಷ್ಕರಿಸಿಲ್ಲ. ಈ ಗರಿಷ್ಠ ವಯೋಮಾನವನ್ನು ಈ ಕೆಳಗಿನಂತೆ ನಿಗದಿ ಪಡಿಸಿದೆ ಅಂತ ಹೇಳಿದ್ದಾರೆ. ಹೀಗಿದೆ LKG, UKG ಹಾಗೂ 1ನೇ…

Read More

ಮಂಗಳೂರು : ಮಾಧ್ಯಮ ಪ್ರತಿನಿಧಿಗಳು ಹಮ್ಮಿಕೊಂಡಿರುವ ಹಸಿರೇ ಉಸಿರು ಸೇರಿದಂತೆ ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾದ ಮಹತ್ವದ ಕಾರ್ಯಕ್ರಮ ವಾಗಿದೆ ಎಂದು ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆ ಗಾರರಾದ ಕೆ.ವಿ. ಪ್ರಭಾಕರ್ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಅರಣ್ಯ ಇಲಾಖೆ ಸಹಾಭಾಗಿತ್ವದಲ್ಲಿ ನಗರದ ಕದ್ರಿ ಪಾರ್ಕ್ ನಲ್ಲಿ ಶನಿವಾರ ಹಮ್ಮಿಕೊಂಡ ‘ಹಸಿರೇ ಉಸಿರು’ ವನಮ ಹೋತ್ಸವ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಾಧ್ಯಮ ಪ್ರತಿನಿಧಿಗಳು ತಮ್ಮ ವೃತ್ತಿಯ ಜೊತೆ ಗ್ರಾಮ ವಾಸ್ತವ್ಯ, ವನಮಹೋತ್ಸವ, ಸರಕಾರಿ ಶಾಲೆ,ಅಂಗನವಾಡಿಗಳಿಗೆ ನೆರವು ಸೇರಿದಂತೆ ಸಾಮಾಜಿಕ ಹೊಣೆಗಾರಿ ಕೆಯನ್ನುಅರಿತು ಕಾರ್ಯ ನಿರ್ವಹಿಸು ತ್ತಿರುವುದು ಮಾದರಿ ಯಾಗಿದೆ ಎಂದು ಪ್ರಭಾಕರ್ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡುತ್ತಾ, ಪತ್ರಕರ್ತರು ಸಾಮಾಜಿಕ ಬದ್ಧತೆಯನ್ನು ಮರೆಯ ಬಾರದು.ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ…

Read More

ಬ್ಯೂನಸ್ ಐರಿಸ್: ಅರ್ಜೆಂಟೀನಾ ಹಮಾಸ್ ಅನ್ನು ಭಯೋತ್ಪಾದಕ ಗುಂಪು ಎಂದು ಘೋಷಿಸಿದೆ ಮತ್ತು ಹಣಕಾಸಿನ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿದೆ. ಅಧ್ಯಕ್ಷ ಜೇವಿಯರ್ ಮಿಲ್ಲೆ ಅರ್ಜೆಂಟೀನಾವು ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ನೊಂದಿಗೆ ದೃಢವಾಗಿ ಹೊಂದಿಕೊಳ್ಳಬೇಕೆಂದು ಬಯಸುತ್ತಾರೆ.  ಅಕ್ಟೋಬರ್ 7 ರಂದು ಇಸ್ರೇಲ್ನಲ್ಲಿ ಫೆಲೆಸ್ತೀನ್ ಗುಂಪು ನಡೆಸಿದ ದಾಳಿಯನ್ನು ಉಲ್ಲೇಖಿಸಿ ಮಿಲ್ಲೆ ಅವರ ಕಚೇರಿ ಈ ಘೋಷಣೆ ಮಾಡಿದೆ. ಇದು ಇಸ್ರೇಲ್ನ 76 ವರ್ಷಗಳ ಇತಿಹಾಸದಲ್ಲಿ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಒಂದಾಗಿದೆ. ಹಮಾಸ್ ನೊಂದಿಗೆ ಇರಾನ್ ನ ನಿಕಟ ಸಂಬಂಧವನ್ನು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ, ಇದು ದೇಶದ ಯಹೂದಿ ತಾಣಗಳ ಮೇಲೆ ನಡೆದ ಎರಡು ಮಾರಣಾಂತಿಕ ಭಯೋತ್ಪಾದಕ ದಾಳಿಗಳಿಗೆ ಅರ್ಜೆಂಟೀನಾವನ್ನು ದೂಷಿಸುತ್ತಿದೆ. ಹಮಾಸ್ ಆರೋಪ ಏತನ್ಮಧ್ಯೆ, ಇಸ್ರೇಲ್ ನಿರಂತರವಾಗಿ ಹಮಾಸ್ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡಿದೆ. ಗಾಝಾದಲ್ಲಿ 70ಕ್ಕೂ ಹೆಚ್ಚು ಫೆಲೆಸ್ತೀನೀಯರು ಸಾವನ್ನಪ್ಪಿದ್ದಾರೆ. ಇಸ್ರೇಲ್ ಜನರ ಯೋಜಿತ ಹತ್ಯಾಕಾಂಡವನ್ನು ನಡೆಸುತ್ತಿದೆ ಎಂದು ಹಮಾಸ್ ಅಧಿಕಾರಿಯೊಬ್ಬರು ಆರೋಪಿಸಿದ್ದಾರೆ. ಪೂರ್ವ ಗಾಝಾ ನಗರದ ಸಾವಿರಾರು ಫೆಲೆಸ್ತೀನೀಯರನ್ನು ಇಸ್ರೇಲ್…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗೋದಕ್ಕೆ ಬೆಂಗಳೂರಿನಿಂದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಶಿವಮೊಗ್ಗಕ್ಕೆ ಇಂಡಿಗೋ ವಿಮಾನದಲ್ಲಿ ಆಗಮಿಸಿದ್ದರು. ಆದ್ರೇ ಹವಾಮಾನ ವೈಪರಿತ್ಯದ ಹಿನ್ನಲೆಯಲ್ಲಿ ವಿಮಾನವು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗದೇ ವಾಪಾಸ್ ಆಗಿರೋದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ಹಾಗೂ ತೀರ್ಥಹಳ್ಳಿಯಲ್ಲಿ ಪೊಲೀಸ್ ವಸತಿ ಗೃಹ, ನೂತನ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಲೋಕಾರ್ಪಣೆಗೊಳಿಸೋದಕ್ಕಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಬೆಂಗಳೂರಿನಿಂದ ಇಂಡಿಗೋ ವಿಮಾನದಲ್ಲಿ ಆಗಮಿಸಿದ್ದರು. ಇಂದು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದಂತ ಇಂಡಿಗೋ ವಿಮಾನಕ್ಕೆ ಹವಾಮಾನ ವೈಪರಿತ್ಯದ ಹಿನ್ನಲೆಯಲ್ಲಿ ಲ್ಯಾಂಡ್ ಗೆ ಅವಕಾಶ ನೀಡಲಿಲ್ಲ. ಹೀಗಾಗಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮರಳಿ ಬೆಂಗಳೂರಿಗೆ ವಾಪಾಸ್ ಆಗಿದೆ. ಈ ಹಿನ್ನಲೆಯಲ್ಲಿ ಸೊರಬ ಮತ್ತು ತೀರ್ಥಹಳ್ಳಿಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನಿಗದಿಯಾಗಿದ್ದಂತ ಕಾರ್ಯಕ್ರಮಗಳು ರದ್ದಾಗಿದ್ದಾವೆ. ಅಂದಹಾಗೇ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್‌ ಲ್ಯಾಂಡಿಂಗ್‌ ಸೇರಿದಂತೆ ವಿವಿಧ ತಂತ್ರಾಂಶವನ್ನು ಇನ್ನೂ ಅಳವಡಿಸಿಲ್ಲ. ಹೀಗಾಗಿ ರಾತ್ರಿ…

Read More

ಶಿವಮೊಗ್ಗ: ಕರ್ತವ್ಯ ಲೋಪ ಆರೋಪದಡಿ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ  ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಅವರನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ ಅಂತ ಆದೇಶದಲ್ಲಿ ತಿಳಿಸಿದ್ದಾರೆ. https://kannadanewsnow.com/kannada/police-deny-permission-for-bjps-protest-in-bengaluru-tomorrow/ https://kannadanewsnow.com/kannada/state-govt-transfers-dead-officer/

Read More

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯವರು ಹಗರಣಗಳಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ಅನಾವರಣ ಆಗಿದೆ. ರಾಜ್ಯದ ಮುಖ್ಯಮಂತ್ರಿ ಮತ್ತು ಸರಕಾರವು ದಲಿತವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಅದನ್ನು ಖಂಡಿಸುತ್ತೇವೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಸಮಾಜವಾದದ ಚಿಂತನೆಗಳು ಕಳಚಿ ಬಿದ್ದಿವೆ. ಸಮಾಜವಾದದ ಚಿಂತನೆ ಇದ್ದರೆ ಅವರು ಈ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಿರಲಿಲ್ಲ ಎಂದು ತಿಳಿಸಿದರು. ರಾಜ್ಯದಲ್ಲಿ ಪರಿಶಿಷ್ಟ ಪಂಗಡದ 17 ಶಾಸಕರಿದ್ದಾರೆ. ಈ ಪೈಕಿ 16 ಜನರು ಕಾಂಗ್ರೆಸ್ಸಿನವರು ಎಂದು ಅವರು, 3 ಜನ ಲೋಕಸಭಾ ಸದಸ್ಯರು ಗೆದ್ದಿದ್ದಾರೆ. ವಾಲ್ಮೀಕಿ ನಿಗಮಕ್ಕೆ ಮಾರ್ಚ್ 21ರಂದು ರಾಜ್ಯ ಸರಕಾರವು 187 ಕೋಟಿ ಹಣವನ್ನು ವರ್ಗಾವಣೆ ಮಾಡಿತ್ತು. ಮೇ 26ರವರೆಗೆ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಳ್ಳುವವರೆಗೆ ರಾಜ್ಯದ ಮುಖ್ಯಮಂತ್ರಿಗಳ ಗಮನಕ್ಕೆ ಹಗರಣ ಬಂದಿಲ್ಲವಾದರೆ ಆ ಎರಡು ತಿಂಗಳು ಕರ್ನಾಟಕದಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾದ ವಿರುದ್ಧದ ಹಗರಣಗಳು, ಮುಡಾ ಅಕ್ರಮ, ವಾಲ್ಮೀಕಿ ನಿಗದಮ ಅವ್ಯವಹಾರ ಸೇರಿದಂತೆ ವಿವಿಧ ಅಕ್ರಮಗಳ ವಿರುದ್ಧ ನಾಳೆ ಬೆಂಗಳೂರಲ್ಲಿ ಬಿಜೆಪಿ ಪ್ರತಿಭಟನೆಗೆ ನಿರ್ಧರಿಸಿತ್ತು. ಆದ್ರೇ ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲು ಉದ್ದೇಶಿಸಿತ್ತು. ನಾಳೆ ಮುಡಾ ಸೈಟ್, ವಾಲ್ಮೀಕಿ ಅಕ್ರಮ ಸೇರಿದಂತೆ ವಿವಿಧ ಹಗರಣಗಳ ವಿರುದ್ಧ ಪ್ರತಿಭಟನೆ ನಡೆಸೋದಕ್ಕೆ ನಿರ್ಧರಿಸಿತ್ತು. ಆದ್ರೇ ಬಿಜೆಪಿ ನಾಳೆ ಫ್ರೀಡಂ ಪಾರ್ಕ್ ನಲ್ಲಿ ನಡೆಸಲು ಉದ್ದೇಶಿಸಿದ್ದಂತ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಹೀಗಾಗಿ ನಾಳೆ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯೋದು ಡೌಟ್ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ. https://kannadanewsnow.com/kannada/house-bhagya-for-pourakarmikas-working-in-congress-office/ https://kannadanewsnow.com/kannada/state-govt-transfers-dead-officer/

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವಂತ ಗ್ಯಾರಂಟಿ ಯೋಜನೆಗಳು ಕೇವಲ ಮತಬ್ಯಾಂಕ್ ತೆವಲಿಗಾಗಿ ಮಾಡಿಕೊಂಡದ್ದೇ ಹೊರತು, ಜನರ ಅಭಿವೃದ್ಧಿಗಾಗಿ ಮಾಡಿದ್ದಲ್ಲ ಅಂತ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ಇಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಎಸ್‍ಇಪಿ ಟಿಎಸ್‍ಪಿ ದಲಿತರ ಹಣ ದುರುಪಯೋಗದ ಬಗ್ಗೆ ನಾವು ಹಲವು ಬಾರಿ ಗಮನ ಸೆಳೆದಿದ್ದೇವೆ. ಕಳೆದ ಆರ್ಥಿಕ ವರ್ಷದಲ್ಲಿ ದಲಿತ ಸಮುದಾಯದ ಶ್ರೇಯೋಭಿವೃದ್ಧಿಗೆ ಮೀಸಲಿಟ್ಟಿದ್ದ 11,114 ಕೋಟಿ ರೂ.ಗಳನ್ನು ಈ ಸರಕಾರ ಬೇರೆ ಬೇರೆ ಕಾರ್ಯಗಳಿಗೆ ದುರುಪಯೋಗ ಪಡಿಸಿಕೊಂಡಿತ್ತು ಎಂದು ಆಕ್ಷೇಪಿಸಿದರು. 7 ಡಿ ರದ್ದು ಮಾಡುವುದಾಗಿ ಹೇಳಿದ್ದರು. ಅದರಂತೆ 7 ಡಿ ರದ್ದು ಮಾಡಿದ್ದರು. ಆದರೂ, ದಲಿತರಿಗಾಗಿ ಮೀಸಲಿಟ್ಟ 14282 ಕೋಟಿ ರೂಗಳನ್ನು ಬೇರೆಡೆಗೆ ವರ್ಗಾಯಿಸಿದ್ದಾರೆ. 7 ಡಿ ರದ್ದು ಮಾಡಿದ್ದು, 7 ಸಿ ನಲ್ಲಿ ಗ್ಯಾರಂಟಿಗೆ ಹಣ ಕೊಡುತ್ತಿರುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದರಲ್ಲದೆ, ಲೂಟಿ ಮಾಡುವುದಾದರೆ ಹಿಂದಿನ ಬಾಗಿಲಾದರೇನು, ಮುಂದಿನ ಬಾಗಿಲಾದರೆ ಏನು ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯರ ನೇತೃತ್ವದ…

Read More

ಬೆಂಗಳೂರು : ಯಾವುದೇ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರೆದಿದ್ದ ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರಿಗೆ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಮನೆ ನೀಡುವುದಾಗಿ ಘೋಷಣೆ ಮಾಡಿದರು. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಶನಿವಾರ ನಡೆದ “ಕಾರ್ಯಕರ್ತರೊಂದಿಗೆ ನಿಮ್ಮ ಸಿಎಂ” (ಅಹವಾಲು ಸ್ವೀಕಾರ) ಕಾರ್ಯಕ್ರಮದಲ್ಲಿ ಮಾತನಾಡಿದರು. ನಾವು ಕಾಂಗ್ರೆಸ್ ಕಚೇರಿಯಲ್ಲಿ ಹಲವಾರು ವರ್ಷಗಳಿಂದ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಾ ಇದ್ದೇವೆ ನಮಗೆ ಮನೆ ಕೊಡಿ ಎಂದು ಜಯಂತಿ, ಅರ್ಚನಾ, ಸುಗಂಧಿ, ಆಶಾ, ಸಂಧ್ಯಾ ಅವರು ಮನವಿ ಸಲ್ಲಿಸಿದಾಗ “ನಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಾ ಇದ್ದೀರಾ. ನಿಮಗೆ ರಾಜೀವ್ ಗಾಂಧಿ ವಸತಿ ನಿಗಮದ ಅಡಿ ಮನೆ ನೀಡುವಂತೆ ಕ್ರಮ ತೆಗೆದುಕೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶೇ.90 ರಷ್ಟು ನಿಗಮ ಮಂಡಳಿಯ ಅಧ್ಯಕ್ಷರನ್ನು ನೇಮಕಾತಿ ಮಾಡಲಾಗಿದೆ.…

Read More

ಬೆಂಗಳೂರು : ಯಾವುದೇ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರೆದಿದ್ದ ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರಿಗೆ ಭರವಸೆ ನೀಡಿದರು. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಶನಿವಾರ ನಡೆದ “ಕಾರ್ಯಕರ್ತರೊಂದಿಗೆ ನಿಮ್ಮ ಸಿಎಂ” (ಅಹವಾಲು ಸ್ವೀಕಾರ) ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಕಲಚೇತನರ ಬಳಿಗೆ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿಗಳು “ಕಾರ್ಯಕರ್ತರ ಎಲ್ಲಾ ಅಹವಾಲುಗಳನ್ನು ವಿಂಗಡಿಸಿ ನನಗೆ ನೀಡಬೇಕು” ಎಂದು ಅಧಿಕಾರಿಗಳಿಗೆ ತಿಳಿಸಿದರು. ತ್ರಿಚಕ್ರ ವಾಹನ, ಸರ್ಕಾರಿ ಉದ್ಯೋಗ,ನಿಗಮ ಮಂಡಳಿಯಲ್ಲಿ ಅವಕಾಶ, ಗುತ್ತಿಗೆ ನೌಕರಿ, ಸ್ವಂತ ಉದ್ಯೋಗಕ್ಕೆ ಅನುದಾನ, ಸಾಲ ಸವಲತ್ತು ಸೇರಿ ನಾನಾ ಬೇಡಿಕೆಗಳನ್ನು ವಿಕಲಚೇತನ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿಗಳ ಮುಂದಿಟ್ಟರು. ನಾನು ಪಕ್ಷಕ್ಕೆ ದುಡಿಯುತ್ತಿದ್ದು, ಒಂದು ಮನೆ ಮಂಜೂರು ಮಾಡಿಕೊಡಿ ಎಂದು ಯಾದಗಿರಿ ಜಿಲ್ಲೆಯ ರಾಮಸಮುದ್ರದ ಚಂದಪಾಷ ಅವರ ಮನವಿಗೆ ಸ್ಪಂದಿಸಿದ ಸಿಎಂ ಅವರು “ನಿಮ್ಮ ಜಿಲ್ಲೆಯ ಜಿಲ್ಲಾ ಪಂಚಾಯಿತಿ…

Read More