Subscribe to Updates
Get the latest creative news from FooBar about art, design and business.
Author: kannadanewsnow09
ಗುಜರಾತ್: ಅಹಮದಾಬಾದ್ನಿಂದ 60 ಜನರನ್ನು ಹೊತ್ತುಕೊಂಡು ದಿಯುಗೆ ಹೊರಟಿದ್ದ ಇಂಡಿಗೋ ವಿಮಾನವು ಎರಡು ಎಂಜಿನ್ಗಳಲ್ಲಿ ಒಂದಕ್ಕೆ ಬೆಂಕಿ ಹೊತ್ತಿಕೊಂಡ ನಂತರ ಟೇಕ್ಆಫ್ ಅನ್ನು ಸ್ಥಗಿತಗೊಳಿಸಿದೆ ಎಂದು ವರದಿಯೊಂದು ತಿಳಿಸಿದೆ. ಟೇಕ್ಆಫ್ಗೆ ಕೆಲವೇ ಕ್ಷಣಗಳ ಮೊದಲು ಈ ಘಟನೆ ಬೆಳಕಿಗೆ ಬಂದಿದ್ದು, ಪೈಲಟ್ಗಳು ಪ್ರಯಾಣವನ್ನು ಸ್ಥಗಿತಗೊಳಿಸಿ ಪ್ರಯಾಣಿಕರನ್ನು ತಕ್ಷಣವೇ ಇಳಿಸುವಂತೆ ಸೂಚಿಸಿದರು. ಪೈಲಟ್ ವಾಯು ಸಂಚಾರ ನಿಯಂತ್ರಣಕ್ಕೆ “ಮೇಡೇ” ಕರೆ ಕಳುಹಿಸಿದಾಗ ವಿಮಾನವು ಟೇಕ್ಆಫ್ಗಾಗಿ ರನ್ವೇಯಿಂದ ಚಲಿಸಲು ಪ್ರಾರಂಭಿಸಿತ್ತು. ಬೆಳಿಗ್ಗೆ 11 ಗಂಟೆಗೆ ಅಹಮದಾಬಾದ್ ವಿಮಾನ ನಿಲ್ದಾಣದಿಂದ ವಿಮಾನ ಹೊರಡುವ ಮೊದಲೇ ATR76 ವಿಮಾನದ ಎಂಜಿನ್ ಬೆಂಕಿಗೆ ಆಹುತಿಯಾಯಿತು. https://kannadanewsnow.com/kannada/transfer-of-municipal-commissioners-for-a-single-day-state-government-order/ https://kannadanewsnow.com/kannada/explosive-found-at-the-private-bus-station-in-kalasipalyam-bangalore/
ಬೆಂಗಳೂರು: ನಗರದ ಜನರು ಬೆಚ್ಚಿ ಬೀಳುವಂತೆ ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ಸ್ಪೋಟಕ ಪತ್ತೆಯಾಗಿದೆ. ಈ ಮೂಲಕ ಜನರನ್ನು ಆತಂಕಕಕ್ಕೆ ದೂಡಿದೆ. ಬೆಂಗಳೂರಿನ ಕಲಾಸಿಪಾಳ್ಯದಲ್ಲಿರುವಂತ ಖಾಸಗಿ ಬಸ್ ನಿಲ್ದಾಣದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದಾವೆ. ಸ್ಥಳಕ್ಕೆ ಪೊಲೀಸರು, ಶ್ವಾನನದಳ, ಬಾಂಬ್ ನಿಷ್ಕ್ರೀಯ ದಳ ದೌಡಾಯಿಸಿ, ಪರಿಶೀಲನೆ ನಡೆಸುತ್ತಿದೆ. ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಪತ್ತೆಯಾದಂತ ಸ್ಪೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತ್ತೆಯಾದಂತ ಒಂದು ಬ್ಯಾಗ್ ನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಮಾಹಿತಿ ಇದೆ. ಸ್ಪೋಟಕ ವಸ್ತು ಪತ್ತೆಯಾದ ಹಿನ್ನಲೆಯಲ್ಲಿ ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದ ಮೂಲೆ ಮೂಲೆಯಲ್ಲೂ ತಪಾಸಣೆಯನ್ನು ಪೊಲೀಸರು ಮಾಡುತ್ತಿದ್ದಾರೆ. ಸದ್ಯ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದು, ಸ್ಪೋಟ ವಸ್ತುಗಳನ್ನು ಬಸ್ ನಿಲ್ದಾಣದಲ್ಲಿ ಬ್ಯಾಗ್ ನಲ್ಲಿ ಇರಿಸಿ ತೆರಳಿದವರು ಯಾರು ಎನ್ನುವ ಬಗ್ಗೆ ತನಿಖೆಯ ನಂತ್ರ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/transfer-of-municipal-commissioners-for-a-single-day-state-government-order/ https://kannadanewsnow.com/kannada/breaking-the-government-has-made-an-important-decision-to-conduct-re-census-in-the-state-from-september-22-to-october-7/
ನವದೆಹಲಿ: ಪೇಪಾಲ್ ಯುಪಿಐ ಬಳಸಿ ದಿನಸಿಗಳಿಗೆ ಪಾವತಿಸುವಷ್ಟು ಗಡಿಗಳಲ್ಲಿ ಹಣವನ್ನು ಕಳುಹಿಸುವುದನ್ನು ಸುಲಭಗೊಳಿಸಲು ಬಯಸುತ್ತದೆ. ಬುಧವಾರ, ಕಂಪನಿಯು “ಪೇಪಾಲ್ ವರ್ಲ್ಡ್” ಅನ್ನು ಪ್ರಾರಂಭಿಸುವ ಮೂಲಕ ಆ ದಿಕ್ಕಿನಲ್ಲಿ ಪ್ರಮುಖ ಹೆಜ್ಜೆ ಇಟ್ಟಿತು. ಇದು ಭಾರತದ ಯುಪಿಐ ಸೇರಿದಂತೆ ವಿಶ್ವದ ಕೆಲವು ದೊಡ್ಡ ಡಿಜಿಟಲ್ ವ್ಯಾಲೆಟ್ಗಳು ಮತ್ತು ಪಾವತಿ ವ್ಯವಸ್ಥೆಗಳನ್ನು ಸಂಪರ್ಕಿಸುವ ಜಾಗತಿಕ ಪಾವತಿ ವೇದಿಕೆಯಾಗಿದೆ. ಈ ಕ್ರಮವು ಸುಮಾರು ಎರಡು ಬಿಲಿಯನ್ ಬಳಕೆದಾರರಿಗೆ ತಡೆರಹಿತ ಪಾವತಿಗಳನ್ನು ತರಬಹುದು. ಈ ಶರತ್ಕಾಲದಿಂದ, ಯುಪಿಐನಂತಹ ದೇಶೀಯ ವ್ಯಾಲೆಟ್ಗಳ ಬಳಕೆದಾರರು ತಮ್ಮ ಅಸ್ತಿತ್ವದಲ್ಲಿರುವ ಅಪ್ಲಿಕೇಶನ್ಗಳನ್ನು ಬಳಸಿಕೊಂಡು ಶಾಪಿಂಗ್ ಮಾಡಲು, ಪಾವತಿಸಲು ಮತ್ತು ಅಂತರರಾಷ್ಟ್ರೀಯವಾಗಿ ಹಣವನ್ನು ಕಳುಹಿಸಲು ಸಾಧ್ಯವಾಗುತ್ತದೆ. ವೇದಿಕೆಯು ಆರಂಭದಲ್ಲಿ ಪೇಪಾಲ್, ವೆನ್ಮೊ, ಯುಪಿಐ, ಮರ್ಕಾಡೊ ಪಾಗೊ ಮತ್ತು ಟೆನ್ಸೆಂಟ್ನ ಟೆನ್ಪೇ ಗ್ಲೋಬಲ್ ಅನ್ನು ಸಂಪರ್ಕಿಸುತ್ತದೆ. ಪೇಪಾಲ್ ವರ್ಲ್ಡ್ನೊಂದಿಗೆ ಯುಪಿಐ ಜಾಗತಿಕವಾಗಿ ಹೋಗುತ್ತದೆ ಭಾರತದ ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಈಗ ಈ ಜಾಗತಿಕ ಮಿಶ್ರಣದ ಭಾಗವಾಗಲಿದೆ. ಎನ್ಪಿಸಿಐ ಇಂಟರ್ನ್ಯಾಷನಲ್ ಪೇಮೆಂಟ್ಸ್ ಲಿಮಿಟೆಡ್ನ ಸಿಇಒ ರಿತೇಶ್…
ಬೆಂಗಳೂರು: ರಾಜ್ಯ ಸರ್ಕಾರದಿಂದ 66 ಪೌರಾಯುಕ್ತರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಆದರೆ ಶಾಕಿಂಗ್ ಎನ್ನುವಂತೆ ಕೇವಲ ಒಂದು ದಿನದ ಮಟ್ಟಿಗೆ 50 ಪೌರಾಯುಕ್ತರನ್ನು ವರ್ಗಾವಣೆ ಮಾಡಿದೆ. ಆ ಬಳಿಕ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಹುದ್ದೆಯಲ್ಲೇ ಮುಂದುವರೆಸುವಂತೆ ಆದೇಶಿಸಿದೆ. ಈ ರೀತಿಯಾಗಿ ಒಂದು ದಿನದ ಮಟ್ಟಿಗೆ ಪೌರಾಯುಕ್ತರನ್ನು ವರ್ಗಾವಣೆ ಮಾಡಿರುವುದು ಹಲವು ಅನುಮಾನ, ಗೊಂದಲಕ್ಕೂ ಕಾರಣವಾಗಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಎಂಬುವರು ಅಧಿಸೂಚನೆ ಹೊರಡಿಸಿದ್ದಾರೆ. ಕರ್ನಾಟಕ ಪೌರಾಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳಿಗೆ ಮುಖ್ಯಾಧಿಕಾರಿ ಶ್ರೇಣಿ-1 (ವೇತನ ಶ್ರೇಣಿ ರೂ. 65950-124900) ವೃಂದದಿಂದ ಪೌರಾಯುಕ್ತರು ಶ್ರೇಣಿ-2 (ವೇತನ ಶ್ರೇಣಿ ರೂ.83700-155200) ವೃಂದಕ್ಕೆ ಕರ್ನಾಟಕ ನಾಗರಿಕ ಸೇವಾ ನಿಯಮಗಳು 1958ರ ನಿಯಮ 42ರಡಿ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಾನಪನ್ನ ಆಧಾರದ ಮೇಲೆ ಮುಂಬಡ್ತಿ ನೀಡಿ ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದ್ದಾರೆ. ಮುಂದುವರೆದು, ಮುಖ್ಯಾಧಿಕಾರಿ ಶ್ರೇಣಿ-1 (ವೇತನ ಶ್ರೇಣಿ ರೂ. 65950-124900) ವೃಂದದಿಂದ ಪೌರಾಯುಕ್ತರು ಶ್ರೇಣಿ-2 (ವೇತನ ಶ್ರೇಣಿ ರೂ.83700-155200)…
ಬೆಂಗಳೂರು: ರಾಜ್ಯ ಸರ್ಕಾರದಿಂದ 66 ಪೌರಾಯುಕ್ತರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಒಂದು ದಿನದ ಮಟ್ಟಿಗೆ ಸಾಗರ ನಗರಸಭೆ ಪೌರಾಯುಕ್ತರಾಗಿ ಧನಂಜಯ ಡಿ.ಬಿ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಸಂಬಂಧ ಪೌರಾಡಳಿತ ಇಲಾಖೆಯಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ಉಡುಪಿ ಜಿಲ್ಲೆಯ ಯೋಜನಾ ನಿರ್ದೇಶಕರ ಕಚೇರಿಯ ಜಿಲ್ಲಾ ನಗರ ವ್ಯವಸ್ಥಾಪಕರಾಗಿದ್ದಂತ ಧನಂಜಯ ಡಿ.ಬಿ ಅವರನ್ನು ಒಂದು ದಿನದ ಮಟ್ಟಿಗೆ ಸಾಗರ ನಗರಸಭೆಯ ಪೌರಾಯುಕ್ತರ ಹುದ್ದೆಗೆ ಸ್ಥಳನಿಯುಕ್ತಿಗೊಳಿಸಿದೆ. ತದನಂತರ ಹಾಲಿ ಕಾರ್ಯನಿರ್ವಹಿಸುತ್ತಿರುವ ಹುದ್ದೆಯಲ್ಲಿ ಮುಂದುವರೆಸಿದೆ ಎಂಬುದಾಗಿ ಆದೇಶದಲ್ಲಿ ತಿಳಿಸಿದ್ದಾರೆ. ಸಾಗರ ನಗರಸಭೆಯ ಪೌರಾಯುಕ್ತರಾಗಿ ಧನಂಜಯ ಡಿ.ಬಿ ಅವರನ್ನು ಒಂದು ದಿನದ ಮಟ್ಟಿಗೆ ವರ್ಗಾವಣೆ ಮಾಡಿರುವ ಕಾರಣ, ಹಾಲಿ ನಗರಸಭೆಯ ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರು ಒಂದು ದಿನದ ಮಟ್ಟಿಗೆ ತಮ್ಮ ಹುದ್ದೆಯಿಂದ ವರ್ಗಾವಣೆಗೊಂಡಂತೆ ಆಗಿದೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/state-government-order-to-transfer-66-municipal-commissioners-for-a-day/
ಬೆಂಗಳೂರು: ರಾಜ್ಯ ಸರ್ಕಾರದಿಂದ 66 ಪೌರಾಯುಕ್ತರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಆದರೆ ಶಾಕಿಂಗ್ ಎನ್ನುವಂತೆ ಕೇವಲ ಒಂದು ದಿನದ ಮಟ್ಟಿಗೆ 50 ಪೌರಾಯುಕ್ತರನ್ನು ವರ್ಗಾವಣೆ ಮಾಡಿದೆ. ಆ ಬಳಿಕ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಹುದ್ದೆಯಲ್ಲೇ ಮುಂದುವರೆಸುವಂತೆ ಆದೇಶಿಸಿದೆ. ಈ ರೀತಿಯಾಗಿ ಒಂದು ದಿನದ ಮಟ್ಟಿಗೆ ಪೌರಾಯುಕ್ತರನ್ನು ವರ್ಗಾವಣೆ ಮಾಡಿರುವುದು ಹಲವು ಅನುಮಾನ, ಗೊಂದಲಕ್ಕೂ ಕಾರಣವಾಗಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಎಂಬುವರು ಅಧಿಸೂಚನೆ ಹೊರಡಿಸಿದ್ದಾರೆ. ಕರ್ನಾಟಕ ಪೌರಾಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳಿಗೆ ಮುಖ್ಯಾಧಿಕಾರಿ ಶ್ರೇಣಿ-1 (ವೇತನ ಶ್ರೇಣಿ ರೂ. 65950-124900) ವೃಂದದಿಂದ ಪೌರಾಯುಕ್ತರು ಶ್ರೇಣಿ-2 (ವೇತನ ಶ್ರೇಣಿ ರೂ.83700-155200) ವೃಂದಕ್ಕೆ ಕರ್ನಾಟಕ ನಾಗರಿಕ ಸೇವಾ ನಿಯಮಗಳು 1958ರ ನಿಯಮ 42ರಡಿ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಾನಪನ್ನ ಆಧಾರದ ಮೇಲೆ ಮುಂಬಡ್ತಿ ನೀಡಿ ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದ್ದಾರೆ. ಮುಂದುವರೆದು, ಮುಖ್ಯಾಧಿಕಾರಿ ಶ್ರೇಣಿ-1 (ವೇತನ ಶ್ರೇಣಿ ರೂ. 65950-124900) ವೃಂದದಿಂದ ಪೌರಾಯುಕ್ತರು ಶ್ರೇಣಿ-2 (ವೇತನ ಶ್ರೇಣಿ ರೂ.83700-155200)…
ಬೆಂಗಳೂರು: ನಗರದಲ್ಲಿ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಕ್ಲು ಶಿವ ಹತ್ಯೆಗೆ ಸುಪಾರಿ ಪಡೆದಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಲ್ಲಿ ರೌಡಿ ಶೀಟರ್ ಶಿವಕುಮಾರ್ ಬರ್ಬರ ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ತಾವೇ ಮಾಡಿದ್ದಾಗಿ ಪೊಲೀಸರ ಮುಂದೆ ಆರೋಪಿಗಳು ಶರಣಾಗಿದ್ದಾರೆ. ಈ ಬೆನ್ನಲ್ಲೇ ಬಿಗ್ ಟ್ವಿಸ್ಟ್ ಎನ್ನುವಂತೆ ಬಿಕ್ಲು ಶಿವ ಹತ್ಯೆಗೆ ಸುಪಾರಿ ಪಡೆದಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ಮೂಲದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಬೆಂಗಳೂರು : ರಾಜ್ಯದಲ್ಲಿರುವ ಎಲ್ಲ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೆ, ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದ್ದಾರೆ. ದೊಡ್ಡ ಸಂಖ್ಯೆಯ ಸಾಕು ಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗುತ್ತದೆ. ಮಿಗಿಲಾಗಿ ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ ಎಂಬ ಅಂಶವನ್ನೂ ಉಲ್ಲೇಖಿಸಿದ್ದಾರೆ. ಅರಣ್ಯ ಸಂವರ್ಧನೆಯಾಗದಿದ್ದರೆ ಅದು ಆ ಅರಣ್ಯದಲ್ಲಿ ಹರಿಯುವ ನದಿಗಳ ಮೇಲೂ…
ಬೆಂಗಳೂರು: ರಾಜ್ಯದ ರೈತರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದಾರೆ. ಅದೇ ಕುಸುಮ್ ಬಿ ಯೋಜನೆಯ ಅಡಿಯಲ್ಲಿ ಸೋಲಾರ್ ಕೃಷಿ ಪಂಪ್ ಸೆಟ್ ಗಳಿಗೆ ಶೇ.80ರಷ್ಟು ಸಬ್ಸಿಡಿಯನ್ನು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ಕುಸುಮ್ ಬಿ ಯೋಜನೆ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಇಂಧನ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದರು. ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಲು, ಕೇಂದ್ರ ಸರ್ಕಾರ ಶೇ.30, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ಒದಗಿಸುತ್ತಿದ್ದು, ಫಲಾನುಭವಿಗಳು ಶೇ.20ರಷ್ಟು ಭರಿಸಬೇಕಿದೆ ಎಂದರು. ಈ ಯೋಜನೆಯಡಿ 40 ಸಾವಿರ ಪಂಪ್ ಸೆಟ್ ಗಳಿಗೆ ಅನುಮೋದನೆ ನೀಡಲಾಗಿದ್ದು, ಇದನ್ನು ಅನುಷ್ಠಾನಗೊಳಿಸುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಬೇಕು. 25 ಸಾವಿರ ರೈತರು ಹೆಚ್ಚುವರಿಯಾಗಿ ಕುಸುಮ್ ಬಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ. ಯೋಜನೆಯಡಿ ರಾಜ್ಯ ಸರ್ಕಾರ 752 ಕೋಟಿ ರೂ. ವೆಚ್ಚ ಮಾಡಲಿದೆ. ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿದ ಬಳಿಕ ಸಬ್ಸಿಡಿ ಮೊತ್ತ ಕಡಿಮೆಯಾಗಲಿದೆ ಎಂದರು. ರೈತರಿಗೆ ಸ್ವಯಂ ವಿದ್ಯುತ್ ಮೂಲಸೌಕರ್ಯ ಕಲ್ಪಿಸಲು…
ಬೆಂಗಳೂರು: ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್ ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್ ಲೈನ್ ಆಧರಿತ ಸೇವೆಗಳು ಜುಲೈ 25ರ ರಾತ್ರಿ 8.30 ಗಂಟೆಯಿಂದ ಜುಲೈ 27ರ ರಾತ್ರಿ 10 ಗಂಟೆಯವರೆಗೆ ಲಭ್ಯವಿರುವುದಿಲ್ಲ. ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳ ಈ ಕೆಳಕಂಡ ನಗರ ಉಪ ವಿಭಾಗದ ಗ್ರಾಹಕರಿಗೆ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಬೆಸ್ಕಾಂ: ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಉಪ ವಿಭಾಗಗಳು, ಶಿಢ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಸಿರಾ, ಚೆನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಗೌರಿಬಿದನೂರು, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್ , ಹರಪ್ಪನಹಳ್ಳಿ, ಹರಿಹರ, ಹಿರಿಯೂರು ಮತ್ತು ತಿಪಟೂರು ನಗರ ಉಪ ವಿಭಾಗಗಳ ವ್ಯಾಪ್ತಿಗಳಲ್ಲಿ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ. ಸೆಸ್ಕ್…