Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ಸದಾನಂದ ಆಚಾರಿ ಎನ್ನುವವರ ಕೊಲೆ ಪ್ರಕರಣ ನಡೆದಿತ್ತು. ಈ ಸಂಬಂಧ ಈಗಾಗಲೇ ವಿಎ ವೆಂಕಟೇಶ್ ಆಚಾರಿ, ರಿಯಲ್ ಎಸ್ಟೇಟ್ ಉದ್ಯಮಿ ರವೀಂದ್ರ ಕಾಮತ್ ಹಾಗೂ ಪ್ರದೀಪ್ ವಿರುದ್ಧ ಕೇಸ್ ದಾಖಲಾಗಿತ್ತು, ಈ ಬೆನ್ನಲ್ಲೇ ವೆಂಕಟೇಶ್ ಆಚಾರಿ ಮೊದಲ ಪತ್ನಿ ವಿರುದ್ಧವೂ FIR ದಾಖಲಾಗಿದೆ. ಈ ಕುರಿತಂತೆ ವೆಂಕಟೇಶ್ ಆಚಾರಿಯ ಅವರ 2ನೇ ಪತ್ನಿ ರಶ್ಮಿ ದಿನಾಂಕ 16-06-2025ರಂದು ಸಂಜೆ 6.30ರ ವೇಳೆಗೆ ಸಾಗರ ಪೇಟೆ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಅದರಲ್ಲಿ ದಿನಾಂಕ 15-06-2025ರಂದು ಸೋದರ ಮಾವ ಸದಾನಂದ ಅವರನ್ನು ಗಂಡ ವೆಂಕಟೇಶ್ ಆಚಾರಿ, ಎಸ್ ಎನ್ ನಗರದ ರವೀಂದ್ರ ಕಾಮತ್ ಮತ್ತು ವಿಜಯನಗರದ ಪ್ರದೀಪ್ ಅವರು ಸೇರಿ ಕೊಲೆ ಮಾಡಿರುತ್ತಾರೆ ದೂರು ದಾಖಲಾಗಿರುತ್ತದೆ ಎಂದಿದ್ದಾರೆ. ಇನ್ನೂ ದಿನಾಂಕ 16-06-2025ರಂದು ಮಧ್ಯಾಹ್ನ 3 ಗಂಟೆಗೆ ಪಿರ್ಯಾದಿದಾರರಾದ ರಶ್ಮಿ ಸಾಗರ ಟೌನ್ ಹಳೇ ಖಾಸಗಿ ಬಸ್ ನಿಲ್ದಾಣ ಮುಂದೆ ಬಿಹೆಚ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಪಿರ್ಯಾದಿ ಗಂಡನ…
ಬೆಂಗಳೂರು: ಇರಾನ್ ನಲ್ಲಿ ನೆಲೆಸಿರುವ ರಾಜ್ಯದ ವಿದ್ಯಾರ್ಥಿಗಳನ್ನು ಕರೆತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂಬುದಾಗಿ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಡಾ. ಆರತಿ ಕೃಷ್ಣ ತಿಳಿಸಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವೆ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿಯು ಆ ದೇಶಗಳಲ್ಲಿ ನೆಲೆಸಿರುವ ವಿದೇಶಿಗರಿಗೆ ಆತಂಕ ಉಂಟು ಮಾಡಿದೆ. ಕರ್ನಾಟಕದ ಸುಮಾರು 9 ವಿದ್ಯಾರ್ಥಿಗಳು ಇರಾನ್ ದೇಶದ ರಾಜದಾನಿಯಾದ ತೆಹರಾನ್ ಸಮೀಪದಲ್ಲಿರುವ Shahid Behshti Medical Univerity ಯಲ್ಲಿ ವೈದ್ಯಕೀಯ ಶಿಕ್ಷಣ ಓದುತ್ತಿದ್ದು, ಉದ್ವಿಗ್ನ ಪರಿಸ್ಥಿತಿಯಿಂದಾಗಿ ವಿದ್ಯಾರ್ಥಿಗಳು ಆತಂಕಗೊಂಡಿದ್ದು,ಈ ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿಯಾದ ನದೀಮ್ ಹುಸೇನ್ ರವರು ಹಾಗೂ ಬೆಂಗಳೂರಿನಲ್ಲಿರುವ ಅವರ ಪೋಷಕರು ಅನಿವಾಸಿ ಭಾರತೀಯ ಸಮಿತಿ, ಬೆಂಗಳೂರು ಕಛೇರಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿ, ಅವರ ನೋವನ್ನು ತೋಡಿಕೊಂಡಿದ್ದು ಕೂಡಲೇ ದೇಶಕ್ಕೆ ಹಿಂದಿರುಗಲು ಇಚ್ಚೆಯನ್ನು ವ್ಯಕ್ತಪಡಿಸಿರುತ್ತಾರೆ. ಇದಕ್ಕೆ ಸ್ಪಂದಿಸಿದ ಅನಿವಾಸಿ ಭಾರತೀಯ ಸಮಿತಿ, ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ರವರು ಕೂಡಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದು ಇರಾನ್ನಯಲ್ಲಿ…
ಬೆಂಗಳೂರು : ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಎಸ್ಎಸ್ಎಲ್ಸಿ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಗಳು ದ್ವಿತೀಯ/ಅಂತಿಮ ವರ್ಷದ ಪಿಯುಸಿಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಸಿಬಿಎಸ್ಸಿ ಮತ್ತು ಐಸಿಎಸ್ಇ ವತಿಯಿಂದ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರೂ ಸಹ ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನ ಪಡೆಯಲು ಅರ್ಹರಿರುತ್ತಾರೆ. ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್ ಕೋರ್ಸುಗಳಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು ಮತ್ತು ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಈ ಕೋರ್ಸ್ಗಳಿಗೆ ಪಾಸಾಗಿರಬೇಕು ಮತ್ತು ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು ಎಲ್ಲಾ ಕೋರ್ಸುಗಳಲ್ಲಿ ಪ್ರತಿ ವರ್ಷದ ಪರೀಕ್ಷೆ ಅಥವಾ ಸೆಮಿಸ್ಟರ್ಗಳಲ್ಲಿ compartmental/ carry over system ರಡಿ ಪಾಸಾಗಿದ್ದರೆ ಅಂತಹವರು ಬಹುಮಾನ ಹಣ ಪಡೆಯಲು ಅರ್ಹರಿರುವುದಿಲ್ಲ. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ…
ಧಾರವಾಡ: 2025-26 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು ಜಿಲ್ಲೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳಿಗೆ ಪ್ರೋತ್ಸಾಹವಾಗಿ ತಲಾ ರೂ.1 ಲಕ್ಷದಂತೆ ಇಲಾಖೆಯಿಂದ ಪ್ರೋತ್ಸಾಹಧನವನ್ನು ನೀಡಲು ತೀರ್ಮಾನಿಸಲಾಗಿದೆ. ಈ ಅನುದಾನದಲ್ಲಿ ರೂ.10 ಸಾವಿರಗಳನ್ನು ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ಮತ್ತು ರೂ.90 ಸಾವಿರಗಳನ್ನು ಶಾಲೆಯ ಎಸ್.ಡಿ.ಎಂ.ಸಿ ಗೆ ಅಗತ್ಯ ಕ್ರೀಡಾ ಸಾಮಾಗ್ರಿಗಳನ್ನು ಖರೀದಿ ಮಾಡಲು ಪ್ರೋತ್ಸಾಹಧನವನ್ನು ನೀಡಲಾಗುವುದು. ಜಿಲ್ಲೆಯ ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಆಸಕ್ತ ಸರ್ಕಾರಿ ಶಾಲೆಗಳು ಜೂನ್ 27, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಜೊತೆಗೆ ಪ್ರಶಸ್ತಿ ಪತ್ರಗಳು, ಶಾಲೆಯ ದಾಖಲೆಗಳು, ಮುಖ್ಯೋಪಾಧ್ಯಾಯರು ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರ…
ಧಾರವಾಡ: 110 ಕೆವಿ. ಯು.ಎ.ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ದಿನಾಂಕ: 20/06/2025 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು1ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ದಿನಾಂಕ: 20/06/2025 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎತ್ತಿನಗುಡ್ಡ, ಅಗ್ರಿ ಯುನಿವರಸಿಟಿ ಕ್ಯಾಂಪಸ್, ಕುಮಾರೇಶ್ವರ ನಗರ, ಸೈದಾಪೂರ, ಬೆಳಗಾವಿ ಮೇನ್ ರೋಡ್, ನಾರಾಯಣಪುರ, ಸಿ.ಐ.ಟಿ.ಬಿ, ಕೆ.ಹೆಚ್.ಬಿ ಕಾಲೋನಿ, ಸಂಪಿಗೆ ನಗರ, ತಾವರಗೇರಿ ಹಾಸ್ಪಿಟಲ್, ಸನ್ಮತಿ ನಗರ, ಜಿ.ಟಿ.ಸಿ ಕ್ಯಾಂಪಸ್, ಮೆಹಬೂಬ ನಗರ, ಹಶ್ಮಿ ನಗರ, ಮಾಳಾಪುರ, ಏರಟೆಕ್, ಜಯಲಕ್ಷ್ಮೀ ಇಂಡಸ್ಟ್ರಿಸ್, ಬಸವ ಕಾಲೋನಿ, ಪವರ್ ಗ್ರಿಡ್, ಪೆಪ್ಸಿ, ಕಿಲ್ಲಾ, ಸಾಧುನವರ ಎಸ್ಟೆಟ್, ನರೇಂದ್ರ, ಮಮ್ಮಿಗಟ್ಟಿ, ಚಿಕ್ಕಮಲ್ಲಿಗವಾಡ, ಹಿರೇಮಲ್ಲಿಗವಾಡ, ಶಿರಡಿನಗರ, ತಾಜನಗರ, ಬಿ.ಎಸ್.ಕೆ ಲೇಔಟ, ಮಾಳಾಪುರ ಲಾಸ್ಟ್ ಬಸ್ಟಾಪ್, ರಾಜನಗರ, ತಮದಂಡಿ ಪ್ಲಾಟ್, ಹರಿಜನಕೇರಿ ಪವರ್ ಕಟ್ ಆಗಲಿದೆ.…
ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿಯ ಬಿಸಲಹಳ್ಳಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಹಾಗೂ 33/11ಕೆ.ವಿಯ ರೂಪನಗುಡಿ ಉಪ-ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಮಾರ್ಗಗಳಲ್ಲಿ ಜೂ.20 ರಂದು ಬೆಳಿಗ್ಗೆ 11 ಗಂಟೆಯಿAದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್ ಬಾಬು ಅವರು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-52 ಶಂಕರಬAಡೆ ಐಪಿ ಫೀಡರ್ ಮಾರ್ಗದ ತಿರುಮಲನಗರ, ಶಂಕರಬAಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಎತ್ತಿನಬೂದಿಹಾಳ್, ಬೆಂಚಿಕೊಟ್ಟಾಲ್, ಕಮ್ಮರಚೇಡು ಕೃಷಿ ಪ್ರದೇಶಗಳು. ಎಫ್-53 ಶಂಕರಬAಡೆ ಎನ್.ಜೆ.ವೈ ಫೀಡರ್ ಮಾರ್ಗದ ತಿರುಮಲನಗರ, ಶಂಕರಬAಡೆ, ಬೂಬ್ಬುಕುಂಟೆ, ಇಬ್ರಾಹಿಂಪುರ, ಎತ್ತಿನಬೂದಿಹಾಳ್, ಬೆಂಚಿಕೊಟ್ಟಾಲ್ ಮಿಂಚೇರಿ, ಬುರ್ರನಾಯಕನಹಳ್ಳಿ ಗ್ರಾಮಗಳು. ಎಫ್-54 ಬಿಸಲಹಳ್ಳಿ ಎನ್.ಜೆ.ವೈ ಫೀಡರ್ ಮಾರ್ಗದ ಬಿಸಲಹಳ್ಳಿ, ಜನತಾನಗರ, ಸೋಲಾರ್ ತಗ್ಗಿನಬೂದಿಹಾಳ್ ಗಾಮಗಳು. ಎಫ್-55 ಅಸುಂಡಿ ಐಪಿ ಫೀಡರ್ ಮಾರ್ಗದ ಬಿಸಲಹಳ್ಳಿ, ಜನತಾನಗರ, ತಗ್ಗಿನಬೂದಿಹಾಳ್, ಅಮರಾಪುರ, ಬೇವಿನಹಳ್ಳಿ, ಅಸುಂಡಿ, ಕಕ್ಕಬೇವಿನಹಳ್ಳಿ…
ನವದೆಹಲಿ: ಮತದಾರರ ಅನುಕೂಲತೆಯನ್ನು ಹೆಚ್ಚಿಸುವ ಪ್ರಮುಖ ಹೆಜ್ಜೆಯಾಗಿ, ಭಾರತೀಯ ಚುನಾವಣಾ ಆಯೋಗ (ECI) ಬುಧವಾರ (ಜೂನ್ 18) ಹೊಸ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನವನ್ನು (SOP) ಜಾರಿಗೆ ತಂದಿದೆ. ಇದು ಮತದಾರರ ಪಟ್ಟಿಯಲ್ಲಿ ಯಾವುದೇ ನವೀಕರಣದ 15 ದಿನಗಳಲ್ಲಿ ಮತದಾರರ ಫೋಟೋ ಗುರುತಿನ ಚೀಟಿಗಳನ್ನು (EPIC ಗಳು) ತಲುಪಿಸುವುದನ್ನು ಖಚಿತಪಡಿಸುತ್ತದೆ. ಇದು ಹೊಸದಾಗಿ ದಾಖಲಾದ ಮತದಾರರಿಗೆ ಮತ್ತು ತಮ್ಮ ವಿವರಗಳನ್ನು ನವೀಕರಿಸುವ ಅಸ್ತಿತ್ವದಲ್ಲಿರುವ ಮತದಾರರಿಬ್ಬರಿಗೂ ಅನ್ವಯಿಸುತ್ತದೆ. ರೋಲ್ ನವೀಕರಣಗಳ 15 ದಿನಗಳಲ್ಲಿ EPIC ಗಳನ್ನು ತಲುಪಿಸಬೇಕು, ನೈಜ-ಸಮಯದ ಟ್ರ್ಯಾಕಿಂಗ್ ಮತ್ತು SMS ಎಚ್ಚರಿಕೆಗಳು ಹೊಸದಾಗಿ ಪರಿಚಯಿಸಲಾದ ವ್ಯವಸ್ಥೆಯು EPIC ಗಳ ನೈಜ-ಸಮಯದ ಟ್ರ್ಯಾಕಿಂಗ್ ಅನ್ನು ಒಳಗೊಂಡಿದೆ. ಚುನಾವಣಾ ನೋಂದಣಿ ಅಧಿಕಾರಿ (ERO) ಕಾರ್ಡ್ ಅನ್ನು ರಚಿಸಿದ ಕ್ಷಣದಿಂದ ಪ್ರಾರಂಭಿಸಿ, ಅಂಚೆ ಇಲಾಖೆ (DoP) ಮೂಲಕ ಅದರ ವಿತರಣೆಯವರೆಗೆ. ಪಾರದರ್ಶಕತೆ ಮತ್ತು ಸುಧಾರಿತ ಸೇವಾ ಸಂವಹನವನ್ನು ಖಚಿತಪಡಿಸಿಕೊಳ್ಳಲು ಮತದಾರರಿಗೆ ಪ್ರತಿ ಹಂತದ ಬಗ್ಗೆ SMS ಎಚ್ಚರಿಕೆಗಳ ಮೂಲಕ ತಿಳಿಸಲಾಗುತ್ತದೆ. https://twitter.com/ECISVEEP/status/1935310208085147711 ECINet ಪ್ಲಾಟ್ಫಾರ್ಮ್ನಿಂದ ವಿತರಣೆ…
ಬೆಂಗಳೂರು: ಯುಜಿಸಿಇಟಿ-2025ರಲ್ಲಿನ ಪರೀಕ್ಷೆಯ ನಂತ್ರ ಕೆಇಎಯಿಂದ CET Rank ಪ್ರಕಟಿಸಲಾಗಿತ್ತು. ಈ ಬಳಿಕ ವಿದ್ಯಾರ್ಥಿಗಳಿಗಿದ್ದಂತ ಕೆಲ ಗೊಂದಲಗಳಿಗೆ ಕೆಇಎ ಮಹತ್ವದ ಕ್ಲಾರಿಫಿಕೇಷನ್ ಬಿಡುಗಡೆ ಮಾಡಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೆಇಎ, UGCET-25 BPT, BPO AHS ಕೋರ್ಸ್ ಗಳ ಪ್ರವೇಶಕ್ಕೆ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ಅಂಕಗಳ ಆಧಾರದ ಮೇಲೆ CET Rank ನೀಡಲಾಗಿದೆ. UGCET-25 ಬರೆದಿದ್ದ ಎಲ್ಲ ಅಭ್ಯರ್ಥಿಗಳಿಗೂ Rank ನೀಡಲಾಗಿದೆ ಎಂಬುದಾಗಿ ತಿಳಿಸಿದೆ. ಬಿಪಿಟಿ ಮತ್ತು ಎಎಚ್ಎಸ್ ಕೋರ್ಸ್ ಗಳಿಗೆ ವಿಜ್ಞಾನ ಮತ್ತು ಬಿಪಿಒ ಕೋರ್ಸ್ ಗಳ ಪ್ರವೇಶಕ್ಕೆ ಕಲಾ ಮತ್ತು ವಾಣಿಜ್ಯ ವಿಷಯಗಳಲ್ಲಿ ಪಿಯುಸಿ ಶಿಕ್ಷಣ ಮುಗಿಸಿರುವವರು ಅರ್ಹರು ಎಂದು ಸ್ಪಷ್ಟ ಪಡಿಸಿದೆ. https://twitter.com/KEA_karnataka/status/1935316653308510241 https://kannadanewsnow.com/kannada/transfer-18-kas-officers-as-per-state-government-order/ https://kannadanewsnow.com/kannada/sadananda-murder-case-in-sagar-why-did-the-police-release-the-murder-accused/
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 18 ಕೆ ಎ ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಇಂದು ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು ಕೆ ಎಎಸ್ ಅಧಿಕಾರಿ ಡಾ.ಚನ್ನಪ್ಪ.ಎ ಅವರನ್ನು ರಾಯಚೂರು ವಿವಯ ಕುಲಸಚಿವರನ್ನಾಗಿ ನೇಮಿಸಿದ್ದರೇ, ರೂಪಶ್ರೀ.ಕೆ ಅವರನ್ನು ಮಂಡ್ಯ ವಿವಿಯ ಆಡಳಿತದ ಕುಲಸಚಿವರನ್ನಾಗಿ ನಿಯೋಜಿಸಿ ಆದೇಶಿಸಿದೆ. ಡಾ.ರುದ್ರೇಶ್ ಎಸ್ ಘಾಳಿ ಅವರನ್ನು ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ, ಪುಷ್ಪಲತಾ ಹೆಚ್ ಅವರನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತದ ಪ್ರಧಾನ ವ್ಯವಸ್ಥಾಪಕರ ಹುದ್ದೆಗೆ ನೇಮಿಸಿದೆ. ಮಹೇಶ್ ಬಾಬು ಎನ್ ಅವರನ್ನು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಿದ್ದರೇ, ನೂರ್ ಜಹರಾ ಖಾನಂ ಅವರನ್ನು ಬೆಂಗಳೂರಿನ ಲೆಕ್ಕಪತ್ರ ವಿಭಾಗದ ಅಪರ ಕಂದಾಯ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಹೀಗಿದೆ 18 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ https://kannadanewsnow.com/kannada/as-long-as-we-are-here-there-is-no-room-for-the-privatization-of-escoms-deputy-chief-minister-d-k-shivakumar/ https://kannadanewsnow.com/kannada/sadananda-murder-case-in-sagar-why-did-the-police-release-the-murder-accused/
ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಗಾಗಿ ಮಂಡ್ಯ ಜಿಲ್ಲೆಯಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅನುಮತಿಸಿ ಆದೇಶಿಸಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, 2024-25ನೇ ಸಾಲಿನ ನಮ್ಮ ನಾಡು, ನುಡಿ, ಸಂಸ್ಕೃತಿಯನ್ನು ಬಿಂಬಿಸಲು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯ ಜಿಲ್ಲೆಯಲ್ಲಿ ಆಯೋಜಿಸಲು 2024-25ನೇ ಸಾಲಿನ ಕ್ರಿಯಾಯೋಜನೆ ಲೆಕ್ಕಶೀರ್ಷಿಕ: 2205-00-102-4-22 ಕನ್ನಡ ಸಾಹಿತ್ಯ ಪರಿಷತ್ಗೆ ಸಹಾಯಾನುದಾನ 103 ಸಹಾಯಾನುದಾನ-ಸಾಮಾನ್ಯ ರಡಿ ರೂ.10.00 ಕೋಟಿ ಅನುದಾನವನ್ನು ಮಂಜೂರು ಮಾಡಲಾಗಿರುತ್ತದೆ ಎಂದಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಆಯೋಜಿಸಲು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚುವರಿಯಾಗಿ ರೂ.15.00 ಕೋಟಿ ಅನುದಾನ ಮಂಜೂರು ಮಾಡಲಾಗಿರುತ್ತದೆ. 2024-25ನೇ ಸಾಲಿನ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯ ಜಿಲ್ಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಹೆಚ್ಚುವರಿಯಾಗಿ ರೂ.5.00 ಕೋಟಿ ಅನುದಾನ ಮಂಜೂರು ಮಾಡಲಾಗಿರುತ್ತದೆ ಎಂದು ಹೇಳಿದ್ದಾರೆ. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…