Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಮೊಬೈಲ್ ಫೋನ್ ಒಂದು ಉಪಯುಕ್ತ ಸಾಧನ. ಆದರೆ ಒಳಿತು ಕೆಡುಕು ಆಯ್ಕೆ ಮಾಡಿಕೊಳ್ಳುವುದು ನಮ್ಮ ಜವಾಬ್ದಾರಿ. ಆದ್ದರಿಂದ, ವಿದ್ಯಾರ್ಥಿಗಳು ಜವಾಬ್ದಾರಿಯುತವಾಗಿ ಮೊಬೈಲ್ ಫೋನ್ ಬಳಸುವುದನ್ನು ತಿಳಿದಿರಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದರು. ಶುಕ್ರವಾರ ನಗರದ ಬಾಲ್ಡ್ವಿನ್ ಬಾಲಕಿಯರ ಶಾಲೆಯಲ್ಲಿ 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ, ಬಹುಮಾನ ಪ್ರಮಾಣ ಪತ್ರ ನೀಡುವ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. “ಶಾಲಾ ಶಿಕ್ಷಣವು ಹೈಟೆಕ್ ಆಗಿ ಮಾರ್ಪಟ್ಟಿದೆ, ಮತ್ತು ಅನೇಕರು ಮೊಬೈಲ್ ತಂತ್ರಜ್ಞಾನಕ್ಕೆ ವ್ಯಸನಿಯಾಗಿದ್ದಾರೆ. ನಾನು ಮೊಬೈಲ್ ಫೋನ್ಗಳನ್ನು ಸಂಪೂರ್ಣವಾಗಿ ತ್ಯಜಿಸಬೇಕೆಂದು ಎಂದು ಹೇಳುವುದಿಲ್ಲ. ಆದರೆ ಅವುಗಳನ್ನು ದುರುಪಯೋಗಪಡಿಸಿಕೊಳ್ಳಬಾರದು. ಮೊಬೈಲ್ನ ದುಷ್ಪರಿಣಾಮಗಳ ಬಗ್ಗೆ ನಾವು ಪ್ರತಿದಿನ ಓದುತ್ತೇವೆ. ಆದ್ದರಿಂದ ಮೊಬೈಲ್ ಅನ್ನು ಅಗತ್ಯ ಕೆಲಸಕ್ಕೆ ಮಾತ್ರ ಬಳಸಿ ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಪೋಷಕರ ಕನಸುಗಳನ್ನು ಈಡೇರಿಸುವುದು ಕರ್ತವ್ಯವಾಗಿದೆ. ನೀವು ಯಾವ ವೃತ್ತಿಯನ್ನು ಆರಿಸಿಕೊಂಡರೂ, ಮೊದಲು ಉತ್ತಮ ಮನುಷ್ಯನಾಗಲು ಶ್ರಮಿಸಿ ಮತ್ತು ಸಮಾಜಕ್ಕೆ…
ಬೆಂಗಳೂರು: ಮೈಸೂರಿನಲ್ಲಿ ನಡೆದಿರುವ ‘ಮುಡಾ’ ಹಗರಣದ ವಿರುದ್ಧ ಪ್ರತಿಭಟನೆ ನಡೆಸಲು ಹೋದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಪ್ರತಿಪಕ್ಷದ ನಾಯಕ ಆರ್ ಅಶೋಕ್ ಮತ್ತು ಅವರನ್ನು ಬಂಧಿಸಿದ ಕಾಂಗ್ರೆಸ್ ಸರಕಾರದ ಕ್ರಮವನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಪಕ್ಷದ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು, ಸಿದ್ದರಾಮಯ್ಯ ಸರಕಾರದ ದಬ್ಬಾಳಿಕೆ ನೀತಿಯನ್ನು ತೀವ್ರವಾಗಿ ಖಂಡಿಸಿದರು. ರಾಜ್ಯದಲ್ಲಿ ಸಂವಿಧಾನದ ನಿರ್ದೇಶನದಂತೆ ಪ್ರಜಾಪ್ರಭುತ್ವದ ಆಡಳಿತವಿದೆಯೇ ಅಥವಾ ಸರ್ವಾಧಿಕಾರಿ ಆಡಳಿತವಿದೆಯೇ ಎಂದು ಅವರು ಪ್ರಶ್ನಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷವನ್ನು ಶ್ಯಾಡೋ ಗವರ್ನಮೆಂಟ್ ಅಂತ ಕರೆಯುತ್ತಾರೆ. ಸರಕಾರದ ಜನವಿರೋಧಿ ನೀತಿಗಳು ಮತ್ತು ಸರಕಾರದಿಂದ ಆಗಿರುವಂತಹ ಭ್ರμÁ್ಟಚಾರ ಇದರ ವಿರುದ್ಧ ಪ್ರತಿಭಟನೆ, ಹೋರಾಟ ಮಾಡುವುದು ಪ್ರತಿಪಕ್ಷದ ಹಕ್ಕು ಎಂದ ಅವರು, ನಾಚಿಕೆಯಿಲ್ಲದ ಕಾಂಗ್ರೆಸಿಗರು ಡಾ. ಬಾಬಾ ಸಾಹೇಬ್ ಅಂಬೇಡ್ಕರರು ಕೊಟ್ಟಿರುವಂತಹ ಹಕ್ಕುಗಳನ್ನು ಒಳಗೊಂಡ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಓಡಾಡುತ್ತಾರೆ. ಆದರೆ ಸರ್ಕಾರ ಮಾಡಿರುವಂತಹ ಹಗರಣವನ್ನು ಪ್ರತಿಭಟಿಸುವ ಸಂದರ್ಭದಲ್ಲಿ…
ಹಾವೇರಿ: ಶಿಗ್ಗಾವಿ ಸವಣೂರು ಕ್ಷೇತ್ರ ನನ್ನ ತವರು ಮನೆ, ನನಗೆ ರಾಜಕೀಯವಾಗಿ ಎರಡನೇ ಜನ್ಮ ನೀಡಿದ ಕ್ಷೇತ್ರ ಇದು. ನನ್ನ ಜೀವನದ ಕೊನೆವರೆಗೂ ಈ ಕ್ಷೇತ್ರ ಮರೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಶಿಗ್ಗಾವಿ ಸವಣೂರು ಕ್ಷೇತ್ರದ ಶೀಲವಂತ ಸೋಮಾಪುರ, ದುಂಢಸಿ, ಅ.ಮ.ಕೊಪ್ಪ, ಅರಟಾಳ ತಾಂಡಾ, ಹೊಸೂರು ಯತ್ನಳ್ಳಿ, ತಾಂಡಾ, ಜಕ್ಕನಕಟ್ಟಿ ಗ್ರಾಮಗಳಲ್ಲಿ ಜನರಿಗೆ ಏರ್ಪಡಿಸಿರುವ ಧನ್ಯವಾದ ಯಾತ್ರೆಯಲ್ಲಿ ಇಂದು ಪಾಲ್ಗೊಂಡು ಮಾತನಾಡಿದ ಅವರು, ಇದೊಂದು ವಿಭಿನ್ನವಾದ ವಿಶೇಷ ವಾದ ಯಾತ್ರೆಯಾಗಿದೆ. ಕಳೆದ ವರ್ಷವೇ ನನ್ನನ್ನು ಅಭೂತಪೂರ್ವ ಬೆಂಬಲದೊಂದಿಗೆ ಶಾಸಕನಾಗಿ ಆಯ್ಕೆ ಮಾಡಿದ್ದಿರಿ, ಈಗ ನಾನು ಮಾಜಿ ಶಾಸಕನಾಗಿ ನಿಮ್ಮ ಮುಂದೆ ಬಂದು ನಿಂತಿದ್ದೇನೆ. ನೀವು ನನ್ನನ್ನು ಐದು ವರ್ಷಕ್ಕೆ ಆಯ್ಕೆ ಮಾಡಿದ್ದಿರಿ, ನಾನು ಇಂತಹ ಪರಿಸ್ಥಿತಿಯಲ್ಲಿ ಬಂದು ನಿಮ್ಮ ಮುಂದೆ ನಿಲ್ಲುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಕಳೆದ ಎರಡು ಮೂರು ತಿಂಗಳಲ್ಲಿ ಆಗಿರುವ ಬೆಳವಣಿಗೆಯಿಂದ ನಾನು ಭಾರತದ ಉನ್ನತ ಸಂಸತ್ತಿನ ಸದಸ್ಯನಾಗಿ ಪಾಲ್ಗೊಳ್ಳುವ ಅವಕಾಶ ದೊರೆತಿದೆ.…
ಮನೆಯಲ್ಲಿ ಎಲ್ಲರೂ ಸುಖ ಶಾಂತಿಯಿಂದ ಬಾಳಲಿ ಎಂದು ಹಾರೈಸುತ್ತೇವೆ. ಅಂತಹ ಶಾಂತಿಯಿಂದ ಬದುಕಬೇಕಾದರೆ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚಬೇಕು. ಸಕಾರಾತ್ಮಕ ಶಕ್ತಿಗಳು ಹೆಚ್ಚಾಗಬೇಕಾದರೆ, ನಕಾರಾತ್ಮಕ ಶಕ್ತಿಗಳನ್ನು ತೊಡೆದುಹಾಕಬೇಕು. ಇದಲ್ಲದೇ ಮನೆಯ ಜೀವನ ಪರಿಸ್ಥಿತಿಯೂ ಬದಲಾಗಬೇಕು. ಇಷ್ಟೆಲ್ಲಾ ಆಗಬೇಕೆಂದು ಬಯಸುವವರು ಹೇಗೆ ಪೂಜಾ ಕೋಣೆಯಲ್ಲಿ ದೀಪ ಹಚ್ಚಿ ಪೂಜಿಸಬೇಕು ಎಂಬುದನ್ನು ಈ ಆಧ್ಯಾತ್ಮಿಕ ಬರಹದಲ್ಲಿ ನೋಡಲಿದ್ದೇವೆ . ಭೂಮಂಡಲದಲ್ಲಿ ಜಲ, ಮಣ್ಣು, ವಾಯು, ಭಾನು ಮತ್ತು ಅಗ್ನಿಯಿಂದ ನಡೆಸಲ್ಪಡುತ್ತದೆ. ಒಂದು ಮನೆ ನಿರ್ಮಿಸಲು ಪಂಚಭೂತಗಳ ಲೆಕ್ಕ ಚಾರ ಮಾಡಲಾಗುತ್ತದೆ. ಪುರಾತನ ವಾಸ್ತುಶಾಸ್ತ್ರದಲ್ಲಿ ಪಂಚಭೂತಗಳಿಗೆ ವಿಶೇಷ ಸ್ಥಾನವಿದೆ. ಇವುಗಳ ಸ್ಥಾನಗಳಿಗೆ ಅನುಗುಣವಾಗಿ ಮನೆ ಕಟ್ಟಡ ಮಾಡಲಾಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ,…
ಬೆಂಗಳೂರು: ರಾಜ್ಯ ಸರ್ಕಾರದಿಂದ ಡೆಂಗ್ಯೂ ಪತ್ತೆ ಪರೀಕ್ಷೆಗೆ ದರವನ್ನು ನಿಗದಿ ಪಡಿಸಿದೆ. ಆ ದರದಂತೆ ಹಣ ಪಡೆಯುವಂತೆಯೂ ಖಡಕ್ ಆದೇಶ ಮಾಡಿದೆ. ಒಂದು ವೇಳೆ ಅದಕ್ಕಿಂತ ಹೆಚ್ಚು ಹಣ ಪಡೆದ್ರೇ ದೂರು ಸಲ್ಲಿಸುವಂತೆ ತಿಳಿಸಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ನಿಯಂತ್ರಣ ಕ್ರಮವನ್ನು ಕೈಗೊಳ್ಳಲಾಗಿದೆ. ಡೆಂಗ್ಯೂ ವ್ಯಾಪಕವಾಗಿ ಹೆಚ್ಚಾಗುತ್ತಿರುವುದರಿಂದ ಪತ್ತೆ ಪರೀಕ್ಷೆಗೆ ದರ ನಿಗದಿ ಪಡಿಸಲಾಗಿದೆ. ಎಲಿಸಾ ಪರೀಕ್ಷೆಗೆ ರೂ.300, ರಾಪಿಡ್ ಪರೀಕ್ಷೆಗೆ ರೂ.250 ನಿಗದಿ ಪಡಿಸಲಾಗಿದೆ ಅಂತ ತಿಳಿಸಿದೆ. ಇನ್ನೂ ಡೆಂಘಿ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿರುವುದಕ್ಕಿಂತ ಹೆಚ್ಚುವರಿ ದರ ಪಡೆಯುವ ಆಸ್ಪತ್ರೆ ಹಾಗೂ ಪ್ರಯೋಗಾಲಯಗಳ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲೆ, ಹಳೆ ಕ್ಷಯರೋಗಿಗಳ ಆಸ್ಪತ್ರೆ ಆವರಣ, ಹಳೆ ಮದ್ರಾಸ್ ರಸ್ತೆ, ಇಂದಿರಾನಗರ, ಬೆಂಗಳೂರು – 38 ಈ ವಿಳಾಸಕ್ಕೆ ದೂರು ಸಲ್ಲಿಸಬಹುದು. ಇ-ಮೇಲ್ ವಿಳಾಸ dhobangaloreurban@gmail.com…
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಡೆಂಗ್ಯೂ ನಿಯಂತ್ರಣ ಕ್ರಮವಾಗಿ ರಾಜ್ಯ ಸರ್ಕಾರದಿಂದ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಸೊಳ್ಳೆ ಪರದೆ ವಿತರಣೆ ಮಾಡಲಿದೆ. ಈ ಸಂಬಂಧ ರಾಜ್ಯ ಆರೋಗ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಡೆಂಘಿ ಜ್ವರ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆಗೆ ವಾರ್ ರೂಮ್ ಪ್ರಾರಂಭಿಸಿ, ಡೆಂಘಿ ಪೀಡಿತರ ಮೇಲೆ 14 ದಿನಗಳು ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಆರೋಗ್ಯ ಸೌಧದಲ್ಲಿರುವ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ ವಿಭಾಗವು ರಾಜ್ಯಮಟ್ಟದ ವಾರ್ ರೂಮ್ ಉಸ್ತುವಾರಿ ಹೊಂದಿರಲಿದೆ. ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳು ಅಧಿಕ ಪ್ರಕರಣಗಳು ವರದಿಯಾದ ಪ್ರದೇಶ ಗುರುತಿಸಿ, ವಿವರವನ್ನು ರಾಜ್ಯಮಟ್ಟದ ವಾರ್ ರೂಮ್ಗೆ ಸಲ್ಲಿಸಬೇಕು. ಹೆಚ್ಚು ಪ್ರಕರಣಗಳು ವರದಿಯಾದ ಪ್ರದೇಶಗಳಲ್ಲಿ ಲಾರ್ವಾ ನಾಶ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು. ಜ್ವರ ಕ್ಲಿನಿಕ್ಗಳನ್ನು ತುರ್ತಾಗಿ ಪ್ರಾರಂಭಿಸಬೇಕು. ಬಿಪಿಎಲ್ ಕುಟುಂಬಗಳಿಗೆ ಸೊಳ್ಳೆ ಪರದೆ ವಿತರಣೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಪ್ರಧಾನ…
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಕೆಪಿಎಸ್ಸಿಯಿಂದ ಮಾಹಿತಿ ಹಂಚಿಕೊಂಡಿದ್ದು, ಆಯೋಗದಿಂದ ಅಧಿಸೂಚಲಾದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಪರೀಕ್ಷಾ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಅಂತ ತಿಳಿಸಿದೆ. ಹೀಗಿದೆ ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷಾ ವೇಳಾಪಟ್ಟಿ https://kannadanewsnow.com/kannada/mahayuti-alliance-wins-big-in-maharashtra-mlc-polls/ https://kannadanewsnow.com/kannada/dengue-outbreak-437-people-test-positive-for-dengue-in-a-single-day-today/
ಪುಣೆ: ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ದೊಡ್ಡ ವಿಜಯವನ್ನು ದಾಖಲಿಸಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಎನ್ಸಿಪಿ ಮತ್ತು ಬಿಜೆಪಿಯನ್ನು ಒಳಗೊಂಡ ಮಹಾಯುತಿ ಮೈತ್ರಿಕೂಟವು 11 ಸ್ಥಾನಗಳಿಗೆ ಒಂಬತ್ತು ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು ಮತ್ತು ಎಲ್ಲಾ ಒಂಬತ್ತು ಸ್ಥಾನಗಳನ್ನು ಗೆದ್ದಿತ್ತು. ಶುಕ್ರವಾರ ನಡೆದ 11 ಕೌನ್ಸಿಲ್ ಸ್ಥಾನಗಳಿಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಐವರು ಬಿಜೆಪಿ ನಾಯಕರು, ಶಿವಸೇನೆ (ಶಿಂಧೆ) ಬಣ ಮತ್ತು ಎನ್ಸಿಪಿ (ಅಜಿತ್ ಪವಾರ್) ತಲಾ ಇಬ್ಬರು ಗೆಲುವು ದಾಖಲಿಸಿದ್ದಾರೆ. ಬಿಜೆಪಿ ನಾಯಕಿ ಪಂಕಜಾ ಮುಂಡೆ, ಪರಿಣಯ್ ಫುಕೆ ಮತ್ತು ಯೋಗೇಶ್ ತಿಲೇಕರ್ ತಲಾ 26 ಮತಗಳನ್ನು ಪಡೆದರು. ಎನ್ಸಿಪಿ (ಅಜಿತ್ ಪವಾರ್) ಪಕ್ಷದ ಇಬ್ಬರು, ರಾಜೇಶ್ ವಿಟೇಕರ್ ಮತ್ತು ಶಿವಾಜಿರಾವ್ ಗರ್ಜೆ ಮತ್ತು ಶಿಂಧೆ ಸೇನಾದ ಭಾವನಾ ಗಾವ್ಲಿ ಅವರನ್ನು ಸಹ ವಿಜೇತರೆಂದು ಘೋಷಿಸಲಾಯಿತು. ಬಿಜೆಪಿ ನಾಯಕ ಅಮಿತ್ ಮಾಳವೀಯ ಅವರು ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ ನಲ್ಲಿ…
ಮಂಡ್ಯ : ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದರೇ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡು ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗ ಮೃತ ಪಟ್ಟು ಮತ್ತಿಬ್ಬರಿಗೆ ತೀವ್ರವಾಗಿ ಗಾಯವಾಗಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೂಲತಃ ಕುಣಿಗಲ್ (ಹಾಲಿ ಬೆಂಗಳೂರಿನ ಬಗಲಗುಂಟೆಯಲ್ಲಿ ವಾಸ) ಮೂಲದ ದರ್ಶನ್ (21), ತಾಯಿ ಕಲಾ (40) ಸ್ಥಳದಲ್ಲೇ ಮೃತಪಟ್ಟಿದ್ದು ಕಲಾ ಅವರ ಮಗಳು ಮೇಘ (23) ಹಾಗೂ ಅಳಿಯ ಮಂಜುನಾಥ್ ಅವರಿಗೆ ತೀವ್ರವಾಗಿ ಗಾಯಗಳಾಗಿ ಮದ್ದೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಆಷಾಡ ಶುಕ್ರವಾರದ ಹಿನ್ನೆಲೆಯಲ್ಲಿ ಕುಟುಂಬ ಸಮೇತ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ ದೇವರ ದರ್ಶನ ಪಡೆದು ವಾಪಾಸ್ ಬೆಂಗಳೂರಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ…
ಬೆಂಗಳೂರು: ಮೈಸೂರು ‘ಮುಡಾ’ ಹಗರಣವನ್ನು ಖಂಡಿಸಿ ಪ್ರತಿಭಟಿಸುವ ಹಕ್ಕೂ ನಮಗಿಲ್ಲವೇ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪ್ರಶ್ನಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಭೇಟಿ ನೀಡಿದ್ದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. 1975ರಲ್ಲಿ ಕಾಂಗ್ರೆಸ್ ಪಕ್ಷದ ಆಗಿನ ಪ್ರಧಾನಿ ಇಂದಿರಾ ಗಾಂಧಿ ಸರ್ವಾಧಿಕಾರಿಯಾಗಿದ್ದರು. ಇದೀಗ 2024-25ರಲ್ಲಿ ಸಿದ್ದರಾಮಯ್ಯ ಒಬ್ಬ ಭಯಂಕರವಾದ ಸರ್ವಾಧಿಕಾರಿ, ಅಹಂಕಾರಿ ಮತ್ತು ಭ್ರಷ್ಟನಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ಗೆ ಏನಾದರೂ ಕಮಾಂಡ್ ಇದ್ದರೆ ಸಿದ್ದರಾಮಯ್ಯರನ್ನು ತಕ್ಷಣ ಹುದ್ದೆಯಿಂದ ಕೆಳಕ್ಕೆ ಇಳಿಸಬೇಕು ಎಂದು ಒತ್ತಾಯಿಸಿದರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯರ ನೇರ ತನಿಖೆ ಆಗಬೇಕಿದೆ. ಅವರ ಪಾಲ್ಗೊಳ್ಳುವಿಕೆ ಇಲ್ಲದೇ ಇಂಥ ದೊಡ್ಡ ಭ್ರಷ್ಟಾಚಾರ ಆಗಲು ಸಾಧ್ಯವಿಲ್ಲ ಎಂದು ನುಡಿದ ಅವರು, ಮೈಸೂರು ಅವರ ತವರೂರು. ಈ ಹಗರಣಕ್ಕೆ ಅವರೇ ನೇರ ಹೊಣೆ ಎಂದು ತಿಳಿಸಿದರು. ಅವರಿಗೆ ಗೊತ್ತಿದ್ದೇ ಭ್ರಷ್ಟಾಚಾರಗಳು ನಡೆಯುತ್ತಿವೆ ಎಂದು ಆಕ್ಷೇಪಿಸಿದರು. ವಾಲ್ಮೀಕಿ ಹಗರಣದ ಕುರಿತು ಮಾತನಾಡಿದ ಅವರು, ಒಂದೆಡೆ ಇ.ಡಿ, ಸಿಬಿಐ ಮಾಜಿ…