Author: kannadanewsnow09

ಬೆಂಗಳೂರು: ಮೊಣಗಾಲು ನೋವಿನಿಂದ ಬಳಲುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಇಂದು ಮೊದಲ ಹತ್ತು ನಿಮಿಷಗಳ ಕಾಲ ರಾಜ್ಯ ಬಜೆಟ್ ಅನ್ನು ನಿಂತೇ ಮಂಡಿಸಲಿದ್ದಾರೆ. ಆ ಬಳಿಕ ಇಡೀ ಬಜೆಟ್ ಅನ್ನು ಕುಳಿತೇ ಮಂಡನೆ ಮಾಡಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 16ನೇ ಬಜೆಟ್ ಅನ್ನು ಇಂದು ಮಂಡಿಸುತ್ತಿದ್ದಾರೆ. ಈಗಾಗಲೇ ಆರ್ಥಿಕ ಇಲಾಖೆಯ ಅಧಿಕಾರಿಗಳಿಂದ ಬಜೆಟ್ ಹಸ್ತಪ್ರತಿಯನ್ನು ಪಡೆದಿರುವಂತ ಅವರು, ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆಯನ್ನು ಪಡೆದಿದ್ದಾರೆ. ಇದೀಗ ವಿಧಾನಸೌಧಕ್ಕೆ ಆಗಮಿಸುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಕೆಲವೇ ಕ್ಷಣಗಳಲ್ಲಿ ವಿಧಾನಸಭೆಯಲ್ಲಿ ರಾಜ್ಯ ಬಜೆಟ್ 2025-26 ಅನ್ನು ಮಂಡನೆ ಮಾಡಲಿದ್ದಾರೆ. ಮೊಣಕಾಲಿನ ನೋವಿನ ಕಾರಣದಿಂದಾಗಿ ಮೊದಲ ಹತ್ತು ನಿಮಿಷ ನಿಂತು ಬಜೆಟ್ ಮಂಡನೆ ಮಾಡಲಿರುವಂತ ಅವರು, ಆ ಬಳಿಕ ಮುಂದುವರೆದ ಬಜೆಟ್ ಅನ್ನು ಕುಳಿತೇ ಮಾಡಲಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/this-is-siddaramaiahs-last-budget-opposition-leader-r-ashoka/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/

Read More

ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಮಂಡಿಸುತ್ತಿರುವಂತ ರಾಜ್ಯ ಬಜೆಟ್ 2025-26 ಅವರ ಕೊನೆಯ ಬಜೆಟ್ ಆಗಿದೆ ಎಂಬುದಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಇಂದು ಬಜೆಟ್ ಮಂಡನೆಗೂ ಮುನ್ನಾ ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿದರು. ಅನುದಾನ ಕೊಡದ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಯನ್ನು ಕೂಗಿದರು. ಈ ವೇಳೆ ಮಾತನಾಡಿದಂತ ವಿಪಕ್ಷ ನಾಯಕ ಆರ್ ಅಶೋಕ್ ಅವರು ಇದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕೊನೆಯ ಬಜೆಟ್ ಆಗಿದೆ. ಸದ್ಯದಲ್ಲೇ ಈ ಕಾಂಗ್ರೆಸ್ ಸರ್ಕಾರ ಬಿದ್ದೋಗುತ್ತೆ. ಅಷ್ಟರಲ್ಲಿ ಎಷ್ಟು ಬಾಚಿಕೊಳ್ಳಬೇಕೋ ಅಷ್ಟು ಬಾಚಿಕೊಳ್ಳಬೇಕು ಅಂದುಕೊಂಡಿದ್ದಾರೆ ಎಂಬುದಾಗಿ ಕಿಡಿಕಾರಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ. ಮನೆ ಹಾಳ ಸಿದ್ಧರಾಮಯ್ಯ ಅವರದ್ದು ಇದು ಕೊನೆಯ ಬಜೆಟ್ ಆಗಿದೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/special-cabinet-approves-cm-siddaramaiahs-budget-presentation/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2025-26ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ 2025-26ಕ್ಕೆ ಅನುಮೋದನೆ ಪಡೆದರು. ಇಂದು ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ಧರಾಮಯ್ಯ ಅವರು ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ರಾಜ್ಯ ಬಜೆಟ್ 2025-26 ಅನ್ನು ಮಂಡನೆ ಮಾಡುವುದಕ್ಕೆ ಅನುಮತಿ ಕೋರಿದರು. ಇಂದಿನ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆ ನೀಡಲಾಗಿದೆ. ಅಂದಹಾಗೇ ಇಂದು ಸಿಎಂ ಸಿದ್ಧರಾಮಯ್ಯ ಮಂಡಿಸುತ್ತಿರುವಂತ ರಾಜ್ಯ ಬಜೆಟ್ ಗಾತ್ರ 4.09 ಲಕ್ಷ ಕೋಟಿ ಆಗಿದೆ ಎನ್ನಲಾಗುತ್ತಿದೆ. ವಿಧಾನಸಭೆಯಲ್ಲಿ ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/ https://kannadanewsnow.com/kannada/finance-department-officials-hand-over-budget-copy-to-cm-siddaramaiah/

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ತಮ್ಮ ಚೊಚ್ಚಲ 16ನೇ ಬಜೆಟ್ ಅನ್ನು ಇಂದು ಮಂಡಿಸುತ್ತಿದ್ದಾರೆ. ಆರ್ಥಿಕ ಇಲಾಖೆಯ ಅಧಿಕಾರಿಗಳಿಂದ ಬಜೆಟ್ ಪ್ರತಿಯನ್ನು ಪಡೆದಂತ ಅವರು, ಇದೀಗ ವಿಧಾನಸೌಧಕ್ಕೆ ಬಜೆಟ್ ಮಂಡನೆ ಮಾಡೋದಕ್ಕೆ ಆಗಮಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಇದಕ್ಕೂ ಮುನ್ನಾ ಕಾವೇರಿ ನಿವಾಸದಲ್ಲಿ ಆರ್ಥಿಕ ಸಲಹೆಗಾರ ರಾಯರೆಡ್ಡಿ ಅವರಿಂದ ರಾಜ್ಯ ಬಜೆಟ್ ಪ್ರತಿಯನ್ನು ಪಡೆದರು. ರಾಜ್ಯ ಬಜೆಟ್ ಪ್ರತಿಯನ್ನು ಪಡೆದ ನಂತ್ರ, ಸಾರ್ವಜನಿಕವಾಗಿ ಸಿಎಂ ಸಿದ್ಧರಾಮಯ್ಯ ಪ್ರದರ್ಶಿಸಿದರು. ಹಣಕಾಸು ಇಲಾಖೆಯ ಅಧಿಕಾರಿಗಳಿಂದ ರಾಜ್ಯ ಬಜೆಟ್ ಪಡೆದಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇದೀಗ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಅಲ್ಲಿ ನಡೆಯುವಂತ ಬಜೆಟ್ ಪೂರ್ವ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆಯನ್ನು ಪಡೆಯಲಿದ್ದಾರೆ. ಆ ನಂತ್ರ ಬೆಳಿಗ್ಗೆ 10.15ಕ್ಕೆ ವಿಧಾನಸಭೆಯಲ್ಲಿ ತಮ್ಮ ಚೊಚ್ಚಲ 16ನೇ ಬಜೆಟ್ ಅನ್ನು ಮಂಡನೆ ಮಾಡಲಿದ್ದಾರೆ. https://kannadanewsnow.com/kannada/sensex-plunges-over-300-points-nifty-falls-below-22500/ https://kannadanewsnow.com/kannada/finance-department-officials-hand-over-budget-copy-to-cm-siddaramaiah/

Read More

ನವದೆಹಲಿ: ಸೆನ್ಸೆಕ್ಸ್ 300 ಅಂಕ ಕುಸಿತ, ನಿಫ್ಟಿ 22,500ಕ್ಕಿಂತ ಕೆಳಗಿಳಿದಿದೆ. ಈ ಹಿನ್ನಲೆಯಲ್ಲಿ ಐಟಿ, ಬ್ಯಾಂಕ್ ಷೇರುಗಳ ಕುಸಿತ ಉಂಟಾಗಿದ್ದು, ಶೇರು ಮಾರುಕಟ್ಟೆ ಮತ್ತೆ ಶೇಕ್ ಆಗಿದೆ. ಈ ಮೂಲಕ ಷೇರು ಹೂಡಿಕೆದಾರರಿಗೆ ಬಿಗ್ ಶಾಕ್ ನೀಡಲಾಗಿದೆ. ಜಾಗತಿಕ ಮಾರುಕಟ್ಟೆಗಳು ಒತ್ತಡದಲ್ಲಿದ್ದ ಕಾರಣ ಭಾರತೀಯ ಷೇರು ಮಾರುಕಟ್ಟೆಗಳು ಮಾರ್ಚ್ 7, 2025 ರ ಶುಕ್ರವಾರ ದುರ್ಬಲ ಟಿಪ್ಪಣಿಯಲ್ಲಿ ಪ್ರಾರಂಭವಾದವು. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕಗಳ ಬಗ್ಗೆ ಹೆಚ್ಚುತ್ತಿರುವ ಕಳವಳಗಳು ಭಾರತೀಯ ಷೇರುಗಳ ಆರಂಭಿಕ ಕುಸಿತಕ್ಕೆ ಕಾರಣವಾಗಿವೆ. ಇದು ಯುಎಸ್ ಆರ್ಥಿಕತೆಯನ್ನು ನಿಧಾನಗೊಳಿಸುವ ಭಯವಿದೆ. ಯುನೈಟೆಡ್ ಸ್ಟೇಟ್ಸ್-ಮೆಕ್ಸಿಕೊ-ಕೆನಡಾ ಒಪ್ಪಂದದ ಅಡಿಯಲ್ಲಿ ಕೆನಡಾ ಮತ್ತು ಮೆಕ್ಸಿಕೊದಿಂದ ಕೆಲವು ಸರಕುಗಳ ಮೇಲಿನ ಸುಂಕವನ್ನು ಏಪ್ರಿಲ್ 2 ರವರೆಗೆ ಮುಂದೂಡುವ ಅವರ ನಿರ್ಧಾರದ ಹೊರತಾಗಿಯೂ, ಹೂಡಿಕೆದಾರರು ಅಸಮಾಧಾನಗೊಂಡರು ಮತ್ತು ಇದು ಮಾರುಕಟ್ಟೆಯ ಭಾವನೆಯನ್ನು ಶಾಂತಗೊಳಿಸಲು ವಿಫಲವಾಯಿತು. ಆರಂಭಿಕ ವಹಿವಾಟಿನಲ್ಲಿ ಬಿಎಸ್ಇ ಸೆನ್ಸೆಕ್ಸ್ 281 ಪಾಯಿಂಟ್ಸ್ ಅಥವಾ 0.38% ಕುಸಿದು 74,059 ಕ್ಕೆ ವಹಿವಾಟು ನಡೆಸಿದರೆ,…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ ಎನ್ನುವಂತೆ, ಸದ್ಯಕ್ಕೆ ಹೊಸದಾಗಿ ಪಡಿತರ ಚೀಟಿ ವಿತರಣೆ ಮಾಡುವುದಿಲ್ಲ ಅಂತ ತಿಳಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಆಹಾರ ಇಲಾಖೆ ಸಚಿವ ಕೆಹೆಚ್ ಮುನಿಯಪ್ಪ ಅವರು, ರಾಜ್ಯದಲ್ಲಿ ಕೇಂದ್ರ ನಿಗದಿ ಪಡಿಸಿದಂತ ಕಾರ್ಡ್ ಗುರಿ ಮುಕ್ತಾಯಗೊಂಡಿದೆ. ಹೀಗಾಗಿ ಹೊಸ ಕಾರ್ಡ್ ವಿತರಣೆ ಮಾಡುವುದಿಲ್ಲ ಎಂದರು. ಈಗಾಗಲೇ ಅನರ್ಹರು ಬಿಪಿಎಲ್ ರೇಷನ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಆ ಕಾರ್ಡ್ ಗಳನ್ನು ರದ್ದುಪಡಿಸಿದ ನಂತ್ರ ಹೊಸದಾಗಿ ಅರ್ಜಿ ಸಲ್ಲಿಸಿರುವಂತ ಅರ್ಹರಿಗೆ ಬಿಪಿಎಲ್ ಕಾರ್ಡ್ ವಿತರಣೆ ಆರಂಭಿಸಲಾಗುತ್ತದೆ ಎಂದರು.  ಕೇಂದ್ರ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ಅನ್ವಯ 4,01,93,000 ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಣೆ ಮಾಡಲು ಗುರಿ ನಿಗದಿ ಮಾಡಲಾಗಿದೆ. ಆದರೆ ರಾಜ್ಯದಲ್ಲಿ ನಿಯಮ ಮೀರಿ 4,50,59,460 ಫಲಾನುಭವಿಗಳಿಗೆ ಪಡಿತರ ಕೊಡಲಾಗುತ್ತಿದೆ. ಕಾಯ್ದೆ ಪ್ರಕಾರ ನಿಗದಿ ಮಾಡಿರುವ ಫಲಾನುಭವಿಗಳಿಗೆ ಪಡಿತರ ಈಗಾಗಲೇ ಕೊಡಲಾಗುತ್ತಿದೆ. https://kannadanewsnow.com/kannada/home-minister-g-parameshwara-said-that-the-government-is-planning-to-implement-uniform-ticket-prices-in-multiplexes-across-the-state/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/

Read More

ಬೆಂಗಳೂರು: ರಾಜ್ಯಾದ್ಯಂತ ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪದ ಟಿಕೆಟ್ ಬೆಲೆಯನ್ನು ಮತ್ತೆ ಜಾರಿಗೆ ತರುವ ಸಾಧ್ಯತೆಯನ್ನು ಸರ್ಕಾರ ಪರಿಶೀಲಿಸಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಗುರುವಾರ ವಿಧಾನ ಪರಿಷತ್ತಿಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ, ಪ್ರಸ್ತುತ ರಾಜ್ಯವು ಥಿಯೇಟರ್ ಮಾಲೀಕರು ಟಿಕೆಟ್ ಬೆಲೆಯನ್ನು ನಿಗದಿಪಡಿಸುವ ವ್ಯವಸ್ಥೆಯನ್ನು ಅನುಸರಿಸುತ್ತಿದೆ ಎಂದು ಹೇಳಿದರು. ಆದರೆ ಚಲನಚಿತ್ರ ಟಿಕೆಟ್‌ಗಳು ಸೇರಿದಂತೆ ಯಾವುದೇ ಸರಕುಗಳ ಬೆಲೆಯನ್ನು ಮಧ್ಯಪ್ರವೇಶಿಸಲು ಮತ್ತು ನಿಯಂತ್ರಿಸಲು ಸರ್ಕಾರಕ್ಕೆ ಎಲ್ಲಾ ಹಕ್ಕುಗಳಿರುವುದರಿಂದ ರಾಜ್ಯವು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತಿಲ್ಲ ಎಂಬ ಕಠಿಣ ನಿಯಮವಿಲ್ಲ ಎಂದು ಅವರು ಹೇಳಿದರು. “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ, 2017 ರಲ್ಲಿ ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್ ದರವನ್ನು 200 ರೂ.ಗೆ ಮಿತಿಗೊಳಿಸಿದ್ದರು ಮತ್ತು ಅವರು ಹಿಂದಿನ ಮುಖ್ಯಮಂತ್ರಿಯಾಗಿದ್ದಾಗ ಆದೇಶ ಹೊರಡಿಸಲಾಗಿತ್ತು, ಆದರೂ ರಾಜ್ಯ ಸರ್ಕಾರ ಇಲ್ಲಿಯವರೆಗೆ ಏಕೆ ಮಧ್ಯಪ್ರವೇಶಿಸಲಿಲ್ಲ ಎಂದು ನನಗೆ ತಿಳಿದಿಲ್ಲ” ಎಂದು ಗೃಹ ಸಚಿವರು ಹೇಳಿದರು. ಮಲ್ಟಿಪ್ಲೆಕ್ಸ್ ಮಾಲೀಕರು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದ…

Read More

ಬೆಂಗಳೂರು: ಇಂದು ಬೆಳಗ್ಗೆ 10.15ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಇಂತಹ ಬಜೆಟ್ ಪ್ರತಿಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಣಕಾಸು ಇಲಾಖೆಯ ಅಧಿಕಾರಿಗಳು ಹಸ್ತಾಂತರಿಸಿದರು. ಇಂದು ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾದಂತ ಹಣಕಾಸು ಇಲಾಖೆಯ ಅಧಿಕಾರಿಗಳು ಸಿಎಂ ಸಿದ್ಧರಾಮಯ್ಯಗೆ 2025-26ನೇ ಸಾಲಿನ ರಾಜ್ಯ ಬಜೆಟ್ ಪ್ರತಿಗಳ್ನು ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಸಿಎಂ ಸಿದ್ಧರಾಮಯ್ಯ ಆರ್ಥಿಕ ಇಲಾಖೆಯ ಸಲಹೆಗಾರ ರಾಯರೆಡ್ಡಿ ಅವರ ನೇತೃತ್ವದಲ್ಲಿ ಹಸ್ತಾಂತರಿಸಿದಂತ ಬಜೆಟ್ ಪ್ರತಿಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದರು. ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾವೇರಿ ನಿವಾಸಕ್ಕೆ ಬಜೆಟ್ ಪ್ರತಿಗಳನ್ನು ತಂದಂತ ಆರ್ಥಿಕ ಇಲಾಖೆಯ ಅಧಿಕಾರಿಗಳ ತಂಡವು, ಸಿಎಂ ಸಿದ್ಧರಾಮಯ್ಯಗೆ ಹಸ್ತಾಂತರಿಸಿತು. ಈ ಬಜೆಟ್ ಅನ್ನೇ ಸಿಎಂ ಸಿದ್ಧರಾಮಯ್ಯ ಅವರು ಇಂದು ಬೆಳಗ್ಗೆ 10.15ಕ್ಕೆ ವಿಧಾನಸಭೆಯಲ್ಲಿ ಮಂಡನೆ ಮಾಡಲಿದ್ದಾರೆ. https://kannadanewsnow.com/kannada/bjp-jds-protest-ahead-of-state-budget-to-be-presented-today/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/

Read More

ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2025-26 ಮಂಡಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳ ಪ್ರತಿಭಟನೆಯು ನಾಳೆ 7-3-2025 ರ ಬೆಳಿಗ್ಗೆ 09.30 ಗಂಟೆಗೆ ಬೆಂಗಳೂರಿನ ವಿಧಾನ ಸೌಧದ ಗಾಂಧಿ ಪ್ರತಿಮೆ ಬಳಿ ನಡೆಸಲಿದೆ. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಬಿ.ವೈ. ವಿಜಯೇಂದ್ರ , ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಜೆಡಿಎಸ್ ವಿಧಾನ ಪರಿಷತ್ತಿನ ನಾಯಕರಾದ ಬೋಜೆಗೌಡ ಮತ್ತು ಬಿಜೆಪಿ-ಜೆಡಿಎಸ್‍ನ ಶಾಸಕರುಗಳು ಹಾಗೂ ವಿಧಾನ ಪರಿಷತ್ತಿನ ಸದಸ್ಯರುಗಳು ಭಾಗವಹಿಸಲಿದ್ದಾರೆ. ಇಂದು ಬೆಳಗ್ಗೆ 9:30 ಕ್ಕೆ ವಿಧಾನಸೌಧ ಗಾಂಧಿ ಪ್ರತಿಮೆ‌ ಎದುರು ಮೈತ್ರಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಎಸ್‌ಸಿಎಸ್ಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಸಬಾರದು, ಶಾಸಕರ ಕ್ಷೇತ್ರಗಳಿಗೆ ತಲಾ 150 ಕೋಟಿ ಅನುದಾನ ಕೊಡಬೇಕು ಎಂದು ಆಗ್ರಹಿಸಿದ್ದಾರೆ. https://kannadanewsnow.com/kannada/us-supreme-court-refuses-to-stay-extradition-of-26-11-attack-convict-tahawwur-rana-to-india/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/

Read More

ನವದೆಹಲಿ: 2008 ರ ಮುಂಬೈ ದಾಳಿಯಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಪಾಕಿಸ್ತಾನದ ತಹವೂರ್ ರಾಣಾ ಅವರನ್ನು ಭಾರತಕ್ಕೆ ಹಸ್ತಾಂತರಿಸುವುದಕ್ಕೆ ತಡೆ ನೀಡಲು ನಿರಾಕರಿಸಲಾಗಿದೆ. ಯುಎಸ್ ಸುಪ್ರೀಂ ಕೋರ್ಟ್ ಅವರ ತುರ್ತು ತಡೆ ಅರ್ಜಿಯನ್ನು ತಿರಸ್ಕರಿಸಿದೆ. ಇದು ಅವರನ್ನು ಭಾರತಕ್ಕೆ ಹಸ್ತಾಂತರಿಸಲು ದಾರಿಯನ್ನು ಸುಲಭ ಮಾಡಿಕೊಟ್ಟಂತೆ ಆಗಿದೆ. ಭಾರತಕ್ಕೆ ಹಸ್ತಾಂತರಿಸುವುದರಿಂದ ತನ್ನ ಜೀವಕ್ಕೆ ಅಪಾಯವಿದೆ ಎಂದು ವಾದಿಸಿ ರಾಣಾ ಅಮೆರಿಕದ ಉನ್ನತ ನ್ಯಾಯಾಲಯದಲ್ಲಿ ‘ತುರ್ತು ಮೇಲ್ಮನವಿ’ ಸಲ್ಲಿಸಿದ್ದರು. ತನ್ನ ಧಾರ್ಮಿಕ ಗುರುತು ಮತ್ತು ಪಾಕಿಸ್ತಾನ ಸೇನೆಯೊಂದಿಗಿನ ಹಿಂದಿನ ಒಡನಾಟದಿಂದಾಗಿ, ಭಾರತೀಯ ಕಸ್ಟಡಿಯಲ್ಲಿ ಚಿತ್ರಹಿಂಸೆ ಮತ್ತು ಮರಣವನ್ನು ಸಹ ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ನ್ಯಾಯಮೂರ್ತಿ ಎಲೆನಾ ಕಾಗನ್ ಅವರ ಅರ್ಜಿಯನ್ನು ವಜಾಗೊಳಿಸಿದರು, ಈ ಕ್ರಮವನ್ನು ತಡೆಯುವ ಅಂತಿಮ ಪ್ರಯತ್ನದಲ್ಲಿ ಅವರ ಕಾನೂನು ತಂಡವು ಮುಖ್ಯ ನ್ಯಾಯಮೂರ್ತಿ ರಾಬರ್ಟ್ಸ್ಗೆ ಮೇಲ್ಮನವಿಯನ್ನು ಹೆಚ್ಚಿಸಲು ಪ್ರೇರೇಪಿಸಿತು. ಪಾರ್ಕಿನ್ಸನ್ ಕಾಯಿಲೆ ಮತ್ತು ಉಬ್ಬುವ ಅಪಧಮನಿಯಂತಹ ಸ್ಥಿತಿಗಳನ್ನು ಉಲ್ಲೇಖಿಸಿ ಅವರ ಆರೋಗ್ಯ ಕ್ಷೀಣಿಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ -…

Read More