Author: kannadanewsnow09

ನವದೆಹಲಿ: 2008 ರ ಮುಂಬೈ ದಾಳಿಯಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಪಾಕಿಸ್ತಾನದ ತಹವೂರ್ ರಾಣಾ ಅವರನ್ನು ಭಾರತಕ್ಕೆ ಹಸ್ತಾಂತರಿಸುವುದಕ್ಕೆ ತಡೆ ನೀಡಲು ನಿರಾಕರಿಸಲಾಗಿದೆ. ಯುಎಸ್ ಸುಪ್ರೀಂ ಕೋರ್ಟ್ ಅವರ ತುರ್ತು ತಡೆ ಅರ್ಜಿಯನ್ನು ತಿರಸ್ಕರಿಸಿದೆ. ಇದು ಅವರನ್ನು ಭಾರತಕ್ಕೆ ಹಸ್ತಾಂತರಿಸಲು ದಾರಿಯನ್ನು ಸುಲಭ ಮಾಡಿಕೊಟ್ಟಂತೆ ಆಗಿದೆ. ಭಾರತಕ್ಕೆ ಹಸ್ತಾಂತರಿಸುವುದರಿಂದ ತನ್ನ ಜೀವಕ್ಕೆ ಅಪಾಯವಿದೆ ಎಂದು ವಾದಿಸಿ ರಾಣಾ ಅಮೆರಿಕದ ಉನ್ನತ ನ್ಯಾಯಾಲಯದಲ್ಲಿ ‘ತುರ್ತು ಮೇಲ್ಮನವಿ’ ಸಲ್ಲಿಸಿದ್ದರು. ತನ್ನ ಧಾರ್ಮಿಕ ಗುರುತು ಮತ್ತು ಪಾಕಿಸ್ತಾನ ಸೇನೆಯೊಂದಿಗಿನ ಹಿಂದಿನ ಒಡನಾಟದಿಂದಾಗಿ, ಭಾರತೀಯ ಕಸ್ಟಡಿಯಲ್ಲಿ ಚಿತ್ರಹಿಂಸೆ ಮತ್ತು ಮರಣವನ್ನು ಸಹ ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ನ್ಯಾಯಮೂರ್ತಿ ಎಲೆನಾ ಕಾಗನ್ ಅವರ ಅರ್ಜಿಯನ್ನು ವಜಾಗೊಳಿಸಿದರು, ಈ ಕ್ರಮವನ್ನು ತಡೆಯುವ ಅಂತಿಮ ಪ್ರಯತ್ನದಲ್ಲಿ ಅವರ ಕಾನೂನು ತಂಡವು ಮುಖ್ಯ ನ್ಯಾಯಮೂರ್ತಿ ರಾಬರ್ಟ್ಸ್ಗೆ ಮೇಲ್ಮನವಿಯನ್ನು ಹೆಚ್ಚಿಸಲು ಪ್ರೇರೇಪಿಸಿತು. ಪಾರ್ಕಿನ್ಸನ್ ಕಾಯಿಲೆ ಮತ್ತು ಉಬ್ಬುವ ಅಪಧಮನಿಯಂತಹ ಸ್ಥಿತಿಗಳನ್ನು ಉಲ್ಲೇಖಿಸಿ ಅವರ ಆರೋಗ್ಯ ಕ್ಷೀಣಿಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ -…

Read More

ಬಳ್ಳಾರಿ : ಕೋಳಿ ಶೀತ ಜ್ವರ(ಹಕ್ಕಿ ಜ್ವರ)ವು ಹೆಚ್5ಎನ್1 ವೈರಸ್ ನಿಂದ ಪಕ್ಷಿಗಳಿಗೆ ಹರಡುವ ಖಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಸಾಂಕ್ರಮಿಕವಾಗಿ ಹರಡುವುದಿಲ್ಲ. ಹಾಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸ್ಪಷ್ಟನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕಾಣಿಸಿಕೊಂಡ ಕೋಳಿ ಶೀತ ಜ್ವರಕ್ಕೆ ಸಂಬAಧಿಸಿದAತೆ ಸೋಮವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಸಾಮಾನ್ಯವಾಗಿ ಶೀಥಲ ಪ್ರದೇಶದ ವಲಸೆ ಹಕ್ಕಿಗಳು ವಂಶಾಭಿವೃದ್ಧಿಗಾಗಿ ಬಂದಾಗ ಹಿಕ್ಕೆ, ಪುಕ್ಕ ಹಾಗೂ ಬಾಯಿ ಮತ್ತು ಕಣ್ಣಿನಿಂದ ಹೊರ ಬರುವ ಸ್ರವಿಕೆಯಿಂದ ಕಾಯಿಲೆ ಹರಡು ಸಂಭವವಿದ್ದು, ಪಕ್ಷಿಗಳಿಗೆ ರೋಗವು ಹರಡುತ್ತದೆ ಎಂದು ತಿಳಿಸಿದರು. ಬೇಯಿಸಿ ನಂತರ ಸೇವಿಸಿ: ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು 70 ಡಿಗ್ರಿ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಬೇಯಿಸಿದಾಗ ವೈರಾಣು ನಾಶಗೊಳ್ಳುತ್ತದೆ. ಹಾಗಾಗಿ ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿದ ನಂತರ ಸೇವನೆ ಮಾಡಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಫೆ.23 ರಂದು…

Read More

ತಿರುಮಲ: ತಿರುಮಲ ಗಿರಿ ನಿವಾಸಿ, ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಂತಸದ ಸುದ್ದಿ ಎನ್ನುವಂತೆ ಅನ್ನ ಪ್ರಸಾದಕ್ಕೆ ಮತ್ತೊಂದು ಹೊಸ ಖಾದ್ಯ ಸೇರ್ಪಡೆಗೊಳಿಸಲಾಗಿದೆ. ಈಗ ಅನ್ನ ಪ್ರಸಾದದ ಮೆನುವಿನಲ್ಲಿ ಮಸಾಲೆ ವಡೆ ಕೂಡ ಸೇರ್ಪಡೆಯಾಗಿದೆ. ಈ ಬಗ್ಗೆ ಗುರುವಾರದಂದು ಟಿಟಿಡಿಯಿಂದ ಅನ್ನ ಪ್ರಸಾದ ಭವನದಲ್ಲಿ ಮೆನು ರಿಲೀಸ್ ಮಾಡಲಾಗಿದೆ. ತಿರುಮಲ ತಾರಿಗೊಂಡ ವೆಂಗಮಾಂಬ ಅನ್ನ ಪ್ರಸಾದ ಭವನದಲ್ಲಿ ಭಕ್ತರಿಗೆ ಅನ್ನ ಪ್ರಸಾದದಲ್ಲಿ ಮಸಾಲೆ ವಡೆಯನ್ನು ಬಡಿಸುವುದಕ್ಕೆ ಅಧ್ಯಕ್ಷ ಬಿ ಆರ್ ನಾಯ್ಡು ಚಾಲನೆ ನೀಡಿದರು. ಒಟ್ಟಾರೆ ತಿರುಮಲ ತಿರುಪತಿ ಅನ್ನ ಪ್ರಸಾದದಲ್ಲಿ ದಕ್ಷಿಣ ಭಾರತದ ಖಾತ್ಯವನ್ನು ಸೇರಿಸಲಾಗಿದೆ. ಈ ಬಗ್ಗೆ ಸಿಎಂ ಚಂದ್ರಬಾಬು ನಾಯ್ಡು ಜೊತೆಗೆ ಚರ್ಚಿಸಿ ಕ್ರಮ ವಹಿಸಲಾಗಿದ್ದು, ಅವರು ಅನುಮೋದಿಸಿದ ನಂತ್ರ, ಭಕ್ತರಿಗೆ ಅನ್ನ ಪ್ರಸಾದದ ಮೆನುವಿನಲ್ಲಿ ವಡೆಯನ್ನು ಸೇರಿಸಲಾಗಿದೆ. https://kannadanewsnow.com/kannada/district-level-job-fair-to-be-held-in-madikeri-tomorrow/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/

Read More

ಮಡಿಕೇರಿ : ಸಂಜೀವಿನಿ ಕೆಎಸ್‍ಆರ್‍ಎಲ್‍ಪಿಎಸ್ ನ ಡಿಡಿಯುಜಿಕೆವೈ ಯೋಜನೆಯಡಿ ಉದ್ಯೋಗ ಮೇಳ ನಡೆಯಲಿದೆ. ಜಿಲ್ಲೆಯ ಕನಿಷ್ಠ 800 ಅಭ್ಯರ್ಥಿಗಳಿಗೆ ಉದ್ಯೋಗದಾತ ಸಂಸ್ಥೆಗಳ ಮೂಲಕ ಉದ್ಯೋಗವಕಾಶ ಕಲ್ಪಿಸುವ ಮೂಲಕ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಮಾರ್ಚ್, 08 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ) ಯಲ್ಲಿ ‘ಜಿಲ್ಲಾ ಮಟ್ಟದ ಉದ್ಯೋಗ ಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಹಲವಾರು ಪ್ರತಿಪ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು, ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸಿ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಆದ್ದರಿಂದ ಜಿಲ್ಲೆಯ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ/ ಯುವತಿಯರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ. https://kannadanewsnow.com/kannada/good-news-for-women-employees-lt-announces-one-days-paid-menstrual-leave/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/

Read More

ನವದೆಹಲಿ: ಲಾರ್ಸೆನ್ ಅಂಡ್ ಟೂಬ್ರೊ (ಎಲ್ & ಟಿ) ತನ್ನ ಮಹಿಳಾ ಉದ್ಯೋಗಿಗಳಿಗೆ ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ತೆಗೆದುಕೊಳ್ಳಲು ಅವಕಾಶ ನೀಡುವ ಹೊಸ ನೀತಿಯನ್ನು ಪರಿಚಯಿಸಿದೆ. ಈ ನಿರ್ಧಾರವು ಅದರ ಪ್ರಧಾನ ಕಚೇರಿಯಲ್ಲಿ ಕೆಲಸ ಮಾಡುವ ಸುಮಾರು 5,000 ಮಹಿಳೆಯರಿಗೆ ಪ್ರಯೋಜನವನ್ನು ನೀಡುತ್ತದೆ. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎಸ್ ಎನ್ ಸುಬ್ರಮಣಿಯನ್ ಈ ಘೋಷಣೆ ಮಾಡಿದರು. ಪ್ರಮುಖ ಎಂಜಿನಿಯರಿಂಗ್ ಮತ್ತು ನಿರ್ಮಾಣ ಕಂಪನಿಯು ನೀತಿಯನ್ನು ಹೇಗೆ ಜಾರಿಗೆ ತರಲಾಗುವುದು ಎಂಬ ವಿವರಗಳನ್ನು ಇನ್ನೂ ಅಂತಿಮಗೊಳಿಸುತ್ತಿದೆ. ರಜೆ ನೀತಿಯು ಮೂಲ ಕಂಪನಿಯಾದ ಎಲ್ &ಟಿಯ ಉದ್ಯೋಗಿಗಳಿಗೆ ಮಾತ್ರ ಅನ್ವಯಿಸುತ್ತದೆ. ಇದು ಹಣಕಾಸು ಸೇವೆಗಳು ಅಥವಾ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ತನ್ನ ಅಂಗಸಂಸ್ಥೆಗಳಿಗೆ ವಿಸ್ತರಿಸುವುದಿಲ್ಲ. ಎಲ್ ಅಂಡ್ ಟಿ ಒಟ್ಟು 60,000 ಉದ್ಯೋಗಿಗಳನ್ನು ಹೊಂದಿದೆ, ಅದರಲ್ಲಿ 9% ಮಹಿಳೆಯರು. ಈ ಕ್ರಮವು L&T ಅನ್ನು ಭಾರತದಲ್ಲಿ ಈಗಾಗಲೇ ಇದೇ ರೀತಿಯ…

Read More

ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಏಪ್ರಿಲ್ 03 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ್ನು ಹೊಂದಿರಬೇಕು ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‍ಸೆಟ್…

Read More

ಚಿತ್ರದುರ್ಗ : ಹೊಸದುರ್ಗ ತಾಲ್ಲೂಕು ಶ್ರೀರಾಂಪುರ ಹೋಬಳಿ ಶ್ರೀರಾಂಪುರ ಹಾಗೂ ಕುರುಬರಹಳ್ಳಿ ಕಂದಾಯ ವೃತ್ತಕ್ಕೆ ಮತ್ತು ಕಸಬಾ ಹೋಬಳಿ ಹುಣವಿನಡು ಕಂದಾಯ ವೃತ್ತಕ್ಕೆ ಹೆಚ್ಚುವರಿ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಕಡೆಯ ದಿನಾಂಕದಂದು 25 ವರ್ಷ ಪೂರ್ಣಗೊಂಡಿರಬೇಕು. 45ವರ್ಷ ವಯೋಮಿತಿ ಒಳಗಿರಬೇಕು.. ಎಸ್‍ಎಸ್‍ಎಲ್‍ಸಿ, ವರ್ಗಾವಣೆ ಪ್ರಮಾಣ ಪತ್ರ, ಶಾಲಾ ದಾಖಲಾತಿ ಪ್ರಮಾಣ ಪತ್ರದಲ್ಲಿ ದಾಖಲಿಸಿರುವ ಜನ್ಮ ದಿನಾಂಕವನ್ನು ಮಾತ್ರವೇ ಪರಿಗಣಿಸಲಾಗುವುದು. ಅಭ್ಯರ್ಥಿಯು ಕನ್ನಡ ಓದುವ, ಬರೆಯುವ ಜ್ಞಾನವುಳ್ಳ ಅಕ್ಷರಸ್ಥರಾಗಿರುವ ಬಗ್ಗೆ ಸೂಕ್ತ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿಯನ್ನು ನಿಗಧಿತ ನಮೂನೆ-1ರಲ್ಲಿ ಸಲ್ಲಿಸಬೇಕು. ಗ್ರಾಮ ಸಹಾಯಕ ಹುದ್ದೆಯ ತಾತ್ಕಾಲಿಕ ಹುದ್ದೆಯಾಗಿದ್ದು, ಸರ್ಕಾರದಿಂದ ಕಾಲಕಾಲಕ್ಕೆ ನಿಗಧಿ ಆಗುವಂತಹ ಗೌರವಧನ ಪಾವತಿಸಲಾಗುವುದು. ಗ್ರಾಮ ಸಹಾಯಕ ಹುದ್ದೆ ನೇಮಕಾತಿಗಾಗಿ ಈ ಹಿಂದೆ ಈ ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸಿದ ಕೆಳಮಟ್ಟದ ಗ್ರಾಮ ನೌಕರರ ವಂಶಸ್ಥರಿಗೆ ಆದ್ಯತೆ ನೀಡಲಾಗುವುದು. ಕೆಳಮಟ್ಟದ ನೌಕರರ ವಂಶಸ್ಥರೆಂಬುವ ಬಗ್ಗೆ…

Read More

ಬೆಂಗಳೂರು: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ರಾಜ್ಯಾಧ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ್ 8ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.  ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು(ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು,…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಸ್ಕಾಂ ದುಬಾರಿ ಸ್ಮಾರ್ಟ್ ಮೀಟರ್ ದರ ಏರಿಕೆಗೆ ಬ್ರೇಕ್ ಹಾಕಲಾಗಿದೆ. ಅಲ್ಲದೇ ಹಳ್ಳಿ, ಪಟ್ಟಣಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಕ್ಕೆ ಬ್ರೇಕ್ ಹಾಕಲಾಗಿದೆ. ಈ ಮೂಲಕ ಬೆಸ್ಕಾಂ ಸ್ಮಾರ್ಟ್ ಮೀಟರ್ ಶೇ.800ರಷ್ಟು ದುಬಾರಿ ದರ ತೆರುವುದರಿಂದ ಜನರನ್ನು ಪಾರು ಮಾಡಿದೆ. ಈ ಸಂಬಂಧ ರಾಜ್ಯ ಸರ್ಕಾರ ಬೆಸ್ಕಾಂಗೆ ಖಡಕ್ ಸೂಚನೆ ನೀಡಿದೆ ಎನ್ನಲಾಗುತ್ತಿದೆ. ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಮೀಣ ಮತ್ತು ಸಣ್ಣ ಪಟ್ಟಣ ಪ್ರದೇಶಗಳಲ್ಲಿ ಎನ್ ಟಿ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಪಡೆಯಲು ಒತ್ತಾಯಿಸಬಾರದೆಂದು ಸೂಚಿಸಿದೆ. ಈ ಹಿನ್ನಲೆಯಲ್ಲಿ ಶೇ.400ರಿಂದ 800ರಷ್ಟು ಅಧಿಕ ದರದೊಂದಿಗೆ ಖರೀದಿಸಬೇಕಿದ್ದಂತ ಸ್ಮಾರ್ಟ್ ಮೀಟರ್ ದುಬಾರಿ ಬೆಲೆಗೆ ಬ್ರೇಕ್ ಬಿದ್ದಂತೆ ಆಗಿದೆ. https://kannadanewsnow.com/kannada/state-government-orders-fixing-retirement-age-of-asha-workers-at-60-years/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ಎನ್ನುವಂತೆ ಆಯ್ಕೆಗೆ 25 ರಿಂದ 45 ವರ್ಷಗಳ ವಯೋಮಿತಿಯನ್ನು, ನಿವೃತ್ತಿಗೆ 60 ವರ್ಷಗಳ ವಯೋಮಿತಿಯನ್ನು ನಿಗದಿ ಪಡಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು ಆದೇಶ ಮಾಡಿದ್ದಾರೆ. ಅದರಲ್ಲಿ ಆಶಾ ಕಾರ್ಯಕರ್ತೆಯರು ಮಾನ್ಯತೆ ಪಡೆದಂತ ಸಾಮಾಜಿ ಆರೋಗ್ಯ ಕಾರ್ಯಕರ್ತೆಯರಾಗಿದ್ದಾರೆ ಎಂದು ತಿಳಿಸಿದ್ದಾರೆ. ಸ್ಥಳೀಯ ಸಮುದಾಯದಿಂದ ಆಯ್ಕೆಯಾಗಿರುವಂತ ಆಶಾ ಕಾರ್ಯಕರ್ತೆಯರು, ಸಮುದಾಯ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ನಡುವೆ ಕಾರ್ಯನಿರ್ವಹಿಸುತ್ತಿದ್ದಾರೆ. ಆಶಾ ಕಾರ್ಯಕ್ರಮದಡಿಯಲ್ಲಿ ರಾಜ್ಯಾಧ್ಯಂತ ಜಿಲ್ಲಾವಾರು ಆಶಾ ಕಾರ್ಯಕರ್ತೆಯರ ಸ್ಥಾನಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದಿದ್ದಾರೆ. ರಾಜ್ಯದಲ್ಲಿ ಆಶಾ ಕಾರ್ಯಕ್ರಮವನ್ನು ಹಾಲಿ ಇರುವ ಜನಸಂಖ್ಯೆ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ, ತಂತ್ರಜ್ಞಾನ ಇತ್ಯಾದಿಗಳಿಗೆ ಅನುಗುಣವಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರ ಆಯ್ಕೆ ಪ್ರಕ್ರಿಯೆಗೆ 25-45 ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು, ಸದರಿ ನಿವೃತ್ತಿಯ ವಯೋಮಿತಿಯನ್ನು 60 ವರ್ಷಕ್ಕೆ ಸೀಮಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ. https://kannadanewsnow.com/kannada/b-khata-for-unauthorised-properties-in-gram-panchayat-limits-state-govt/ https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/

Read More