Author: kannadanewsnow09

ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ತೆರಿಗೆ ಪಾವತಿಸಿ ಬಿ-ಖಾತಾ ಪಡೆದುಕೊಳ್ಳಬೇಕು. ಸರ್ಕಾರಿ ಹಾಗೂ ಸರ್ಕಾರದ ಅಧೀನ ಇಲಾಖೆ, ನಿಗಮ, ಮಂಡಳಿಗಳ ಜಾಗಗಳನ್ನು ಹೊರತುಪಡಿಸಿ, ಅನಧಿಕೃತ ಬಡಾವಣೆ, ಭೂ ಪರಿವರ್ತನೆ ಹೊಂದದೆ ಸ್ವಂತವಾಗಿ ತಮ್ಮದೇ ಮಾಲೀಕತ್ವ ಹೊಂದಿದ ನಿವೇಶನ/ಜಾಗಗಳಲ್ಲಿ ನಿರ್ಮಿಸಿಕೊಂಡಿರುವ ಅನಧಿಕೃತ ನಿವೇಶನ/ಕಟ್ಟಡಗಳನ್ನು 2024 ಸೆ.10 ರ ಒಳಗಾಗಿ ನೋಂದಾವಣೆ ಮೂಲಕ ಖರೀದಿ ಮಾಡಿದಂತಹ ಆಸ್ತಿಗಳನ್ನು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಬಿ-ಖಾತೆ ಪಡೆಯಬಹುದಾಗಿದೆ. ಎ-ಖಾತಾ ಪಡೆಯಲು ಸಲ್ಲಿಸಬೇಕಾದ ದಾಖಲೆಗಳು 1. ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ನೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ ವಿಭಾಗ * ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರಗಳು/ಮಂಜೂರಾತಿ ಪತ್ರಗಳು ಕಂದಾಯ ಇಲಾಖೆಯಿಂದ 94 ಸಿ ಸಿ ಅಡಿ ನೀಡಲಾದ ಹಕ್ಕು ಪತ್ರ. 2. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ಧೃಡೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ 3. ಪ್ರಸಕ್ತ…

Read More

ನವದೆಹಲಿ: ಜಾರ್ಖಂಡ್ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಗುರುವಾರ ಧನ್ವಾರ್ ಶಾಸಕ ಬಾಬುಲಾಲ್ ಮರಾಂಡಿ ಅವರನ್ನು ತನ್ನ ಶಾಸಕಾಂಗ ಪಕ್ಷದ ನಾಯಕರಾಗಿ ನೇಮಿಸಿದೆ. ರಾಂಚಿಯಲ್ಲಿ ನಡೆದ ಸಭೆಯಲ್ಲಿ, ಜಾರ್ಖಂಡ್ ಬಿಜೆಪಿ ಅಧ್ಯಕ್ಷರೂ ಆಗಿರುವ ಮರಾಂಡಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ರಾಜ್ಯದಲ್ಲಿ ತನ್ನ ನಾಯಕತ್ವವನ್ನು ಬಲಪಡಿಸಲು ಪಕ್ಷದ ಕಾರ್ಯತಂತ್ರದ ಒತ್ತಡದ ಮಧ್ಯೆ ಅವರ ನೇಮಕಾತಿ ಬಂದಿದೆ. ಈ ನಿರ್ಧಾರಕ್ಕೆ ಮುಂಚಿತವಾಗಿ, ಬಿಜೆಪಿ ಸಂಸದೀಯ ಮಂಡಳಿ ಬುಧವಾರ ಪಕ್ಷದ ಶಾಸಕಾಂಗ ನಾಯಕನ ಚುನಾವಣೆಯ ಮೇಲ್ವಿಚಾರಣೆಗಾಗಿ ಇಬ್ಬರು ಕೇಂದ್ರ ವೀಕ್ಷಕರನ್ನು ಘೋಷಿಸಿತ್ತು. ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ಮತ್ತು ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ.ಕೆ.ಲಕ್ಷ್ಮಣ್ (ಸಂಸದ) ಅವರಿಗೆ ಈ ಪ್ರಕ್ರಿಯೆಯ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ವಹಿಸಲಾಗಿದೆ. ಮರಾಂಡಿ ಅವರ ಆಯ್ಕೆಯು ಜಾರ್ಖಂಡ್ನಲ್ಲಿ ಮುಂಬರುವ ರಾಜಕೀಯ ಸವಾಲುಗಳಿಗೆ ಪಕ್ಷವು ಸಜ್ಜಾಗುತ್ತಿರುವಾಗ ತನ್ನ ಸ್ಥಾನವನ್ನು ಬಲಪಡಿಸುವತ್ತ ಬಿಜೆಪಿಯ ನಿರಂತರ ಗಮನವನ್ನು ಸೂಚಿಸುತ್ತದೆ. https://kannadanewsnow.com/kannada/sep-tsp-money-being-used-for-other-purposes-to-cheat-chalavadi-narayanasamy/ https://kannadanewsnow.com/kannada/where-has-the-cms-pro-dalit-concern-gone-did-you-forget-after-coming-to-power/ https://kannadanewsnow.com/kannada/good-news-speaker-u-t-khader-says-club-will-be-set-up-for-mlas-to-chat/

Read More

ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ತುಳಿತಕ್ಕೆ ಒಳಗಾದ ಪರಿಶಿಷ್ಟ ಸಮುದಾಯದವರಿಗಾಗಿ ಇರುವ ಎಸ್‍ಇಪಿ- ಟಿಎಸ್‍ಪಿ ವಿಶೇಷ ಯೋಜನೆ. ವಿದ್ಯಾವಂತರನ್ನಾಗಿ ಮಾಡುವುದು, ಜಮೀನು ಖರೀದಿಸಿ ಕೊಡುವುದು, ಭೂಮಿಗೆ ಕೊಳವೆಬಾವಿ ಹಾಕಿಸಿ ನೀರು ಕೊಡುವುದು, ಕೈಗಾರಿಕೆ ಸ್ಥಾಪನೆಗೆ ನೆರವಿನಂಥ ಆಸ್ತಿ ನಿರ್ಮಾಣಕ್ಕೆ ಹಣ ಕೊಡುವ ಯೋಜನೆ ಇದು. ಅದರ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಮೋಸ ಮಾಡಿದ್ದಾರೆ ಎಂದು ಟೀಕಿಸಿದರು. ಪರಿಶಿಷ್ಟ ಸಮುದಾಯದವರು ಫ್ರೀ ಬಸ್ಸಿನಲ್ಲಿ ಓಡಾಡುವುದಿಲ್ಲ; ಮೋಜು ಮಸ್ತಿ ಮಾಡುವುದಿಲ್ಲ. ಆದರೆ, ನೀವು ನಮ್ಮವರ ವಿಶೇóಷ ಯೋಜನೆಯ ಹಣವನ್ನು ತೆಗೆದು ನಿಮ್ಮ ಖಾತೆಗೆ ಹಾಕಿದ್ದೀರಿ ಎಂದು ಆಕ್ಷೇಪಿಸಿದರು. ಇದು ನಮ್ಮ ಜನಾಂಗಕ್ಕೆ ಮಾಡಿದ ಮೋಸ ಅಲ್ಲವೇ? ಎಂದು ಪ್ರಶ್ನಿಸಿದರು. ನಮ್ಮಲ್ಲಿ ವಿದ್ಯಾವಂತರು ಹೆಚ್ಚಾಗಿದ್ದಾರೆ. ಆದರೆ, ನಿರುದ್ಯೋಗವೂ ಅಷ್ಟೇ ಬೆಳೆಯುತ್ತಿದೆ. ಯುವನಿಧಿ ಪೇಪರಲ್ಲಿ ಇದೆಯೇ ಹೊರತು ನಮ್ಮ ಜನರಿಗೆ ಇದು ದಕ್ಕಿಲ್ಲ ಎಂದು ವಿವರಿಸಿದರು. ರಿಪಬ್ಲಿಕ್ ಪಾರ್ಟಿಯ ರಾಜ್ಯದ ಹಿರಿಯ ಮುಖಂಡ ಡಾ.ಎಂ.ವೆಂಕಟಸ್ವಾಮಿ, ಮಾಜಿ ಸಚಿವ ಮತ್ತು ರಾಜ್ಯ ಉಪಾಧ್ಯಕ್ಷ…

Read More

ಬೆಂಗಳೂರು: ಸಿದ್ದರಾಮಯ್ಯನವರ ದಲಿತಪರ ಕಾಳಜಿ ಎಲ್ಲಿ ಹೋಗಿದೆ? ವಿಪಕ್ಷದಲ್ಲಿದ್ದಾಗ ಇದ್ದ ದಲಿತಪರ ಕಾಳಜಿ ಅಧಿಕಾರಕ್ಕೆ ಬಂದ ಬಳಿಕ ಮರೆತುಹೋಯಿತೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ. ಪರಿಶಿಷ್ಟರ ಹಣ ದುರ್ಬಳಕೆ ವಿರೋಧಿ ಹೋರಾಟ ಸಮಿತಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಿತು. ಹೋರಾಟ ಸಮಿತಿ ಆಹ್ವಾನದ ಮೇರೆಗೆ ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ವಿಜಯೇಂದ್ರ ಅವರು, ಅಹಿಂದ ಹೆಸರಿನೊಂದಿಗೆ ರಾಜ್ಯದಲ್ಲಿ ಪರಿóಶಿಷ್ಟ ಜಾತಿ, ಪಂಗಡಗಳ ಕಣ್ಣೀರು ಒರೆಸುವುದಾಗಿ ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದವರು; ಅವರು ಈ ಕರಾಳದಿನಕ್ಕೆ ಕಾರಣರು ಎಂದು ಟೀಕಿಸಿದರು. ಮುಖ್ಯಮಂತ್ರಿಗಳು ಅಸಹಾಯಕರಾಗಿದ್ದಾರಾ? ಅಥವಾ… ಸಿದ್ದರಾಮಯ್ಯನವರು ಅನುಭವಿ ಮುಖ್ಯಮಂತ್ರಿ; ಅವರು ಅಸಮರ್ಥ ಎನ್ನುವುದಿಲ್ಲ. ಮುಖ್ಯಮಂತ್ರಿಗಳು ಅಸಹಾಯಕರಾಗಿದ್ದಾರಾ? ಅಥವಾ ದಲಿತರ ಮೇಲಿನ ಕಾಳಜಿ ಮರೆತುಹೋಗಿದೆಯೇ ಎಂದು ಬಿ.ವೈ. ವಿಜಯೇಂದ್ರ ಅವರು ಕೇಳಿದರು. ದಲಿತ ಸಮುದಾಯಕ್ಕೆ ಶಕ್ತಿ ಕೊಡಬೇಕಾದ ಹಣದ ದುರ್ಬಳಕೆ ಮಾಡಿದ್ದೀರಲ್ಲ? ಇದು ನ್ಯಾಯವೇ ಸಿದ್ದರಾಮಯ್ಯನವರೇ?…

Read More

ಶಿವಮೊಗ್ಗ : ಜಿಲ್ಲೆಯಲ್ಲಿ ಈವರೆಗೆ ಯಾವುದೇ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ. ಆದರೂ ಸಾರ್ವಜನಿಕರು ಹಕ್ಕಿಜ್ವರ ಬಾರದಂತೆ ಮುನ್ನಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಹಾಗೂ ಜ್ವರ, ಉಸಿರಾಟದ ತೊಂದರೆ ಇತರೆ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಹೆಚ್5ಎನ್1(ಹಕ್ಕಿಜ್ವರ) ಹಾಗೂ ಇತರೆ ಸಾಂಕ್ರಾಮಿಕ ರೋಗ ತಡೆಗಟ್ಟಲು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಕ್ಕಿಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಎನ್1 ವೈರಸ್‌ನಿಂದ ಹರಡುವ ರೋಗ. ಇದು ಟರ್ಕಿ, ಗಿನಿ ಕೋಳಿ, ಬಾತು ಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ. ಇದೊಂದು ಸಾಂಕ್ರಾಮಿಕ ರೋಗವಾಗಿದ್ದು ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಕೆಲವೊಮ್ಮೆ ರೋಗಪೀಡಿತ ಹಕ್ಕಿಗಳ ಸಂಪರ್ಕದಿAದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದರು. ಜಿಲ್ಲೆಯಲ್ಲಿ ಈವರೆಗೆ ಹಕ್ಕಿಜ್ವರ ಪ್ರಕರಣ ಕಂಡು ಬಂದಿಲ್ಲ. ಆದರೂ ಹಕ್ಕಿಜ್ವರ ಕುರಿತು ಮುಂಜಾಗೃತಿ ವಹಿಸಬೇಕು. ಸಾಮಾನ್ಯವಾಗಿ…

Read More

ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವಂತ 137 ವಲಸೆಗಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ 137 ಅಕ್ರಮ ವಲಸೆಗಾರರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1897539883813486877 https://kannadanewsnow.com/kannada/puc-student-commits-suicide-in-tumkur/ https://kannadanewsnow.com/kannada/important-information-for-epfo-account-holders-these-changes-do-not-require-company-permission/

Read More

ತುಮಕೂರು: ಜಿಲ್ಲೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರೋದಾಗಿ ತಿಳಿದು ಬಂದಿದೆ. ಕಾಲೇಜಿನ ಹಾಸ್ಟೆಲ್ ನಲ್ಲೇ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತುಮಕೂರಿನ ಸಿದ್ಧಾರ್ಥ ಕಾಲೇಜಿನ ಹಾಸ್ಟೆಲ್ ನಲ್ಲಿಯೇ ಪಿಯು ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೇಲ್ ನಿಂದ ಹಾಸ್ಟೆಲ್ ಮಹಡಿ ಮೇಲಿನ ಕೊಠಡಿಯಲ್ಲಿ ದೀಪಿಕಾ(19) ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿರಾ ತಾಲ್ಲೂಕಿನ ಕುಂಟೆಗೌಡನಹಳ್ಳಿಯ ವಿದ್ಯಾರ್ಥಿನಿ ದೀಪಿಕಾ ಸಿದ್ಧಾರ್ಥಾ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇಂದು ಹಾಸ್ಟೆಲ್ ನಲ್ಲಿ ವೇಲ್ ನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/good-news-for-priests-employees-of-temples-in-the-state-committee-formed-to-remove-pay-disparity/ https://kannadanewsnow.com/kannada/important-information-for-epfo-account-holders-these-changes-do-not-require-company-permission/

Read More

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ದೇವಸ್ಥಾನಗಳ ಅರ್ಚಕರು, ನೌಕರರಿಗೆ ಗುಡ್ ನ್ಯೂಸ್ ಅನ್ನು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ. ಅದೇ ಅರ್ಚಕರು, ನೌಕರರ ವೇತನ ತಾರತಮ್ಯ ಸರಿಪಡಿಸಲು ಸಮಿತಿ ರಚಿಸುವುದಾಗಿ ಘೋಷಿಸಿದ್ದಾರೆ. ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಲಾಗುವುದು ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1897535758086385925

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕುರಿಗಾಹಿಗಳಿಗೆ ಸಿಹಿಸುದ್ದಿ ಎನ್ನುವಂತೆ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಮರು ಜಾರಿಗೆ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾಹಿತಿ ನೀಡಿರುವಂತ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರು, ರಾಜ್ಯದಲ್ಲಿ ಕುರಿ, ಮೇಕೆ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಮತ್ತು ಕುರಿಗಾಹಿಗಳಿಗೆ ಆರ್ಥಿಕ ನೆರವು ಒದಗಿಸಲು ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು 2023-24ರಲ್ಲಿ ಜಾರಿಗೊಳಿಸಲಾಗಿತ್ತು ಎಂದಿದ್ದಾರೆ. ಪ್ರಸಕ್ತ ಸಾಲಿನವರೆಗೆ 7,806 ಫಲಾನುಭವಿಗಳು ಕಾರ್ಯಕ್ರಮದ ಪ್ರಯೋಜನ ಪಡೆದಿದ್ದು, ಯೋಜನೆಯ ಮರುಚಾಲನೆಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು. https://twitter.com/KarnatakaVarthe/status/1897569292469813467 https://kannadanewsnow.com/kannada/kuwj-endowment-awards-ceremony-to-be-held-in-koppal-on-march-9/ https://kannadanewsnow.com/kannada/important-information-for-epfo-account-holders-these-changes-do-not-require-company-permission/

Read More

ಬೆಂಗಳೂರು: ಕಲಾವಿದರ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ನಟ್ಟು ಬೋಲ್ಟು ಟೈಟ್ ಮಾಡ್ತೀನಿ ಎಂಬುದಾಗಿ ಹೇಳಿರುವಂತ ಹೇಳಿಕೆ ಸರಿಯಾದುದಲ್ಲ ಅಂತ ನಟಿ ರಮ್ಯಾ ಆಕ್ಷೇಪಿಸಿದ್ದಾರೆ. ನಗರದಲ್ಲಿ ಸದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನಟ್ಟು, ಬೋಲ್ಟ್ ಹೇಳಿಕೆ ಬೆದರಿಸುವ ಉದ್ದೇಶ ಇಲ್ಲ ಅಂತ ಅವರೇ ಸ್ಪಷ್ಟ ಪಡಿಸಿದ್ದಾರೆ. ಆದರೇ ಹಾಗೆ ಅವರು ಹೇಳಿದ್ದು ತಪ್ಪು. ಅವರ ಈ ರೀತಿಯ ಹೇಳಿಕೆ ಕೆಲವರಿಗೆ ಇಷ್ಟ ಆಗಿಲ್ಲ. ಈಗಾಗಲೇ ಡಿಕೆ ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಕ್ಲಾರಿಫಿಕೇಷನ್ ಕೊಟ್ಟಿದ್ದಾರೆ. ಈ ವಿಚಾರವನ್ನು ಇಲ್ಲಿಗೆ ನಾವು ಬಿಟ್ಟು ಬಿಡೋಣ ಅಂತ ತಿಳಿಸಿದರು. ನನಗೆ ಬೆಂಗಳೂರು ಚಲನಚಿತ್ರೋತ್ಸವದ ಬಗ್ಗೆ ಒಂದು ವಾರದ ಹಿಂದೆಯೇ ಆಹ್ವಾನ ಬಂದಿತ್ತು. ಬೇರೆಯವರಿಗೆ ಆಹ್ವಾನ ಹೋಗಿದ್ಯೋ ಇಲ್ಲವೋ ನನಗೆ ಗೊತ್ತಿಲ್ಲ. ನನಗಂತೂ ಆಹ್ವಾನ ಬಂದಿದೆ. ಹಾಗಾಗಿ ನಾನು ಈಗ ಫಿಲ್ಮ್ ಫೆಸ್ಟಿವೆಲ್ ಗೆ ಹೋಗ್ತಿದ್ದೇನೆ. ಒಂದು ಮಾತು ತಿಳಿದುಕೊಳ್ಳಬೇಕಿದೆ. ನಾಡು, ನುಡಿ, ಜಲದ ವಿಚಾರವಾಗಿ ಯಾವುದೇ ಆಹ್ವಾನ ಬೇಕಿಲ್ಲ.…

Read More