Subscribe to Updates
Get the latest creative news from FooBar about art, design and business.
Author: kannadanewsnow09
ಈ ನಕ್ಷತ್ರದಲ್ಲಿ ಹುಟ್ಟಿದವರಿಗೆ ಕಷ್ಟ ನಷ್ಟ ತಪ್ಪಿದ್ದಲ್ಲ.. ಪುರಾಣ ಕಥೆಗಳಲ್ಲೂ ಸಹ ಇದಕ್ಕೆ ದಾಖಲೆಗಳಿವೆ.. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:-…
ಬೆಂಗಳೂರು: 2024-25ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.10,000 ದಂತೆ ಪ್ರೋತ್ಸಾಹಿತ ಕ್ರೀಢಾ ವಿದ್ಯಾರ್ಥಿ ವೇತನ ನೀಡಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು,ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ರೂ. 10,000/- ನೀಡುವ ಸಂಬಂಧ 2024-25ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಉಲ್ಲೇಖಿತ ಸುತ್ತೋಲೆಯಲ್ಲಿ ಕಛೇರಿಯ ಅಧಿಕೃತ ಜಾಲತಾಣ: https://sevasindhuservices.karnataka.gov.in ಮೂಲಕ ಆನ್ಲೈನ್ನಲ್ಲಿ ದಿನಾಂಕ:01-06-2024 ರಿಂದ 30-06-2024ರವರೆಗೆ ರವರೆಗೆ ಸಲ್ಲಸಲು ತಿಳಿಸಲಾಗಿತ್ತು. ಸದರಿ ದಿನಾಂಕವನ್ನು 20-07-2024ರವರೆಗೆ ಮುಂದುವರೆಸಿ ಆದೇಶಿಸಿದ. ಈ ಬಗ್ಗ ಜಿಲ್ಲೆಗಳಲ್ಲಿ ಅಗತ್ಯ ಕ್ರಮ ಕೈಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ವ್ಯಾಪಕ ಪ್ರಚಾರ ನೀಡಲು ಸೂಚಿಸಿದ್ದಾರೆ. https://kannadanewsnow.com/kannada/good-news-for-those-waiting-for-new-bpl-card-for-treatment-application-process-begins-today/
ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕು ನಗರ ಉಪ ವಿಭಾಗ 1 ರಲ್ಲಿ ವಿದ್ಯಾನಗರ ಮುಖ್ಯ ರಸ್ತೆಯಲ್ಲಿನ ಹಳೆಯ ಕಮಬಗಳನ್ನು ಬದಲಿಸುವ ಕಾಮಗಾಗಿ ಮತ್ತು 2ರ ಮಂಡ್ಲಿ ಘಟಕ-06ರ ವ್ಯಾಪ್ತಿಯಲ್ಲಿ 11 ಕೆವಿ ಮಾರ್ಗದ ನಿರ್ವಹಣೆ ಇರುವುದರಿಂದ ವಿದ್ಯಾನಗರ, ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ ಪವರ್ ಕಟ್ ಆಗಲಿದೆ. ಬಾಲ್ರಾಜ್ ಅರಸ್ ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ, ವಿನಾಯಕನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಮತ್ತು ಆರ್.ಟಿ.ಸಿ.ರಸ್ತೆ, ಮೀನಾಕ್ಷಿಭವನ, ಮಹಾನಗರ ಪಾಲಿಕೆ, ಕುವೆಂಪು ರಂಗಮಂದಿರ, ಡಿ.ವಿ.ಎಸ್.ವೃತ್ತ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಅಮೀರ್ ಅಹ್ಮದ್ ವೃತ್ತ, ಕೃಷಿ ಕಚೇರಿ ಕರೆಂಟ್ ಇರೋದಿಲ್ಲ. ಮಾಕಮ್ಮ ಬೀದಿ, ಕೆರೆದುರ್ಗಮ್ಮನ ಕೇರಿ, ಪುಟ್ಟನಂಜಪ್ಪ ಕೇರಿ, ಅಜಾದ್ನಗರ, ಕಲಾರ್ಪೇಟೆ, ಸಿದ್ದಯ್ಯ ರಸ್ತೆ, ಇಮಾಮ್ ಬಾಡಾ, ಮುರಾದ್ ನಗರ, ಕ್ರೌನ್ ಪ್ಯಾಲೇಸ್ ಶಾದಿಮಹಲ್, ತಾಹಾ…
ಶಿವಮೊಗ್ಗ : ಅರಣ್ಯ ಹಕ್ಕು ಕಾಯಿದೆ ಅಡಿ ರಾಜ್ಯದಾದ್ಯಂತ ಸಲ್ಲಿಸಲಾಗಿರುವ ಬಹುತೇಕ ಅರ್ಜಿಗಳು ತಿರಸ್ಕೃತವಾಗಿದ್ದು, ಈ ಎಲ್ಲ ಅರ್ಜಿಗಗಳ ಪುನರ್ ಪರಿಶೀಲನೆ ಮಾಡಿ, ಅರ್ಜಿದಾರರಿಗೆ ಸ್ವಾಭಾವಿಕ ನ್ಯಾಯದ ಅಡಿಯಲ್ಲಿ ತಮ್ಮ ಹಕ್ಕು ಪ್ರತಿಪಾದಿಸಲು ಅವಕಾಶ ನೀಡಬೇಕು, ಈ ಪ್ರಕ್ರಿಯೆ ಪೂರ್ಣವಾಗುವತನಕ ಯಾರನ್ನೂ ಒಕ್ಕಲೆಬ್ಬಿಸಬಾರದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಶಿವಮೊಗ್ಗದ ಅರಣ್ಯ ಇಲಾಖೆಯ ಶ್ರೀಗಂಧ ಸಭಾಂಗಣದಲ್ಲಿಂದು ನಡೆದ ಶಿವಮೊಗ್ಗ ವೃತ್ತದ ಅರಣ್ಯಾಧಿಕಾರಿಗಳೊಂದಿಗಿನ ಪರಾಮರ್ಶೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2005ರ ಡಿಸೆಂಬರ್ 13ನೇ ತಾರೀಖಿಗೆ ಮುನ್ನ ಅರಣ್ಯವಾಸಿಗಳಾಗಿದ್ದ ಎಲ್ಲ ಬುಡಕಟ್ಟು ಜನರಿಗೆ ಅರಣ್ಯ ಹಕ್ಕು ಕಾಯಿದೆಯಡಿ ಪರಿಹಾರ ಸಿಗಲೇಬೇಕು, ಅದೇ ರೀತಿ ಇತರ ಹಿಂದುಳಿದವರು ಈ ದಿನಾಂಕಕ್ಕೆ ಮುನ್ನ ಅರಣ್ಯದಲ್ಲಿ ಜೀವನೋಪಾಯಕ್ಕಾಗಿಯೇ ನೆಲೆಸಿದ್ದಲ್ಲಿ ನಿಯಮಾನುಸಾರ ಅವರಿಗೆ ಹಕ್ಕು ನೀಡಬೇಕಾಗುತ್ತದೆ. ಪ್ರಸ್ತುತ 3 ತಲೆಮಾರು ಅಂದರೆ 75 ವರ್ಷ ಅವರು ಅಲ್ಲಿದ್ದರು ಎಂದು ಸಾಬೀತು ಪಡಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಯಮಕ್ಕೆ ತಿದ್ದುಪಡಿ…
ನವದೆಹಲಿ: ಭಾರತ ಸೇರಿದಂತೆ ವಿಶ್ವದಾಧ್ಯಂತ ಇನ್ಸ್ಟಾಗ್ರಾಮ್ ಡೌನ್ ಆಗಿದೆ. ಮೆಟಾ ಅಪ್ಲಿಕೇಶನ್ ಸ್ಥಗಿತಕ್ಕೆ ಸಾಕ್ಷಿಯಾಗಿದ್ದು, ಬಳಕೆದಾರರು ಎಕ್ಸ್ನಲ್ಲಿ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ. ವ್ಯಾಪಕವಾಗಿ ಬಳಸಲಾಗುವ ಫೋಟೋ-ಹಂಚಿಕೆ ಪ್ಲಾಟ್ಫಾರ್ಮ್ ಮೆಟಾದ ಇನ್ಸ್ಟಾಗ್ರಾಮ್ ಗಮನಾರ್ಹ ಸೇವಾ ಅಡಚಣೆಯನ್ನು ಎದುರಿಸಿದೆ. ಇದು ದೇಶಾದ್ಯಂತ ಬಳಕೆದಾರರ ಮೇಲೆ ಪರಿಣಾಮ ಬೀರಿದೆ. ಡೌನ್ಡೆಟೆಕ್ಟರ್ ಪ್ರಕಾರ, ಸ್ಥಳೀಯ ಸಮಯ ಗುರುವಾರ ಬೆಳಿಗ್ಗೆ 8: 58 ರ ಸುಮಾರಿಗೆ ಭಾರತದಲ್ಲಿ ವಿದ್ಯುತ್ ಕಡಿತ ಪ್ರಾರಂಭವಾಯಿತು. ಹೆಚ್ಚಿನ ಸಮಸ್ಯೆಗಳು ಬೆಂಗಳೂರು, ದೆಹಲಿ, ಲಕ್ನೋ, ನಾಗ್ಪುರ, ಮುಂಬೈ ಮತ್ತು ಹೈದರಾಬಾದ್ನಂತಹ ಪ್ರಮುಖ ನಗರಗಳಲ್ಲಿ ಕೇಂದ್ರೀಕೃತವಾಗಿವೆ ಎಂದು ಮೇಲ್ವಿಚಾರಣಾ ಸೇವೆಯ ನಕ್ಷೆಯು ವಿವರಿಸುತ್ತದೆ. ಈ ಅಡೆತಡೆಗಳು ಹೆಚ್ಚಿನ ಸಂಖ್ಯೆಯ ಬಳಕೆದಾರರ ಮೇಲೆ ಪರಿಣಾಮ ಬೀರಿವೆ, ಇದು ಸಾಕಷ್ಟು ಹತಾಶೆಯನ್ನು ಉಂಟುಮಾಡಿದೆ. https://twitter.com/NirmalShah_/status/1811345847407247560 https://twitter.com/lizziesaltmans/status/1811259247616839756 ಸ್ಥಗಿತಕ್ಕೆ ಪ್ರತಿಕ್ರಿಯೆಯಾಗಿ, ನಿರಾಶೆಗೊಂಡ ಬಳಕೆದಾರರು ತಮ್ಮ ಕುಂದುಕೊರತೆಗಳನ್ನು ವ್ಯಕ್ತಪಡಿಸಲು ತ್ವರಿತವಾಗಿ ಸಾಮಾಜಿಕ ಮಾಧ್ಯಮವನ್ನು, ವಿಶೇಷವಾಗಿ ಎಕ್ಸ್ (ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ಅನ್ನು ತೆಗೆದುಕೊಂಡರು. ಅವರು ತಮ್ಮ ಹತಾಶೆಯನ್ನು ಹಾಸ್ಯಮಯ ತಿರುವಿನೊಂದಿಗೆ ಹಂಚಿಕೊಂಡರು, ತಮ್ಮ…
ಬೆಂಗಳೂರು: “ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೆಪಿಸಿಸಿ ಕಚೇರಿ ಬಳಿ ಗುರುವಾರ ಗಮನ ಸೆಳೆದಾಗ ಅವರು ಹೀಗೆ ಉತ್ತರಿಸಿದರು. “ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ಗ್ಯಾರಂಟಿ ಯೋಜನೆಗಳು ಏನನ್ನೂ ಮುಳುಗಿಸಿಲ್ಲ. ಹೀಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ. ಕಳೆದ ವರ್ಷ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಅನ್ನು ನಾವು ಪುನರ್ ಪರಿಶೀಲಿಸಿ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೆವು. ಈ ಬಾರಿಯ ಬಜೆಟ್ ನಲ್ಲಿ 50 ಸಾವಿರ ಕೋಟಿಗೂ ಹೆಚ್ಚು ಹಣ ಮೀಸಲಿಟ್ಟಿದ್ದೇವೆ. ನಾವು ಮತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ ಮಾಡಿಲ್ಲ. ಜನರ ಬದುಕಿನಲ್ಲಿ ಬದಲಾವಣೆ ತರಲು ಈ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಬೆಲೆ ಏರಿಕೆಯಿಂದ ಜನರಿಗೆ ತೊಂದರೆಯಾಗಿತ್ತು. ಮುಂದಿನ ದಿನಗಳಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಗಣ್ಯರ ವಾಹನಗಳ ಮೇಲೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವ ಸಂಬಂಧ ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ. ಆ ಬಗ್ಗೆ ಮುಂದೆ ಓದಿ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ರಾಷ್ಟ್ರಧ್ವಜ ಬಳಕೆ ಬಗ್ಗೆ ಧ್ವಜ ಸಂಹಿತೆ, 2002 ಅನ್ನು ಕೇಂದ್ರ ಸರ್ಕಾರದ ಗ್ರಹ ಮಂತ್ರಾಲಯವು ಹೊರಡಿಸಿದೆ. ಈ ಧ್ವಜ ಸಂಹಿತೆಯ ಸೆಕ್ಷನ್ IX ರ ಕಂಡಿಕೆ ಸಂ. 3.44 ಮತ್ತು 3.45 ಅನ್ನು ಕೆಳಗೆ ಉದ್ಧರಿಸಲಾಗಿದೆ. 3.44 The privilege of flying the National Flag on motor cars is limited to the :- (1) President; (2) Vice-President; (3) Governors and Lieutenant Governors; (4) Heads of Indian Missions/Posts abroad in the countries to which they are accredited ; (5) Prime Minister and…
ನವದೆಹಲಿ: ಬಿಹಾರ ನೀಟ್-ಯುಜಿ ಪ್ರಕರಣದ ( NEET-UG case ) ಕಿಂಗ್ ಪಿನ್ ಎಂದು ಹೇಳಲಾದ ವ್ಯಕ್ತಿಯನ್ನು ಕೇಂದ್ರ ತನಿಖಾ ದಳ ( Central Bureau of Investigation -CBI) ಗುರುವಾರ ಪಾಟ್ನಾದಲ್ಲಿ ಬಂಧಿಸಿದೆ. ಆರೋಪಿಯನ್ನು ಸಿಬಿಐನ ಸಕ್ಷಮ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 10 ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿದೆ. ಪಾಟ್ನಾ ಮತ್ತು ಕೋಲ್ಕತಾ ಸೇರಿದಂತೆ ರಾಕೇಶ್ ರಂಜನ್ ಅಲಿಯಾಸ್ ರಾಕಿಗೆ ಸಂಬಂಧಿಸಿದ ನಾಲ್ಕು ಸ್ಥಳಗಳಲ್ಲಿ ಕೇಂದ್ರ ಸಂಸ್ಥೆ ಮತ್ತಷ್ಟು ಶೋಧ ನಡೆಸಿತು. ಮೂಲಗಳ ಪ್ರಕಾರ, ಶೋಧದ ಸಮಯದಲ್ಲಿ ದೋಷಾರೋಪಣೆ ದಾಖಲೆಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. https://kannadanewsnow.com/kannada/here-are-the-highlights-of-todays-99th-meeting-on-cauvery-water-sharing-by-cwrc/ https://kannadanewsnow.com/kannada/valmiki-scam-ed-takes-corporation-chairman-basanagouda-daddal-former-pa-pampanna-into-custody/
ಬೆಂಗಳೂರು : ರಾಜ್ಯಾದ್ಯಂತ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ವಳವಾಗಿದ್ದು. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆ ಎಲ್ಲಾ ಶಾಲೆಗಳಿಗೆ ಮಾರ್ಗಸೂಚಿ ಪ್ರಕಟಿಸಿದೆ. ಎನ್ ವಿ ಬಿ ಡಿಸಿ ಪಿ : ಡೆಂಗಿ ಜ್ವರ ಮುಂಜಾಗ್ರತೆ ಹಾಗೂ ನಿಯಂತ್ರಣ, ಹೆಚ್ಚುವರಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಿದೆ. ಪ್ರಸ್ತುತ ರಾಜ್ಯದ ಡೆಂಗಿ ಜ್ವರ ಪರಿಸ್ಥಿತಿ ಹಾಗೂ ಮಳೆಗಾಲದ ಹಿನ್ನೆಲೆಯಲ್ಲಿ, ಡೆಂಗಿ ಜ್ವರ ಪ್ರಕರಣಗಳ ಚಿಕಿತ್ಸೆ ಹಾಗೂ ಸಮರ್ಪಕ ನಿರ್ವಹಣೆಯು ಪ್ರಮುಖವಾಗಿದ್ದು, ಫಲಿತಾಂಶ ಆಧಾರಿತವಾಗಿರುವುದು ಅಗತ್ಯವಾಗಿದೆ. ಅದರಂತೆ, ಸಂಬಂಧಪಟ್ಟವರು ಈ ಕೆಳಕಂಡ ಹೆಚ್ಚುವರಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿದೆ. 1. ರಾಜ್ಯದ ದೈನಂದಿನ ಡೆಂಗಿ ಜ್ವರ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆ ಹಾಗೂ ಉಸ್ತುವಾರಿಗಾಗಿ, ಎನ್ ವಿ ಬಿ ಡಿಸಿ ಪಿ ವಿಭಾಗದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಆರೋಗ್ಯಸೌಧ, ಬೆಂಗಳೂರು, ಇಲ್ಲಿ’ಡೆಂಗಿ ವಾರ್ ರೂಮ್ ‘ಅನ್ನು ಸಕ್ರಿಯಗೊಳಿಸುವುದು. 2. ಎಲ್ಲಾ ಜಿಲ್ಲೆಗಳು / ಬಿಬಿಎಂಪಿ ವ್ಯಾಪ್ತಿಯ ಡೆಂಗಿ ಜ್ವರ ಪರಿಸ್ಥಿತಿಯ ಮೇಲ್ವಿಚಾರಣೆ ಹಾಗೂ…
ನವದೆಹಲಿ: ದಿನಾಂಕ: 11.07.2024 ರಂದು CWRCಯ 99ನೇ ಸಭೆಯು ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ನಡೆಯಿತು. ಈ ಸಭೆಯಲ್ಲಿನ ಇಂದಿನ ಪ್ರಮುಖ ಹೈಲೈಟ್ಸ್ ಮುಂದೆ ಓದಿ. ಕರ್ನಾಟಕವು CWRC ಮುಂದೆ ಈ ಕೆಳಕಂಡ ಅಂಶಗಳನ್ನು ಸಲ್ಲಿಸಿತು: ದಿನಾಂಕ 01.06.2024 ರಿಂದ 09.07.2024 ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಸಂಚಿತ ಒಳಹರಿವು 41.651 ಟಿ.ಎಂ.ಸಿ ಇರುತ್ತದೆ. ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಸಂಚಿತ ಒಳಹರಿವಿನ ಕೊರತೆಯು 28.71% ಇರುತ್ತದೆ. ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿನ ಸಂಗ್ರಹಣೆಯು 58.668 ಟಿಎಂಸಿ ಇದ್ದು, ಮೆಟ್ಟೂರಿನಿಂದ 4.905 ಟಿಎಂಸಿ ಮತ್ತು ಭವಾನಿಯಿಂದ 0.618 ಟಿಎಂಸಿ (ಒಟ್ಟು 5.542 ಟಿಎಂಸಿ) ನದಿಗೆ ಬಿಡುಗಡೆ ಮಾಡಿರುವುದಲ್ಲದೆ ತಮಿಳುನಾಡಿನ ಮೂರು ಜಲಾಶಯಗಳಲ್ಲಿ 24.705 ಟಿಎಂಸಿ ಇರುತ್ತದೆ. ನೀರು ಬಿಡುಗಡೆಗೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಸಮಿತಿಯು ಜುಲೈ 25, 2024 ರವರೆಗೆ ಕಾಯುವುದು ಸೂಕ್ತವೆಂದು ಕರ್ನಾಟಕವು ಅಭಿಪ್ರಾಯಿಸಿತು. ತದನಂತರ, ಕರ್ನಾಟಕದ ಜಲಾಶಯಗಳಿಂದ ನೀರು ಬಿಡುವ ಬಗ್ಗೆ ಸೂಕ್ತ ನಿರ್ಧಾರಕ್ಕೆ ಬರಲು ಪ್ರಾಧಿಕಾರವು ವಸ್ತಸ್ಥಿತಿಯನ್ನು…