Author: kannadanewsnow09

ಬೆಂಗಳೂರು: ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಲು ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ರೂಟ್‍ಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ. ಗಸ್ತಿನ ಸಮಯದಲ್ಲಿ ಮತ್ತು ಸಾರ್ವಜನಿಕರಿಂದ ವಿಶೇಷವಾಗಿ ಮಹಿಳೆ / ಮಹಿಳಾ ಸಂಘಗಳಿಂದ ದೂರುಗಳು ಸ್ವೀಕೃತವಾದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಸ್ಥಳಗಳ ಮೇಲೆ ದಾಳಿ ನಡೆಸಿ, ಅಕ್ರಮಗಳು ಕಂಡುಬಂದಲ್ಲಿ ಅಬಕಾರಿ ಕಾಯ್ದೆ ಮತ್ತು ನಿಯಮಗಳನುಸಾರ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ ಪಾಟೀಲ್ ಅವರು ತಿಳಿಸಿದರು. ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬೈಲಹೊಂಗಲ ಶಾಸಕರಾದ ಕೌಜಲಗಿ ಮಹಾಂತೇಶ್ ಶಿವಾನಂದ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲಾ ಮದ್ಯ ಮಾರಾಟ ಸನ್ನದುಗಳನ್ನು ನಿಯಮಿತವಾಗಿ ಮಾಸಿಕವಾಗಿ ಪರಿಶೀಲಿಸಲಾಗುತ್ತಿದ್ದು ಕಾಯ್ದೆ/ನಿಯಮ/ಸನ್ನದು ಷರತ್ತು ಉಲ್ಲಂಘನೆಯಾದಲ್ಲಿ ಅಂತಹ ಸನ್ನದುದಾರರ ವಿರುದ್ಧ ಅಬಕಾರಿ ಕಾಯ್ದೆ ಪ್ರಕರಣ ದಾಖಲಿಸಲಾಗುತ್ತಿದ್ದು, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ರಸ್ತೆಗಾವಲು ನಡೆಸಿ ಸಂಶಯಾಸ್ಪದ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಅಲ್ಲದೇ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

Read More

ಶಿವಮೊಗ್ಗ: ನಾಳೆಯಿಂದ ಸೊರಬ ತಾಲ್ಲೂಕಿನ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬಾ ದೇವಿ ಜಾತ್ರಾ ಮಹೋತ್ಸವ ಆರಂಭಗೊಳ್ಳಲಿದೆ. ಈ ಜಾತ್ರಾ ಮಹೋತ್ಸವಕ್ಕೆ ಆಗಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರನ್ನು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಜಿ.ಕೆ ಪ್ರಮೀಳಾ ಕುಮಾರಿ ಅವರು ಆಹ್ವಾನಿಸಿದರು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿಯ ಜಾತ್ರೆ ಜಿಲ್ಲೆಯಷ್ಟೇ ಅಲ್ಲದೇ ಹೊರ ಜಿಲ್ಲೆಯಲ್ಲೂ ಪ್ರಸಿದ್ಧಿಯಾದಂತದ್ದು. ಇಂತಹ ಜಾತ್ರೆ ಮಾರ್ಚ್.5ರ ನಾಳೆಯಿಂದ, ಮಾರ್ಚ್.10ರವರೆಗೆ ಐದು ದಿನಗಳ ಕಾಲ ನಡೆಯಲಿದೆ. ಈಗಾಗಲೇ ತಾಲ್ಲೂಕು ಆಡಳಿತದಿಂದ ನಾಳೆಯ ಜಾತ್ರೆಗೆ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದ್ದು, ಅಂತಿಮ ಸಿದ್ಧತಾ ಕಾರ್ಯ ನಡೆಯುತ್ತಿದೆ. ಈ ಚಂದ್ರಗುತ್ತಿಯ ರೇಣುಕಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ಆಗಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರನ್ನು ಭೇಟಿಯಾಗಿ, ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಜಿ.ಕೆ ಪ್ರಮೀಳಾ ಕುಮಾರಿ ಅವರು ಆಮಂತ್ರಿಸಿದರು. ಚಂದ್ರಗುತ್ತಿ ಶ್ರೀ ರೇಣುಕಮ್ಮ ದೇವಿ ಜಾತ್ರೆ: ಬೆತ್ತಲೆ ಸೇವೆ ನಿಷೇಧ, ಪೂಜಾ ವಿಧಿ-ವಿಧಾನಗಳಿಗೆ…

Read More

ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಎಫ್ ಐಆರ್ ನಲ್ಲಿ ಬ್ರಿಟಿಷ್ ಶಸ್ತ್ರಾಸ್ತ್ರ ಸಲಹೆಗಾರ ಕ್ರಿಶ್ಚಿಯನ್ ಜೇಮ್ಸ್ ಮೈಕೆಲ್ ಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಫೆಬ್ರವರಿಯಲ್ಲಿ, ಕೇಂದ್ರ ತನಿಖಾ ದಳ (ಸಿಬಿಐ) ದಾಖಲಿಸಿದ ಅದೇ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿತು. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕ್ರಿಶ್ಚಿಯನ್ ಮೈಕೆಲ್ ಅವರ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಸ್ವರಣ ಕಾಂತಾ ಶರ್ಮಾ ಅನುಮತಿಸಿದರು. ಲೈವ್ ಲಾ ಪ್ರಕಾರ, ಕ್ರಿಶ್ಚಿಯನ್ ಮೈಕೆಲ್ ಪರ ವಕೀಲರು ಬ್ರಿಟಿಷರ ಪಾಸ್ಪೋರ್ಟ್ ಈಗಾಗಲೇ ಮುಗಿದಿದೆ. ಅವರು ಈಗಾಗಲೇ ಆರು ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿದ್ದಾರೆ ಎಂದು ಸಲ್ಲಿಸಿದ್ದರು. ಪಿಎಂಎಲ್ಎಗೆ ಗರಿಷ್ಠ ಏಳು ವರ್ಷಗಳ ಶಿಕ್ಷೆ ಇದೆ ಎಂದು ಒತ್ತಿ ಹೇಳಿದರು. ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ಪ್ರಕರಣಗಳಲ್ಲಿ ಕ್ರಿಶ್ಚಿಯನ್ ಮೈಕೆಲ್ ಅವರಿಗೆ 2022 ರಲ್ಲಿ ದೆಹಲಿ ಹೈಕೋರ್ಟ್ ಸಮನ್ವಯ…

Read More

ಬೆಂಗಳೂರು: ಬರೋಬ್ಬರಿ 14.8 ಕೆಜಿ ಚಿನ್ನದೊಂದಿಗೆ ನಿನ್ನೆ ರಾತ್ರಿ ದುಬೈನಿಂದ ಬೆಂಗಳೂರಿಗೆ ಬಂದಾಗ ನಟಿ ರನ್ಯಾ ರಾವ್ ಡಿಆರ್ ಐ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಕೋರ್ಟ್ ಮಾರ್ಚ್.18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ನಿನ್ನೆ ರಾತ್ರಿ ದುಬೈನಿಂದ ಬೆಂಗಳೂರಿಗೆ ಬಂದಿದ್ದಂತ ನಟಿ ರನ್ಯಾ ರಾವ್ ಅವರು 14.8 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಪ್ರಕರಣದಲ್ಲಿ ಡಿ ಆರ್ ಐ ನಿಂದ ಬಂಧನಕ್ಕೆ ಒಳಗಾಗಿದ್ದರು. ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್, ನಟಿ ರನ್ಯಾ ರಾವ್ ಅವರಿಗೆ ಮಾರ್ಚ್.18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಈ ಮೂಲಕ ಚಿನ್ನ ಅಕ್ರಮವಾಗಿ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದಂತ ನಟಿ ರನ್ಯಾ ರಾವ್ ಅವರು ಜೈಲುಪಾಲಾದಂತೆ ಆಗಿದೆ. ಅಂದಹಾಗೇ ನಟಿ ರನ್ಯಾ ರಾವ್ ಅವರು ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ, ಗೋಲ್ಡನ್ ಸ್ಟಾರ್ ಗಣೇಶ್ ಜೊತೆಗೆ ಪಟಾಕಿ ಸಿನಿಮಾದಲ್ಲಿ ನಟಿಸಿದ್ದರು.…

Read More

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ತನಿಖೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್ ಗೆ ಮತ್ತೆ ಮೇಲ್ಮನವಿ ಸಲ್ಲಿಸಿದ್ದಾರೆ. ಹೀಗಾಗಿ ಸಿಎಂ ಹಾಗೂ ಪತ್ನಿ ಪಾರ್ವತಿಗೆ ಸಂಕಷ್ಟ ಎದುರಾದಂತೆ ಆಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Mysore Urban Development Authority -MUDA) ಭೂ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಕಾನೂನು ಸವಾಲುಗಳನ್ನು ಎದುರಿಸುತ್ತಿದ್ದು, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಆರ್ ಟಿಐ ಕಾರ್ಯಕರ್ತ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿ.ಎಂ.ಗೆ 14 ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ಅವರು ಪ್ರಕರಣವನ್ನು ರಾಜ್ಯ ಒಂಬುಡ್ಸ್ ಮನ್ ಲೋಕಾಯುಕ್ತದಿಂದ ಸಿಬಿಐಗೆ ವರ್ಗಾಯಿಸುವಂತೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ, ಲೋಕಾಯುಕ್ತರಿಂದ ಪಕ್ಷಪಾತ ಅಥವಾ ಕಳಪೆ ತನಿಖೆಯನ್ನು ಸೂಚಿಸಲು ಯಾವುದೇ ಪುರಾವೆಗಳಿಲ್ಲ ಎಂದು ತೀರ್ಪು ನೀಡಿ ನ್ಯಾಯಾಲಯವು ಫೆಬ್ರವರಿ 7 ರಂದು ಮನವಿಯನ್ನು…

Read More

ಬೆಂಗಳೂರು: ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಸುಮ್ಮನಹಳ್ಳಿ ಪ್ರಾಣಿಗಳ ವಿದ್ಯುತ್ ಚಿತಾಗಾರದಲ್ಲಿ ತುರ್ತು ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಬೇಕಾಗಿರುವುದರಿಂದ 8ನೇ ಮಾರ್ಚ್ 2025 ರಿಂದ 25ನೇ ಮಾರ್ಚ್ 2025 ವರೆಗೆ 18 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ವಿದ್ಯುತ್ ವಿಭಾಗದ ಕಾರ್ಯಪಾಲಕ ಅಭಿಯಂತರರು ತಿಳಿಸಿರುತ್ತಾರೆ. ಮಾರ್ಚ್ ತಿಂಗಳಲ್ಲಿ ಅನಧಿಕೃತ ಓ.ಎಫ್.ಸಿ ತೆರವು ಕಾರ್ಯಾಚರಣೆ ಅಭಿಯಾನ ಬಿಬಿಎಂಪಿ‌ ವ್ಯಾಪ್ತಿಯಲ್ಲಿ “ಅನಧಿಕೃತ ಓ.ಎಫ್.ಸಿ ತೆರವು ಕಾರ್ಯಾಚರಣೆ -ಮಾರ್ಚ್ 2025” ಅಭಿಯಾನವನ್ನು ಹಮ್ಮಿಕೊಂಡಿದ್ದು, ತೆರವು ಕಾರ್ಯಾಚರಣೆನ್ನು ಆರಂಭಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 3ನೇ ಮಾರ್ಚ್ 2025 ರಿಂದ ಅನಧಿಕೃತವಾಗಿ ಅಳವಡಿಸಲಾಗಿರುವ ಓ.ಎಫ್.ಸಿ. ಗಳನ್ನು ತೆರವುಗೊಳಿಸುವ ಸಂಬಂಧ ಮುಖ್ಯ ಆಯುಕ್ತರು ಸುತ್ತೋಲೆ ಹೊರಡಿಸಿರುತ್ತಾರೆ. ಅದರಂತೆ, ನಗರದ ಎಲ್ಲಾ 8 ವಲಯಗಳಲ್ಲಿ ಬರುವ ವಾರ್ಡ್ ವ್ಯಾಪ್ತಿಯ ರಸ್ತೆಗಳಲ್ಲಿ ಅನಧಿಕೃತವಾಗಿ ಅಳವಡಿಸಲಾಗಿರುವ ಓ.ಎಫ್.ಸಿ. ಗಳನ್ನು ತೆರವುಗೊಳಿಸಬೇಕಿದ್ದು, ಅದರ ಸಂಪೂರ್ಣ ಹೊಣೆಗಾರಿಕೆಯನ್ನು ವಾರ್ಡ್‌ಗಳ ಸಹಾಯಕ ಮತ್ತು ಕಿರಿಯ ಅಭಿಯಂತರರಿಗೆ ನೀಡಲಾಗಿದೆ‌. ಸಹಾಯಕ ಕಾರ್ಯಪಾಲಕ ಅಭಿಯಂತರರು ಓ.ಎಫ್.ಸಿ ತೆರವು ಕಾರ್ಯಾಚರಣೆಯ ಪ್ರಕ್ರಿಯೆಯ ಮೇಲ್ವಿಚಾರಣೆ ಮಾಡಲು ಸೂಚನೆ…

Read More

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪ್ರತಿಯೊಂದಕ್ಕೂ ರೇಟ್‌ ಫಿಕ್ಸ್‌ ಆಗಿದೆ. ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ., ಮುಖ್ಯ ಪರೀಕ್ಷೆಗೆ 1 ಕೋಟಿ ರೂ. ನಿಗದಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ವಿಧಾನಸಭೆಯಲ್ಲಿ ಕೆಪಿಎಸ್‌ಸಿ ಹಗರಣದ ಕುರಿತು ಮಾತನಾಡಿದ ಅವರು, ಕೆಪಿಎಸ್‌ಸಿಯಲ್ಲಿ 14 ಸದಸ್ಯರಿದ್ದು, ಒಬ್ಬರಿಗೆ ಎರಡೂವರೆ ಲಕ್ಷ ವೇತನವಿದೆ. ಉಳಿದ ಸೌಲಭ್ಯಗಳು ಸೇರಿ 4 ಲಕ್ಷ ರೂ. ಆಗುತ್ತದೆ. ಕರ್ನಾಟಕದಲ್ಲಿ ಆರೂವರೆ ಕೋಟಿ ಜನರಿದ್ದಾರೆ. 20 ಕೋಟಿ ಜನರಿರುವ ಉತ್ತರ ಪ್ರದೇಶದ ಆಯೋಗದಲ್ಲಿ 8 ಸದಸ್ಯರಿದ್ದಾರೆ. ಇದರಲ್ಲೂ ರಾಜ್ಯದಲ್ಲಿ ಹಗಲು ದರೋಡೆ ನಡೆಯುತ್ತಿದೆ. ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ. ಮುಖ್ಯ ಪರೀಕ್ಷೆಗೆ 1 ಕೋಟಿ ರೂ. ಹಾಗೂ ಸಂದರ್ಶನದ ಮೂಲಕ 40 ಲಕ್ಷ ರೂ. ನಿಗದಿ ಮಾಡಲಾಗಿದೆ. ಈ ರೀತಿ ರೇಟ್‌ ಕಾರ್ಟ್‌ ಫಿಕ್ಸ್‌ ಮಾಡಲಾಗಿದೆ. ಎಸಿಗೆ 2 ಕೋಟಿ ರೂ., ಡಿವೈಎಸ್‌ಪಿಗೆ 2 ಕೋಟಿ ರೂ., ವಾಣಿಜ್ಯ ತೆರಿಗೆ 1.50 ಕೋಟಿ ರೂ., ಪಂಚಾಯತ್‌ ಅಧಿಕಾರಿಗೆ…

Read More

ಬೆಳಗಾವಿ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಪ್ರೇಯಸಿಯನ್ನು ಬರ್ಬರವಾಗಿ ಕೊಲೆಗೈದು, ತಾನೂ ಚಾಕುವಿನಿಂದ ಕತ್ತುಕೊಯ್ದುಕೊಂಡು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಬೆಳಗಾವಿಯ ಶಹಾಪುರದ ನವಿಗಲ್ಲಿ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಐಶ್ವರ್ಯ ರಮೇಶ್ ಲೋಹಾರ (18) ಎಂಬಾಕೆಯನ್ನು ಕತ್ತು ಕೊಯ್ದು ಪ್ರಿಯಕರ ಕೊಲೆ ಮಾಡಿದ್ದಾನೆ. ಆ ಬಳಿಕ ಪ್ರಿಯಕರ ಪ್ರಶಾಂತ್ ಯಲ್ಲಪ್ಪ ಕುಂಡೇಕರ (29) ಚಾಕುವಿನಿಂದ ತನ್ನ ಕತ್ತುಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಇಂದು ಸಂಜೆ 5 ಗಂಟೆಗೆ ತನ್ನ ಚಿಕ್ಕಮ್ಮನ ಮನೆಗೆ ಐಶ್ವರ್ಯ ಹಾಗೂ ಪ್ರಶಾಂತ್ ಇಬ್ಬರು ಬಂದಿದ್ದರು. ಮೊದಲು ವಿಷ ಸೇವಿಸಿ ಆತ್ಮಹತ್ಯೆಗೆ ಐಶ್ವರ್ಯ ಪ್ರಯತ್ನಿಸಿದ್ದರು. ನಂತ್ರ ಚಾಕುವಿನಿಂದ ಪ್ರೇಯಸಿಯ ಕತ್ತು ಸೀಳಿದ್ದಾನೆ. ಆ ಬಳಿಕ ಪ್ರಶಾಂತ್ ಕೂಡ ಅದೇ ಚಾಕುವಿನಿಂದ ತನ್ನ ಕತ್ತುಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಬೆಳಗಾವಿಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/dk-shivakumar-gives-good-news-to-yakshagana-art-lovers-permission-process-to-be-simplified/ https://kannadanewsnow.com/kannada/a-fight-that-started-over-a-trivial-issue-in-raichur-ended-in-the-murder-of-a-man/

Read More

ಬೆಂಗಳೂರ: “ಯಕ್ಷಗಾನ ನಮ್ಮ ಸಂಸ್ಕೃತಿ. ಇದಕ್ಕೆ ಯಾವುದೇ ರೀತಿಯ ತೊಂದರೆ ಆಗಬಾರದು. ಯಾವುದೇ ಸಮಸ್ಯೆ ಇಲ್ಲದೆ ಅನುಮತಿ ಪಡೆಯುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ವಿಧಾನಸಭೆಯ ಗಮನ ಸೆಳೆವ ಚರ್ಚೆ ವೇಳೆ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಅವರು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿರುವ ಯಕ್ಷಗಾನ ಪ್ರದರ್ಶನಕ್ಕೆ ಅನುಮತಿ ನೀಡುವಂತೆ ಗೃಹ ಸಚಿವರ ಗಮನ ಸೆಳೆದರು. ಗೃಹ ಸಚಿವರ ಪರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಉತ್ತರ ನೀಡಿದರು. “ಯಕ್ಷಗಾನ ಪ್ರದರ್ಶನಕ್ಕೆ ಪೂರ್ವಾನುಮತಿ ಪಡೆಯಲು ಸಮಸ್ಯೆಯಾಗುತ್ತಿದೆ ಎಂದು ಸುನೀಲ್ ಕುಮಾರ್ ಅವರು ಪ್ರಸ್ತಾಪಿಸಿದ್ದಾರೆ. ಯಕ್ಷಗಾನ ಮಾಡುವಾಗ ಯಾರೂ ಇಂದು ಅರ್ಜಿ ಹಾಕಿ ನಾಳೆ ಯಕ್ಷಗಾನ ಪ್ರದರ್ಶನ ಮಾಡುವುದಿಲ್ಲ. ಅದಕ್ಕೆ 15 ದಿನಗಳ ತಯಾರಿ ಇರುತ್ತದೆ. ಬಿಜೆಪಿ ಕಾಲದಲ್ಲೂ ಕೆಲವು ನಿಯಮಾವಳಿಗಳನ್ನು ರೂಪಿಸಲಾಗಿದೆ. ಯಕ್ಷಗಾನ ಪ್ರದರ್ಶನಕ್ಕೆ ಅನುಮತಿ ಪಡೆಯಲು ಕಾಲಾವಕಾಶ ನೀಡಬೇಕು. ಯಕ್ಷಗಾನ ಬೆಳಗಿನ ಜಾವದವರೆಗೂ ನಡೆಯುವುದರಿಂದ ಮಧ್ಯರಾತ್ರಿಯೇ ನಿಲ್ಲಿಸಬೇಕು ಎಂದು ಯಾರೂ ಆಕ್ಷೇಪ ಮಾಡುವುದಿಲ್ಲ.…

Read More

ಫಿಲಿಪೈನ್ಸ್: ಇಬ್ಬರು ಪೈಲಟ್ಗಳನ್ನು ಹೊತ್ತ ಫಿಲಿಪೈನ್ಸ್ ವಾಯುಪಡೆಯ ಫೈಟರ್ ಜೆಟ್ ದಕ್ಷಿಣ ಪ್ರಾಂತ್ಯದಲ್ಲಿ ಕಾರ್ಯಾಚರಣೆಯ ಸಮಯದಲ್ಲಿ ಕಾಣೆಯಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಎಫ್ಎ -50 ಜೆಟ್ ಸೋಮವಾರ ಮಧ್ಯರಾತ್ರಿಯ ಸುಮಾರಿಗೆ ಇತರ ವಾಯುಪಡೆಯ ವಿಮಾನಗಳೊಂದಿಗಿನ ಸಂಪರ್ಕವನ್ನು ಕಳೆದುಕೊಂಡಿತು. ಇದು ದಂಗೆಕೋರರೊಂದಿಗೆ ಹೋರಾಡುತ್ತಿರುವ ನೆಲದ ಪಡೆಗಳಿಗೆ ಬೆಂಬಲವಾಗಿ ನಡೆಸಲಾಗುತ್ತಿತ್ತು. ಇತರ ವಿಮಾನಗಳು ಭದ್ರತಾ ಕಾರಣಗಳಿಗಾಗಿ ಇತರ ವಿವರಗಳನ್ನು ನೀಡದೆ ಕೇಂದ್ರ ಸೆಬು ಪ್ರಾಂತ್ಯದ ವಾಯುನೆಲೆಗೆ ಸುರಕ್ಷಿತವಾಗಿ ಮರಳಲು ಸಾಧ್ಯವಾಯಿತು ಎಂದು ವಾಯುಪಡೆ ತಿಳಿಸಿದೆ. ಸೂಕ್ಷ್ಮ ಪರಿಸ್ಥಿತಿಯನ್ನು ಸಾರ್ವಜನಿಕವಾಗಿ ಚರ್ಚಿಸಲು ಅಧಿಕಾರದ ಕೊರತೆ ಇರುವುದರಿಂದ ಅನಾಮಧೇಯತೆಯ ಷರತ್ತಿನ ಮೇಲೆ ಮಾತನಾಡಿದ ಅಧಿಕಾರಿ, ದಕ್ಷಿಣ ಫಿಲಿಪೈನ್ಸ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ, ಅಲ್ಲಿ ಕಮ್ಯುನಿಸ್ಟ್ ಗೆರಿಲ್ಲಾಗಳ ವಿರುದ್ಧ ಬಂಡಾಯ ವಿರೋಧಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದರು. https://kannadanewsnow.com/kannada/a-fight-that-started-over-a-trivial-issue-in-raichur-ended-in-the-murder-of-a-man/ https://kannadanewsnow.com/kannada/good-news-for-women-grihalakshmi-money-will-be-deposited-in-the-accounts-of-those-who-applied-in-october-november/

Read More