Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಆಲ್ಕೋಳ ವಿದ್ಯುತ್ ಕೇಂದ್ರದ ವ್ಯಾಪ್ತಿಯ ಎಎಫ್-05ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ಗೋಪಾಳಗೌಡ ಬಡಾವಣೆ ಎಫ್ ಬ್ಲಾಕ್ ಸುತ್ತಮುತ್ತಲಿನ ಪ್ರದೇಶದಲ್ಲಿ ಜು. 11 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನರಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಜುಲೈ.11ರಂದ ಮೆಸ್ಕಾಂ ಜನಸಂಪರ್ಕ ಸಭೆ ಶಿವಮೊಗ್ಗ ನಗರ ಉಪವಿಭಾಗ -3, ಸಹಾಯಕ ಕಾರ್ಯನಿರ್ವಾಯಕ ಇಂಜಿನಿಯರ್ ಕಚೇರಿ, ಗುಡ್ಲಕ್ ಸರ್ಕಲ್ ಹತ್ತಿರ, ಎಸ್.ವಿ.ಬಡಾವಣೆ, ಮೆಸ್ಕಾಂ ಕಚೇರಿಯಲ್ಲಿ ದಿ: 11.07.2024ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.;08182-251556 ನ್ನು ಸಂಪರ್ಕಿಸುವುದು. https://kannadanewsnow.com/kannada/good-news-for-forest-dwellers-of-the-state-resolution-to-ensure-land-rights-introduced-in-session/ https://kannadanewsnow.com/kannada/hdk-meets-union-highways-minister-nitin-gadkari-in-delhi-discusses-pending-projects-in-karnataka/
ನವದೆಹಲಿ: ಇಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದರು. ಈ ವೇಳೆ ಕರ್ನಾಟಕದ ಬಾಕಿ ಯೋಜನೆಗಳನ್ನು ಕಾರ್ಯಗತಗೊಳಿಸೋ ಬಗ್ಗೆ ಮಹತ್ವದ ಚರ್ಚೆ ನಡೆಸಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕದಲ್ಲಿ ಬಾಕಿ ಇರುವ ಸಾರಿಗೆ, ಹೆದ್ದಾರಿ ಯೋಜನೆಗಳನ್ನು ಶೀಘ್ರವೇ ಕಾರ್ಯಗತಗೊಳಿಸಿವುದು, ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಬಗ್ಗೆ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಾಯಿತು ಎಂದಿದ್ದಾರೆ. ಮಂಡ್ಯ ನಗರದ ಹೊರ ವರ್ತುಲ ರಸ್ತೆ ಹಾಗೂ ಹಲಗೂರು – ಕೆ.ಎಂ.ದೊಡ್ಡಿ ರಸ್ತೆಯನ್ನು ಮೇಲ್ದರ್ಜೆಗೇರಿಸಿ ರಾಷ್ಟ್ತ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಯೋಜನೆಯ ಬಗ್ಗೆಯೂ ಚರ್ಚಿಸಲಾಯಿತು. ಮಾನ್ಯ ಸಚಿವರು ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ತಿಳಿಸಿದ್ದಾರೆ. ಕೋಲಾರ ಸಂಸದರಾದ ಮಲ್ಲೇಶ್ ಬಾಬು ಅವರು ನನ್ನ ಜತೆಯಲ್ಲಿದ್ದರು. https://twitter.com/hd_kumaraswamy/status/1810615690182680678 https://kannadanewsnow.com/kannada/good-news-for-forest-dwellers-of-the-state-resolution-to-ensure-land-rights-introduced-in-session/ https://kannadanewsnow.com/kannada/big-news-cm-siddaramaiah-orders-cancellation-of-ineligible-bpl-card/
ಬೆಂಗಳೂರು: ರಾಜ್ಯದ ಅರಣ್ಯ ನಿವಾಸಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಮುಂದಿನ ಅಧಿವೇಶನದಲ್ಲಿ ಭೂಮಿ ಹಕ್ಕು ಖಾತ್ರಿಪಡಿಸಲು ನಿರ್ಣಯ ಮಂಡನೆ ಮಾಡುವಂತೆ ಸಿಎಂ ಸಿದ್ಧರಾಮಯ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಇಂದು ಕಾರ್ಯದರ್ಶಿಗಳ ಸಭೆ ನಡೆಸಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಅನುಸೂಚಿತ ಬುಡಕಟ್ಟುಗಳ ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮದಡಿ 298798 ಅರ್ಜಿ ಸ್ವೀಕೃತಗೊಂಡಿದ್ದು, 258086 ಅರ್ಜಿಗಳು ತಿರಸ್ಕೃತಗೊಂಡಿವೆ ಎಂದರು. 24186 ಅರ್ಜಿಗಳು ಇತ್ಯರ್ಥವಾಗದೇ ಬಾಕಿಯಿವೆ. ಇದುವರೆಗೆ 16426 ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, 56479 ಎಕ್ರೆ ಭೂಮಿ ಮಂಜೂರು ಮಾಡಲಾಗಿದೆ. ಅರಣ್ಯವಾಸಿಗಳಿಗೆ ಭೂಮಿ ಹಕ್ಕು ಖಾತ್ರಿಪಡಿಸಲು ಮುಂದಿನ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದರು. ಬುಡಕಟ್ಟು ಸಮುದಾಯ ಅಭಿವೃದ್ಧಿ ರಾಜ್ಯದ 5ಜಿಲ್ಲೆಗಳ ಹಾಡಿಗಳಲ್ಲಿ ವಾಸಿಸುತ್ತಿರುವ ಜೇನುಕುರುಬ ಹಾಗೂ ಕೊರಗ ಜನಾಂಗದವರಿಗೆ ಸೌಲಭ್ಯಗಳನ್ನು ಕಲ್ಪಿಸಲು ಪಿಎಂ ಜನಮನ್ ಯೋಜನೆ ಜಾರಿಯಲ್ಲಿದೆ. ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ 44040 ಜೇನುಕುರುಬ ಹಾಗೂ 13007 ಕೊರಗರು ಇದ್ದಾರೆ. ಈ ಜನಾಂಗದ 19 ಸಾವಿರ ಕುಟುಂಬಗಳಿದ್ದು,…
ಬೆಂಗಳೂರು: ನಗರದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇವುಗಳನ್ನು ನಿಯಂತ್ರಣ ಮಾಡೋದಕ್ಕೆ ಬಿಬಿಎಂಪಿ ಆರೋಗ್ಯ ಇಲಾಖೆ ಕ್ರಮವಹಿಸಿದೆ. ಇದರ ನಡುವೆ ಎಲ್ಲೆಂದರಲ್ಲಿ ಕಸ ಎಸೆಯೋದಕ್ಕೆ ಬ್ರೇಕ್ ಕೂಡ ಹಾಕೋ ಕೆಲಸ ಮಾಡಿದೆ. ಅದಕ್ಕಾಗಿ ನಗರದೆಲ್ಲೆಡೆ ಹೆಚ್ಚುವರಿ ಸಿಸಿಟಿವಿ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದ್ದು, ಎಲ್ಲೆಂದರಲ್ಲಿ ಕಸ ಎಸೆದವರನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸೋದಕ್ಕೆ ಮುಂದಾಗಿದೆ. ಇಂದು ವಿಧಾನಸೌಧದಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಮುಖಂಡರನ್ನು ಒಳಗೊಂಡ ಡಿಸಿಎಂ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಿಲ್ಲೆಯ ಮರುನಾಮಕರಣ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಮಂಗಳವಾರ ನೀಡಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಡಿಸಿಎಂ ಡಿ.ಕೆ ಶಿವಕುಮಾರ್, ಡೆಂಗಿ ಪ್ರಕರಣ ಹೆಚ್ಚಳದ ಬಗ್ಗೆ ಕೇಳಿದಾಗ, “ಎಲ್ಲೆಂದರಲ್ಲಿ ಕಸ ಎಸೆಯುವವವರ ಪ್ರಮಾಣ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ಸಿಸಿಟಿವಿ ಕ್ಯಾಮೆರ ಕಣ್ಗಾವಲು ವ್ಯವಸ್ಥೆ ಮಾಡಲಾಗುವುದು. ಜನರು ಮನೆಯ ಬಳಿ ಬರುವ ಕಸ ಸಂಗ್ರಹ ವಾಹನಗಳಿಗೆ ಕಸವನ್ನು ಹಾಕದೆ ರಸ್ತೆ…
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಗಂಭೀರವಾದಂತ ಕೇಸ್ ಆಗಿದೆ. ಹೀಗಾಗಿ ಜಾಮೀನು ನೀಡೋದಕ್ಕೆ ಸಾಧ್ಯವಿಲ್ಲ ಅಂತ ಎಂಎಲ್ಸಿ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಇಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಮೂರ್ತಿ ಕೆಎನ್ ಶಿವಕುಮಾರ್ ಅವರು ನಡೆಸಿದರು. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಗಂಭೀರವಾದಂತ ವಿಚಾರವಾಗಿದೆ ಅಂತ ಅಭಿಪ್ರಾಯ ಪಟ್ಟು, ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. https://kannadanewsnow.com/kannada/ramanagara-district-to-be-renamed-as-bengaluru-south-proposal-submitted-to-cm/ https://kannadanewsnow.com/kannada/big-news-cm-siddaramaiah-orders-cancellation-of-ineligible-bpl-card/
ಬೆಂಗಳೂರು : “ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಹಾರೋಹಳ್ಳಿ ತಾಲೂಕುಗಳ ಭವಿಷ್ಯ ಹಾಗೂ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತಮ್ಮ ನೇತೃತ್ವದ ಜಿಲ್ಲೆಯ ನಾಯಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ನೀಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಮುಖಂಡರನ್ನು ಒಳಗೊಂಡ ಡಿಸಿಎಂ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಿಲ್ಲೆಯ ಮರುನಾಮಕರಣ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಮಂಗಳವಾರ ನೀಡಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಶಿವಕುಮಾರ್ ಅವರು, “ಬೆಂಗಳೂರು ನಗರ ಸೇರಿದಂತೆ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ ಸೇರಿದಂತೆ ನಾವೆಲ್ಲರೂ ಮೂಲತಃ ಬೆಂಗಳೂರು ಜಿಲ್ಲೆಯವರು. ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆ ಎಂದು ಹಿಂದೆ ವಿಭಾಗ ಮಾಡಲಾಯಿತು. ರಾಮನಗರವನ್ನು ಕೇಂದ್ರಾಡಳಿತವಾಗಿಟ್ಟುಕೊಂಡೇ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ…
ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರೇ, ಇತ್ತ ನಟ ದರ್ಶನ್ ಅಭಿಮಾನಿಗಳ ಹುಚ್ಚಾಟ ಮಾತ್ರ ಹೆಚ್ಚಾಗಿದೆ. ಬೆಂಗಳೂರಲ್ಲಿ ಅಭಿಮಾನಿಯೊಬ್ಬ ಹುಚ್ಚಾಟ ಪ್ರದರ್ಶಿಸಿದ್ದು, ಡಿ ಬಾಸ್ ಹೆಸರಲ್ಲಿ ಆಟೋ ಚಾಲಕನೊಬ್ಬ ವ್ಹೀಲಿಂಗ್ ಮಾಡಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ರಸ್ತೆಯೊಂದರಲ್ಲಿ ಆಟೋ ಚಾಲಕನೊಬ್ಬ ವ್ಹೀಲಿಂಗ್ ಮಾಡಿರೋ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜಗ್ಗ ಬಾಸ್ ಎನ್ನುವಂತ ಇನ್ ಸ್ಟಾಗ್ರಾಂನಲ್ಲಿ ವೀಡಿಯೋ ಅಪ್ ಲೋಡ್ ಮಾಡಲಾಗಿದ್ದು, ಆಟೋ ವ್ಹೀಲಿಂಗ್ ಮಾಡಿ, ಸಾರ್ವಜನಿಕರ ಜೀವಕ್ಕೆ ಕುತ್ತು ತರುವಂತೆ ದರ್ಶನ್ ಅಭಿಮಾನಿಯೊಬ್ಬ ನಡೆದುಕೊಂಡಿರೋದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ತನ್ನ ಆಟೋದ ಮೇಲೆ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೀಡಲಾಗಿರುವಂತ ವಿಚಾರಣಾಧೀನ ಖೈದಿ ನಂ.6106 ಹಾಕಿಸಿಕೊಂಡು, ವ್ಹೀಲಿಂಗ್ ಮಾಡಿ, ಹುಚ್ಚಾಟ ಪ್ರದರ್ಶನ ಮಾಡಿದ್ದಾರೆ. ಪೊಲೀಸರೇ ನಿಮಗೆ ಈ ಆಟೋ ಚಾಲಕ ವ್ಹೀಲಿಂಗ್ ಮಾಡಿರುವಂತ ವೀಡಿಯೋ ಕಾಣಿಸ್ತಾ ಇಲ್ವ? ಹೀಗೆ ವ್ಹೀಲಿಂಗ್ ಮಾಡಿ, ಹುಚ್ಚಾಟ ನಡೆಸುತ್ತಿರೋ ಈ…
ಬೆಂಗಳೂರು: ಕೆ-ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಿ, ಬರೆದು ಉತ್ತೀರ್ಣರಾದಂತ ಅರ್ಹ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಎನ್ನುವಂತೆ, ಜುಲೈ.11ರಿಂದ ಮೂಲ ದಾಖೆಗಳ ಪರಿಶೀಲನೆಯನ್ನು ನಡೆಸಲಾಗುತ್ತಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, #KSET-23 ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಕಟಿಸಲಾಗಿದ್ದ ಅರ್ಹ ಅಭ್ಯರ್ಥಿಗಳ ಪಟ್ಟಿ (https://cetonline.karnataka.gov.in/kea/kset2023) ಆಧರಿಸಿ ಜುಲೈ 11ರಿಂದ 22ರವರೆಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕೆಇಎ ವೆಪ್ ಸೈಟ್ ಗೆ ಭೇಟಿ ನೀಡಿ ಪರಿಶೀಲಿಸುವಂತೆ ತಿಳಿಸಿದೆ. https://twitter.com/KEA_karnataka/status/1810598571328065642 https://kannadanewsnow.com/kannada/cm-siddaramaiah-gives-good-news-to-those-who-were-expecting-government-jobs-on-compassionate-grounds/ https://kannadanewsnow.com/kannada/big-news-cm-siddaramaiah-orders-cancellation-of-ineligible-bpl-card/
ಬೆಂಗಳೂರು: ದೌರ್ಜನ್ಯ ತಡೆ ಅಧಿನಿಯಮದಡಿಯಲ್ಲಿ ಕೊಲೆ ಪ್ರಕರಣಗಳಲ್ಲಿ ತಡ ಮಾಡದೆ ಅನುಕಂಪದ ಸರ್ಕಾರಿ ನೌಕರಿ ನೀಡುವಂತೆ ಸಿಎಂ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಮೂಲಕ ಅನುಕಂಪದ ಆಧಾರದ ಅಡಿಯಲ್ಲಿ ಸರ್ಕಾರಿ ನೌಕರಿ ನಿರೀಕ್ಷೆಯಲ್ಲಿದ್ದಂತವರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದಂತ ಅವರು, ಸಿಂಧುತ್ವ ಪ್ರಮಾಣಪತ್ರ ವಿಚಾರದಲ್ಲಿ ಅಸಡ್ಡೆ ಬೇಡ. ಅರ್ಹರಾಗಿದ್ದರೆ ತಕ್ಷಣ ಕೊಡಿ, ಅರ್ಹತೆ ಇಲ್ಲದಿದ್ದರೆ ಸ್ಪಷ್ಟವಾಗಿ ತಿಳಿಸಿ. ಸತಾಯಿಸಬೇಡಿ ಅಂತ ಖಡಕ್ ಸೂಚನೆ ನೀಡಿದ್ದಾರೆ. ದೌರ್ಜನ್ಯ ತಡೆ ಅಧಿನಿಯಮದ ಅಡಿ ದಾಖಲಾಗಿರುವ ಒಟ್ಟು 26 ಕೊಲೆ ಪ್ರಕರಣಗಳಲ್ಲಿ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಬೇಕಾಗಿದ್ದು, ಆದಷ್ಟು ಬೇಗನೆ ನೌಕರಿ ಒದಗಿಸಬೇಕು. ಜಿಲ್ಲೆಯಲ್ಲಿ ಉಪ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ನಡೆಸಬೇಕು ಎಂದು ಸೂಚಿಸಿದ್ದಾರೆ. ಸಿಂಧುತ್ವ ಪ್ರಮಾಣ ಪತ್ರ ಸಿಂಧುತ್ವ ಪ್ರಮಾಣ ಪತ್ರವನ್ನು ಒಂದು ತಿಂಗಳ ಒಳಗಾಗಿ ನೀಡಬೇಕು. ಪ್ರಸ್ತುತ 2684 ಅರ್ಜಿಗಳು ಬಾಕಿಯಿದ್ದು, ಅರ್ಹತೆ…
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಶಾಲಾ ಮಕ್ಕಳಿಗೆ ಸಿಎಂ ಸಿದ್ಧರಾಮಯ್ಯ ಕನ್ನಡ ವ್ಯಾಕರಣದ ಪಾಠ ಮಾಡಿದ್ದರು. ಈಗ ರಾಜ್ಯ ಸರ್ಕಾರದ ಕಾರ್ಯದರ್ಶಿಗೂ ಸಿಎಂ ಸಿದ್ಧರಾಮಯ್ಯ ಪಾಠ ಮಾಡಿದ್ದಾರೆ. ಅದರಲ್ಲೂ ಕುವೆಂಪು ಏನು ಹೇಳಿದ್ದಾರೆ ಗೊತ್ತಾ ಅಂತ ಮನೋಜ್ ಜೈನ್ ಗೆ ಸಿಎಂ ಸಿದ್ಧರಾಮಯ್ಯ ಕುವೆಂಪು ಪಾಠ ಪ್ರಸಂಗ ವಿಧಾನಸೌಧದಲ್ಲಿ ನಡೆದಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು DC-CEO ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ನಡೆಸಿದರು. ಈ ವೇಳೆಯಲ್ಲಿ ಮಾತನಾಡಿದಂತ ಅವರು, ಕುವೆಂಪು ಏನು ಹೇಳಿದಾರೆ ಗೊತ್ತಾ ಅಂತ ಮನೋಜ್ ಜೈನ್ ಗೆ ಸಿಎಂ ಪ್ರಶ್ನಿಸಿ, ಕುವೆಂಪು ಪಾಠ ಮಾಡಿದರು. ಯಾವುದಾದರೂ ಇಂಗ್ಲಿಷ್ ಪದಕ್ಕೆ ಕನ್ನಡದಲ್ಲಿ ಸೂಕ್ತ ಪದ ಇಲ್ಲದಿದ್ದರೆ ಅದನ್ನು ಇಂಗ್ಲಿಷ್ ನಲ್ಲೇ ಬಳಸಬೇಕು ಎಂದು ಕುವೆಂಪು ಹೇಳಿದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು DC-CEO ಗಳ ಸಭೆಯಲ್ಲಿ ಪ್ರಸ್ತಾಪಿಸಿದ ಪ್ರಸಂಗ ನಡೆಯಿತು. ಅಲ್ಪಸಂಖ್ಯಾತ ಇಲಾಖೆ ಚರ್ಚೆ ನಡೆಯುವ ಸಂದರ್ಭದಲ್ಲಿ ಕಾರ್ಯದರ್ಶಿ ಮನೋಜ್ ಜೈನ್ ಅವರು “ಇಂಡೀಕರಣ” ಪದ…