Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಇಂದು ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಎರಡು ದುರ್ಘಟನೆಗಳು ಸಂಭವಿಸಿವೆ. ಟ್ರ್ಯಾಕ್ಟರ್ ಟ್ರಿಲ್ಲರ್ ಹೊಡೆಯುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದರೇ, ಬೈಕ್-ಬೈಕ್ ಗಳ ನಡುವೆ ಡಿಕ್ಕಿಯಾಗಿ ಓರ್ವ ವ್ಯಕ್ತಿಯ ಕಾಲು ಕಟ್ ಅಗಿರುವಂತ ದುರ್ಘಟನೆ ನಡೆದಿದೆ. ವಿದ್ಯುತ್ ಶಾಕ್ ನಿಂದ ಯುವಕನಿಗೆ ಗಂಭೀರ ಗಾಯ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಪೆಟ್ರೋಲ್ ಬಂಕ್ ಪಕ್ಕದಲ್ಲಿ ಬೆಳೆದಿದ್ದ ಗಿಡಗೆಂಟೆ, ಹುಲ್ಲು ಕ್ಲೀನ್ ಮಾಡಲು ಟ್ರ್ಯಾಕ್ಟರ್ ಹೊಡೆಯುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಪತ್ರೆಸಾಲಿನ ಅರುಣ್ ಕುಮಾರ್(31) ಗಂಭೀರವಾಗಿ ಗಾಯಗೊಂಡಿದ್ದಾರೆ. ಟ್ರ್ಯಾಕ್ಟರ್ ಗೆ ವಿದ್ಯುತ್ ಕಂಬದ ಸಮೀಪದಲ್ಲಿ ತುಂಡಾಗಿದ್ದಂತ ಗೈಗೆ ತಾಗಿದ ಪರಿಣಾಮ ವಿದ್ಯುತ್ ಪ್ರವಹಿಸಿ, ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ವಾಹನದಿಂದ ಕೆಳಗೆ ಹಾರುವ ವೇಳೆಗೆ ವಿದ್ಯುತ್ ಶಾಕ್ ನಿಂದ ಅರುಣ್ ಕುಮಾರ್ ಕಾಲು, ಕೈ, ಎದೆಯ ಭಾಗವು ಸುಟ್ಟು ಹೋಗಿವೆ. ವಿದ್ಯುತ್ ಶಾಕ್ ಗೆ ಒಳಗಾದಂತ ಪತ್ರೆಸಾಲಿನ ಅರುಣ್ ಕುಮಾರ್(31) ಗೆ ಉಳವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಸರ್ಕಾರವು ತುಟ್ಟಿಭತ್ಯೆಯನ್ನು ಶೇ.2ರಷ್ಟು ಹೆಚ್ಚಿಸಲು ಅನುಮೋದಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಮಾಹಿತಿ ಹಂಚಿಕೊಂಡಿದ್ದು, ಸರ್ಕಾರಿ ನೌಕರರಿಗೆ ದಿನಾಂಕ 01-07-2025ರಿಂದ ಅನ್ವಯವಾಗುವಂತೆ ಶೇ.2ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಸಿಎಂ ಸಿದ್ಧರಾಮಯ್ಯ ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಿಸಲು ಅನುಮೋದಿಸಿದಂತ ಸಿಎಂ ಸಿದ್ಧರಾಮಯ್ಯ ಅವರಿಗೆ ಧನ್ಯವಾದಗಳು. ಮುಂದಿನ ಎರಡು, ಮೂರು ದಿನಗಳಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಳದ ಅಧಿಕೃತ ಆದೇಶವನ್ನು ಹೊರಡಿಸಲಿದ್ದಾರೆ ಎಂಬುದಾಗಿ ಮಾಹಿತಿ ನೀಡಿದ್ದಾರೆ. https://kannadanewsnow.com/kannada/from-now-on-minors-will-be-required-to-have-parental-consent-to-use-instagram-meta-announcement/ https://kannadanewsnow.com/kannada/good-news-e%e2%82%b9-unveiled-by-rbi-now-no-need-for-internet-payment-in-one-click/
ನಿಮಗೆಲ್ಲರಿಗೂ ತಿಳಿದೇ ಇದೆ ಉಪ್ಪಿನ ಮಹತ್ವ ನಮ್ಮ ಹಿರಿಯರು ಉಪ್ಪಿನ ಮೇಲೆ ಒಂದು ಗಾದೆಯನ್ನೇ ಕಟ್ಟಿದ್ದಾರೆ ಅದೇನೆಂದರೆ ಸ್ನೇಹಿತರೇ ಉಪ್ಪಿಗಿಂತ ರುಚಿ ಇಲ್ಲ ತಾಯಿಗಿಂತ ದೇವರಿಲ್ಲ ಅಂತ ಅಲ್ವಾ ಸ್ನೇಹಿತರೇ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಈ ಗಾದೆಗೆ ತುಂಬಾನೇ ಅರ್ಥವಿದೆ ಅದಲ್ಲದೆ ನಾವು ಉಪ್ಪನ್ನು ನಮ್ಮ ಪ್ರತಿ ದಿನ ಆಹಾರದಲ್ಲಿ ಬಳಸುತ್ತೇವೆ…
ನವದೆಹಲಿ: ಇನ್ಸ್ಟಾಗ್ರಾಮ್ನಲ್ಲಿ ಹದಿಹರೆಯದವರು PG-13 ವಿಷಯಕ್ಕೆ ಮಾತ್ರ ಸೀಮಿತ, ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ ಹೊಸ ನಿಯಮವನ್ನು ಜಾರಿಗೊಳಿಸಿದೆ. ಇಂದು ಮೆಟಾ, ಇನ್ಸ್ಟಾಗ್ರಾಮ್ನಲ್ಲಿ ಹದಿಹರೆಯದವರು ಪೂರ್ವನಿಯೋಜಿತವಾಗಿ PG-13 ವಿಷಯಕ್ಕೆ ಸೀಮಿತವಾಗಿರುತ್ತಾರೆ ಮತ್ತು ಈ ಸೆಟ್ಟಿಂಗ್ಗಳನ್ನು ಹೊಂದಿಸಲು ಅವರಿಗೆ ಪೋಷಕರ ಅನುಮತಿ ಬೇಕಾಗುತ್ತದೆ ಎಂದು ಘೋಷಿಸಿತು. ಹೊಸ ನಿಯಮಗಳ ಅಡಿಯಲ್ಲಿ, ಹದಿಹರೆಯದ ಬಳಕೆದಾರರು ಚಲನಚಿತ್ರಗಳಲ್ಲಿ PG-13 ರೇಟಿಂಗ್ ಹೊಂದಿರುವ ವಿಷಯಕ್ಕೆ ಹೋಲಿಸಬಹುದಾದ ಫೋಟೋಗಳು ಮತ್ತು ವೀಡಿಯೊಗಳನ್ನು ಮಾತ್ರ ನೋಡುತ್ತಾರೆ. ಅಂದರೆ ಲೈಂಗಿಕತೆ, ಮಾದಕ ದ್ರವ್ಯಗಳು ಅಥವಾ ಅಪಾಯಕಾರಿ ಸಾಹಸಗಳ ಚಿತ್ರಣಗಳಿಲ್ಲ. ಈ ನವೀಕರಣವು ಬಲವಾದ ಭಾಷೆ, ಅಪಾಯಕಾರಿ ಸಾಹಸಗಳು ಅಥವಾ ಗಾಂಜಾ ಸಾಮಗ್ರಿಗಳ ಚಿತ್ರಗಳಂತಹ ಸಂಭಾವ್ಯ ಹಾನಿಕಾರಕ ನಡವಳಿಕೆಯನ್ನು ಪ್ರೋತ್ಸಾಹಿಸುವ ವಿಷಯವನ್ನು ಹೊಂದಿರುವ ಪೋಸ್ಟ್ಗಳನ್ನು ಮರೆಮಾಡುವುದು ಅಥವಾ ಶಿಫಾರಸು ಮಾಡದಿರುವುದು ಒಳಗೊಂಡಿದೆ ಎಂದು ಮೆಟಾ ಬ್ಲಾಗ್ ಪೋಸ್ಟ್ನಲ್ಲಿ ತಿಳಿಸಿದೆ. ಕಳೆದ ವರ್ಷ ಹದಿಹರೆಯದ ಖಾತೆಗಳನ್ನು ಪ್ರಾರಂಭಿಸಿದ ನಂತರದ ಅತ್ಯಂತ ಮಹತ್ವದ ನವೀಕರಣ ಎಂದು ಕಂಪನಿಯು ಈ ಬದಲಾವಣೆಯನ್ನು ವಿವರಿಸಿದೆ. ಈ ಮೂಲಕ ಇನ್ಮುಂದೆ ಹದಿಹರೆಯದವರು…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರು ಜಿಲ್ಲೆಯ ಮಹಾರಾಜ ಕಾಲೇಜು ಮೈದಾನದಲ್ಲಿ ಅಕ್ಟೋಬರ್ 17 ರಂದು ನಡೆಯಲಿರುವ ಮೈಸೂರು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈಗಾಗಲೇ 24000 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 221 ಕಂಪನಿಗಳು ಭಾಗವಹಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್ ಪಾಟೀಲ್ ಅವರು ತಿಳಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಉದ್ಯೋಗ ಮೇಳದಲ್ಲಿ ಭಾಗವಹಿಸಲು ಹಾಗೂ ನೇರವಾಗಿ ಕಾರ್ಯಕ್ರಮದ ದಿನದಂದು ಆಗಮಿಸಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ರಾಜ್ಯಾದ್ಯಾಂತ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು https://udyogamela.ksdckarnataka.com ಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗ ಮೇಳವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು 45000 ಉದ್ಯೋಗ ಖಾಲಿ ಉದ್ಯೋಗ ಮೇಳದಲ್ಲಿ 221 ಕಂಪನಿಗಳು ಭಾಗವಹಿಸಲು ಹೆಸರು ನೋಂದಾಯಿಸಿಕೊಂಡಿದ್ದು, ಸ್ಥಳೀಯ ಕಂಪನಿಗಳು ಸಹ ಹೆಸರು ನೋಂದಾಯಿಸಿಕೊಳ್ಳಲಿದೆ. ಉದ್ಯೋಗದಾತರು ಸುಮಾರು 45000 ಉದ್ಯೋಗ ಖಾಲಿ ಇರುವುದಾಗಿ…
ಮಂಡ್ಯ: ಜಿಲ್ಲೆಯ ಮದ್ದೂರಲ್ಲಿ ಅಕ್ಟೋಬರ್.16ರಂದು ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರಿಂದ ಕುಂದುಕೊರತೆ ಅಹವಾಲು ಸ್ವೀಕಾರ ಸಭೆಯನ್ನು ಆಯೋಜಿಸಲಾಗಿದೆ. ಮದ್ದೂರು ತಾಲ್ಲೂಕಿನ ಜನತೆ ತಮ್ಮ ಕುಂದುಕೊರತೆಯನ್ನು ಸಲ್ಲಿಸಲು ಮನವಿ ಮಾಡಲಾಗಿದೆ. ಈ ಕುರಿತಂತೆ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಮಂಡ್ಯ ಲೋಕಾಯುಕ್ತ ವಿಭಾಗದ ಅಧಿಕಾರಿಗಳು ಮದ್ದೂರು ತಾಲ್ಲೂಕಿನಲ್ಲಿ ಅಕ್ಟೋಬರ್ 16 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1:30 ರ ವರೆಗೆ ಮದ್ದೂರು ತಾಲೂಕು ಕಚೇರಿ ಆವರಣದಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿ ಸಾರ್ವಜನಿಕರಿಂದ ದೂರು ಅಹವಾಲು ಸ್ವೀಕಾರ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತಹ ದೂರುಗಳ ಸ್ವೀಕಾರ ಮಾಡಲಿದ್ದಾರೆ ಎಂದಿದೆ. ಡಿ ವೈ ಎಸ್ ಪಿ ಸುನಿಲ್ ಕುಮಾರ್ ಹೆಚ್ ಟಿ, ಲೋಕಾಯುಕ್ತ ಪೋಲಿಸ್ ಇನ್ಸ್ ಪೆಕ್ಟರ್ ಗಳಾದ ಬ್ಯಾಟರಾಯಗೌಡ ಬಿ.ಪಿ, ಕುಮಾರ ಎಂ, ಲೇಪಾಕ್ಷ ಮೂರ್ತಿಯವರು ಸದರಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದೆ. ಸದರಿ ಸಭೆಯಲ್ಲಿ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ ನೌಕರರುಗಳು ಸರ್ಕಾರಿ ಕೆಲಸ ಮಾಡಿಕೊಡಲು ಅನಗತ್ಯ…
ಮಂಡ್ಯ : ಗುಣಮಟ್ಟದ ಶಿಕ್ಷಣ ಹಾಗೂ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು ಹೆಚ್ಚಿನ ಶ್ರಮವಹಿಸಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಶಾಸಕ ಕೆ.ಎಂ.ಉದಯ್ ಸೋಮವಾರ ಹೇಳಿದರು. ಮದ್ದೂರು ನಗರದ ಪೂರ್ಣ ಪ್ರಜ್ಞಾ ಶಾಲೆಯಲ್ಲಿ ಮದ್ದೂರು ತಾಲೂಕು ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2025- 2026 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡಿಸುವ ಸಂಬಂಧ ಮುಖ್ಯ ಶಿಕ್ಷಕರ ಸಮಾಲೋಚನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಕಳೆದ ಹದಿನೈದು ವರ್ಷಗಳಿಂದ ಮದ್ದೂರು ತಾಲೂಕು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಮಂಡ್ಯ ಜಿಲ್ಲೆಗೆ ಪ್ರಥಮ ಸ್ಥಾನಗಳಿಸುತ್ತಿತ್ತು. ಆದರೆ, ಈ ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಫಲಿತಾಂಶ ತೀರಾ ಕಳೆಪೆಯಾಗಿದ್ದು, ಹೀಗಾಗಿ ಆಯಾ ಶಾಲೆಗಳ ಮುಖ್ಯ ಶಿಕ್ಷಕರು ಈ ವಿಚಾರದಲ್ಲಿ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಇದು ಮತ್ತೋಮ್ಮೆ ಪುನರಾವರ್ತನೆ ಆಗದಂತೆ ಶಿಕ್ಷಕರು ಎಚ್ಚರವಹಿಸಬೇಕೆಂದು ಸೂಚನೆ ನೀಡಿದರು. ಶಿಕ್ಷಕರು ಮತ್ತು ಪೋಷಕರು ಪ್ರತಿನಿತ್ಯ ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಪರೀಕ್ಷೆ ಸಂದರ್ಭದಲ್ಲಿ…
ನವದೆಹಲಿ: ಇನ್ನೂ ಚಿನ್ನ ನೋಡೋದಕ್ಕಷ್ಟೇ ಚೆನ್ನ ಎನ್ನುವಂತೆ ದಾಖಲೆಯ ಮಟ್ಟಕ್ಕೆ ದರ ಏರಿಕೆಯಾಗಿದೆ. ಭಾರತದಲ್ಲಿ ಚಿನ್ನದ ಬೆಲೆಗಳು 10 ಗ್ರಾಂಗೆ ₹1,31,000 ಕ್ಕೆ ಏರಿದ್ದು, ಧಂತೇರಸ್ ಮತ್ತು ಮುಂಬರುವ ಹಬ್ಬದ ಋತುವಿಗೆ ಕೆಲವೇ ದಿನಗಳ ಮೊದಲು ದಾಖಲಾದ ಗರಿಷ್ಠ ಮಟ್ಟವಾಗಿದೆ. ಅಕ್ಟೋಬರ್ 14 ರಂದು ವರದಿಯಾದ ಈ ತೀವ್ರ ಏರಿಕೆಯು ಆಭರಣ ವ್ಯಾಪಾರಿಗಳು ಮತ್ತು ಗ್ರಾಹಕರನ್ನು ಅಚ್ಚರಿಗೊಳಿಸಿದೆ, ಅನೇಕರು ಬೆಲೆ ಏರಿಕೆಯನ್ನು ಹೆಚ್ಚಿದ ಜಾಗತಿಕ ಬೇಡಿಕೆ ಮತ್ತು ಮಾರುಕಟ್ಟೆಯ ಏರಿಳಿತದೊಂದಿಗೆ ಜೋಡಿಸಿದ್ದಾರೆ. ಭಾರತೀಯರು ಮದುವೆಗಳು, ಹೊಸ ಆರಂಭಗಳು ಮತ್ತು ಸಂಪತ್ತಿನ ಹೂಡಿಕೆಗೆ ಶುಭವೆಂದು ಪರಿಗಣಿಸುವುದರಿಂದ, ಸಾಂಪ್ರದಾಯಿಕವಾಗಿ ಚಿನ್ನದ ಖರೀದಿಯು ಗರಿಷ್ಠ ಮಟ್ಟದಲ್ಲಿರುವುದರಿಂದ ಈ ಏರಿಕೆ ಬಂದಿದೆ. ದೇಶಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದ್ದರೂ, ಏರುತ್ತಿರುವ ದರಗಳು ಸಾಮಾನ್ಯ ಜನರಿಗೆ ಚಿನ್ನದ ಆಭರಣಗಳನ್ನು ಖರೀದಿಸಲು ಕಷ್ಟವಾಗುತ್ತಿವೆ. ಮುಂಗಡ ಬುಕಿಂಗ್ಗಳು ನಿಧಾನಗೊಂಡಿವೆ ಎಂದು ಆಭರಣ ವ್ಯಾಪಾರಿಗಳು ಹೇಳುತ್ತಾರೆ, ಆದರೂ ಹಗುರವಾದ ಆಭರಣಗಳು ಮತ್ತು ಬೆಳ್ಳಿ ವಸ್ತುಗಳ ಮೇಲಿನ ಆಸಕ್ತಿ ಪರ್ಯಾಯವಾಗಿ ಬೆಳೆದಿದೆ. ಅಕ್ಟೋಬರ್ 18 ರಂದು…
ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಅನಧಿಕೃತವಾಗಿ ಹಾಜರಾಗದ ಸಮೀಕ್ಷೆದಾರರ ವಿರುದ್ಧ ಕ್ರಮ ಕೈಗೊಳ್ಳಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ. ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ, ರಾಜ್ಯದಾದ್ಯಂತ — ಬೆಂಗಳೂರು ನಗರವನ್ನು ಒಳಗೊಂಡಂತೆ — ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ(Socio-Educational Survey) ನಡೆಯುತ್ತಿದೆ. ಬೆಂಗಳೂರು ನಗರದಲ್ಲಿ ಸುಮಾರು 46 ಲಕ್ಷ ಮನೆಮನೆಗಳಿಗೆ ಸಮೀಕ್ಷೆ ನಡೆಸಬೇಕಿದ್ದು, ಇದಕ್ಕಾಗಿ ಸುಮಾರು 21,000 ಸಮೀಕ್ಷಾದಾರ(Enumerators)ರನ್ನು ನಿಯೋಜಿಸಲಾಗಿದೆ. ಈ ಸಮೀಕ್ಷಾದಾರಲ್ಲಿ 18,000 ಕ್ಕೂ ಹೆಚ್ಚು ಮಂದಿ ಪ್ರಾಮಾಣಿಕವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದು, ಅವರು ಪ್ರಶಂಸೆಗೆ ಅರ್ಹರಾಗಿದ್ದಾರೆ. ಗರ್ಭಿಣಿಯರು, ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವುಳ್ಳ ತಾಯಂದಿರು ಹಾಗೂ ಗಂಭೀರ ಆರೋಗ್ಯ ಸಮಸ್ಯೆಯುಳ್ಳ ಸಮೀಕ್ಷಾದಾರರನ್ನು ಸಮೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ. ಆದರೆ, ಪ್ರತಿದಿನ ಪದೇ ಪದೇ ನೋಟೀಸ್ ಗಳು ಹಾಗೂ SMS ಮೂಲಕ ಸಂದೇಶಗಳನ್ನು ನೀಡುತ್ತಿದ್ದರೂ ಕೂಡಾ ಸುಮಾರು 2,300 ಸಮೀಕ್ಷದಾರರು ಯಾವುದೇ ಕಾರಣವಿಲ್ಲದೆ ಹಾಗೂ ಅನಧಿಕೃತವಾಗಿ ಗೈರುಹಾಜರಿದ್ದಾರೆ. ಇಂತಹವರ…
ಬೆಂಗಳೂರು: ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿಸಿಯಿಂದ ಬೆಂಗಳೂರಿನಿಂದ ಶಿರಹಟ್ಟಿಗೆ ನಾನ್ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್ ಸಂಚಾರವನ್ನು ಆರಂಭಿಸಲಾಗಿದೆ. ಈ ಬಗ್ಗೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 17-10-2025ರಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಗದಗ ವಯಾ ತುಮಕೂರು, ಚಿತ್ರದುರ್ಗ, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಗುತ್ತಲ ಹಾಗೂ ಶಿರಹಟ್ಟಿಗೆ ಹೊಸದಾಗಿ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್ ಸಂಚಾರ ಆರಂಭಗೊಳಿಸಲಾಗುತ್ತಿದೆ ಎಂದಿದೆ. ಹೀಗಿದೆ ವೇಳಾಪಟ್ಟಿ ಮತ್ತು ಟಿಕೆಟ್ ದರ ಬೆಂಗಳೂರು ಟು ಗದಗಕ್ಕೆ ರೂ.890 ಟಿಕೆಟ್ ದರ ನಿಗದಿ ಪಡಿಸಲಾಗಿದೆ. ಬೆಂಗಳೂರಿನಿಂದ ರಾತ್ರಿ 11 ಗಂಟೆಗೆ ಹೊರಡಲಿದ್ದು, ಮರು ದಿನ ಬೆಳಗ್ಗೆ ಗದಗಕ್ಕೆ 6 ಗಂಟೆಗೆ ತಲುಪಲಿದೆ. ಗದಗದಿಂದ ರಾತ್ರಿ 11 ಗಂಟೆಗೆ ಹೊರಟು ಬೆಂಗಳೂರಲ್ಲಿ ಬೆಳಗ್ಗೆ 6 ಗಂಟೆಗೆ ಬಸ್ ತಲುಪಲಿದೆ. ವರದಿ: ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/suicide-guaranteed-under-the-rule-of-the-states-congress-government-dr-c-n-ashwathnarayan/ https://kannadanewsnow.com/kannada/good-news-e%e2%82%b9-unveiled-by-rbi-now-no-need-for-internet-payment-in-one-click/














