Subscribe to Updates
Get the latest creative news from FooBar about art, design and business.
Author: kannadanewsnow09
ರಾವಲ್ಪಿಂಡಿ: ಆತಿಥೇಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯವು ನಿರಂತರ ಮಳೆಯಿಂದಾಗಿ ರದ್ದಾಗಿದೆ. 29 ವರ್ಷಗಳಲ್ಲಿ ಮೊದಲ ಬಾರಿಗೆ ಐಸಿಸಿ ಪಂದ್ಯಾವಳಿಯ ಆತಿಥ್ಯ ವಹಿಸಿರುವ ಪಾಕಿಸ್ತಾನವು ಒಂದೇ ಒಂದು ಗೆಲುವನ್ನು ದಾಖಲಿಸದೆ ತನ್ನ ವಿನಾಶಕಾರಿ ಅಭಿಯಾನವನ್ನು ಕೊನೆಗೊಳಿಸಿತು. ಬಾಂಗ್ಲಾದೇಶ ಕೂಡ ಜಯವಿಲ್ಲದೆ ತಮ್ಮ ಪ್ರಯಾಣವನ್ನು ಕೊನೆಗೊಳಿಸಿತು ಮತ್ತು ಆತ್ಮಾವಲೋಕನ ಮಾಡಲು ಸಾಕಷ್ಟು ಸಮಯದೊಂದಿಗೆ ಮನೆಗೆ ಮರಳಲಿದೆ. ಒಂದು ಪಾಯಿಂಟ್ ಅನ್ನು ಎರಡೂ ತಂಡಗಳು ಹಂಚಿಕೊಳ್ಳುತ್ತವೆ. ದುಬೈನಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧ ಆರು ವಿಕೆಟ್ಗಳ ಸೋಲನ್ನು ಒಳಗೊಂಡ ಪಂದ್ಯಾವಳಿಯಲ್ಲಿ ಪಾಕಿಸ್ತಾನವು ಮರೆಯಲಾಗದ ಪ್ರದರ್ಶನಕ್ಕಾಗಿ ಟೀಕೆಗೆ ಗುರಿಯಾಗಿದೆ. ರಾವಲ್ಪಿಂಡಿಯಲ್ಲಿ ಒಂದು ಎಸೆತವೂ ಎಸೆಯದೆ ಪಂದ್ಯವನ್ನು ರದ್ದುಗೊಳಿಸಿರುವುದು ಇದು ಎರಡನೇ ಬಾರಿ, ಈ ವಾರದ ಆರಂಭದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಿನ ವಾಶ್ ಔಟ್ ಮೊದಲನೆಯದು. https://kannadanewsnow.com/kannada/railway-passengers-notice-partial-cancellation-of-movement-of-these-trains/ https://kannadanewsnow.com/kannada/breaking-bird-flu-enters-state-birds-die-under-mysterious-circumstances-in-raichur-panic-among-people/
ಬೆಂಗಳೂರು: ವಿವಿಧ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಈ ಕೆಳಕಂಡ ರೈಲುಗಳ ಸಂಚಾರ ಭಾಗಶಃ ರದ್ದುಗೊಳಿಸಿರುವುದಾಗಿ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. A) ಅಸನ್ಸೋಲ್ ವಿಭಾಗದಲ್ಲಿ ಪಾದಚಾರಿ ಮೇಲ್ಸೇತುವೆ (ಫೂಟ್ ಓವರ್ ಬ್ರಿಡ್ಜ್) ಕಾಮಗಾರಿ ನಡೆಯುತ್ತಿರುವುದರಿಂದ, ಫೆಬ್ರವರಿ 28, 2025 ರಂದು ವಾಸ್ಕೋ-ಡ-ಗಾಮಾ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 17321 ವಾಸ್ಕೋ-ಡ-ಗಾಮಾ–ಜಸಿದಿಃ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಜಸಿದಿಃ ನಿಲ್ದಾಣದ ಬದಲಿಗೆ ಮಧುಪುರದಲ್ಲಿ ತನ್ನ ಪ್ರಯಾಣವನ್ನು ಮುಕ್ತಾಯಗೊಳಿಸಲಿದೆ. ಮಧುಪುರ ಮತ್ತು ಜಸಿದಿಃ ನಿಲ್ದಾಣಗಳ ನಡುವಿನ ಪ್ರಯಾಣವನ್ನು ಭಾಗಶಃ ರದ್ದುಗೊಳಿಸಲಾಗಿದೆ ಎಂದು ಪೂರ್ವ ರೈಲ್ವೆಯು ತಿಳಿಸಿದೆ. B) ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಿಲ್ದಾಣದ ಐಲ್ಯಾಂಡ್ ಪ್ಲಾಟ್ಫಾರ್ಮ್ 12 ಮತ್ತು 13ರ ವಿಸ್ತರಣೆಗಾಗಿ ಟ್ರಾಫಿಕ್ ಮತ್ತು ಪವರ್ ಬ್ಲಾಕ್ಗಳ ಕಾರಣದಿಂದಾಗಿ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ಮಧ್ಯ ರೈಲ್ವೆಯು ಸೂಚಿಸಿದೆ. ವಿವರಗಳು ಈ ಕೆಳಗಿನಂತಿವೆ: 1. ಮಾರ್ಚ್ 1, 2025 ರಂದು ಹೊಸಪೇಟೆಯಿಂದ ಹೊರಡುವ ರೈಲು ಸಂಖ್ಯೆ…
ಬೆಂಗಳೂರು: ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ. ಕ್ಷೇತ್ರ ಮರುವಿಂಗಡಣೆಗೆ ನರೇಂದ್ರ ಮೋದಿ ಅವರ ಉತ್ಸಾಹ ನೋಡಿದರೆ ತಮ್ಮ ಪಕ್ಷದ ಕೀರ್ತಿಪತಾಕೆ ಹಾರಿಸುವುದಕ್ಕೆ ಪ್ರತಿರೋಧ ಒಡ್ಡುತ್ತಿರುವ ದಕ್ಷಿಣದ ರಾಜ್ಯಗಳ ಜನತೆಗೆ ಶಿಕ್ಷಿಸುವ ದುರುದ್ದೇಶ ಇರುವಂತೆ ಕಾಣಿಸುತ್ತಿದೆ. ಕೇಂದ್ರದ ಅನ್ಯಾಯದ ವಿರುದ್ಧ ಸಮಗ್ರ ರೂಪದ ಹೋರಾಟವನ್ನು ನಡೆಸಲು ನೆರೆಯ ದಕ್ಷಿಣದ ರಾಜ್ಯಗಳ ಜೊತೆಯಲ್ಲಿಯೂ ಮಾತುಕತೆ ನಡೆಸಲಾಗುತ್ತಿದೆ ಎಂಬುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಮಾಧ್ಯಮ ಪ್ರಕಟಣೆ ನೀಡಿರುವಂತ ಅವರು, ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ. ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ. ಕೇಂದ್ರ ಗೃಹ ಸಚಿವರ ಬೀಸು ಹೇಳಿಕೆಯನ್ನು ನೋಡಿದರೆ ಅವರಿಗೆ ಒಂದೋ ಮಾಹಿತಿಯ ಕೊರತೆ ಇದೆ, ಇಲ್ಲವಾದರೆ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಗಳಿಗೆ ಅನ್ಯಾಯ ಮಾಡುವ ದುರುದ್ದೇಶ ಇದೆ ಎಂದು…
ಬೆಂಗಳೂರು: ಕರ್ನಾಟಕದ ಹೋಟೆಲ್ ಗಳಲ್ಲಿ ಇಡ್ಲಿ ತಯಾರಿಕೆಗೆ ಬಳಸುವಂತ ಪ್ಲಾಸ್ಟಿಕ್ ನಿಷೇಧಿಸಲಾಗುತ್ತದೆ. ಇನ್ನೆರಡು ದಿನಗಳಲ್ಲಿ ಈ ಸಂಬಂಧ ಆದೇಶವನ್ನು ಹೊರಡಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಮಾಹಿತಿ ಹಂಚಿಕೊಂಡಿರುವಂತ ಅವರು, ಉಪಹಾರ ಕೇಂದ್ರಗಳು ಮತ್ತು ಹೋಟೆಲ್ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದ್ದು, ಇದನ್ನು ನಿಷೇಧಿಸಲಾಗಿದೆ. ಇನ್ನೇರಡು ದಿನಗಳಲ್ಲಿ ಅಧಿಕೃತ ಸುತ್ತೊಲೆ ನೀಡಲಾಗುವುದು ಎಂದಿದ್ದಾರೆ. ಈ ಮೊದಲು ಇಡ್ಲಿ ತಯಾರಿಕೆಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಹೆಚ್ಚಿನ ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ಬಳಕೆಯಿಂದ ಸಾರ್ವಜನಿಕರು ಸೇವಿಸುವ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಇದು ಆರೋಗ್ಯಕ್ಕೆ ಮಾರಕ ಎಂಬುದಾಗಿ ತಿಳಿಸಿದ್ದಾರೆ. https://twitter.com/dineshgrao/status/1895039821346939345 https://kannadanewsnow.com/kannada/state-government-employees-note-heres-all-you-need-to-know-about-the-registration-for-the-computer-literacy-test/ https://kannadanewsnow.com/kannada/breaking-bird-flu-enters-state-birds-die-under-mysterious-circumstances-in-raichur-panic-among-people/
ಬೆಂಗಳೂರು: ಇಡ್ಲಿ, ಸಾಂಬಾರ್ ಅಂದ್ರೆ ಸಾಕು ಅನೇಕರಿಗೆ ಅಚ್ಚುಮೆಚ್ಚು, ಅಷ್ಟೇ ಪ್ರೀತಿ. ಹೀಗೆ ನೀವು ಇಡ್ಲಿ ಪ್ರಿಯರಾಗಿದ್ದರೇ ನಿಮಗೊಂದು ಶಾಕಿಂಗ್ ನ್ಯೂಸ್ ಹೊರ ಬಿದ್ದಿದೆ. ಇಡ್ಲಿಯಲ್ಲಿ ಕ್ಯಾನ್ಸರ್ ಕಾರಕವಾಗಿರುವಂತ ಕಾರ್ಸಿನೋಜೆನಿಕ್ ಪತ್ತೆಯಾಗಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಉಪಹಾರ ಕೇಂದ್ರಗಳು ಮತ್ತು ಹೋಟೆಲ್ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದ್ದು, ಇದನ್ನು ನಿಷೇಧಿಸಲಾಗಿದೆ. ಇನ್ನೇರಡು ದಿನಗಳಲ್ಲಿ ಅಧಿಕೃತ ಸುತ್ತೊಲೆ ನೀಡಲಾಗುವುದು ಎಂದಿದ್ದಾರೆ. ಈ ಮೊದಲು ಇಡ್ಲಿ ತಯಾರಿಕೆಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಹೆಚ್ಚಿನ ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ಬಳಕೆಯಿಂದ ಸಾರ್ವಜನಿಕರು ಸೇವಿಸುವ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಇದು ಆರೋಗ್ಯಕ್ಕೆ ಮಾರಕ ಎಂಬುದಾಗಿ ತಿಳಿಸಿದ್ದಾರೆ. https://twitter.com/dineshgrao/status/1895039821346939345 https://kannadanewsnow.com/kannada/triangle-love-story-in-letter-against-telugu-director-ss-rajamouli-friend-accuses-him-of-sexual-harassment/ https://kannadanewsnow.com/kannada/state-government-employees-note-heres-all-you-need-to-know-about-the-registration-for-the-computer-literacy-test/
ಹೈದರಾಬಾದ್: ತೆಲುಗು ಸಿನಿಮಾ ನಿರ್ದೇಶಕ ಎಸ್ ಎಸ್ ರಾಜಮೌಳಿ ವಿರುದ್ಧ ಟ್ರಯಾಂಗಲ್ ಲವ್ ಸ್ಟೋರಿಯ ವಿವಾದವನ್ನು ಸ್ನೇಹಿತನೊಬ್ಬ ಹುಟ್ಟು ಹಾಕಿದ್ದಾರೆ. ಅಲ್ಲದೇ ತಾನು, ರಾಜಮೌಳಿ ಒಂದೇ ಯುವತಿಯನ್ನು ಪ್ರೀತಿಸುತ್ತಿದ್ದಾಗಿ ಪತ್ರದಲ್ಲಿ ಬಹಿರಂಗ ಪಡಿಸಿದ್ದಾರೆ. ಈ ಸಂಬಂಧ ಪತ್ರ ಬರೆದಿರುವಂತ ಶ್ರೀನಿವಾಸ್ ಎಂಬುವರು ನಾನು ಮತ್ತು ನಿರ್ದೇಶಕ ರಾಜಮೌಳಿ ಅವರು 34 ವರ್ಷಗಳಿಂದ ಸ್ನೇಹಿತರು. ಆರ್ಯ-2 ಸಿನಿಮಾದಂತೆ ನಾನು, ರಾಜಮೌಳಿ ಇಬ್ಬರು ಒಂದೇ ಯುವತಿಯನ್ನು ಪ್ರೀತಿಸುತ್ತಿದ್ದೆವು ಎಂದಿದ್ದಾರೆ. ಇನ್ನೂ ನಮ್ಮ ಸ್ಟೋರಿಯನ್ನು ಸಿನಿಮಾ ಮಾಡಲು ಮುಂದಾಗಿದ್ದೆ. ಈ ವಿಷಯವನ್ನು ತಿಳಿದಂತ ರಾಜಮೌಳಿಯವರು ನನಗೆ ಟಾರ್ಚರ್ ಕೊಡುತ್ತಿದ್ದಾರೆ ಎಂಬುದಾಗಿ ರಾಜಮೌಳಿ ವಿರುದ್ಧ ಶ್ರೀನಿವಾಸ್ ಗಂಭೀರ ಆರೋಪ ಮಾಡಿದ್ದಾರೆ. ಸ್ಟಾರ್ ನಿರ್ದೇಶಕ ಎಸ್.ಎಸ್.ರಾಜಮೌಳಿ ಅವರ ಹಳೆಯ ಸ್ನೇಹಿತ ಮತ್ತು ಮಾಜಿ ಸಹಯೋಗಿ ಯು.ಶ್ರೀನಿವಾಸ ರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ರಾಜಮೌಳಿ ಅವರ ಸ್ನೇಹಿತ ಮತ್ತು ಯಮದೊಂಗ ಚಿತ್ರದ ಕಾರ್ಯನಿರ್ವಾಹಕ ನಿರ್ಮಾಪಕ ಶ್ರೀನಿವಾಸ ರಾವ್ ಅವರು ಸಾಯುವ ಮೊದಲು ಸೆಲ್ಫಿ ವೀಡಿಯೊ ಮತ್ತು ಪತ್ರವನ್ನು ಚಲನಚಿತ್ರ…
ಬೆಂಗಳೂರು: ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದಂತ ಆರೋಪದಲ್ಲಿ ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಪುತ್ರ ವಿಷ್ಣು ಭಟ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಚ್ ಎಸ್ ಠಾಣೆಯ ಪೊಲೀಸರು ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದಂತ ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಮಗ ವಿಷ್ಣು ಭಟ್ ಎಂಬುವರನ್ನು ಬಂಧಿಸಿದ್ದಾರೆ. ಕಳೆದ ಫೆಬ್ರವರಿ 7ರಂದು ಹೋಟೆಲ್ ಬಳಿ ಗಲಾಟೆ ಮಾಡಿದ್ದರು. ಆ ಬಳಿಕ ಫೆಬ್ರವರಿ 26ರ ನಿನ್ನೆ ಕೂಡ ಹೋಟೆಲ್ ಬಳಿಗೆ ಬಂದು ವಿನಾಕಾರಣ ಜಗಳಕ್ಕೆ ಇಳಿದಿದ್ದರು. ಜಗಳದ ವೇಳೆಯಲ್ಲೇ ಕಬ್ಬಿಣದ ವಸ್ತುವಿನಿಂದ ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದರು. ಈ ಘಟನೆ ಸಂಬಂಧ ಹೋಟೆಲ್ ಸಿಬ್ಬಂದಿ ಹೆಚ್ ಎಸ್ ಆರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಭೀಮಾ ಜ್ಯೂವೆಲ್ಲರ್ಸ್ ಮಾಲೀಕರ ಪುತ್ರ ವಿಷ್ಣು ಭಟ್ ನನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಷ್ಣು ಭಟ್ ನನ್ನು ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/actor-gene-hackman-wife-betsy-arakawa-found-dead-in-new-mexico-home/ https://kannadanewsnow.com/kannada/state-government-employees-note-heres-all-you-need-to-know-about-the-registration-for-the-computer-literacy-test/
ಲಂಡನ್: ಪ್ರಶಸ್ತಿ ವಿಜೇತ ಅಮೆರಿಕನ್ ನಟ ಜೀನ್ ಹ್ಯಾಕ್ಮನ್ (95) ಮತ್ತು ಅವರ ಪತ್ನಿ ಬೆಟ್ಸಿ ಅರಕಾವಾ ಅವರು ಅಮೆರಿಕದ ನ್ಯೂ ಮೆಕ್ಸಿಕೊದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಸಾಂಟಾ ಫೆ ನ್ಯೂ ಮೆಕ್ಸಿಕನ್ ವೆಬ್ಸೈಟ್ ಗುರುವಾರ ತಿಳಿಸಿದೆ. ದಂಪತಿಗಳು ತಮ್ಮ ನಾಯಿಯೊಂದಿಗೆ ಸಾವನ್ನಪ್ಪಿದ್ದಾರೆ. ಅವರ ಸಾವಿನ ಹಿಂದಿನ ಕಾರಣ ತಕ್ಷಣಕ್ಕೆ ಏನೆಂದು ತಿಳಿದು ಬಂದಿಲ್ಲ ಎಂಬುದಾಗಿ ಯಾವುದೇ ಕೆಟ್ಟ ಆಟದ ಬಗ್ಗೆ ತಕ್ಷಣದ ಸೂಚನೆಗಳಿಲ್ಲ ಎಂದು ಸಾಂಟಾ ಫೆ ಕೌಂಟಿ ಶೆರಿಫ್ ಅಡಾನ್ ಮೆಂಡೋಜಾ ಅವರನ್ನು ಉಲ್ಲೇಖಿಸಿ ವೆಬ್ಸೈಟ್ ಉಲ್ಲೇಖಿಸಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆಯ ನಂತ್ರ ನಟ ಜೀನ್ ಹ್ಯಾಕ್ಮನ್ ಮತ್ತು ಪತ್ನಿ ಬೆಟ್ಸಿ ಅರಕಾವಾ ಅವರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಹ್ಯಾಕ್ಮನ್ ದಶಕಗಳ ಹಿಂದೆ ಹಾಲಿವುಡ್ನಿಂದ ನಿವೃತ್ತರಾದರು ಮತ್ತು ಕಳೆದ ಹಲವಾರು ವರ್ಷಗಳಿಂದ ಕಡಿಮೆ ಪ್ರೊಫೈಲ್ ಅನ್ನು ಉಳಿಸಿಕೊಂಡಿದ್ದಾರೆ. ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿಲ್ಲ, ಮತ್ತು ವಿರಳವಾಗಿ ಛಾಯಾಚಿತ್ರಗಳನ್ನು ತೆಗೆದುಕೊಳ್ಳಲಾಯಿತು. ಎರಡು ಬಾರಿ…
ನವದೆಹಲಿ: ಸಂಸದೀಯ ಸಮಿತಿ ಇತ್ತೀಚೆಗೆ ಶಿಫಾರಸು ಮಾಡಿದ ಬದಲಾವಣೆಗಳನ್ನು ಒಳಗೊಂಡ ವಕ್ಫ್ (ತಿದ್ದುಪಡಿ) ಮಸೂದೆಗೆ ಪ್ರಸ್ತಾವಿತ ತಿದ್ದುಪಡಿಗಳಿಗೆ ಸಂಪುಟ ಅನುಮೋದನೆ ನೀಡಿದ್ದು, ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ಚರ್ಚೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಲು ದಾರಿ ಮಾಡಿಕೊಟ್ಟಿದೆ. ಜಗದಾಂಬಿಕಾ ಪಾಲ್ ನೇತೃತ್ವದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಶಿಫಾರಸು ಮಾಡಿದ ಹೆಚ್ಚಿನ ಬದಲಾವಣೆಗಳನ್ನು ಸರ್ಕಾರ ಸೇರಿಸಿದೆ ಮತ್ತು ಭಾರತೀಯ ಬಂದರು ಮಸೂದೆಯೊಂದಿಗೆ ಕ್ಯಾಬಿನೆಟ್ ಕಳೆದ ವಾರ ಅದನ್ನು ಅನುಮೋದಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾಗೆ ತಿಳಿದುಬಂದಿದೆ. ಮಸೂದೆಯನ್ನು ಸರ್ಕಾರವು ತನ್ನ ಶಾಸಕಾಂಗ ವ್ಯವಹಾರದ ಭಾಗವಾಗಿ ಆದ್ಯತೆಯ ಪಟ್ಟಿಯಲ್ಲಿ ಇರಿಸಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಸೂದೆಯನ್ನು ಲೋಕಸಭೆಯಲ್ಲಿ ಪರಿಚಯಿಸಿದ ನಂತರ ಆಗಸ್ಟ್ 2024 ರಲ್ಲಿ ಜೆಪಿಸಿಗೆ ಕಳುಹಿಸಲಾಯಿತು. ಸಂಸದೀಯ ಸಮಿತಿಯು ಬಹುಮತದ ಮತದೊಂದಿಗೆ ವರದಿಯನ್ನು ಅಂಗೀಕರಿಸಿದರೆ, ಸಮಿತಿಯ ಎಲ್ಲಾ 11 ವಿರೋಧ ಪಕ್ಷಗಳ ಸಂಸದರು ವರದಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅವರು ಭಿನ್ನಾಭಿಪ್ರಾಯದ ಟಿಪ್ಪಣಿಗಳನ್ನು ಸಹ ಮಂಡಿಸಿದ್ದರು. 655 ಪುಟಗಳ ವರದಿಯನ್ನು ಈ…
ಶಿವಮೊಗ್ಗ: ಸಾಗರ ನಗರ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಮೂರು ಕಳ್ಳತನ ಪ್ರಕರಣಗಳನ್ನು ಬೇದಿಸಿದ್ದಾರೆ. ಅಲ್ಲದೇ 5,000 ನಗದು ಸೇರಿದಂತೆ 1.25 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪೇಟೆ ಠಾಣೆ ಹಾಗೂ ಆನಂದಪುರ ಠಾಣೆಯಲ್ಲಿ ಮೂರು ಕಳ್ಳತನ ಪ್ರಕರಣಗಳು ದಾಖಲಾಗಿದ್ದವು. ಇವುಗಳ ತನಿಖೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ಎಸ್ಪಿ ಅನಿಲ್ ಕುಮಾರ್ ಭೂಮ್ ರೆಡ್ಡಿ, ಕರಿಯಪ್ಪ ಅವರು, ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಮೇಲ್ವಿಚಾರಣೆಯಲ್ಲಿ ತಂಡವನ್ನು ರಚಿಸುತ್ತಾರೆ. ಸಾಗರ ಠಾಣೆಯ ಪೊಲೀಸ್ ನಿರೀಕ್ಷಕ ಪುಲ್ಲಯ್ಯ ರಾಥೋಡ್ ನೇತೃತ್ವದಲ್ಲಿ ಪಿಎಸ್ಐ ಯಲಪ್ಪ ಹಿರಗಣ್ಣನವರ, ಹೆಡ್ ಕಾನ್ಸ್ ಸ್ಟೇಬಲ್ ಸನಾವುಲ್ಲಾ, ಫೈರೋಜ್ ಅಲಿಖಾನ್, ಪಿಸಿ ವಿಕಾಸ್, ವಿಶ್ವನಾಥ್, ಕೃಷ್ಣ ಮೂರ್ತಿ, ರವಿಕುಮಾರ್ ತಂಡ ತನಿಖೆಗೆ ಇಳಿದು, ಮೂರು ಆರೋಪಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕೇಸ್ ನಂ.1 ದಿನಾಂಕ 14-12-2024ರಂದು ಮರ್ಗಿ ಏಜೆನ್ಸಿ ಮಾಲೀಕರಾದ ಅಶೋಕ್ ಬಿ.ಆರ್ ಅವರು ಸಾಗರ ಪೇಟೆ ಠಾಣೆಗೆ…