Subscribe to Updates
Get the latest creative news from FooBar about art, design and business.
Author: kannadanewsnow09
ಧಾರವಾಡ : ಧಾರವಾಡ ಜಿಲ್ಲೆಯ 05 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಒಟ್ಟು 23 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಮತ್ತು ಒಟ್ಟು 97 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 18, 2025 ರೊಳಗಾಗಿ https://karnemakaone.kar.nic.in/abcd/ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆ ಕಛೇರಿ ದೂರವಾಣಿ ಸಂಖ್ಯೆ: 0836-2444838, ಹುಬ್ಬಳ್ಳಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆ ಕಛೇರಿ ದೂರವಾಣಿ ಸಂಖ್ಯೆ: 0836-2377288, ಕಲಘಟಗಿ ಶಿಶು ಅಭಿವೃದ್ಧಿ ಯೋಜನೆ ಕಛೇರಿ ದೂರವಾಣಿ ಸಂಖ್ಯೆ:08370-284532, ಕುಂದಗೋಳ ಶಿಶು ಅಭಿವೃದ್ಧಿ ಯೋಜನೆ ಕಛೇರಿ ದೂರವಾಣಿ ಸಂಖ್ಯೆ: 08304-290561, ನವಲಗುಂದ ಶಿಶು ಅಭಿವೃದ್ಧಿ ಯೋಜನೆ ಕಛೇರಿ ದೂರವಾಣಿ ಸಂಖ್ಯೆ: 08380-229618 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/big-news-charge-sheet-filed-against-mla-harish-poonja-high-court-granted-permission-to-amend-the-petition/ https://kannadanewsnow.com/kannada/after-calling-virat-kohli-a-joker-rahul-threatened-to-kill-the-doctors/
ಶಿವಮೊಗ್ಗ : ಸಸ್ಯಗಳ ಬೆಳವಣೆಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಆಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತದೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು ಕ್ಯಾಲ್ಸಿಯಂ, ಮೆಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಬ್ಬಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಲಘು ಪೋಷಕಾಂಶದ ಕೊರತೆಯಾದರು ಸಸ್ಯಗಳ ಬೆಳವಣೆಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ. ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದಲೇ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಆನಿವಾರ್ಯ. ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯುವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದ್ದು, ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು…
ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 12 ದಿನಗಳ ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯು ಬರುವ 10 ಜೂನ್ 2025 ರಿಂದ ಆಯೋಜಿಸಲಾಗಿದ್ದು, ಕರ್ನಾಟಕ ರಾಜ್ಯದಲ್ಲಿನ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ – ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ, 9380220884, 9380162042, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನರ್ದೇಶಕರು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/after-calling-virat-kohli-a-joker-rahul-threatened-to-kill-the-doctors/ https://kannadanewsnow.com/kannada/big-news-charge-sheet-filed-against-mla-harish-poonja-high-court-granted-permission-to-amend-the-petition/
ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಅಭಿಮಾನಿಗಳನ್ನು “ಜೋಕರ್ಸ್” ಎಂದು ಕರೆದ ನಂತರ ಇತ್ತೀಚೆಗೆ ಸುದ್ದಿಯಲ್ಲಿದ್ದ ಗಾಯಕ ಮತ್ತು ಬಿಗ್ ಬಾಸ್ 14 ಖ್ಯಾತಿಯ ರಾಹುಲ್ ವೈದ್ಯ, ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಕ್ಕಾಗಿ ತಮ್ಮನ್ನು ಹೇಗೆ ನಿಂದಿಸಲಾಯಿತು ಮತ್ತು ಬೆದರಿಕೆ ಹಾಕಲಾಯಿತು ಎಂಬುದನ್ನು ಈಗ ಬಹಿರಂಗಪಡಿಸಿದ್ದಾರೆ. ಟೆಲ್ಲಿ ಟಾಕ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ರಾಹುಲ್, ಪರದೆಯ ಹಿಂದೆ ಕುಳಿತು ಆನ್ಲೈನ್ನಲ್ಲಿ ಸೆಲೆಬ್ರಿಟಿಗಳನ್ನು ಬೆದರಿಸುವ ಮತ್ತು ನಿಂದಿಸುವವರ ಮೇಲೆ ಪರಿಶೀಲನೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಆ ಅಧ್ಯಾಯ ಈಗ ಮುಗಿದಿದೆ. ಅದು ತಮಾಷೆಯಾಗಿತ್ತು. ಆದರೆ ಅವರ ಅಭಿಮಾನಿಗಳು ಅದನ್ನು ಬಹಳ ಕೊಳಕು ವಿವಾದವನ್ನಾಗಿ ಪರಿವರ್ತಿಸಿದರು. ಆ ಹಾಸ್ಯವನ್ನು ಸಂವೇದನಾಶೀಲಗೊಳಿಸಲಾಯಿತು ಮತ್ತು ವಿಪರೀತವಾಗಿ ಗಾಳಿಗೆ ತೂರಲಾಯಿತು. ಅದು ಸಂಪೂರ್ಣವಾಗಿ ಬೇರೇನೋ ಆಯಿತು. ಆದರೆ ಎಲ್ಲವೂ ಕಳೆದುಹೋಗಲಿ, ಈಗ ಎಲ್ಲವೂ ಮುಗಿದಿದೆ ಎಂದು ಅವರು ಹೇಳಿದರು. ರಾಹುಲ್ ಮುಂದುವರಿಸುತ್ತಾ, “ಈ ಸಾಲಿನಲ್ಲಿ ನನಗೆ ಹೆಚ್ಚು ಅಸಮಾಧಾನ ತಂದದ್ದು ನನ್ನನ್ನು ಹೇಗೆ…
ಶಿವಮೊಗ್ಗ: ಜಿಲ್ಲೆಯಲ್ಲಿ ನಡೆದಂತ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಾಗರ ಸರ್ಕಾರಿ ನೌಕರರ ಸಂಘದ ಡೊಳ್ಳು ಕುಣಿತ ತಂಡವು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದೆ. ಇಂತಹ ಸಾಧನೆ ಮಾಡಿದಂತ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಡೊಳ್ಳು ಕುಣಿತ ತಂಡಕ್ಕೆ ಅಧ್ಯಕ್ಷ ಸಂತೋಷ್ ಕುಮಾರ್ ಎನ್ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವಂತ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್.ಎನ್ ಅವರು, ಶಿವಮೊಗ್ಗ ನಗರದಲ್ಲಿ ಮೇ.18, 19 ಮತ್ತು 20ರ ಇಂದಿನವರೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು. ಈ ಸ್ಪರ್ಧೆಯಲ್ಲಿ ಜಾನಪದ ನೃತ್ಯ ಕಲೆ, ಮಲೆನಾಡಿನ ಗಂಡು ಕಲೆಯಾದಂತ ಡೊಳ್ಳು ಕುಣಿತದಲ್ಲಿ ಸಾಗರ ತಾಲೂಕು ನೌಕರರ ಸಂಘದ ತಂಡವು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ ಎಂದರು. ರಾಜ್ಯ ಮಟ್ಟದಲ್ಲಿ ಶಿವಮೊಗ್ಗಕ್ಕೆ ಪ್ರಥಮ ಸ್ಥಾನವನ್ನು ತಂದುಕೊಟ್ಟಂತ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಡೊಳ್ಳು ಕುಣಿತ ತಂಡಕ್ಕೆ…
ಮಂಡ್ಯ : ಮದ್ದೂರು ತಾಲೂಕು ಕಚೇರಿ ಭ್ರಷ್ಟಾಚಾರದ ತವರೂರಾಗಿದೆ. ಇದರಿಂದ ರೈತರ ಹಾಗೂ ಸಾರ್ವಜನಿಕರ ಸರ್ಕಾರಿ ಕೆಲಸ ಮಾಡಿಸಿಕೊಳ್ಳಲು ಲಂಚ ನೀಡಬೇಕಾದ ದುಸ್ಥಿತಿ ಬಂದಿದೆ ಎಂದು ರೈತ ಸಂಘಟನೆಯ ವಿಭಾಗೀಯ ರಾಜ್ಯ ಉಪಾಧ್ಯಕ್ಷ ಬೋರಾಪುರ ಶಂಕರೇಗೌಡ ಗಂಭೀರವಾಗಿ ಆರೋಪಿಸಿದರು. ಮದ್ದೂರು ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ತಹಸೀಲ್ದಾರ್ ಡಾ.ಸ್ಮಿತಾರಾಮು ಅವರ ಅಧ್ಯಕ್ಷತೆಯಲ್ಲಿ ನಡೆದ ರೈತರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ರೈತರ ಹಾಗೂ ಸಾರ್ವಜನಿಕರಿಗೆ ಜನಸ್ನೇಹಿಯಾಗಿ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸುವುದನ್ನು ಬಿಟ್ಟು, ಕೆಲ ಅಧಿಕಾರಿಗಳು ಲಂಚಾವತಾರದಲ್ಲಿ ಮುಳುಗಿರುವುದು ಬೇಸರದ ಸಂಗತಿಯಾಗಿದೆ ಎಂದರು. ತಾಲೂಕು ಕಚೇರಿ, ತೋಟಗಾರಿಕೆ, ಕೃಷಿ ಇಲಾಖೆ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ರೈತರು ಸವಲತ್ತುಗಳನ್ನು ಪಡೆದುಕೊಳ್ಳಬೇಕಾದರೆ ಕಚೇರಿಗಳಿಗೆ ಪ್ರತಿನಿತ್ಯ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಕಚೇರಿಯ ಕಂದಾಯ ಇಲಾಖೆಯಲ್ಲಿ ಸರ್ವೇ ಮಾಡಿಸಲು, ಆರ್.ಟಿ.ಸಿ.ತಿದ್ದುಪಡಿಗೆ ವರ್ಷಾನುಗಟ್ಟಲೆಯಿಂದ ರೈತರಿಗೆ ಆಗುತ್ತಿಲ್ಲ. ಇದರಿಂದ ರೈತರು ದೂರದ…
ಇಸ್ಲಮಾಬಾದ್: ಪಾಕಿಸ್ತಾನದ ಫೆಡರಲ್ ಕ್ಯಾಬಿನೆಟ್ ಮಂಗಳವಾರ ಸೇನಾ ಮುಖ್ಯಸ್ಥ (COAS) ಜನರಲ್ ಅಸಿಮ್ ಮುನೀರ್ ಅವರನ್ನು ಫೀಲ್ಡ್ ಮಾರ್ಷಲ್ ಹುದ್ದೆಗೆ ಬಡ್ತಿ ನೀಡಲು ಅನುಮೋದನೆ ನೀಡಿದೆ. ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜಿಯೋ ನ್ಯೂಸ್ ಪ್ರಕಾರ, “ದೇಶದ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ‘ಆಪರೇಷನ್ ಬನ್ಯನ್-ಉಮ್-ಮರ್ಸೂಸ್’ ಸಮಯದಲ್ಲಿ ಅತ್ಯುತ್ತಮ ತಂತ್ರ ಮತ್ತು ಧೈರ್ಯಶಾಲಿ ನಾಯಕತ್ವದ ಮೂಲಕ ಶತ್ರುಗಳನ್ನು ಸೋಲಿಸಲು” ಈ ಕ್ರಮ ಕೈಗೊಳ್ಳಲಾಗಿದೆ. ಹೀಗೆ ಜನರಲ್ ಮುನೀರ್ ಪಾಕಿಸ್ತಾನದ ಇತಿಹಾಸದಲ್ಲಿ ಪ್ರತಿಷ್ಠಿತ ಐದು ನಕ್ಷತ್ರಗಳ ಫೀಲ್ಡ್ ಮಾರ್ಷಲ್ ಹುದ್ದೆಯನ್ನು ಪಡೆದ ಎರಡನೇ ವ್ಯಕ್ತಿಯಾಗಿದ್ದಾರೆ – ಮೊದಲನೆಯವರು ಜನರಲ್ ಅಯೂಬ್ ಖಾನ್. ಆದಾಗ್ಯೂ, ಖಾನ್ಗಿಂತ ಭಿನ್ನವಾಗಿ, ಸ್ವತಃ ಈ ಬಿರುದನ್ನು ನೀಡಿದ್ದ ಮುನೀರ್ ಅವರ ಬಡ್ತಿ ಔಪಚಾರಿಕ ಕ್ಯಾಬಿನೆಟ್ ಅನುಮೋದನೆಯೊಂದಿಗೆ ಬರುತ್ತದೆ. https://kannadanewsnow.com/kannada/former-cricketer-shikhar-dhawan-has-purchased-an-ultra-luxurious-flat-worth-69-crores/ https://kannadanewsnow.com/kannada/scheduled-caste-internal-reservation-classification-survey-allowing-self-declaration-through-online/
ನವದೆಹಲಿ: ಭಾರತದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಗುರುಗ್ರಾಮ್ನ ದಿ ಡೇಲಿಯಾಸ್ನಲ್ಲಿರುವ ಡಿಎಲ್ಎಫ್ನ ರಿಯಲ್ ಎಸ್ಟೇಟ್ ಯೋಜನೆಯಲ್ಲಿ ಸುಮಾರು ₹69 ಕೋಟಿಗೆ ಅಲ್ಟ್ರಾ ಐಷಾರಾಮಿ ಅಪಾರ್ಟ್ಮೆಂಟ್ ಖರೀದಿಸಿದ್ದಾರೆ ಎಂದು ರಿಯಲ್ ಎಸ್ಟೇಟ್ ಡೇಟಾ ವಿಶ್ಲೇಷಣಾ ಸಂಸ್ಥೆಯಾದ ಸಿಆರ್ಇ ಮ್ಯಾಟ್ರಿಕ್ಸ್ ದಾಖಲೆಗಳು ತೋರಿಸಿವೆ. ಅಪಾರ್ಟ್ಮೆಂಟ್ನ ಬೆಲೆ ₹65.61 ಕೋಟಿ ಮತ್ತು ಸ್ಟಾಂಪ್ ಡ್ಯೂಟಿ ಸೇರಿದಂತೆ ಒಟ್ಟು ವೆಚ್ಚ ₹68.89 ಕೋಟಿ ಎಂದು ದಾಖಲೆಗಳು ತೋರಿಸಿವೆ. ಮಾರಾಟ ಒಪ್ಪಂದದ ದಾಖಲೆಯು ಗುರ್ಗಾಂವ್ನ ಸೆಕ್ಟರ್ 54 ರಲ್ಲಿರುವ ಡಿಎಲ್ಎಫ್ನ ದಿ ಡೇಲಿಯಾಸ್ನಲ್ಲಿರುವ ಅಪಾರ್ಟ್ಮೆಂಟ್ಗೆ ಮಾಜಿ ಕ್ರಿಕೆಟಿಗ ₹3.24 ಕೋಟಿ ಸ್ಟಾಂಪ್ ಡ್ಯೂಟಿ ಪಾವತಿಸಿದ್ದಾರೆ ಎಂದು ತೋರಿಸಿದೆ. ವ್ಯವಹಾರವನ್ನು ಫೆಬ್ರವರಿ 4, 2025 ರಂದು ನೋಂದಾಯಿಸಲಾಗಿದೆ ಎಂದು ದಾಖಲೆ ತೋರಿಸಿದೆ. ‘ಗಬ್ಬರ್’ ಎಂದು ಜನಪ್ರಿಯವಾಗಿರುವ ಭಾರತೀಯ ಕ್ರಿಕೆಟಿಗ ಶಿಖರ್ ಧವನ್, ಐದು ಕಾರು ಪಾರ್ಕಿಂಗ್ ಸ್ಥಳಗಳನ್ನು ಒಳಗೊಂಡಿರುವ 6,040 ಚದರ ಅಡಿ ಅಪಾರ್ಟ್ಮೆಂಟ್ ಖರೀದಿಸಿದ್ದಾರೆ. ಅಧಿಕೃತ ದಾಖಲೆಗಳ ಪ್ರಕಾರ, ಬೆಲೆ ಪ್ರತಿ ಚದರ ಅಡಿಗೆ ₹1.08…
ಬೆಂಗಳೂರು: ಪತ್ರಿಕಾ ವಿತರಕರ ಅಪಘಾತ ವಿಮಾ ಪರಿಹಾರ ನೀಡುವಲ್ಲಿ ನಿಬಂಧನೆಗಳ ಕೆಲ ಷರತ್ತುಗಳನ್ನು ಸಡಿಲಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿ ಚರ್ಚಿಸಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಹಾಗೂ ಕಾರ್ಮಿಕ ಸಚಿವರಿಗೂ ಪ್ರತ್ಯೇಕ ಮನವಿ ಸಲ್ಲಿಸಲಾಯಿತು. ಮನವಿ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಜೊತೆಗೆ ಚರ್ಚಿಸಿದ ಪ್ರಭಾಕರ್ ಅವರು ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟರು. ಈ ಬಗ್ಗೆ ಪರಿಶೀಲಿಸಿ ಪತ್ರಿಕಾ ವಿತರಕರ ಒಕ್ಕೂಟ ಸೇರಿದಂತೆ ಸಮಿತಿ ರಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವ ಸಂತೋಷ್ ಲಾಡ್ ಅವರು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಐದನೇ ರಾಜ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಯಿತು. https://kannadanewsnow.com/kannada/u-c-shivappa-was-elected-as-the-president-of-the-mandya-district-and-krishnegowda-was-elected-as-the-vice-president-unopposed/ https://kannadanewsnow.com/kannada/scheduled-caste-internal-reservation-classification-survey-allowing-self-declaration-through-online/
ಮಂಡ್ಯ : ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷರ ( ಮನ್ ಮುಲ್ ) ಚುನಾವಣೆ ಅಂತಿಮವಾಗಿ ಕೈ ವಶವಾಗಿದ್ದು, ಅಧ್ಯಕ್ಷರಾಗಿ ಹ್ಯಾಟ್ರಿಕ್ ಗೆಲುವಿನ ಸರದಾರ ಯು.ಸಿ. ಶಿವಪ್ಪ ಹಾಗೂ ಉಪಾಧ್ಯಕ್ಷರಾಗಿ ಕೃಷ್ಣೇಗೌಡ ಅವರುಗಳು ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆದರೆ, ಉಪಾಧ್ಯಕ್ಷ ಕೃಷ್ಣೇಗೌಡ ಆಯ್ಕೆ ಬಗ್ಗೆ ಹೈಕೋರ್ಟ್ ನಲ್ಲಿ ತಡೆಯಾಜ್ಞೆ ಇದ್ದು, ವಿಚಾರಣೆ ಬಾಕಿ ಇರೋದ್ರಿಂದ ಅಧಿಕೃತವಾಗಿ ಘೋಷಣೆ ಮಾಡುವಂತಿಲ್ಲ. ಹೈಕೋರ್ಟ್ ನಲ್ಲಿ ಜೂ.4 ರಂದು ಪ್ರಕರಣದ ಅಂತಿಮ ವಿಚಾರಣೆ ನಡೆಯಲ್ಲಿದ್ದು, ಅಲ್ಲಿಯವರೆಗೂ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ನಿರ್ದೇಶಕರಾಗಿ ಮಾತ್ರ ಮುಂದುವರೆಯುತ್ತಾರೆ ಎಂದು ಚುನಾವಣಾಧಿಕಾರಿ ಬಿ.ಸಿ.ಶಿವನಂದಮೂರ್ತಿ ಹೇಳಿದರು. ಮನ್ ಮುಲ್ ನಿರ್ದೇಶಕ ಚುನಾವಣೆಯಲ್ಲಿ ಮಳವಳ್ಳಿಯಿಂದ ಆಯ್ಕೆಯಾಗಿರುವ ಕೃಷ್ಣೇಗೌಡರ ಆಯ್ಕೆ ಕುರಿತು ಹೈಕೋರ್ಟ್ ನಲ್ಲಿ ಪ್ರಕರಣ ಬಾಕಿ ಇರುವ ಕಾರಣ ಚುನಾವಣೆ ಪ್ರಕ್ರಿಯೆಯನ್ನು ಅಧೀಕೃತ ಫಲಿತಾಂಶಕ್ಕೆ ತಡೆಯಾಜ್ಞೆ ಬಿದ್ದಿದೆ.ಯ ಅಧ್ಯಕ್ಷ ಸ್ಥಾನದ ಗದ್ದುಗೆ ಏರಲು ಎನ್.ಅಪ್ಪಾಜಿಗೌಡ, ಬಿ.ಬೋರೇಗೌಡ, ಹರೀಶ್ ಬಾಬು ಅವರುಗಳು ಶಿವಪ್ಪಗೆ ಪ್ರಬಲ ಸ್ಪರ್ಧಿಯಾಗಿದ್ದರು. ಆದರೆ,…