Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬಿಜೆಪಿ ಅವಧಿಯಲ್ಲಿ 1,600 ಕೋಟಿ ರೂ. ಹಣವನ್ನು ಬೆಂಗಳೂರಿನ ಅಭಿವೃದ್ಧಿಗೆ ನೀಡಿದ್ದು, ಆ ಕಾಮಗಾರಿಗಳನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಿದೆ. ಆ ಕಾಮಗಾರಿಗಳು ನಡೆದಿದ್ದರೆ ಇಂತಹ ಪ್ರವಾಹದ ಸ್ಥಿತಿ ಬರುತ್ತಿರಲಿಲ್ಲ. ಬೆಂಗಳೂರಿಗೆ ಕಳೆದ 2 ವರ್ಷಗಳಲ್ಲಿ ಏನು ಮಾಡಿದ್ದೀರಿ ಎಂದು ತಿಳಿಸಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ ಪ್ರವಾಹ ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇಡೀ ಬೆಂಗಳೂರು ಮಳೆಯಿಂದಾಗಿ ಮುಳುಗುತ್ತಿದ್ದು, ಜನರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಐದು ಜನರು ಸತ್ತಿದ್ದಾರೆ. ಇಂಥವರ ಸಾವಿನ ಮೇಲೆ ಕಾಂಗ್ರೆಸ್ ಸಾಧನೆಯ ಸಮಾವೇಶ ಮಾಡುತ್ತಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಮಾವೇಶವನ್ನು ರದ್ದು ಮಾಡಬೇಕಿತ್ತು. ಕಾಂಗ್ರೆಸ್ನ ತಪ್ಪಿನಿಂದಲೇ ಜನರು ಸತ್ತಿದ್ದಾರೆ. ಇಂತಹ ಸಮಾವೇಶ ಮಾಡುವ ನೈತಿಕ ಅರ್ಹತೆ ಸರ್ಕಾರಕ್ಕೆ ಇಲ್ಲ ಎಂದು ಟೀಕಿಸಿದರು. ಬೆಂಗಳೂರಿನ ಸಾಯಿ ಬಡಾವಣೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ, ಅಭಿವೃದ್ಧಿ ಮಾಡುತ್ತೇನೆಂದು ಹೇಳಿದ್ದರು. ಸಿಲ್ಕ್ ಬೋರ್ಡ್ ಬಳಿ ಕಳೆದ ಸಲವೂ ಪ್ರವಾಹವಾಗಿತ್ತು. ಇಷ್ಟಾದರೂ ಅಭಿವೃದ್ಧಿಗೆ…
ಹೊಸಪೇಟೆ: ಮೋದಿ ಸರ್ಕಾರ ಭದ್ರತೆ ನೀಡದೇ ಇರುವ ಕಾರಣಕ್ಕೆ ಪೆಹಲ್ಗಾಮ್ ನಲ್ಲಿ ಭಾರತದ 26 ಅಮಾಯಕ ನಾಗರೀಕರ ಹತ್ಯೆಯಾಯಿತು. ಪ್ರವಾಸಿಗರಿಗೆ ಪೊಲೀಸ್, ಗಡಿ ಭದ್ರತಾ ಪಡೆಯ ರಕ್ಷಣೆ ನೀಡದೆ ಜೀವ ತೆಗೆದಿದ್ದು ಮೋದಿ ಸರ್ಕಾರ. ಆದರೂ ಮೋದಿ ಇದರ ಬಗ್ಗೆ ಒಂದು ಮಾತು ಆಡಲಿಲ್ಲ. ಕೇವಲ ತಮಗೆ ತೋಚಿದ್ದನ್ನು ಹೇಳಿಕೊಂಡು ಹೋದರು. ನಾನು ಕೇಳಿದ ಒಂದೇ ಒಂದು ಪ್ರಶ್ನೆಗೆ ಇದುವರೆಗೂ ಉತ್ತರ ನೀಡಿಲ್ಲ ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಹೊಸಪೇಟೆಯಲ್ಲಿ ನಡೆದ ಸಮರ್ಪಣಾ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದಂತ ಅವರು, ಎರಡು ವರ್ಷದ ಆಡಳಿತ ಅವಧಿಯಲ್ಲಿ ಚುನಾವಣೆಗೆ ಮೊದಲು ಕೊಟ್ಟಂತಹ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಿ ರಾಜ್ಯದ ಅಭಿವೃದ್ಧಿ ಮಾಡುತ್ತಿರುವ ನಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಕೋಟಿ ಅಭಿನಂದನೆಗಳು. ಗ್ಯಾರಂಟಿಗಳನ್ನು ನೀಡಬೇಕು ಜೊತೆಗೆ ರಾಜ್ಯದ ಅಭಿವೃದ್ಧಿಯನ್ನೂ ಮಾಡಬೇಕು. ಇದು ನಮ್ಮ ಕಾಂಗ್ರೆಸ್ ಸರ್ಕಾರದ ಮುಂದಿದ್ದ ಸವಾಲು. ಇದನ್ನು ಯಶಸ್ವಿಯಾಗಿ ಕಾಂಗ್ರೆಸ್ ಸರ್ಕಾರ ನೆರವೇರಿಸಿದೆ. ದೇಶದ ಪ್ರಧಾನಿ ಮೋದಿಯವರು ಸಹ 20 ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು…
ಬೆಂಗಳೂರು: ನಾಳೆ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಮೇ 20 ರಂದು ಕರ್ನಾಟಕದ 10 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ, ಗುಡುಗು ಸಹಿತ ಭಾರೀ ಮಳೆ ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಆರೆಂಜ್ ಅಲರ್ಟ್ ಅಡಿಯಲ್ಲಿ ಬೆಳಗಾವಿ, ಬಾಗಲಕೋಟೆ, ಧಾರವಾಡ, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳು ಸೇರಿವೆ. ಆರೆಂಜ್ ಅಲರ್ಟ್ ಸ್ಥಳೀಯ ಪ್ರವಾಹ, ಸಂಚಾರ ಅಡಚಣೆಗಳು ಮತ್ತು ಮೂಲಸೌಕರ್ಯಗಳಿಗೆ ಹಾನಿ ಉಂಟುಮಾಡುವ ತೀವ್ರ ಹವಾಮಾನ ಪರಿಸ್ಥಿತಿಗಳ ಸಾಧ್ಯತೆಯನ್ನು ಸೂಚಿಸುತ್ತದೆ. ಏತನ್ಮಧ್ಯೆ, ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಉಳಿದ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಮಧ್ಯಮ ಮಳೆ ಮತ್ತು ಪ್ರತ್ಯೇಕ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿರುವುದರಿಂದ ನಿವಾಸಿಗಳು ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಗಳ ಬಗ್ಗೆ ಎಚ್ಚರದಿಂದಿರಬೇಕು ಎಂದು ಹಳದಿ ಅಲರ್ಟ್ ಸೂಚಿಸುತ್ತದೆ. ಮೇ…
ಪುಣೆ: ಖ್ಯಾತ ಖಗೋಳ ಭೌತಶಾಸ್ತ್ರಜ್ಞ, ವಿಜ್ಞಾನ ಸಂವಹನಕಾರ ಮತ್ತು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಜಯಂತ್ ನಾರ್ಲಿಕರ್ ಮಂಗಳವಾರ ಪುಣೆಯಲ್ಲಿ ನಿಧನರಾದರು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಜಯಂತ್ ನಾರ್ಲಿಕರ್ ವಿಶ್ವವಿಜ್ಞಾನಕ್ಕೆ ನೀಡಿದ ಕೊಡುಗೆಗಳಿಗೆ ಹೆಸರುವಾಸಿಯಾಗಿದ್ದಾರೆ. ಭಾರತೀಯ ವಿಜ್ಞಾನದಲ್ಲಿ ಅತ್ಯುನ್ನತ ವ್ಯಕ್ತಿಯಾಗಿದ್ದ ಡಾ. ನಾರ್ಲಿಕರ್ ಅವರು ವಿಶ್ವವಿಜ್ಞಾನಕ್ಕೆ ನೀಡಿದ ಪ್ರವರ್ತಕ ಕೊಡುಗೆಗಳು, ವಿಜ್ಞಾನವನ್ನು ಜನಪ್ರಿಯಗೊಳಿಸುವ ಪ್ರಯತ್ನಗಳು ಮತ್ತು ದೇಶದಲ್ಲಿ ಪ್ರಮುಖ ಸಂಶೋಧನಾ ಸಂಸ್ಥೆಗಳನ್ನು ಸ್ಥಾಪಿಸಿದ್ದಕ್ಕಾಗಿ ವ್ಯಾಪಕವಾಗಿ ಹೆಸರುವಾಸಿಯಾಗಿದ್ದರು. ಕುಟುಂಬದ ಮೂಲಗಳ ಪ್ರಕಾರ, ಡಾ. ನಾರ್ಲಿಕರ್ ಮಂಗಳವಾರ ಮುಂಜಾನೆ ನಿದ್ರೆಯಲ್ಲಿ ನಿಧನರಾದರು. ಇತ್ತೀಚೆಗೆ ನಗರದ ಆಸ್ಪತ್ರೆಯಲ್ಲಿ ಸೊಂಟ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರಿಗೆ ಮೂವರು ಹೆಣ್ಣುಮಕ್ಕಳಿದ್ದಾರೆ. ಜಯಂತ್ ನಾರ್ಲಿಕರ್: ಆರಂಭಿಕ ಜೀವನ, ಶಿಕ್ಷಣ ಜುಲೈ 19, 1938 ರಂದು ಜನಿಸಿದ ಡಾ. ನಾರ್ಲಿಕರ್ ತಮ್ಮ ಆರಂಭಿಕ ಶಿಕ್ಷಣವನ್ನು ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್ಯು)ನಲ್ಲಿ ಪೂರ್ಣಗೊಳಿಸಿದರು. ಅಲ್ಲಿ ಅವರ ತಂದೆ ವಿಷ್ಣು ವಾಸುದೇವ ನಾರ್ಲಿಕರ್ ಗಣಿತ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾಗಿದ್ದರು. ಅವರು…
ನವದೆಹಲಿ: ಮಂಗಳವಾರ ಬಿಡುಗಡೆಯಾದ ಸಿಬ್ಬಂದಿ ಸಚಿವಾಲಯದ ಆದೇಶದ ಪ್ರಕಾರ, ಗುಪ್ತಚರ ಬ್ಯೂರೋ (Intelligence Bureau -IB) ನಿರ್ದೇಶಕ ತಪನ್ ಕುಮಾರ್ ದೇಕಾ ( Tapan Kumar Deka IPS ) ಅವರ ಸೇವಾವಧಿಯನ್ನು ಜೂನ್ 2026 ರವರೆಗೆ ಒಂದು ವರ್ಷದ ವಿಸ್ತರಣೆ ಮಾಡಲಾಗಿದೆ. 1988 ರ ಬ್ಯಾಚ್ ಹಿಮಾಚಲ ಪ್ರದೇಶ ಕೇಡರ್ ಐಪಿಎಸ್ ಅಧಿಕಾರಿಯಾಗಿರುವ ದೇಕಾ ಅವರನ್ನು ಆರಂಭದಲ್ಲಿ ಜೂನ್ 2022 ರಿಂದ ಜಾರಿಗೆ ಬರುವಂತೆ ಎರಡು ವರ್ಷಗಳ ಅವಧಿಗೆ ಗುಪ್ತಚರ ಬ್ಯೂರೋದ ನಿರ್ದೇಶಕರನ್ನಾಗಿ ನೇಮಿಸಲಾಯಿತು. ತಪನ್ ಕುಮಾರ್ ದೇಕಾ ಅವರ ಸೇವಾವಧಿಯನ್ನು ಜೂನ್ 30, 2025 ರ ನಂತರ ಒಂದು ವರ್ಷದ ಅವಧಿಗೆ ಸಂಪುಟದ ನೇಮಕಾತಿ ಸಮಿತಿಯು ಅನುಮೋದಿಸಿದೆ. https://twitter.com/ANI/status/1924764148824736203 https://kannadanewsnow.com/kannada/the-achievements-of-the-state-congress-government-should-reach-every-household-b-r-jayant/ https://kannadanewsnow.com/kannada/tomorrow-there-will-be-a-tiranga-yatra-in-maddiruru-man-mul-director-s-p-swamy/
ಶಿವಮೊಗ್ಗ : ರಾಜ್ಯ ಸರ್ಕಾರದ ಎರಡು ವರ್ಷದ ಸಾಧನೆಯನ್ನು ಮನೆಮನೆಗೆ ತಲುಪಿಸಬೇಕು. ನಾವು ಮಾಡಿದ್ದನ್ನು ಹೇಳಲು ವಿಫಲವಾದರೇ, ಬಿಜೆಪಿಯವರು ಮಾಡದೆ ಇರುವುದನ್ನು ಹೇಳಿ ಯಶಸ್ವಿಯಾಗುತ್ತಿದ್ದಾರೆ. ಆದ್ದರಿಂದ ಕಾರ್ಯಕರ್ತರು ಸರ್ಕಾರದ ಸಾಧನೆಯನ್ನು ಕರಪತ್ರ, ಧ್ವನಿವರ್ಧಕ ಸೇರಿದಂತೆ ಬೇರೆಬೇರೆ ಮಾಧ್ಯಮಗಳ ಮೂಲಕ ಊರೂರಿನಲ್ಲಿ ಪ್ರಚುರಪಡಿಸಬೇಕು ಎಂದು ಸಾಗರ ತಾಲ್ಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಬಿ.ಆರ್.ಜಯಂತ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಗಾಂಧಿಮಂದಿರದದಲ್ಲಿ ಮಂಗಳವಾರ ಬ್ಲಾಕ್ ಕಾಂಗ್ರೇಸ್ನಿಂದ ಏರ್ಪಡಿಸಿದ್ದ ಎರಡು ವರ್ಷಗಳ ಸಾಧನಾ ಸಮಾವೇಶ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯವರು ಸಮಾಜವನ್ನು ಧರ್ಮದ ಹೆಸರು ಹೇಳಿ ಒಡೆಯುತ್ತಾರೆ. ಮಾಡದೆ ಇರುವುದನ್ನು ಮಾಡಿದ್ದಾಗಿ ಬಿಂಬಿಸಿ ಗೆಲ್ಲುತ್ತಾರೆ. ಹಿಂದೂ ಧರ್ಮಕ್ಕೆ ಕಳಂಕ ತಂದವರು ಯಾರಾದರೂ ಇದ್ದರೆ ಅದು ಬಿಜೆಪಿಯವರು. ಸಮಾಜದಲ್ಲಿ ಒಡಕನ್ನು ತರುವ ಕೆಲಸ ಬಿಜೆಪಿ ಮಾಡುತ್ತಿದೆ. ಎಲ್ಲ ಧರ್ಮಜಾತಿಯವರನ್ನು ಒಟ್ಟಾಗಿ ಕರೆದೊಯ್ಯುವ ಕೆಲಸ ಕಾಂಗ್ರೇಸ್ ಮಾಡುತ್ತಿದೆ. ಕಾಂಗ್ರೇಸ್ ಸರ್ಕಾರದ ಎರಡು ವರ್ಷದ ಅದ್ವಿತೀಯವಾಗಿದೆ. ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಐದು ಗ್ಯಾರಂಟಿಗಳ ಪೈಕಿ…
ವಿಜಯನಗರ: “ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪ್ರಗತಿಯತ್ತ ಕರ್ನಾಟಕ ಸಮರ್ಪಣೆಯ ಸಂಕಲ್ಪ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ನಾವಿಂದು ಎರಡು ವರ್ಷಗಳ ಸಂಭ್ರಮಾಚರಣೆ ಮಾಡಲು ಇಲ್ಲಿಗೆ ಬಂದಿಲ್ಲ. ಕರ್ನಾಟಕ ರಾಜ್ಯದ ಜನರ ಋಣ ತೀರಿಸಲು ಸಮರ್ಪಣೆಯ ಸಂಕಲ್ಪ ಕಾರ್ಯಕ್ರಮ ಮಾಡುತ್ತಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ 136 ಕ್ಷೇತ್ರಗಳಲ್ಲಿ ಶಾಸಕರನ್ನು ಆಯ್ಕೆ ಮಾಡಿ ನಮಗೆ ಆಶೀರ್ವಾದ ಮಾಡಿದಿರಿ. ನಿಮ್ಮ ಋಣ ತೀರಿಸಲು ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ಯೋಜನೆ…
ಬೆಂಗಳೂರು: ನಗರದ ಕೆಜೆ ಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಪತ್ನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕೆಜೆ ಹಳ್ಳಿ ಪೊಲೀಸ್ ಠಾಮೆಯ ಸಬ್ ಇನ್ಸ್ ಪೆಕ್ಟರ್ ನಾಗರಾಜ್ ಎಂಬುವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್ ಬಿ ಆರ್ ಲೇಔಟ್ ನಲ್ಲಿ ಇರುವಂತ ತಮ್ಮ ಮನೆಯಲ್ಲಿ ಶಾಲಿನಿ ನೇಣಿಗೆ ಶರಣಾಗಿದ್ದಾರೆ. ಅಂದಹಾಗೆ ಮೃತ ಶಾಲಿನಿ ಕೆಜೆ ಹಳ್ಳಿ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ನಾಗರಾಜ್ ಅವರನ್ನು ಎರಡನೇ ಮದುವೆಯಾಗಿದ್ದರು. ಇಂತಹ ಅವರು ನಿನ್ನೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/in-2-years-we-have-fulfilled-142-promises-made-cm-siddaramaiah/ https://kannadanewsnow.com/kannada/tomorrow-there-will-be-a-tiranga-yatra-in-maddiruru-man-mul-director-s-p-swamy/
ಹೊಸಪೇಟೆ : ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದ ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು. ಸರ್ವ ಜನಾಂಗದ ಶಾಂತಿಯ ತೋಟ ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ…
ಬೆಂಗಳೂರು: ನ್ಯಾಯಮೂರ್ತಿ ಡಾ. ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದೆ. ಮೇ 05 ರಿಂದ ಮನೆ-ಮನೆ ಸಮೀಕ್ಷೆ ನಡೆಸುತ್ತಿದ್ದು, ಸಮೀಕ್ಷೆಯಲ್ಲಿ ಒಂದು ವೇಳೆ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಈ ಕೆಳಕಂಡಂತೆ ಆನ್ಲೈನ್ ಲಿಂಕ್ ಮೂಲಕ ಸ್ವಯಂಘೋಷಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆನ್ಲೈನ್ ಮೂಲಕ ಸ್ವಯಂ ಘೋಷಣೆ: ಮನೆ-ಮನೆ ಭೇಟಿ ಸಂದರ್ಭದಲ್ಲಿ ತಮ್ಮ ಮಾಹಿತಿಯನ್ನು ನೀಡದವರು ನೇರವಾಗಿ ಆನ್ಲೈನ್ ಲಿಂಕ್ (https://schedulecastesurvey,karnataka.gov.in/selfdeclaraion) ರ ಮೂಲಕ ಮೇ 19 ರಿಂದ ಮೇ 28 ರವರೆಗೆ ಸ್ವಯಂಘೋಷಣೆ ಮಾಡಿಕೊಳ್ಳಲು ಕಲ್ಪಿಸಲಾಗಿದೆ. ಆನ್ಲೈನ್ನಲ್ಲಿ ಸ್ವಯಂಘೋಷಣೆ ಹೇಗೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಯೂಟ್ಯೂಬ್ ಲಿಂಕ್ (https://youtu.be/VASEcMhL930) ಮೂಲಕ ತಿಳಿದುಕೊಳ್ಳಬಹುದು. ಎಲ್ಲಾ ಪ.ಜಾತಿ ಬಾಂದವರು ತಮ್ಮ ಜಾತಿ, ಉಪಜಾತಿ ವಿವರಗಳನ್ನು ದಾಖಲಾತಿಗಳನ್ನು ಉಪಯೋಗಿಸಿಕೊಳ್ಳಲು ಸ್ವಯಂದೃಢೀಕರಣ ಮಾಡಿಕೊಳ್ಳಬುಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/invitation-for-applications-for-the-office-assistant-position-for-retired-soldiers/ https://kannadanewsnow.com/kannada/tomorrow-there-will-be-a-tiranga-yatra-in-maddiruru-man-mul-director-s-p-swamy/