Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದ ಪೊಲೀಸ್ ಕಮೀಷನರ್ ಕಚೇರಿ ಆವರಣದಲ್ಲಿ ಹಣವಿದ್ದ ಬ್ಯಾಂಗ್ ಕಳವು ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸ್ ಸಿಬ್ಬಂದಿ ವಿರುದ್ಧವೇ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಬೆಂಗಳೂರಿನ ಪೊಲೀಸ್ ಕಮೀಷನರ್ ಕಚೇರಿ ಆವರಣದಲ್ಲಿ ಹಣವಿದ್ದಂತ ಬ್ಯಾಗ್ ಕಳವು ಆಗಿದೆ. ಹೀಗಾಗಿ ಪೊಲೀಸ್ ಅಧಿಕಾರಿ ಉಮೇಶ್ ಕುಮಾರ್ ನೀಡಿದಂತ ದೂರಿನ ಆಧಾರದ ಮೇಲೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಂದಹಾಗೇ ಪೊಲೀಸ್ ಅಧಿಕಾರಿ ಉಮೇಶ್ ಕುಮಾರ್ ಅವರು ಹಣವಿದ್ದ ಬ್ಯಾಗ್ ಅನ್ನು ಪೊಲೀಸ್ ಸಿಬ್ಬಂದಿ ಜಬೀವುಲ್ಲಾ ಎಂಬುವರು ಕದ್ದಿರುವುದಾಗಿ ದೂರು ನೀಡಿದ್ದಾರೆ. ಹೀಗಾಗಿ ಪೊಲೀಸ್ ಸಿಬ್ಬಂದಿ ಜಬೀವುಲ್ಲಾ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. https://kannadanewsnow.com/kannada/breaking-no-need-to-answer-calls-and-emails-after-work-new-bill-introduced-in-parliament/
ಬೆಂಗಳೂರು: ನಗರದ ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ತ್ವರಿತ ವಿಲೇವಾರಿಗಾಗಿ ಪಾಸ್ ಪೋರ್ಟ್ ಕೇಂದ್ರಗಳ ಮಾದರಿಯಲ್ಲಿ “ಸೇವಾ ಕೇಂದ್ರಗಳ” ಪ್ರಾರಂಭಿಸಲಾಗುವುದೆಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಂಡಿರುವ ಕುರಿತು ಜಿಬಿಎ ಕೇಂದ್ರ ಕಛೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇ-ಖಾತಾ ಪಡೆಯುವಲ್ಲಿ ನಾಗರಿಕರಿಗೆ ಯಾವುದೇ ರೀತಿಯ ಸಮಸ್ಯೆ ಆಗಬಾರದೆಂಬ ಉದ್ದೇಶದಿಂದ ಜಿಬಿಎ ಹೊಸದಾಗಿ ಪಾಸ್ ಪೋರ್ಟ್ ಮಾದರಿಯಲ್ಲಿ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದೆಂದು ಹೇಳಿದರು. ಕಣ್ಗಾವಲು ತಂಡ ನಿಯೋಜನೆ: ಇ-ಖಾತಾ ವಿಚಾರದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ಮೇಲೆ ನಿಗಾವಗಿಸಲು 25 ಜನ ಅಧಿಕಾರಿ/ಸಿಬ್ಬಂದಿಗಳನ್ನೊಳಗೊಂಡ ತಂಡಗಳನ್ನು ಒಳಗೊಂಡ ಕಣ್ಗಾವಲು ತಂಡವನ್ನು ನಿಯೋಜನೆ ಮಾಡಲಾಗಿದೆ. ಅದರ ಮೂಲಕ ಕಾರಣಗಳಿಲ್ಲದೆ ತಿರಸ್ಕರಿಸಿದವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಾಗುವುದೆಂದು ತಿಳಿಸಿದರು. 8 ಲಕ್ಷ ಇ-ಖಾತಾ ವಿತರಣೆ: ಜಿಬಿಎ ವ್ಯಾಪ್ತಿಯಲ್ಲಿ ಈಗಾಗಲೇ 8 ಲಕ್ಷ ಇ-ಖಾತಾ ಪಡೆದಿದ್ದಾರೆ. ಬೆಂಗಳೂರು ಒನ್ ಹಾಗೂ…
ಚಿಕ್ಕಬಳ್ಳಾಪುರ: ಮನೆ ಮಾರಿದ ಹಣದ ವಿಚಾರಕ್ಕಾಗಿ ಗಲಾಟೆಗೆ ಇಳಿದಂತ ಪುತ್ರನೊಬ್ಬ, ಜಗಳ ತಾರಕಕ್ಕೇರಿದಂತ ಸಂದರ್ಭದಲ್ಲಿ ದೊಡ್ಡಪ್ಪನನ್ನೇ ಹತ್ಯೆಗೈದ ಘಟನೆ ಚಿಂತಾಮಣಿಯ ಗುರ್ರಂಪಲ್ಲಿಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಗುರ್ರಂಪಲ್ಲಿಯಲ್ಲಿ ಮಾರಾಟ ಮಾಡಿದ ಮನೆ ಹಣಕಾಸಿನ ವಿಚಾರಕ್ಕೆ ದೊಡ್ಡಪ್ಪನನ್ನೇ ಹತ್ಯೆಯನನ್ನು ಪಾಪಿ ಪುತ್ರ ಮಧುಸೂದನ್ ಎಂಬಾತ ಮಾಡಿದ್ದಾನೆ. ಹಣದ ವಿಚಾರಕ್ಕಾಗಿ ದೊಡ್ಡಪ್ಪ ನಾರಾಯಣಸ್ವಾಮಿ ಹಾಗೂ ಪುತ್ರ ಮಧುಸೂದನ್ ನಡುವೆ ಗಲಾಟೆಯಾಗಿದೆ. ಈ ವೇಳೆಯಲ್ಲಿ ನಾರಾಣಯಸ್ವಾಮಿಯನ್ನು ಮಧುಸೂದನ್ ತಳ್ಳಿದ್ದಾನೆ. ಈ ವೇಳೆ ಮನೆ ಗೇಟ್ ತಗುಲಿ ನಾರಾಯಣಸ್ವಾಮಿ ಸಾವನ್ನಪ್ಪಿದ್ದಾರೆ. ದೊಡ್ಡಪ್ಪ ನಾರಾಯಣಸ್ವಾಮಿ ಸಾವನ್ನಪ್ಪುತ್ತಿದ್ದಂತೆ ಮಧುಸೂದನ್ ಸ್ಥಳದಿಂದ ಪಾರಿಯಾಗಿದ್ದಾನೆ. ಈ ಸಂಬಂಧ ಕೆಂಚರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/the-government-has-decided-to-name-a-government-hospital-after-the-person-who-donates-this-much-money-from-now-on-an-official-order-has-been-issued/ https://kannadanewsnow.com/kannada/breaking-no-need-to-answer-calls-and-emails-after-work-new-bill-introduced-in-parliament/
ನವದೆಹಲಿ: ದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ಕರ್ನಾಟಕ ರಾಜಕೀಯದ ಬಗ್ಗೆ ಬಿಸಿ ಬಿಸಿ ಚರ್ಚೆಯಾಗಿದೆ. ಆದ್ರೇ ಅಂತಿಮ ನಿರ್ಧಾರಕ್ಕೆ ಬಂದಿಲ್ಲ, ಮತ್ತೊಮ್ಮೆ ಸಭೆ ನಡೆಸಲಾಗುವುದು ಅಂತ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ. ಇಂದು ನವದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ಕರ್ನಾಟಕ ರಾಜಕೀಯದ ಬಗ್ಗೆ ಚರ್ಚೆ ನಡೆಸಲಾಯಿತು. ಇಂದಿನ ಸಭೆಯಲ್ಲಿ ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಮತ್ತೊಮ್ಮೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂಬುದಾಗಿ ಹೇಳಿದ್ದಾರೆ. https://kannadanewsnow.com/kannada/maddur-town-street-to-be-widened-to-80-feet-maddur-mla-k-m-uday/ https://kannadanewsnow.com/kannada/babasaheb-ambedkar-is-the-pioneer-of-social-justice-maddur-mla-k-m-uday/
ಮಂಡ್ಯ : ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69 ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಮದ್ದೂರು ನಗರಸಭೆ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು. ಬಾಬಾಸಾಹೇಬ್ ಅಂಬೇಡ್ಕರ್ ಅವರ ನ್ಯಾಯ, ಸಮಾನತೆ ಮತ್ತು ಬದ್ಧತೆ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ಸ್ಫೂರ್ತಿ ನೀಡಿದವರು. ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ಈ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಎಂತಹ ಸಂವಿಧಾನದ ಅಗತ್ಯವಿದೆ ಎಂದು ಯೋಚಿಸಿ, ಅತ್ಯಂತ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು. ಆಗ ಮಾತ್ರ ಎಲ್ಲರಿಗೂ ಸಮಾನ…
ಮಂಡ್ಯ : ಮದ್ದೂರು ನಗರದ ಪ್ರವಾಸಿ ಮಂದಿರದ ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆಯನ್ನು 80 ಅಡಿ ಗೆ ಅಗಲೀಕರಣ ಮಾಡುವುದಾಗಿ ಮದ್ದೂರು ಶಾಸಕ ಕೆ.ಎಂ.ಉದಯ್ ಶನಿವಾರ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಸ್ಪಷ್ಟಪಡಿಸಿದರು. ಮದ್ದೂರು ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಪೇಟೆ ಬೀದಿಯ ವರ್ತಕರು, ಬೀದಿ ಬದಿ ವ್ಯಾಪಾರಿಗಳು, ಕಟ್ಟಡಗಳ ಮಾಲೀಕರು, ನಾಗರೀಕರು, ಜನಪ್ರತಿನಿಧಿಗಳು ಸೇರಿದಂತೆ ಕ್ಷೇತ್ರದ ಸಾರ್ವಜನಿಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಂಗಳೂರು – ಮೈಸೂರು ನಗರಗಳ ಮಧ್ಯೆ ಇರುವ ಮದ್ದೂರು ಪಟ್ಟಣ ಸಾಕಷ್ಟು ಅಭಿವೃದ್ಧಿಯಿಂದ ಹಿಂದುಳಿದಿದೆ. ನಗರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ನಿಮ್ಮೆಲ್ಲರ ಸಹಕಾರದಿಂದ ಮಾತ್ರ ಸಾಧ್ಯ. ಹೀಗಾಗಿ ನಗರದ ಪೇಟೆ ಬೀದಿ ಅಗಲೀಕರಣಕ್ಕೆ ಕಟ್ಟಡ ಮಾಲೀಕರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದರು. ಮದ್ದೂರು ನಗರದ ರಸ್ತೆ ಅಭಿವೃದ್ಧಿ ಮಹರಾಜರ ಕಾಲದಲ್ಲಿ ನಿರ್ಮಾಣವಾಗಿದ್ದು, ಆ ಬಳಿಕ ರಸ್ತೆ ಅಭಿವೃದ್ಧಿ ಮತ್ತು ಅಗಲೀಕರಣವಾಗಿಲ್ಲ. ಈಗಿರುವ ರಸ್ತೆ ಕಿರಿದಾಗಿದ್ದು, ಸಾರ್ವಜನಿಕರು ಓಡಾಡಲು ಹಾಗೂ ವಾಹನಗಳ ಓಡಾಟಕ್ಕೆ ತೀವ್ರ…
ಬೆಂಗಳೂರು: ಕೆಸೆಟ್ ಪರೀಕ್ಷೆ 2023, 2024, 2025ರಲ್ಲಿ ಪಾಸ್ ಆಗಿರುವಂತ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗುಡ್ ನ್ಯೂಸ್ ನೀಡಿದೆ. ಅದೇ ಒಂದು ಬಾರಿಗೆ ದಾಖಲಾತಿ ಪರಿಶೀಲನೆಗೆ ಅವಕಾಶ ನೀಡಿದ್ದು, ಸ್ಥಳದಲ್ಲೇ ಪ್ರಮಾಣ ಪತ್ರ ವಿತರಿಸೋದಕ್ಕೆ ನಿರ್ಧರಿಸಲಾಗಿದೆ. ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದಂತ ಹೆಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದು, KSET: 2023, 2024 ಮತ್ತು 2025ರ ಕೆ-ಸೆಟ್ ಅರ್ಹತಾ ಪಟ್ಟಿಯಲ್ಲಿ ಹೆಸರು ಇರುವ ಅನೇಕರು ನಾನಾ ಕಾರಾಣಗಳಿಂದ ದಾಖಲೆ ಪರಿಶೀಲನೆಗೆ ಹಾಜರಾಗಿರುವುದಿಲ್ಲ. ಅಂತಹವರ ಅನುಕೂಲಕ್ಕೆ ಡಿ.10 ಮತ್ತು 11ರಂದು ದಾಖಲೆ ಪರಿಶೀಲನೆ ಮತ್ತು ಪ್ರಮಾಣ ಪತ್ರ ನೀಡುವ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದಿದ್ದಾರೆ. ಡಿ.10, 11ರಂದು ಮೂಲ ದಾಖಲೆಗಳ ಸಮೇತ ಬಂದು ಪರಿಶೀಲನೆ ಮಾಡಿಸಿಕೊಳ್ಳಬೇಕು. ಎಲ್ಲವೂ ಸರಿ ಇದ್ದರೆ ಸ್ಥಳದಲ್ಲೇ ಪ್ರಮಾಣ ಪತ್ರ ನೀಡಲಾಗುತ್ತದೆ. ಹೆಚ್ಚಿನ ವಿವರಗಳಿಗೆ KEA ವೆಬ್ ಸೈಟ್ ನೋಡಿ ಎಂಬುದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. https://twitter.com/KEA_karnataka/status/1997287196609724726 https://kannadanewsnow.com/kannada/deadly-shooting-in-south-africa-11-people-including-three-children-killed/ https://kannadanewsnow.com/kannada/breaking-no-need-to-answer-calls-and-emails-after-work-new-bill-introduced-in-parliament/
ದಕ್ಷಿಣ ಆಫ್ರಿಕಾ: ಇಲ್ಲಿನ ರಾಜಧಾನಿ ಪ್ರಿಟೋರಿಯಾದಲ್ಲಿರುವ ಹಾಸ್ಟೆಲ್ಗೆ ಶನಿವಾರ ಬಂದೂಕುಧಾರಿಗಳು ನುಗ್ಗಿ, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳವೊಂದರಲ್ಲಿ ಮೂರು ವರ್ಷದ ಮಗು ಸೇರಿದಂತೆ 11 ಜನರನ್ನು ಕೊಂದಿದ್ದಾರೆ. ಅಪರಾಧದಿಂದ ಬಳಲುತ್ತಿರುವ 63 ಮಿಲಿಯನ್ ಜನರ ದೇಶವನ್ನು ಬೆಚ್ಚಿಬೀಳಿಸಿದ ಸಾಮೂಹಿಕ ಗುಂಡಿನ ದಾಳಿಯ ಸರಣಿಯಲ್ಲಿ ಈ ದಾಳಿ ಇತ್ತೀಚಿನದು, ಇದು ವಿಶ್ವದ ಅತಿ ಹೆಚ್ಚು ಕೊಲೆ ದರಗಳಲ್ಲಿ ಒಂದಾಗಿದೆ. “ಒಟ್ಟು 25 ಜನರಿಗೆ ಗುಂಡು ಹಾರಿಸಲಾಗಿದೆ ಎಂದು ನಾನು ದೃಢೀಕರಿಸಬಲ್ಲೆ” ಎಂದು ಪೊಲೀಸ್ ವಕ್ತಾರೆ ಅಥ್ಲೆಂಡಾ ಮಾಥೆ ಹೇಳಿದರು, 14 ಜನರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಹೇಳಿದರು. ಪ್ರಿಟೋರಿಯಾದಿಂದ ಪಶ್ಚಿಮಕ್ಕೆ 18 ಕಿಲೋಮೀಟರ್ (11 ಮೈಲುಗಳು) ದೂರದಲ್ಲಿರುವ ಸೌಲ್ಸ್ವಿಲ್ಲೆ ಪಟ್ಟಣದಲ್ಲಿ ಘಟನಾ ಸ್ಥಳದಲ್ಲಿ ಹತ್ತು ಮಂದಿ ಸಾವನ್ನಪ್ಪಿದರು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು ಎಂದು ಅವರು ಹೇಳಿದರು. ಬೆಳಿಗ್ಗೆ 4:30 ರ ಸುಮಾರಿಗೆ (0230 GMT) ಹಾಸ್ಟೆಲ್ನೊಳಗೆ ಮೂವರು ಬಂದೂಕುಧಾರಿಗಳು “ಅಕ್ರಮ ಶೆಬೀನ್” ಎಂದು ಮ್ಯಾಥೆ ವಿವರಿಸಿದ ಸ್ಥಳಕ್ಕೆ ಪ್ರವೇಶಿಸಿ ಮದ್ಯಪಾನ ಮಾಡುತ್ತಿದ್ದ…
ಬೆಂಗಳೂರು: ಇಂಡಿಗೊ ವಿಮಾನಗಳ ಸಂಚಾರ ರದ್ದಾಗಿರುವ ಕಾರಣ ಪ್ರವೇಶ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಡಿ.8ರವರೆಗೆ ದಿನಾಂಕ ವಿಸ್ತರಿಸಿದೆ. ಈ ಸಂಬಂಧ ಅನೇಕ ವಿದ್ಯಾರ್ಥಿಗಳು ಮನವಿ ಮಾಡಿದ ಕಾರಣ ಈ ತೀರ್ಮಾನ ಮಾಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಛಾಯ್ಸ್ ದಾಖಲಿಸಲು ಡಿ.8ರಂದು ಬೆಳಿಗ್ಗೆ 11ಗಂಟೆವರೆಗೆ ಅವಕಾಶ ನೀಡಲಾಗಿದೆ. ಛಾಯ್ಸ್-1 & 2 ದಾಖಲಿಸಿದವರು ಡಿ.8ರಂದು 12.30ರೊಳಗೆ ಶುಲ್ಕ ಪಾವತಿಸಬೇಕು. ಛಾಯ್ಸ್-1 ಆಯ್ಕೆ ಮಾಡಿದ ಅಭ್ಯರ್ಥಿಗಳು ಡಿ.8ರಂದು ಮಧ್ಯಾಹ್ನ 2.30ರವರೆಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆ ಸಲ್ಲಿಸಬೇಕು. ಮೂಲ ದಾಖಲೆ ಸಲ್ಲಿಸಿದ ನಂತರ ಡಿ.8ರೊಳಗೆ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. https://kannadanewsnow.com/kannada/nita-ambani-felicitates-national-award-winning-desi-artists-bollywood-stars-also-attend/ https://kannadanewsnow.com/kannada/breaking-no-need-to-answer-calls-and-emails-after-work-new-bill-introduced-in-parliament/
ಮುಂಬೈ : ಸ್ವದೇಶ್ ನಿಂದ ಆರಂಭವಾದಂಥ ಪ್ರತಿಷ್ಠಿತ ಮಳಿಗೆ ಇರೋಸ್ (Eros) ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾಯಿತು. ರಿಲಯನ್ಸ್ ಫೌಂಡೇಷನ್ ಸ್ಥಾಪಕಿ ಹಾಗೂ ಅದರ ಅಧ್ಯಕ್ಷೆಯೂ ಆದ ನೀತಾ ಅಂಬಾನಿ ಕಲಾವಿದರು ಹಾಗೂ ಕುಶಲಕರ್ಮಿಗಳನ್ನು ಸನ್ಮಾನಿಸಿದರು. ಭಾರತದ ವೈವಿಧ್ಯಮಯ ಕಲೆ ಹಾಗೂ ಸಂಸ್ಕೃತಿಯನ್ನು ಉಳಿಸಿಕೊಂಡು, ಮುಂದುವರಿಸಿಕೊಂಡು ಬಂದಂಥ ಕಲಾವಿದರು ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ಕುಶಲಕರ್ಮಿಗಳು ಈ ಕಾರ್ಯಕ್ರಮಕ್ಕೆ ಕಳೆ ತಂದಿದ್ದರು. ಈ ಕಾರ್ಯಕ್ರಮದಲ್ಲಿ ಹಿಂದಿ ಚಿತ್ರರಂಗದ ತಾರಾ ಬಳಗವೇ ತುಂಬಿಹೋಗಿತ್ತು. ಆದ್ದರಿಂದ ಒಂದಿಷ್ಟು ಗ್ಲ್ಯಾಮರ್ ಕೂಡ ಸೇರ್ಪಡೆಯಾಯಿತು. ಮಾಧ್ಯಮಗಳ ಸಮ್ಮುಖದಲ್ಲಿ ನೀತಾ ಅಂಬಾನಿ ಅವರು ರಾಷ್ಟ್ರಪ್ರಶಸ್ತಿ ವಿಜೇತ ಕುಶಲಕರ್ಮಿಗಳನ್ನು ಗೌರವಿಸಿದರು. ಮತ್ತು “ಇವರೆಲ್ಲ ಭಾರತ ದೇಶದ ಹೆಮ್ಮೆ ಹಾಗೂ ಈ ರಾತ್ರಿಯಲ್ಲಿನ ನಿಜವಾದ ತಾರೆಗಳು,” ಎಂದು ಮೆಚ್ಚುಗೆ ಮಾತುಗಳನ್ನು ಆಡಿದರು. “ನಾವು ನಿಮ್ಮನ್ನೆಲ್ಲ ಸ್ವದೇಶ್ ಗೆ ಸ್ವಾಗತಿಸುತ್ತೇವೆ. ನಮ್ಮ ಕಲಾವಿದರು- ಕುಶಲಕರ್ಮಿಗಳನ್ನು ಗೌರವಿಸುವ ಮೂಲಕ ಹಬ್ಬದ ಋತುವಿನ ಆರಂಭವನ್ನು ಈ ದಿನ ಸಂಭ್ರಮಿಸುತ್ತಾ ಇದ್ದೇವೆ. ಅವರು ಭಾರತದ ಹೆಮ್ಮೆ ಹಾಗೂ ಈ ರಾತ್ರಿಯ…














