Subscribe to Updates
Get the latest creative news from FooBar about art, design and business.
Author: kannadanewsnow09
ದಾವಣೆಗೆರೆ: ಬ್ಯಾಂಕ್ ಆಫ್ ಬರೋಡದಲ್ಲಿ ಮಾಜಿ ಸೈನಿಕರಿಗಾಗಿ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ವೆಬ್ ಸೈಟ್ www.bankofbaroda.co.in ನಲ್ಲಿ ಮೇ.23 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ನ ಜಾಹೀರಾತು ಸಂಖ್ಯೆ-ಃBoB/HRM/REC/AVT//2025/05 ವೀಕ್ಷಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರಾದ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ ದಾವಣಗೆರೆ ಮೇ.19 (ಕರ್ನಾಟಕ ವಾರ್ತೆ)- ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಗಳೂರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ, ಪ.ವರ್ಗ ಮತ್ತು ಇತರೆ ಜನಾಂಗದವರು ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ https://shp.karnataka.gov.in/bcwd ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ…
ದಾವಣಗೆರೆ: ಪ್ರಸಕ್ತ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ, ಮೈಸೂರು ಕಂದಾಯ ವಿಭಾಗಗಳಲ್ಲಿನ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಯುವಜನರಿಗೆ 90 ದಿನಗಳ ವಸತಿಯುತ ಪುರುಷ & ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ ಈ ತರಬೇತಿ ನಡೆಸಲಾಗುವುದು. ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಮೇ.23 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಇಲಾಖೆ ವೆಬ್ ಸೈಟ್ :dom.karkataka.gov.in ನಲ್ಲಿ ಪರಿಶೀಲಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. https://kannadanewsnow.com/kannada/monsoon-onset-over-kerala-expected-in-next-4-5-days-says-imd/ https://kannadanewsnow.com/kannada/tomorrow-there-will-be-a-tiranga-yatra-in-maddiruru-man-mul-director-s-p-swamy/
ನವದೆಹಲಿ: ಕಳೆದ ವಾರ ಭಾರತ ಹವಾಮಾನ ಇಲಾಖೆ (India Meteorological Department -IMD) ಮುನ್ಸೂಚನೆ ನೀಡಿದಂತೆ, ಮೇ 27 ಕ್ಕಿಂತ ಮೊದಲೇ ಕೇರಳದಲ್ಲಿ ನೈಋತ್ಯ ಮಾನ್ಸೂನ್ ಆರಂಭವಾಗುವ ನಿರೀಕ್ಷೆಯಿದೆ. ಮುಂದಿನ 4-5 ದಿನಗಳಲ್ಲಿ ಕೇರಳದಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ಐಎಂಡಿ ಮಂಗಳವಾರ ತಿಳಿಸಿದೆ. ಕೇರಳದಲ್ಲಿ ಸಾಮಾನ್ಯವಾಗಿ ಆರಂಭವಾಗುವ ದಿನಾಂಕ ಜೂನ್ 1 – ಇದು ದೇಶದಲ್ಲಿ ನಾಲ್ಕು ತಿಂಗಳ ಕಾಲ ನಡೆಯುವ ನೈಋತ್ಯ ಮಾನ್ಸೂನ್ ಋತುವಿನ ಆರಂಭವನ್ನು ಸೂಚಿಸುತ್ತದೆ. ಮಾನ್ಸೂನ್ ಮಾರುತಗಳು ಬಲಗೊಳ್ಳುತ್ತಿದ್ದಂತೆ, ಜೂನ್ ಮೂಲಕ ದೇಶದ ಉಳಿದ ಭಾಗಗಳಿಗೆ ಮಾನ್ಸೂನ್ ಮುಂದುವರಿಯುತ್ತದೆ ಮತ್ತು ಜುಲೈ ಮಧ್ಯದ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ಎಲ್ಲಾ ಸಾಗರ ಮತ್ತು ವಾತಾವರಣದ ಅಂಶಗಳು ಆರಂಭಿಕ ಮಾನ್ಸೂನ್ ಆರಂಭಕ್ಕೆ ಅನುಕೂಲಕರವಾಗಿವೆ ಎಂದು ಐಎಂಡಿಯ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಮಾಲ್ಡೀವ್ಸ್ ಮತ್ತು ಕೊಮೊರಿನ್ ಪ್ರದೇಶದ ಉಳಿದ ಭಾಗಗಳು, ಲಕ್ಷದ್ವೀಪದ ಕೆಲವು ಭಾಗಗಳು, ತಮಿಳುನಾಡು,…
ನವದೆಹಲಿ: ಸತತ ಮಳೆಯಿಂದ ತತ್ತರಿಸುತ್ತಿರುವ ಜನರು ಡಿಸಿಎಂ ಡಿಕೆ ಶಿವಕುಮಾರ್ ಅವರ ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಜನ ಸತ್ತು ಬದುಕುತ್ತಿದ್ದರೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸಾಧನಾ ಸಮಾವೇಶದ ಚಿಂತೆ! ವಾರದಿಂದ ಬಣ್ಣಬಣ್ಣದ ಸರಣಿ ಗ್ಯಾರಂಟಿ ಜಾಹೀರಾತು ಬೇರೆ..! ಬೆಂಗಳೂರು ಜನ ಬ್ರ್ಯಾಂಡೆಡ್ ನರಕದಲ್ಲಿದ್ದಾರೆ! ನಗರ ನರಳುತ್ತಿದ್ದರೆ ಇವರಿಗೆ ಪ್ರಚಾರದ ಗೀಳು ಎಂದು ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಸರಕಾರದ ಸಾಧನೆ ಬೆಂಗಳೂರು ರಸ್ತೆಗಳಲ್ಲಿ, ಚರಂಡಿಗಳಲ್ಲಿ ಕೊಚ್ಚೆಯಾಗಿ ಕೊಚ್ಚಿ ಹೋಗುತ್ತಿದೆ. ಇವರಿಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು. ಡಿಸಿಎಂ ಡಿ.ಕೆ.ಶಿವಕುಮಾರ್ ಮಾತಿನ ಡಬ್ಬಾ ಹೊಡೆಯುವುದು ಬಿಟ್ಟು, ಪ್ರತಿಪಕ್ಷಗಳನ್ನು ನಿಂದಿಸುವುದನ್ನು ಪಕ್ಕಕ್ಕಿಟ್ಟು ಕೆಲಸ ಮಾಡಲಿ. ವಾರ್ ರೂಂನಲ್ಲಿ ಕೂತು ಜೆಡಿಎಸ್, ಬಿಜೆಪಿ ಮೇಲೆ ಪ್ರಾಕ್ಸಿವಾರ್ ಮಾಡಿದರೆ ಪ್ರಯೋಜನವೇನು) ಕೈಲಾಗದವನಿಗೆ ಬಾಯಿ ಭದ್ರ ಇರುವುದಿಲ್ಲ. ಈ ಮನುಷ್ಯ ಆ…
ವಿಜಯನಗರ: ಕರ್ನಾಟಕ ದೇಶದಲ್ಲೇ ಹಕ್ಕುಪತ್ರ ನೀಡುವಲ್ಲಿ ಮೊದಲ ರಾಜ್ಯವಾಗಬೇಕು. ಕರ್ನಾಟಕದಲ್ಲಿ ಹಕ್ಕು ಪತ್ರ ನೀಡುವ ಮೂಲಕ ಜನತೆಗೆ 6ನೇ ಗ್ಯಾರಂಟಿ ಯೋಜನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ ಎಂಬುದಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ. ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುತ್ತಿರುವಂತ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ನಾವು ಪಂಚ ಗ್ಯಾರಂಟಿ ಜೊತೆಗೆ ಬಡ ಜನರಿಗೆ ಹಕ್ಕು ಪತ್ರ ನೀಡಬೇಕು ಎಂಬುದಾಗಿ ನಿರ್ಧರಿಸಿದ್ದೆವು. ಅದರಂತೆ ಇಂದು ಯಾವುದೇ ಜಾತಿ-ಧರ್ಮ ನೋಡದೇ ವಿತರಣೆ ಮಾಡಲಾಗುತ್ತಿದೆ ಎಂದರು. ಇಂದು ಹಕ್ಕುಪತ್ರ ನೀಡುತ್ತಿರುವಂತ ಇವರಿಗೆ ಹತ್ತು ವರ್ಷದಿಂದ ಆಸ್ತಿಗಳ ಪತ್ರ ಇರಲಿಲ್ಲ. ಈ ವಿಷಯ ತಿಳಿದು ನಮ್ಮ ಕಾಂಗ್ರೆಸ್ ನಾಯಕರ ಜೊತೆಗೆ ಮಾತನಾಡಿ, ಇಂದು ಅತ್ಯಂತ ಸಂತಸದಿಂದ ಹಕ್ಕುಪತ್ರ ವಿತರಣೆ ಮೂಲಕ 6ನೇ ಗ್ಯಾರಂಟಿ ಜಾರಿಗೊಳಿಸಿದ್ದೇವೆ. 1 ಲಕ್ಷ ಕುಟುಂಬಕ್ಕೆ ನಾವು ಆಸ್ತಿಗಳ ಹಕ್ಕುಪತ್ರ ವರ್ಗಾವಣೆ ಮಾಡಿದ್ದೇವೆ. ಇದು ಇಂದಿರಾ ಗಾಂಧಿ ಅವರ ಕನಸು ಕೂಡ ಆಗಿತ್ತು. ಅವರ ಕನಸು ಇಂದು…
ಬೆಂಗಳೂರು: ಮೇ.17 ವಿಶ್ವ ಹೈಪರ್ ಟೆನ್ಷನ್ ದಿನಾಚರಣೆ ಆಚರಿಸುತ್ತೇವೆ. ವಿಶ್ವದಲ್ಲಿ 30 ರಿಂದ 70 ವಯಸ್ಸಿನ 1.28 ಬಿಲಿಯನ್ ಜನರು ಹೈಪರ್ ಟೆನ್ಷನ್ ಗೆ ಒಳಗಾಗಿದ್ದಾರೆ. ಒಟ್ಟಾರೆ ಜನಸಂಖ್ಯೆಯ ಮೂವರಲ್ಲಿ ಒಬ್ಬರು ಹೈಪರ್ ಟೆನ್ಷನ್ ( ರಕ್ತದ ಒತ್ತಡ) ದಿಂದ ಬಳಲುತ್ತಿದ್ದಾರೆ. ಶೇ. 46 ರಷ್ಟು ಮಂದಿ ತಾವು ಹೈಪರ್ ಟೆನ್ಷನ್ ನಿಂದ ಬಳಲುತ್ತಿರುವ ಮಾಹಿತಿಯೇ ಗೊತ್ತಿಲ್ಲ. ಶೇ. 42 ರಷ್ಟು ಮಂದಿಗೆ ಮಾತ್ರ ಚಿಕಿತ್ಸೆ ಪಡೆದು ಗುಣಮುಖರಾಗಲು ಅವಕಾಶವಿದೆ. ಶೇ. 46 ರಷ್ಟಿರುವ ಹೈಪರ್ ಟೆನ್ಷನ್ ಪ್ರಮಾಣವನ್ನು 2030 ರ ಒಳಗೆ ಶೇ. 33 ಕ್ಕೆ ಇಳಿಸುವ ಗುರಿ ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಹಾಗೂ ವಿಶ್ವ ಹೈಪರ್ ಟೆನ್ಷನ್ ಲೀಗ್ ಜಾಗತಿಕ ಮಟ್ಟದಲ್ಲಿ ಕಾರ್ಯಕ್ರಮ ರೂಪಿಸಿ ಜಾರಿಗೊಳಿಸುತ್ತಿವೆ. ಕರ್ನಾಟಕದಲ್ಲಿ ಹೈಪರ್ ಟೆನ್ಷನ್: ಭಾರತದಲ್ಲಿ ಒಟ್ಟಾರೆ ಜನಸಂಖ್ಯೆ ಪೈಕಿ ಪುರುಷರಲ್ಲಿ ಶೇ. 26.96, ಮಹಿಳೆಯರಲ್ಲಿ ಶೇ. 25 ರಷ್ಟು ಮಂದಿ ಹೈಪರ್ ಟೆನ್ಷನ್ ನಿಂದ ಬಳಲುತ್ತಿದ್ದಾರೆ. ಕರ್ನಾಟಕದಲ್ಲಿ…
ಬೆಂಗಳೂರು: ಭಾರತಿ ಏರ್ಟೆಲ್ ತನ್ನ ಗ್ರಾಹಕರಿಗಾಗಿ ಐಆರ್ ಪೋರ್ಟ್ಫೋಲಿಯೊವನ್ನು ಮತ್ತಷ್ಟು ಸರಳ, ಹೆಚ್ಚು ಅಗ್ಗ ಮತ್ತು ಸಂಪೂರ್ಣವಾಗಿ ತಡೆ-ರಹಿತವನ್ನಾಗಿಸಲು ಹೊಸ ಪ್ಲಾನ್ಸ್ ಪ್ರಕಟಿಸಿದೆ. ಸಂಸ್ಥೆಯು 189 ದೇಶಗಳಾದ್ಯಂತ ಅನಿಯಮಿತ ಡೇಟಾ ಒದಗಿಸುವ ಭಾರತದ ಮೊಟ್ಟಮೊದಲ ಅನಿಯಮಿತ ಐಆರ್ ಪ್ಲಾನ್ಸ್ ಅನ್ನು ಅನಾವರಣಗೊಳಿಸಿದೆ. ಹೆಚ್ಚುವರಿಯಾಗಿ, ದೀರ್ಘಕಾಲದವರೆಗೆ ಅನಿವಾಸಿ ಸಮುದಾಯದವರಿಗಾಗಿ, ಏರ್ಟೆಲ್ ಒಂದು-ವರ್ಷದ ವ್ಯಾಲಿಡಿಟಿಯೊಂದಿಗೆ ರೂ. 4000 ಗಳಿಗಾಗಿ ವಿಶಿಷ್ಟ ರಿಚಾರ್ಜ್ ಪ್ಲಾನ್ ಅನ್ನು ಪರಿಚಯಿಸಿದೆ. ಪ್ಲಾನ್ ಮೂಲಕ ಗ್ರಾಹಕರು ವಿದೇಶದಲ್ಲಿದ್ದಾಗ 5ಜಿಬಿ ಡೇಟಾ ಮತ್ತು 100 ವಾಯ್ಸ್ ನಿಮಿಷಗಳನ್ನು ಪಡೆಯುವುದರ ಜೊತೆಗೆ ಅವರು ಭಾರತದಲ್ಲಿದ್ದಾಗಲೂ ಸಹ ಅದೇ ಪ್ಲಾನ್ ಬಳಸಬಹುದು ಮತ್ತು ಪ್ರತಿದಿನ 1.5 ಜಿಬಿ ಡೇಟಾ ಮತ್ತು ಅನಿಯಮಿತ ಕರೆ ಲಾಭಗಳನ್ನು ಸಹ ಪಡೆಯಬಹುದಾಗಿದೆ. ಈ ಪ್ಲಾನ್ ಮೂಲಕ ಗ್ರಾಹಕರು 189 ದೇಶಗಳಾದ್ಯಂತ ಎಲ್ಲಿಯಾದರೂ ತಡೆ-ರಹಿತ ಸಂಪರ್ಕ ಅನುಭವವನ್ನು ಪಡೆಯಬಹುದು ಮತ್ತು ಭಾರತದಲ್ಲಿದ್ದಾಗ ಸಹ ಯಾವುದೇ ಪ್ರತ್ಯೇಕ ರಿಚಾರ್ಜ್ ಇಲ್ಲದೆ ಅದೇ ಸಂಖ್ಯೆಯನ್ನು ಬಳಸಬಹುದು. ಭಾರತಿ ಏರ್ಟೆಲ್ ಅವರ ಕನೆಕ್ಟೆಡ್ ಹೋಮ್ಸ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಾಳೆ ನಾಡಿದ್ದು ರಾಜ್ಯದ ಪ್ರಗತಿ ಪರಿಶೀಲನೆ ಸಭೆ ನಿಗದಿ ಪಡಿಸಲಾಗಿತ್ತು. ಈ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಪ್ರಗತಿ ಪರಿಶೀಲನೆ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆ ಹಾಗೂ ಉಪ ಮುಖ್ಯಮಂತ್ರಿ ಉಪಸ್ಥಿತಿಯಲ್ಲಿ ದಿನಾಂಕ 21-05-2025 ಮತ್ತು 22-05-2025ರಂದು ಆಯೋಜಿಸಲಾಗಿತ್ತು ಎಂದಿದ್ದಾರೆ. ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ ಸಭೆಯು ದಿನಾಂಕ 30-05-2025ರ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಹಾಗೂ ದಿನಾಂಕ 31-05-2025ರಂದು ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ ಎಂಬುದಾಗಿ ತಿಳಿಸಿದ್ದಾರೆ. ಇನ್ನೂ ಈ ಸಭೆಗೆ ಸಂಬಂಧಿಸಿದ ಕಾರ್ಯಸೂಚಿಯನ್ನು ನಂತ್ರದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅಗತ್ಯ ಮಾಹಿತಿಯೊಂದಿಗೆ ಸದರಿ ಸಭೆಗೆ ಹಾಜರಾಗುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ. https://kannadanewsnow.com/kannada/a-pakistan-supported-khalistani-terrorist-module-detected-in-punjab/ https://kannadanewsnow.com/kannada/tomorrow-there-will-be-a-tiranga-yatra-in-maddiruru-man-mul-director-s-p-swamy/
ಚಂಡೀಗಢ: ಬಟಾಲಾ ಪೊಲೀಸರು ಹರ್ವಿಂದರ್ ಸಿಂಗ್ ರಿಂಡಾ ಅವರ ಸೂಚನೆಯ ಮೇರೆಗೆ, ಪಾಕಿಸ್ತಾನದ ಐಎಸ್ಐ ಬೆಂಬಲಿತ ಭಯೋತ್ಪಾದಕ ಜಾಲಗಳ ವಿರುದ್ಧ ಪ್ರಮುಖ ಪ್ರಗತಿ ಸಾಧಿಸುವ ಮೂಲಕ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (ಬಿಕೆಐ) ಭಯೋತ್ಪಾದಕ ಮಾಡ್ಯೂಲ್ ಅನ್ನು ಪತ್ತೆ ಹಚ್ಚಿದ್ದಾರೆ. ಗುಂಡಿನ ಚಕಮಕಿಯ ನಂತರ ಪೊಲೀಸರು ಮಾಡ್ಯೂಲ್ನ ಆರು ಸದಸ್ಯರನ್ನು ಬಂಧಿಸಿದ್ದಾರೆ ಎಂದು ಪಂಜಾಬ್ ಡಿಜಿಪಿ ಗೌರವ್ ಯಾದವ್ ಮಂಗಳವಾರ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ. https://twitter.com/DGPPunjabPolice/status/1924674495522210214 ಬಂಧಿತರನ್ನು ಜತಿನ್ ಕುಮಾರ್ ಅಲಿಯಾಸ್ ರೋಹನ್, ಬರೀಂದರ್ ಸಿಂಗ್ ಅಲಿಯಾಸ್ ಸಜನ್, ರಾಹುಲ್ ಮಸಿಹ್, ಅಬ್ರಹಾಂ ಅಲಿಯಾಸ್ ರೋಹಿತ್, ಸೋಹಿತ್ ಮತ್ತು ಸುನಿಲ್ ಕುಮಾರ್ ಎಂದು ಗುರುತಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಸುಹೇಲ್ ಖಾಸಿಂ ಮಿರ್ ತಿಳಿಸಿದ್ದಾರೆ. ಎಸ್ಎಸ್ಪಿ ಪ್ರಕಾರ, ಬಂಧಿತ ವ್ಯಕ್ತಿಗಳು ಗ್ರೆನೇಡ್ ಕಾರ್ಯಕರ್ತರು, ಲಾಜಿಸ್ಟಿಕ್ಸ್, ಹಣಕಾಸು ಮತ್ತು ಆಶ್ರಯ ನೀಡಿದವರು ಸೇರಿದಂತೆ ಭಯೋತ್ಪಾದಕ ಜಾಲದ ವಿವಿಧ ಉಪ-ಮಾಡ್ಯೂಲ್ಗಳ ಭಾಗವಾಗಿದ್ದರು. ಪ್ರಾಥಮಿಕ ತನಿಖೆಯಲ್ಲಿ ಈ ಮಾಡ್ಯೂಲ್ ನಿಷೇಧಿತ ಭಯೋತ್ಪಾದಕ ಸಂಘಟನೆ…
ಮಂಡ್ಯ :- ಭಯೋತ್ಪಾದಕರ ವಿರುದ್ಧ ನಡೆದ ಆಪರೇಷನ್ ಸಿಂಧೂರ್ನಲ್ಲಿ ಪ್ರಾಣದ ಹಂಗು ತೊರೆದು ಹೋರಾಟ ನಡೆಸಿದ ಯೋಧರಿಗೆ ಆತ್ಮಸ್ತೈರ್ಯ ತುಂಬುವ ನಿಟ್ಟಿನಲ್ಲಿ ಮದ್ದೂರು ಪಟ್ಟಣದಲ್ಲಿ ಮೇ.21 ಬುಧವಾರ ಬೆಳಿಗ್ಗೆ 10 ಗಂಟೆಗೆ ತಿರಂಗಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮನ್ ಮಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೊಷ್ಟಿಯಲ್ಲಿ ಮಾಲತನಾಡಿ, ಪ್ರವಾಸಿ ಮಂದಿರದ ವೃತ್ತದಿಂದ ತಿರಂಗಾ ಯಾತ್ರೆ ಆರಂಭಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶ್ರೀ ಉಗ್ರ ನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿ ತಿರಂಗಾ ಯಾತ್ರೆ ತಲುಪಿ ಬಳಿಕ ಬಹಿರಂಗ ಸಭೆ ನಡೆಯಲಿದೆ ಎಂದು ಹೇಳಿದರು. ಅಮಾಯಕ ಪ್ರವಾಸಿಗರನ್ನು ಕೊಂದ ಉಗ್ರರಿಗೆ ದೇಶದ ಸೈನಿಕರು ತಕ್ಕ ಉತ್ತರವನ್ನು ನೀಡಿ ಇಡೀ ಪ್ರಪಂಚಕ್ಕೆ ದೇಶದ ಸೈನಿಕರು ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ. ದೇಶದ ಅಖಂಡತೆ ಮತ್ತು ಭದ್ರತೆಗೆ ಧಕ್ಕೆ ಉಂಟಾದಾಗ ನಮ್ಮ ದೇಶ ಕಾಪಾಡುವ ಹೊಣೆ ಸೈನಿಕರದ್ದಾಗಿದೆ. ಅವರಿಗೆ ಗೌರವ ಸಲ್ಲಿಸಲಿಕ್ಕೆ ಈ ಯಾತ್ರೆ ಆಯೋಜಿಸಲಾಗಿದ್ದು, ಇದನ್ನು ಒಂದು…