Author: kannadanewsnow09

ಬೆಳಗಾವಿ: ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಟ್ರೈಲರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, 20 ಜನರಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಕಪ್ಪಲುಗುದ್ದಿಯ ಸಮೀಪದಲ್ಲಿ ಟ್ರ್ಯಾಕ್ಟರ್ ಟ್ರೈಲರ್ ಪಲ್ಟಿಯಾಗಿದೆ. ಬಬಲಾದಿ ಜಾತ್ರೆಗೆ ತೆರಳಿ ವಾಪಾಸ್ ಆಗುತ್ತಿದ್ದಂತ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಟ್ರ್ಟಾಕ್ಟರ್ ನಲ್ಲಿ ತೆರಳುತ್ತಿದ್ದಂತ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರೈಲರ್ ಪಲ್ಟಿಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ರಾಯಭಾಗ ತಾಲ್ಲೂಕಿನ ಮಂಟೂರ ಗ್ರಾಮದವರು ಎಂಬುದಾಗಿ ಹೇಳಲಾಗುತ್ತಿದೆ. ಇದಲ್ಲದೇ ಈ ಅಪಘಾತದಲ್ಲಿ 20 ಜನರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಹಾರೋಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/two-maoists-killed-in-bastar-encounter/ https://kannadanewsnow.com/kannada/european-allies-canada-back-zelenskys-verbal-spat-with-trump-trump-zelensky/

Read More

ನವದೆಹಲಿ: ತೆಲಂಗಾಣ ಗಡಿಗೆ ಸಮೀಪವಿರುವ ಛತ್ತೀಸ್ಗಢದ ಸುಕ್ಮಾ ಜಿಲ್ಲೆಯ ಕಾಡುಗಳಲ್ಲಿ ಶನಿವಾರ ಬೆಳಿಗ್ಗೆ ಮಹಿಳೆ ಸೇರಿದಂತೆ ಇಬ್ಬರು ಮಾವೋವಾದಿಗಳನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಕ್ಮಾ ಜಿಲ್ಲಾ ಕೇಂದ್ರದಿಂದ ಸುಮಾರು 150 ಕಿ.ಮೀ ದೂರದಲ್ಲಿರುವ ತೆಲಂಗಾಣ ಗಡಿಯ ಬಳಿಯ ಟೆಟೆಮಡ್ಗು ಮತ್ತು ರಸಪಲ್ಲಿ ಕಾಡುಗಳಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಎನ್ಕೌಂಟರ್ ಪ್ರಾರಂಭವಾಯಿತು. ಈ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆಗಳು ಶುಕ್ರವಾರ ಸಂಜೆ ಬಂಡಾಯ ವಿರೋಧಿ ಕಾರ್ಯಾಚರಣೆ ನಡೆಸಿದವು. ಪೊಲೀಸರು ಅಡಗುತಾಣದಿಂದ ದೇಶೀಯ ನಿರ್ಮಿತ ಶಸ್ತ್ರಾಸ್ತ್ರಗಳು ಮತ್ತು ಮಾವೋವಾದಿ ಸಾಹಿತ್ಯವನ್ನು ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಸುಕ್ಮಾದ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ಜಿ) ನ ಹನ್ನೆರಡು ತಂಡಗಳು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ನ ಗಣ್ಯ ಘಟಕವಾದ ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ನ ಎರಡು ತಂಡಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. “ಇಬ್ಬರು ಮಾವೋವಾದಿಗಳನ್ನು – ಒಬ್ಬ ಪುರುಷ ಮತ್ತು…

Read More

ತುಮಕೂರು : ಸರ್ವೋನ್ನತ ನ್ಯಾಯಾಲಯಕ್ಕೆ ಡಿಮ್ಡ್ ಅರಣ್ಯ ಕುರಿತಂತೆ 2022ರಲ್ಲಿ ಸಲ್ಲಿಸಲಾಗಿರುವ ಪ್ರಮಾಣಪತ್ರದಲ್ಲಿರುವ ಎಲ್ಲ ಪರಿಭಾವಿತ ಅರಣ್ಯದ ಜಂಟಿ ಸರ್ವೆ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ತುಮಕೂರಿನಲ್ಲಿಂದು ಹಾಸನ ವೃತ್ತದ ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವರು, ಬಾಕಿ ಇರುವ ಜಂಟಿ ಸರ್ವೆ ನಡೆಸಲು ಮತ್ತು ಈಗಾಗಲೇ ಜಂಟಿ ಸರ್ವೆ ಪೂರ್ಣಗೊಂಡಿರುವ ಸರ್ವೆ ನಂಬರ್ ಗಳ ನಕ್ಷೆ ನೀಡುವಂತೆ ಉಪ ವಿಭಾಗಾಧಿಕಾರಿಗಳಿಗೆ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಲು ಸೂಚಿಸಿದರು. ಕಂದಾಯ ಇಲಾಖೆಯವರು ಸರ್ವೆ ಮಾಡುತ್ತಿಲ್ಲ ಎಂದು ನೆಪ ಹೇಳದೆ, ಜಂಟಿ ಸರ್ವೆಗೆ ನಿಯಮಾನುಸಾರ ಅರ್ಜಿ ಸಲ್ಲಿಸಲು ಮತ್ತು ಜಿಲ್ಲಾಧಿಕಾರಿಯವರಿಗೆ ಮತ್ತು ಉಪ ವಿಭಾಗಾಧಿಕಾರಿಗಳಿಗೆ ಈ ಸಂಬಂಧ ಲಿಖಿತ ಮನವಿ ಸಲ್ಲಿಸಿ ಆದಷ್ಟು ಶೀಘ್ರ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಹೇಳಿದರು. ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ದೀರ್ಘ ಕಾಲದಿಂದ ಬಾಕಿ ಇರುವ ಅರಣ್ಯ ಅಪರಾಧ,…

Read More

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ಗುತ್ತಿಗೆ ನೌಕರರು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ಪ್ರತಿಭಟನಾ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ, ಪ್ರತಿಭಟನಾ ನಿರತರೊಂದಿಗೆ ಮಾತುಕತೆ ನಡೆಸಿದರು. ಈ ಮಾತುಕತೆ ಸಕ್ಸಸ್ ಆಗಿದ್ದು, ತಮ್ಮ ಪ್ರತಿಭಟನೆಯನ್ನು ವಾಪಾಸ್ ಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವಂತ ಅವರು, ಸಮಾನ ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ NHM ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಶುಶ್ರೂಷಕೀಯರು ಪ್ರತಿಭಟನೆ ಹಿಂಪಡೆದಿದ್ದಾರೆ ಎಂದಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಿದರು. ನರ್ಸ್ ಬೇಡಿಕೆಗಳಿಗೆ ಸ್ಪಂದಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, NHM ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪಾಲುದಾರಿಕೆಯಲ್ಲಿ ನಡೆಯುತ್ತಿದ್ದು, ವೇತನ ಹೆಚ್ಚಳ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅಮುಮೋದನೆ ಪಡೆಯಬೇಕಾಗುತ್ತದೆ.. ಈ ನಿಟ್ಟಿನಲ್ಲಿ ಮಾರ್ಚ್ 10 ರಂದು ಸಭೆ…

Read More

ಮಂಗಳೂರು: ಇಂದು ಅಮವಾಸೆಯ ಹಿಂದಿನ ದಿನದಂದು ಚಂದ್ರನ ದರ್ಶನವಾಗಿದೆ. ಈ ಹಿನ್ನಲೆಯಲ್ಲಿ ನಾಳೆಯಿಂದ ರಾಜ್ಯದ ಕರಾವಳಿ ಸೇರಿದಂತೆ ರಾಜ್ಯಾಧ್ಯಂತ ರಂಜಾನ್ ಮಾಸ ಆರಂಭಗೊಳ್ಳಲಿದೆ. ಇಂದು ಮಾಹಿತಿ ನೀಡಿರುವಂತ ಝೀನತ್ ಬಕ್ಷತ್ ಕೇಂದ್ರ ಜಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಆಗಿರುವಂತ ಎಸ್ಎಂ ರಶೀದ್ ಮಾಹಿತಿ ಹಂಚಿಕೊಂಡಿದ್ದಾರೆ. ಕರಾವಳಿಯಲ್ಲಿ ಇಂದು ಚಂದ್ರನ ದರ್ಶನವಾಗಿದೆ. ಹೀಗಾಗಿ ಕರಾವಳಿಯಲ್ಲಿ ನಾಳೆಯಿಂದ ರಂಜಾನ್ ಮಾಸ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ. ರಾಜ್ಯದ ಕರಾವಳಿಯಲ್ಲಿ ನಾಳೆಯಿಂದ ರಂಜಾನ್ ವ್ರತ ಆರಂಭಗೊಳ್ಳಲಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೂಡು ಸೇರಿದಂತೆ ಕರಾವಳಿಯಲ್ಲಿ ರಂಜಾನ್ ಉಪವಾಸ ವ್ರತವನ್ನು ಆಚರಣೆ ಮಾಡುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಇನ್ನೂ ರಾಜ್ಯದ ಕೆಲವೆಡೆ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ನಾಳೆಯಿಂದ ರಾಜ್ಯಾಧ್ಯಂತ ರಂಜಾನ್ ಉಪವಾಸ ವ್ರತ ಆಚರಣೆ ಆರಂಭಗೊಳ್ಳಲಿದೆ ಎಂಬುದಾಗಿಯೂ ಮುಸ್ಲೀಂ ಸಮುದಾಯದ ಮುಖಂಡರು ತಿಳಿಸಿದ್ದಾರೆ. https://kannadanewsnow.com/kannada/ramzan-state-government-orders-change-school-timings-of-urdu-schools/ https://kannadanewsnow.com/kannada/breaking-woman-staff-sexually-assaulted-at-bbmp-office-this-officer-asks-if-she-has-contracted-hiv-if-she-goes-on-leave/

Read More

ಬೆಂಗಳೂರು: ರಂಜಾನ್ ಮಾಹೆಯ ಹಿನ್ನಲೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲಾ ಅವಧಿಯನ್ನು ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಉರ್ದು ಮತ್ತು ಇತರೆ ಅಲ್ಪ ಸಂಖ್ಯಾತರ ಭಾಷಾ ಶಾಲೆಗಳ ನಿರ್ದೇಶನಾಲಯದಿಂದ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.20ರವರೆಗೆ ಶಾಲಾ ಅವಧಿ ನಿಗದಿಪಡಿಸಲಾಗಿರುತ್ತದೆ ಎಂದಿದೆ. ಉಲ್ಲೇಖಿತ-2ರ ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ: 31.10.2002 ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್…

Read More

ನವದೆಹಲಿ: ಪವಿತ್ರ ರಂಜಾನ್ ತಿಂಗಳ ಆರಂಭವನ್ನು ಸೂಚಿಸುವ ಅರ್ಧಚಂದ್ರನನ್ನು ಭಾರತದಲ್ಲಿ ಶನಿವಾರ ನೋಡಲಾಗಿದೆ. ಭಾರತದಲ್ಲಿ, ಉಪವಾಸದ ಪವಿತ್ರ ಸಂದರ್ಭವಾದ ರೋಜಾವನ್ನು ಮಾರ್ಚ್ 2 ರ ಭಾನುವಾರದಿಂದ ಆಚರಿಸಲಾಗುವುದು ಎಂದು ಜಾಮಾ ಮಸೀದಿ ಮತ್ತು ಲಕ್ನೋದ ಶಾಹಿ ಇಮಾಮ್ ಘೋಷಿಸಿದರು. ಏತನ್ಮಧ್ಯೆ, ಸೌದಿ ಅರೇಬಿಯಾ ಮಾರ್ಚ್ 1 ರ ಶನಿವಾರದಿಂದ ರೋಜಾವನ್ನು ಆಚರಿಸಲಿದೆ. ರಂಜಾನ್ ಇಸ್ಲಾಮಿಕ್ ಕ್ಯಾಲೆಂಡರ್ನ ಒಂಬತ್ತನೇ ತಿಂಗಳ ಆರಂಭವನ್ನು ಸೂಚಿಸುತ್ತದೆ ಮತ್ತು ಮುಂಜಾನೆ ಮತ್ತು ಸೂರ್ಯಾಸ್ತದ ನಡುವೆ 29 ರಿಂದ 30 ದಿನಗಳ ಉಪವಾಸದ ಅವಧಿಯ ಪ್ರಾರಂಭವನ್ನು ಸೂಚಿಸುತ್ತದೆ. https://kannadanewsnow.com/kannada/breaking-woman-staff-sexually-assaulted-at-bbmp-office-this-officer-asks-if-she-has-contracted-hiv-if-she-goes-on-leave/ https://kannadanewsnow.com/kannada/european-allies-canada-back-zelenskys-verbal-spat-with-trump-trump-zelensky/

Read More

ಬೆಂಗಳೂರು: ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಟ್ರೇಡ್ ಲೈಸೆನ್ಸ್ ನೀಡುವುದಕ್ಕಾಗಿ 40,000 ಲಂಚಕ್ಕೆ ಬೇಡಿಕೆ ಇಟ್ಟು, ಸ್ವೀಕರಿಸುತ್ತಿದ್ದಂತ ಸಂದರ್ಭದಲ್ಲಿಯೇ ಆರೋಗ್ಯ ಮೇಲ್ವಿಚಾರಕಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಇಂದಿರಾನಗರದ ಎಂ.ಕೆ ಸುಬ್ರಹ್ಮಣ್ಯ ಮತ್ತು ಕೃಷ್ಣಪ್ಪ ಗೌಡ ಎಂಬುವರಿಗೆ ರಾಕ್ಸ್ ಟ್ರೇಡ್ ಲೈಸೆನ್ಸ್ ನೀಡುವುದಕ್ಕೆ ದೊಮ್ಮಲೂರು ಉಪ ವಿಭಾಗದ ಆರೋಗ್ಯ ಮೇಲ್ವಿಚಾರಕಿ ನಿರ್ಮಲಾ ಎಂಬುವರು 40,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಇಂದು 40,000 ಲಂಚ ಸ್ವೀಕರಿಸುತ್ತಿದ್ದಂತ ಸಂದರ್ಭದಲ್ಲಿಯೇ ದೊಮ್ಮಲೂರು ಉಪ ವಿಭಾಗ ಆರೋಗ್ಯ ಮೇಲ್ವಿಚಾರಕಿ ನಿರ್ಮಲಾ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಂದಹಾಗೇ ಬೆಂಗಳೂರು ನಗರ ಪೊಲೀಸ್ ಠಾಣೆಯ ಎಸ್ಪಿ ಕೆ.ವಂಶಿಕೃಷ್ಣ ಸೂಚನೆಯ ಹಿನ್ನಲೆಯಲ್ಲಿ, ವಿಜಯ ಕೃಷ್ಣ, ಎನ್, ಪಿಐ -11 ಗೆ ಅಶೋಕ್ ಕುಮಾರ್, ಪಿಐ 15 ಮತ್ತು ಸಿಬ್ಬಂದಿಗಳು ದಾಳಿ ಮಾಡಿದ್ದಾರೆ. ಉಮಾದೇವಿ, ಡಿವೈಎಸ್ಪಿ-07, ಬಿಎಲ್ಆರ್ ಸಿಟಿ-2 ಮೇಲ್ವಿಚಾರಣೆಯಲ್ಲಿ ಭಾಗವಹಿಸಿದ್ದರು. https://kannadanewsnow.com/kannada/farmers-attention-applications-invited-under-krishi-bhagya-scheme/ https://kannadanewsnow.com/kannada/private-caste-census-to-know-real-number-of-veerashaivas-lingayats-minister-ishwar-khandre/

Read More

ಬಳ್ಳಾರಿ : ಕೃಷಿ ಇಲಾಖೆಯಿಂದ 2024-25 ನೇ ಸಾಲಿನ ಕೃಷಿಭಾಗ್ಯ ಯೋಜನೆಯಡಿ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಒಣ ಭೂಮಿ ರೈತರ ಆದಾಯ ಮಳೆಯ ಮೇಲೆ ಅವಲಂಭಿತವಾಗಿರುವುದರಿಂದ ನಿರೀಕ್ಷಿತ ಆದಾಯ ಸಿಗುವುದು ಕಷ್ಟಸಾಧ್ಯವಾಗಿದ್ದು, ರೈತರು ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಹಾಗೂ ವಿವಿಧ ಘಟಕಗಳನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದ್ದು, ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಕಡಿಮೆ ಮಳೆ ಬೀಳುವ ಬಹುತೇಕ ಪ್ರದೇಶಗಳಲ್ಲಿ ರೈತರು ಸುಮಾರು 500 ರಿಂದ 1000 ಅಡಿಯವರೆಗೆ ಕೊಳವೆ ಬಾವಿ ಕೊರೆಯಲು ಆರ್ಥಿಕವಾಗಿ ಹೆಚ್ಚು ವೆಚ್ಚ ಮಾಡುತ್ತಿದ್ದಾರೆ. ಈ ಕೊಳವೆ ಬಾವಿ ವಿಫಲವಾದರೆ ಅಥವಾ ಕೆಲ ವರ್ಷಗಳ ನಂತರ ಬತ್ತಿಹೋದ ಸಂದರ್ಭದಲ್ಲಿ ರೈತರು ಕಷ್ಟದಲ್ಲಿ ಸಿಲುಕುತ್ತಿದ್ದಾರೆ. ಆದ್ದರಿಂದ ರೈತರು ಕೊಳವೆ ಬಾವಿಯ ಬದಲಾಗಿ ಕೃಷಿ ಭಾಗ್ಯ ಯೋಜನೆಯ ಕೃಷಿ ಹೊಂಡ ಹಾಗೂ ಇನ್ನಿತರೆ ಘಟಕಗಳಲ್ಲಿ ಹೂಡಿಕೆಯನ್ನು ಮಾಡಿ ಸುಸ್ಥಿರ ಕೃಷಿಗಾಗಿ ಬಳಸಬಹುದಾಗಿದೆ. ಕಳೆದ ವರ್ಷ ಕೃಷಿ ಭಾಗ್ಯ…

Read More

ಬೆಂಗಳೂರು : ಕಾಯಕವೇ ಕೈಲಾಸ ಎಂದು ಕಾಯಕಕ್ಕೆ ಮತ್ತು ಶ್ರಮಿಕರಿಗೆ ಮನ್ನಣೆಕೊಟ್ಟಿದ್ದು ಶರಣ ಪರಂಪರೆ, ಅನ್ನ, ಅರಿವು, ಆಶ್ರಯ ನೀಡಿ ಶಿಕ್ಷಣ ವಂಚಿತರಿಗೆ ನ್ಯಾಯಕೊಟ್ಟಿದ್ದು ನಮ್ಮ ವೀರಶೈವ, ಲಿಂಗಾಯತ ಮಠ ಮಾನ್ಯಗಳು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ವೀರಶೈವ, ಲಿಂಗಾಯತ ಮಹಾಸಭಾದ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಘಟಕದ ಸೇವಾದೀಕ್ಷಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ವರಿಗೂ ಲೇಸನ್ನೇ ಬಯಸುವ ಏಕೈಕ ಸಮುದಾಯ ನಮ್ಮ ಸಮಾಜವಾಗಿದ್ದು, ಇಂದು ನಾವೇ ಸಾಮಾಜಿಕ ನ್ಯಾಯ ಕೇಳುವ ಸ್ಥಿತಿ ಬಂದಿದೆ ಎಂದರು. ಓಬಿಸಿ ಮೀಸಲಿಗೆ ಆಗ್ರಹ: ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಲಿಂಗಾಯತ, ವೀರಶೈವ ಸಮಾಜದ ಎಲ್ಲ ಉಪ ಪಂಗಡಗಳನ್ನೂ ಕೇಂದ್ರ ಒಬಿಸಿ ಪಟ್ಟಿಯಲ್ಲಿ ಸೇರಿಸಿ ಅವರಿಗೆ ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಮೀಸಲು ಕಲ್ಪಿಸಬೇಕು ಎಂಬುದು ನಮ್ಮ ಮಹಾಸಭಾದ ನ್ಯಾಯೋಚಿತ ಬೇಡಿಕೆಯಾಗಿದ್ದು, ಸ್ವಾಭಾವಿಕ ನ್ಯಾಯದ ನೆಲೆಗಟ್ಟಿನಲ್ಲಿ ಈ ಬೇಡಿಕೆಯನ್ನು ಪರಿಗಣಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು. ಅದೇ…

Read More