Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಶಿಕ್ಷಕರಾದರು. ವಿದ್ಯಾರ್ಥಿಗಳಿಗೆ ಕನ್ನಡ ವ್ಯಾಕರಣ ಪಾಠ ಮಾಡಿದರು. ಸಿಎಂ ಸಿದ್ಧರಾಮಯ್ಯ ಅವರ ಕನ್ನಡ ವ್ಯಾಕರಣದ ಪಾಠ ಕೇಳಿದಂತ ಮಕ್ಕಳಂತೂ ಚಪ್ಪಾಳೆಗಳ ಮಹಾಪೂರವನ್ನೇ ಹರಿಸಿದರು. ಅದು ಎಲ್ಲಿ ಅಂತ ಮುಂದೆ ಓದಿ. ಬೆಂಗಳೂರಿನ ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಢೀರ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭೇಟಿ ನೀಡಿದರು. SCSP/TSP ಸಭೆಯ ಬಳಿಕ ನೇರವಾಗಿ ಭೇಟಿ ನೀಡಿದರು. ಮುಖ್ಯಮಂತ್ರಿಗಳು ಗಮನಿಸಿದ ಲೋಪಗಳು… 250 ವಿದ್ಯಾರ್ಥಿಗಿರುವ ಶಾಲೆ *ಮೊದಲಿಗೆ 10 ನೇ ತರಗತಿಗೆ ಸಿಎಂ ಮತ್ತು ಸಚಿವರ ಭೇಟಿ. ವಿದ್ಯಾರ್ಥಿಗಳೊಂದಿಗೆ ಸಿಎಂ ಸಮಾಲೋಚನೆ. *ಪಠ್ಯ, ಬಾತ್ ರೂಂ ಕಿಟ್ ಗಳ ಸಮರ್ಪಕ ವಿತರಣೆ ಆಗ್ತಿದೆ ಎಂದ ವಿದ್ಯಾರ್ಥಿಗಳು. *ಊಟದ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿ ತಿಳಿದ ಸಿಎಂ…ಬೆಳಗ್ಗೆ ದೋಸೆ, ಮಧ್ಯಾಹ್ನ ಊಟ ಚೆನ್ನಾಗಿತ್ತು ಎಂದ ವಿದ್ಯಾರ್ಥಿಗಳು. ಆಗಾಗ ಪಲಾವ್ ಕೊಡ್ತಾರೆ ಎಂದು ಖುಷಿಪಟ್ಟ ವಿದ್ಯಾರ್ಥಿಗಳು. ಕಳೆದ ಬಾರಿ SSLC ಯಲ್ಲಿ ಎಲ್ಲರೂ ಡಿಸ್ಟಿಂಕ್ಷನ್, ಒಬ್ಬ ವಿಧ್ಯಾರ್ಥಿನಿ ಮಾತ್ರ ಸೆಕೆಂಡ್ ಬಂದಿದ್ದಾಗಿ…
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದಂತ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹೈಕೋರ್ಟ್ 2 ವಾರಗಳ ಕಾಲ ಮುಂದೂಡಿದೆ. ಈ ಮೂಲಕ ನಿರೀಕ್ಷಣಾ ಜಾಮೀನು ನಿರೀಕ್ಷೆಯಲ್ಲಿದ್ದಂತ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಲಾಗಿದೆ. ಇಂದು ಹೈಕೋರ್ಟ್ ನಲ್ಲಿ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮತ್ತೊಂದು ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠವು ವಿಚಾರಣೆ ನಡೆಸಿತು. ಈ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲರು ಒಂದು ಪ್ರಕರಣದಲ್ಲಿ ಮಾತ್ರವೇ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲಾಗಿದೆ. ಉಳಿದ ಕೇಸ್ ಗಳಲ್ಲಿ ಬಾಡಿ ವಾರೆಂಟ್ ಮೂಲಕ ಕಸ್ಟಡಿಗೆ ಪಡೆಯಲಾಗಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸುವಂತೆ ಹೈಕೋರ್ಟ್ ನ್ಯಾಯಪೀಠಕ್ಕೆ ಮನವಿ ಮಾಡಿದರು. ಈ ವಾದ ಆಲಿಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು, ಜಾಮೀನು ಅರ್ಜಿಯ ಸಂಬಂಧ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಎಸ್ಐಟಿಗೆ ಸೂಚನೆ ನೀಡಿದರು. ಅಲ್ಲದೇ…
ಬೆಂಗಳೂರು: ರಾಜ್ಯದ ಎಸ್ಸಿ, ಎಸ್ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಸರ್ಕಾರವು ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ನೀಡಲಾಗುತ್ತಿದ್ದಂತ ಭತ್ಯೆಯನ್ನು ಹೆಚ್ಚಳ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಸಂಬಂಧ ಮಾಹಿತಿ ನೀಡಿರುವಂತ ಸಿಎಂ ಸಿದ್ಧರಾಮಯ್ಯ ಅವರು, IAS, IRS ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ sC/st ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು (ಸದ್ಯ 10 ಸಾವಿರ ಕೊಡಲಾಗುತ್ತಿದ್ದು 5 ಸಾವಿರ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು) ದೆಹಲಿ ಹಾಸ್ಟೆಲ್ ನಲ್ಲಿ ಹೈಟೆಕ್ ಲೈಬ್ರೆರಿ ಮಾಡಲಾಗುವುದು. ಅಲ್ಲಿ ಎಲ್ಲಾ ರೀತಿಯ ಪುಸ್ತಕಗಳು ಸಿಗುವ ವ್ಯವಸ್ಥೆ ಕಲ್ಪಿಸಲಾಗುವುದು ಘೋಷಣೆ ಮಾಡಿದ್ದಾರೆ. SCSP/TSP ಪರಿಷತ್ ಸಭೆಯ ಕೊನೆಯಲ್ಲಿ ಮುಖ್ಯಮಂತ್ರಿಗಳು ಇಲಾಖೆಯ ಅಧಿಕಾರಿಗಳಿಗೆ ಕೊಟ್ಟ ಸ್ಪಷ್ಟ ಸೂಚನೆಗಳು… *2024-25 ನೇ ಸಾಲಿಗೆ scsp/tsp ನಲ್ಲಿ ಲಭ್ಯ ಇರುವ ಹಣವನ್ನು ಖರ್ಚು ಮಾಡಲು action plan ಅನುಮೋದನೆ ಮಾಡಲಾಗಿದೆ. *ರಾಜ್ಯದ ಅಭಿವೃದ್ಧಿ ಆಯವ್ಯಯ ಈ ಸಾಲಿನಲ್ಲಿ…
ನವದೆಹಲಿ: ನೀಟ್ ಪಿಜಿ ಪರೀಕ್ಷೆಯನ್ನು ರದ್ದುಗೊಳಿಸಿದ ಸುಮಾರು 10 ದಿನಗಳ ನಂತರ, ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ, ಸ್ನಾತಕೋತ್ತರ (ನೀಟ್ ಪಿಜಿ) ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ಇಂದು ಪ್ರಕಟಿಸಲಾಗಿದೆ. ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ (ಎನ್ಬಿಇಎಂಎಸ್) ಈಗ ನೀಟ್ ಪಿಜಿ ಪರೀಕ್ಷೆಯನ್ನು ಆಗಸ್ಟ್ 11 ರಂದು ನಡೆಸಲಿದೆ. ಇತ್ತೀಚಿನ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಎನ್ಬಿಇಎಂಎಸ್ ಜೂನ್ 23 ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಿದೆ. ದೇಶಾದ್ಯಂತ ಸುಮಾರು 52,000 ಸ್ನಾತಕೋತ್ತರ ಸೀಟುಗಳಿಗೆ ಪ್ರತಿವರ್ಷ ಸುಮಾರು ಎರಡು ಲಕ್ಷ ಎಂಬಿಬಿಎಸ್ ಪದವೀಧರರು ನೀಟ್ ಪಿಜಿ ತೆಗೆದುಕೊಳ್ಳುತ್ತಾರೆ. https://twitter.com/ANI/status/1809146252527128906 ಮಂಡಳಿಯ ಪ್ರಕಾರ, ಪರೀಕ್ಷಾ ಪ್ರಕ್ರಿಯೆಯ ದೃಢತೆಯನ್ನು ಪರಿಶೀಲಿಸಲು ಸಚಿವಾಲಯ ಬಯಸಿದ್ದರಿಂದ ಮತ್ತು ಪ್ರಕ್ರಿಯೆಯಲ್ಲಿ ಯಾವುದೇ ದುರ್ಬಲತೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲು ಬಯಸಿದ್ದರಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಯಿತು. ಎನ್ಟಿಎ ಪರೀಕ್ಷೆ ರದ್ದತಿ ಭಾರತೀಯ ವಿದ್ಯಾರ್ಥಿಗಳನ್ನು ಹೆದರಿಸಿದ ಸಮಯದಲ್ಲಿ ನೀಟ್ ಪಿಜಿ ಅರ್ಜಿದಾರರ ದುರ್ಬಲತೆಯ ಅನಗತ್ಯ…
ಶಿವಮೊಗ್ಗ : ಮೀನುಗಾರಿಕೆ ಇಲಾಖೆಯು ಜುಲೈ 23 ಮತ್ತು 24 ರಂದು 2 ದಿನಗಳ “ಒಳನಾಡು ಮೀನುಕೃಷಿಯಲ್ಲಿ ಹೊಸ ಮೀನು ತಳಿಗಳ ಸಾಕಾಣಿಕೆ” ಕುರಿತು ತರಬೇತಿ ಕಾರ್ಯಕ್ರಮವನ್ನು ಮೀನುಗಾರಿಕೆ ತರಬೇತಿ ಕೇಂದ್ರ, ಬಿ.ಆರ್.ಪ್ರಾಜೆಕ್ಟ್ನಲ್ಲಿ ಆಯೋಜಿಸಿದ್ದು, ಆಸಕ್ತರು ನೊಂದಾಯಿಸಿಕೊಳ್ಳುವಂತೆ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೋಂದಣಿಗಾಗಿ ಸಂಪರ್ಕ ಸಂಖ್ಯೆ 8277200300 ನ್ನು ಸಂಪರ್ಕಿಸುವುದು. https://kannadanewsnow.com/kannada/ayodhya-ram-temple-priests-banned-from-using-new-dress-code-mobile-phones-ayodhye-ram-mandir/
ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಯುವ ನೀಟ್-ಪಿಜಿ ಪರೀಕ್ಷೆಯ ( NEET-PG exam ) ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ (National Board of Examinations – NBE) ಶುಕ್ರವಾರ ಪ್ರಕಟಿಸಿದೆ. ಏಜೆನ್ಸಿಯು ಆಗಸ್ಟ್ 11ರಂದು ಪರೀಕ್ಷೆಯ ದಿನಾಂಕವನ್ನು ನಿಗದಿಪಡಿಸಿದೆ. ಇದು ಎರಡು ಪಾಳಿಗಳಲ್ಲಿ ನಡೆಯಲಿದೆ ಎಂದು ಏಜೆನ್ಸಿಯ ಪ್ರಕಟಣೆ ತಿಳಿಸಿದೆ. ಜೂನ್ 22 ರಂದು ನಿಗದಿಯಾಗಿದ್ದ ನೀಟ್-ಪಿಜಿ ಪರೀಕ್ಷೆಯನ್ನು ( NEET-PG exam 2024 ) ಪ್ರಾರಂಭವಾಗುವ ಕೆಲವೇ ಗಂಟೆಗಳ ಮೊದಲು ಯುಜಿ ಪರೀಕ್ಷೆಗೆ ಪ್ರಶ್ನೆ ಪತ್ರಿಕೆಗಳು ಸೋರಿಕೆ ಸೇರಿದಂತೆ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಪರೀಕ್ಷೆಯನ್ನು ರದ್ದುಗೊಳಿಸಿದ ನಂತರ, ಎನ್ಬಿಇ ಅಧ್ಯಕ್ಷ ಡಾ.ಅಭಿಜತ್ ಸೇಠ್ ಅವರು ಶಿಕ್ಷಣ ಸಚಿವಾಲಯವು ಪರೀಕ್ಷಾ ಪ್ರಕ್ರಿಯೆಯ ದೃಢತೆಯನ್ನು ಪರಿಶೀಲಿಸಲು ಮತ್ತು ಈ ಪ್ರಕ್ರಿಯೆಯಲ್ಲಿ ಯಾವುದೇ ದುರ್ಬಲತೆ ಇಲ್ಲ ಎಂಬ ಭರವಸೆಯನ್ನು ಪಡೆಯಲು ಬಯಸಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದರು. NTA ಕಳೆದ ಏಳು ವರ್ಷಗಳಿಂದ ನೀಟ್-ಪಿಜಿಯನ್ನು ನಡೆಸುತ್ತಿದೆ ಮತ್ತು ಮಂಡಳಿಯ…
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564 ನಮ್ಮ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದ ಪರಿಸ್ಥಿತಿ ಇರುತ್ತದೆ.…
ನವದೆಹಲಿ: ಸೆಂಟ್ರಲ್ ಟೀಚರ್ ಎಲಿಜಿಬಿಲಿಟಿ ಟೆಸ್ಟ್ (Central Teacher Examination Test – CTET) 2024 ಜುಲೈ ಸೆಷನ್ ಪರೀಕ್ಷೆಯನ್ನು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (Central Board of Secondary Education -CBSE) ಜುಲೈ 7 ರಂದು ನಡೆಸಲಿದೆ. ಪ್ರವೇಶ ಪತ್ರಗಳನ್ನು ಈಗ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಪಾಸ್ವರ್ಡ್ ನೀಡುವ ಮೂಲಕ ಹಾಲ್ ಟಿಕೆಟ್ಗಳನ್ನು ಡೌನ್ಲೋಡ್ ಮಾಡಲು ಸಾಧ್ಯವಾಗುತ್ತದೆ. ಅಭ್ಯರ್ಥಿಗಳು ctet.nic.in ಅಧಿಕೃತ ವೆಬ್ಸೈಟ್ಗೆ ಹೋಗುವ ಮೂಲಕ ಸಿಟಿಇಟಿ 2024 ಪ್ರವೇಶ ಪತ್ರವನ್ನು ಪಡೆಯಬಹುದು. ಸಿಟಿಇಟಿ ಜುಲೈ 2024 ಅಧಿವೇಶನವು ಎರಡು ಪಾಳಿಗಳಲ್ಲಿ ನಡೆಯಲಿದೆ. ಬೆಳಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಪೇಪರ್-1, ಮಧ್ಯಾಹ್ನ 2ರಿಂದ 4.30ರವರೆಗೆ ಪೇಪರ್-2 ಪರೀಕ್ಷೆ ನಡೆಯಲಿದೆ. ಕೇಂದ್ರ ಸರ್ಕಾರಿ ಶಾಲೆಗಳಲ್ಲಿ 1 ರಿಂದ 8 ನೇ ತರಗತಿಗಳಿಗೆ ಬೋಧನೆ ಮಾಡಲು ಕೇಂದ್ರ ಶಿಕ್ಷಕರ ಪರೀಕ್ಷಾ ಪರೀಕ್ಷೆ (ಸಿಟಿಇಟಿ) ಪೂರ್ವಾಪೇಕ್ಷಿತವಾಗಿದೆ. ಸಿಟಿಇಟಿ ಅಡ್ಮಿಟ್ ಕಾರ್ಡ್ 2024 ಡೌನ್ಲೋಡ್…
ಶಿವಮೊಗ್ಗ: ನಿಮ್ಮ ಕನ್ನಡ ನ್ಯೂಸ್ ನೌ ಕಳೆದ ಎರಡು ದಿನಗಳ ಹಿಂದೆ ಶಿವಮೊಗ್ಗ: ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ’ನಿಂದ ‘ಮಹಿಳಾ ಪೌರ ಕಾರ್ಮಿಕ’ರ ಮೇಲೆ ಹಲ್ಲೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸಿತ್ತು. ಈ ವಿಷಯವನ್ನು ಇಂದಿನ ನಗರಸಭೆಯ ವಿಶೇಷ ಸಭೆಯಲ್ಲಿ ವಿಪಕ್ಷಗಳ ಮುಖಂಡರು ಪ್ರಸ್ತಾಪಿಸಿ, ಕ್ರಮಕ್ಕೂ ಆಗ್ರಹಿಸಿದರು. ಕೊನೆಗೆ ಮೇಸ್ತ್ರಿ ನಾಗರಾಜ ವಿರುದ್ಧ ಕಾನೂನು ಕ್ರಮದ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆಯ ಮೇಸ್ತ್ರಿ ನಾಗರಾಜ ಎಂಬುವರು ಮಹಿಳಾ ಪೌರ ಕಾರ್ಮಿಕರೊಬ್ಬರ ಮೇಲೆ ಹಲ್ಲೆ ನಡೆಸಿ, ಗೂಂಡಾಗಿರಿ ಪ್ರದರ್ಶನ ಮಾಡಿದ್ದರು. ಇಂದು ಸಾಗರ ನಗರಸಭೆಯ ವಿಶೇಷ ಸಭೆ ಆರಂಭಗೊಂಡ ನಂತ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಈ ಬಳಿಕ ನಡೆದಂತ ನಗರಸಭೆಯ ವಿಶೇಷ ಸಭೆಯಲ್ಲಿ ನಿಲುವಳಿಗಳನ್ನು ಮಂಡಿಸೋ ಮುನ್ನವೇ, ಮಾಜಿ ಅಧ್ಯಕ್ಷರಾದ ಲಲಿತಮ್ಮ ಅವರು ಎದ್ದು ನಿಂತು, ಮಹಿಳಾ ಪೌರ ಕಾರ್ಮಿಕರ ಮೇಲೆ ಮೇಸ್ತ್ರಿಯೊಬ್ಬರು ಹಲ್ಲೆ ನಡೆಸಿರುವಂತ ವಿಷಯ ತಿಳಿದು ಬಂದಿದೆ.…
ಕೋಲಾರ: ಜಿಲ್ಲೆಯ ಕೋಚಿಮುಲ್ ಹಾಲು ಉತ್ಪಾದಕರಿಗೆ ಬಿಗ್ ಶಾಕ್ ಎನ್ನುವಂತೆ ಪ್ರತಿ ಲೀಟರ್ ಹಾಲಿನ ಮೇಲಿನ ದರವನ್ನು ರೂ.2 ಕಡಿತಗೊಳಿಸಿ ಆದೇಶಿಸಿದೆ. ಈ ಆದೇಶ ನಾಳೆಯಿಂದಲೇ ಜಾರಿಗೆ ಬರಲಿದೆ. ಈ ಕುರಿತಂತೆ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಆದೇಶ ಹೊರಡಿಸಿದ್ದು, ಹಾಲು ಉತ್ಪಾದಕರಿಗೆ ನೀಡುವಂತ ಪ್ರತಿ ಲೀಟರ್ ಹಾಲಿನ ಮೇಲಿನದ ದರವನ್ನು 2 ರೂಪಾಯಿ ಕಡಿತಗೊಳಿಸಿರುವುದಾಗಿ ತಿಳಿಸಿದೆ. ನಾಳೆಯಿಂದಲೇ ಈ ನೂತನ ದರದಂತೆ ಹಾಲು ಉತ್ಪಾದಕರಿಂದ ಹಾಲನ್ನು ಖರೀದಿ ಮಾಡಲಾಗುತ್ತದೆ. ನಾಳೆಯಿಂದ ಪ್ರತಿ ಲೀಟರ್ ಹಾಲಿಗೆ ಹಾಲು ಉತ್ಪಾದಕರಿಗೆ ರೂ.31.40 ನೀಡಲಾಗುತ್ತದೆ ಅಂತ ತಿಳಿಸಿದೆ. ಅಂದಹಾಗೇ ಈ ಮೊದಲು ಕೋಚಿಮುಲ್ ನಿಂದ ಹಾಲು ಉತ್ಪಾದಕರಿಂದ ಪ್ರತಿ ಲೀಟರ್ ಹಾಲನ್ನು ರೂ.33.40ರಂತೆ ಖರೀದಿ ಮಾಡಲಾಗುತ್ತಿತ್ತು. ಈಗ ದಿಢೀರ್ ರೂ.2 ಕಡಿತ ಮಾಡಿದ್ದು, ನಾಳೆಯಿಂದ 31.40 ರೂ ಪ್ರತಿ ಲೀಟರ್ ಹಾಲಿನ ದರವಾಗಿದೆ. ಜನವರಿಯಲ್ಲಿ ನಿತ್ಯ 9.65 ಲಕ್ಷ ಹಾಲು ಸಂಗ್ರಹವನ್ನು ಕೋಚಿಮುಲ್ ಮಾಡುತ್ತಿದೆ. ಆದ್ರೇ ಜೂನ್ ನಿಂದ ನಿತ್ಯ 12.37…