Author: kannadanewsnow09

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಜಿಎಸ್ಟಿ ಕೌನ್ಸಿಲ್ ಸಭೆ ಶನಿವಾರ ಚರ್ಚಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ 55 ನೇ ಜಿಎಸ್ಟಿ ಕೌನ್ಸಿಲ್ ಸಭೆಯ ನಿರ್ಧಾರಗಳನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಂದಿನ ಕೆಲವು ಗಂಟೆಗಳಲ್ಲಿ ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಆದಾಗ್ಯೂ, ಮೂಲಗಳನ್ನು ಉಲ್ಲೇಖಿಸಿ ವರದಿಗಳ ಪ್ರಕಾರ, ಹೆಚ್ಚಿನ ಪರಿಶೀಲನೆಗಾಗಿ ವಿಮಾ ಪಾಲಿಸಿಗಳ ಮೇಲಿನ ದರಗಳನ್ನು ಕಡಿತಗೊಳಿಸುವ ನಿರ್ಧಾರವನ್ನು ಕೌನ್ಸಿಲ್ ಮುಂದೂಡಿದೆ. ವರದಿಗಳ ಪ್ರಕಾರ, ಮೊದಲೇ ಪ್ಯಾಕ್ ಮಾಡದಿದ್ದರೆ ಉಪ್ಪು ಮತ್ತು ಮಸಾಲೆಗಳೊಂದಿಗೆ ಬೆರೆಸಿದ ರೆಡಿ-ಟು-ಈಟ್ ಪಾಪ್ಕಾರ್ನ್ ಮೇಲೆ ಶೇಕಡಾ 5, ಮೊದಲೇ ಪ್ಯಾಕ್ ಮಾಡಿದ ಮತ್ತು ಲೇಬಲ್ ಮಾಡಿದ ಪಾಪ್ಕಾರ್ನ್ ಮೇಲೆ ಶೇಕಡಾ 12 ಮತ್ತು ಕ್ಯಾರಮೆಲ್ ಪಾಪ್ಕಾರ್ನ್ ಮೇಲೆ ಶೇಕಡಾ 18 ರಷ್ಟು ಜಿಎಸ್ಟಿ ವಿಧಿಸಲು ಕೌನ್ಸಿಲ್ ಶಿಫಾರಸು ಮಾಡಿದೆ. ಐಷಾರಾಮಿ ಸರಕುಗಳು, ವಾಯುಯಾನ ಟರ್ಬೈನ್ ಇಂಧನ (ಎಟಿಎಫ್), ರಿಯಲ್ ಎಸ್ಟೇಟ್ ಮತ್ತು ಹೆಚ್ಚಿನವುಗಳಿಗೆ ಸಂಬಂಧಿಸಿದ ದರ ಹೊಂದಾಣಿಕೆಗಾಗಿ ಕೌನ್ಸಿಲ್ ನಿರ್ಣಾಯಕ ಪ್ರಸ್ತಾಪಗಳನ್ನು…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ಇಸ್ರೊ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 23.12.2024 (ಸೋಮವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 03:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಸ್ರೊ ಲೇಔಟ್ ಇಂಡಸ್ಟ್ರಿಯಲ್ ಏರಿಯಾ, ಕುಮಾರಸ್ವಾಮಿ ಲೇಔಟ್, ಯಲಚೇನಹಳ್ಳಿ ಇಲಿಯಾಸ್ ನಗರ, ಗಂಗಾಧರನಗರ, ವಿವೇಕಾನಂದ ಕಾಲೋನಿ, ಪ್ರಗತಿಪುರ, ಸರಬಂಡೆಪಾಳ್ಯ, ಪ್ರತಿಭಾ ಇಂಡಸ್ಟ್ರಿಯಲ್ ಏರಿಯಾ, ಸುಪ್ರಿಮ್ ಲೇದರ್ ಗಾರ್ಮೆಂಟ್ಸ್, ಚಂದ್ರ ನಗರ, ಕಾಶಿ ನಗರ, ವಿಕ್ರಮ್ ನಗರ, ನಂಜಪ್ಪ ಲೇಔಟ್, ಬಿಕಾಸಿಪುರ, ಟೀಚರ್ಸ್ ಕಾಲೋನಿ, ಜೆ.ಹೆಚ್.ಬಿ.ಸಿ.ಎಸ್. ಲೇಔಟ್, ಬೇಂದ್ರೇನಗರ, ಈಶ್ವರನಗರ, ಮಿನಾಜ್ ನಗರ, ಕನಕ ಲೇಔಟ್, ಕನಕನಗರ, ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. https://kannadanewsnow.com/kannada/laxmi-hebbalkars-fans-stage-massive-protest-in-belagavi-against-ct-ravi/ https://kannadanewsnow.com/kannada/lecturer-brutally-assaulted-by-students-parents-in-sagar/

Read More

ಬೆಳಗಾವಿ: ವಿಧಾನ ಪರಿಷತ್ ನಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ ಎಂಬ ಪ್ರಕರಣ ರಾಷ್ಟ್ರ ರಾಜಕಾರಣದಲ್ಲಿ ಸುದ್ದಿ ಮಾಡುತ್ತಿದ್ದು, ಇಂದು ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ ಬೆಂಬಲಿಗರು ಬೃಹತ್ ಪ್ರತಿಭಟನೆ ಮಾಡಿದ್ದಾರೆ. ಬೆಳಗಾವಿ ನಗರದ ಸಿಪಿಎಡ್ ಮೈದಾನದಿಂದ ಸಹಸ್ರಾರು ಬೆಂಬಲಿಗರು ಮೆರವಣಿಗೆ ನಡೆಸಿ, ಸಿ‌.ಟಿ ರವಿ ಪರಿಷತ್ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿದರು. ಮೆರವಣಿಗೆಯಲ್ಲಿ ಸಿಟಿ ರವಿ ಅಣಕು ಶವಯಾತ್ರೆ ನಡೆಸಿ ಪ್ರತಿಕೃತಿಗೆ ಸೀರೆ ಉಡಿಸಿ ಆಕ್ರೋಶ ಹೊರಹಾಕಿದರು. ಚನ್ನಮ್ಮ ವೃತ್ತದಲ್ಲಿ ಪ್ರತಿಕೃತಿ ಸುಟ್ಟು ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರ ಹಾಕಿದರು.‌ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಸಿಟಿ ರವಿ ಬಹಿರಂಗ ಕ್ಷಮೆ ಕೇಳಬೇಕು ಎಂದು ಈ ವೇಳೆ ಹೋರಾಟಗಾರರು ಒತ್ತಾಯಿಸಿದರು ಪ್ರತಿಭಟನೆಯಲ್ಲಿ ಶೋಕ ಸೂಚಿಸುವ ಹಾಡುಗಳನ್ನು ಹಾಕಿ ಸಿಟಿ ಸತ್ನಪ್ಪೊ ಸತ್ನೋ ಎಂದು ಬೊಬ್ಬೆ ಹೊಡೆದ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು, ಬೆಳಗಾವಿ…

Read More

ಬೆಂಗಳೂರು: 2025ನೇ ಸಾಲಿನ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಆಚರಣೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 2025ನೇ ಸಾಲಿನ ಗಣರಾಜ್ಯೋತ್ಸವ ದಿನಾಚರಣೆಯ ಸಂಬಂಧ ಇಂದು ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದ್ದು, ಅದಕ್ಕೆ ಬೇಕಾದ ವ್ಯವಸ್ಥೆ ಸರಿಯಾಗಿ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾರ್ಯಕ್ರಮದ ದಿನ ಆವರಣಕ್ಕೆ ಬರುವ ಅತೀ ಗಣ್ಯರು, ಗಣ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಯಾವ ದ್ವಾರದಲ್ಲಿ ಬರಬೇಕು ಹಾಗೂ ವಾಹನಗಳ ಪಾರ್ಕಿಂಗ್ ಸ್ಥಳ ವಿಚಾರವಾಗಿ ಯಾವುದೇ ಲೋಪಗಳಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು. ಕಾರ್ಯಕ್ರಮದ ವೇಳೆ ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ, ಅಗ್ನಿ ಶಾಮಕ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್, ಆಸನಗಳ ವ್ಯವಸ್ಥೆ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳನ್ನು ಸರಿಯಾಗಿ ಮಾಡಲು ನಿರ್ದೇಶನ ನೀಡಿದರು. ಪ್ರತಿ ವರ್ಷದಂತೆ ಗಣರಾಜ್ಯೋತ್ಸವ ಸಮಾರಂಭದಲ್ಲಿ ಶಿಷ್ಟಾಚಾರದ…

Read More

ಬೆಂಗಳೂರು: ಇದೇ 19ರ ರಾತ್ರಿ ನನ್ನ ಮೇಲಿನ ಹಲ್ಲೆ ಕುರಿತ ದೂರು ಕೊಟ್ಟೆ, ಎಫ್‍ಐಆರ್ ಬುಕ್ ಮಾಡಲೇ ಇಲ್ಲ; ಹೋಗಿ ಬಂದು ಫೋನಿನಲ್ಲಿ ಮಾತನಾಡುತ್ತಿದ್ದರು. ನನ್ನನ್ನು ಐಸೋಲೇಟ್ ಮಾಡಿದರು. ಹೊರಗಡೆ ಸೇಫಾಗಿ ಕರೆದುಕೊಂಡು ಹೋಗುವುದಾಗಿ ಹೇಳಿ ಎತ್ತಿಕೊಂಡು ಪೊಲೀಸ್ ಸ್ಕಾರ್ಪಿಯೊದಲ್ಲಿ ತುಂಬಿದರು. ಆಗ ಲಾಠಿಯಿಂದ ಹೊಡೆತ ಬಿತ್ತೋ ಹೇಗಾಯಿತೋ ಗೊತ್ತಿಲ್ಲ; ರಕ್ತ ಬರಲಾರಂಭಿಸಿತ್ತು. ಆಗ ರಾತ್ರಿ 11.45 ಸಮಯ ಇರಬಹುದು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಲಿಂದ ನಂದಗಡ, ಕಿತ್ತೂರಿಗೆ ಕರೆದೊಯ್ದರು. ಕುಡಿಯಲು ನೀರು ಕೊಡಿ ಎಂದರೆ, ವಾಂತಿ ಆಗುವಂತಿದೆ ಎಂದು ತಿಳಿಸಿದರೆ ವಾಹನದಲ್ಲಿ ನೀರೇ ಇರಲಿಲ್ಲ. ಫೋನ್ ಮೂಲಕ ನಿರ್ದೇಶನದಂತೆ ಕಿತ್ತೂರು, ಒಳಗೆ ಗಲ್ಲಿ ರಸ್ತೆಗೆ ಒಯ್ದರು. ಹಿಂದೆ ಬರುತ್ತಿದ್ದ ಮಾಧ್ಯಮಗಳ ವಾಹನ, ನನ್ನ ಪಿ.ಎ. ವಾಹನವನ್ನು ಬ್ಯಾರಿಕೇಡ್ ಹಾಕಿ ತಡೆದಿದ್ದರು ಎಂದು ವಿವರ ನೀಡಿದರು. ವಾಹನ ಬ್ಲಾಕ್ ಮಾಡಲು ಹೇಳುತ್ತಿದ್ದರು.…

Read More

ಮುಂಬೈ: ಮುಂಬೈ ಕರಾವಳಿಯಲ್ಲಿ ದೋಣಿ ಅಪಘಾತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಏಳು ವರ್ಷದ ಬಾಲಕ ಜೋಹಾನ್ ಮೊಹಮ್ಮದ್ ನಿಸಾರ್ ಅಹ್ಮದ್ ಪಠಾಣ್ ಅವರ ಶವವನ್ನು ಮೂರು ದಿನಗಳ ಶೋಧ ಕಾರ್ಯಾಚರಣೆಯ ನಂತರ ಶನಿವಾರ ಬೆಳಿಗ್ಗೆ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರೊಂದಿಗೆ ಡಿಸೆಂಬರ್ 18ರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ನಗರದ ಬಂದರು ಪ್ರದೇಶದಲ್ಲಿ ಸಂಭವಿಸಿದ ಭೀಕರ ಅಪಘಾತಗಳಲ್ಲಿ ಒಂದಾಗಿದೆ ಎಂದು ಪರಿಗಣಿಸಲಾದ ಬಗ್ಗೆ ನೌಕಾಪಡೆ ತನಿಖೆಯನ್ನು ಪ್ರಾರಂಭಿಸಿದೆ. ಶೋಧ ಮತ್ತು ಪಾರುಗಾಣಿಕಾ (ಎಸ್ಎಆರ್) ಕಾರ್ಯಾಚರಣೆಯಲ್ಲಿ ನೌಕಾ ಹೆಲಿಕಾಪ್ಟರ್, ನೌಕಾಪಡೆ ಮತ್ತು ಕೋಸ್ಟ್ ಗಾರ್ಡ್ನ ದೋಣಿಗಳನ್ನು ನಿಯೋಜಿಸಲಾಗಿದೆ. ಎರಡು ಹಡಗುಗಳಲ್ಲಿದ್ದ 113 ಜನರಲ್ಲಿ 15 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ ಮತ್ತು ಗಾಯಗೊಂಡ ಇಬ್ಬರು ಸೇರಿದಂತೆ 98 ಜನರನ್ನು ರಕ್ಷಿಸಲಾಗಿದೆ. ನೌಕಾಪಡೆಯ ವಿಮಾನದಲ್ಲಿ ಆರು ಜನರಿದ್ದರು, ಅವರಲ್ಲಿ ಇಬ್ಬರು ಬದುಕುಳಿದಿದ್ದಾರೆ ಎಂದು ಅಧಿಕಾರಿ ವರದಿ ಮಾಡಿದ್ದಾರೆ. ವೇಗವಾಗಿ ಚಲಿಸುತ್ತಿದ್ದ ನೌಕಾಪಡೆಯ ದೋಣಿಯು ಎಂಜಿನ್ ಪ್ರಯೋಗಗಳಿಗೆ ಒಳಗಾಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಮುಂಬೈ ಕರಾವಳಿಯಲ್ಲಿ…

Read More

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶಾಲಾ ವಾಹನವೊಂದು ಪಲ್ಟಿಯಾಗಿ ಸಂಭವಿಸಿದಂತ ಭೀಕರ ಅಪಘಾತದಲ್ಲಿ ಓರ್ವ ಶಿಕ್ಷಕ, ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳಿದ್ದಂತ ಶಾಲಾ ವಾಹನವೊಂದು ಕೈಮರ ಚೆಕ್ ಪೋಸ್ಟ್ ಬಳಿಯಲ್ಲಿ ಮುಂದಿನ ಟೈಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ವಾಹನದಲ್ಲಿದ್ದಂತ ಓರ್ವ ಶಿಕ್ಷಕ, ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಗಾಯಾಳು ಶಿಕ್ಷಕರು, ವಿದ್ಯಾರ್ಥಿಗಳನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತಗೊಂಡ ಖಾಸಗಿ ವಾಹನದಲ್ಲಿ 50 ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು ಎಂಬುದಾಗಿ ತಿಳಿದು ಬಂದಿದೆ. ಮೈಸೂರಿನ ಗೋಪಾಲಸ್ವಾಮಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/let-bjp-accept-that-bad-words-are-our-culture-we-will-not-object-dk-shivakumar-shivakumar/ https://kannadanewsnow.com/kannada/breaking-govt-school-headmistress-brutally-murdered-in-gadag/

Read More

ಬೆಂಗಳೂರು : “ಮಹಿಳೆಯರಿಗೆ ಅಪಮಾನ, ಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂದು ಬಿಜೆಪಿ ಒಪ್ಪಿಕೊಳ್ಳಲಿ. ನಾವು ತಕರಾರು ಮಾಡುವುದಿಲ್ಲ” ಡಿಸಿಎಂ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. “ಸಿ.ಟಿ. ರವಿ ಕೇವಲ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಮಾತ್ರ ಮಾತನಾಡಿಲ್ಲ. ಸಿದ್ದರಾಮಯ್ಯ ಅವರ ಬಗ್ಗೆಯೂ ಹೀನ ಮಾತು ಆಡಿದ್ದಾರೆ. ಸದನದಲ್ಲಿ ನಿತ್ಯ ಸುಮಂಗಲಿ ಎಂದು ಪದ ಬಳಕೆ ಮಾಡಿದ್ದಾರೆ. ರವಿ ಅವರ ಮಾತುಗಳು ಸರಿಯೋ ತಪ್ಪೋ ಎಂದು ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲಿ” ಎಂದು ತಿಳಿಸಿದರು. “ಚಿಕ್ಕಮಗಳೂರು ಜನ ಎಂದರೆ ಸುಸಂಸ್ಕೃತ ಜನ. ಅಂತಹವರ ನಡುವಿನಿಂದ ಇಂತಹ ವ್ಯಕ್ತಿ ಬಂದಿರುವುದು ದುರಂತ” ಎಂದರು. ಅವರ ಮುತ್ತು ರತ್ನಗಳನ್ನು ಅವರೇ ಇಟ್ಟುಕೊಳ್ಳಲಿ “ನಮ್ಮ ಪಕ್ಷದ ಯಾವುದೇ ನಾಯಕರು ಈ ರೀತಿ ಮಾತನಾಡಿದ್ದರೆ ನಾನು ಖಂಡಿಸುತ್ತಿದ್ದೆ. ಆದರೆ ಬಿಜೆಪಿ ನಾಯಕರು ತಮ್ಮ ಪಕ್ಷದ ನಾಯಕರ ರಕ್ಷಣೆಗೆ ನಿಂತಿದ್ದಾರೆ. ಮುನಿರತ್ನ ಪ್ರಕರಣ ಇದೇ ಆರ್.ಅಶೋಕ್ ಏನು…

Read More

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿರುವಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರ ಮೇಲೆ ವಿದ್ಯಾರ್ಥಿಗಳು ಹಾಗೂ ಪೋಷಕರು ಮಾರಣಾಂತಿಕ ಹಲ್ಲೆ ಮಾಡಿರುವಂತ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರ ರಾಜು ಎಂಬುವರೇ ಹಲ್ಲೆಗೊಳಗಾದಂತವರಾಗಿದ್ದಾರೆ. ವಿದ್ಯಾರ್ಥಿಗಳ ಹಾಜರಾತಿ ಕೊರತೆಯ ಕಾರಣದಿಂದ ಆಂತರೀಕ ಪರೀಕ್ಷೆಗೆ ಅವಕಾಶ ನೀಡಿರಲಿಲ್ಲ. ಈ ಕಾರಣದಿಂದಾಗಿಯೇ ವಿದ್ಯಾರ್ಥಿಗಳೊಂದಿಗೆ ಕಾಲೇಜಿಗೆ ಆಗಮಿಸಿದಂತ ಪೋಷಕರು ರಾಜು ಮೇಲೆ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಇತಿಹಾಸ ಉಪನ್ಯಾಸಕ ರಾಜು ಅವರು, ಕೆಲವು ವಿದ್ಯಾರ್ಥಿಗಳು ಸರಿಯಾಗಿ ಕಾಲೇಜಿಗೆ ಬಾರುತ್ತಿರಲಿಲ್ಲ. ಸರಿಯಾಗಿ ಕಾಲೇಜಿಗೆ ಆಗಮಿಸಿ, ತರಗತಿಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೂ ಕಾಲೇಜಿಗೆ ಬಾರದೇ ಹಾಜರಾತಿ ಕೊರತೆ ಉಂಟಾಗಿತ್ತು. ಹೀಗಾಗಿ ಆಂತರೀಕ ಪರೀಕ್ಷೆಯನ್ನು ನೀಡಿರಲಿಲ್ಲ. ಇದರಿಂದ ಸಿಟ್ಟುಕೊಂಡು ಇಂದು ಪೋಷಕರ ಜೊತೆಗೆ ಆಗಮಿಸಿ, ತಮ್ಮ ಮೇಲೆ ವಿದ್ಯಾರ್ಥಿಗಳ ಜೊತೆ ಸೇರಿ ಮಾರಣಾಂತಿಕ ಹಲ್ಲೆ ಮಾಡಿರುವುದಾಗಿ ಆರೋಪಿಸಿದರು. ಇನ್ನೂ ವಿದ್ಯಾರ್ಥಿಯೊಬ್ಬರ ಪೋಷಕ ವಿಜಯ್ ಕುಮಾರ್ ಎಂಬುವರು ಮಾತನಾಡಿ, ನನ್ನ ಮಗನಿಗೆ…

Read More

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಅವಾಚ್ಯವಾಗಿ ನಿಂದಿಸಿ ಬಂಧನಕ್ಕೊಳಗಾದ ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಯಾವ ವಿಚಾರಗಳನ್ನು ಅದರ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಯಾವುದೇ ಪ್ರಶ್ನೆಗೂ ಉತ್ತರಿಸುವುದಿಲ್ಲ ಎಂದರು. ಪ್ರಕರಣದಲ್ಲಿ ಪೊಲೀಸರು ಸರಿಯಾಗಿ ನಡೆದುಕೊಂಡಿದ್ದೇವೆ ಎಂಬ ವಾದ ಇರುತ್ತದೆ. ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ಅವರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ಬೇರೆಬೇರೆ ರೀತಿಯಲ್ಲಿ ಮಾಹಿತಿಯನ್ನು ಕೇಳುವ ಸಂದರ್ಭದಲ್ಲಿ, ಇವರನ್ನು ಕೇಳದೆ ಜಡ್ಜ್‌ಮೆಂಟ್ ಆಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಅದರ ಬಗ್ಗೆ ಟೀಕೆ ಮಾಡಲು ಆಗಲ್ಲ. ಸಭಾಪತಿಗಳು ದಾಖಲೆಗಳಿಲ್ಲ ಎಂದು ಹೇಳಿರುವುದು ನನಗೆ ಗೊತ್ತಿಲ್ಲ. ಕೆಲವರು ಸದನ ಮುಗಿದ ಬಳಿಕ ಘಟನೆ ನಡೆಯಿತು ಅಂತ ಹೇಳುತ್ತಿದ್ದಾರೆ. ಆದ್ದರಿಂದ ಸಭಾಪತಿಗಳಿಗೆ ಇದರಲ್ಲಿ ಏನು ಹೇಳೋಕೆ ಆಗಲ್ಲ ಅಂತ ಕೆಲವರು ವಿಶ್ಲೇಷಣೆ…

Read More