Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ: ಜಿಲ್ಲೆಯಲ್ಲಿ ನಕಲಿ ದಾಖಲೆ ಸೃಷ್ಠಿಸಿ ಸರ್ಕಾರಿ ಭೂಮಿ ಮಂಜೂರು ಮಾಡಿರುವಂತ ಪ್ರಕರಣ ಬೆಳಕಿಗೆ ಬಂದಿತ್ತು. ಈ ಹಿನ್ನಲೆಯಲ್ಲಿ ನಾಗಮಂಗಲ ತಾಲ್ಲೂಕು ಕಚೇರಿಗೆ ಇಡಿ ಅಧಿಕಾರಿಗಳು ಭೇಟಿ ನೀಡಿ, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕಚೇರಿ ವ್ಯಾಪ್ತಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ 320 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಿದಂತ ಪ್ರಕರಣ ಬೆಳಕಿಗೆ ಬಂದಿತ್ತು. ಈ ಕುರಿತಂತೆ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿತ್ತು. ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆಯಲ್ಲಿ ಸರ್ಕಾರಿ ಭೂಮಿ ನಕಲಿ ದಾಖಲೆ ಸೃಷ್ಠಿಸಿ ಮಂಜೂರು ಮಾಡಿದ್ದು ತಿಳಿದು ಬಂದಿತ್ತು. ಅಂದೇ ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದರು. ಡಿವೈಎಸ್ಪಿ ಚಲುವರಾಜು ನೇತೃತ್ವದಲ್ಲಿ ಜಿಲ್ಲಾಡಳಿತ ತನಿಖೆಗೂ ಆದೇಶಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಹಂತದಲ್ಲಿ ಇರುವಾಗಲೇ ಇಡಿ ಅಧಿಕಾರಿಗಳು ಇಂದು ಮಂಡ್ಯದ ನಾಗಮಂಗಲ ತಾಲ್ಲೂಕು ಕಚೇರಿಗೆ ಭೇಟಿ ನೀಡಿದ್ದಾರೆ. ಲೋಕಾಯುಕ್ತ ಪೊಲೀಸರ ಸಮ್ಮುಖದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಸಂಬಂಧ ಪಟ್ಟಂತ ದಾಖಲೆಗಳನ್ನು…
ಬೆಂಗಳೂರು: ಕರ್ನಾಟಕದ ರಾಜ್ಯಪಾಲರ ನಿವಾಸವಾಗಿರುವಂತ ಲೋಕಭವನಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿತ್ತು. ಈ ಬಗ್ಗೆ ಪೊಲೀಸರು ತಪಾಸಣೆ ನಡೆಸಿದಾಗ ಅದು ಹುಸಿ ಬಾಂಬ್ ಬೆದರಿಕೆ ಕರೆ ಎಂಬುದಾಗಿ ತಿಳಿದು ಬಂದಿತ್ತು. ಈ ಹಿನ್ನಲೆಯಲ್ಲಿ ದುಷ್ಕರ್ಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದು, ಕೇಸ್ ದಾಖಲಿಸಿ ಪೊಲೀಸರು ತನಿಖೆಗೆ ಇಳಿದಿದ್ದಾರೆ. ಜನವರಿ.14ರಂದು ಬೆಂಗಳೂರಿನ ರಾಜಭವನ ರಸ್ತೆಯಲ್ಲಿರುವಂತ ರಾಜ್ಯಪಾಲರ ನಿವಾಸವಾದಂತ ಲೋಕಭವನಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ, ಶ್ವಾನದ ದಳದೊಂದಿಗೆ ತೆರಳಿ ತಪಾಸಣೆ ನಡೆಸಿದಾಗ ಅದೊಂದು ಹುಸಿ ಬಾಂಬ್ ಬೆದರಿಕೆ ಎಂಬುದಾಗಿ ತಿಳಿದು ಬಂದಿತ್ತು. gaina_ramesh@outlook.com ಎನ್ನುವಂತ ಇ-ಮೇಲ್ ಐಡಿ ಮೂಲಕ ಬಾಂಬ್ ಬೆದರಿಕೆಯನ್ನು ಲೋಕಭವನದ ಸರ್ಕಾರಿ ಅಧಿಕೃತ ಮೇಲ್ ಐಡಿಗೆ ಕಳುಹಿಸಲಾಗಿತ್ತು. ಈ ಸಂಬಂಧ ಲೋಕಭವನದಿಂದ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ. https://kannadanewsnow.com/kannada/excise-bribery-echoes-in-the-assembly-bjp-members-demand-the-resignation-of-minister-r-b-thimmapura/ https://kannadanewsnow.com/kannada/minister-ishwar-khandre-gave-this-stern-instruction-to-control-forest-fires-before-the-onset-of-summer-in-the-state/
ಬೆಂಗಳೂರು: ವಿಧಾನಮಂಡಲ ವಿಶೇಷ ಅಧಿವೇಶನದಲ್ಲಿ ಅಬಕಾರಿ ಇಲಾಖೆಯ ಲಂಚಾವತಾರ ಪ್ರತಿಧ್ವನಿಸಿದೆ. ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಸದಸ್ಯ ವಿನಯ ಕುಮಾರ್ ಸೊರಕೆ ಅವರು ವಿಷಯ ಪ್ರಸ್ತಾಪಿಸಿ, ಸಚಿವ ಆರ್.ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸಿದರು. ಈ ವೇಳೆ ಗದ್ದಲ ಕೋಲಾಹಲಕ್ಕೂ ಕಾರಣವಾಯಿತು. ಇಂದು ವಿಧಾನಸಭೆಯಲ್ಲಿ ಅಬಕಾರಿ ಲಂಚಾವತಾರದ ವಿಷಯವು ಪ್ರತಿಧ್ವನಿಸಿತು. ಬಿಜೆಪಿಯಿಂದ ಈ ಕುರಿತಂತೆ ಚರ್ಚೆ ನಡೆಸೋದಕ್ಕೆ ಅವಕಾಶ ನೀಡುವಂತೆ ಸ್ಪೀಕರ್ ಯು.ಟಿ ಖಾದರ್ ಅವರಿಗೆ ವಿಪಕ್ಷಗಳ ಸದಸ್ಯರು ಆಗ್ರಹಿಸಿದರು. ಆದರೇ ಇದಕ್ಕೆ ಅವಕಾಶ ನೀಡದಿದ್ದರಿಂದ ಸದನದಲ್ಲಿ ಗದ್ದಲ ಕೋಲಾಹಲವೇ ನಡೆಯಿತು. ಹೀಗಾಗಿ 10 ನಿಮಿಷಗಳ ಕಾಲ ಸದನದ ಕಲಾಪವನ್ನು ಸ್ಪೀಕರ್ ಯು.ಟಿ ಖಾದರ್ ಮುಂದೂಡಿಕೆ ಮಾಡಿದರು. ಇದಾದ ಬಳಿಕ ಕಲಾಪ ಆರಂಭಗೊಂಡಾಗ ಮತ್ತೆಯೂ ಬಿಜೆಪಿ ಸದಸ್ಯರು ಅಬಕಾರಿ ಇಲಾಖೆಯ ಲಂಚಾವತಾರವನ್ನು ಪ್ರಸ್ತಾಪಿಸಿ, ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಧರಣಿ, ಪ್ರತಿಭಟನೆ ನಡೆಸಿದರು. ಅಬಕಾರಿ ಲಂಚಾವತಾರದ ಬಗ್ಗೆ ಚರ್ಚೆ ಮಾಡೋದಕ್ಕೆ ಅವಕಾಶ ನೀಡುವಂತೆ ವಿಪಕ್ಷಗಳ ಸದಸ್ಯರು ಪಟ್ಟು ಸಡಿಲಿಸದೇ ಮುಂದುವರೆದಿದ್ದಾರೆ. https://kannadanewsnow.com/kannada/if-you-eat-these-for-7-days-you-wont-believe-the-changes-that-will-happen-to-your-body/…
ಗದಗ: ಜಿಲ್ಲೆಯಲ್ಲಿ ಪ್ರಾಚೀನ ಆಭರಣ ದೊರೆತಂತ ಸ್ಥಳದಲ್ಲಿ ಉತ್ಖನನ ಕಾರ್ಯ ನಡೆಸಲಾಗುತ್ತಿದೆ. ಇಂದು ಲಕ್ಕುಂಡಿಯಲ್ಲಿ ಮತ್ತೊಂದು ಅಪರೂಪದ ವಸ್ತು ಪತ್ತೆಯಾಗಿದೆ. ಗದಗ ತಾಲ್ಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮತ್ತೊಂದು ಅಪರೂಪದ ವಸ್ತು ಪತ್ತೆಯಾಗಿದೆ. ಅದನ್ನು ಪಚ್ಚೆ ಕಲ್ಲು ಎಂಬುದಾಗಿ ಹೇಳಲಾಗುತ್ತಿದೆ. ಹೀಗಾಗಿ ಕೆಲ ಗಂಟೆಗಳ ಮೊದಲು ಲೋಹದ ವಸ್ತುವೊಂದು ಪತ್ತೆಯಾಗಿತ್ತು. ಇದೀಗ ಪಚ್ಚೆ ಕಲ್ಲು ಪತ್ತೆಯಾಗಿದೆ. ಕೆಲ ದಿನಗಳ ಹಿಂದೆ ಲಕ್ಕುಂಡಿಯ ವೀರಭದ್ರೇಶ್ವ ದೇವಾಲಯದ ಬಳಿಯಲ್ಲಿ ಮನೆ ನಿರ್ಮಾಣಕ್ಕೆ ಪಾಯ ತೆಗೆಯುತ್ತಿದ್ದಂತ ಸಂದರ್ಭದಲ್ಲಿ ಪ್ರಾಚೀನ ಬಂಗಾರ ದೊರೆತಿತ್ತು. ಆ ಬಳಿಕ ಅದನ್ನು ಸಂರಕ್ಷಿತ ಸ್ಥಳವಾಗಿ ಪುರಾತತ್ವ ಇಲಾಖೆ ಗುರುತಿಸಿ, ಉತ್ಖನನಕ್ಕೆ ನಿರ್ಧರಿಸಿತ್ತು. ಅದರಂತೆ ಉತ್ಖನನ ಕಾರ್ಯ ನಡೆಸಲಾಗುತ್ತಿದೆ. ಕಳೆದ ಕೆಲ ದಿನಗಳಿಂದ ನಡೆಯತ್ತಿರುವಂತ ಉತ್ಖನನದ ವೇಳೆಯಲ್ಲಿ ಐತಿಹಾಸಿಕ ಅಪರೂಪದ ವಸ್ತುಗಳೇ ಪತ್ತೆಯಾಗುತ್ತಿವೆ. https://kannadanewsnow.com/kannada/kpcc-orders-suspension-of-rajiv-gowda-from-congress-party/ https://kannadanewsnow.com/kannada/minister-ishwar-khandre-gave-this-stern-instruction-to-control-forest-fires-before-the-onset-of-summer-in-the-state/
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದನೆ ಮಾಡಿ, ಅವಾಚ್ಯ ಶಬ್ದಳಿಂದ ಬೈದು, ಧಮ್ಕಿ ಹಾಕಿದಂತ ಕೈ ಮುಖಂಡ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿ ಕೆಪಿಸಿಸಿಯ ಶಿಸ್ತು ಪಾಲನಾ ಸಮಿತಿಯ ಅಧ್ಯಕ್ಷರಾದಂತ ಕೆ.ರೆಹಮಾನ್ ಖಾನ್ ಅವರು ಆದೇಶಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಕೆಪಿಸಿಸಿ ಕಳುಹಿಸಿದ ಪತ್ರದ ಅನುಸಾರ ದಿನಾಂಕ 23-01-2026 ರಂದು ನಡೆದ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯ ಸಭೆಯಲ್ಲಿ ರಾಜೀವ್ ಗೌಡ ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಬಂದಿರುವ ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಿ, ಪಕರಣದ ಗಂಭೀರತೆ ಮನವರಿಕೆಯಾದ ಹಿನ್ನಲೆಯಲ್ಲಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಶಿಫಾರಸ್ಸಿನ ಮೇರೆಗೆ ಶ್ರೀ ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತ್ತು ಮಾಡಲಾಗಿದೆ ಎಂದಿದ್ದಾರೆ. ಅಂದಹಾಗೇ ಶಿಡ್ಲಘಟ್ಟದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು ಬ್ಯಾನರ್ ತೆರವುಗೊಳಿಸಿದ ಕಾರಣಕ್ಕಾಗಿ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಅಲ್ಲದೇ ಧಮ್ಕಿ ಹಾಕಿದ್ದರು. ಈ ಎಲ್ಲಾ ಆಡಿಯೋ ವೈರಲ್ ಆಗಿತ್ತು.…
ಬೆಂಗಳೂರು: ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್ ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ಒಟ್ಟು 8 ವಿವಿಧ ಇಲಾಖೆಗಳಲ್ಲಿನ ಕಿರಿಯ ಸಹಾಯಕ ಹಾಗೂ ಸಮಾನಾಂತರ ಒಟ್ಟು 325 ಹುದ್ದೆಗಳ ನೇಮಕಾತಿಗೆ ಜನವರಿ 25ರಂದು ಭಾನುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ. ಅಂದು ರಾಜ್ಯದ 12 ಜಿಲ್ಲೆಗಳ (ಬೆಂಗಳೂರು, ಮೈಸೂರು, ತುಮಕೂರು, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಧಾರವಾಡ, ದಕ್ಷಿಣ ಕನ್ನಡ, ಕಲ್ಬುರ್ಗಿ, ಶಿವಮೊಗ್ಗ, ವಿಜಯಪುರ ಮತ್ತು ದಾವಣಗೆರೆ) ಒಟ್ಟು 319 ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಯನ್ನು 1,33,346 ಮಂದಿ ಬರೆಯುತ್ತಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಅತ್ಯಂತ ಪಾರದರ್ಶಕ ಹಾಗೂ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಸಿಸಿಟಿವಿ ಜತೆಗೆ ಜಾಮರ್ ಕೂಡ ಹಾಕಿದ್ದು, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಮುಖಚಹರೆ ಪತ್ತೆ ತಂತ್ರಜ್ಞಾನ ಬಳಸಿಯೇ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುತ್ತದೆ. ವಸ್ತ್ರ…
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬೆದರಿಕೆ, ಧಮ್ಕಿ ಹಾಕಿದ್ದರು. ಈ ಆಡಿಯೋ ವೈರಲ್ ಆಗಿತ್ತು. ಇಂತಹ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಜೀವ್ ಗೌಡ ಅಮಾನತುಗೊಳಿಸಿ ಕೆಪಿಸಿಸಿ ಆದೇಶಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಪೌರಾಯುಕ್ತೆಯಾಗಿದ್ದಂತ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವಿನ ವಿಚಾರದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಧಮ್ಕಿ, ಬೆದರಿಕೆ, ಅಸಭ್ಯ ರೀತಿಯಲ್ಲಿ ನಿಂದನೆ ಮಾಡಿದ್ದರು. ಈ ಪ್ರಕರಣದ ಬಗ್ಗೆ ಕೆಪಿಸಿಸಿಯಿಂದ ಶಿಸ್ತು ನೋಟಿಸ್ ನೀಡಲಾಗಿತ್ತು. ಆದರೇ ನಾಪತ್ತೆಯಾಗಿರುವಂತ ರಾಜೀವ್ ಗೌಡ ಅವರು ಇದಕ್ಕೆ ಉತ್ತರಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಅವರನ್ನು ಕೆಪಿಸಿಸಿಯು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿ ಆದೇಶಿಸಿದೆ. https://kannadanewsnow.com/kannada/a-terrible-accident-in-the-state-three-killed-in-collision-between-bus-and-cruiser/ https://kannadanewsnow.com/kannada/minister-ishwar-khandre-gave-this-stern-instruction-to-control-forest-fires-before-the-onset-of-summer-in-the-state/
ರಾಯಚೂರು: ಜಿಲ್ಲೆಯಲ್ಲಿ ಮನೆಯ ಮುಂದೆ ಆಡ ಆಡುತ್ತಿದ್ದಾಗಲೇ ಘೋರ ದುರಂತವೊಂದು ಸಂಭವಿಸಿದೆ. ಸಾರಿಗೆ ಬಸ್ ಹರಿದು 5 ವರ್ಷದ ಬಾಲಕನೊಬ್ಬ ದುರ್ಮರಣ ಹೊಂದಿದ್ದಾನೆ. ರಾಯಚೂರು ಜಿಲ್ಲೆಯ ಗಬ್ಬೂರು ಪಟ್ಟಣದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಸ್ ಹರಿದು 5 ವರ್ಷದ ಬಾಲಕಿ ದಿವ್ಯಶ್ರೀ ಸಾವನ್ನಪ್ಪಿದ್ದಾಳೆ. ಗಬ್ಬೂರಿನಿಂದ ಗೂಗಲ್ ಗ್ರಾಮಕ್ಕೆ ಕೆಕೆ ಆರ್ ಟಿಸಿ ಬಸ್ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಗಬ್ಬೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. https://kannadanewsnow.com/kannada/a-terrible-accident-in-the-state-three-killed-in-collision-between-bus-and-cruiser/ https://kannadanewsnow.com/kannada/minister-ishwar-khandre-gave-this-stern-instruction-to-control-forest-fires-before-the-onset-of-summer-in-the-state/
ಉಡುಪಿ: ಜಿಲ್ಲೆಯಲ್ಲಿ ರಾಜ್ಯದಲ್ಲೊಂದು ಭೀಕರ ಅಪಘಾತ ಎನ್ನುವಂತೆ ಬಸ್, ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಮಿಯಾರು ಗ್ರಾಮದ ಬಳಿಯಲ್ಲಿ ಬಸ್ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂರು ಸ್ಥಳದಲ್ಲೇ ದುರ್ಮರಣ ಹೊಂದಿದರೇ, 8 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/newlywed-commits-suicide-2-months-after-marrying-for-love-bored-with-living-in-the-village/ https://kannadanewsnow.com/kannada/minister-ishwar-khandre-gave-this-stern-instruction-to-control-forest-fires-before-the-onset-of-summer-in-the-state/
ಕಲಬುರ್ಗಿ: ಸಹೋದರಿಯರೆಲ್ಲ ಸಿಟಿಯಲ್ಲಿ ಇದ್ದಾರೆ. ನಾನು ಮಾತ್ರ ಹಳ್ಳಿಯಲ್ಲಿ ಇರಬೇಕು ಎಂಬ ಬೇಸರದಿಂದ ಪ್ರೀತಿಸಿ ಮದುವೆಯಾಗಿದ್ದಂತ ನವ ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರ್ಗಿಯ ಸಿದ್ದೇಶ್ವರ ಕಾಲೋನಿಯಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾದ ಕೇವಲ 2 ತಿಂಗಳಲ್ಲೇ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವಂತ ಶಾಕಿಂಗ್ ಘಟನೆ ನಡೆದಿದೆ. ಅನಸೂಯಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ. ತನ್ನ ಅತ್ತೆ ಮಗನಾಗಿದ್ದಂತ ಅವಿನಾಶ್ ಎಂಬುವರನ್ನು ಅನಸೂಯಾ ಪ್ರೀತಿಸಿ 2 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಮದುವೆಯಾದ ಬಳಿಕ ಗಂಡನ ಜೊತೆಯಲ್ಲಿ ಹಳ್ಳಿಯಲ್ಲಿ ವಾಸ ಮಾಡೋದಕ್ಕೆ ಬೇಸರಗೊಂಡಿದ್ದಳು ಎನ್ನಲಾಗಿದೆ. ಇದೇ ಕಾರಣದಿಂದ ಅನಸೂಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮದುವೆಯಾದ ನಂತ್ರ ಅನುಸೂಯ ತನ್ನ ಗಂಡನೊಂದಿಗೆ ಹಳ್ಳಿಯಲ್ಲಿ ವಾಸವಿದ್ದರು. ಇದರಿಂದ ತೀವ್ರ ಮಾನಸಿಕ ಒತ್ತಡಕ್ಕೂ ಅನುಸೂಯ ಒಳಗಾಗಿದ್ದರು ಎನ್ನಲಾಗಿದೆ. ಹೀಗಾಗಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಕುಟುಂಬಸ್ಥರು ಹೇಳುತ್ತಿದ್ದಾರೆ. ಅಂದಹಾಗೆ ಅನುಸೂಯಾಗೆ ಮೂವರು ಸಹೋದರಿಯರಿದ್ದು, ಅವರೆಲ್ಲರೂ ತಮ್ಮ ಗಂಡಂದಿರೊಂದಿಗೆ ಬೆಂಗಳೂರು, ಮುಂಬೈನಲ್ಲಿ ನೆಲೆಸಿದ್ದರು. ತಾನು ಹಳ್ಳಿ ಬಿಟ್ಟು, ಸಿಟಿಗೆ…














